Author: roovari

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಹಯೋಗದಲ್ಲಿ ‘ಯಶಸ್ವಿ ಮಹಿಳಾ ಸಮ್ಮಿಳನ’ ಕಾರ್ಯಕ್ರಮ ಸಮಾರೋಪ ಸಮಾರಂಭ ದಿನಾಂಕ 23 ಫೆಬ್ರವರಿ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆನಂದ ಉರಾಳ್ ಇವರನ್ನು ಗೌರವಿಸಿದ ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಇದರ ಅಧ್ಯಕ್ಷರಾದ ಹೆರಿಯ ಮಾಸ್ಟರ್ ಮಾತನಾಡಿ “ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಂಘಟನೆಗಳಲ್ಲಿ ಇತ್ತೀಚೆಗೆ ಮಹಿಳೆಯರದೇ ಮೇಲುಗೈ. ಮಹಿಳೆಯರು ಸಂಪೂರ್ಣವಾಗಿ ತೊಡಗಿಸಿಕೊಂಡು ಯಶಸ್ಸುಗೊಳಿಸುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುವ ತಾಯಂದಿರು ಸಮಾಜದ ಶಕ್ತಿ. ಮಹಿಳೆಯರು ತಾನು ಕಲಿಯುವುದರ ಮೂಲಕ ತನ್ನ ಮಕ್ಕಳಿಗೂ ಕಲಿಸಿ ಭವಿಷ್ಯದ ರೂವಾರಿಗಳಾಗುತ್ತಾರೆ. ಮುಂದಿನ ಪೀಳಿಗೆಗೆ ಕಲೆಯನ್ನು ಪಸರಿಸುವ ಕಾರ್ಯ ಮಹಿಳೆಯರಿಂದ ಯಶಸ್ಸು ಕಾಣುವುದಕ್ಕೆ ಸಾಧ್ಯ” ಎಂದರು. ಸಮಾರಂಭದಲ್ಲಿ ಕಲಾ ಪ್ರೋತ್ಸಾಹಕ ಆನಂದ ಉರಾಳ್ ಹಾಗೂ ಯಕ್ಷಗುರು ಸುಧಾ ಮಣೂರು ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಅಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ಮಂಜುನಾಥ ಕೆದಲಾಯ ಮಾತನಾಡಿ “ಮಹಿಳೆಯರು ಕಲಾ ವಲಯದಲ್ಲಿ ಕಾಲಿಟ್ಟರೆ ಮನೆಯ ಮಕ್ಕಳು ಕಲಿತಂತೆ. ತನ್ನ ಆಸಕ್ತಿಯನ್ನು ಮಕ್ಕಳಲ್ಲಿ ತೋರಿಸಿ,…

Read More

ಮೈಸೂರು : ಸ್ಪಂದನ ಸಾಂಸ್ಕೃತಿಕ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಸ್ಮಯ ಪ್ರಕಾಶನದ ವತಿಯಿಂದ ರಾಜ್ಯ ಮಟ್ಟದ ಯುಗಾದಿ ಕವಿಗೋಷ್ಠಿಯನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ನಾಡಿನ ಆಸಕ್ತ ಕವಿಗಳಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ. ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಯಾವುದೇ ವಯೋಮಾನದ ಕವಿ-ಕವಯತ್ರಿಯರು ಯಾವುದೇ ವಸ್ತು ವಿಷಯ ಕುರಿತು ಕವನಗಳನ್ನು ರಚಿಸಬಹುದು. ಆದರೆ, ಕವನಗಳು ಗರಿಷ್ಟ ಇಪ್ಪತ್ತು ಸಾಲುಗಳ ಮಿತಿಯೊಳಗೆ ಇರಬೇಕು. ಕವನ /ಗಜಲುಗಳಾದರೆ ಎರಡನ್ನೂ ಅಥವಾ ಗರಿಷ್ಠ ಆರು ಸಾಲುಗಳ ಮಿತಿಯೊಳಗಿನ ಚುಟುಕು, ವಚನ, ಹನಿಗವನಗಳಾದರೆ ಎಂಟನ್ನೂ ಕಳುಹಿಸಿಕೊಡಬಹುದು. ಆಯ್ಕೆಯಾದ ಕವಿಗಳಿಗೆ ದಿನಾಂಕ 06 ಏಪ್ರಿಲ್ 2025ರಂದು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುಗಾದಿ ಕವಿಮೇಳದಲ್ಲಿ ಕವನ ವಾಚನ ಮಾಡಲು ಅವಕಾಶ ನೀಡುವ ಜತೆಗೆ, ಪ್ರತಿಯೊಬ್ಬ ಕವಿಗೂ ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಮೊದಲು ಕವನಗಳನ್ನು ಕಳುಹಿಸಿದ 60…

