Author: roovari

ಲೋಹಿಯಾ ಹೇಳುವಂತೆ ಜಾತಿ, ಭಾಷೆ, ಧರ್ಮ ಮತ್ತು ಸ್ಥಳೀಯತೆ ಭಾರತೀಯ ಸಮಾಜದ ನಾಲ್ಕು ಮುಖ್ಯ ಮಹತ್ವದ ಚಾಲಕ ಶಕ್ತಿಗಳು. ಕನ್ನಡತನ ಎನ್ನುವುದೂ ಇಂದು ಕನ್ನಡ ನಾಡಿಗಷ್ಟೇ ಸೀಮಿತವಾಗಿರದೆ ನಾಡಿನ ನುಡಿ ಸಂಸ್ಕೃತಿ ಪ್ರಾದೇಶಿಕತೆ ಜನಜೀವನದ ಭಾಗವಾಗಿರುವುದು ನಾವು ಕಾಣುತ್ತಿದ್ದೇವೆ. ಡಾ. ಸರ್ಜಾಶಂಕರ ಹರಳಿಮಠ ಇವರ ಪಿ.ಎಚ್.ಡಿ ಪ್ರಬಂಧ ‘ಕನ್ನಡತನ’ ಕನ್ನಡ ಅಸ್ಮಿತೆಯ ಶತಮಾನದ ಚಿಂತನೆಗಳು, ಜಾಗತೀಕರಣದ ಹುಚ್ಚು ಹೊಳೆಯಲ್ಲಿ ಕೊಚ್ಚಿ ಹೋಗದಂತೆ ಕನ್ನಡತನ ತನ್ನ ಅಸ್ಮಿತೆಯನ್ನು ಕಟ್ಟಿಕೊಳ್ಳುವ ವಿವಿಧ ಮಾದರಿಗಳ ಒಟ್ಟಂದದ ಚಿತ್ರಣವನ್ನು ನೀಡುವ ಆಮೂಲಾಗ್ರವಾಗಿ ಅಧ್ಯಯನ ಮಾಡಿ ಬರೆದ ಗ್ರಂಥ. ಡಾ. ಸರ್ಜಾಶಂಕರ್ ಹರಳಿಮಠ ಇವರ ವಿಶೇಷತೆ ಇರುವುದು ಅವರು ಲೇಖಕ, ಕಥೆಗಾರ ಅನ್ನುವುದಕ್ಕಿಂತಲೂ ಮುಖ್ಯವಾಗಿ ಬಹು ರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗಿಯಾಗಿದ್ದವರು, ಜನಪರ ಚಳವಳಿಗಳಲ್ಲಿ ಸ್ವತಃ ತೊಡಗಿಸಿಕೊಂಡವರು, ಹೀಗಾಗಿ ಕನ್ನಡತನ ಎನ್ನುವ ಅಸ್ಮಿತೆಯನ್ನು ತನ್ನ ವೈವಿಧ್ಯಮಯ ಅನುಭವ ಲೋಕಕ್ಕೆ ದಕ್ಕಿದಂತೆ ವಿಭಿನ್ನ ನೆಲೆಯಲ್ಲಿ ಗ್ರಹಿಸಿದವರು, ದೇಸಿ ಸಂಸ್ಕೃತಿ ಮಳಿಗೆ ಪ್ರಾರಂಭಿಸಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವಲ್ಲಿ ಇವರು ಶ್ರಮಿಸಿದವರು…

