Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾನ್ಯ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಸಚಿವರಾದ ಶಿವರಾಜ ಎಸ್. ತಂಗಡಗಿ ಇವರು ಪ್ರಶಸ್ತಿ ಪ್ರದಾನ ಹಾಗೂ ಕಿರು ಪರಿಚಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಬಡಗುತಿಟ್ಟು ಯಕ್ಷಗಾನ ಪ್ರದರ್ಶನದಲ್ಲಿ ಶ್ರೀ ವಿದ್ಯಾಧರ ವೆಂಕಟೇಶ ಮಡಿವಾಳ ಜಲವಳ್ಳಿ ಮತ್ತು ಬಳಗದವರಿಂದ ‘ಮಾಗದ ವಧೆ’ ಎಂಬ ಪ್ರಸಂಗ, ಬಳಿಕ…
ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಜಂಟಿಯಾಗಿ ಅರ್ಪಿಸುವ 38ನೇ ಕಾರ್ಯಕ್ರಮದಲ್ಲಿ 2025ನೇ ವರ್ಷ ಪೂರ್ತಿ ‘ರಾಮಸಾಗರಗಾಮಿನೀ’ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಮಾಲೆಯನ್ನು ದಿನಾಂಕ 15 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಕಾರ್ಕಳ ಹೊಟೇಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಇವರು ‘ದ್ವಿತೀಯ ಸೋಪಾನ : ಯಜ್ಞ ಸಂರಕ್ಷಣೆಯ ಪಥದಲ್ಲಿ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿರುವರು. ಡಾ. ರಾಘವೇಂದ್ರ ರಾವ್ : ಉತ್ತರ ಕನ್ನಡ ಜಿಲ್ಲೆಯ ಶಿರಸಿಮೂಲದವರಾದ ರಾಘವೇಂದ್ರ ರಾವ್ ಇವರು ತಂದೆ ವಾಸುದೇವ ರಾವ್ ಮತ್ತು ತಾಯಿ ಅರುಂಧತಿ ರಾವ್ ರವರ ಪೌರಾಣಿಕ ಆಧ್ಯಾತ್ಮಿಕ ಜ್ಞಾನಗಳಿಂದ ಪ್ರೇರಿತರಾಗಿ ಬಾಲ್ಯದಲ್ಲೇ ತನ್ನ ಆಸಕ್ತಿಯನ್ನು ಆ ಕಡೆಗೆ ಹರಿಸಿದರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಬಳಿಕದ ವಿದ್ಯಾಭ್ಯಾಸವನ್ನು ಇವರು ಉಡುಪಿ ಮತ್ತು ತಿರುಪತಿಯಲ್ಲಿ ನಡೆಸಿದರು. ಬಿ.ಕಾಂ, ಕನ್ನಡ ರತ್ನ,…
ಶಿವಮೊಗ್ಗ : ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇವರ ಸಹಯೋಗದಲ್ಲಿ ‘ವೈದ್ಯ ಕವಿಗೋಷ್ಠಿ’ಯನ್ನು ದಿನಾಂಕ 16 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಶಿವಮೊಗ್ಗದ ಐ.ಎಂ.ಎ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇದರ ಅಧ್ಯಕ್ಷರಾದ ಶ್ರೀ ಮಂಜುನಾಥ್ ಡಿ. ಇವರ ಅಧ್ಯಕ್ಷತೆ ನಡೆಯುವ ಈ ಕವಿಗೋಷ್ಠಿಯಲ್ಲಿ ವೈದ್ಯ ಕವಿಗಳಾದ ಡಾ. ಕೃಷ್ಣ ಎಸ್. ಭಟ್, ಡಾ. ಡೋ.ನಾ. ವೆಂಕಟೇಶ್ ರಾವ್, ಡಾ. ರಾಘವೇಂದ್ರ ವೈಲಾಯ, ಡಾ. ಗೀತಾಲಕ್ಷ್ಮೀ ಯು., ಡಾ. ಗುರುದತ್ತ್ ಕೆ.ಎನ್., ಡಾ. ವಿನಯ ಶ್ರೀನಿವಾಸ್, ಡಾ. ರಶ್ಮಿ ವೈದ್ಯ, ಡಾ. ಭಾರತಿ ಹೆಚ್.ಜಿ., ಡಾ. ನಿರಂಜನ್ ಪಿ.ಬಿ., ಡಾ. ಉಷಾ ರಮೇಶ್, ಮಾಸ್ಟರ್ ಶ್ರೇಯಸ್ ಎನ್., ಕುಮಾರಿ ಕೃತಜ್ಞಾ ಬೆಸೂರು ಇವರುಗಳು ಭಾಗವಹಿಸಲಿದ್ದಾರೆ.
