Author: roovari

ದಾವಣಗೆರೆ : ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಮೈಸೂರಿನ ಸಂಸ್ಕೃತಿ ಪ್ರಕಾಶನದ ಸಹಯೋಗದಲ್ಲಿ ಲೇಖಕಿ ಛಾಯಾ ಶ್ರೀಧರ್ ಇವರ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣಾ ಸಮಾರಂಭವು ದಿನಾಂಕ 27-06-2024ರ ಗುರುವಾರದಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಹಿರಿಯ ಕವಯಿತ್ರಿ ಶಶಿಕಲಾ ವಸ್ತ್ರದ್ “ಸಮಾಜದ ತಲ್ಲಣಗಳಿಗೆ ದನಿಯಾಗುವ ಮೂಲಕ ಜಾಗತಿಕ ಸಮಸ್ಯೆಗಳಿಗೆ ಕಾವ್ಯ ದಿಟ್ಟ ಉತ್ತರ ನೀಡಬೇಕು. ಕವಿಯಾದವನು ಸರ್ಕಾರದ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಬೇಕು. ಸಮಾಜದಲ್ಲಿನ ಶೋಷಿತರು, ದಮನಿತರು, ರೈತರು, ಕಾರ್ಮಿಕರ ಪರ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಪ್ರಶ್ನೆ ಮಾಡುವ ದಾರ್ಷ್ಟ್ಯ ಹಾಗೂ ಸಾತ್ವಿಕ ರೋಷ ಬೆಳೆಸಿಕೊಳ್ಳಬೇಕು. ಕವಿಗಳಿಗೆ ಪರಕಾಯ ಪ್ರವೇಶ ಮಾಡುವ ಗುಣವಿರುತ್ತದೆ. ಸಮಾಜದಲ್ಲಿ ಜನರ ನೋವುಗಳಿಗೆ ಸ್ಪಂದಿಸುವ ಮೂಲಕ ಪ್ರೀತಿ, ಸಹನೆ ಮತ್ತು ಅಂತಃಕರಣ ಹೊಂದಿದಾಗ ಸಂವಹನ ಶಕ್ತಿ ಬರುತ್ತದೆ. ಪರಕಾಯ ಪ್ರವೇಶ ಮಾಡುವ ಗುಣವುಳ್ಳವರು ಮಾತ್ರ ಪ್ರಬುದ್ಧ ಕವಿಗಳಾಗಲು ಸಾಧ್ಯ. ಕಾವ್ಯಕ್ಕೆ ಎಂದೂ…

Read More

ಕುಂದಾಪುರ : ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ‘ಶ್ವೇತಯಾನ-39’ನೆಯ ಕಾರ್ಯಕ್ರಮವು ದಿನಾಂಕ 30-06-2024 ರಂದು ಕಲಾಕ್ಷೇತ್ರದಲ್ಲಿರುವ ಪ್ರಕಾಶಾಂಗಣ ಸ್ಟುಡಿಯೋದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಉಡುಪಿ ಜಿಲ್ಲಾ ಬಿ. ಜೆ. ಪಿ. ಅಧ್ಯಕ್ಷರಾದ ಬಿ. ಕಿಶೋರ್ ಕುಮಾರ್ “ಕುಂದಾಪುರ ಹೃದಯ ಭಾಗದಲ್ಲಿ ಡಿಪ್ಲೊಮೇಟ್ ಹೋಟೇಲ್ ಹತ್ತಿರ ಸಾಹಿತ್ಯ ಚಟುವಟಿಕೆಗಾಗಿ ‘ಪ್ರಕಾಶಾಂಗಣ’ ಎನ್ನುವ ಹೆಸರಿನಲ್ಲಿ ತೆರೆದುಕೊಂಡ ಸ್ಟುಡಿಯೋ, ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಹಾಗೂ ಯಶಸ್ವೀ ಕಲಾವೃಂದದ ಗಾನ ವೈಭವದೊಂದಿಗೆ ಸಂಪನ್ನಗೊಂಡಿದೆ. ಮತ್ತೆ ಮತ್ತೆ ಕೇಳಬೇಕು, ನೋಡಬೇಕು ಎಂದೆನಿಸುವ ಯಕ್ಷಗಾನದ ಪೌರಾಣಿಕ ಆಧಾರಿತ ಪದ್ಯಗಳ ಗಾನ ವೈಭವ ಮಸ್ತಕದಲ್ಲಿ ಉಳಿಯುವಂತಹದ್ದು. ಸಂಸ್ಥೆಯ 25 ವರ್ಷಗಳ ತಪಸ್ಸು ಫಲ ನೀಡುವ ಕಾಲ ಕೂಡಿಬಂದಿದೆ. ಒಂದಷ್ಟು ವಿದ್ಯಾರ್ಥಿಗಳಿಗೆ ಕಲಿಸುತ್ತಾ ಬೆಳೆದ ಸಂಸ್ಥೆ ಸಾಕಷ್ಟು ಕಲಾವಿದರನ್ನು ಹೊಂದಿ ಸಮಾಜಕ್ಕೆ ಬೆಳಕಾಗಿದೆ.” ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಹಿರಿಯ ಭಾಗವತರಾದ ರಾಘವೇಂದ್ರ ಮಯ್ಯ ಮಾತನಾಡಿ “ಕಲೆಯು ಕಲಾಭಿಮಾನಿಗಳ ಸಹಕಾರದಿಂದ ಕರಾವಳಿಯ ತಡಿಯಲ್ಲಿ ಭದ್ರವಾಗಿ ಬೇರೂರಿದೆ. ಕಲೆಯು…

