Subscribe to Updates
Get the latest creative news from FooBar about art, design and business.
Author: roovari
ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ವತಿಯಿಂದ ಬಿ.ಸಿ. ರಾಮಚಂದ್ರ ಶರ್ಮ ಜನ್ಮ ಶತಮಾನೋತ್ಸವ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಧಾರವಾಡದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಖ್ಯಾತ ವಿಮರ್ಶಕರಾದ ವಿಕಾಸ ಹೊಸಮನಿ ಇವರ ಅಧ್ಯಕ್ಷತೆ ನಡೆಯುವ ಈ ಸಮಾರಂಭದಲ್ಲಿ ಖ್ಯಾತ ಸಾಹಿತಿಗಳಾದ ಪ್ರೊ. ರಾಘವೇಂದ್ರ ಪಾಟೀಲ ಇವರು ಪ್ರಶಸ್ತಿ ಪ್ರದಾನ ಮತ್ತು ಪ್ರಶಸ್ತಿ ವಿಜೇತ ಕವನ ಸಂಕಲನ ಬಿಡುಗಡೆ ಮಾಡಲಿದ್ದಾರೆ. ಪ್ರಶಸ್ತಿ ವಿಜೇತ ಉದಯೋನ್ಮುಖ ಲೇಖಕರಾದ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಮತ್ತು ದಾವಣಗೆರೆಯ ರೇವಣಸಿದ್ಧಪ್ಪ ಜಿ.ಆರ್. ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪೆರಿಯ : ಬೇಕಲ ಗೋಕುಲಂ ಗೋಶಾಲೆಯಲ್ಲಿ ದಿನಾಂಕ 20 ಅಕ್ಟೋಬರ್ 2025ರಂದು ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ಐದನೇ ದೀಪಾವಳಿ ಸಂಗೀತೋತ್ಸವವನ್ನು ದೀಪಾವಳಿ ದಿನದಂದು ಉದ್ಘಾಟಿಸಲಾಯಿತು. ಖ್ಯಾತ ಕೈಗಾರಿಕೋದ್ಯಮಿ ಹಾಗೂ ಭಾರತೀಯ ಗೋಸಂರಕ್ಷಣಾ ಹೋರಾಟಗಾರ ಕೋಲ್ಕತ್ತಾದ ಮಹಾವೀರ ಸೋನಿಕಾ ಇವರು ದೀಪ ಬೆಳಗಿಸಿದರು. ಸಮಾರಂಭದಲ್ಲಿ ಗೋಶಾಲೆ ಸಂಸ್ಥಾಪಕ ವಿಷ್ಣುಪ್ರಸಾದ್ ಹೆಬ್ಬಾರ್, ಡಾ. ನಾಗರತ್ನ ಹೆಬ್ಬಾರ್, ಪರಂಪರಾ ವಿದ್ಯಾಪೀಠದ ಸಂಗೀತ ಗುರು ವೆಳ್ಳಿಕೋತ್ ವಿಷ್ಣುಭಟ್, ಸಂಗೀತಗಾರ ತಾಮರಶ್ಶೇರಿ ಈಶ್ವರನ್ ಭಟ್ಟತಿರಿ ಉಪಸ್ಥಿತರಿದ್ದರು. ನಂತರ ಐದನೇ ಸಂಗೀತೋತ್ಸವದ ಮೊದಲ ಕಾರ್ಯಕ್ರಮ ಉಡುಪಿ ಪಾವನ ಆಚಾರ್ ನೇತೃತ್ವದಲ್ಲಿ ಪಂಚವಾದ್ಯ ವೀಣೆಗಳ ಕಛೇರಿ. ಇಡಯಾರ್ ಸಹೋದರರು, ತಾಮರಶ್ಶೇರಿ ಈಶ್ವರನ್ ಭಟ್ಟತಿರಿ, ವೆಳ್ಳಿಕೋತ್ ಸಹೋದರಿಯರಾದ ಉಷಾಭಟ್ ಜಯಲಕ್ಷ್ಮಿ ಭಟ್, ಕಾಞಂಗಾಡ್ ಟಿ.