Subscribe to Updates
Get the latest creative news from FooBar about art, design and business.
Author: roovari
ಮಂಗಳೂರು: ಮಂಗಳೂರಿನ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ಸಾಹಿತಿ ಶಶಿಲೇಖಾ ಬಿ. ಇವರ ಮೂರು ಕೃತಿಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 22 ಮಾರ್ಚ್ 2025ರಂದು ಮಂಗಳೂರಿನ ಉರ್ವಸ್ಟೋರ್ ಬಳಿಯ ಸಾಹಿತ್ಯ ಸದನದಲ್ಲಿ ನಡೆಯಿತು. ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಜಾನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ಮಾತನಾಡಿ “ಶಶಿಲೇಖಾ ತಮ್ಮ ಮೂರು ಪುಸ್ತಕಗಳಲ್ಲಿ ಜಾನಪದ ತತ್ವ, ಕೃಷಿ ಪರಂಪರೆ, ಯುವ ಪೀಳಿಗೆ ಬಹುಮುಖಿ ಸಮಾಜದ ಕೌಟುಂಬಿಕ ವಿಚಾರಗಳೊಂಗೆ ಸಮಗ್ರವಾಗಿ ತಿಳಿಸಿದ್ದಾರೆ” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪಂಪ ಪ್ರಶಸ್ತಿ ವಿಜೇತ, ಹಂಪಿ ವಿ. ವಿ. ಇದರ ವಿಶ್ರಾಂತ ಕುಲಪತಿಗಳಾದ ಡಾ. ವಿವೇಕ ರೈ ಮಾತನಾಡಿ “ಸಾಹಿತಿಗಳು, ಬರಹಗಾರರು ಕೇವಲ ಹೇಳಿಕೆಗಳನ್ನು ನೀಡಬಾರದು, ಅವರ ಬದುಕು ಪ್ರಾಯೋಗಿಕವಾಗಿರಬೇಕು. ಹಾಗಿದ್ದಾಗ ಮಾತ್ರ ಅವರಿಗೆ ತಮ್ಮ ಬರಹಗಳಲ್ಲಿ ಸಮಾಜವನ್ನು ತಿದ್ದುವ ನೈತಿಕ ಹಕ್ಕು ಇರುತ್ತದೆ. ಶಶಿಲೇಖ ಅವರ ಕೃತಿ ಮತ್ತು ಜೀವನದಲ್ಲಿ ಇಂತಹ ಬದುಕಿನ ಪ್ರಯೋಗಶೀಲತೆ ಎದ್ದು ಕಾಣುತ್ತದೆ” ಎಂದರು. ‘ಬೆಳಕಿನ ಬೆನ್ನು…
ಕರ್ನಾಟಕ ಲೇಖಕಿಯರ ಸಂಘವು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಬೆಂಗಳೂರಿನಲ್ಲಿ ಆಯೋಜಿಸಿದ 8ನೆಯ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಎರಡನೆಯ ದಿನ ಸಂಘದ ಸದಸ್ಯೆಯರು ಆಡಿದ ‘ಕಲ್ಲರಳಿ ಹೆಣ್ಣಾಗಿ’ ಕಾವ್ಯ ರೂಪಕ ಮಹಿಳೆಯರು ಆದಿಯಿಂದ ಇಂದಿನ ತನಕ ನಡೆದು ಬಂದ ಕಲ್ಲುಮುಳ್ಳುಗಳ ಹಾದಿ ಮತ್ತು ಅವರ ಇಂದಿನ ಅಸಹಾಯಕ ಸ್ಥಿತಿಗತಿಗಳನ್ನು ಬಹಳ ಮಾರ್ಮಿಕವಾಗಿ ಮತ್ತು ಹೃದಯಸ್ಪರ್ಶಿಯಾಗಿ ರಂಗದ ಮೇಲೆ ಕಟ್ಟಿಕೊಟ್ಟ ನಾಟಕವಿದು. (ರಚನೆ : ಸಂಧ್ಯಾರಾಣಿ ನಿರ್ದೇಶನ : ಜಯಲಕ್ಷ್ಮಿ ಪಾಟೀಲ್). ನಾಟಕದಲ್ಲಿ ಎರಡೇ ಎರಡು ಹೆಣ್ಣು ಪಾತ್ರಗಳು – ಒಬ್ಬಳು ಸಣ್ಣ ವಯಸ್ಸಿನ ಆಧುನಿಕ ತಲೆಮಾರಿನವಳು ಮತ್ತು ಇನ್ನೊಬ್ಬಳು