Subscribe to Updates
Get the latest creative news from FooBar about art, design and business.
Author: roovari
ಮೂಡಬಿದಿರೆ : ತುಳುವ ಮಹಾಸಭೆ ಮೂಡಬಿದಿರೆ ತಾಲೂಕು, ಮಂದಾರ ಪ್ರತಿಷ್ಠಾನ ಮಂಗಳೂರು, ತುಳುಕೂಟ ಬೆದ್ರ ಮತ್ತು ಧವಳತ್ರಯ ಟ್ರಸ್ಟ್ ಮೂಡಬಿದಿರೆ ಇವರ ಜಂಟಿ ಆಶ್ರಯದಲ್ಲಿ ‘ತುಳು ಕಾವ್ಯ ಯಾನ 28’ ಕಾರ್ಯಕ್ರಮವನ್ನು ದಿನಾಂಕ 24 ಆಗಸ್ಟ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಮೂಡಬಿದಿರೆಯ ಜೈನ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ತುಳು ವಾಲ್ಮೀಕಿ ಮಂದಾರ ಕೇಶವ ಬಟ್ರ್ ರಚಿಸಿರುವ ‘ಬೀರದ ಬೊಲ್ಪು’ ಬಾಲ ಕೃಷ್ಣನ ಬಾಲಲೀಲೆ ಪ್ರಸ್ತುತಗೊಳ್ಳಲಿದೆ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಡೋಜ ಹಂಪನಾ ವಿರಚಿತ ದೇಸೀ ಕಾವ್ಯದ ರಂಗರೂಪ ‘ಚಾರುವಸಂತ’ ನಾಟಕದ ಪ್ರದರ್ಶನವನ್ನು 18 ಆಗಸ್ಟ್ 2025 ರಿಂದ 21 ಆಗಸ್ಟ್ 2025ರ ವರೆಗೆ ನಾಲ್ಕುದಿನ ಸಂಜೆ 6. 45ರಿಂದ ಮೂಡುಬಿದಿರೆಯ ಸ್ಕೌಟ್ಸ್- ಗೈಡ್ಸ್ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಡಾ. ಜೀವನ್ ರಾಂ ಸುಳ್ಯ ನಿರ್ದೇಶಿಸಿದ ಈ ನಾಟಕಕ್ಕೆ ಡಾ. ನಾ. ದಾಮೋದರ ಶೆಟ್ಟಿಯವರು ರಂಗರೂಪ ನೀಡಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಯಶಸ್ವೀ 26 ಪ್ರದರ್ಶನಗಳನ್ನು ಕಂಡ ಚಾರುವಸಂತ ನಾಟಕವು ಕನ್ನಡ ರಂಗಭೂಮಿಯಲ್ಲಿ ಬಹುಬೇಡಿಕೆಯ ದೃಶ್ಯಕಾವ್ಯವಾಗಿದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ. ಸಮಯಕ್ಕೆ ಸರಿಯಾಗಿ ಆರಂಭವಾಗುವ ನಾಟಕಕ್ಕೆ ಪ್ರವೇಶ ಉಚಿತವಾಗಿರುತ್ತದೆ ಎಂದು ಆಳ್ವಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಹೇಳಿದ್ದಾರೆ. 17 ಭಾಷೆಗಳಿಗೆ ಅನುವಾದಗೊಂಡಿರುವ ಹಂಪನಾರ ಮಹಾಕಾವ್ಯ ‘ಚಾರುವಸಂತ’ವು ಆಳ್ವಾಸ್ ನ ಹೆಮ್ಮೆಯ ರಂಗ ಪ್ರಯೋಗ. ದೇಶದ ಪ್ರಾಚೀನ ಕಥಾ ಪರಂಪರೆಯಲ್ಲಿ ಚಾರುದತ್ತನ ಕಥೆಗೆ ವಿಶಿಷ್ಠ…
ಬೆಂಗಳೂರು : ‘ನೆಲಾ’ ಇದರ ವತಿಯಿಂದ ‘ಸಂಸ್ಕೃತಿ ಜಾತ್ರೆ’ಯನ್ನು ದಿನಾಂಕ 21 ಆಗಸ್ಟ್ 2025ರಂದು 5-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಸಂಗೀತ ಮತ್ತು ನೃತ್ಯ, ಸ್ಪಾನಿಶ್ ಫ್ಮೆಮೆಂಕೊ, ಆಫ್ರಿಕನ್ ನೃತ್ಯ ಮತ್ತು ಪಾಶ್ಚೀಮಾತ್ಯ ಬ್ಯಾಂಡ್ ಮ್ಯೂಜಿಕ್ ಪ್ರಸ್ತುತಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9945888644 ಸಂಖ್ಯೆಯನ್ನು ಸಂಪರ್ಕಿಸಿರಿ.
