Author: roovari

ಬೆಂಗಳೂರು : ಸಂಚಾರಿ ಥಿಯೇಟರ್ ಇದರ 20ನೇ ವರ್ಷದ ರಂಗಸಂಭ್ರಮದ ಪ್ರಯುಕ್ತ ಸಂಚಾರಿ ಸಡಗರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನವನ್ನು ಮಂಗಳಾ ಎಸ್. ಇವರ ನಿರ್ದೇಶನದಲ್ಲಿ ದಿನಾಂಕ 17 ಮೇ 2025ರಂದು ಸಂಜೆ 3-30 ಮತ್ತು 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಹಮ್ಮಿಕೊಳ್ಳಲಾಗಿದೆ. ಜಪಾನಿನ ಬರಹಗಾರ ರುನೊಸುಕೆ ಅಕುತಗುವ ಇವರು ರಚಿಸಿದ ಕತೆಗಳನ್ನು ಆಧಾರವಾಗಿಟ್ಟುಕೊಂಡು ಅಕಿರಾ ಕುರುಸಾವಾ ಚಲನಚಿತ್ರವನ್ನಾಗಿಸಿದ ರಶೋಮನ್ ಚಲನಚಿತ್ರವನ್ನು ಆಧರಿಸಿ ಹಿಂದಿ ಲೇಖಕ ರಘುವೀರ್ ಸಾಹೆ ಹಿಂದಿ ನಾಟಕವನ್ನು ರಚಿಸಿದ್ದಾರೆ ಮತ್ತು ಅದನ್ನು ಕನ್ನಡಕ್ಕೆ ಎಸ್. ಮಾಲತಿ ಅನುವಾದಿಸಿದ್ದಾರೆ.

Read More

ಮೂಡಬಿದ್ರಿ : ಆಳ್ವಾಸ್ ಆಯುರ್ವೇದಿಕ್ ಕಾಲೇಜಿನ 1999ರ ಸಾಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು 25 ವರ್ಷಗಳ ನಂತರ ತಮ್ಮ ಮಾತೃ ಸಂಸ್ಥೆಯಲ್ಲಿ ಒಂದಾಗಿ ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ದಿನಾಂಕ 09 ಮೇ 2025ರಂದು ‘ಯಾದೇ’ ಎಂಬ ಫಲಕದ ಅಡಿಯಲ್ಲಿ ಸಂಭ್ರಮಾಚರಣೆ ಮಾಡಿದರು. ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ ಆಳ್ವರ ಶುಭಾಶಯ, ಡಾ. ವಿನಯ ಆಳ್ವರ ಪ್ರಸ್ತಾವನೆ ಸಹಿತವಾಗಿ ಇತರ ವೈದ್ಯ ಶಿಕ್ಷಕರ ಜೊತೆಗೂಡುವಿಕೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಂದಿನ ಪ್ರಾಚಾರ್ಯರಾಗಿದ್ದ, ಪ್ರಸ್ತುತ ಕಣಚೂರು ಆಯುರ್ವೇದ ಆಸ್ಪತ್ರೆಯ ನಿರ್ದೇಶಕ ಸಲಹಾ ವೈದ್ಯರಾದ ಡಾ. ಸುರೇಶ ನೆಗಳಗುಳಿಯವರು ದೀಪ ಬೆಳಗಿ ಉದ್ಘಾಟಿಸಿ, ಶಿಷ್ಯರನ್ನುದ್ದೇಶಿಸಿ ಆಳ್ವಾಸ್ ಸಂಸ್ಥೆಯ ಶ್ರೇಷ್ಠತೆ, ಗುರುತಿಸುವಿಕೆ ಹಾಗೂ ಯಶಕಾರಕತ್ವವನ್ನು ಇಲ್ಲಿ ಕಲಿತ ವೈದ್ಯರಾದ ನಿಮ್ಮಿಂದ ತಿಳಿಯಬಹುದು ಹಾಗೂ ಗುರುವನ್ನು ಮೀರಿಸುವ ಶಿಷ್ಯರು ಯಾವತ್ತೂ ಗುರುವಿಗೆ ಹೆಮ್ಮೆಯ ಸಂಗತಿ ಎನ್ನುತ್ತಾ ಸ್ವರಚಿತ ಮುಕ್ತಕ ಮಾಲೆಯನ್ನು ವಾಚಿಸಿದರು. ಉಪಪ್ರಾಚಾರ್ಯ ಡಾ. ಲಕ್ಷ್ಮೀಶ ಉಪಾಧ್ಯಾಯರು “ಇಲ್ಲಿ ಕಲಿತ ವಿದ್ಯಾರ್ಥಿಗಳ ಶಿಸ್ತು ಬದ್ಧತೆಯನ್ನು ನಿಮ್ಮನ್ನು ನೋಡಿ…