ಮೂಡುಬಿದಿರೆ : ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕ ಇದರ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರಿಗೆ ‘ಸೌಹಾರ್ದ ಸಿರಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 13 ಫೆಬ್ರವರಿ 2025ರಂದು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಮಾತನಾಡಿ “ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮೂಲಕ ಆಧುನಿಕ ಕಾಲಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆ, ನೂತನ ಪ್ರಯೋಗಗಳನ್ನು ಹಳ್ಳಿಗಳಿಗೂ ತಲುಪಿಸುವ ಕಾರ್ಯವಾಗುತ್ತಿದೆ. ಅಲ್ಲದೇ ಮೂಡುಬಿದಿರೆಯ ಸಂಸ್ಕೃತಿಯ ಪರಂಪರೆಯನ್ನು ಮುಂದುವರಿಸಲು ಮೋಹನ್ ಆಳ್ವರು ಸೌಹಾರ್ದಯುತವಾಗಿ ಶ್ರಮಿಸುತ್ತಿದ್ದಾರೆ. ಇವರು ನಾಡಿನ ಅಸ್ಮಿತೆಯನ್ನು ಮೈಗೂಡಿಸಿಕೊಂಡು ವಿಶ್ವವ್ಯಾಪಕವಾಗಿ ಅಂಗೀಕೃತ ಹೊಂದಿರುವ ಓರ್ವ ಮಹಾನ್ ಸಾಧಕ” ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಎಂ. ಮೋಹನ್ ಆಳ್ವ “ಮನಸ್ಸು ಹಾಗೂ ಜೀವನ ಪದ್ಧತಿಯನ್ನು ಉತ್ತಮಗೊಳಿಸುವ ಮೂಲಕ ಸೌಹಾರ್ದ ಜೀವನ ನಡೆಸಲು ಸಾಧ್ಯ. ಬದುಕಿನ ಪ್ರತಿ ಹಂತದಲ್ಲೂ ಮೌಲ್ಯಯುತವಾಗಿರುವುದು ಬಹಳ ಅಗತ್ಯ. ನನ್ನ 73…
ಪರಿಸರ ಪ್ರೇಮಿ, ಮಧ್ಯಪಾನ ವಿರೋಧಿ ಹೋರಾಟಗಾರ್ತಿ, ಗಾಯಕಿ ಮತ್ತು ‘ಜನಪದ ಕೋಗಿಲೆ’ ಎಂದೇ ಪ್ರಸಿದ್ಧರಾದ ಸುಕ್ರಿ ಬೊಮ್ಮಗೌಡ ಹಾಲಕ್ಕಿ ಜನಾಂಗದವರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬಡಗೇರಿ ಗ್ರಾಮದವರಾದ ಸುಕ್ರಿಯವರು ಸುಕ್ರಜ್ಜಿ ಎಂದೇ ಪ್ರಸಿದ್ಧರು. ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವುದಕ್ಕೆ ಪ್ರಸಿದ್ಧರಾದ ಇವರು, ಸುಮಾರು 5000 ಪದ್ಯಗಳನ್ನು ನೆನಪಿನಲ್ಲಿಟ್ಟುಕೊಂಡು ಯಾವುದೇ ಬರವಣಿಗೆಯ ಪರಿಕರಗಳ ಸಹಾಯವಿಲ್ಲದೆ ಹಾಡುತ್ತಾರೆ. ಇವುಗಳಲ್ಲಿ 100 ವರ್ಷಗಳಿಗಿಂತ ಹಿಂದಿನ ಹಾಡುಗಳೂ ಇವೆ. ‘ಹಾಲಕ್ಕಿ ಪದಗಳ ಕೋಗಿಲೆ’ ಎಂದೇ ಎಲ್ಲರಿಂದ ಕರೆಸಿಕೊಳ್ಳುವ ಇವರು, ಆ ಕ್ಷಣದಲ್ಲಿಯೇ ತಮ್ಮದೇ ಆದ ಶೈಲಿಯಲ್ಲಿ ಜನಪದ ಹಾಡುಗಳನ್ನು ಹಾಡುವ ಪ್ರತಿಭಾವಂತೆ. ಕರ್ನಾಟಕ ಜಾನಪದ ಅಕಾಡೆಮಿ ಸುಕ್ರಜ್ಜಿಯ ಹಾಡುಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದೆ. ಅಲ್ಲದೆ ಕಾರವಾರದ ‘ಅಖಿಲ ಭಾರತ ರೇಡಿಯೋ’ ಸುಕ್ರಜ್ಜಿಯ ಹಾಡುಗಳನ್ನು ಧ್ವನಿ ಮುದ್ರಣ ಮಾಡಿ ಸಂಗ್ರಹಿಸಿದೆ. 