Read More

ಕಾಸರಗೋಡು : ಕಾಸರಗೋಡಿನ ಯುವ ರಂಗನಟಿ ಸುಶ್ಮಿತಾ ಇವರು ಶಿವಮೊಗ್ಗ ಜಿಲ್ಲೆಯ ಸಾಗರದ ‘ನೀನಾಸಂ’ ರಂಗಶಿಕ್ಷಣ ತರಬೇತಿಗೆ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ನೀನಾಸಂಗೆ ಆಯ್ಕೆ ಆಗಬೇಕೆಂಬುದು ಪ್ರತಿಯೊಬ್ಬ ರಂಗಭೂಮಿ ಕಲಾವಿದನ ಕನಸಾಗಿರುತ್ತದೆ. ಆ ನಿಟ್ಟಿನಲ್ಲಿ ಅಷ್ಟೇ ಶ್ರದ್ದೆ ಮತ್ತು ಪರಿಶ್ರಮದ ಅಗತ್ಯತೆ ಇದ್ದು, ಈಗಾಗಲೇ ಸಾವಿರಾರು ಕಲಾವಿದರು ಇಲ್ಲಿ ತರಬೇತಿ ಪಡೆದು ಉತ್ತಮ ಕಲಾವಿದರಾಗಿ ಹೊರಹೊಮ್ಮಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2020ರಲ್ಲಿ ‘ಸಾಹೇಬ್ರು ‘ಸಾಹೇಬ್ರು ಬಂದವೇ’ ನಾಟಕವನ್ನು ರಾಜ್ಯದ ಖ್ಯಾತ ರಂಗಭೂಮಿ ನಿರ್ದೆಶಕರಾದ ಡಾ. ಜೀವನ್ ರಾಂ ಸುಳ್ಯ ಇವರ ನಿರ್ದೇಶನದಲ್ಲಿ ಸಿದ್ಧಪಡಿಸಲಾಗಿತ್ತು. ರಾಜ್ಯಾದ್ಯಂತ ಸುಮಾರು 20 ಪ್ರದರ್ಶನಗಳನ್ನು ನೀಡಿದ ಈ ನಾಟಕ ರಂಗಭೂಮಿ ಪ್ರೇಕ್ಷಕರ ಮನ ಗೆದ್ದಿತ್ತು. ಇದರಲ್ಲಿ ಅಭಿನಯಿಸಿದ ಎಲ್ಲರೂ ರಂಗಭೂಮಿಗೆ ಹೊಸದಾಗಿ ಪರಿಚಯಗೊಂಡ ಕಲಾವಿದರೇ ಆಗಿದ್ದರು. ಇದರಲ್ಲಿ ಕಲ್ಮಕಾರಿನ ಪ್ರತಿಭೆ ಮಮತಾ ಕಳೆದ ಬಾರಿಯ ನೀನಾಸಂ ತರಬೇತಿಗೆ ಆಯ್ಕೆಯಾಗಿದ್ದು, ಇದೇ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರ ಮಾಡುತ್ತಿದ್ದ ಕೇರಳ ರಾಜ್ಯದ ಕಾಸರಗೋಡಿನ…

