Subscribe to Updates
Get the latest creative news from FooBar about art, design and business.
Author: roovari
ಮೇಲುಕೋಟೆ : ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ, ಪು.ತಿ.ನ. ಟ್ರಸ್ಟ್ (ರಿ.) ಮೇಲುಕೋಟೆ ಮತ್ತು ಕರ್ನಾಟಕ ಸಂಘ ಮಂಡ್ಯ ಇವರ ಸಹಯೋಗದೊಂದಿಗೆ ದಿ. ಸುಘೋಷ ಕೌಲಗಿರವರ ಸವಿ ನೆನಪಿಗಾಗಿ ಆಯೋಜಿಸುವ ‘ಸುಗ್ಗಿ ಮಕ್ಕಳ ನಾಟಕೋತ್ಸವ -2025’ವನ್ನು ದಿನಾಂಕ 01 ಮತ್ತು 02 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಮಾರ್ಚ್ 2025ರಂದು ಸದ್ವಿದ್ಯಾ ರಂಗತಂಡ ಮಂಡ್ಯ ಇವರು ಕುವೆಂಪು ರಚಿಸಿರುವ ಬೊಮ್ಮನಹಳ್ಳಿಯ ಕಿಂದರಿ ಜೋಗಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಈ ನಾಟಕಕ್ಕೆ ದಿಗ್ವಿಜಯ ಹೆಗ್ಗೋಡು ಇವರು ಸಂಗೀತ ನೀಡಿದ್ದು, ಅಜಯ್ ನೀನಾಸಂ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ. ದಿನಾಂಕ 02 ಮಾರ್ಚ್ 2025ರಂದು ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ಮೂಡಲಪಾಯ ಯಕ್ಷಗಾನ ಪ್ರಸಂಗ ‘ಕರ್ಣ ಅರ್ಜುನರ ಕಾಳಗ’ ಪ್ರದರ್ಶನಗೊಳ್ಳಲಿದೆ. ರವೀಂದ್ರ ತಲಕಾಡು ಇವರು ಭಾಗವತಿಕೆ ಮತ್ತು ಮದ್ದಳೆ, ನಾರಾಯಣಸ್ವಾಮಿ ಮುಖವಾಣಿ,…
ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮವು ದಿನಾಂಕ 25 ಫೆಬ್ರವರಿ 2025ರಂದು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿದ ಸಾಹಿತಿ, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಉಳುವಂಗಡ ಕಾವೇರಿ ಉದಯ “ಜ್ಞಾನವನ್ನು ಯಾರು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ. ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಸಿಕ್ಕಿ ಅಭ್ಯರ್ಥಿಗಳು ಮನಸ್ಸು ಮಾಡಿದರೆ ಯಾವ ಸಾಧನೆ ಬೇಕಾದರೂ ಮಾಡಬಹುದು. 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಹತ್ತನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಮೊದಲಿಗಳಾಗಿ ಬಂದ ಯು. ಅದವಿಯಾ ಇದಕ್ಕೆ ಸಾಕ್ಷಿ. ಮಾದಾಪುರದಂತಹ ಗ್ರಾಮೀಣ ಪ್ರದೇಶದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲೆಗೆ ಪ್ರಥಮ…
