Author: roovari

‘ನದಿ ದಾಟಿ ಬಂದವರು’ ಖ್ಯಾತ ಲೇಖಕ ಶಶಿಧರ ಹಾಲಾಡಿಯವರ ಮೂರನೆಯ ಕಾದಂಬರಿ. ಇದನ್ನು ಅವರು ಪೂರ್ತಿಯಾಗಿ ಗ್ರಾಮಭಾರತದ ಚಿತ್ರಣಕ್ಕೆ ಮೀಸಲಾಗಿಟ್ಟಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಹಳ್ಳಿಗಳಲ್ಲಿ ಕೃಷಿ-ಬೇಸಾಯ ಹಾಗೂ ಜನಜೀವನದ ಸ್ವರೂಪಗಳು ಹೇಗಿದ್ದವು ಅನ್ನುವುದನ್ನು ಇತಿಹಾಸದಲ್ಲಿ ನಡೆದ ನಿಜ ಘಟನೆಗಳಿಗೆ ಕಲ್ಪನೆಯ ಕಥೆಗಳನ್ನು ಹೆಣೆದು ಪ್ರಸ್ತುತ ಪಡಿಸುವುದು ಅವರ ಕಾದಂಬರಿಯ ಉದ್ದೇಶ. ಅದನ್ನು ಅವರು ಯಶಸ್ವಿಯಾಗಿ ಪೂರೈಸಿದ್ದಾರೆ. ಕಥಾಹಂದರ ಆರಂಭವಾಗುವುದೇ ಕರುಳು ಚುರಕ್ಕೆನ್ನಿಸುವ ಒಂದು ಸನ್ನಿವೇಶದ ಮೂಲಕ. ಕರ್ಜೆ ಎಂಬ ಹಳ್ಳಿಯಲ್ಲಿ ನಿಷ್ಕರುಣಿ ನಾರಾಯಣ ಭಂಡಾರರ ಒಕ್ಕಲಾಗಿ ಪರಿಶ್ರಮಪಟ್ಟು ಪ್ರಾಮಾಣಿಕವಾಗಿ ದುಡಿಯುತ್ತಿದ್ದ ಕುರಿಯ ನಾಯಕ, ಅವನ ಹೆಂಡತಿ ಶೇಷಿಬಾಯಿ, ಮಗ ಸಿದ್ದನಾಯಕ ಮತ್ತು ಇತರ ಮಕ್ಕಳೊಂದಿಗಿನ ಸಂಸಾರವು ಧನಿಯು ಕೊಡುವ ಕಾಟವನ್ನು ತಡೆಯಲಾರದೆ, ಅವನು ಸುಳ್ಳುಸುಳ್ಳಾಗಿ ಹೊರಿಸಿದ ಸಾಲದ ಹೊರೆಯನ್ನು ತೀರಿಸಲಾಗದೆ ರಾತ್ರೋರಾತ್ರಿ ತಮ್ಮ ಗುಡಿಸಲ ಮುಂದಿನ ಅಂಗಳದಲ್ಲಿ ಖಾಲಿ ಮಡಿಕೆ ಕವುಚಿಟ್ಟು (ನಾವು ಸಾಲ ತೀರಿಸಲಾರೆವು ಎಂಬುದರ ಸೂಚನೆಯಾಗಿ) ಓಡಿ ಹೋಗುತ್ತಾರೆ.‌ ಊರಿನ ಗಡಿಯಾದ ಸೀತಾನದಿಯನ್ನು ದಾಟಿ…

Read More

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಹಾಗೂ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಜಂಟಿ ಆಶ್ರಯದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯೊಂದಿಗೆ ‘ಕನ್ನಡ ರಾಜ್ಯೋತ್ಸವ 2025’ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ದಿನಾಂಕ 01 ನವೆಂಬರ್ 2025ರಂದು ಮಧ್ಯಾಹ್ನ 2-30 ಗಂಟೆಗೆ ಪುತ್ತೂರು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಪುತ್ತೂರು ಉಮೇಶ್ ನಾಯಕ್ ಇವರು ವಹಿಸಲಿದ್ದು, ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಇವರು ಉದ್ಘಾಟನೆ ಮಾಡಲಿದ್ದಾರೆ. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವಿಜಯ ಕುಮಾರ್ ಮೊಳೆಯಾಲ್ ಇವರು ಆಶಯ ಭಾಷಣ ಐ.ಎ.ಎಸ್. ತಜ್ಞ ದರ್ಶನ್ ಗರ್ತಿಕೆರೆ ಇವರು ‘ಮೊಳಗಲಿ ಕನ್ನಡದ ಕಹಳೆ’ ಆಲ್ಬಮ್ ಹಾಡು ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ತಾಲೂಕು ಮಟ್ಟದ ವಿದ್ಯಾರ್ಥಿಗಳ ಅಂಚೆ ಕಾರ್ಡು ಕವನ ಸ್ಪರ್ಧೆಯ ಬಹುಮಾನ…