Read More

ಬೆಂಗಳೂರು : ದೀಪಾ ಭಸ್ತಿಯವರು ಇಂಗ್ಲೀಷ್ ಗೆ ಅನುವಾದಿಸಿರುವ ಬಾನು ಮುಷ್ತಾಕ್ ಅವರ ಸಣ್ಣಕಥೆಗಳ ಸಂಕಲನ ‘ಹಾರ್ಟ್ ಲ್ಯಾಂಪ್’ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಪ್ರಧಾನ ಸುತ್ತಿಗೆ ಆಯ್ಕೆಯಾಗಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ಅಪಾರ ಸಂತಸ ವ್ಯಕ್ತ ಪಡಿಸಿ, ಕೃತಿಯು ಅಂತಿಮ ಸುತ್ತಿಗೂ ಆಯ್ಕೆಯಾಗಲಿ, ಪ್ರಶಸ್ತಿಗೆ ಕೂಡ ಆಯ್ಕೆಯಾಗಲಿ, ಈ ಮೂಲಕ ಐವತ್ತು ಸಾವಿರ ಪೌಂಡ್ ಗಳ (ಸರಿಸುಮಾರು 55 ಲಕ್ಷ ರೂಪಾಯಿಗಳು) ಪುರಸ್ಕಾರ ಮೊಟ್ಟ ಮೊದಲಿಗೆ ಕನ್ನಡಕ್ಕೆ ಲಭಿಸಲಿ, ಈ ಮೂಲಕ ಕನ್ನಡದ ಕೀರ್ತಿ ಪತಾಕೆ ಜಾಗತಿಕವಾಗಿ ಹಾರಲಿ ಎಂದು ಆಶಿಸಿದ್ದಾರೆ. ಇದಕ್ಕೆ ಕಾರಣರಾದ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಇವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಬಾನು ಮುಷ್ತಾಕ್ ಇವರ ‘ಹಸೀನಾ’ ಕಥೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿಯವರು ನಿರ್ದೇಶಿಸಿದ ಚಿತ್ರ ರಾಷ್ಟ್ರ ಪುರಸ್ಕಾರವನ್ನು ಪಡೆದಿರುವುದನ್ನು ನೆನಪು ಮಾಡಿಕೊಂಡಿರುವ ಅವರು, ಇನ್ನೊಮ್ಮೆ ಬಾನು ಮುಷ್ತಾಕ್ ಇವರಿಂದ ಇತಿಹಾಸ ಸೃಷ್ಟಿಯಾಗಲಿ ಎಂದು ಆಶಿಸಿದ್ದಾರೆ. 2023ನೇ ಇಸವಿಯಲ್ಲಿ ಬಾನು…

Read More

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 08 ಮಾರ್ಚ್ 2025ರಂದು ಒಂದು ದಿನದ ತುಳು – ಕನ್ನಡ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಭಾಂಗಣ ‘ಸಾಹಿತ್ಯ ಸದನ’ದಲ್ಲಿ ಹಮ್ಮಿಕ್ಕೊಳ್ಳುವ ಈ ಕಾರ್ಯಾಗಾರದಲ್ಲಿ ಖ್ಯಾತ ಭಾಷಾಂತರಕಾರರು ತುಳುವಿನಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ತುಳುವಿಗೆ ಭಾಷಾಂತರ ಮಾಡುವಾಗ ಎದುರಾಗುವ ಸಮಸ್ಯೆಗಳನ್ನು ಕುರಿತು ತರಗತಿಗಳನ್ನು ನೀಡಲಿದ್ದಾರೆ. ಕನ್ನಡ ಮತ್ತು ತುಳು ಗೊತ್ತಿರುವ, ಅನುವಾದದಲ್ಲಿ ಆಸಕ್ತಿಯುಳ್ಳವರು ದಿನಾಂಕ 02 ಮಾರ್ಚ್ 2025ರರೊಳಗೆ ನಿಮ್ಮ ಹೆಸರು ನೋಂದಾಯಿಸಬಹುದು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು. ನೋಂದಣಿ ಶುಲ್ಕವಿಲ್ಲ. ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕಮ್ಮಟದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷೆ ಡಾ. ಸುಷ್ಮಾ ಶಂಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901041889 ಡಾ. ಸುಷ್ಮ ಶಂಕರ್…