Read More

ಕಾಸರಗೋಡು : ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸುವ ಈ ವರ್ಷದ ಯಕ್ಷಗಾನ ತರಗತಿಯ ಉದ್ಘಾಟನಾ ಸಮಾರಂಭವು ದಿನಾಂಕ 06-07-2024ರಂದು ಸಂಜೆ ಘಂಟೆ 5-00ಕ್ಕೆ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ನಡೆಯಲಿದೆ. ಪ್ರತೀ ಶನಿವಾರ ಸಂಜೆ ಘಂಟೆ 5-00 ರಿಂದ ಹಿಮ್ಮೇಳ ತರಗತಿ ಮತ್ತು ಘಂಟೆ 6-00 ರಿಂದ ನಾಟ್ಯ ತರಗತಿಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ 9496297055 ಅಥವಾ 8089882831 ಸಂಖ್ಯೆಯನ್ನು ಸಂಪರ್ಕಿಸಬಹುದು.

Read More

ಮಡಿಕೇರಿ : ಕನ್ನಡಸಿರಿ ಸ್ನೇಹ ಬಳಗ ಕುಶಾಲನಗರ ಕೊಡಗು ಜಿಲ್ಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ವಿಚಾರ ಮಂಡನೆ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 05-07-2024ರಂದು ಬೆಳಿಗ್ಗೆ 10-30 ಗಂಟೆಗೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ. ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪಿ.ಆರ್. ವಿಜಯ್ ಇವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರಸಭೆ ಮಾನ್ಯ ಸದಸ್ಯರಾದ ಶ್ರೀ ಕೆ.ಎಸ್. ರಮೇಶ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಶ್ರೀ ಲೋಕೇಶ್ ಸಾಗರ್ ಬಿ.ಎಸ್. ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾದ ಶ್ರೀ ಅನಂತಶಯನ ಇವರು ಖ್ಯಾತ ಸಾಹಿತಿಗಳಾದ ಕಿಗ್ಗಾಲು ಗಿರೀಶ್ ಇವರ ‘ಕಳೆದುಕೊಂಡವನು ಮತ್ತು ಇನ್ನಿತರ ಕಥೆಗಳು’ ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮಡಿಕೇರಿಯ ಶ್ರೀಮತಿ ಜಯಲಕ್ಷ್ಮಿ ಶೇಖರ್ ಇವರು…