Read More

ಸೋಮವಾರಪೇಟೆ : ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸೋಮವಾರಪೇಟೆ ಸಾಹಿತ್ಯ ಪರಿಷತ್ತು ಕಚೇರಿ ಬಳಿ ದಿನಾಂಕ 23 ಅಕ್ಟೋಬರ್ 2025ರಂದು ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣಗೊಂಡಿತು. ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ “ರಾಷ್ಟ್ರಕವಿ ಕುವೆಂಪು ಕನ್ನಡ ಮಣ್ಣಿನ ಅಮೂಲ್ಯ ರತ್ನ. ಕುವೆಂಪು ಈ ನಾಡಿನ ಘನತೆಯನ್ನು ಹೆಚ್ಚಿಸಿದ ಮಹಾನ್ ವ್ಯಕ್ತಿ, ಜ್ಞಾನಪೀಠ ಪ್ರಶಸ್ತಿ ತಂದುಕೊಡುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವುದು ಶ್ಲಾಘನೀಯ” ಎಂದರು. ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, “ಕನ್ನಡ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಪುಣ್ಯವಂತರು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನಂತರ ಬೇರೆ ಭಾಷೆಗಳಿಗೆ. ಕುವೆಂಪು ಅವರು ರಾಷ್ಟ್ರಕವಿಯಾಗಿ ಕನ್ನಡವನ್ನ ದೇಶ ವಿದೇಶಗಳಲ್ಲಿ ಪಸರಿಸಿದ್ದಾರೆ” ಎಂದರು. ಮಾಜಿ ಸಚಿವ ಬಿ.ಎ. ಜೀವಿಜಯ, ತಹಶೀಲ್ದಾರ್ ಕೃಷ್ಣಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್‌,…

Read More

ಮಂಗಳೂರು : ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ ‘ಸಂಸ್ಕಾರ ಭಾರತೀ ಕರ್ನಾಟಕ’ ದಕ್ಷಿಣ ಪ್ರಾಂತ ಮಂಗಳೂರು ಮಹಾನಗರ ಇದರ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ ಕಾರ್ಯಕ್ರಮವನ್ನು ದಿನಾಂಕ 31 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ಮಂಗಳೂರು ಅಡ್ಯಾರ್ ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಲ್ಯ ನಾಟ್ಯನಿಕೇತನ, ಮಂಗಳೂರು ಸನಾತನ ನಾಟ್ಯಾಲಯ ಮತ್ತು ಕೊಟ್ಟಾರ ಭಾರತಾಂಜಲಿ ಇವರಿಂದ ನೃತ್ಯ ವೈವಿದ್ಯ ಮತ್ತು ಶ್ರೀ ಬಾಲಕೃಷ್ಣ ಕತ್ತಲ್ ಸಾರ್ ಮತ್ತು ಬಳಗದವರಿಂದ ತುಳುನಾಡ ಬಲೀಂದ್ರ ಲೆಪ್ಪುದ ಪೊರ್ಲು ಪಸ್ತುತಗೊಳ್ಳಲಿದೆ. ವಿವಿಧ ಕ್ಷೇತ್ರದ ಸಾಧಕರಿಗೆ ‘ಸಂಸ್ಕಾರ ಭಾರತೀ ಸೇವಾ ಪುರಸ್ಕಾರ’ ಪ್ರದಾನ ಮಾಡಲಾಗುವುದು.