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ. ಡಿ. ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗು ತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂಪಾಯಿ 25,000 ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ. ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. 23 ಆಗಸ್ಟ್ 2025ರ ಭಾನುವಾರ ಮಂಗಳೂರಿನ ಕರಂಗಲಪಾಡಿ ಎ. ಜೆ. ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ 29ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ. ಎ. ಜೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಂಗಳೂರು : ಉಮ್ಮಕ್ಕೆ ಚಾರಿಟೇಬಲ್ ಟ್ರಸ್ಟ್ ಮತ್ತು ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಆಶ್ರಯದಲ್ಲಿ ದ.ಕ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ದಿನಾಂಕ 17 ಆಗಸ್ಟ್ 2025ರಂದು ಆಯೋಜಿಸಿದ್ದ ಉಮ್ಮಕ್ಕೆನ ನೆಂಪು, ದತ್ತಿನಿಧಿ ಉಪನ್ಯಾಸ, ಕೂಡುಕಟ್ಟ್ ದ ಪಾತೆರಕತೆ, ಸಂತ ಕವಿ ಕನಕದಾಸ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ “ಸ್ವಹಿತವನ್ನು ಬಯಸದೆ ಪರರ ಹಿತಕ್ಕಾಗಿ ಸ್ಪಂದಿಸಿದ ಉಮ್ಮಕ್ಕೆಯವರ ಆದರ್ಶಗಳು ನಮಗೆ ಸ್ಫೂರ್ತಿಯಾಗಬೇಕು. ಹಿರಿಯರಾದ ವಾಸುದೇವ ಉಚ್ಚಿಲರು ದಕ್ಷಿಣ ಕನ್ನಡದ ಸಾಮಾಜಿಕ ಹೋರಾಟಗಳ ಮೂಲಕ ಪ್ರೇರಣೆ ನೀಡಿದವರು” ಎಂದು ನುಡಿದರು. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಮಾತನಾಡಿ “ಕೌಟುಂಬಿಕ ಸಂಬಂಧಗಳು ಮರೆಯಾಗುತ್ತಿರುವ ಸಂಧರ್ಭದಲ್ಲಿ ಹಿರಿಯರ ನೆನಪುಗಳನ್ನು ವಿಶಿಷ್ಟ ಮಾದರಿಯಲ್ಲಿ ಮಾಡುತ್ತಿರುವುದು ಶ್ಲಾಘನೀಯ” ಎಂದರು. ಸಂತ ಕವಿ ಕನಕದಾಸ ಪ್ರಶಸ್ತಿಯನ್ನು ಜನಪರ ಹೋರಾಟಗಾರ ವಾಸುದೇವ ಉಚ್ಚಿಲರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಅದರಲ್ಲಿಯೂ ಕೋಟಿ ಸದಸ್ಯತ್ವದ ಅಭಿಯಾನವನ್ನು ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡು ಪರಿಷತ್ತಿನ ಕಾರ್ಯವ್ಯಾಪ್ತಿಯನ್ನು ಹಿಗ್ಗಿಸುವ ದೃಷ್ಟಿಯಿಂದ ಕಲಬುರಗಿ ಜಿಲ್ಲೆಯ ಕೈಲಾಸ ಪಾಟೀಲ್ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನಾಮ ನಿರ್ದೇಶನ ಮಾಡಿದ್ದಾರೆ. ಕೈಲಾಸ ಪಾಟೀಲರು ಸಂಘಟನಾ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹತ್ವದ ಚಟುವಟಿಕೆಗಳನ್ನು ನಡೆಸಿರುತ್ತಾರೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿರುವ ಇವರು ಸಂಘ ಸಂಸ್ಥೆಗಳ ಜೊತೆಗೆ ಒಡನಾಟ ಹೊಂದಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತ ಅಭಿಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ…
ಕುಶಾಲನಗರ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಇದರ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಅಂಗವಾಗಿ ದಿನಾಂಕ 17 ಆಗಸ್ಟ್ 2025ರಂದು ಕುಶಾಲನಗರದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಟಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಒಳಚರಂಡಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆಯಲ್ಲಿ ನೀಡಿದರು. ಸಾಹಿತ್ಯದ ನುಡಿಗಳನ್ನು ಹಿರಿಯ ಸಾಹಿತಿ ಭಾರಧ್ವಜ್ ಆನಂದ ತೀರ್ಥ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ. ರಘುಕೋಟಿ ವಹಿಸಿದರು. ವೇದಿಕೆಯಲ್ಲಿ ರಾಣಿ ರವೀಂದ್ರ, ಮಾಲದೇವಿ ಮೂರ್ತಿ, ಉಪನ್ಯಾಸಕ ಮಹೇಂದ್ರ ಉಪಸ್ಥಿತರಿದ್ದರು. ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಕವಿಗಳು ತಮ್ಮ ಕವನವನ್ನು ಪ್ರಸ್ತುತ ಪಡಿಸಿ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡರು.
ಉಡುಪಿ : ಸುಶಾಸನ ಪ್ರಸ್ತುತಿಯಡಿ ಕಿದಿಯೂರು ಹೊಟೇಲ್ನ ಶೇಷಶಯನ ಹಾಲ್ ನಲ್ಲಿ ದಿನಾಂಕ 15 ಆಗಸ್ಟ್ 2025ರಂದು ಜರಗಿದ ಸುಧಾಕರ ಆಚಾರ್ಯರ ಕಲಾರಾಧನೆಯ 35ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆಯಲ್ಲಿ ಶಿಕ್ಷಣ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಮೆಯವರನ್ನು ‘ತುಳುನಾಡ ಸುಶಾಸನ ಪುರಸ್ಕಾರ’ ಪ್ರದಾನ ಮಾಡಿ ಸಮ್ಮಾನಿಸಲಾಯಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ. ಜಿ. ಶಂಕರ್ ಅವರು ದಾಮ್ಮೆಯವರನ್ನು ಗೌರವಿಸಿ ಶುಭಹಾರೈಸಿದರು. ಉದ್ಯಮಿ ವಿ.ಜಿ. ಶೆಟ್ಟಿ, ಸುಶಾಸನದ ಸುಧಾಕರ ಆಚಾರ್ಯ, ಅಮಿತಾ, ಮೇದಿನಿ ಆಚಾರ್ಯ, ಆಚಾರ್ಯ ಯಾಸ್ಯ ಗೃತ್ಸ ಗೋವಿಂದ ಆಚಾರ್ಯ, ಡಾ. ಹರೀಶ್ ಜೋಷಿ, ರತನ್ರಾಜ್ ರೈ, ತ್ರಿಲೋಚನ ಶಾಸ್ತ್ರಿ ಉಪಸ್ಥಿತರಿದ್ದರು. ಪ್ರೊ. ಪವನ್ ಕಿರಣಕೆರೆ ಅಭಿನಂದನೆ ಭಾಷಣ ಮಾಡಿದರು. ‘ಯಾಜ್ಞಸೇನೆ’ ತಾಳಮದ್ದಳೆ, ಕಿರಿಯ ಹಿರಿಯ ಕಲಾವಿದರಿಂದ ‘ವೀರ ಅಭಿಮನ್ಯು’ ತೆಂಕು-ಬಡಗು ಕೂಡಾಟ ಪ್ರದರ್ಶನಗೊಂಡಿತು.