1937 ಜನಿಸಿದ ಸುಕ್ರಿಯವರ ವಿವಾಹ ತನ್ನ ಹದಿನಾರನೇ ವಯಸ್ಸಿನಲ್ಲಿ ಹಿರಿಯ ವಯಸ್ಸಿನ ವರನೊಂದಿಗೆ ನಡೆಯಿತು. ಇವರು ತಮ್ಮ ಇಬ್ಬರು ಮಕ್ಕಳನ್ನು ಕಳೆದುಕೊಂಡ ನಂತರ ಮತ್ತೊಂದು ಮಗುವನ್ನು…
ಮಂಗಳೂರು : ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ 40ನೇ ವರ್ಷದ ಆಚರಣೆಯ ‘ನಲ್ವತ್ತರ ನಲಿವು’ ಕಾರ್ಯಕ್ರಮದ ಅಂಗವಾಗಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ ‘ಚಾರುವಸಂತ’ ನಾಟಕದ ಪ್ರದರ್ಶನವು ದಿನಾಂಕ 08 ಫೆಬ್ರವರಿ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಹಿರಿಯ ನೃತ್ಯ ಗುರುಗಳಾದ ಉಳ್ಳಾಲ ಮೋಹನ ಕುಮಾರ್, ಪ್ರೊ. ಬಿ.ಎ. ವಿವೇಕ್ ರೈ, ಕ.ಸಾ.ಪ. ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಆಳ್ವಾಸ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಗಳಾದ ವಿವೇಕ್ ಆಳ್ವ, ದ.ಕ. ಜಿಲ್ಲಾ ಕ.ಸಾ.ಪ. ಇದರ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಪಂಚಜ್ಯೋತಿ ಪ್ರಜ್ವಲನ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ ಮಾತನಾಡಿ “ಆಳ್ವಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ವಿದ್ಯೆಯ ಜತೆಗೆ ಸಂಸ್ಕೃತಿಯನ್ನು ಕಲಿಸಿಕೊಡುವ ಕೆಲಸ ಮಾಡುತ್ತಿದ್ದಾರೆ. ಬದುಕು ಕಲಿಸುವ ರಂಗಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಗತ್ಯವಿದೆ. ನಾನು ಇದುವರೆಗೆ ಕಂಡ ನಾಟಕಗಳಲ್ಲಿ…
ಮಂಗಳೂರು : ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಶ್ರೀ ಶ್ಯಾಮರಾವ್ ಸ್ಮರಣೆಯಲ್ಲಿ ನೀಡಲಾಗುತ್ತಿರುವ ‘ಸಾಧನಶ್ರೀ -2025’ ಪ್ರಶಸ್ತಿಗೆ ಮಂಗಳೂರಿನ ನೃತ್ಯ ಭಾರತಿ ಕದ್ರಿ ಇದರ ನಿರ್ದೇಶಕಿಯಾದ ಗೀತಾ ಸರಳಾಯ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 14 ಫೆಬ್ರವರಿ 2025ರಂದು