Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಮಂಗಳೂರಿನ ಪುರಭವನದಲ್ಲಿ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ದಿನಾಂಕ 14 ಫೆಬ್ರವರಿ 2025 ರಂದು ನಡೆದ 10 ಪುಸ್ತಕಗಳ ಲೋಕರ್ಪಣಾ ಕಾರ್ಯಕ್ರಮದಲ್ಲಿ ಕರುಣಾಕರ ಬಳ್ಕೂರು ಇವರ ಎರಡನೇಯ ಕೃತಿ ‘ಬೆಳಕು’ ಕವನ ಸಂಕಲನವನ್ನು ಅರೆಹೊಳೆ ಪ್ರತಿಷ್ಠಾನದ ರೂವಾರಿ ಶ್ರೀ ಅರೆಹೊಳೆ ಸದಾಶಿವ ರಾವ್ ಬಿಡುಗಡೆಗೊಳಿಸಿ ಮಾತನಾಡುತ್ತಾ “ಈ ಕವನ ಸಂಕಲನವು ಅರ್ಥಪೂರ್ಣವಾಗಿದೆ. ಕಾರಣ ತಂದೆ ತಾಯಿ ಮಕ್ಕಳನ್ನು ಬೆಳಕಾಗಿ ಮುನ್ನಡೆಸಬೇಕು ಎಂಬ ಪ್ರಜ್ಞೆಯನ್ನು ಈ ಕೃತಿ ನಮ್ಮಲ್ಲಿ ಮೂಡಿಸುತ್ತಾರೆ. ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇಲ್ಲಿನ ಕನ್ನಡ ಉಪನ್ಯಾಸಕರಾದ ಸಂಜಯ ಬಿಳಿಕಿಕೊಪ್ಪ ಇವರು ‘ಬೆಳಕು’ ಕವನ ಸಂಕಲನವನ್ನು ಪರಿಚಯ ಮಾಡುತ್ತಾ “ಬೆಳಕು ಇರುವಂತದ್ದೇ. ಆದರೆ ಆ ಬೆಳಕು ಕೆಲವರಿಗೆ ಕತ್ತಲಾಗಬಹುದು ಮತ್ತು ಕೆಲವರಿಗೆ ಗುರುತಿಸಲಾಗದ ಸ್ಥಿತಿಯಲ್ಲಿ ಇರಬಹುದು. ಆ ಸಂದರ್ಭದಲ್ಲಿ ಬಳ್ಕೂರು ಬರೆದ ಕವನಗಳಲ್ಲಿ ಅರ್ಥೈಸಿಕೊಳ್ಳಬಹುದು ಎನ್ನುವುದು ಇಲ್ಲಿನ ಕವನಗಳ ಮೂಲಕ ತಿಳಿಯಪಡಿಸಿದ್ದಾರೆ. ಸಹೃದಯರಲ್ಲಿ ಇವರ ಕವನಗಳು ಬೆಳಕು ಮೂಡಿಸಲಿ ಎಂದು ಶುಭ ಹಾರೈಸುತ್ತೇನೆ.…
ಕುಶಾಲನಗರ: ಬೆಂಗಳೂರಿನ ರಂಗಮಂಡಲ ಹಾಗೂ ಕೊಡಗು ಕವಿ ಬಳಗ ಜಂಟಿಯಾಗಿ ಆಯೋಜಿಸಿದ ಕೊಡಗು ‘ಕಾವ್ಯ ಸಂಸ್ಕೃತಿ ಯಾನ’ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 23 ಫೆಬ್ರವರಿ 2025ರಂದು ಕುಶಾಲನಗರದ ಕೂದ್ದೂರು ಗ್ರಾಮದ ಪೂರ್ಣಚಂದ್ರ ಕುಟೀರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಮಾತನಾಡಿ “ಕವಿತೆಯನ್ನು ಕೇಳುವ ಸಹೃದಯರ ಕೊರತೆ ಉಂಟಾಗಿರುವುದು ವಿಷಾದನೀಯ. ಕವಿತೆಗಳು ಜನರಲ್ಲಿ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಸೌಹಾರ್ದತೆಯನ್ನು ಒಡಮೂಡಿಸುತ್ತವೆ. ಮಾಧ್ಯಮಗಳು ಕಾವ್ಯಗಳನ್ನು ಜನರಿಂದ ದೂರ ಮಾಡುತ್ತಿವೆ. ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಂದಾಗಿ ಕಾವ್ಯ ರಂಗದಲ್ಲಿ ಒಂದಷ್ಟು ಚಟುವಟಿಕೆಗಳು ಕಾಣುತ್ತಿವೆ. ಈ ಮೂಲಕ ನಾಡಿನೆಲ್ಲೆಡೆ ಇರುವ ಚುಟುಕು ಕವಿಗಳ ಸಮಾಗಮ ಹಾಗೂ ಸ್ನೇಹ ಸಂಗಮ ಸಾಧ್ಯವಾಗುತ್ತಿದೆ. ಇಂದಿನ ಆಧುನಿಕ ಕಾಲಘಟ್ಟದ ಬದಲಾದ ಪರಿಸ್ಥಿತಿಯಲ್ಲಿ ಆಧುನಿಕ ಕವಿಗಳು ಆಯಾಯ ಪರಿಸರ ಹಾಗೂ ಸಂದರ್ಭಗಳ ಕುರಿತು ರಚಿಸುವ ಕವನಗಳನ್ನು ವಾಚಿಸುವ ಸಂದರ್ಭ ಪರಂಪರೆಯ ಮರೆವು ಆಗದಂತೆ ಎಚ್ಚರ ವಹಿಸಬೇಕು. ಹೊಸ ಕವಿಗಳು ಹಾಗೂ ಕವಿತೆಗಳನ್ನು ಅಸ್ವಾದಿಸುವ…
