Subscribe to Updates
Get the latest creative news from FooBar about art, design and business.
Author: roovari
ಪುತ್ತೂರು : ಹಲಸು ಹಣ್ಣುಗಳ ‘ಕವಿಗೋಷ್ಠಿ’ಯು ಹಲಸು ಮೇಳದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ದಿನಾಂಕ 06 ಜೂನ್ 2025ರಂದು ಸಂಜೆ 6-00 ಗಂಟೆಗೆ ನಡೆಯಲಿದೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರು ಅಧ್ಯಕ್ಷತೆ ವಹಿಸಲಿದ್ದು, ಉಮಾಶಂಕರಿ ಎ.ಪಿ. ಮರಿಕೆ ಇವರು ಸಂಯೋಜನೆ ಮಾಡಲಿದ್ದಾರೆ. ಈ ಕವಿಗೋಷ್ಠಿಯಲ್ಲಿ ಒಂದು ಕವಿಗೆ ಮೂರು ನಿಮಿಷಗಳ ಅವಕಾಶವಿದ್ದು, ಕವಿಗಳು ತಮ್ಮ ಹೆಸರನ್ನು ಸಂಯೋಜಕರಲ್ಲಿ ನೋಂದಾಯಿಸಿಕೊಳ್ಳುವುದು. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9449741592 ಸಂಖ್ಯೆಯನ್ನು ಸಂಪರ್ಕಿಸಿರಿ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಮಾಸಿಕ ಕೂಟವು ದಿನಾಂಕ 20 ಮೇ 2025ರಂದು ಬನ್ನೂರು ಸಮೀಪದ ಭಾರತೀ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಆಶ್ರಯ ಹಾಗೂ ಪ್ರೋತ್ಸಾಹದೊಂದಿಗೆ ‘ಕಚ ದೇವಯಾನಿ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಪದ್ಯಾಣ ಶಂಕರನಾರಾಯಣ ಭಟ್, ಪರೀಕ್ಷಿತ್ ಹಂದ್ರಟ್ಟ, ಶರಣ್ಯ ನೆತ್ತರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶುಕ್ರಾಚಾರ್ಯ), ಗುಡ್ಡಪ್ಪ ಬಲ್ಯ (ಕಚ), ಮಾಂಬಾಡಿ ವೇಣುಗೋಪಾಲ ಭಟ್ (ವೃಷಪರ್ವ), ಶುಭಾ ಅಡಿಗ (ದೇವಯಾನಿ), ದುಗ್ಗಪ್ಪ ಯನ್. (ಧೂಮಕೇತ) ಸಹಕರಿಸಿದರು. ದೇವಳದ ಮೆನೇಜರ್ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ವಂದಿಸಿದರು. ಬನ್ನೂರು ರಾಜ ಗೋಪಾಲ್ ಭಟ್ ಕಾರ್ಯಕ್ರಮ ಪ್ರಾಯೋಜಿಸಿದ್ದರು.
