Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ.ಎಂ.ಶ್ರೀಯವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’, ಕನ್ನಡ ಕಾವ, ಕನ್ನಡ ಜಾಣ ಪರೀಕ್ಷೆಗಳು ಆರಂಭವಾದವು. 1948ರಲ್ಲಿ `ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು, 1992ರಲ್ಲಿ ಕನ್ನಡ ಪ್ರವೇಶ ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ನಿರಂತರವಾಗಿ ನಡೆದುಕೊಂಡು ಬರುತ್ತಿವೆ. ಈ ವರ್ಷ ಕನ್ನಡ ಸಾಹಿತ್ಯ ಪರಿಷತ್ತು 2024-25ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ದಿನಾಂಕ 7, 8 ಮತ್ತು 9 ಫೆಬ್ರವರಿ 2025ರಂದು ಒಟ್ಟು ಮೂರು ದಿನಗಳ ಕಾಲ ರಾಜ್ಯದ 18 ಕೇಂದ್ರಗಳಲ್ಲಿ ನಡೆಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.…
ಬೆಂಗಳೂರು : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಮತ್ತು ಗೀತಾ ಸಂಗೀತ ಅಕಾಡೆಮಿ ಟ್ರಸ್ಟ್ (ರಿ.) ಬೆಂಗಳೂರು ಇದರ ಸಹಯೋಗದಲ್ಲಿ ‘ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ-2025’ ಸಮಾರಂಭವನ್ನು ದಿನಾಂಕ 02 ಫೆಬ್ರವರಿ 2025 ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಾನಪದ ಕಲಾ ಪ್ರದರ್ಶನ, ಭರತನಾಟ್ಯ, ವಿಶೇಷ ಉಪನ್ಯಾಸ, ಸುಗಮ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಚಿಕ್ಕಬಳ್ಳಾಪುರ ಜಾನಪದ ಕಲಾವಿದರಾದ ಡಾ. ಶಶಿಕಲಾ ಎ.ಆರ್. ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಮೆರವಣಿಗೆ ಚಾಲನೆ, ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಸ್ತಕ ಮಳಿಗೆ ಉದ್ಘಾಟನೆಗೊಳ್ಳಲಿದೆ. ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕರಾದ ಶ್ರೀಮತಿ ನೂತನ ದೋಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಕಾರ್ಯದರ್ಶಿಗಳಾದ ಡಾ. ಸಂಗಮೇಶ…
ಮೈಸೂರು: ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ, ವಿಮರ್ಶಕಿ ಹಾಗೂ ಲೇಖಕಿಯಾದ ಡಾ. ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022ರಲ್ಲಿ ಸ್ಥಾಪಿಸಿರುವ ‘ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ -2025’ಗೆ ಮಹಿಳೆಯರ ಕವನ ಸಂಕಲನವನ್ನು ಆಹ್ವಾನಿಸಿದೆ. 2020 -2024ರ ಅವಧಿಯಲ್ಲಿ ಪ್ರಥಮ ಮುದ್ರಣ ಕಂಡಿರುವ ಕವನ ಸಂಕಲನವನ್ನು ಮಾತ್ರ ಪರಿಗಣಿಸಲಾಗುವುದು. ಈ ಪ್ರಶಸ್ತಿಯು ರೂಪಾಯಿ 25,000/- ನಗದು ಮತ್ತು ಫಲಕವನ್ನು ಒಳಗೊಂಡಿದ್ದು, 1 ಜೂನ್ 2025 ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆಸಕ್ತ ಪ್ರಕಾಶಕರು ಅಥವಾ ಲೇಖಕಿಯರು ಸಂಕಲನದ ನಾಲ್ಕು ಪ್ರತಿಗಳನ್ನು 15 ಮಾರ್ಚ್ 2025ರ ಒಳಗಾಗಿ ಕಳುಹಿಸುವಂತೆ ಕೋರಲಾಗಿದೆ. ವಿಳಾಸ: ಎಂ. ಎಸ್. ವೇದಾ, ಅಲಂಪು, ಮನೆ ಸಂಖ್ಯೆ 1257, ಪಡುವಣ ರಸ್ತೆ, 4ನೇ ಕ್ರಾಸ್, ಟಿ. ಕೆ. ಬಡಾವಣೆ, 4ನೇ ಹಂತ, ಕುವೆಂಪುನಗರ, ಮೈಸೂರು-570023.