ಮಂಗಳೂರು : ನಾಟ್ಯಾಲಯ ಉರ್ವ (ರಿ.) ಆಯೋಜಿಸಿದ ಕೀರ್ತಿಶೇಷ ಗುರು ಶ್ರೀಮತಿ ಕಮಲಾ ಭಟ್ ಸಂಸ್ಮರಣೆ ಕಮಲಾಂಜಲಿ 2025 ಹಾಗೂ ಗುರು ಉಳ್ಳಾಲ ಮೋಹನ್ ಕುಮಾರ್ ಇವರ ಅಭಿನಂದನಾ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣ ದಾಸ ಅಸ್ರಣ್ಣ ಮಾತನಾಡಿ “ಸಾಹಿತ್ಯದ ಒಳ ಮರ್ಮವನ್ನು ಅರಿತು ಸೃಜನಶೀಲತೆಯಿಂದ ನೃತ್ಯ ಪ್ರದರ್ಶನ ಮಾಡಿದಾಗ ಬ್ರಹ್ಮಾನಂದ ಅನುಭವವನ್ನು ಅನುಭವಿಸಲು ಸಾಧ್ಯ. ಭಾರತೀಯ ಲಲಿತ ಕಲೆಗಳಲ್ಲಿ ಗುರು-ಶಿಷ್ಯ ಪರಂಪರೆಯನ್ನು ಭರತನಾಟ್ಯಕಲಾ ಪ್ರಕಾರದಲ್ಲಿ ಮಾತ್ರ ಕಾಣಲು ಸಾಧ್ಯ. ಇದು ಒಂದು ಒಳ್ಳೆಯ ಸಂಪ್ರದಾಯ. ಕೀರ್ತಿ ಶೇಷ ಕಮಲ ಭಟ್ ಇವರು ಶ್ರದ್ಧೆಯಿಂದ ಗುರುಗಳಾದ ಉಳ್ಳಾಲ ಮೋಹನ್ ಕುಮಾರ್ ಇವರಲ್ಲಿ ಕಲಿತು ಅಷ್ಟೇ ಶ್ರದ್ಧೆಯಿಂದ ನಗರದಲ್ಲಿ ಪಸರಿಸಿ ಕಲೆಯ ಶ್ರೀಮಂತಿಕೆಯನ್ನು ಉತ್ತುಂಗಕ್ಕೆ ಕೊಂಡೊಯ್ದವರು ಇಂದು ಅವರಿಂದ ಕಲಿತ ಹಿರಿಯ ಶಿಷ್ಯ ವಿದುಷಿ ವಿನಯ ಅದನ್ನು ಮುಂದುವರಿಸುತ್ತಾ ಇರೋದು ಅಭಿನಂದನೀಯ” ಎಂದರು. ಕಾರ್ಯಕ್ರಮದಲ್ಲಿ ಕಮಲ ಭಟ್ರ…
ಮಂಗಳೂರು : ಭರತಾಂಜಲಿ (ರಿ.) ಇದರ ತ್ರಿಂಶತ್ ಪ್ರಯುಕ್ತ ಪ್ರಸ್ತುತ ಪಡಿಸುವ ‘ನೃತ್ಯ ರತ್ನ ಶೋಧ’ ಏಕವ್ಯಕ್ತಿ ಭರತನಾಟ್ಯ ಸ್ಪರ್ಧೆಗೆ ಮೊದಲ ಸುತ್ತಿನಲ್ಲಿ ವಿಡಿಯೋ ಅಪ್ ಲೋಡ್ ಮಾಡಲು ದಿನಾಂಕ 31 ಆಗಸ್ಟ್ 2025 ಕೊನೆಯ ದಿನಾಂಕವಾಗಿರುತ್ತದೆ. ಸ್ಪರ್ಧೆಯು 13ರಿಂದ 17 ವರ್ಷದವರಿಗೆ ಜೂನಿಯರ್ ಮತ್ತು 18ರಿಂದ 25 ವರ್ಷದವರಿಗೆ ಸೀನಿಯರ್ ಎರಡು ವಿಭಾಗದಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗೆ 9480161839 ವಿದುಷಿ ಪ್ರಕ್ಷೀಲ ಜೈನ್ ಇವರನ್ನು ಸಂಪರ್ಕಿಸಿರಿ.