ಮಧ್ಯ ವಯಸ್ಸಿನ ಹಿಂದಿನ ತಲೆಮಾರಿನವಳು. ಮಧ್ಯ ವಯಸ್ಸಿನಾಕೆ ಸಂಪ್ರದಾಯವು ವಿಧಿಸಿದ ಕಟ್ಟುಪಾಡುಗಳನ್ನು ಮತ್ತು ಬದುಕಿನುದ್ದಕ್ಕೂ ಒಡ್ಡಿದ ಅಡೆತಡೆಗಳನ್ನು ಪ್ರಶ್ನಿಸದೇ ಎಲ್ಲವನ್ನೂ ಮುಸುಕಿನೊಳಗೆ ಗುದ್ದಾಡುತ್ತಲೇ ಸಹಿಸಿಕೊಂಡವಳು. ಎಳೆಯ ವಯಸ್ಸಿನವಳು ಹೊಸ ಚಿಂತನೆಗಳನ್ನು ರೂಪಿಸಿಕೊಂಡವಳು. ಎಲ್ಲವನ್ನೂ ಪ್ರಶ್ನಿಸಿ ತಾನು ಶೋಷಣೆಗೊಳಗಾಗಬಾರದು ಎಂಬ ಎಚ್ಚರವನ್ನು ಸದಾ ತನ್ನೊಳಗೆ ಕಾಪಿಟ್ಟುಕೊಂಡವಳು. ಆದ್ದರಿಂದಲೇ ಅವಳು…
ಬೆಂಗಳೂರು : ಬೆಂಗಳೂರಿನ ಸ್ವರ್ಣ ಭಾರತಿ ಫೌಂಡೇಶನ್ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕೊಡಮಾಡುವ ‘ಮಹಿಳಾ ರತ್ನ 2025’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರಂದು ಬೆಂಗಳೂರಿನ ಈಸ್ಟ್ಕಲ್ಬರಲ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆ ಸೋಮವಾರಪೇಟೆಯ ಬರಹಗಾರ್ತಿ ಗೀತಾಂಜಲಿ ಇವರ ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ‘ಮಹಿಳಾ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಬೆಂಗಳೂರು ಸಹಾಯಕ ಪೊಲೀಸ್ ಕಮಿಷನರ್ ರಂಗಪ್ಪ, ಪತ್ರಕರ್ತೆ ಸುಕನ್ಯಾ, ಸ್ವರ್ಣ ಭಾರತ್ ಪೌಂಡೇಶನ್ ಇದರ ಅಧ್ಯಕ್ಷೆ ಡಾ. ರಜನಿ ಸಂತೋಷ್ ಸೇರಿ ದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 23 ಮಾರ್ಚ್ 2025ರಂದು ಗೋವಿಂದ ಪೈ ಸಂಶೋಧನ ಸಂಪುಟ ಪರಿಷ್ಕೃತ ದ್ವಿತೀಯ ಮುದ್ರಣ ಭಾಗ-2ರ ಅನಾವರಣ ಹಾಗೂ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ 2024ನೇ ಸಾಲಿನ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ ಸ್ವೀಕರಿಸಿದ ಸಾಹಿತಿ ಡಾ. ಹಂ.ಪ. ನಾಗರಾಜಯ್ಯ ಇವರು ಮಾತನಾಡಿ ‘ರಾಷ್ಟ್ರಕವಿ ಗೋವಿಂದ ಪೈ ಅವರ ಸಂಶೋಧನಾ ಬರಹಗಳು ಮತ್ತು ಸೃಜನಾತ್ಮಕ ಸಾಹಿತ್ಯ ಭಂಡಾರವು ಅಧ್ಯಯನಶೀಲರಿಗೆ ಪ್ರೇರಣೆಯಾಗಿದೆ. ಗೋವಿಂದ ಪೈ ಬರೆದ ದ್ರಾವಿಡ ಲಯದ ಹಾಡುಗಳು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮೈಲುಗಲ್ಲು. ಸಂಶೋಧನೆಯ ಜೊತೆಗೆ ಕಾವ್ಯದ ಸರ್ವ ಸ್ವಾರಸ್ಯವನ್ನು ಕಟ್ಟಿಕೊಟ್ಟಿರುವ ಅವರು ತಪಸ್ವಿಯಂತೆ ಬದುಕಿದವರು. ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸಿರುವುದು ಧನ್ಯತಾ ಭಾವ ಮೂಡಿಸಿದೆ” ಎಂದರು.…
