Author: roovari

ಕುಂಬಳೆ : ಕನ್ನಡ ಭಾಷೆ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ‘ಸಾಹಿತ್ಯ ಪರಿಷತ್‌ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಹಿರಿಯ ಕನ್ನಡ ಧುರೀಣ, ನಿವೃತ್ತ ಮುಖ್ಯ ಶಿಕ್ಷಕ ಕೆ. ನಾರಾಯಣ ಗಟ್ಟಿ ಮಾಸ್ಟ‌ರ್ ಅವರನ್ನು ಕುಂಬಳೆ ಸಮೀಪದ ಮಳಿಯಲ್ಲಿರುವ ಅವರ ನಿವಾಸದಲ್ಲಿ ದಿನಾಂಕ 30-06-2024ರಂದು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅವರು ನಾರಾಯಣ ಗಟ್ಟಿ ಅವರನ್ನು ಅಭಿನಂದಿಸಿದರು. ಕಣಿಪುರ ಪತ್ರಿಕೆಯ ಸಂಪಾದಕ ಎಂ.ನಾ. ಚಂಬಲ್ತಿಮಾರ್ ಅಭಿನಂದನಾ ಭಾಷಣ ಮಾಡಿದರು. ಕಥೆಗಾರ್ತಿ ಸ್ನೇಹಲತಾ ದಿವಾಕರ, ಕವಯತ್ರಿ ದಿವ್ಯಾ ಗಟ್ಟಿ ಪರಕ್ಕಿಲ, ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ಇವರೆಲ್ಲರು ಕೆ. ನಾರಾಯಣ ಗಟ್ಟಿ ಮಾಸ್ಟರ್ ಅವರ ವ್ಯಕ್ತಿತ್ವವನ್ನು ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಸನ್ಮಾನಕ್ಕೆ ಕೃತಜ್ಞತೆ…

Read More

ಮಂಗಳೂರು : ಕೊಂಕಣಿ ಬರಹಗಾರರಿಗೆ, ಲೇಖಕರಿಗೆ ಪ್ರೋತ್ಸಾಹ ನೀಡಿ, ಸಾಹಿತ್ಯಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡಿರುತ್ತದೆ. ಈ ಯೋಜನೆಯಲ್ಲಿ 2023-24 ಹಾಗೂ 2024-25ರ‌ (ಎಪ್ರಿಲ್ ನಿಂದ ಮಾರ್ಚ್) ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಗೊಂಡ ಯಾವುದೇ ಪ್ರಕಾರದ ಕೊಂಕಣಿ ಪುಸ್ತಕಗಳನ್ನು 20% ರಿಯಾಯಿತಿ ನೀಡಿ ರೂ 2.000/- ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗುವುದು. ಅಕಾಡೆಮಿಯ ವಾಚನಾಲಯದ ಉಪಯೋಗಕ್ಕಾಗಿ ಕೊಂಕಣಿ ಭಾಷೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಯಾವುದೇ ಭಾಷೆಯ ಪುಸ್ತಕಗಳ ಗರಿಷ್ಠ 1.000/- ಮೌಲ್ಯದ ಪ್ರತಿಗಳನ್ನು ಖರೀದಿಸಲಾಗುವುದು. ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್‌ ತಿಳಿಸಿದ್ದಾರೆ.

Read More

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 01.07.2024 ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ ಪಟ್ಲ ಫೌಂಡೇಶನ್ನಿನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ ವಹಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಕುಮಾರ್ ಬಾಳೆಕಲ್ಲು ಮಾತನಾಡಿ ತರಬೇತಿ ತರಗತಿಗಳಿಗೆ ಶುಭ ಕೋರಿದರು. ಎಸ್.ಡಿ.ಎಂ.ಸಿ. ಸದಸ್ಯರಾದ ವಿಷ್ಣು ಕನ್ನಡಗುಳಿ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುವ ಈ ಉಚಿತ ಯಕ್ಷಗಾನ ನಾಟ್ಯ ತರಗತಿಗಳಿಗಾಗಿ ಪ್ರಾಯೋಜಕರನ್ನು ಅಭಿನಂದಿಸಿದರು. ಯಕ್ಷ ಗುರು ಗಣೇಶ್ ಕೊಂದಲಕೋಡಿ ಪ್ರಶಿಕ್ಷಣಾರ್ಥಿಗಳಿಗೆ ಸಾಂಕೇತಿಕವಾಗಿ…