ಮಂಗಳೂರು : ವಿ.ಆರ್.ವಿ. ಕ್ರಿಯೇಷನ್ಸ್ ಮಂಗಳೂರು ಮತ್ತು ಥಂಡರ್ ಕಿಡ್ಸ್ ಮಂಗಳೂರು ಇವರ ಸಂಯೋಜನೆಯಲ್ಲಿ ವಿನಮ್ರ ಇಡ್ಕಿದು ಹಾಡಿದ ಏಳು ದೃಶ್ಯ ಗೀತೆಗಳ ಬಿಡುಗಡೆ ಕಾರ್ಯಕ್ರಮವು ದಿನಾಂಕ 18 ಮೇ 2025ರಂದು ಮಂಗಳೂರಿನ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯ ಜಾನಪದ ವಿದ್ವಾಂಸರು, ವಿಶ್ರಾಂತ ಕುಲಪತಿಗಳು ಆದ ಡಾ. ಕೆ. ಚಿನ್ನಪ್ಪಗೌಡ ಇವರು ಮಾತನಾಡಿ “ಕವಿ ಬರೆದಿರುವ ಕವನವೊಂದು ಹಾಡಾಗಿದೆಯೆಂದರೆ, ಕವಿಯ ಹಾಡಿನ ಬೆಳವಣಿಗೆಯಾಗಿದೆ, ಆ ಕವನ ಪರಿಸ್ಕೃತ ರೂಪ ಪಡೆದಿದೆ, ಅದು ವಿಸ್ತೃತಗೊಂಡಿದೆ, ಆ ಕವಿತೆ ಹೊಸ ಆವೃತ್ತಿಯಾಗಿ ಹೊರಹೊಮ್ಮಿದೆ ಎಂದು ಅರ್ಥ. ಹಾಡನ್ನು ಕೇಳುವುದು ಮಾತ್ರವಲ್ಲ ನೋಡುವ ಹಾಗೆ ಮಾಡುವುದು ಸೃಜನಶೀಲ ಕಲೆ. ಆ ಮೂಲಕ ಅನುಭವವೊಂದನ್ನು ದೀರ್ಘಕಾಲ ಕಾಡುವಂತೆ ಮಾಡುವುದು ಜಾಣ್ಮೆಯೇ ಸರಿ. ದೃಶ್ಯ ಗೀತೆಗಳಲ್ಲಿ ಕವಿ, ಸಂಗೀತ ನಿರ್ದೇಶಕ, ಅಭಿನಯಿಸುವ ಕಲಾವಿದರು, ನಿರ್ದೇಶಕ ಇವರೆಲ್ಲ ಮುಖ್ಯವಾಗುವ ಮೂಲಕ ಕವನವೊಂದು ವಿಸ್ತಾರವಾದ ರೂಪವನ್ನು ಪಡೆದುಕೊಳ್ಳುತ್ತದೆ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುರತ್ಕಲ್…
ಬೆಳಗಾವಿ : ರಂಗಸಂಪದ ಬೆಳಗಾವಿಯ ತಂಡದ ಹೊಸ ವರ್ಷದ ರಂಗ ಚಟುವಟಿಕೆಗಳ ವಿಶ್ವಾವಸು ಸಂವತ್ಸರ ನಾಟಕ ಪ್ರಾರಂಭೋತ್ಸವವು ದಿನಾಂಕ 17 ಮೇ 2025ರಂದು ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪರಮ ಪೂಜ್ಯ ಶ್ರೀ ಗುರುಸಿದ್ಧಮಹಾಸ್ವಾಮೀಜಿ ಕಾರಂಜಿಮಠ ಇವರ ಅಮೃತ ಹಸ್ತದಿಂದ ದೀಪ ಪೃಜ್ವಲಿಸಿ, ಜಾಗಟೆ ಬಾರಿಸಿ ಉದ್ಘಾಟಿಸಿಲಾಯಿತು. ಈ ಕಾರ್ಯಕ್ರಮವು ಸಿರಿಗೆರೆಯ ಧಾತ್ರಿ ರಂಗಸಂಸ್ಥೆ ಪ್ರಸ್ತುತ ಪಡಿಸಿದ ನಗೆನಾಟಕ ‘ಶ್ರೀ ಕೃಷ್ಣ ಸಂಧಾನ’ದೊಂದಿಗೆ ಪ್ರಾರಂಭವಾಯಿತು. 95 ನಿಮಿಷಗಳವರೆಗೆ ನೆರೆದ 320 ಪ್ರೇಕ್ಷಕರನ್ನು ತಮ್ಮ ಅಮೋಘ ಆಂಗಿಕ ವಾಚಿಕ ಅಭಿನಯದಿಂದ ನಗಿಸಿ ಹೊಟ್ಟೆ ಹುಣ್ಣಾಗುವಂತೆ ಮಾಡಿದರು.