ಮಡಿಕೇರಿ : ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 20 ಫೆಬ್ರವರಿ 2025ರಂದು ಕೊಡಗು ಜಿಲ್ಲೆ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರುಗಿದ ‘ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಂಜೆಯವರ ಕುರಿತ ವಿಚಾರಗೋಷ್ಠಿ ನಡೆಯಿತು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಮತ್ತು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ಇವರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿಯಲ್ಲಿ ನಾಲಂದ ಮಹಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಕೆ. ಕಮಲಾಕ್ಷರವರು ‘ಪಂಜೆಯವರ ಶಿಶು ಸಾಹಿತ್ಯ’ದ ಕುರಿತು ಮಾತನಾಡುತ್ತಾ “ಪಂಜೆಯವರು ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಅವರಿಗೆ ಸಣ್ಣ ಕಥೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಈ ಶಾಲೆಗೆ ಅವರು ಬಂದ ಸಂದರ್ಭದಲ್ಲಿ ಅವರಿಗೆ ಪ್ರೀತಿಯ ಸ್ವಾಗತವೇನೂ ಸಿಕ್ಕಿರಲಿಲ್ಲ. ಆದರೂ ಅವರು ತಾಳ್ಮೆಯಿಂದ ಎಲ್ಲರ ಮನ ಗೆದ್ದು, ಎಲ್ಲಾ ಅದ್ಯಾಪಕರ ಮತ್ತು ವಿದ್ಯಾರ್ಥಿಗಳ ಪ್ರೀತಿಯ ಸ್ನೇಹಿತರಾಗಿ,…
ಬೆಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸಂಘಸಂಸ್ಥೆಗಳು ಹಾಗೂ ಮೇಳಗಳ ಬಗ್ಗೆ ಬೆಂಗಳೂರಿನ ಯಕ್ಷವಾಹಿನಿ ಸಂಸ್ಥೆ ಮಾಹಿತಿ ಸಂಗ್ರಹಿಸುತ್ತಿದ್ದು, ಪೂರಕ ಮಾಹಿತಿಯನ್ನು ಸಂಸ್ಥೆ ಮುಖ್ಯಸ್ಥರು ಅಥವಾ ಸಂಘಟನೆ ಬಗ್ಗೆ ತಿಳಿದವರು ದಾಖಲಿಸುವಂತೆ ತಿಳಿಸಿದೆ. ಸಂಘಸಂಸ್ಥೆ ಅಥವಾ ಮೇಳದ ಹೆಸರು, ಸ್ಥಾಪನೆಯಾದ ವರ್ಷ, ಸಂಘಟನೆ ಉದ್ದೇಶ ಅಥವಾ ಹಿನ್ನೆಲೆ, ಪದಾಧಿಕಾರಿಗಳ ವಿವರ ಮತ್ತು ಸಂಪರ್ಕ ಮಾಹಿತಿ ಇತ್ಯಾದಿ ವಿವರಗಳನ್ನು ವ್ಯಾಟ್ಸಪ್ ಮೂಲಕ ತಿಳಿಸುವಂತೆ ಕೊರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಮೇಶ್ ಶಿರೂರ್: 9448353910 ಅಥವಾ ರವಿ ಮತ್ತೋಡಿ: 9986384205 ಇವರನ್ನು ಸಂರ್ಕಿಸಬಹುದು.