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಆಯೋಜಿಸುವ ‘ಅಕಾಡೆಮಿಡ್ ಒಂಜಿ ದಿನ’ ಬಲೆ ತುಳು ಓದುಗ ಸರಣಿಯ 3ನೇ ಕಾರ್ಯಕ್ರಮವು ದಿನಾಂಕ 27 ಫೆಬ್ರವರಿ 2025ನೇ ಗುರುವಾರದಂದು ಬೆಳಿಗ್ಗೆ ಘಂಟೆ 10.00ಕ್ಕೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸೆಂಟ್ರಲ್ ಬ್ಯುರೋ ಆಫ್ ಕಮ್ಯುನಿಕೇಷನ್, ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ಜಿತು ನಿಡ್ಲೆ ಉದ್ಘಾತಿಸಲಿದ್ದು, ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕರಾದ ಡಾ. ಜ್ಯೋತಿ ಪ್ರಿಯಾ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಘಂಟೆ 10.30 ರಿಂದ 1.30ರ ವರೆಗೆ ಓದು ಮತ್ತು…

Read More

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ತುಪ್ಪೆಕಲ್ಲು ನರಸಿಂಹ ಶೆಟ್ಟಿ , ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ, ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ ವಿದ್ಯಾಸಾಗರ್, ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್, ಸಂಧ್ಯಾ ಆಳ್ವ, ಕವಿತಾ, ಮಮತಾ, ಗಾಯತ್ರಿ, ಪ್ರೊ. ಗಿರಿಯಪ್ಪ, ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ. ತುಪ್ಪೆಕಲ್ಲು ನರಸಿಂಹ ಶೆಟ್ಟಿ  ಚಂದ್ರಪ್ರಭಾ ದಿವಾಕರ್ ಯಶೋದಾ ಕುಮಾರಿ ರವಿಕಲಾ ಸುಂದರ್ ಬೀನಾ ವಿದ್ಯಾಸಾಗರ್ 

Read More

ಉಡುಪಿ : ಆದರ್ಶ ಶಿಕ್ಷಕ, ಕವಿ, ಲೇಖಕ, ಯಕ್ಷಗಾನ ಕಲಾವಿದರಾಗಿದ್ದ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್. ಸಿ. ಮಹೇಶ್ ಇವರ ‘ಸಾಕುತಂದೆ ರೂಮಿ’ ನಾಟಕ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು 15 ಸಾವಿರ ನಗದು ಮತ್ತು ಸನ್ಮಾನ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು 27 ಮಾರ್ಚ್ 2025 ರಂದು ನಡೆಯಲಿದೆ ಎಂದು ರಂಗಭೂಮಿ ಉಡುಪಿಯ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