ಮಂಗಳೂರು : ಮಲಾರ್ ಅರಸ್ತಾನದ ಮದ್ರ ಪ್ರಕಾಶನ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ-ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು ದಿನಾಂಕ 07 ಮೇ 2025ರಂದು ಸಹೋದಯ ಸಭಾಂಗಣದಲ್ಲಿ ನಡೆಯಿತು. ‘ಫೇಸ್ಬುಕ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. “ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಅಭಿವೃದ್ಧಿ ಮತ್ತು ಅವುಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬ್ಯಾರಿ ಅಕಾಡಮಿಯ ಜೊತೆ ಬ್ಯಾರಿಗಳು ಕೈ ಜೋಡಿಸಬೇಕು” ಎಂದು ಕರೆ ನೀಡಿದರು. ‘ಬಿಂದಾಸ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮೇಲ್ತೆನೆಯ ಅಧ್ಯಕ್ಷ ಹಾಜಿ ವಿ. ಇಬ್ರಾಹಿಂ ನಡುಪದವು “ಭಾಷಾ ಅಕಾಡಮಿಗಳು ಮಾಡುವ ಕೆಲಸಗಳನ್ನು ಹಂಝ ಮಲಾರ್ ವೈಯಕ್ತಿಕವಾಗಿ ಮಾಡುತ್ತಿದ್ದಾರೆ” ಎಂದರು. ‘ಪಾಲುಂ ಬಾಲೆ’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಬ್ಯಾರಿ ವಾರ್ತೆಯ ಉಪಸಂಪಾದಕ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ “ಭಾಷೆ ಮತ್ತು ಸಾಹಿತ್ಯದ ಮೂಲಕ ಭಾಷಾ ಅಕಾಡಮಿಗಳು ಶಾಲಾ-ಕಾಲೇಜುಗಳಲ್ಲಿ ಸೌಹಾರ್ದದ…
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ಮತ್ತು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ದಿ. ಪುಳಿಮಾರು ಎಮ್. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಮತ್ತು ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಪ್ರದಾನ ಸಮಾರಂಭವನ್ನು ದಿನಾಂಕ 21 ಮೇ 2025ರಂದು ಅಪರಾಹ್ನ 2-30 ಗಂಟೆಗೆ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ವಹಿಸಲಿದ್ದು, ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ಸಾಹಿತಿ ಶ್ರೀಮತಿ ವಸಂತಿ ಶೆಟ್ಟಿ ಬ್ರಹ್ಮಾವರ ಇವರು ಉಪನ್ಯಾಸ ನೀಡಲಿದ್ದು, ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಬಸವ ಇವರಿಗೆ…
ಮಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ ವಿಶ್ವ ತಾಯಂದಿರ ದಿನ ಅಂಗವಾಗಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ ವಿಶ್ವ ಕೊಂಕಣಿ ಕೇಂದ್ರದಲ್ಲಿ ದಿನಾಂಕ 11 ಮೇ 2025ರಂದು ಜರುಗಿತು. ಯುವ ಲೇಖಕಿ ವಿಲ್ಮಾ ಬಂಟ್ವಾಳ ಅಧ್ಯಕ್ಷತೆ ವಹಿಸಿ, ತಾಯ್ತನಕ್ಕೆ ಸಂಬಂಧಿಸಿದ ಕವಿತೆಗಳನ್ನು ವಾಚಿಸಿದರು. ಡಯನಾ ಶರಲ್ ಲೋಬೊ, ಮೇರಿ ಸಲೊಮಿ ಡಿಸೋಜ – ಕವಿತೆ, ಫೆಲ್ಸಿ ಲೋಬೊ – ಪ್ರಬಂಧ ಮತ್ತು ಸ್ಮಿತಪ್ರಜ್ಞ – ಸಣ್ಣಕತೆ ಪ್ರಸ್ತುತಪಡಿಸಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸಂಚಾಲಕ ಮೆಲ್ವಿನ್ ರೋಡ್ರಿಗಸ್ ಪ್ರಾಸ್ತಾವಿಕ ಮಾತನಾಡಿದರು. ವಿಶ್ವ ಕೊಂಕಣಿ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ದೇವದಾಸ ಪೈ ಸ್ವಾಗತಿಸಿದರು. ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್.