Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಶ್ರೀ ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರ, ಅತ್ತಾವರ, ಇದರ 4ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 25 ಫೆಬ್ರವರಿ 2025ರಂದು ಮಂಗಳೂರಿನ ಅತ್ತಾವರದ ಶ್ರೀ ಉಮಾಮಹೇಶ್ವರ ದೇವಳದ ಆವರಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ‘ಯಕ್ಷ ಸಿರಿ’ ಪ್ರಶಸ್ತಿ ಪುರಸ್ಕೃತ ಯಕ್ಷಗುರುಗಳಾದ ಶ್ರೀ ರಾಮಾ ಸಾಲಿಯನ್ ಮಂಗಲ್ಪಾಡಿ ಇವರು ಯಕ್ಷರಂಗಕ್ಕೆ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ “ಯಕ್ಷ ಮಾಣಿಕ್ಯ” ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು. ಯಕ್ಷಗುರುಗಳನ್ನು ಸನ್ಮಾನಿಸಿದ ಸಾಹಿತಿ, ನಾಟಕಕಾರ, ನಟ, ಹಾಗೂ ಖ್ಯಾತ ವಕೀಲರಾದ ಶ್ರೀ ಶಶಿರಾಜ್ ಕಾವೂರು ಮಾತಾನಾಡಿ “ಇವತ್ತು ಯುವ ಜನಾಂಗವನ್ನು ಯಕ್ಷ ರಂಗವು ಸೂಜಿಕಲ್ಲಿನಂತೆ ಸೆಳೆಯುತ್ತಿದೆ. ಮುಂದಿನ ಪರಂಪರೆಗೆ ಯಕ್ಷಗಾನ ಉಳಿಸುವ ನಿಟ್ಟಿನಲ್ಲಿ ಹಲವಾರು ಯುವಕರು, ಯವತಿಯರು, ಮಕ್ಕಳನ್ನು ತಯಾರಿಗೊಳಿಸುವ ನಿಟ್ಟಿನಲ್ಲಿ ಯಕ್ಷಗುರು ರಾಕೇಶ್ ರೈ ಹಾಗೂ ಶ್ರಿ ರಾಮ ಸಾಲಿಯನ್ ಮಂಗಲ್ಪಾಡಿ ಅಂತಹ ಶ್ರೇಷ್ಠ ಗುರುಗಳು ಇಂದು ಅವಿರತ ಶ್ರಮಿಸುತ್ತಿದ್ದಾರೆ” ಎಂದರು. ಸಭಾ ಕಾರ್ಯಕ್ರಮವನ್ನು ಶ್ರೀ ಉಮಾಮಹೇಶ್ವರ ಕ್ಷೇತ್ರ ಅತ್ತಾವರದ…
ಹೊನ್ನಾವರ: ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಇದರ 90ನೇ ವರ್ಷದ ಸಂಭ್ರಮದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಇವರಿಗೆ “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-15” ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 25 ಫೆಬ್ರವರಿ 2025 ರಂದು ಹೊನ್ನಾವರದ ಗುಣವಂತೆಯಲ್ಲಿ ನಡೆಯಿತು. ಈ ವೇಳೆ ಯಕ್ಷಗಾನದ ಹಿರಿಯ ಅರ್ಥದಾರಿ ಜಬ್ಬಾರ್ ಸಮೋ ಸಂಪಾಜೆ ಹಾಗೂ ಯಕ್ಷಗಾನ ಭಾಗವತ ಹಾಗೂ ಸಂಘಟಕ ರಾದ ಡಾ. ಸುರೇಂದ್ರ ಪಣಿಯೂರು ಇವರನ್ನು ಸನ್ಮಾನಿಸಲಾಯಿತು.