Read More

ಸಂಪೆಕಟ್ಟೆ : ಕಡಕೋಡು ಶ್ರೀ ಸತ್ಯಗಣಪತಿ ದೇವಸ್ಥಾನ ಸಂಪೆಕಟ್ಟೆಯಲ್ಲಿ ದೇಗುಲದ ಹನ್ನೊಂದನೇ ವರ್ಧಂತಿ ಉತ್ಸವದ ಪ್ರಯುಕ್ತ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ‘ಕಂಸವಧೆ’ ಯಕ್ಷಗಾನ ಪ್ರದರ್ಶನವು ದಿನಾಂಕ 10 ಮೇ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾಗವತ ಲಂಬೋದರ ಹೆಗಡೆ ನಿಟ್ಟೂರು ಮಾತನಾಡಿ “ಜಾಲ ತಾಣಗಳ ಭರಾಟೆಯಲ್ಲಿ ರಂಗದ ಮುಂದೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದ ಕಾಲಘಟ್ಟದಲ್ಲಿ ಸಂಪೆಕಟ್ಟೆಯಂತಹ ಪ್ರದೇಶದಲ್ಲಿ ಕಿಕ್ಕಿರಿದ ಜನಸಂದಣಿ ಪುರಾತನ ಕಾಲದ ನೆನಪನ್ನು ಮರುಕಳಿಸಿತು. ಸದ್ಯದ ಪ್ರೇಕ್ಷಕರ ಮನೋಭಿರುಚಿ ಬದಲಾಗಿದೆ. ದುಃಖದ ಪ್ರಸ್ತುತಿಗೂ ಕರತಾಡನ ಮಾಡುವ ಸ್ಥಿತಿ ಉಂಟಾಗಿದೆ. ದುಃಖ ಭಾವದ ಪ್ರಸ್ತುತಿಯಲ್ಲಿ ಕರತಾಡನವೆನ್ನುವುದು ಕಥಾ ಪ್ರಸ್ತುತಿಗೆ ಭಂಗ ಉಂಟಾಗುತ್ತದೆ” ಎಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುದರ್ಶನ ಉರಾಳ, ಶಂಕರನಾರಾಯಣ ಉಪಾಧ್ಯಾಯ ಕೊರ್ಗಿ, ಶ್ರೀಷ ತೆಕ್ಕಟ್ಟೆ, ಸುಹಾಸ ಕರಬ, ವೆಂಕಟೇಶ ವೈದ್ಯ ಹಾಗೂ ಕಲಾವಿದರು ಉಪಸ್ಥಿತರಿದ್ದರು.