ನಡೆಯಲಿದೆ. ನೃತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ತನ್ನ 9ನೇ ವಯಸ್ಸಿಗೆ ಪಾದಾರ್ಪಣೆಗೈದಿರುವ ಇವರು ಇದುವರೆಗೆ 50ವರ್ಷಗಳಲ್ಲಿ 1500ಕ್ಕೂ ಮಿಕ್ಕಿ ವಯಕ್ತಿಕ ಹಾಗೂ ಸಮೂಹ ನೃತ್ಯ ಪ್ರದರ್ಶನ ನೀಡಿದ್ದಾರೆ. ಕಳೆದ 25 ವರ್ಷಗಳಿಂದ ಭರತನಾಟ್ಯ ವಿದ್ವತ್ ಹಾಗೂ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗೆ ಪರಿವೀಕ್ಷಕಿಯಾಗಿದ್ದಾರೆ. ಸುಮಾರು 250ಕ್ಕೂ ಮಿಕ್ಕಿ ಕನ್ನಡ, ಸಂಸ್ಕೃತ ಸಾಹಿತ್ಯ, ಕವನ, ಶ್ಲೋಕ, ಭಕ್ತಿಗೀತೆ, ಜನಪದಗೀತೆ, ಹಾಗೂ ದೇಶಭಕ್ತಿಗೀತೆಗಳಿಗೆ ಸಂಗೀತ ಹಾಗೂ ನೃತ್ಯ ಸಂಯೋಜನೆಗೈದಿದ್ದಾರೆ. ಇವರ 40ಕ್ಕೂ ಹೆಚ್ಚು ಶಿಷ್ಯೆಯರು ಇಂದು ಯಶಸ್ವಿ ನೃತ್ಯ ಶಿಕ್ಷಕಿಯಾಗಿ ವೃತ್ತಿ ನಡೆಸುತ್ತಿದ್ದಾರೆ.
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ತಾಲೂಕಿನ ಪಿಲಾರ್ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ದಿನಾಂಕ 16 ಫೆಬ್ರವರಿ 2025ರಂದು ಬೆಳಗ್ಗೆ 9-00 ಗಂಟೆಗೆ ಪಿಲಾರ್ನ ಪಂಜಂದಾಯ ಸೇವಾ ಸನ್ನಿಧಿಯ ಮೈದಾನದಲ್ಲಿ ‘ತುಳು ಪರ್ಬ’ ಜಾನಪದ ಸಿರಿ ಪರಿಚಯ, ಗ್ರಾಮೀಣ ಆಟಕೂಟವನ್ನು ಆಯೋಜಿಸಲಾಗಿದೆ. ಪಿಲಾರ್ ಯುವಕ ಮಂಡಲದ ಸ್ವರ್ಣ ಮಹೋತ್ಸವದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಕೆ. ಉದ್ಘಾಟಿಸಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಹಿರಿಯ ಪಾರ್ದನಗಾರ್ತಿ ಕುತ್ತಾರ್ ತಿಮ್ಮಕ್ಕ ಅವರು ‘ಪಾಡ್ಡನ ಪರಿಚಯ’ ಮಾಡಿಕೊಡುವರು. ಡೋಲು ವಾದಕ ರಮೇಶ್ ಮಂಚಕಲ್ ಅವರು ತುಳುನಾಡಿನ ಸಾಂಪ್ರದಾಯಿಕ ಡೋಲಿನ ಬಗ್ಗೆ ಹಾಗೂ ದುಡಿ ವಾದಕ ಶೀನಾ ಧರ್ಮಸ್ಥಳ ಅವರು ಸಾಂಪ್ರದಾಯಿಕ ದುಡಿ ವಾದನದ ಬಗ್ಗೆ ಪ್ರಾತ್ಯಕ್ಷಿಕೆ, ಪರಿಚಯ ಮಾಡಿಕೊಡುವರು. ಇದೇ ವೇಳೆ ಹಿರಿಯರಿಂದ ಜನಪದ ಕತೆಗಳ ದಾಖಲೀಕರಣ ನಡೆಯಲಿದೆ. ಜಾನಪದ ಸಿರಿ ವಿಚಾರ ವಿನಿಮಯದ…
ಹೆಬ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೆಬ್ರಿ ತಾಲೂಕು ಘಟಕ ಇದರ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಂ.ಡಿ. ಅಧಿಕಾರಿ ವೇದಿಕೆಯಲ್ಲಿ ‘ಹೆಬ್ರಿ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನ -2025’ವನ್ನು ದಿನಾಂಕ 16 ಫೆಬ್ರವರಿ 2025ರಂದು ಶಿವಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 7-30 ಗಂಟೆಗೆ ದೇವಿದಯಾ ಕಲಾ ತಂಡದ ಶ್ರೀಮತಿ ಶೈಲಜಾ ಶಿವಪುರ ಮತ್ತು ತಂಡದವರಿಂದ ಕನ್ನಡ ಭಾವಗೀತೆಗಳ ಗಾಯನ ಪ್ರಸ್ತುತಗೊಳ್ಳಲಿದೆ. ಬೆಳಗ್ಗೆ ರಾಷ್ಟ್ರ ಮತ್ತು ಪರಿಷತ್ತಿನ ಧ್ವಜಾರೋಹಣ ಹಾಗೂ ಶಿವಪುರ ಗ್ರಾಮ ಪಂಚಾಯತಿಯ ವಠಾರದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಶ್ರೀಮತಿ ಪಿ. ಜಯಲಕ್ಷ್ಮೀ ಅಭಯ ಕುಮಾರ್ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಮಾನ್ಯ ಸಚಿವರಾದ ಸುನಿಲ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಪುಸ್ತಕ ಮಳಿಗೆ ಉದ್ಘಾಟನೆ ಮತ್ತು ಮಂಜುನಾಥ ಕೆ. ಶಿವಪುರ ಇವರ ‘ಪ್ರಬುದ್ಧರಾಗೋಣ ಬನ್ನಿ’ ಹಾಗೂ ವಿಜಯಲಕ್ಷ್ಮೀ ಆರ್. ಕಾಮತ್ ಇವರ ‘ಜೀವನ ಸಂಗೀತ’ ಎಂಬ ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.…
ಬೆಂಗಳೂರು: ‘ಪದ’ ಸಾಂಸ್ಕೃತಿಕ ಸಂಘಟನೆ ಏರ್ಪಡಿಸಿದ್ದ ‘ಡಾ. ಬಂಜಗೆರೆ ಜಯಪ್ರಕಾಶ್ ಅವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆ’ ಎಂಬ ಕುರಿತ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವು ದಿನಾಂಕ 11 ಫೆಬ್ರವರಿ 2025ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ ಮಾತನಾಡಿ ‘ಹಿಂದಿನ ತಲೆಮಾರು ಮತ್ತು ಹೊಸ ತಲೆಮಾರುಗಳ ಪರಸ್ಪರ ಭೇಟಿಯಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಚಲನಶೀಲತೆ ಬರುತ್ತದೆ. ಬಂಜಗೆರೆ ಅವರು ಹೋರಾಟ ಮತ್ತು ಸಾಹಿತ್ಯವನ್ನು ಒಂದುಗೂಡಿಸಿದ ವಿಧಾನ ಹಾಗೂ ಎರಡರಲ್ಲೂ ಸಮಚಿತ್ತವನ್ನು ಉಳಿಸಿಕೊಂಡಿರುವುದು ವಿಶಿಷ್ಟವಾದ ಸಂಗತಿ” ಎಂದು ಹೇಳಿದರು. ಸಾಹಿತಿ ಕೆ. ಮರುಳಸಿದ್ದಪ್ಪ ಮಾತ್ರನಾಡಿ “ಬಂಜಗೆರೆ 90ರ ದಶಕದಲ್ಲಿ ಕರ್ನಾಟಕ ಪ್ರತ್ಯೇಕ ರಾಷ್ಟ್ರ ಎಂದು ಗೋಡೆ ಬರಹ ಚಳವಳಿ ಮಾಡಿದ್ದರು. ಆಗ ಏನು ಆಗಲಿಲ್ಲ. ಅವರ ‘ಆನುದೇವಾ ಹೊರಗಣವನು’ ಭಾರಿ ಚರ್ಚೆಗೆ ಕಾರಣವಾಯಿತು ಮತ್ತು ಪ್ರತಿರೋಧ ಸಹ ಎದುರಿಸಿತ್ತು. ಆದರೆ ಅವರ ಮೇಲೆ ಹಲ್ಲೆ ನಡೆಯಲಿಲ್ಲ. ಈಗ ಅಂತಹ ಮಾತನಾಡಲು ಧೈರ್ಯ ಮಾಡು…