Read More

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಇದರ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ವತಿಯಿಂದ ತಿಂಗಳಿಗೊಂದು ಕಾರ್ಯಕ್ರಮದಡಿ ಮಿಡಿದ ಪೊಲೀಸ್ ಹೃದಯಗಳಿಂದ ಘೋಷವಾಕ್ಯದ ‘ಪ್ರತಿಭೋತ್ಸವ’ ಕಾರ್ಯಕ್ರಮವು ದಿನಾಂಕ 24 ಫೆಬ್ರವರಿ 2025ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಯಿತು. ಜನಪದ ಗೀತೆ ಮತ್ತು ಭಾವಗೀತೆಗಳ ಸಂಗಮದ ‘ಪ್ರತಿಭೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ಎಂ. ಪಿ. ಕೇಶವ ಕಾಮತ್ ಮಾತನಾಡಿ “ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳಲ್ಲಿ ಅಡಗಿರುವ ಕಲಾಪ್ರತಿಭೆಯನ್ನು ಅನಾವರಣಗೊಳಿಸಲು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸದ್ಬಳಕೆಯಾಗಬೇಕು. ಕಾನೂನನ್ನು ಕಾಪಾಡುವ ಪೊಲೀಸರಲ್ಲಿ ಕೂಡ ಕಲಾವಿದನಿರುತ್ತಾನೆ. ಈ ಕಲಾವಿದನ ಪ್ರತಿಭೆಯನ್ನು ಪ್ರತಿಬಿಂಬಿಸಲು ಪೊಲೀಸ್‌ ಸಾಂಸ್ಕೃತಿಕ ವೇದಿಕೆ ಹೆಚ್ಚು ಉಪಯುಕ್ತವಾಗಿದೆ. ಇದೇ ವೇದಿಕೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಕ್ಕಳ ಪ್ರತಿಭೆ ಕೂಡ ಅನಾವರಣಗೊಳ್ಳಬೇಕು. ಇದರಿಂದ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ದೊರೆತಂತಾಗುತ್ತದೆ ಮತ್ತು ಶಾಲಾ, ಕಾಲೇಜುಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಸ್ಫೂರ್ತಿ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ 27ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭವು ದಿನಾಂಕ 21 ಫೆಬ್ರವರಿ 2025ರ ಶುಕ್ರವಾರದಂದು ಮಗಳೂರಿನ ಕೊಣಾಜೆಯಲ್ಲಿರುವ ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಿತು. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಡಾ. ಬಿ. ಪ್ರಭಾಕರ ಶಿಶಿಲ ಮಾತನಾಡಿ “ರಾಜ್ಯದಲ್ಲಿ ಒಂದರಿಂದ 10ನೆಯ ತರಗತಿವರೆಗೆ ಎಲ್ಲಾ ಶಾಲೆಗಳಲ್ಲಿ ಕನ್ನಡ ಭಾಷಾ ಕಲಿಕೆ ಕಡ್ಡಾಯವಾಗಬೇಕು. ಸುಗ್ರೀವಾಜ್ಞೆಯ ಮೂಲಕವಾದರೂ ಇದರ ಅನುಷ್ಠಾನವಾಗಬೇಕು. ಆಂಗ್ಲ ಭಾಷಾ ಕಲಿಕೆ ಬೇಡವೆಂದೇನೂ ಅಲ್ಲ. ಆದರೆ ಕನ್ನಡಕ್ಕೆ ಪ್ರಥಮ ಆದ್ಯತೆ ಸಿಗಬೇಕು. ಇಂಗ್ಲಿಷ್ ಭಾಷೆ ಲಿಂಕ್ ಲ್ಯಾಂಗ್ವೆಜ್ ಆಗಿ ಕಲಿಯುವಂತಾಗಬೇಕು. ಆಗ ಕನ್ನಡ ಇನ್ನಷ್ಟು ಉತ್ತುಂಗಕ್ಕೇರಲಿದೆ. ಸಾಹಿತ್ಯ ಸಮ್ಮೇಳನಕ್ಕೆ ಬರುವ ಮಂದಿ ತಮ್ಮ ಮಕ್ಕಳನ್ನೂ ಕರೆತರಬೇಕು. ಸಾಹಿತ್ಯ ಪುಸ್ತಕದ ಪರಿಚಯವನ್ನು ಮಕ್ಕಳಿಗೆ ಕಲಿಸಿಕೊಬೇಕು. ವೀಕೆಂಡ್‌ಲ್ಲಿ ಹೆತ್ತವರು ತಮ್ಮ ಮಕ್ಕಳನ್ನು ಬೀಚ್, ಮಾಲ್‌ಗಳಿಗೆ ಕರೆದೊಯ್ಯುವಂತೆ ಸಾಹಿತ್ಯ ಕಾರ್ಯಕ್ರಮಗಳಿಗೂ ಕರೆತರಬೇಕು. ಪ್ರತಿಯೊಂದು ಮನೆಯಲ್ಲೂ ಒಂದು ಪುಟ್ಟ ಗ್ರಂಥಾಲಯವಿರಬೇಕು. ಆರಾಧನಾ ಕೇಂದ್ರ ಗಳಲ್ಲೂ ಗ್ರಂಥಾಲಯಗಳ…

Read More

ಬದಿಯಡ್ಕ : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ವತಿಯಿಂದ ಶ್ರೀ ಎಂ.ಕೆ. ಜಿನಚಂದ್ರನ್ ದತ್ತಿ ಹಾಗೂ ಶ್ರೀಮತಿ ಕಮಲಮ್ಮ ದತ್ತಿ ‘ಉಪನ್ಯಾಸ ಮತ್ತು ಕವಿ ಕಾವ್ಯ ಸಂವಾದ’ ಕಾರ್ಯಕ್ರಮವನ್ನು ದಿನಾಂಕ 01 ಮಾರ್ಚ್ 2025ರಂದು ಅಪರಾಹ್ನ 2-30 ಗಂಟೆಗೆ ಬದಿಯಡ್ಕದ ಸಂಸ್ಕೃತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶ್ರೀ ಎಂ.ಕೆ. ಜಿನಚಂದ್ರನ್ ದತ್ತಿ ಉಪನ್ಯಾಸದಲ್ಲಿ ಖ್ಯಾತ ವಾಗ್ಮಿ ಶ್ರೀಮತಿ ಆಯಿಶಾ ಪೆರ್ಲ ಇವರು ‘ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ’ ಹಾಗೂ ಶ್ರೀಮತಿ ಕಮಲಮ್ಮ ದತ್ತಿ ಉಪನ್ಯಾಸದಲ್ಲಿ ಪ್ರಾಧ್ಯಾಪಕರಾದ ಡಾ. ಸುಭಾಷ್ ಪಟ್ಟಜೆ ಇವರು ‘ಕನ್ನಡ ಕಥಾ ಸಾಹಿತ್ಯಕ್ಕೆ ಕಾಸರಗೋಡಿನ ಕೊಡುಗೆ’ ಎಂಬ ವಿಷಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಬಳಿಕ ಕವಿತಾ ಕೌತುಕ ಸರಣಿ -2ರಲ್ಲಿ ‘ಕವಿ ಕಾವ್ಯ ಸಂವಾದ’ ಹಿರಿಯ ಸಾಹಿತಿ ರಾಧಾಕೃಷ್ಣ…

Read More