Read More

ಬೆಂಗಳೂರು : ವಯೋಲಿನ್ ಅಕಾಡೆಮಿ ಮತ್ತು ಸಪ್ತಕ್ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಸ್ವರ ಮಲ್ಹಾರ್’ ಸಂಗೀತ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಶ್ರೀ ನರಸಿಂಹರಾಜ ಕಾಲೋನಿಯಲ್ಲಿರುವ ಪಠಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ತೇಜಸ್ ಉಪಾಧ್ಯೆ ಇವರಿಂದ ವಯೋಲಿನ್ ಸೋಲೋ, ರಾಹುಲ್ ಶರ್ಮಾ ಇವರ ಸಂತೂರ್ ಮತ್ತು ಓಜಸ್ ಅಧಿಯಾ ಇವರ ತಬಲಾ ವಾದನ ಹಾಗೂ ಪಂಡಿತ್ ಆನಂದ್ ಭಾಟೆ ಇವರ ಹಾಡುಗಾರಿಕೆಗೆ ಭರತ್ ಕಾಮತ್ ತಬಲಾದಲ್ಲಿ ಮತ್ತು ಸುಯೋಗ ಕುಂಡಲ್ಕರ್ ಹಾರ್ಮೋನಿಯಂನಲ್ಲಿ ಸಾಥ್ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 70194 34992 ಮತ್ತು 95355 11888 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಕೊಡಿಯಾಲ್ ಬೈಲ್‌ನ ಶಾರದಾ ವಿದ್ಯಾಲಯದ ಗ್ರಂಥಾಲಯಕ್ಕೆ ನೂರು ಪುಸ್ತಕಗಳ ಹಸ್ತಾಂತರ ಸಮಾರಂಭವು ದಿನಾಂಕ 21 ಜುಲೈ 2025ರಂದು ನಡೆಯಿತು. ಸಮಾರಂಭದಲ್ಲಿ ಓದಿನ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕಿಯಾದ ಡಾ. ಮೀನಾಕ್ಷಿ ರಾಮಚಂದ್ರ “ಪುಸ್ತಕ ಓದುವ ಹವ್ಯಾಸದಿಂದ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ, ಅಪಾರ ಜ್ಞಾನ ಸಂಪತ್ತು ಪ್ರಾಪ್ತಿಯಾಗುತ್ತದೆ. ವಿದ್ಯಾರ್ಥಿಗಳು ಜ್ಞಾನ, ಬುದ್ದಿ, ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಕ್ರಮಗಳ ಓದಿನ ಜತೆಗೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯವಾಗಿದೆ. ಓದು ದೈನಂದಿನ ಬದುಕಿನ ಒಂದು ಅಂಗವಾಗಬೇಕು. ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಪುಸ್ತಕ ಓದಲು ಸಮಯ ಮೀಸಲಿರಿಸಬೇಕು” ಎಂದು ಹೇಳಿದರು. ಶಾರದಾ ವಿದ್ಯಾಲಯದ ಪ್ರಾಂಶುಪಾಲ ದಯಾನಂದ ಕಟೀಲ್ ಮಾತನಾಡಿ “ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದ ಉಪಯುಕ್ತ ಪುಸ್ತಕಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಮೂಲಕ ಸದ್ವಿನಿಯೋಗ ಪಡಿಸಿಕೊಳ್ಳಬೇಕು” ಎಂದರು. ಅ. ಭಾ. ಸಾ. ಪ . ಇದರ ದ. ಕ.…

Read More

ಉಡುಪಿ : ಡಾ. ಎಚ್.ವಿ. ನಾಗರಾಜ ರಾವ್ ಇವರು 2025ನೇ ಸಾಲಿನ ‘ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿ’ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ, ಕಥನಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ರೂ.10,000/-(ಹತ್ತು ಸಾವಿರ) ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 16 ಆಗಸ್ಟ್ 2025ರಂದು ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ತಿಳಿಸಿರುತ್ತಾರೆ. ಡಾ. ಎಚ್.ವಿ. ನಾಗರಾಜ ರಾವ್ ಅವರು 1942ರ ಸೆಪ್ಟೆಂಬರ್ 10ರಂದು ಕರ್ನಾಟಕದ ಕೋಲಾರ ಜಿಲ್ಲೆಯ ಸೋಮೇನಹಳ್ಳಿ ಗ್ರಾಮದಲ್ಲಿ ಶ್ರೀ ವೆಂಕಟನಾರಾಯಣಪ್ಪ ಹಾಗೂ ಸತ್ಯಲಕ್ಷ್ಮಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಪ್ರಾಥಮಿಕ ಶಿಕ್ಷಣದ ಅನಂತರ ಅವರು ಗುಡಿಬಂಡೆಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಮೈಸೂರಿನ ಮಹಾರಾಜಾ ಸಂಸ್ಕೃತ ಕಾಲೇಜಿನಲ್ಲಿ ವ್ಯಾಕರಣಶಾಸ್ತ್ರ ಮತ್ತು…