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ಇದರ ವತಿಯಿಂದ ಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್ (ರಿ.) ಕಾಟಿಪಳ್ಳ ಮತ್ತು ಕ.ಸಾ.ಪ. ಸುರತ್ಕಲ್ ಹೋಬಳಿ ಘಟಕದ ಸಹಯೋಗದಲ್ಲಿ ‘ಪದ್ಮಾ ಶೆಣೈ, ಲಲಿತಾ ರೈ, ಎ.ಪಿ. ಮಾಲತಿ ಮತ್ತು ಶ್ರಿಕಲಾ ಉಡುಪ’ ದತ್ತಿನಿಧಿ ಕಾರ್ಯಕ್ರಮವು ದಿನಾಂಕ 25 ಜನವರಿ 2025ರಂದು ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟ್ ಕಾಟಿಪಳ್ಳದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಕ.ಲೇ.ವಾ.ದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ‘ಪ್ರವಾಸ ಪ್ರಬಂಧ’ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಕ್ರಮ್ ಶೈಲೇಶ ನಾಯಕ್, ವರ್ಷಿಣಿ, ರೂಪಾ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಅರ್ಜುನ್ ಎಂ. ಮತ್ತು ವರುಣ್ ಪ್ರೋತ್ಸಾಹಕ ಬಹುಮಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ವಿತರಿಸಿದ…
ಚನ್ನರಾಯಪಟ್ಟಣ : ಪ್ರತಿಮಾ ಟ್ರಸ್ಟ್ (ರಿ.) ಇದರ ವತಿಯಿಂದ ‘ಪ್ರತಿಮೋತ್ಸವ -2025’ ಕಾರ್ಯಕ್ರಮವನ್ನು ದಿನಾಂಕ 02 ಫೆಬ್ರವರಿ 2025ರಂದು ಸಂಜೆ 6-30 ಗಂಟೆಗೆ ಚನ್ನರಾಯಪಟ್ಟಣದ ರಾಘವೇಂದ್ರ ಸಾಮಿಲ್ ರಸ್ತೆಯಲ್ಲಿರುವ ರಂಗ ಲೋಕದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರತಿಮಾ ಟ್ರಸ್ಟ್ ಇದರ ಅಧ್ಯಕ್ಷರಾದ ಉಮೇಶ್ ತೆಂಕನಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಪಾಂಡವಪುರದ ಉಪವಿಭಾಗಾಧಿಕಾರಿ ಶ್ರೀ ನಿವಾಸ ಗೌಡ ಕೆ.ಆರ್. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರಾರ್ಥಿಗಳಿಂದ ಜನಪದ ಸಮೂಹ ಗೀತ ಗಾಯನ, ಉಮೇಶ್ ತೆಂಕನಹಳ್ಳಿ ಇವರ ರಚನೆ ಮತ್ತು ನಿರ್ದೇಶನದಲ್ಲಿ ‘ಜೊಳ್ಳು ಸುದ್ದಿ ಪೊಳ್ಳು ಮಾತು’ ನಾಟಕ ಪ್ರದರ್ಶನ, ಶ್ರೀಮತಿ ಸುಶೀಲ ರಾವು ಹಾಗೂ ಶ್ರೀಮತಿ ರಮ ಇವರ ನಿರ್ದೇಶನದಲ್ಲಿ ಕೋಲಾಟ, ಉಮೇಶ್ ತೆಂಕನಹಳ್ಳಿ ಇವರ ನಿರ್ದೇಶನದಲ್ಲಿ ರಂಗಕುಣಿತ ಮತ್ತು ಕಂಸಾಳೆ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ನಿರ್ಮಲ ನೃತ್ಯ ನಿಕೇತನ ಕಲ್ಚರಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ 50ನೇ ವರ್ಷದ ವಾರ್ಷಿಕೋತ್ಸವ ಸಲುವಾಗಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನವನ್ನು ದಿನಾಂಕ 02 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾ ಕ್ಷೇತ್ರ ಆವರಣದ ನಯನ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ನೃತ್ಯ ವಿದ್ಯಾನಿಲಯದ ನೃತ್ಯ ಗುರುಗಳಾದ ವಿದ್ವಾನ್ ಯು.