Read More

ಬೆಳ್ತಂಗಡಿ : ಉಜಿರೆ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಉಪನ್ಯಾಸಕ ಹಿರಿಯ ಸಾಹಿತಿ ಪ್ರೊ. ಎನ್.ಜಿ. ಪಟವರ್ಧನ್ (81) ಅವರು ದಿನಾಂಕ 01-07-2024ರಂದು ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮುಂಡಾಜೆ ಗ್ರಾಮದ ಕಡಂಬಳ್ಳಿ ಮೂಲದವರಾಗಿದ್ದ ಅವರು ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ 32 ವರ್ಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಕನ್ನಡ ವಿಭಾಗದ ಮುಖ್ಯಸ್ಥರೂ ಆಗಿದ್ದರು. ಅವರ ಸಾಹಿತ್ಯ ಪ್ರೀತಿಯಿಂದಾಗಿ ಹಂಸಧ್ವನಿ ಪ್ರಕಾಶನದ ಮೂಲಕ ಕನ್ನಡ ವ್ಯಾಕರಣ, ಕವನ ಸಂಕಲನಗಳು ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಉಜಿರೆಯ ಶಿವಾಜಿನಗರದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದ ಅವರು ಪ್ರೇಮ ಲಹರಿ, ಅಕ್ಷಯ, ಮಾನಸ, ಚಿಲುಮೆ, ಸಿಂಚನ, ತುಂತುರು, 200 ಮುಕ್ತಕಗಳು, ಹೂಮಳೆ, ಸಾವಿರಾರು ಮುಕ್ತಕಗಳು, 58 ಕವನಗಳು ಇತ್ಯಾದಿ ಕವನ ಸಂಕಲನ, ಮೃತ್ಯುಂಜಯದ ಮಡಿಲಲ್ಲಿ ಮುಗುಳ್ಳಗೆ, ತೆರೆದ ಮನ, ವಿಚಾರ ವಿಹಾರ ಮೊದಲಾದ ಪ್ರಬಂಧ ಸಂಕಲನ, ಸ್ಥಿತ್ಯಂತರ ಮತ್ತು ಇತರ ಕಥೆಗಳು ಕೊರಡು ಕೊನರಿತು, ಮರೀಚಿಕೆ ಮೊದಲಾದ ಕಥಾ ಸಂಕಲನ,…

Read More

ಬೆಂಗಳೂರು: ಜನ ಸಾಮಾನ್ಯರಲ್ಲಿ ಅದರಲ್ಲಿಯೂ ವಿಶೇಷವಾಗಿ ಕನ್ನಡ ಯುವಜನತೆಯಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಆಸಕ್ತಿ ಮೂಡಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿದ್ದ ಬಿ. ಎಂ. ಶ್ರೀ. ಇವರು ರೂಪಿಸಿದ ಮುಖ್ಯ ಯೋಜನೆ ಕನ್ನಡ ಸಾಹಿತ್ಯ ಪರೀಕ್ಷೆಗಳು. 1940ರ ಜೂನ್ ತಿಂಗಳಿನಿಂದ ‘ಕನ್ನಡ ಅಣುಗ’ ‘ಕನ್ನಡ ಕಾವ’ ‘ಕನ್ನಡ ಜಾಣ’ ಪರೀಕ್ಷೆಗಳು ಆರಂಭವಾದವು. 1948ರಲ್ಲಿ ‘ಅಣುಗ’ವನ್ನು ಕೈ ಬಿಡಲಾಯಿತು. 1966ರಲ್ಲಿ ‘ಕನ್ನಡ ರತ್ನ’ ಪರೀಕ್ಷೆ ಆರಂಭವಾಗಿದ್ದು 1992ರಲ್ಲಿ ‘ಕನ್ನಡ ಪ್ರವೇಶ’  ಆರಂಭವಾಯಿತು. ಈ ಎಲ್ಲಾ ಪರೀಕ್ಷೆಗಳು ಲಕ್ಷಾಂತರ ಕನ್ನಡಿಗರಲ್ಲಿ ಭಾಷೆ ಮತ್ತು ಸಾಹಿತ್ಯದ ಕುರಿತು ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದು ನಿರಂತರವಾಗಿ ನಡೆದು ಕೊಂಡು ಬರುತ್ತಿವೆ. ಕನ್ನಡ ಸಾಹಿತ್ಯ ಪರಿಷತ್ತು 2024-25ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳು 2024ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದೆ. ಅರ್ಜಿಯನ್ನು ಸಲ್ಲಿಸಲು 31 -08-2024 ಕೊನೆಯ ದಿನಾಂಕವಾಗಿದ್ದು, 15-09-2024ರವರೆಗೆ ದಂಡದ ಶುಲ್ಕ ರೂಪಾಯಿ 50.00 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ…