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಶ್ರೀಮತಿ ಟಿ. ವಿಮಲಾ ವಿ. ಪೈ ಪ್ರಾಯೋಜಿತ ‘ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ’ಯ ಆಯ್ಕೆ ಸಮಿತಿಯು 2024ನೇ ಸಾಲಿನ ಪ್ರಶಸ್ತಿಗೆ ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯರವರನ್ನು ಸೂಚಿಸಿದೆ. ಆಯ್ಕೆ ಸಮಿತಿಯ ಸದಸ್ಯರಾದ ಡಾ. ತಾಳ್ತಜೆ ವಸಂತ ಕುಮಾರ್, ಡಾ. ಕೆ. ಚಿನ್ನಪ್ಪ ಗೌಡ, ಡಾ. ಪ್ರಭಾಕರ ಜೋಶಿ, ಡಾ. ಕಿಶೋರಿ ನಾಯಕ್, ಡಾ. ಎಸ್.ವಿ. ಪಾಡೀಗಾರ್ ಸಹಕರಿಸಿದ್ದಾರೆ. ಈ ಪ್ರಶಸ್ತಿಯನ್ನು ಶ್ರೀ ಟಿ.ವಿ. ಮೋಹನ್ದಾಸ್ ಪೈಯವರು ಸ್ಥಾಪಿಸಿದ್ದು, ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ದಿನಾಂಕ 23 ಮಾರ್ಚ್ 2025ರಂದು ಗೋವಿಂದ ಪೈ ಸಂಶೋಧನಾ ಸಂಪುಟದ ದ್ವಿತೀಯ ಭಾಗದ ಲೋಕಾರ್ಪಣೆ ಕಾರ್ಯಕ್ರಮದೊಂದಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಹಂಪನಾ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಹಂ.ಪ. ನಾಗರಾಜಯ್ಯರವರು, ಕರ್ನಾಟಕದ ಚಿಕ್ಕಬಳ್ಳಾಪುರ…
ಕಾರ್ಕಳ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ನಿಟ್ಟೆ ಕೆಮ್ಮಣ್ಣು ಇವರ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಪ್ರಸಿದ್ಧ ವ್ಯಾಖ್ಯಾನಕಾರರಾಗಿರುವ ಶ್ರೀ ಸರ್ಪಂಗಳ ಈಶ್ವರ ಭಟ್ ಮಂಗಳೂರು, ಗಮಕಿ ಶ್ರೀಮತಿ ಯಾಮಿನಿ ಭಟ್ ಉಡುಪಿ ಇವರ ದತ್ತಿನಿಧಿಯ ‘ಗಮಕಕಲಾ ವಾಚನ’ ಪ್ರಶಸ್ತಿಗೆ ಗಮಕಿ ಶ್ರೀ ಯಜ್ಞೇಶ್ ಆಚಾರ್ಯ ಸುರತ್ಕಲ್ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಶ್ರೀ ಕೆ. ಶಾಮರಾಯ ಆಚಾರ್ಯ ಕಾರ್ಕಳ ಇವರ ದತ್ತಿನಿಧಿಯ ‘ಕಾಷ್ಠಶಿಲ್ಪಕಲಾ ಪ್ರಶಸ್ತಿ’ಗೆ ರಥಶಿಲ್ಪಿ ಶಂಕರ ಆಚಾರ್ಯ ಕೋಟೇಶ್ವರ ಇವರು ಆಯ್ಕೆಯಾಗಿದ್ದಾರೆ. ಪ್ರತಿ ಪ್ರಶಸ್ತಿಯೂ ತಲಾ ಹತ್ತು ಸಾವಿರದ ನಗದು, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಡಾ. ನಾ. ಮೊಗಸಾಲೆ ಘೋಷಿಸಿದ್ದು, ಈ ಪ್ರಶಸ್ತಿಗಳ ಪ್ರದಾನ ಸಮಾರಂಭವು ದಿನಾಂಕ 23 ಮಾರ್ಚ್ 2025ರಂದು ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯುವ ‘ಮುದ್ದಣ ಸಾಹಿತ್ಯೋತ್ಸವ’ದಲ್ಲಿ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ‘ಮುದ್ದಣ ಸಾಹಿತ್ಯ ಪ್ರಶಸ್ತಿ’ಗಳ ಜೊತೆ ಈ ಪ್ರಶಸ್ತಿಗಳನ್ನೂ ನೀಡುವರು…