ಬಳ್ಳಾರಿ : ಕಳೆದ ಎರಡು ವರ್ಷಗಳಂತೆಯೇ ಈ ವರ್ಷವೂ ‘ಸಂಗಂ ಸಾಹಿತ್ಯ ಪುರಸ್ಕಾರ’ವನ್ನು ನೀಡಲು ಬಳ್ಳಾರಿಯ ಸಂಗಂ ಸಂಸ್ಥೆ ನಿರ್ಧರಿಸಿದ್ದು, ಈ ಸಲದ ಪುರಸ್ಕಾರವು 2022-24ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ಮೀಸಲಿರಿಸಲಾಗಿದೆ. ಈ ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದ್ದು, ಆಸಕ್ತ ಬರಹಗಾರರು, ಪ್ರಕಾಶಕರು ತಮ್ಮ ಕಾದಂಬರಿಗಳನ್ನು ಸ್ಪರ್ಧೆಗೆ ಕಳುಹಿಸಲು ‘ಸಂಗಂ’ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಕೋರಿದ್ದಾರೆ. ಕಾದಂಬರಿಯು 2022-24ರ, ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರಬೇಕು. ಕೃತಿಯನ್ನು ದಿನಾಂಕ 20 ಮಾರ್ಚ್ 2025ರ ಒಳಗಾಗಿ ತಲುಪುವಂತೆ ಕಳುಹಿಸಬೇಕು. ವಿಳಾಸ: ಅಜಯ ಬಣಕಾರ್, ‘ಹೂ ನಗೆ’ ಪ್ಲಾಟ್ ನಂ- 2, 2ನೇ ಕ್ರಾಸ್, ಬಾಲಾಜಿ ಕಾಲೋನಿ, ತಾಳೂರು ರಸ್ತೆ, ಬಳ್ಳಾರಿ- 583103.
ಶಿರಸಿ: ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಏಪ್ರಿಲ್ 12 ಮತ್ತು 13ರಂದು ಕದಂಬೋತ್ಸವ ನಡೆಯಲಿದ್ದು, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸ್ಪರ್ಧೆಗಳು ನಡೆಯಲಿವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು. “ಏಪ್ರಿಲ್ 10ರಂದು ಗುಡ್ನಾಪುರ ರಾಣಿ ನಿವಾಸದಲ್ಲಿ ಕದಂಬ ಜ್ಯೋತಿಗೆ ಚಾಲನೆ ಸಿಗಲಿದ್ದು, ಗುಡ್ಡಾಪುರ ಉತ್ಸವ ಕೂಡ ನಡೆಯಲಿದೆ. ಎರಡು ದಿನ ವಿವಿಧೆಡೆ ಸಂಚರಿಸಿ, ಬನವಾಸಿಗೆ ಬರುವ ಕದಂಬ ಜ್ಯೋತಿಯಿಂದ ಕದಂಬೋತ್ಸವವನ್ನು ಮುಖ್ಯಮಂತ್ರಿಯವರು ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಸಾಹಿತಿ ಬಿ. ಎ. ವಿವೇಕ ರೈ ಇವರಿಗೆ ‘ಪಂಪ ಪ್ರಶಸ್ತಿ’ ಪ್ರದಾನ ಮಾಡಲಾಗುವುದು” ಎಂದು ತಿಳಿಸಿದರು. ಶಾಸಕ ಭೀಮಣ್ಣ ನಾಯ್ಕ ಮಾತನಾಡಿ “ಕದಂಬೋತ್ಸವವನ್ನು ಮನೆ ಹಬ್ಬದಂತೆ ಎಲ್ಲರೂ ಆಚರಿಸಬೇಕು” ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಉಪವಿಭಾಗಾಧಿಕಾರಿ ಕೆ. ವಿ. ಕಾವ್ಯಾರಾಣಿ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ತಪಸ್ಥಿತರಿದ್ದರು.