Read More

ಬೆಂಗಳೂರು : ಎಂ.ಎ. ನರಸಿಂಹಾಚಾರ್ ಮ್ಯೂಜಿಕ್ ಫೌಂಡೇಷನ್ (ರಿ.) ಪ್ರಸ್ತುತ ಪಡಿಸುವ ಸಂಗೀತ ಭೂಷಣ ಎಂ.ಎ. ನರಸಿಂಹಾಚಾರ್ ಇವರ ಜನ್ಮ ಶತಮಾನೋತ್ಸವದ ನೆನಪಿಗಾಗಿ ಯುಟ್ಯೂಬ್ ನಲ್ಲಿ ಖ್ಯಾತರಾದ ಗಾಯಕರ ಸಂಗೀತ ಕಾರ್ಯಕ್ರಮವು ದಿನಾಂಕ 07-07-2024ರಂದು ಬೆಂಗಳೂರಿನ ಕೆ.ಆರ್. ರೋಡಿನಲ್ಲಿರುವ ಬೆಂಗಳೂರು ಗಾಯನ ಸಮಾಜ ಹಾಲ್ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸ್ಪೂರ್ತಿ ರಾವ್ ಇವರ ಹಾಡುಗಾರಿಕೆಗೆ ಶ್ರೀಲಕ್ಷ್ಮೀ ಭಟ್ ವಯೋಲಿನ್, ಅನಿರುದ್ಧ ಭಟ್ ಮೃದಂಗ, ಸುನಾದ ಅನೂರ್ ಖಂಜೀರದಲ್ಲಿ ಸಹಕರಿಸಲಿದ್ದಾರೆ. ಸೂರ್ಯಗಾಯತ್ರಿಯವರ ಭಕ್ತಿಗೀತೆಗಳಿಗೆ ಪ್ರದೇಶಾಚಾರ್ ವಯೋಲಿನ್, ಕೃಪಾಲ್ ಸಾಯಿ ರಾಮ್ ಮೃದಂಗ, ಪ್ರಶಾಂತ್ ಶಂಕರ್ ತಬಲಾ ಮತ್ತು ಶೈಲೇಶ್ ಮರಾರ್ ಹೆಚ್ಚುವರಿ ತಾಳವಾದ್ಯದಲ್ಲಿ ಸಾಥ್ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗಾನ ಕಲಾ ಮಂದಿರದ ವಿದ್ಯಾರ್ಥಿಗಳಿಂದ ಗುರು ವಂದನ ನಡೆಯಲಿದೆ. ಸಾಯಿ ವಿಘ್ನೇಶ್ ಕರ್ನಾಟಿಕ್ ಫ್ಯೂಶನ್ ಬಾಂಡ್ ನಲ್ಲಿ ಎಸ್. ವೆಂಕಟರಮಣ್ ಕೀಬೋರ್ಡ್, ತ್ರಿರುಚೇರೈ ಕಾರ್ತಿಕ್ ವಯೋಲಿನ್, ಅಮೋಘವರ್ಷ ಡ್ರಮ್ಸ್ ಮತ್ತು ಕೌಶಿಕ್ ಶ್ರೀಧರ್ ತಾಳವಾದ್ಯದಲ್ಲಿ ಹಾಗೂ ರಾಹುಲ್ ವೆಲ್ಲಾಳ್ ಇವರ ಹಾಡುಗಾರಿಕೆಗೆ…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂ.ಐ.ಸಿ. ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿಯವರನ್ನು ದಿನಾಂಕ 01-07-2024ರಂದು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ ವಿದ್ವಾಂಸ ನಾಡೋಜ ಕೆ.ಪಿ. ರಾವ್ ಇವರು ಶಾಲು ಹೊದೆಸಿ, ಸ್ಮರಣಿಕೆಯೊಂದಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕ.ಸಾ.ಪ. ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಾಮಾಜಿಕ ಜಾಲ ನಿರ್ವಾಹಕರಾದ ಶಶಿಕಾಂತ ಶೆಟ್ಟಿ, ಸದಸ್ಯ ವಸಂತ್, ರಾಘವೇಂದ್ರ ಪ್ರಭು ಕರ್ವಾಲು, ಎಂ.ಐ.ಸಿ. ಮಣಿಪಾಲದ ಪ್ರಾಧ್ಯಾಪಕಿ ಹೆಚ್.ಎಸ್. ಶುಭ, ಸಹಾಯಕ ಪ್ರಾಧ್ಯಾಪಕ ವಿನ್ಯಾಸ್ ಹೆಗ್ಡೆ ಉಪಸ್ಥಿತರಿದ್ದರು.

Read More

ಮಂಗಳೂರು : ಭರತಾಂಜಲಿ (ರಿ.) ಕೊಟ್ಟಾರ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಪ್ರಸ್ತುತ ಪಡಿಸುವ ‘ನೃತ್ಯಾಮೃತಮ್ -2024’ ನೃತ್ಯ ಸಂಭ್ರಮ ಕಾರ್ಯಕ್ರಮವು ದಿನಾಂಕ 07-07-2024ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ನೃತ್ಯ ಸಂಭ್ರಮವನ್ನು ನಾಟ್ಯಾಚಾರ್ಯ ಉಳ್ಳಾಲ ಮೋಹನ ಕುಮಾರ್ ಇವರು ಉದ್ಘಾಟಿಸಲಿದ್ದು, ಕರ್ನಾಟಕ ಕಲಾಶ್ರೀಗಳಾದ ಗುರು ಕಮಲ ಭಟ್ ಮತ್ತು ಗುರು ರಾಜಶ್ರೀ ಉಳ್ಳಾಲ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂಕುರ, ವಲ್ಲರಿ ಮತ್ತು ತರು ತಂಡಗಳು ನೃತ್ಯ ಕಾರ್ಯಕ್ರಮ ನೀಡಲಿರುವರು.