ಪಿ. ಶ್ರೀನಿವಾಸನ್, ಶ್ರೀಹರಿ ಭಟ್, ಚೈತನ್ಯ ಅಶೋಕ್ ಮತ್ತು ವೈಷ್ಣವಿ ನಂಬಿಯಾರ್ ಸಂಗೀತ ನೀಡಿದರು. ಪ್ರಣವಂ ಶಂಕರನ್ ನಂಬೂದಿರಿ ಇವರ ಸಂಗೀತ ಕಛೇರಿಯಲ್ಲಿ ಎಡಪ್ಪಳ್ಳಿ ಅಜಿತ್ ಪಿಟೀಲು, ಬಾಲಕೃಷ್ಣ ಕಮ್ಮತ್ ಮೃದಂಗದಲ್ಲಿ ಮತ್ತು ಶ್ರೀಜಿತ್ ವೆಳ್ಳಾಟ್ಟತ್ತನ್ನೂರ್ ಘಟದಲ್ಲಿ ಮೆರುಗು…
ಸುರತ್ಕಲ್ : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ದ ಸಮಾರೋಪ ಸಮಾರಂಭವನ್ನು ದಿನಾಂಕ 26 ಅಕ್ಟೋಬರ್ 2025ರಂದು ಪೂರ್ವಾಹ್ನ 9-00 ಗಂಟೆಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರು ದೀಪ ಪ್ರಜ್ವಲನೆಯೊಂದಿಗೆ ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ಗಂಟೆ 9-15ಕ್ಕೆ ಶ್ರೀ ಶಾರದಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮತ್ತು ಕಲಾವಿದೆ ಶ್ರೀಮತಿ ಅಪೂರ್ವ ಆರ್. ತಂತ್ರಿ ಇವರಿಂದ ‘ನೃತ್ಯ ಕುಂಚ’ ಪ್ರಸ್ತುತಗೊಳ್ಳಲಿದೆ. 10-00 ಗಂಟೆಗೆ ಅತ್ತಾವರದ ಚಕ್ರಪಾಣಿ ನೃತ್ಯ ಕಲಾ ಕೇಂದ್ರದ ನೃತ್ಯ ನಿರ್ದೇಶಕರಾದ ಕಲಾರತ್ನ ವಿದ್ವಾನ್ ಸುರೇಶ್ ಅತ್ತಾವರ ಇವರ ಶಿಷ್ಯ ವೃಂದದವರಿಂದ ‘ಮಣಿಕಂಠ ಜನನ’ ನೃತ್ಯ ರೂಪಕ, 11-00 ಗಂಟೆಗೆ ಕರ್ನಾಟಕ ಕರಾವಳಿಯ ಖ್ಯಾತ ಭರತನಾಟ್ಯ ನೃತ್ಯ ಸಂಸ್ಥೆಯವರಿಂದ ಸಮೂಹ ನೃತ್ಯ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 2-00 ಗಂಟೆಗೆ ನಾಟ್ಯನಿಲಯಂ ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯರಿಂದ ಭರತನಾಟ್ಯ, ಕೂಚಿಪುಡಿ,…
ಕೊಡಗು : ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ ಇದರ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್. ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 05 ನವೆಂಬರ್…