Read More

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ಯನ್ನು ದಿನಾಂಕ 17 ಮೇ 2025ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದ್ವಾನ್ ಶ್ರೀ ಸುಬ್ರಾಯ ಮಣಿ ಭಾಗವತರ್ ಇವರ ಸ್ಮರಣಾರ್ಥ ನಡೆಯಲಿರುವ ಈ ಸಂಗೀತ ಕಛೇರಿಯಲ್ಲಿ ಕಾರ್ಕಳದ ಅತ್ರೇಯ ಕೃಷ್ಣಾ ಇವರ ಹಾಡುಗಾರಿಕೆಗೆ ಬೆಂಗಳೂರಿನ ಎಸ್. ಜನಾರ್ದನ ಮಯಲಿನ್ ಮತ್ತು ಮೈಸೂರಿನ ನಂದನ್ ಕಶ್ಯಪ್ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಕರ್ಮಯೋಗಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಪತ್ರಕರ್ತರ ಸಂಘ (ರಿ.) ಸಹಯೋಗದಲ್ಲಿ ದಿನಾಂಕ 15 ಮೇ 2025ರ ಗುರುವಾರ ಸಂಜೆ 5-30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ಕೊಡಗಿನ ಪತ್ರಿಕಾರಂಗದ ಭೀಷ್ಮ, ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ದತ್ತಿ ಪ್ರಶಸ್ತಿ ಕಾರ್ಯಕ್ರಮವನ್ನು ಹಿರಿಯರಾದ ಮಾಜಿ ಸಚಿವ ಎಂ.ಸಿ. ನಾಣಯ್ಯ ಇವರು ಉದ್ಗಾಟಿಸಲಿದ್ದು, ಶ್ರೀಮತಿ ರಾಜಲಕ್ಷ್ಮಿ ಗೋಪಾಲಕೖಷ್ಣ ಇವರು ತ್ರಿಭಾಷಾ ಸಾಹಿತಿ ನಾಗೇಶ್ ಕಾಲೂರು ಇವರಿಗೆ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ದತ್ತಿದಾನಿ ಮತ್ತು ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ಶ್ರೀಮತಿ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸವು ದಿನಾಂಕ 12 ಮೇ 2025ರಂದು ಮಂಗಳೂರಿನ ಡಾ. ಪಿ. ದಯಾನಂದ ಪೈ – ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ‘ವಿವೇಕಾನಂದರ ಕನಸಿನ ಭಾರತ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಪ್ರಾಧ್ಯಾಪಕರಾದ ಶ್ರೀ ಪ್ರಶಾಂತ್ ನೀಲಾವರ “ಸ್ವಾಮಿ ವಿವೇಕಾನಂದರು ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಹಲವು ಕನಸುಗಳನ್ನು ಕಂಡಿದ್ದರು. ಅವರು ಮೌಲ್ಯಾಧಾರಿತ, ನೈತಿಕತೆ ಹಾಗೂ ಸಾಂಸ್ಕೃತಿಕ ಪರಂಪರೆಗಳಲ್ಲಿ ಬೆಳೆದು ಬಂದ ದೇಶವನ್ನೇ ತಮ್ಮ ಕನಸಿನ ಭಾರತವೆಂದು ಪರಿಗಣಿಸಿದ್ದರು. ಅವರ ದೃಷ್ಟಿಯಲ್ಲಿ ಭಾರತವೆಂದರೆ ಧರ್ಮ, ಆತ್ಮಜ್ಞಾನ, ತಪಸ್ಸು ಮತ್ತು ಮಾನವಸೇವೆಗೂ ಆದ್ಯತೆ ನೀಡುವ ದೇಶ. ಅವರು ಬಡವರು, ಶೋಷಿತರು ಮತ್ತು ದುರ್ಬಲರನ್ನು ಸಹಾನುಭೂತಿಯೊಂದಿಗೆ ನೋಡಬೇಕು ಮತ್ತು ಅವರ ಸೇವೆಯನ್ನು…

Read More

ಮೂಡಬಿದಿರೆ : ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಗಣೇಶ ಪ್ರಸಾದಜೀ (ಜೀಜೀ) ಇವರ 9ನೆಯ ಕೃತಿ ‘ಕಾಂತೆ ಕವಿತೆ’ಯು ಅವರು ಕಲಿತ ಮೂಡಬಿದಿರೆಯ ನೆಲ್ಲಿಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದಲ್ಲಿ ದಿನಾಂಕ 03 ಮೇ 2025ರಂದು ಅನಾವರಣಗೊಂಡಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಕೃತಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಅಜೆಕಾರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಕೃತಿಯ ಬಗ್ಗೆ ಮಾತನಾಡಿ ಕವಿತೆಗಳನ್ನು ವಿಶ್ಲೇಷಿಸಿ, ಮೆಚ್ಚುಗೆ ಸೂಚಿಸಿ ‘ಈ ಕೃತಿ ಎಲ್ಲರ ಮನೆ ಮನೆಯಲ್ಲಿರಬೇಕು, ಇಂತಹ ಕೃತಿಗಳು ಇನ್ನಷ್ಟು ಬರಬೇಕು’ ಎಂದು ಆಶಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್.ಎಸ್. ಅಭಿನಂದಿಸಿದರು. ಕೃತಿಕಾರ ಜೀಜೀಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತಿತರ ಅತಿಥಿಗಳು ವೇದಿಕೆಯಲ್ಲಿದ್ದರು. ಜೀ ಜೀಯವರು ವಂದಿಸಿದರು.