Read More

ಬದಿಯಡ್ಕ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾಸರಗೋಡು ಜಿಲ್ಲಾ ಘಟಕದ ನೇತೃತ್ವದಲ್ಲಿ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಸಹಯೋಗದಲ್ಲಿ ದಿನಾಂಕ 01-07-2024ರಂದು ಕನ್ನಡ ಪತ್ರಿಕಾ ದಿನಾಚರಣೆ ಜರಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಭಾಷಾ ತಜ್ಞ ನಿವೃತ್ತ ಪ್ರಾಂಶುಪಾಲ ಡಾ. ಬೇ.ಸೀ. ಗೋಪಾಲಕೃಷ್ಣ ಭಟ್ ಇವರು ಪತ್ರಿಕಾ ಸಂದೇಶವನ್ನು ನೀಡಿ “ವರದಿಗಾರರು ಆಳವಾದ ಭಾಷಾಜ್ಞಾನವನ್ನು ಹೊಂದಿರಬೇಕು. ಪತ್ರಿಕಾ ವರದಿಯಲ್ಲಿ ಜಾತಿ, ವರ್ಣ, ಪಕ್ಷ ಯಾವುದೂ ಗೊತ್ತಾಗಬಾರದು. ಯಾವುದೇ ಬಣದ ಪತ್ರಿಕೆಯೂ ಆಗಬಾರದು. ಪತ್ರಿಕೆಯನ್ನು ಓದಿದಾಗ ಕನ್ನಡದ ಸಮಗ್ರವಾದ ಚಿತ್ರಣ ಏನು, ಸಂಸ್ಕೃತಿ ಏನು, ಭಾವನೆ ಏನು ಎಂಬುದು ಅರ್ಥವಾಗುವಂತಿರಬೇಕು. ಪತ್ರಿಕೆಯ ಎಲ್ಲಾ ಪುಟಗಳಲ್ಲಿ ಒಂದನ್ನೂ ಬಿಡದೆ ಸಂಪೂರ್ಣವಾಗಿ ಓದಿ ಅರ್ಥಮಾಡಿ ವರದಿಗಳನ್ನು, ಕವನಗಳನ್ನು ಬರೆಯುವ ಅಭ್ಯಾಸವನ್ನು ರೂಢಿಸಿಕೊಂಡು ಅದನ್ನು ಪತ್ರಿಕೆಗಳಲ್ಲಿ ಪ್ರಕಟಿಸಬೇಕು” ಎಂದು ಶಾಲಾ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು. ಕೆ.ಯು.ಡಬ್ಲ್ಯು.ಜೆ. ಕಾಸರಗೋಡು ಜಿಲ್ಲಾ ಅಧ್ಯಕ್ಷ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ…

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ 9 ಮಂದಿ ಕಲಾವಿದರ ತಂಡ ದಿನಾಂಕ 09-07-2024ರಿಂದ ಅಮೇರಿಕಾದಲ್ಲಿ 75 ದಿನಗಳ ಕಲಾ ಯಕ್ಷಗಾನ ಅಭಿಯಾನ ನಡೆಸಲಿದೆ. “ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೇರಿಕಾ ಪ್ರವಾಸ ಕೈಗೊಳ್ಳುತ್ತಿದೆ. ಇದರ ಆಯೋಜನೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯು.ಎಸ್.ಎ. ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯು.ಎಸ್.ಎ. ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮುಂತಾದ ಪ್ರಮುಖರು ಅಮೇರಿಕಾದ 20 ರಾಜ್ಯಗಳ ಮುಖ್ಯ ನಗರಗಳಲ್ಲಿ ನಮ್ಮ ಯಕ್ಷಗಾನ ತಂಡದ ಕಾರ್ಯಕ್ರಮಗಳನ್ನು ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಲ ಸತೀಶ್ ಶೆಟ್ಟಿ,…