Read More

ಮಂಗಳೂರು : ಅ. ಭಾ. ಸಾ. ಪ. ಮಂಗಳೂರು ತಾಲೂಕು ಮತ್ತು ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಸಹಯೋಗದಲ್ಲಿ ಸಂಸ್ಕಾರ- ಸಂಸ್ಕೃತಿ-ಜ್ಞಾನ ಪ್ರಸರಣ ಮಾಲಿಕೆಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 28 ಜುಲೈ 2025ರಂದು ಮಂಗಳೂರಿನ ಸರಕಾರೀ ಪ್ರಾಥಮಿಕ ಶಾಲೆ, ಗಾಂಧಿನಗರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಮಂಗಳೂರು ದಕ್ಷಿಣದ ಅಧ್ಯಕ್ಷರಾದ ಶ್ರೀ ಹರೀಶ್ ಅಡ್ಯಾರ್ ಮಾತನಾಡಿ “ಇದೊಂದು ವಿನೂತನವಾದ ಕಾರ್ಯಕ್ರಮ. ಹಿಂದೆ ಒವಿದ್ಯಾರ್ಥಿಗಳು ತಮ್ಮ ಮನೆಯಿಂದಲೇ ಸಂಸ್ಕಾರ ಕಲಿಯುತ್ತಿದ್ದರು. ಇಂದಿನ ವಿದ್ಯಾರ್ಥಿಗಳಿಗೆ ಅದು ದುರ್ಲಭವಾಗಿದೆ. ಅವರಿಗೆ ಅಗತ್ಯವಾಗಿ ನಾವು ಸಂಸ್ಕಾರವನ್ನು ಈ ಮೂಲಕವಾಗಿ ಕೊಡಬೇಕಾಗಿದೆ. ಆ ನಿಟ್ಟಿನಲ್ಲಿ ಅ. ಭಾ. ಸಾ. ಪ. ಕೈಗೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ ಮಾತ್ರವಲ್ಲ ನಮ್ಮನ್ನೂ ಅದರಲ್ಲಿ ಸೇರಿಸಿಕೊಂಡಿರುವುದು ನಮ್ಮ ಸೌಭಾಗ್ಯ” ಎಂದು ನುಡಿದರು. ಅಧ್ಯಕ್ಷತೆ ವಹಿಸಿದ್ದ ಅ. ಭಾ. ಸಾ. ಪ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಹರೀಶ್ ಪಿ‌. ಬಿ. ಯವರು ವಿದ್ಯಾರ್ಥಿಗಳಿಗೆ ಮಾಧ್ಯಮ ಮತ್ತು ಅಂತರ್ಜಾಲದ…

Read More

ಮೈಸೂರು : ಸಂಚಲನ ಮೈಸೂರು (ರಿ.) ಮತ್ತು ರಂಗರಥ – ಭಾರತೀಯ ಪ್ರದರ್ಶನ ಕಲಾ ಸಂಸ್ಥೆ (ರಿ.) ಜಂಟಿಯಾಗಿ ಪ್ರಸ್ತುತ ಪಡಿಸುವ ‘ನಟನಾಭ್ಯಾಸ ಶಿಬಿರ’ 10 ದಿನಗಳ ಅಭಿನಯ ಕಾರ್ಯಾಗಾರವನ್ನು ದಿನಾಂಕ 04 ಆಗಸ್ಟ್ 2025ರಿಂದ 15 ಆಗಸ್ಟ್ 2025ರವರೆಗೆ ಪ್ರತಿದಿನ ಬೆಳಿಗ್ಗೆ 6-30ರಿಂದ 9-30 ಗಂಟೆ ತನಕ ಮೈಸೂರಿನ ಕಲಾಮಂದಿರ ಆವರಣದ ತಾಲೀಮು ಕೊಠಡಿಯಲ್ಲಿ ನಡೆಯಲಿದೆ. ಆಸಿಫ್ ಕ್ಷತ್ರಿಯ ಮತ್ತು ಕುಮಾರಿ ಶ್ವೇತಾ ಶ್ರೀನಿವಾಸ್ ಇವರುಗಳು ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 98450 75762 ಮತ್ತು 80501 57443 ಸಂಖ್ಯೆಯನ್ನು ಸಂಪರ್ಕಿಸಿರಿ. http://www.rangaratha.com/form-1 ಶ್ವೇತಾ ಶ್ರೀನಿವಾಸ್ (ನಿರ್ದೇಶಕರು) : ಶ್ವೇತಾ ಶ್ರೀನಿವಾಸ್ ಅವರು ಕನ್ನಡ ರಂಗಭೂಮಿಯ ಒಬ್ಬ ಚಿರಪರಿಚಿತ ಪ್ರತಿಭಾನ್ವಿತ ನಟಿ. ಬಾಲ್ಯದಿಂದಲೂ ರಂಗಭೂಮಿಯ ಒಡನಾಟ ಹೊಂದಿರುವ ಇವರು, ನಟನೆಯ ಜೊತೆಗೆ ಸೃಜನಶೀಲ ವಸ್ತ್ರ ವಿನ್ಯಾಸ ಮತ್ತು ನೃತ್ಯ ಸಂಯೋಜನೆಗೆ ದೇಶಾದ್ಯಂತ ಹೆಸರಾದವರು. ಇದಕ್ಕಾಗಿ ಇವರು ಹಲವು ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಪಡೆದಿದ್ದಾರೆ. ನೀನಾಸಂ ಪದವೀಧರರಾದ…