ಬಂಟ್ವಾಳ : ಕಲಾನಿಕೇತನ ಡಾನ್ಸ್ ಫೌಂಡೇಷನ್ ಕಲ್ಲಡ್ಕ ಇವರು ಪ್ರಸ್ತುತ ಪಡಿಸುವ ‘ರಜತ ಕಲಾ ಯಾನ’ ಸಂಭ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಬಂಟ್ವಾಳ ಬಿ.ಸಿ. ರೋಡ್ ಇಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಚಕ್ರಪಾಣಿ ನೃತ್ಯ ಕಲಾ ಕೇಂದ್ರದ ಸುರೇಶ್ ಅತ್ತಾವರ ಮತ್ತು ಸ್ಮಿಥೇಶ್ ಎಸ್. ಬಾರ್ಯ ಇವರು ಭಾಗವಹಿಸಲಿದ್ದಾರೆ. ವಿದುಷಿ ಅಮೃತ ಸಂದೀಪ್ ಆಚಾರ್ಯ, ವಿದುಷಿ ಹರ್ಷಿತಾ ಟಿ.ಪಿ., ವಿದುಷಿ ಪ್ರಜ್ಞಾ, ವಿದುಷಿ ರಾಜಶ್ರೀ ಅಭಿಷೇಕ್, ವಿದುಷಿ ಶ್ರೀದೇವಿ, ವಿದುಷಿ ಕೀರ್ತಿ ಪ್ರಭು ಕೆ., ವಿದುಷಿ ಪೂಜಾ ಪ್ರಶಾಂತ್ ಆಚಾರ್ಯ, ವಿದುಷಿ ಮಹಿಮಾ ಎಂ. ಪಣಿಕರ್, ವಿದುಷಿ ಪ್ರತೀಕ್ಷಾ ಕೆ. ಆಚಾರ್ಯ, ವಿದುಷಿ ದೀಪಾಲಿ, ವಿದುಷಿ ಶಾಶ್ವತ ತಾರನಾಥ್, ವಿದುಷಿ ಅನುರಾಧ ವೈ., ವಿದುಷಿ ಸೃಜನಾ ಕೆ.ಸಿ., ವಿದುಷಿ ಪ್ರಥ್ವಿ ಸಿ. ಗೌಡ, ವಿದುಷಿ ಹರಿಪ್ರಿಯಾ, ವಿದುಷಿ ಮೇಘಾ ಎನ್., ವಿದುಷಿ ಅನುಷಾ ರಾವ್, ವಿದುಷಿ ಚಂದನ ಕೊಪ್ಪಳ, ವಿದುಷಿ ಕೃತಿ ಆರ್., ವಿದುಷಿ ಅಂಜನಾ ಕೆ. ರಾವ್…
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ, ಆರ್ಟ್ ಕೆನರಾ ಟ್ರಸ್ಟ್ ಮತ್ತು ಮಂಗಳೂರು ಆರ್ಟ್ ಅರ್ಚಿವಲ್ ಪ್ರಾಜೆಕ್ಟ್ ಇವುಗಳ ಸಹಯೋಗದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನದ ಉದ್ಘಾಟನೆಯನ್ನು ದಿನಾಂಕ 25 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಎಂ. ಪ್ರಶಾಂತ್ ಶೇಟ್, ಜಯಂತ್ ಕೋಡ್ಕಣಿ ಮತ್ತು ಸುಭಾಸ್ ಚಂದ್ರ ಬಸು ಇವರುಗಳು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಅಂಪೈರ್ ಕಸ್ತೂರಿ ಬಾಲಕೃಷ್ಣ ಪೈ ಇವರನ್ನು ಸನ್ಮಾನಿಸಲಾಗುವುದು. ದಿನಾಂಕ 01 ನವೆಂಬರ್ 2025ರ ತನಕ ಬೆಳಗ್ಗೆ 11-00 ಗಂಟೆಯಿಂದ ಸಂಜೆ 7-00 ಗಂಟೆ ತನಕ ಪ್ರದರ್ಶನವು ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಿರಾಜ ಶೆಟ್ಟಿ 99863 66355 ಮತ್ತು ರಾಜೇಂದ್ರ ಕೇದಿಗೆ 94800 14812 ಇವರನ್ನು ಸಂಪರ್ಕಿಸಿರಿ.
ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಅಕ್ಟೋಬರ್ ತಿಂಗಳ ಕಾರ್ಯಕ್ರಮದಲ್ಲಿ ಕುಂದಾಪುರ ಕುಂದೇಶ್ವರದ ಶ್ರೀ ಏಕನಾಥೇಶ್ವರಿ ಭಜನಾ ಮಂಡಳಿ ಇವರಿಂದ ‘ಭಕ್ತಿ ಗೀತೆಗಳು’ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಯು.ಎಸ್.ಎ.ಯ ಎಸ್.ಎಲ್.ಕೆ. ಆಸ್ಟಿನ್ ಇದರ ಸೀನಿಯರ್ ಮ್ಯಾನೇಜರ್ ಎಮ್. ರಾಜೇಶ್ ರತ್ನಾಕರ ಪೈ ಇವರು ಕೊಡುಗೆ ನೀಡಿದ 55 ಇಂಚಿನ ಟಿ.ಸಿ.ಎಲ್. ಟಿ.ವಿ.ಯ ಉದ್ಘಾಟನೆ ನಡೆಯಲಿದೆ.
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ. ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಪಾರವಾಗಿ ಅನುಭವಿರುವ ಹಿರಿಯ ನಾಗರಿಕರು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಅವರು ತಮ್ಮ ಸ್ವರಚಿತ ಕವನವನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡತಕ್ಕದ್ದು. ಕವನಗಳನ್ನು ಪರಿಶೀಲಿಸಿ ಆಯ್ಕೆಗೊಳಿಸಲು ಸಮಿತಿ ರಚಿಸಲಾಗುವುದು. ಕವನ 16 ಗೆರೆಗಳನ್ನು ಮೀರಿರಬಾರದು. ಒಬ್ಬರು ಒಂದು ಕವನವನ್ನು ಮಾತ್ರ ಕಳುಹಿಸಬಹುದು. ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನ)ಗಳನ್ನೂ ಕಳುಹಿಸಬಹುದು. ಲಕೋಟೆಯ ಮೇಲೆ ‘ರಾಜ್ಯೋತ್ಸವ ಹಿರಿಯರ ಕವಿಗೋಷ್ಠಿ’ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಮಾತ್ರ ಅವಕಾಶ. ಕವನಗಳನ್ನು ಕಳುಹಿಸಲು ಕಡೆಯ ದಿನಾಂಕ 05 ನವೆಂಬರ್ 2025 ಆಗಿದ್ದು, ಈ ಕೆಳಗಿನ ಮೊಬೈಲ್ ಗಳಿಗೆ ವಾಟ್ಸಪ್ ಮೂಲಕವೂ ಕಳುಹಿಸಬಹುದು. ಕವನದ ಜೊತೆಗೆ ಆಧಾರ್ ಕಾರ್ಡ್ ಅಥವಾ ಹಿರಿಯ ನಾಗರಿಕ ದೃಢೀಕರಣ ಪತ್ರದ ನಕಲನ್ನು ಕಳುಹಿಸಿತಕ್ಕದ್ದು. ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು,…