Read More

ಪುತ್ತೂರು : ಭರತನಾಟ್ಯದಲ್ಲಿ ಪ್ರಮುಖವಾದ ನೃತ್ಯಬಂಧವಾದ ಪದವರ್ಣಗಳ ಮೂಲ ಆಶಯವನ್ನು ಜಾಗೃತಗೊಳಿಸಲು ಹಾಗೂ ಪದವರ್ಣವನ್ನು ವೀಕ್ಷಿಸಲು ಬೇಕಾಗುವ ತಾಳ್ಮೆಯನ್ನು ಹೆಚ್ಚಿಸಲು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯು ತನ್ನ ಸರಣಿ ಕಾರ್ಯಕ್ರಮ ‘ನೃತ್ಯಾಂತರಂಗ’ದಲ್ಲಿ ಈ ಹೊಸ ಯೋಜನೆಯೊಂದಿಗೆ ‘ವರ್ಣಿಕ’ ಎಂಬ ಶೀರ್ಷಿಕೆಯಡಿ ಎರಡು ಸರಣಿಗಳಲ್ಲಿ ಐದು ಪದವರ್ಣಗಳನ್ನು ಪ್ರಸ್ತುತಪಡಿಸಿತು. ದಿನಾಂಕ 09-06-2024ರಂದು ಪ್ರಸ್ತುತಗೊಂಡ ‘ವರ್ಣಿಕ- 2’ರಲ್ಲಿ ಮೊದಲಿಗೆ ಸಂಸ್ಥೆಯ ವಿದ್ಯಾರ್ಥಿಗಳಾದ ಕ್ಷಮಾ ರೈ, ಸಾನ್ವಿ ಆನಂದ್, ಜೀವಿಕ ಕಜೆ, ಕ್ಷಮಾ ಕೆ., ಅಪೇಕ್ಷಾ, ಧ್ರುವಿ, ಶ್ರಾವಣಿ, ಸಾನ್ವಿ ಡಿ. ಇವರಿಂದ ಪ್ರಾರ್ಥನೆ ನಡೆಯಿತು. ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತೇಜಸ್ವಿ ಅಂಬೆಗಲ್ಲು ನಿರೂಪಣೆ ಮತ್ತು ಗಿರೀಶ್ ಕುಮಾರ್ ಶಂಖನಾದ ಹಾಗೂ ಪ್ರೀತಿಕಲಾ ಓಂಕಾರ ನಾದ ಮಾಡಿದರು. ಅಭ್ಯಾಗತರಾದ ಡಾ. ನಿರೀಕ್ಷಾ ಶೆಟ್ಟಿ ದೀಪ ಬೆಳಗುವ ಮೂಲಕ ಉದ್ಘಾಟನೆಗೈದರು. ಕುಮಾರಿ ಮಾತಂಗಿ ಪಂಚಾಂಗ ಶ್ರವಣ ಮಾಡಿದರು. ಕುಮಾರಿ ನಿನಾದ ಎಂ.ಎನ್. ಕಲಾವಿದರನ್ನು ಹಾಗೂ ಕುಮಾರಿ ಮಂದಿರಾ ಕಜೆ ಅಭ್ಯಾಗತರನ್ನು ಪರಿಚಯಿಸಿದರು. ಮೊದಲ ವರ್ಣ ವಿದುಷಿ ಅಕ್ಷತಾ…