ಉಡುಪಿ : ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಸಂಸ್ಥೆಯು ಪ್ರಸ್ತುತ ಪಡಿಸುವ 27ನೇ ‘ಮಂಜುನಾದ’ ಸಂಗೀತ ಕಛೇರಿಯನ್ನು ದಿನಾಂಕ 03 ಮಾರ್ಚ್ 2025ರಂದು ಸಂಜೆ ಗಂಟೆ 5-30ಕ್ಕೆ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳಾಧಾರಿತ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿಯಲ್ಲಿ ಮಣಿಪಾಲದ ಯುವ ಕಲಾಮಣಿ ವಿದುಷಿ ಉಷಾ ರಾಮಕೃಷ್ಣ ಮತ್ತು ಬೆಂಗಳೂರಿನ ವಿದುಷಿ ಸ್ಮೃತಿ ಭಾಸ್ಕರ್ ಇವರ ಹಾಡುಗಾರಿಕೆಗೆ ಪುತ್ತೂರಿನ ವಿದುಷಿ ತನ್ಮಯೀ ಉಪ್ಪಂಗಳ ಇವರು ವಯಲಿನ್, ಬೆಂಗಳೂರಿನ ವಿದ್ವಾನ್ ಅನಿರುದ್ಧ ಭಟ್ ಇವರು ಮೃದಂಗ, ಬೆಂಗಳೂರಿನ ವಿದ್ವಾನ್ ಶಮಿತ್ ಗೌಡ ಇವರು ಘಟಂ ಹಾಗೂ ಪರ್ಕಳದ ಶ್ರೀಮತಿ ಸುರೇಖಾ ಭಟ್ ಮತ್ತು ಸುರತ್ಕಲ್ ಶ್ರೀಮತಿ ಸುಜಾತಾ ಎಸ್. ಭಟ್ ಇವರು ತಂಬೂರದಲ್ಲಿ ಸಾಥ್ ನೀಡಲಿದ್ದಾರೆ. ಮಣಿ ಕೃಷ್ಣಸ್ವಾಮಿ…
ಉಡುಪಿ : ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ (ರಿ.) ಪೆರ್ಡೂರು ಹಾಗೂ ಮತ್ಸ್ಯರಾಜ್ ಗ್ರೂಪ್ ಮಲ್ಪೆಇವರ ಸಹಯೋಗದಲ್ಲಿ ಪಡುಕರೆ ಶ್ರೀ ದೇವಿ ಭಜನಾ ಮಂದಿರ ಇದರ ಸಹಕಾರದೊಂದಿಗೆ ಮಲ್ಪೆ ಪಡುಕರೆ ಕಡಲತಡಿ ಶ್ರೀ ದೇವಿ ಭಜನಾ ಮಂದಿರದ ಆವರಣದಲ್ಲಿ ದಿನಾಂಕ 02 ಮಾರ್ಚ್ 2025ರಂದು ಬೆಳಗ್ಗೆ 9-00 ಗಂಟೆಗೆ ಉಡುಪಿ- ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಭಜನೆ ಜುಗಲ್ ಬಂದಿ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 9-00 ಗಂಟೆಗೆ ಉದ್ಘಾಟನಾ ಸಮಾರಂಭದಲ್ಲಿ ಪೆರ್ಡೂರು ಶ್ರೀ ಭೈರವನಾಥೇಶ್ವರ ಸಂಗೀತ ಶಾಲಾ ವಿದ್ಯಾರ್ಥಿಗಳಿಂದ ಭಜನೆ ನಡೆಯಲಿದ್ದು, ಬಳಿಕ ಭಜನೆ ಸ್ಪರ್ಧೆ ಆರಂಭವಾಗಲಿದೆ. ಸಂಜೆ ಗಂಟೆ 5-30ಕ್ಕೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ಉಭಯ ಜಿಲ್ಲೆಗಳ ಖ್ಯಾತ ಭಜನಾ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಭಜನ ತಂಡಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ, ಉತ್ತಮ ಹಾಡುಗಾರ, ಉತ್ತಮ ತಬಲಾ ವಾದಕ ಮತ್ತು ಉತ್ತಮ ಹಾರ್ಮೋನಿಯಂ ವಾದಕ – ವೈಯುಕ್ತಿಕ ಬಹುಮಾನಗಳಿವೆ. ಇದೇ ಸಂದರ್ಭದಲ್ಲಿ ಭಜನಾ…
ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ-ಮಾಲಿಕೆ 14 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 28 ಫೆಬ್ರವರಿ 2025ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ಜ್ಯೋತಿ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಾಟ್ಯನಿಕೇತನ ಕೊಲ್ಯದ ಹಿರಿಯ ಶಿಷ್ಯೆ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿಯ ವಿದುಷಿ ಶಾಲಿನಿ ಆತ್ಮಭೂಷಣ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.