ಬೆಂಗಳೂರು : ಯಕ್ಷ ಸಂಭ್ರಮ (ರಿ.) ಹುಳಿಮಾವು ಬೆಂಗಳೂರು ಇವರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ‘ಯಕ್ಷ ಸಪ್ತಕ’ ಯಕ್ಷಗಾನ ಆಖ್ಯಾನಗಳು ದಿನಾಂಕ 01, 02, 08 ಮತ್ತು 09 ಮಾರ್ಚ್ 2025ರಂದು ಬೆಂಗಳೂರಿನ ಹುಳಿಮಾವು ಶ್ರೀ ಕ್ಷೇತ್ರ ಭಗವತಿ ದೇವಸ್ಥಾನದಲ್ಲಿ ಪ್ರದರ್ಶನಗೊಳ್ಳಲಿವೆ. ದಿನಾಂಕ 01 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಹುಳಿಮಾವು ಘಟಕದ ಮಕ್ಕಳಿಂದ ‘ಶ್ರೀಕೃಷ್ಣ ಲೀಲೆ – ಕಂಸವಧೆ’ ಮತ್ತು ಸಂಜೆ 6-00 ಗಂಟೆಗೆ ಹೆಬ್ಬಾಳ ಘಟಕದ ಕಲಾವಿದರಿಂದ ‘ಶರಸೇತು ಬಂಧನ’, ದಿನಾಂಕ 02 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಮಹಿಳಾ ತಂಡದಿಂದ ‘ಭಸ್ಮಾಸುರ ಮೋಹಿನಿ’ ಮತ್ತು ಸಂಜೆ 6-00 ಗಂಟೆಗೆ ಚಂದಾಪುರ ಘಟಕದ ಕಲಾವಿದರಿಂದ ‘ಶ್ರೀದೇವಿ ಮಹಾತ್ಮೆ’, ದಿನಾಂಕ 08 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಕೆಂಗೇರಿ ಘಟಕದ ಕಲಾವಿದರಿಂದ ‘ಚೂಡಾಮಣಿ’ ಮತ್ತು ಸಂಜೆ 6-00 ಗಂಟೆಗೆ ಮಹಿಳಾ ತಂಡದಿಂದ ‘ಶಶಿಪ್ರಭಾ ಪರಿಣಯ’ ಹಾಗೂ ದಿನಾಂಕ 09 ಮಾರ್ಚ್ 2025ರಂದು ಸಂಜೆ 6-00 ಗಂಟೆಗೆ…
ಬೆಂಗಳೂರು: ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ ದಿನಾಂಕ 25 ಫೆಬ್ರವರಿ 2025ರ ಮಂಗಳವಾರ ಸಂಜೆ ನಿಧನರಾದರು. ಅವರಿಗೆ 97ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ವಿಮಲಾ ರಂಗಾಚಾರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ. ಬೆಂಗಳೂರಿನ ಎಂ. ಇ. ಎಸ್. ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದ ವಿಮಲಾ ರಂಗಾಚಾರ್ ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದವರು. ಕಮಲಾದೇವಿ ಚಟ್ಟೋಪಾಧ್ಯಾಯ ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ವಿಮಲಾ ರಂಗಾಚಾರ್ ಅವರು ಲಲಿತಕಲೆಗಳ ಮಹಾಪೋಷಕಿಯಾಗಿದ್ದರು. ಮಲ್ಲೇಶ್ವರಂನಲ್ಲಿ ವಾಸವಾಗಿದ್ದ ವಿಮಲಾ ರಂಗಾಚಾರ್ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು ವಿದೇಶದಲ್ಲಿ ನೆಲೆಸಿರುವ ಮಗಳು ರೇವತಿ ಬೆಂಗಳೂರಿಗೆ ಮರಳಿದ ಬಳಿಕ ಗುರುವಾರ ನಗರದಲ್ಲಿ ಮೃತರ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು ತಿಳಿದುಬಂದಿದೆ.
ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನರ್ತನಾವರ್ತನ’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಸಂಜೆ 5-00 ಗಂಟೆಗೆ ಪುತ್ತೂರಿನ ಜೈನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತರಾದ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದು, ಪುತ್ತೂರಿನ ವಿವೇಕಾನಂದ ಮಹಾ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಂಗಳೂರಿನ ಹಿರಿಯ ಪತ್ರಿಕಾ ಛಾಯಾ ಚಿತ್ರಕಾರರಾದ ಶ್ರೀ ಯಜ್ಞ ಇವರಿಗೆ ‘ಕಲಾಶ್ರಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಮುಂಬೈಯ ಶ್ರೀಮತಿ ಮೀರಾ ಶ್ರೀನಾರಾಯಣನ್ ಇವರು ಭರತನಾಟ್ಯ ಪ್ರಸ್ತುತಿ ನೀಡಲಿದ್ದು, ಹಾಡುಗಾರಿಕೆಯಲ್ಲಿ ಶ್ರೀ ಬೀಜೇಶ್ ಕೃಷ್ಣ, ನಟುವಾಂಗದಲ್ಲಿ ಶ್ರೀಮತಿ ಶ್ರೀಲತಾ ಆಚಾರ್ಯ ಮೃದಂಗದಲ್ಲಿ ಶ್ರೀ ಚಾರುದತ್ತ್ ವಿ.ವಿ. ಮತ್ತು ಕೊಳಲಿನಲ್ಲಿ ಶ್ರೀ ಹರಿಪ್ರಸಾದ್ ಇವರು ಸಹಕರಿಸಲಿದ್ದಾರೆ.
ಮಂಜನಾಡಿ : ಮೇಲ್ತೆನೆ (ಬ್ಯಾರಿ ಎಲ್ತ್ಕಾರ್-ಕಲಾವಿದಮರೊ ಕೂಟ) ದೇರಳಕಟ್ಟೆ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಕಾರ್ಯಾಗಾರ ಮತ್ತು ಕವಿಗೋಷ್ಠಿಯು ದಿನಾಂಕ 18 ಫೆಬ್ರವರಿ 2025ರ ಮಂಗಳವಾರದಂದು ಮಂಜನಾಡಿಯ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿರುವ ಶರಫುಲ್ ಉಲಮಾ ಅಡಿಟೋರಿಯಂನಲ್ಲಿ ನಡೆಯಿತು. ಅಲ್ ಮದೀನಾದ ಮುದರ್ರಿಸ್ ಮುಹಮ್ಮದ್ ಕುಂಞ ಅಮ್ಮದಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮೇಲೆನೆಯ ಅಧ್ಯಕ್ಷ ವಿ.ಇಬ್ರಾಹೀಂ ನಡುಪದವು ಮಾತನಾಡಿ “ಮೇಲ್ತೆನೆಯು ಯುವ ಬ್ಯಾರಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ, ಭಾಷಾಭಿಮಾನ ಹುಟ್ಟಿಸಲು ಪ್ರಯತ್ನಿಸುತ್ತಿದೆ” ಎಂದರು. ಅತಿಥಿಗಳಾಗಿ ಅಲ್ ಮದೀನಾ ದಅವಾ ಕಾಲೇಜಿನ ಪ್ರಾಂಶುಪಾಲರಾದ ಸೈಯ್ಯದ್ ಉವೈಸ್ ಅಸ್ಸಖಾಫ್, ಅಲ್ ಮದೀನಾ ಮಹಿಳಾ ಶರೀಅತ್ ಕಾಲೇಜಿನ ಪ್ರಾಂಶುಪಾಲ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಭಾಗವಹಿಸಿದ್ದರು. ಪತ್ರಕರ್ತ ಹಂಝ ಮಲಾರ್ ಸಾಹಿತ್ಯ ಕಾರ್ಯಾಗಾರ ನಡೆಸಿದರು. ಕವಿಗಳಾದ ಬಶೀರ್ ಅಹ್ಮದ್ ಕಿನ್ಯ, ಮುಆದ್ ಜಿ. ಎಂ., ಅಬ್ದುಲ್ ರಝಾಕ್ ಮಾಸ್ಟರ್ ನಾವೂರು, ಎ.ಕೆ.ಮುಡಿಪು, ಅಶೀರುದ್ದೀನ್ ಸಾರ್ತಬೈಲ್, ಸಿ.ಎಂ.ಶರೀಫ್ ಪಟ್ಟೋರಿ, ಅಬೂಬಕರ್…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 25 ಫೆಬ್ರವರಿ 2025ರಂದು ಕನ್ನಡ ಪರಿಷತ್ತಿನ ಪ್ರತಿಷ್ಟಿತ ದತ್ತಿ ಪ್ರಶಸ್ತಿಗಳಾದ ಪ್ರೊ. ಸಿ.