Read More

ಬಂಟ್ವಾಳ : ಫರಂಗಿಪೇಟೆ ಅರ್ಕುಳದ ಶ್ರೀ ರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಟ ಫೌಂಡೇಷನ್ ವತಿಯಿಂದ ಉಚಿತ ಯಕ್ಷಗಾನ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿನಾಂಕ 22-06-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಇವರು ಮಾತನಾಡಿ “ಯಕ್ಷಶಿಕ್ಷಣ ತರಗತಿಯಲ್ಲಿ ಏಕಾಗ್ರತೆಯನ್ನು ಸಾಧಿಸಬಹುದು. ಅದು ಮಕ್ಕಳ ಶಿಕ್ಷಣಕ್ಕೂ ಪೂರಕವಾಗಿ ಪರಿಣಮಿಸುತ್ತದೆ” ಎಂದು ಹೇಳಿದರು. ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳಬೀಡು ವಜ್ರನಾಭ ಶೆಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎ.ಕೆ. ಜಯರಾಮ ಶೇಕ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಯಕ್ಷ ತರಗತಿ ಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆಯವರ ಸಾಧನೆ ಗುರುತಿಸಿ ಸನ್ಮಾನಿಸಲಾಯಿತು. ಶಾಲಾ ಸಂಚಾಲಕ ಎ. ಗೋವಿಂದ ಶೆಣೈ, ಯಕ್ಷ ತರಗತಿ ಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ, ರೋಟರಿ ಸದಸ್ಯರಾದ ರಮೇಶ್ ಶೆಟ್ಟಿ ನಡಿಗುತ್ತು, ರಮೇಶ್ ತುಂಬೆ, ಜಯಶೀಲ…

Read More

ಮಂಗಳೂರು : ಕೊಲ್ಯ ಸೋಮೇಶ್ವರದ ನಾಟ್ಯನಿಕೇತನದ ನಾಟ್ಯ ಸಭಾಗೃಹದಲ್ಲಿ ಮೋಹನ ಕುಮಾ‌ರ್ ಅವರಿಗೆ 90 ತುಂಬಿದ ಸಂಭ್ರಮದ ಪ್ರಯುಕ್ತ ‘ನಾಟ್ಯ ಮೋಹನ ನವತ್ಯುತ್ಸವ’ ನೃತ್ಯ ಸರಣಿ 6ರ ಕಾರ್ಯಕ್ರಮವು ದಿನಾಂಕ 29-06-2024ರಂದು ಪ್ರಸ್ತುತಗೊಂಡಿತು. ಈ ಕಾರ್ಯಕ್ರಮದಲ್ಲಿ ನಾಟ್ಯಾಲಯ ಉರ್ವದ ನಿರ್ದೇಶಕಿ ಕರ್ನಾಟಕ ಕಲಾಶ್ರೀ ಕಮಲ ಭಟ್ ಇವರು ಮಾತನಾಡಿ “ಕಲಾ ತಪಸ್ವಿ ನಾಟ್ಯಾಚಾರ್ಯ ಮೋಹನ್ ಕುಮಾರ್ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೃತ್ಯ ಕಲೆಯನ್ನು ಶ್ರೀಮಂತಗೊಳಿಸಿ, ಇಂದು ಸಾಮಾನ್ಯರು ನೃತ್ಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಳ್ಳುವಂತೆ ಮಾಡಿ ಅಸಂಖ್ಯಾತ ಶಿಷ್ಯ ವರ್ಗವನ್ನು ಮತ್ತು ನೃತ್ಯ ಗುರುಗಳನ್ನು ನೃತ್ಯ ಕ್ಷೇತ್ರಕ್ಕೆ ನೀಡಿದ ಮಹಾನ್ ಕಲಾವಿದರು” ಎಂದು ನುಡಿದರು. ಭರತಾಂಜಲಿಯ ನೃತ್ಯ ಗುರುಗಳಾದ ವಿದ್ವಾನ್ ಶ್ರೀಧರ ಹೊಳ್ಳ ಮತ್ತು ವಿದುಷಿ ಪ್ರತಿಮಾ ಶ್ರೀಧರ್ ನೃತ್ಯ ಕಾರ್ಯಕ್ರಮ ನೀಡಿದರು. ಪ್ರತಿಮಾರವರು ತನ್ನ ಅಮೋಘ ಅಭಿನಯದಿಂದ ವಾಗ್ಗೇಯಕಾರರಾದ ಮೈಸೂರು ವಾಸುದೇವಾಚಾರ್ಯರ ಬ್ರೋಚೆವಾರೆ ವರುರಾ ಕೃತಿಯು ತುಂಬಿದ ಪ್ರೇಕ್ಷಕರ ಮನತಟ್ಟಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗುರುಗಳಾದ ಮೋಹನ್‌ ಕುಮಾರ್‌ ಶುಭ ಹಾರೈಸಿ,…

Read More