ಪುತ್ತೂರು : ಸ್ಥಳೀಯ ಬಾಲವನದಲ್ಲಿ ಭಾರತೀಯ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಆಶ್ರಯದಲ್ಲಿ ದಿನಾಂಕ 22 ಫೆಬ್ರವರಿ 2025ರಂದು ಭಾರತ ಸ್ಕೌಟ್ ಗೈಡ್ಸ್ ಸಂಸ್ಥಾಪಕ ಲಾರ್ಡ್ ಬ್ಯಾಡನ್ ಪವಲ್ ಇವರ ಜನ್ಮದಿನವನ್ನು ಚಿಂತನಾ ದಿನಾಚರಣೆಯನ್ನಾಗಿ ಆಚರಿಸಲಾಯಿತು. ಅಂಬಿಕಾ ವಿದ್ಯಾಸಂಸ್ಥೆ, ಬೆಥನಿ ಆಂಗ್ಲ ಮಾಧ್ಯಮ ಶಾಲೆ, ಪಾಪೆ ಮಜಲು ಹಿರಿಯ ಪ್ರಾಥಮಿಕ ಶಾಲೆ ಮತ್ತು ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಸಹಯೋಗದಲ್ಲಿ ಆಚರಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯಕ್ತಿ ವಿಕಸನಗೊಳ್ಳಲು ಸಾಂಸ್ಕೃತಿಕ ಚಟುವಟಿಕೆ ಮತ್ತು ಸಂಗೀತದ ಪಾತ್ರದ ಕುರಿತಾದ ವಿಶೇಷ ಉಪನ್ಯಾಸ ಮತ್ತು ಕಲಾಸೃಷ್ಟಿ ತಂಡದವರಿಂದ ತತ್ಸಂಬಂಧೀ ವಿಚಾರ ಪ್ರಚೋದಕ ಮಾಯಾಜಾಲ ಕಾರ್ಯಕ್ರಮದೊಡನೆ ಸಂಪನ್ನವಾಯಿತು. ಕಲಾಸೃಷ್ಟಿ ತಂಡದ ಮುಖ್ಯಸ್ಥೆ ಪ್ರೊ. ಮುಬೀನ ಪರವೀನ್ ತಾಜ್ ಮುಂದಾಳತ್ವದಲ್ಲಿ ಎರಡು ಗಂಟೆಗಳ ಕಾಲ ವಿವಿಧ ಮ್ಯಾಜಿಕ್ ಪ್ರದರ್ಶನ ಮಾಡಿದ್ದಲ್ಲದೆ ಪುಟಾಣಿಗಳಿಗೆ ಕೆಲವು ತಂತ್ರಗಳನ್ನು ಕಲಿಸಿ ಕೊಡಲಾಯಿತು. ಅಂತರಾಷ್ಟ್ರೀಯ ಖ್ಯಾತಿಯ ಕುಮಾರಿ ಶಮಾ ಪರವೀನ್ ತಾಜ್ ಇವರ ನಿರೂಪಣೆಯಲ್ಲಿ ಹಲವು ದೇಶ ಭಕ್ತಿ ಗೀತೆ ಸಹಿತದ…
ಬೈಂದೂರು : ಲಾವಣ್ಯ (ರಿ.) ಬೈಂದೂರು ಇದರ 48ನೇ ವಾರ್ಷಿಕೋತ್ಸವ ಹಾಗೂ ದಿ. ಕೆ. ಲಕ್ಷ್ಮೀ ನಾರಾಯಣ ಸ್ಮರಣಾರ್ಥ ‘ರಂಗಪಂಚಮಿ 2025’ ರಂಗೋತ್ಸವ ಕಾರ್ಯಕ್ರಮವನ್ನು ದಿನಾಂಕ 01ರಿಂದ 05 ಮಾರ್ಚ್ 2025ರಂದು ಸಂಜೆ ಗಂಟೆ 6-30ಕ್ಕೆ ಬೈಂದೂರಿನ ಶ್ರೀ ಶಾರದಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಮಾರ್ಚ್ 2025ರಂದು ಲಾವಣ್ಯ (ರಿ.) ಬೈಂದೂರು ಇದರ ಅಧ್ಯಕ್ಷರಾದ ನರಸಿಂಹ ಬಿ. ನಾಯಕ್ ಇವರ ಅಧ್ಯಕ್ಷತೆಯಲ್ಲಿ ಧಾರವಾಡದ ಉದ್ಯಮಿ ಯು.ಬಿ. ಶೆಟ್ಟಿ ಇವರು ರಂಗೋತ್ಸವದ ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಕಲಾವಿದ ಗೋವಿಂದ ಎಂ. ಮತ್ತು ಸಂಗೀತ ಕಲಾವಿದ ಕೃಷ್ಣ ಕಾಮತ್ ಹಾಲಾಡಿ ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಲಾವಣ್ಯ (ರಿ.) ಬೈಂದೂರು ಇವರು ಬಿ. ಗಣೇಶ ಕಾರಂತ ಇವರ ನಿರ್ದೇಶನದಲ್ಲಿ ‘ಆಲಿಬಾಬಾ ಮತ್ತು 40 ಕಳ್ಳರು’ ನಾಟಕ ಪ್ರದರ್ಶನ ನೀಡಲಿದ್ದಾರೆ. ದಿನಾಂಕ 02 ಮಾರ್ಚ್ 2025ರಂದು ನಡೆಯುವ ರಂಗೋತ್ಸವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ತಲ್ಲೂರು…
