Author: roovari

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ (ರಿ.) ಮಂಗಳೂರು ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ 03 ಆಗಸ್ಟ್ 2025ರಂದು ಅಪರಾಹ್ನ 3-30 ಗಂಟೆಗೆ ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಧ್ಯಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಶರವು ಮಹಾಗಣಪತಿ ದೇವಸ್ಥಾನದ ಶಿಲಾ ಶಿಲಾ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಯವರು ಶುಭಾಸಂಶನೆಗೈಯಲಿದ್ದು, ಇದೇ ಸಂದರ್ಭದಲ್ಲಿ ವಿದುಷಿ ಶ್ರೀವಿದ್ಯಾ ಇವರ ಶಿಷ್ಯೆ ರೆಮೋನಾ ಎವೆಟ್ ಪಿರೇರಾ ಇವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

Read More

ನಾಪೋಕ್ಲು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳ ಒಕ್ಕೂಟದ ಸಹಯೋಗದಲ್ಲಿ ‘ಅರೆ ಭಾಷೆಲಿ ಕಥೆ ಬರೆಮೋ’ ಒಂದು ದಿನದ ಕಾರ್ಯಾಗಾರ ದಿನಾಂಕ 27 ಜುಲೈ 2025ರಂದು ನಡೆಯಿತು. ಅಕಾಡೆಮಿ ಸದಸ್ಯೆ ಬಡ್ಡಡ್ಕ ಚಂದ್ರಾವತಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪುಟಾಣಿ ಕೂಡಕಂಡಿ ಅನ್ವಿತ ಸುದೀಪ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ ಮಾತನಾಡಿ “ಸಮಾಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಒಂದು ಅಪರೂಪದ ಸುವರ್ಣ ಅವಕಾಶ. ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದು ನುಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆಯಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ “ಚೇರಂಬಾಣೆ ಗೌಡ ಸಮಾಜ ಕೇವಲ ಮದುವೆ ಸಮಾರಂಭಗಳಿಗೆ ಮೀಸಲಾಗಿರದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಿಗೂ ನೆರಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಒಕ್ಕೂಟವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಇದು ಚೊಚ್ಚಲ ಕಾರ್ಯಕ್ರಮವಾಗಿದ್ದು, ಮುಂದೆ ಯುವ ಸಮೂಹಕ್ಕೆ ಹಾಗೂ ಮಹಿಳೆಯರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು…

Read More

ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಈ ವರ್ಷ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 94 ಶಾಲೆಗಳಲ್ಲಿ ಯಕ್ಷಶಿಕ್ಷಣ ನೀಡುತ್ತಿದ್ದು, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಯಕ್ಷಗಾನ ತರಗತಿಗಳ ಉದ್ಘಾಟನೆಯು ದಿನಾಂಕ 01 ಆಗಸ್ಟ್ 2025ರಂದು ಶಾಲೆಯ ಸಭಾಭವನದಲ್ಲಿ ಜರಗಿತು. ಟ್ರಸ್ಟಿನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶ್ ಪಾಲ್ ಎ. ಸುವರ್ಣ ಜ್ಯೋತಿ ಬೆಳಗಿಸಿ “ಯಕ್ಷಗಾನ ಕಲಾರಂಗದ ಸಹಕಾರದಿಂದ ಈ ಮಹಾಭಿಯಾನ ಯಶಸ್ವಿಯಾಗಿ ಮುಂದುವರೆಯುತ್ತಿದೆ” ಎಂದು ಹೇಳಿದರು. ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ “ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಈ ಕಾರ್ಯಕ್ರಮ ಕಳೆದ 18 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ” ಎಂದರು. ದಾನಿ ಡಾ. ಬಿ.ಜಿ. ಆಚಾರ್ಯರು ಬಾಲ್ಯದಲ್ಲಿ ಯಕ್ಷಗಾನ ತನ್ನ ಮೇಲೆ ಬೀರಿದ ಪ್ರಭಾವವನ್ನು ನೆನಪಿಕೊಂಡರು. ಎಸ್.ಡಿ.ಎಂ.ಸಿ. ಗೌರವಾಧ್ಯಕ್ಷೆ ತಾರಾದೇವಿ, ಟ್ರಸ್ಟಿಗಳಾದ ನಾರಾಯಣ ಎಂ. ಹೆಗಡೆ, ಮೀನಾಲಕ್ಷಣಿ ಅಡ್ಯಂತಾಯ, ಯಕ್ಷಗಾನ ಗುರುಗಳಾದ ನಿರಂಜನ್ ಭಟ್, ಆದ್ಯತಾ ಭಟ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ನವ್ಯಾ ನಾಯಕ್ ವೇದಿಕೆಯಲ್ಲಿ…