Read More

ಕಾಸರಗೋಡು : ಸಂಗೀತ ಮತ್ತು ಸಂಸ್ಕೃತಿ ಪರಸ್ಪರ ಸಂಬಂಧ ಹೊಂದಿದೆ. ಕರ್ನಾಟಕ ಸಂಸ್ಕೃತಿಯಲ್ಲಿ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕ ಸಂಗೀತವು ರಾಗ, ತಾಳ ಮತ್ತು ಪಲ್ಲವಿಗಳನ್ನು ಆಧರಿಸಿದ್ದು, ಅಂಶಗಳನ್ನು ಗಮನದಲ್ಲಿಟ್ಟು ಹಾಡಿದಾಗ ಕೇಳುಗರು ಆಸ್ವಾದಿಸುತ್ತಾರೆ. ಸಂಗೀತದಿಂದ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು ಎಂದು ಚಲನಚಿತ್ರ ನಟಿ ಶೋಭಾ ಶೆಟ್ಟಿ ಹೇಳಿದರು. ರಂಗಚಿನಾರಿ ಕಾಸರಗೋಡು ಇದರ ಸಂಗೀತ ಘಟಕವಾದ ಸ್ವರ ಚಿನ್ನಾರಿ ನೇತೃತ್ವದಲ್ಲಿ ಕರಂದಕ್ಕಾಡಿನ ವದ್ಮಗಿರಿ ಕಲಾ ಕುಟೀರದಲ್ಲಿ ದಿನಾಂಕ 20 ಜುಲೈ 2025ರಂದು ಆಯೋಜಿಸಿದ ‘ಸಿ. ಅಶ್ವಥ್ ಗಾನ – ನಮನ’ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ಅಂತರ್ಧ್ವನಿ – 6 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸಲು ಪ್ರಯತ್ನಿಸುತ್ತಿರುವ ರಂಗಚಿನ್ನಾರಿ ಸಂಸ್ಥೆಯ ಕೊಡುಗೆ ಶ್ಲಾಘನೀಯ, ಇದೀಗ ಸ್ವರ ಚಿನ್ನಾರಿಯ ಮೂಲಕ ಎಲೆಮರೆಯ ಪ್ರತಿಭಾವಂತ ಸಂಗೀತ ಕಲಾವಿದರಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದರು. ರಂಗಚಿನ್ನಾರಿ ಸಂಸ್ಥೆಯ ನಿರ್ದೇಶಕ…