ಪಿ. ಶರಣ್ ಮತ್ತು ವಿದುಷಿ ನಿಶ್ಚಿತಾ ಶರಣ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಮಂಗಳೂರು: ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್ ಇಲ್ಲಿ ನಡೆಯಲಿರುವ ‘25ನೇ ತುಳು ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ, ತುಳು – ಕನ್ನಡ ಸಾಹಿತಿ ಹಾಗೂ ಹಿರಿಯ ಯಕ್ಷಗಾನ ಅರ್ಥಧಾರಿಯಾದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ. ದಿನಾಂಕ 06 ಫೆಬ್ರವರಿ 2025ರಂದು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ‘ತುಳು ಬಾಸೆ ಸಂಸ್ಕೃತಿದ ಜಾಗೃತಿಗಾದ್’ಎಂಬ ಧ್ಯೇಯ ವಾಕ್ಯದೊಂದಿಗೆ ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದಲ್ಲಿ ಸಮ್ಮೇಳನ ನಡೆಯಲಿದೆ. ಬಹುಮುಖೀ ಸಾಧಕ : ಶಿಕ್ಷಣ, ಸಾಹಿತ್ಯ, ಕಲೆ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಭಾಸ್ಕರ ರೈ ಕುಕ್ಕುವಳ್ಳಿ ಓರ್ವ ಬಹುಮುಖೀ ಸಾಧಕರು. ಪುತ್ತೂರು ತಾಲೂಕು ಇರ್ದೆ ಗ್ರಾಮದ ಪ್ರತಿಷ್ಠಿತ ಬಾಲ್ಯೊಟ್ಟು ಗುತ್ತು ಮನೆತನದಲ್ಲಿ ಜನಿಸಿದ ಇವರು ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಮತ್ತು ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರೌಢ ಶಿಕ್ಷಣವನ್ನು ಪೂರೈಸಿದರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ…
ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ನಮಗೆ ಅನೇಕ ಯುವ ಮಹಿಳಾ ಕಲಾವಿದೆಯರು ಕಾಣಲು ಸಿಗುತ್ತಾರೆ. ಇಂತಹ ಅನೇಕ ಮಹಿಳಾ ಕಲಾವಿದರ ಸಾಲಿನಲ್ಲಿ ಮಿಂಚುತ್ತಿರುವ ಯುವ ಹವ್ಯಾಸಿ ಮಹಿಳಾ ಕಲಾವಿದೆ ಕುಮಾರಿ ಸುಷ್ಮಿತಾ ಸಾಲಿಗ್ರಾಮ. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪಾರಂಪಳ್ಳಿಯ ಶ್ರೀಮತಿ ಲಕ್ಷ್ಮೀ ಹಾಗೂ ಕೃಷ್ಣಮೂರ್ತಿ ಮರಕಾಲ ಇವರ ಮಗಳಾಗಿ ೩೧.೦೧.೧೯೯೮ ರಂದು ಇವರ ಜನನ. ತಮ್ಮ 9ನೇ ವಯಸ್ಸಿಗೆ ಯಕ್ಷಗಾನದತ್ತ ಒಲವು ಮೊದಲ ವೇಷ ಇವರು ಯಕ್ಷಬಾಲಭಾರತದಲ್ಲಿ ಕೌರವನ ವೇಷ ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾದರು. ಇದು ಇವರ ಯಕ್ಷಗಾನದತ್ತ ಒಲವು ತುಂಬಾನೇ ಹೆಚ್ಚಿಸಿತ್ತು. ಮೊದಲಿನಿಂದಲೂ ಯಕ್ಷಗಾನದ ಮೇಲೆ ಒಲವು ಇತ್ತು. ಅಪ್ಪ ಅವರ ಸಂಸ್ಥೆಗಳಲ್ಲಿ ಯಕ್ಷಗಾನ ಪ್ರಸಂಗಗಳನ್ನು ಮಾಡಿಸ್ತಾ ಬಂದಿದ್ದಾರೆ ಹಾಗೂ ನಾನು ನಾಲ್ಕನೇ ತರಗತಿ ಅಲ್ಲಿ ಇದ್ದಾಗ ನಮಗೆ ಯಕ್ಷಗಾನ ಹೇಳಿ ಕೊಡಲಿಕ್ಕೆ ಶಾಲೆಗೆ ಬರ್ತಾ ಇದ್ರು. ಅವರು ಮತ್ತೆ ಬರಲಿಕ್ಕೆ ನಿಲ್ಲಿಸಿದಾಗ ಶಿವರಾಮ ಕಾರಂತರ ಯಕ್ಷ ಕೇಂದ್ರದಲ್ಲಿ ಸೇರಿ ಮತ್ತೆ ಯಕ್ಷಗಾನ ಕಲಿಲಿಕ್ಕೆ ಶುರು ಮಾಡಿದೆ ಎಂದು ಸುಷ್ಮಿತಾ…