ಉಳ್ಳಾಲ: ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇದರ ಸಹಯೋಗದಲ್ಲಿ ಆಯೋಜಿಸಿದ 28ನೇ ವರ್ಷದ ‘ವೀರರಾಣಿ ಅಬ್ಬಕ್ಕ ಉತ್ಸವ’ ದಿನಾಂಕ 22 ಫೆಬ್ರವರಿ 2025ರ ಶನಿವಾರದಂದು ಉಳ್ಳಾಲ ನಗರಸಭೆಯ ಆವರಣದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡಬಿದಿರೆಯ ಚೌಟರ ಅರಮನೆಯ ಮಮತಾ ಬಳ್ಳಾಲ್ ಮಾತನಾಡಿ “ಅಬ್ಬಕ್ಕಳ ಹೆಸರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕು. ಕೆಚ್ಚೆದೆಯ ರಾಣಿ ಅಬ್ಬಕ್ಕಳಿಗೆ ರಾಷ್ಟ್ರಮಟ್ಟದಲ್ಲಿ ಪ್ರಚಾರ, ಸ್ಥಾನ ಸಿಗದಿರುವುದು ಖೇದಕರ. ಹಾಗಿದ್ದರೂ ಎರಡು ದಶಕಗಳಿಂದ ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ಪುಸ್ತಕ, ಯಕ್ಷಗಾನ, ನಾಟಕ, ಸಿ.ಡಿ, ಕಾರ್ಯಾಗಾರ, ಅಧ್ಯಯನ ಪೀಠ, ನೌಕೆಯೊಂದಕ್ಕೆ ರಾಣಿ ಅಬ್ಬಕ್ಕಳ ಹೆಸರಿಡುವ ಮೂಲಕ ಹೆಚ್ಚಿನ ಪ್ರಚಾರ ನೀಡುವ ಪ್ರಯತ್ನ ನಡೆದಿದೆ” ಎಂದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮಾತನಾಡಿ “ಅಬ್ಬಕ್ಕ ಉತ್ಸವ ಆಚರಣೆಗೆ ಮುಂದಿನ ವರ್ಷದಿಂದ ರೂಪಾಯಿ…
ಉಪ್ಪಿನಕುದ್ರು : ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 104ನೇ ತಿಂಗಳ ಕಾರ್ಯಕ್ರಮ ದಿನಾಂಕ 23 ಫೆಬ್ರವರಿ 2025ರಂದು ಶ್ರೀಮತಿ ದೇವಕಿ ಸುರೇಶ್ ಪ್ರಭು ತಲ್ಲೂರು ಇವರ ಪ್ರಾರ್ಥನೆಯೊಂದೆಗೆ ಪ್ರಾರಂಭವಾಯಿತು. ವೇದಿಕೆಯಲ್ಲಿ ಹಿರಿಯ ಗೊಂಬೆಯಾಟ ಕಲಾವಿದ ವೆಂಕಟರಮಣ ಬಿಡುವಾಳ್, ಪ್ರಶಾಂತ್ ನಾಯಕ್, ಅನಿತಾ ಪಿ. ನಾಯಕ್, ಎಮ್. ರತ್ನಾಕರ್ ಪೈ, ಎಮ್. ರಾಜಶ್ರೀ ಆರ್. ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಇವರು ಉಪಸ್ಥಿತರಿದ್ದರು. ಭರತನಾಟ್ಯ ಯುವ ಕಲಾವಿದೆ ಕುಮಾರಿ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಇವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಕೊನೆಯಲ್ಲಿ ಕುಮಾರಿ ಪ್ರಣೀತಾ ಪ್ರಶಾಂತ್ ನಾಯಕ್ ಕೋಟ ಇವರ ಭರತನಾಟ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್, ಬಂಟ್ವಾಡಿಯವರು ಕಾರ್ಯಕ್ರಮ ನಿರೂಪಿಸಿದರು.