Read More

ಉಪ್ಪಿನಂಗಡಿ : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಉಪ್ಪಿನಂಗಡಿ ಹೋಬಳಿ ಘಟಕ ಇದರ ವತಿಯಿಂದ ವಿದ್ಯಾರ್ಥಿಗಳಲ್ಲಿ ಕನ್ನಡದ ಹೆಸರಾಂತ ಕವಿಗಳ ಬಗ್ಗೆ ಆಸಕ್ತಿ ಮತ್ತು ಅರಿವು ಮೂಡಿಸುವ ವಿನೂತನ ಕಾರ್ಯಕ್ರಮ ‘ಕನ್ನಡ ಕಲರವ -3’ ಹಾಗೂ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 01 ನವೆಂಬರ್ 2025ರಂದು ಮಧ್ಯಾಹ್ನ 1-30 ಗಂಟೆಗೆ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ಇಂದ್ರಪ್ರಭ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್‌ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಕರುಣಾಕರ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರು ಉದ್ಘಾಟನೆ ಮಾಡಲಿದ್ದಾರೆ. ‘ಜಿ.ಪಿ. ರಾಜರತ್ನಂ’ ಇವರ ಬಗ್ಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ, ‘ದ.ರಾ.ಬೇಂದ್ರೆ’ ಇವರ ಬಗ್ಗೆ ಇಂದ್ರಪ್ರಸ್ಥ ಸಮೂಹ ವಿದ್ಯಾ ಸಂಸ್ಥೆ ಉಪ್ಪಿನಂಗಡಿ, ‘ಸಂತ ಶಿಶುನಾಳ ಶರೀಫ’ ಇವರ ಬಗ್ಗೆ ಶ್ರೀರಾಮ ಶಾಲೆ ವೇದಶಂಕರ ನಗರ, ‘ಕೆ.ಎಸ್. ನರಸಿಂಹ ಸ್ವಾಮಿ’…

Read More

ಎಡನೀರು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಇದರ ವತಿಯಿಂದ ರಸರಾಗ ಚಕ್ರವರ್ತಿ ಶ್ರೀ ದಿನೇಶ ಅಮ್ಮಣ್ಣಾಯ ಇವರಿಗೆ ‘ಸಾವಿರದ ಗಾನಕೋಗಿಲೆಗೆ ಸಾವಿರದ ಗೌರವ’ ಕಾರ್ಯಕ್ರಮವನ್ನು ದಿನಾಂಕ 28 ಅಕ್ಟೋಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಶ್ರೀ ಎಡನೀರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಯಕ್ಷಗಾನದ ಖ್ಯಾತ ಹಿರಿಯ ಕಿರಿಯ ಹಿಮ್ಮೇಳ ಕಲಾವಿದರಿಂದ ‘ಗಾನ ಗೌರವ’, ಅಪರಾಹ್ನ 2-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ‘ನುಡಿ ಗೌರವ’ ಮತ್ತು ಸಂಜೆ 5-30 ಗಂಟೆಗೆ ‘ಯಕ್ಷಗೌರವ’ ಯಕ್ಷಗಾನದ ಖ್ಯಾತ ಹಿರಿಯ ಕಿರಿಯ ಹಿಮ್ಮೇಳ ಕಲಾವಿದರಿಂದ ‘ಅಕ್ಷಯಾಂಬರ ವಿಲಾಸ’ ಯಕ್ಷಗಾನ ಬಯಲಾಟ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಕಥಾಬಿಂದು ಪ್ರಕಾಶನ ಇದರ ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯೋತ್ಸವ’ವನ್ನು ದಿನಾಂಕ 26 ಅಕ್ಟೋಬರ್ 2025ರಂದು ಮಂಗಳೂರು ದೇರಳಕಟ್ಟೆಯಲ್ಲಿರುವ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸೌರಭ ರತ್ನ, ಸಮಾಜ ಸೇವಾರತ್ನ, ‘ಚೈತನ್ಯ ಶ್ರೀ’, ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು ಇವರು ಈ ಕಾರ್ಯಕ್ರಮವನ್ನು ಬಿಡುಗಡೆ ಮಾಡಲಿದ್ದಾರೆ. ಯುಗಪುರುಷ ಮಾಸ ಪತ್ರಿಕೆಯ ಸಂಪಾದಕರಾದ ಭುವನಾಭಿರಾಮ ಉಡುಪ ಇವರು ಸ್ಮರಣ ಸಂಚಿಕೆ ಬಿಡುಗಡೆ ಮತ್ತು ವಿ.ಬಿ. ಕುಳಮರ್ವ ಇವರು ಕೃತಿಗಳ ಅನಾವರಣ ಮಾಡಲಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿಜಯಪುರ ನಾಟ್ಯಕಲಾ ನೃತ್ಯ ಅಕಾಡೆಮಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀಮತಿ ಪುಷ್ಪ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ನೃತ್ಯ ವೈಭವ ಮತ್ತು ಗಡಿನಾಡ…