ಮಂಗಳೂರು : ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು ಪ್ರಸ್ತುತ ಪಡಿಸುವ ‘ಪ್ರೇರಣಾ -4’ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆಯಿಂದ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 29 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ ಸೇಂಟ್ ಅಲೋಶಿಯಸ್ ಕಾಲೇಜಿನ ಎಲ್.ಸಿ.ಆರ್.ಐ. ಹಾಲಿನಲ್ಲಿ ಆಯೋಜಿಸಲಾಗಿದೆ. ಸುರತ್ಕಲ್ಲಿನ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕರಾದ ವಿದ್ವಾನ್ ಚಂದ್ರಶೇಖರ ನಾವಡ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕುಮಾರಿಯರಾದ ಮೈತ್ರೀಯಿ ನಾವಡ, ದಿಶಾ ಗಿರೀಶ್ ಮತ್ತು ತ್ವಿಷಾ ಶೆಟ್ಟಿ ಇವರ ನೃತ್ಯ ಕಾರ್ಯಕ್ರಮಕ್ಕೆ ಗುರು ವಿದ್ಯಾಶ್ರೀ ರಾಧಾಕೃಷ್ಣ ಇವರು ನಿರ್ದೇಶನ ಮತ್ತು ಹಾಡುಗಾರಿಕೆ, ಅನಂತ ಕೃಷ್ಣ ಸಿ.ವಿ. ನಟುವಾಂಗ, ಉಡುಪಿಯ ವಿದ್ವಾನ್ ಬಾಲಚಂದ್ರ ಭಾಗವತ್ ಮೃದಂಗ ಹಾಗೂ ಬೆಂಗಳೂರಿನ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಕೊಳಲಿನಲ್ಲಿ ಸಾಥ್ ನೀಡಲಿದ್ದಾರೆ.
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಕೇಂದ್ರೀಯ ಘಟಕ ಮಂಗಳೂರು ಇದರ 8ನೇ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 15 ಮಾರ್ಚ್ 2025ರಂದು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್, ಮಮತ ಹೆಗ್ಡೆ, ಸತ್ಯವತಿ ಡಿ. ಶೆಟ್ಟಿ ದೀಪ ಪ್ರಜ್ವಲನೆಗೈದರು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ ಹಿರಿಯ ನೃತ್ಯ ವಿದುಷಿ, ವಿಮರ್ಶಕಿ ಪ್ರತಿಭಾ ಎಲ್. ಸಾಮಗ ಮಾತನಾಡಿ “ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರೂ ಕೂಡಾ ಯಕ್ಷಗಾನದಲ್ಲಿ ಮುಂಚೂಣಿಯಲ್ಲಿದ್ದು ಕಲಾಸೇವೆಗೈಯುತ್ತಿದ್ದಾರೆ. ಅದರಲ್ಲೂ ಮಕ್ಕಳು ಯಕ್ಷಗಾನದತ್ತ ಆಕರ್ಷಿತರಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವಂತೆ ಮಹಿಳಾ ಕೇಂದ್ರ ಸಮಿತಿ ಶ್ರಮ ಪಟ್ಟಿದೆ. ನೇಪಥ್ಯಕ್ಕೆ ಸರಿದ ಮತ್ತು ಸಾಧನೆಗೈದ ಮಹಿಳಾ ಕಲಾವಿದರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ” ಎಂದರು. ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಪ್ರಸಾದ್ ಜೈನ್, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ವಿದ್ಯಾ ರಾಕೇಶ್, ಪೂರ್ಣಿಮಾ ಪ್ರಭಾಕರ ರಾವ್ ಪೇಜಾವರ, ಸುಜಾತ ಧನಂಜಯ…
ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಮತ್ತು ಡಿ. ದೇವರಾಜು ಅರಸು ಮೆಟ್ರಿಕ್ ನಂತರ ವಿದ್ಯಾರ್ಥಿನಿ ನಿಲಯ ಶಿವಮೊಗ್ಗ ಇವರ ವತಿಯಿಂದ ‘ದತ್ತಿ ನಿಧಿ ಕಾರ್ಯಕ್ರಮ’ವನ್ನು ದಿನಾಂಕ 27 ಮಾರ್ಚ್ 2025ರಂದು ಶಿವಮೊಗ್ಗದ ಡಿ. ದೇವರಾಜು ಅರಸು ಮೆಟ್ರಿಕ್ ನಂತರ ವಿದ್ಯಾರ್ಥಿನಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಮಭಟ್ಟ ಮತ್ತು ಶ್ರೀಮತಿ ದೇವಕಮ್ಮ ದತ್ತಿ ಹಾಗೂ ಶ್ರೀ ಆನಂದಪುರಂ ಜಗದ್ಗುರು ಗುರುಬಸವ ಮಹಾಸ್ವಾಮಿಗಳ ದತ್ತಿ ಉಪನ್ಯಾಸ ನಡೆಯಲಿದೆ. ಈ ಕಾರ್ಯಕ್ರಮವನ್ನು ಖ್ಯಾತ ವೈದ್ಯರಾದ ಡಾ. ಪಿ. ನಾರಾಯಣ ಇವರು ಉದ್ಘಾಟನೆ ಮಾಡಲಿದ್ದು, ‘ಆರೋಗ್ಯ ಮತ್ತು ಸಾಹಿತ್ಯ’ ಎಂಬ ವಿಷಯದ ಬಗ್ಗೆ ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಮತ್ತು ‘ಕೆಳದಿ ಸಂಸ್ಥಾನದ ಆಡಳಿತ ಮಹತ್ವ’ ಎಂಬ ವಿಷಯದ ಬಗ್ಗೆ ವಿಶ್ರಾಂತ ಸಹ ಪ್ರಾಧ್ಯಾಪಕರಾದ ಡಾ. ಕೆ.ಜಿ. ವೆಂಕಟೇಶ್ ಇವರು ವಿಷಯ ಮಂಡನೆ ಮಾಡಲಿರುವರು.
ಬೆಂಗಳೂರು : ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ಜನಪದರು ಸಾಂಸ್ಕೃತಿಕ ವೇದಿಕೆ (ರಿ.) ಇವರು ಅಭಿನಯಿಸುವ ರಾಮಕೃಷ್ಣ ಬೆಳ್ತೂರು ಇವರ ನಿರ್ದೇಶನದಲ್ಲಿ ‘ತಿರುಕರಾಜ’ ನಾಟಕ ಪ್ರದರ್ಶನವನ್ನು ದಿನಾಂಕ 27 ಮಾರ್ಚ್ 2025ರಂದು ಬೆಂಗಳೂರಿನ ನಿಂಬೆಕಾಯಿಪುರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಜನಪದರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ತೆಕ್ಕಟ್ಟೆ: ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಹಾಗೂ ಅರೆಹೊಳೆ ಪ್ರತಿಷ್ಠಾನದ ಸಹಕಾರದೊಂದಿಗೆ ಧಮನಿ (ರಿ.) ತೆಕ್ಕಟ್ಟೆ ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವವು ದಿನಾಂಕ 23 ಮಾರ್ಚ್ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅರೆಹೊಳೆ ಪ್ರತಿಷ್ಠಾನದ ಸದಾಶಿವ ರಾವ್ ಅರೆಹೊಳೆ ಮಾತನಾಡಿ “ಕೇವಲ ಮಕ್ಕಳ ರಂಗಭೂಮಿಯ ಬಗೆಗೆ ಧ್ವನಿ ಎತ್ತಿದ ಸಂಸ್ಥೆ ಧಮನಿ (ರಿ.) ತೆಕ್ಕಟ್ಟೆ. ಭವಿಷ್ಯವನ್ನು ಆಳುವ ಮಕ್ಕಳನ್ನು ರಂಗಭೂಮಿಯ ಚಟುವಟಿಕೆಗಳಿಂದ ಶ್ರೀಮಂತಗೊಳಿಸಿದರೆ ಉಜ್ವಲ ಭವಿಷ್ಯ ಸಾಧ್ಯ. ಆಗಾಗ ಮಕ್ಕಳನ್ನು ಒಂದುಗೂಡಿಸುತ್ತ ಕೆಲಸ ಮಾಡುತ್ತಿರುವುದು ಸಣ್ಣ ವಿಚಾರವಲ್ಲ. ಸಾಹಸದ ಕೆಲಸಕ್ಕೆ ಸದಾ ಸಿದ್ಧವಾಗುತ್ತಿರುವ ಈ ಸಂಸ್ಥೆಯು ಉತ್ತರೋತ್ತರ ಶ್ರೇಯಸ್ಸು ಹೊಂದಲಿ” ಎಂದು ಹಾರೈಸಿದರು. ರಂಗ ನಿರ್ದೇಶಕ ಸದಾನಂದ ಬೈಂದೂರು ಮಾತನಾಡಿ ನಿರಂತರ ರಂಗ ಚಟುವಟಿಕೆಯಿಂದ ತೆಕ್ಕಟ್ಟೆ ಪರಿಸರವನ್ನು ಸಾಂಸ್ಕೃತಿಕವಾಗಿ ಬೆಳಗಿಸುತ್ತಿರುವ ಸಂಸ್ಥೆಯೊಂದಿಗೆ ಧಮನಿ ಟ್ರಸ್ಟ್ ಹೊಸ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಂಗಭೂಮಿ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡಿ ಜನ್ಮ ತಾಳಿದೆ. ಪ್ರತೀ ದಿನವೂ ಮಕ್ಕಳ ರಂಗ ಕಲೆಯ ಬಗೆಗೆ…
ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಶ್ರೀ ಸರ್ವೇಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ.) ಇದರ ಸಹಭಾಗಿತ್ವದಲ್ಲಿ 8ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಮಹೋತ್ಸವ ಅಂಗವಾಗಿ ನಾಡಿಗಾಗಿ, ನಾಡಿನ ಏಳಿಗೆಗಾಗಿ ಗಣನೀಯ ಸೇವೆ ಸಲ್ಲಿಸಿದ ಪತ್ರಿಕೋದ್ಯಮ, ಸಾಹಿತ್ಯ, ಸಂಘಟನೆ, ಸಮಾಜಸೇವೆಗಾಗಿ ಮಾಜಿ ಮುಖ್ಯಮಂತ್ರಿ ವಿಧಾನಸೌಧ ನಿರ್ಮಾತ್ ದಿವಂಗತ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ರಾಷ್ಟ್ರ ಪ್ರಶಸ್ತಿಯನ್ನು ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ದಿನಾಂಕ 24 ಮಾರ್ಚ್ 2025ರಂದು ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಖ್ಯಾತ ಗಾಯಕ ಶಶಿಧರ ಕೋಟೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಚಲನ ಚಿತ್ರನಟ ಶಿವಕುಮಾರ ಆರಾಧ್ಯ, ಹೊಸಮಠ ಮಹಾಸ್ವಾಮಿಗಳಾದ ಬಸವ ಶಾಂತಲಿಂಗ ಮಹಾಸ್ವಾಮಿಗಳು, ಡಾ. ಪುತ್ತೂರಾಯ, ಡಾ. ಕೆಂಚನೂರು ಶಂಕರ್, ಲಷೀತಾ ಗಂಗಾವತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.