ಎಚ್. ಮರಿದೇವರು ಪ್ರತಿಷ್ಠಾನ ದತ್ತಿ ಹಾಗೂ ರಾಜಸಭಾ ಭೂಷಣ ಶ್ರೀ ಕರ್ಪೂರ ಶ್ರೀನಿವಾಸ ರಾವ್ ದತ್ತಿ ಹಾಗೂ ಕರ್ಪೂರ ರಾಮರಾವ್ ಜನ್ಮ ಶತಾಬ್ದಿ ದತ್ತಿ ಪುರಸ್ಕಾರಗಳ ಪ್ರದಾನ ಸಮಾರಂಭವು ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿಗೆ ಕಟ್ಟಡ ಮತ್ತು ಬುನಾದಿ ಎರಡೂ ಮುಖ್ಯವೆಂದು ರೂಪಕದ ಮೂಲಕ ಹೇಳಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಆಧುನಿಕತೆಗೆ ಸ್ಪಂದಿಸುವಂತೆಯೇ ತನ್ನ ನಿರ್ಮಾತೃಗಳನ್ನು ಪರಿಷತ್ತು ಸದಾ ಸ್ಮರಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿ ಇಟ್ಟಿಗೆಯೂ ಕರ್ಪೂರ ಶ್ರೀನಿವಾಸ ರಾಯರು ಪರಿಷತ್ತಿಗೆ ನೀಡಿದ ಕೊಡುಗೆಗಳ ಬಗ್ಗೆ ಹೇಳುತ್ತದೆ. ಅವರ ಮೊಮ್ಮಗಳು ಮತ್ತು ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಅಪಾರ ಸಂತೋಷ ತಂದಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳಿಗೆ ವಿಶಿಷ್ಟ ಪರಂಪರೆ ಇದ್ದು, ಅದರ ದಾನಿಗಳು ಪರಿಷತ್ತಿನ ಮೇಲೆ ಅಪಾರ…
ದೇಲಂಪಾಡಿ : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ ದೇಲಂಪಾಡಿ ಇವರ ಸಹಕಾರದಲ್ಲಿ ಯಕ್ಷಗಾನ ಪ್ರಸಂಗಕರ್ತ, ಸಾಹಿತಿ, ಕಲಾವಿದ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಇವರ ‘ಸ್ಮರಣಾಂಜಲಿ’ ಬದುಕು – ಬರಹದ ಬಗ್ಗೆ ಮೆಲುಕು ಕಾರ್ಯಕ್ರಮವನ್ನು ದಿನಾಂಕ 02 ಮಾರ್ಚ್ 2025ರಂದು ಅಪರಾಹ್ನ 2-00 ಗಂಟೆಗೆ ದೇಲಂಪಾಡಿಯ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ದಿವಂಗತ ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಇವರ ಭಾವಚಿತ್ರಕ್ಕೆ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಂದ ಪುಷ್ಪಾರ್ಚನೆ ನಡೆಯಲಿದ್ದು, ನಿವೃತ್ತ ಮುಖ್ಯ ಶಿಕ್ಷಕರಾದ ಡಿ. ರಾಮಣ್ಣ ಮಾಸ್ಟರ್ ಸಂಸ್ಮರಣೆ ಮಾಡಲಿರುವರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾದ ವಿರಾಜ್ ಅಡೂರು ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ –…
ಕುಶಾಲನಗರ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲೂಕು ಘಟಕ ಇವರ ಆಶ್ರಯದಲ್ಲಿ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡ ಧತ್ತಿ ‘ಜಾನಪದ’ ಕುರಿತು ಉಪನ್ಯಾಸ ಕಾರ್ಯಕ್ರಮವು ದಿನಾಂಕ 27 ಫೆಬ್ರವರಿ 2025ರಂದು ಸಂಜೆ 06-00 ಗಂಟೆಗೆ ಕುಶಾಲನಗರ ಗುಮ್ಮನಕೊಲ್ಲಿ ಬೃಂದಾವನ ಬಡಾವಣೆಯಲ್ಲಿ ನಡೆಯಲಿದೆ. ಕ.ಸಾ.ಪ. ಕುಶಾಲನಗರ ಇದರ ಅಧ್ಯಕ್ಷರಾದ ಕೆ.ಎಸ್. ನಾಗೇಶ್ ಇವರ ಅಧ್ಯಕ್ಷತೆಯಲ್ಲಿ ನಿವೃತ್ತ ಶಿಕ್ಷಕಿ ಶ್ರೀಮತಿ ಉಮಾದೇವಿ ಸೋಮಪ್ಪ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಶಿರಂಗಾಲ ಉಪನ್ಯಾಸಕರಾದ ಶ್ರೀ ಹಂಡರಂಗಿ ನಾಗರಾಜ್ ಇವರು ಉಪನ್ಯಾಸ ನೀಡಲಿದ್ದಾರೆ.