Read More

ಸೊರಬ : ಶ್ರೀ ಎಸ್. ಬಂಗಾರಪ್ಪ ಫೌಂಡೇಷನ್ (ರಿ.) ಹಾಗೂ ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆ ಇದರ ವತಿಯಿಂದ ಎಸ್. ಬಂಗಾರಪ್ಪ ಇವರ ಜನ್ಮ ದಿನೋತ್ಸವವನ್ನು ದಿನಾಂಕ 26 ಅಕ್ಟೋಬರ್ 2025ರಂದು ಶಿವಮೊಗ್ಗ ಜಿಲ್ಲೆಯ ಸೊರಬದ ಬಂಗಾರಧಾಮದಲ್ಲಿ ಆಯೋಜಿಸಲಾಗಿದೆ. ಎಸ್. ಬಂಗಾರಪ್ಪ ಫೌಂಡೇಷನ್ ಇದರ ಅಧ್ಯಕ್ಷರಾದ ಎಸ್. ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ಈ ಸಮಾರಂಭವನ್ನು ಸಚಿವರಾದ ಕೆ.ಹೆಚ್. ಮುನಿಯಪ್ಪ ಇವರು ಉದ್ಘಾಟನೆ ಮಾಡಲಿದ್ದಾರೆ. ಪ್ರಸಿದ್ಧ ಸಾಹಿತಿಗಳಾದ ಡಾ. ಕಾಳೇಗೌಡ ನಾಗವಾರ ಇವರಿಗೆ ‘ಸಾಹಿತ್ಯ ಬಂಗಾರ’, ಬೆಂಗಳೂರಿನ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆಗೆ ‘ಧರ್ಮ ಬಂಗಾರ’, ಚೌಡಿಕೆ ಕಲಾವಿದರಾದ ಶ್ರೀಮತಿ ರಾಧಾಬಾಯಿ ಮಾದರ್ ಇವರಿಗೆ ‘ಜಾನಪದ ಬಂಗಾರ’, ರಂಗಭೂಮಿ ಕಲಾವಿದರಾದ ಜೇವರ್ಗಿ ರಾಜಣ್ಣ ‘ಕಲಾ ಬಂಗಾರ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೆಳಿಗ್ಗೆ 10-30 ಗಂಟೆಗೆ ಸೊರಬದಲ್ಲಿರುವ ಡಾ. ರಾಜ್ ಕುಮಾರ್ ರಂಗಮಂದಿರದಲ್ಲಿ ‘ಬಂಗಾರಪ್ಪನವರ ಚಿಂತನೆಗಳು’ ವಿಚಾರ ಸಂಕಿರಣ ನಡೆಯಲಿದೆ. ಪ್ರಸಿದ್ಧ ಕವಿಗಳಾದ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆಗಳನ್ನು ದಿನಾಂಕ 08 ನವೆಂಬರ್ 2025ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕಾರ್ಮಿಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಪರ್ಧೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಖಾಯಂ ನೌಕರರು ಸಂಘವು ನೀಡಿರುವ https://forms.gle/8pR3m5nXowwQzccs9 ಆನ್ ಲೈನ್ ಲಿಂಕಿನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ ರೂ.1,00,000-00, ದ್ವಿತೀಯ ಬಹುಮಾನ ರೂ.75,000-00, ತೃತೀಯ ಬಹುಮಾನ ರೂ.50,000-00 ಹಾಗೂ ಸಮಾಧಾನಕರ ಬಹುಮಾನ ರೂ.20,000-00 ನಗದು ಬಹುಮಾನ ನೀಡಲಾಗುತ್ತದೆ.

Read More

ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟದ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು ತಾರಾನಾಥ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷಣ್ ಕುಮಾರ್ ಮಲ್ಲೂರ್, ಕೋಶಾಧಿಕಾರಿಯಾಗಿ ಮೋಹನ ಕೊಪ್ಪಲ ಕದ್ರಿ, ಕ್ಷೇಮನಿಧಿ ಪ್ರಧಾನ ಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿ ತುಳಸೀ ದಾಸ್ ಉರ್ವ, ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮ್ಮಣ್, ಶೋಭಾಶೆಟ್ಟಿ, ಶರತ್ ಶೆಟ್ಟಿ ಮುಂಡ್ಕೂರು, ಸಂಘಟನಾ ಕಾರ್ಯದರ್ಶಿಯಾಗಿ ಮಧು ಬಂಗೇರ, ಪ್ರಚಾರ ನಿರ್ದೇಶಕರಾಗಿ ರತ್ನದೇವ್ ಪುಂಜಾಲಕಟ್ಟೆ, ಆಡಳಿತ ಸಮಿತಿ…

Read More