ಪೆರಿಯ : ಬೇಕಲದ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಐದನೇ ದೀಪಾವಳಿ ಸಂಗೀತೋತ್ಸವದ ಎರಡನೇ ದಿನ ದಿನಾಂಕ 21 ಅಕ್ಟೋಬರ್ 2025ರಂದು ಗೋಶಾಲೆಯ ಸಂಸ್ಥಾಪಕರೂ ಜ್ಯೋತಿಷ್ಯ ಪಂಡಿತರೂ ಆದ ವಿಷ್ಣುಪ್ರಸಾದ್ ಹೆಬ್ಬಾರ್ ರಚಿಸಿದ ನವಗ್ರಹ ಕುರಿತ ಸಂಗೀತ ಕೀರ್ತನೆಗಳನ್ನು ಕಾಸರಗೋಡು ಜಿಲ್ಲೆಯ ಸುಪ್ರಸಿದ್ಧ ಕರ್ನಾಟಕ ಸಂಗೀತ ತಜ್ಞ ವೆಳ್ಳಿಕೋತ್ ವಿಷ್ಣುಭಟ್ ಬಿಡುಗಡೆ ಮಾಡಿ ಹಾಡಿದರು. ವಿಷ್ಣು ಭಟ್ ಇವರು ಒಂಬತ್ತು ಗ್ರಹಗಳ ಮೇಲೆ ಲಾವಂಗಿ, ಚಕ್ರವಾಕಂ, ಆನಂದ ಭೈರವಿ, ಧನ್ಯಾಸಿ, ಆರಾಭಿ, ಹಂಸಧ್ವನಿ, ವಸಂತ, ಶ್ರೀ ರಾಗಂ ಮತ್ತು ಹಂಸನಾದಂಗಳಲ್ಲಿ ಒಂಬತ್ತು ಕೃತಿಗಳನ್ನು ರಚಿಸಿದ್ದಾರೆ. ಪಕ್ಕ ವಾದ್ಯದಲ್ಲಿ ವೀಣೆಯಲ್ಲಿ ವೈ.ಜಿ. ಶ್ರೀಲತಾ ನಿಕ್ಷಿತ್, ಪಿಟೀಲಿನಲ್ಲಿ ಸುನೀತಾ ಹರಿಶಂಕರ್, ಮೃದಂಗದಲ್ಲಿ ತ್ರಿಪುಣಿತುರ ರಾಜ್ ನಾರಾಯಣನ್, ಘಟಂನಲ್ಲಿ ರೋಹಿತ್ ಪ್ರಸಾದ್, ಮೋರ್ಸಿಂಗ್ ನಲ್ಲಿ ಗೋಪಿ ನಾದಾಲಯ ಸಹಕರಿಸಿದರು. ಎರಡನೇ ದಿನ ಚೆನ್ನೈನಲ್ಲಿ ಅನಸೂಯಾ ಪಾಠಕ್, ಸರ್ವೇಶ್ ದೇವಸ್ಥಲಿ, ಅದಿತಿ ಪ್ರಹ್ಲಾದ್, ಅಭಿಜ್ಞಾ ರಾವ್, ಶಿಲ್ಪಾ ಪಂಚ ಮತ್ತು ಅಜಯ್ ಮುಕ್ಕು ಚೆನ್ನೈ,…
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ ರಂಗಭೂಮಿ ನಿರ್ದೇಶಕರಾದ ಐರೋಡಿ ವೈಕುಂಠ ಹೆಬ್ಬಾರ್ ಸಂಸ್ಮರಣಾ ಕಾರ್ಯಕ್ರಮವನ್ನು ದಿನಾಂಕ 26 ಅಕ್ಟೋಬರ್ 2025ರಂದು ಅಪರಾಹ್ನ 2-30 ಗಂಟೆಗೆ ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಧಾಕೃಷ್ಣ ಕಲ್ಚಾರ್ ರಚಿತ ‘ಶಲ್ಯಭೇಧನ’ ತಾಳಮದ್ದಲೆಯಲ್ಲಿ ಗಣೇಶ ಆಚಾರ್ಯ ಬಿಲ್ಲಾಡಿ, ರಾಘವೇಂದ್ರ ಹೆಗಡೆ, ವಾಗ್ವೀಲಾಸ ಭಟ್ಟ, ಉಮಾಕಾಂತ ಭಟ್, ರಾಧಾಕೃಷ್ಣ ಕಲ್ಚಾರ್, ಪ್ರಭಾಕರ ಜೋಷಿ ಮತ್ತು ಮಲ್ಪೆ ಲಕ್ಷ್ಮೀನಾರಾಯಣ ಸಾಮಗ ಇವರುಗಳು ಭಾಗವಹಿಸಲಿದ್ದಾರೆ. 5-00 ಗಂಟೆಗೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ದಿವಂಗತ ವೈಕುಂಠ ಹೆಬ್ಬಾರ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಗೇರುಸೊಪ್ಪೆ ಶಾಂತಪ್ಪಯ್ಯ ರಚಿತ ‘ಶಲ್ಯ ಸಾರಥ್ಯ’ ತಾಳಮದ್ದಲೆಯಲ್ಲಿ ಶಂಕರ ಪೈ, ಕೃಷ್ಣ ಪ್ರಕಾಶ್ ಉಳಿತ್ತಾಯ, ರಾಜಾರಾಮ ರಾವ್, ಜಬ್ಬಾರ್ ಸಮೊ, ಪವನ್ ಕಿರಣಕೆರೆ…