ಭಾರತೀಯ ಕಲೆಗಳಲ್ಲಿ ಭಾರತೀಯ ಚಿತ್ರಕಲೆ ಸುಧೀರ್ಘವಾದ ಇತಿಹಾಸವನ್ನು ಹೊಂದಿದೆ. 64 ಕಲೆಗಳಲ್ಲಿ ಚಿತ್ರಕಲೆಯು ಒಂದು. ಚಿತ್ರಕಲೆ ವಿಶ್ವ ಭಾಷೆಯಾಗಿದೆ ಎನ್ನುತ್ತಾರೆ. ಯಾವುದೇ ಕಲೆ ದೇವರು ಒಲಿದು ಕೊಡುವ ವರ. ಅದನ್ನು ಸತತ ಅಭ್ಯಾಸ, ಸಾಧನೆ ಹಾಗೂ ಪ್ರಯತ್ನದಿಂದ ಕರಗತ ಮಾಡಿಕೊಳ್ಳುವುದು ಪ್ರತಿಯೊಬ್ಬ ಕಲಾಸಕ್ತನ ಕರ್ತವ್ಯ. ಹೀಗೆ ಸಾಧನೆ ಮಾಡಿದವರಲ್ಲಿ ಮಡಿವಾಳಪ್ಪ ವೀರಪ್ಪ ಮಿಣಜಿಗಿ ಒಬ್ಬರು. ಮಿಣಜಿಗಿಯವರು ತೈಲವರ್ಣ ಹಾಗೂ ಜಲವರ್ಣ ಚಿತ್ರ ರಚನೆಯಲ್ಲಿ ಪ್ರಖ್ಯಾತರು. 1901 ಜನವರಿ 30ರಂದು ಬಿಜಾಪುರದಲ್ಲಿ ಜನಿಸಿದ ಇವರ ತಂದೆ ವೀರಪ್ಪ ತಾಯಿ ಶರಣವ್ವ. ವೀರಪ್ಪ ಒಬ್ಬ ಶ್ರೀಮಂತ ವ್ಯಾಪಾರಿಯಾಗಿದ್ದರು. ಪ್ರಾರಂಭಿಕ ಶಿಕ್ಷಣವನ್ನು ಬಿಜಾಪುರದಲ್ಲಿ ಪಡೆದ ಬಳಿಕ ಮುಂದೆ ಓದಲಿಚ್ಚಿಸದೆ ಮುಂಬೈಯ ಜೆ. ಜೆ. ಕಲಾ ಮಂದಿರವನ್ನು ಸೇರಿದರು. ನಿರಂತರ ಅಭ್ಯಾಸದಿಂದ ‘ಆರ್ಟ್ ಮಾಸ್ಟರ್’ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿ ಗಳಿಸಿದರು. ‘ಡಿಪ್ಲೋಮಾ ಇನ್ ಪೆಯಿಟಿಂಗ್ಸ್’ ಪದವಿಯಲ್ಲೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರಥಮ ವಿದ್ಯಾರ್ಥಿ ಎಂಬ ವಿಶೇಷ ಗೌರವಕ್ಕೆ ಪಾತ್ರರಾದರು. ಚಿತ್ರಕಲೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ನಿನ ‘ಕಾಲೇಜ್ ಆಫ್…
ಪುತ್ತೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ‘ಯಕ್ಷಗಾನ ಪ್ರಸಂಗ: ಸ್ವರೂಪ, ವಿಕಾಸ ಮತ್ತು ಅನನ್ಯತೆ’ ಎಂಬ ವಿಷಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವು ದಿನಾಂಕ 31 ಜನವರಿ 2025ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆಯಲಿದೆ. ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ವಿ. ವಿ. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕ ಭಾಷಣ ಮಾಡುವರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿರುವರು. ಬಳಿಕ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ. ಎಲ್. ಸಾಮಗ ‘ಯಕ್ಷಗಾನ ಪ್ರಸಂಗಗಳ ಸ್ವರೂಪ ಮತ್ತು ಕಾವ್ಯಾಂಶ’ ಎಂಬ ವಿಷಯದಲ್ಲಿ…