ಎಂ. ಪೆರ್ನಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಂಗಳೂರು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಹಾಗೂ ಗ್ರಂಥಾಲಯದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 25 ಮೇ 2025ರಂದು ಅಪರಾಹ್ನ 2-00 ಗಂಟೆಗೆ ಮಂಗಳೂರು ಉರ್ವಸ್ಟೋರಿನ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸಭಾ ಭವನದಲ್ಲಿ ನಡೆಯಲಿದೆ. ಕನ್ನಡ ಭವನ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸುವರು. ಡಾ. ರವೀಂದ್ರ ಜೆಪ್ಪು ದೀಪ ಬೆಳಗಿಸುವರು. ಕೆ. ಉದಯ ಕುಮಾರ ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರದೀಪ್ ಕುಮಾರ ಕಲ್ಕೂರ ಇವರು ಕನ್ನಡ ಧ್ವಜ ನೀಡುವ ಮೂಲಕ ಘಟಕಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಗಣೇಶ ಕಾರ್ಣಿಕ್ ಮತ್ತು ಡಾ. ಶಿವಾನಂದ ಬೇಕಲ್ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ-2025’ ಪ್ರದಾನ ಮಾಡಲಾಗುವುದು. ಯೋಗೀಶ್ ಕುಮಾರ ಜೆಪ್ಪು, ಜೆ.ಕೆ. ರಾವ್ ಮಂಗಳೂರು, ನಾಡೋಜ ಡಾ. ಕೃಷ್ಣಪ್ರಸಾದ ಕೂಡ್ಲು, ಡಾ. ಉದಯ ಕುಮಾರ…
ಮೈಸೂರು : ನಟನ ರಂಗಶಾಲೆಯ ‘ರಂಗಭೂಮಿ ಡಿಪ್ಲೊಮಾ 2025-26’ ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿಯ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ದಿನಾಂಕ 25 ಮೇ 2025ರಂದು ನಡೆಯಲಿದೆ. ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನಶೀಲವಾಗಿದೆ. ತನ್ನ ಚಟುವಟಿಕೆಯ ಭಾಗವಾಗಿ 16ರಿಂದ 32 ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿ ರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು 500ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. 2025-26ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನವು ದಿನಾಂಕ 25 ಮೇ 2025ರಂದು ಬೆಳಿಗ್ಗೆ…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ವತಿಯಿಂದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ ಕಾರ್ಯಕ್ರಮವು ದಿನಾಂಕ 17 ಮೇ 2025ರಂದು ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಪ್ರಾದ್ಯಾಪಕಿ, ಸಾಹಿತಿ ಡಾ. ನಿಕೇತನ “ಪರಸ್ಪರ ಒಗ್ಗೂಡುವಿಕೆ ನಮ್ಮ ಸಂಸ್ಕೃತಿ ಮತ್ತು ಭಾಷೆಯ ಅಪೂರ್ವವಾದ ಕೊಡುಗೆಯಾಗಿದೆ. ನಮ್ಮ ಸಾಹಿತ್ಯ ವಿವಿಧ ಮಜಲುಗಳನ್ನು ಸ್ಪರ್ಶಿಸಿ ವಿವಿಧ ರಂಗಕ್ಕೆ ಕಾಲಿಟ್ಟರೂ ಕೂಡ ಅದರ ಮೌಲ್ಯವನ್ನು ಕಳೆದುಕೊಳ್ಳದೆ ಇನ್ನಷ್ಟು ಎತ್ತರಕ್ಕೆ ಏರಿದೆ. ಸಾಮಗರವರ ದೈತ್ಯ ಪ್ರತಿಭೆ, ಅವರ ಮಾನವೀಯತೆಯ ನಡೆ ಅಭಿನಂದನಾರ್ಹ. ಕನ್ನಡ ಮತ್ತು ಆಂಗ್ಲ ಭಾಷೆಯ ಅವರ ಪ್ರೌಢಿಮೆ ಅವರು ನಾಡಿಗೆ ಕೊಟ್ಟಂತ ಶ್ರೇಷ್ಠ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿದೆ. ಕನ್ನಡ ನಮ್ಮ ಸ್ವಾಭಿಮಾನದ ಸಂಕೇತವಾಗಿದೆ ಇದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ. ಈ ಹಿಂದೆ ಸಾಹಿತ್ಯ ಧರ್ಮ ಮತ್ತು ರಾಜಾಶ್ರಯ ಪಡೆದಿತ್ತು. ಆದರೆ…