Read More

ಸುಳ್ಯ : ಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿಗಳಾದ ಶ್ರೀ ಪ್ರಭಾಕರ ಶಿಶಿಲ ಅವರು ಹಲವಾರು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ‘ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ದಿನಾಂಕ 03 ಆಗಸ್ಟ್ 2025ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿಗಳಾದ ಶ್ರೀ ಮೋಹನ್ ನಂಗಾರು, ಹಾ.ಮ. ಸತೀಶ್ ಬೆಂಗಳೂರು, ನಾರಾಯಣ ರೈ ಕುಕ್ಕುವಳ್ಳಿ, ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಇನ್ನಿತರರು ಪ್ರದಾನ ಮಾಡುವರು. ಚಂದನ ಸಾಹಿತ್ಯ ವೇದಿಕೆಯು ತನ್ನ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ 2025 ಈ ಸಮಾರಂಭದಲ್ಲಿ ಸಾಹಿತಿ ಶ್ರೀ ಪ್ರಭಾಕರ ಶಿಶಿಲ ಇವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಸುಳ್ಯ ಇವರು ತಿಳಿಸಿದ್ದಾರೆ.

Read More

ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ.) ಸಿದ್ಧನಹಳ್ಳಿ ಇದರ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ ಬೆಂಗಳೂರು ಮತ್ತು ವೀರಲೋಕ ಕನ್ನಡ ಪುಸ್ತಕ ಪ್ರಕಾಶನ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶ -2025 ಪ್ರಶಸ್ತಿ ಪ್ರದಾನ, ವಿಚಾರ ಸಂಕಿರಣ, ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 03 ಜುಲೈ 2025ರಂದು ಬೆಳಗ್ಗೆ 09-30 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂ ಎರಡನೇ ಮಹಡಿಯಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9-30 ಗಂಟೆಗೆ ಧ್ವಜಾರೋಹಣ, 9-45 ಗಂಟೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಚಾಲನೆ ಮತ್ತು 10-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆಗೊಳ್ಳಲಿವೆ. ಖ್ಯಾತ ಶಿಕ್ಷಣ ತಜ್ಞರಾದ ಡಾ. ಗೀತಾ ರಾಮಾನುಜಂ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ವಿಜ್ಞಾನ ಲೇಖಕ ಡಾ. ಆರ್.ಎಸ್. ರವೀಂದ್ರ ಇವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ಶ್ರೀ ಶಶಿಕಾಂತ್ ರಾವ್ ದತ್ತಿ ಪುನೀತ್…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಸಹಯೋಗದಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 31 ಜುಲೈ 2025ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಜರುಗಿತು. ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸಪ್ತಾಹದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಆಂಜನೇಯ ಯಕ್ಷಗಾನ ಕಲಾ ಸಂಘದ ಕಾರ್ಯಕ್ರಮಗಳು ಉನ್ನತ ಮಟ್ಟದಲ್ಲಿ ನಡೆಯುತ್ತಿವೆ. 56 ವಸಂತಗಳನ್ನು ಕಂಡ ಸಂಘ, ಶತಮಾನಗಳನ್ನು ಪೂರೈಸಲಿ ಎಂದು ಶುಭ ಕೋರಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹಾಗೂ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮೇಗಿನಗುತ್ತು ಇನ್ನು ಮುಂದೆಯೂ ದೇವಳದಲ್ಲಿ ಆಂಜನೇಯ ಸಂಘದ ತಾಳಮದ್ದಳೆಗಳು ನಡೆದಾಗ ತಮ್ಮ…

Read More

ಮೈಸೂರು : ನಟನ ಸಂಸ್ಥೆಯು ಮೈಸೂರಿನ ರಾಮಕೃಷ್ಣ ನಗರದ ನಟನ ರಂಗಶಾಲೆಯಲ್ಲಿ ಮನುಜ ರಂಗ ಟ್ರಸ್ಟ್ (ರಿ.) ಬೆಂಗಳೂರು ಆಯೋಜನೆಯಲ್ಲಿ ಶ್ರೀ ಸಾಯಿ ಕಲಾ ಯಕ್ಷ ಬಳಗ ಮತ್ತು ಡಾ. ಕೆ. ಶಿವರಾಮ ಕಾರಂತ ಬಾಲವನ ಪುತ್ತೂರು ಮಹಿಳಾ ಯಕ್ಷಗಾನ ಮೇಳದವರಿಂದ ಪ್ರಪ್ರಥಮ ಬಾರಿಗೆ ಮೈಸೂರಿನಲ್ಲಿ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರಸಂಗವು ಪ್ರದರ್ಶನಗೊಳ್ಳಲಿದೆ. ನಮ್ಮೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಿಕೆ ಮತ್ತು ಕೆಜೆಎಸ್ ಅಧ್ಯಕ್ಷ ಗ್ರೇಶಿಯಸ್ ರೋಡ್ರಿಗಸ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ನಟನದ ಸಂಸ್ಥಾಪಕ ಮಂಡ್ಯ ರಮೇಶ್ ಪಾಲ್ಗೊಳ್ಳುವರು. ಹೆಚ್ಚಿನ ಮಾಹಿತಿಗೆ 93804 86553, 72595 3777 ಸಂಪರ್ಕಿಸಬಹುದು.