Read More

ಮೂಡುಬಿದ್ರೆ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ‘ವಿಂಶತಿ’ ಕಾರ್ಯಕ್ರಮದ ಅಂಗವಾಗಿ ಸರಣಿ ತಾಳಮದ್ದಳೆಯು ಪರಮ ಪೂಜ್ಯ ಡಾ. ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಮೂಡುಬಿದ್ರೆ ಇವರು ಹಮ್ಮಿಕೊಂಡ ನಿರಂತರ ತಾಳಮದ್ದಳೆ ಅಂಗವಾಗಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಇದರ ಆಶ್ರಯದಲ್ಲಿ ಪಾರ್ತಿಸುಬ್ಬ ವಿರಚಿತ‌ ‘ಭರತಾಗಮನ’ ತಾಳಮದ್ದಳೆಯು ದಿನಾಂಕ 30-06-2024ರಂದು ನಡೆಯಿತು. ಹಿಮ್ಮೇಳದಲ್ಲಿ ಭರತ್ ಶೆಟ್ಟಿ‌ ಸಿದ್ದಕಟ್ಟೆ, ದೇವಾನಂದ ಭಟ್ ಬೆಳುವಾಯಿ, ದಿವಿಜೇಶ್ ಬೆಳುವಾಯಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಭರತ), ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ರಾಮ), ಶುಭಾ ಗಣೇಶ್ (ವಸಿಷ್ಠ ಮತ್ತು ಲಕ್ಷ್ಮಣ) ಸಹಕರಿಸಿದರು. ಪೂಜ್ಯ ಶ್ರೀಗಳು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿ ಕಲಾವಿದರನ್ನು ಗೌರವಿಸಿದರು. ಸಂಘದ ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More

ಕರ್ನಾಟಕದವರಾಗಿ ಅಮೇರಿಕದಲ್ಲಿ ನೆಲೆಸಿರುವ ಶ್ರೀ ಯೋಗೇಶ್ವರ್ ಮತ್ತು ಶ್ರೀಮತಿ ಪ್ರಜ್ಞಾ ಅವರ ಮೂವರು ಮಕ್ಕಳಲ್ಲಿ ಹಿರಿಯವನೇ 15ರ ಹರೆಯದ ಮಾಸ್ಟರ್ ಅಕುಲ್ ಗೊಂಚಿಗಾರ್. ಅಮೇರಿಕಾದಲ್ಲಿ ಹುಟ್ಟಿ ಬೆಳೆದ ಈ ಬಾಲಕನಿಗೆ ತಂದೆ ತಾಯಂದಿರ ಪ್ರಯತ್ನದಿಂದ ಕರ್ನಾಟಕ ಸಂಗೀತದ ಬಗ್ಗೆ ಒಲಮೆ ಹುಟ್ಟಿಕೊಂಡಿತು. ಬಳಿಕ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಅವರ ಸಂಗೀತ ಪಾಠ ಆತನಲ್ಲಿ ಸಂಗೀತದ ಬಗ್ಗೆ ಹೆಚ್ಚು ಆಕರ್ಷಣೆಯನ್ನು ಉಂಟು ಮಾಡಿರಬೇಕು. ಬೆಂಗಳೂರಿನ ಜಯನಗರದ ವಿವೇಕ ಸಭಾಂಗಣದಲ್ಲಿ ಅಕುಲ್ ಬಂಧುಗಳೇ ಹೆಚ್ಚಾಗಿ ಇದ್ದ ಉತ್ತಮ ಸಂಖ್ಯೆಯ ಶ್ರೋತೃಗಳ ಸಮ್ಮುಖದಲ್ಲಿ ದಿನಾಂಕ 29-06- 2024ರಂದು ನಿಗದಿತ ಸಮಯಕ್ಕಿಂತ ಸ್ವಲ್ಪ ತಡವಾಗಿ ಸಂಜೆ ಗಂಟೆ 7-00ಕ್ಕೆ ವಿದ್ವಾನ್ ಕೇಶವ ಮೋಹನ್ ಕುಮಾರ್, ವಿದ್ವಾನ್ ಆನೂರು ವಿನೋದ್ ಶ್ಯಾಮ್ ಮತ್ತು ವಿದ್ವಾನ್ ರಘುನಂದನ್ ಬಿ.ಎಸ್.ರಂತಹ ಅನುಭವೀ ಪಕ್ಕವಾಕ್ಯದೊಂದಿಗೆ ಸಂಗೀತ ಕಚೇರಿ ಪ್ರಾರಂಭವಾಯಿತು. ತೋಡಿ ರಾಗ – ಆದಿತಾಳ ವರ್ಣ, ಖರಹರಪ್ರಿಯ ರಾಗದ ತ್ಯಾಗರಾಜರ ಪಕ್ಕಲ ನಿಲಬಡಿ ಕೃತಿ, ಹಂಸಧ್ವನಿ ರಾಗದ ವಿದ್ವಾನ್ ಸಾಯಿ ನರಸಿಂಹನ್…

Read More