ಮಂಗಳೂರು : ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟ್ (ರಿ.) ಉರ್ವಾ ಮಂಗಳೂರು ಇವರ ಸಹಯೋಗದಲ್ಲಿ ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿ ಹುಬ್ಬಳ್ಳಿ ಇದರ ರಜತ ಮಹೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಗ್ರಂಥ ಲೋಕರ್ಪಣಾ ಸಮಾರಂಭವನ್ನು ದಿನಾಂಕ 01 ಮಾರ್ಚ್ 2025ರಂದು ಸಂಜೆ 4-00 ಗಂಟೆಗೆ ಉರ್ವಾದ ಕಾ. ವಾ. ಆಚಾರ್ಯ ಸಂಸ್ಕೃತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಸಂಜೆ 4-00 ಗಂಟೆಗೆ ಸ್ವರ್ಣಕುಡ್ಲ ಸೀಸನ್ 6 ವಿನ್ನರ್ ಮಾಸ್ಟರ್ ಆಯುಷ್ ಪ್ರೇಮ ಇವರಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಗಾಯನ ನಡೆಯಲಿದೆ. ಗ್ರಂಥ ಲೋಕರ್ಪಣಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟಿನ ಎಸ್.ವಿ. ಆಚಾರ್ ಇವರ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಇವರು ಉದ್ಘಾಟನೆ ಮಾಡಲಿರುವರು. ಶ್ರೀ ವಿಶ್ವಮಯ ಸಾಹಿತ್ಯ ಪ್ರಚಾರ ಸಮಿತಿಯ ಸಂಚಾಲಕರಾದ ಇಂ. ಭೀಮಸೇನ ಬಡಿಗೇರ…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025’ಕ್ಕೆ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ. ರಂಗ ನಟ, ಸಂಘಟಕ ಹಾಗೂ ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ ಹಾಗೂ ಕಂಠದಾನ ಕಲಾವಿದೆ ಪ್ರಿಯಾಸರೋಜಾದೇವಿ ಮುಂಬೈ, ರಂಗನಟ ಹಾಗೂ ಸಂಘಟಕ ಪ್ರಕಾಶ್ ಜಿ. ಕೊಡವೂರು, ರಂಗನಟಿ ಮಂಜುಳಾ ಜನಾರ್ದನ್ ಮಂಗಳೂರು ಇವರುಗಳಿಗೆ ದಿನಾಂಕ 26 ಮಾರ್ಚ್ 2025ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2025 ‘ ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ತಿಳಿಸಿರುತ್ತಾರೆ. ಅರವಿಂದ ಕುಲಕರ್ಣಿ…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬ್ರಹ್ಮಾವರ ತಾಲೂಕು ಘಟಕ ಇದರ ವತಿಯಿಂದ ಸಾಹಿತ್ಯ ಸಂಚಾರ -43ನೇ ಸರಣಿಯ ‘ಸಾಹಿತ್ಯ ಪ್ರೇರಣೆ’ ಕಾರ್ಯಕ್ರಮವನ್ನು ದಿನಾಂಕ 01 ಮಾರ್ಚ್ 2025ರಂದು ಪೂರ್ವಾಹ್ನ 10-00 ಗಂಟೆಗೆ ಆವರ್ಸೆ ಬ್ರಹ್ಮಾವರ ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕ.ಸಾ.ಪ. ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕ.ಸಾ.ಪ. ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ರಾಮಚಂದ್ರ ಐತಾಳ ಗುಂಡ್ಮಿ, ಕ.ಸಾ.ಪ. ಕೋಟ ಹೋಬಳಿಯ ಅಧ್ಯಕ್ಷರಾದ ಅಚ್ಚುತ ಪೂಜಾರಿ ಕಾರ್ಕಡ, ಯಕ್ಷಗಾನ ಶಿಕ್ಷಕ ನರಸಿಂಹ ತುಂಗ ಮತ್ತು ಸಂಗೀತ ಶಿಕ್ಷಕಿ ಶ್ರೀಮತಿ ಭಾಗ್ಯೇಶ್ವರಿ ಮಯ್ಯ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.