Read More

ಬೆಂಗಳೂರು : ಕರ್ನಾಟಕ ಸುಗಮ ಸಂಗೀತ ಪರಿಷತ್ತು (ರಿ.) ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ‘ಗೀತೋತ್ಸವ -2025’ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನವನ್ನು ದಿನಾಂಕ 02 ಮತ್ತು 03 ಆಗಸ್ಟ್ 2025ರಂದು ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ. ದಿನಾಂಕ 02 ಆಗಸ್ಟ್ 2025ರಂದು ಬೆಳಗ್ಗೆ 9-30 ಗಂಟೆಗೆ ಕಾವ್ಯ ದಿಬ್ಬಣದಲ್ಲಿ ಸಮ್ಮೇಳನಾಧ್ಯಕ್ಷರು ಹಾಗೂ ಸಾಹಿತಿ ಕಲಾವಿದರ ಮೆರವಣಿಗೆ ನಡೆಯಲಿದೆ. 10-00 ಗಂಟೆಗೆ ಮಾನ್ಯ ಸಚಿವರಾದ ಡಾ. ಹೆಚ್.ಪಿ. ಮಹದೇವಪ್ಪ ಇವರಿಂದ ಈ ಸಮ್ಮೇಳನ ಉದ್ಘಾಟನೆಗೊಳ್ಳಲಿದ್ದು, ವೈ.ಕೆ. ಮುದ್ದುಕೃಷ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಯುತ ನಗರ ಶ್ರೀನಿವಾಸ ಉಡುಪ ಇವರು ಸಮ್ಮೇಳನಾಧ್ಯಕ್ಷರ ಅಧಿಕಾರ ಸ್ವೀಕಾರ ಮಾಡಲಿದ್ದು, ಎನ್.ಎಸ್. ಪ್ರಸಾದ್ ಇವರು ಧ್ವಜ ಹಸ್ತಾಂತರ ಮಾಡಲಿದ್ದಾರೆ. ಹಿರಿಯ ಕವಿ ಗೀತ ಸಂಗಮ ಕೃತಿ ಬಿಡುಗಡೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ‘ಕಾವ್ಯಶ್ರೀ ಪ್ರಶಸ್ತಿ’ ಮತ್ತು ‘ಭಾವಶ್ರೀ ಪ್ರಶಸ್ತಿ’ಗಳನ್ನು ಪ್ರದಾನ ಮಾಡಲಾಗುವುದು. 12-00 ಗಂಟೆಯಿಂದ ‘ಭಾವ ಕುಸುಮ’ ಮತ್ತು ‘ಭಾವಾಂಜಲಿ’…

Read More

ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ನಡೆದ ಯಕ್ಷಗಾನ ತಾಳಮದ್ದಳೆ ದಶಾಹದ ಸಮಾರೋಪ ಸಮಾರಂಭ ದಿನಾಂಕ 27 ಜುಲೈ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಎಲ್. ಧರ್ಮ ಮಾತನಾಡಿ “ಕರಾವಳಿಯ ಗಂಡುಮೆಟ್ಟಿದ ಕಲೆ ಯಕ್ಷಗಾನ ಮನರಂಜನೆ ಜತೆಗೆ ಕಲಾವಿದರಿಗೆ ಜೀವನ ಕಟ್ಟಿಕೊಟ್ಟ ಕಲಾ ಪ್ರಾಕಾರವಾಗಿದೆ” ಎಂದು ಹೇಳಿದರು. ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಯಮಿ ಕೆ. ಕೆ. ಶೆಟ್ಟಿ, ಜ್ಯೋತಿಷಿ ಪದ್ಮನಾಭ ಎಲ್. ಶರ್ಮ ಇರಿಞಾಲಕುಡ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬಡಗುತಿಟ್ಟಿನ ಹಿರಿಯ ಭಾಗವತ ಕೊಳಗಿ ಕೇಶವ ಹೆಗಡೆ ಅವರನ್ನು ಸ್ವಾಮೀಜಿ ಸನ್ಮಾನಿಸಿದರು. ಕಲಾವಿದ ವಾಸುದೇವ ರಂಗ ಭಟ್ಟ ಅವರನ್ನು ಸ್ವಾಮೀಜಿ ಆಶೀರ್ವದಿಸಿದರು. ಶ್ರೀಮಠದ ವ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಸ್ವಾಗತಿಸಿ, ಪ್ರತಿಷ್ಠಾನದ…

Read More

ಮಡಿಕೇರಿ : ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರನ್ನು ದಿನಾಂಕ 30 ಜುಲೈ 2025ರಂದು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರು ಬರೆದು, ಹರಿವು ಪ್ರಕಾಶನದವರು ಪ್ರಕಟಿಸಿರುವ ‘ಮಂಗಳಿ’ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದಲ್ಲಿರುವ ಡಾ. ಸೂರ್ಯಕುಮಾ‌ರ್ ಅವರ ಕ್ಲಿನಿಕ್ ನಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, “ಕೊಡಗಿನಲ್ಲಿ ಹುಟ್ಟಿ, ಬೆಳೆದ ಡಾ. ಕೆ.ಬಿ. ಸೂರ್ಯಕುಮಾ‌ರ್ ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ…

Read More