Read More

ಬೆಂಗಳೂರು : ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವತಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಪ್ರೊ. ಜಯಪ್ರಕಾಶ್ ಗೌಡ ಇವರಿಗೆ ‘ಜೆ.ಪಿ. ಅಭಿನಂದನೆ’ ಕಾರ್ಯಕ್ರಮವನ್ನು ದಿನಾಂಕ 31 ಜುಲೈ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಚಾಮರಾಜನಗರದ ಸಿ.ಎಂ. ನರಸಿಂಹ ಮೂರ್ತಿ ಮತ್ತು ಸಂಗಡಿಗರ ಗಾಯನದೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಹಿರಿಯ ರಂಗ ಸಂಘಟಕ ಶ್ರೀನಿವಾಸ್ ಜಿ. ಕಪ್ಪಣ್ಣ ಹಾಗೂ ಹಿರಿಯ ನಾಟಕಕಾರರಾದ ಡಾ. ಚಂದ್ರು ಕಾಳೇನಹಳ್ಳಿ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಗಂಟೆ 7-15ಕ್ಕೆ ಬೆಂಗಳೂರು ಏಷಿಯನ್ ಥಿಯೇಟರ್ ಅಭಿನಯಿಸುವ ಸಿದ್ಧರಾಮ ಕೊಪ್ಪರ್ ಇವರ ನಿರ್ದೇಶನದಲ್ಲಿ ‘ನೀಗಿಕೊಂಡ ಸಂಸ’ ನಾಟಕ ಪ್ರದರ್ಶನಗೊಳ್ಳಲಿದ್ದು, ರಂಗಸ್ವಾಮಿ ಕೆ. ಇವರು ಅಭಿನಯಿಸಲಿದ್ದಾರೆ.

Read More

ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ-ಮಾಲಿಕೆ 19 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 31 ಜುಲೈ 2025ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಶ್ರೀಮತಿ ನಿಶಾ ಡಿ. ಪಣಿಕ್ಕರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ವಿದುಷಿ ದಿವ್ಯಾ ಸಂದೀಪ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

Read More

ಮಂಡ್ಯ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ, ಅರುವಿ ಟ್ರಸ್ಟ್ (ರಿ.) ಮಂಡ್ಯ, ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಹಾಗೂ ಎಸ್.ಇ.ಟಿ. ಪಾಲಿಟೆಕ್ನಿಕ್ ಮೇಲುಕೋಟೆ ಇವರ ಸಹಯೋಗದಲ್ಲಿ 2025-26ನೇ ಸಾಲಿನ ‘ಚಿಗುರು’ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಿನಾಂಕ 31 ಜುಲೈ 2025ರಂದು ಬೆಳಗ್ಗೆ 11-00 ಗಂಟೆಗೆ ಮೇಲುಕೋಟೆಯ ಎಸ್.ಇ.ಟಿ. ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಾನ್ಯ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಇವರ ಘನ ಉಪಸ್ಥಿತಿಯಲ್ಲಿ ಮಾನ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಇವರು ಉದ್ಘಾಟನೆ ಮಾಡಲಿದ್ದಾರೆ. ವಾದ್ಯ ಸಂಗೀತದಲ್ಲಿ ಕೆ.ಆರ್. ಪೇಟೆಯ ಲೋಹಿತ್ ಎಂ. ಮತ್ತು ತಂಡ, ಸುಗಮ ಸಂಗೀತದಲ್ಲಿ ಮಂಡ್ಯದ ತನ್ವಿ ಸಿ. ಮತ್ತು ತಂಡ, ಜನಪದ ಗೀತೆ ಮಂಡ್ಯದ ರಾಜೇಶ್ವರಿ ಮತ್ತು ತಂಡ, ಸಮೂಹ ನೃತ್ಯದಲ್ಲಿ ಮದ್ದೂರು ತನುಷಿ ಗೌಡ ಮತ್ತು ತಂಡ, ನಾಟಕ ಪ್ರದರ್ಶನ ಮಂಡ್ಯದ ಪೃಥ್ವಿರಾಜ್ ಕೆ.ಎಲ್. ಮತ್ತು ತಂಡ ಹಾಗೂ ಏಕಪಾತ್ರಾಭಿನಯದಲ್ಲಿ ಪಾಂಡವಪುರದ ಮೋನಿಷ್ ಎನ್. ಶೆಟ್ಟಿ ಮತ್ತು ತಂಡದವರು ಭಾಗವಹಿಸಲಿದ್ದಾರೆ.…

Read More