ಮಂಗಳೂರು: ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ, ಜರ್ನಿ ಥಿಯೇಟರ್ ಗ್ರೂಪ್, ಸೇಂಟ್ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗ ಹಾಗೂ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ನಿರಂಜನ ಬದುಕಿನ ‘ನೂರರ’ ಅವಲೋಕನ ಕಾರ್ಯಕ್ರಮ ದಿನಾಂಕ 22 ಫೆಬ್ರವರಿ 2025ರ ಶನಿವಾರದಂದು ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕೃತಿಗಳ ಅವಲೋಕನ, ನಾಟಕ ರೂಪದಲ್ಲಿ ಕಾದಂಬರಿಯ ಪರಿಚಯ, ವಿದ್ಯಾರ್ಥಿಗಳಿಂದ ವಿಚಾರ ಮಂಡನೆ ಮುಂತಾದ ಕಾರ್ಯಕ್ರಮ ವೈವಿಧ್ಯಗಳು ಸಾಹಿತಿ ಕುಳ್ಳುಂದ ಶಿವರಾಯ ಎಂಬ ‘ನಿರಂಜನ’ರ ನೂರರ ನೆನಪಿಗೆ ಬಿಸುಪು ತುಂಬಿದವು. ಕಾರ್ಯಕ್ರಮವನ್ನು ಡೋಲು ನುಡಿಸಿ ಉದ್ಘಾಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಮಾತನಾಡಿ “ವೈರುಧ್ಯಗಳು ತುಂಬಿದ್ದ ನಿರಂಜನರ ಬದುಕು ಕಾವ್ಯದ ಝರಿಯಂತಿತ್ತು. ನಿರಂಜನ ಸೇರಿದಂತೆ ಪ್ರಗತಿಶೀಲ ಕಾಲಘಟ್ಟದ ಸಾಹಿತಿಗಳು ಮಾರ್ಕ್ಸ್ವಾದಿಗಳಾಗಿದ್ದರು. ಸೈದ್ಧಾಂತಿಕವಾಗಿ ಒಂದು ಬಗೆಯ ಹಿಂಸೆಯನ್ನು ಒಪ್ಪಿಕೊಂಡವರು ಮಾರ್ಕ್ಸ್ವಾದಿಗಳು. ಆದರೆ ಅಹಿಂಸಾ ತತ್ವವನ್ನು ಪಾಲಿಸಿದ ಗಾಂಧೀವಾದಕ್ಕೆ ನಿರಂಜನರು ಮಾರುಹೋಗಿದ್ದರು. ಬಂಡವಾಳಶಾಹಿ ಒಲವಿನ ಸಮಾಜವಾದವನ್ನು ಪ್ರತಿಪಾದಿಸಿದ್ದ ನೆಹರು ಕೂಡ ನಿರಂಜನರಿಗೆ ಇಷ್ಟವಾಗಿದ್ದರು. ಈ…