Read More

ಶ್ರೀಮತಿ ಸುನಂದಾ ಬೆಳಗಾಂವಕರರ ಮೊದಲ ಕಥಾಸಂಕಲನ ‘ಮೃದ್ಗಂಧ’. ಇದರಲ್ಲಿರುವ ಎಂಟು ಕತೆಗಳು ಉತ್ತರ ಕರ್ನಾಟಕದ ಸಾಂಸ್ಕೃತಿಕ ಆವರಣದಲ್ಲಿ ಸೃಷ್ಟಿಯಾಗಿವೆ. ಸಿದ್ಧ ಮಾನದಂಡವಿಲ್ಲದೆ ಆರಂಭಗೊಳ್ಳುವ ಇಲ್ಲಿನ ಕತೆಗಳಲ್ಲಿ ಧಾರವಾಡದ ಮಣ್ಣಿನ ವಾಸನೆಯನ್ನು ಬೀರುವ ಆಡುಮಾತಿನ ಲಯವಿದೆ. ಆಕರ್ಷಕ ಆರಂಭ ಮತ್ತು ಅನಿರೀಕ್ಷಿತ ಮುಕ್ತಾಯಗಳಿಲ್ಲ. ಆಪ್ತವೆನಿಸುವ ನಿರೂಪಣೆಯಿದೆ. ಸಾಂಪ್ರದಾಯಿಕ ಬ್ರಾಹ್ಮಣ ಸಂಸ್ಕೃತಿಯ ಹಿನ್ನೆಲೆಯಲ್ಲಿ ಬದುಕುತ್ತಿರುವ ಹಳ್ಳಿಯ ಜನರ ಸ್ಥಿತಿಗತಿಗಳನ್ನು ಚಿತ್ರಿಸುವ ಕತೆಗಳಲ್ಲಿ ಸುಧಾರಣೆಯ ಆವೇಶ, ಸಮಾಜದ ಅಂಧಶ್ರದ್ಧೆಗಳ ಬಗ್ಗೆ ಆಕ್ರೋಶಗಳಿಲ್ಲ. ಮಧ್ಯಂತರದಲ್ಲೇ ಆರಂಭಗೊಂಡು ಹಿನ್ನೋಟ ತಂತ್ರದ ಮೂಲಕ ವಿಷಯಗಳನ್ನು ನಿರೂಪಿಸುತ್ತಾ ಒಂದು ಕಾಲದ ಜೀವನಕ್ರಮವನ್ನು ಹಿಡಿದಿಡುವ ಕತೆಗಳು ಮಾನವೀಯ ಸಂಬಂಧಗಳ ಸೂಕ್ಷ್ಮ ರೂಪವನ್ನು ವಿಶ್ಲೇಷಿಸುತ್ತವೆ. ಗಂಡು ಹೆಣ್ಣೆಂಬ ಭೇದವಿಲ್ಲದೆ ತಮಗೊದಗಿದ ಕಷ್ಟಕರ ಪರಿಸ್ಥಿತಿಯ ನಡುವೆ ಸಿಕ್ಕು ಅಸಹಾಯಕರಾದವರು ಸ್ವೀಕರಿಸುವ ದಿಟ್ಟ ನಿಲುವು, ಸಮಸ್ಯೆಗಳನ್ನು ಎದುರಿಸುವ ರೀತಿಯು ಮುಖ್ಯವಾಗುತ್ತದೆ. ‘ಕುಂಕುಮ ಭರಣಿ’ ಎಂಬ ಕತೆಯಲ್ಲಿ ಕಾಣಿಸುವ ಕುಟುಂಬದೊಳಗೆ ಪರಸ್ಪರ ಸಂಬಂಧವನ್ನು ಹೊಂದಿದ ಎರಡು ವರ್ಗಗಳು ಕಾಣಿಸುತ್ತವೆ. ಮಾವ ಅತ್ತೆಯವರ ಸಂಬಂಧ ಹೊಂದಾಣಿಕೆಯದೆಂದು ಮೇಲ್ನೋಟಕ್ಕೆ ತೋರುವುದಾದರೂ ಅವರ…

Read More

ಮಂಗಳೂರು : ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಭಿವಂದನಾ ಸಮಿತಿ ವತಿಯಿಂದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅಭಿವಂದನ ಮತ್ತು ‘ಕರ್ಮಯೋಗಿ’ ಬಿರುದು ಪ್ರದಾನ ಸಮಾರಂಭವು ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ದಿನಾಂಕ 10 ಮೇ 2025ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ “ಬಹಳ ಉತ್ತಮವಾಗಿ ಆಯೋಜಿಸಲಾದ ಈ ಅಭಿವಂದನಾ ಕಾರ್ಯಕ್ರಮವು ಸಾಮಾನ್ಯ ಕಾರ್ಯಕ್ರಮಗಳಂತಲ್ಲ. ಇದು ಕರ್ನಾಟಕದ ಯುವ ಸಮುದಾಯಕ್ಕೆ ಹರಿಕೃಷ್ಣ ಪುನರೂರು ಅವರ ವ್ಯಕ್ತಿತ್ವದ ಪರಿಚಯದ ಕಾರ್ಯಕ್ರಮ. ಶಾಲಾ, ಕಾಲೇಜುಗಳಲ್ಲಿ ಒಂದಷ್ಟನ್ನು ಕಲಿಯಬಹುದು. ಇಂತಹ ವ್ಯಕ್ತಿ ಪರಿಚಯದಿಂದ ಈಗಿನ ಪೀಳಿಗೆ ಕಲಿಯಲು ಅಗಾಧವಾಗಿದೆ. ಜಿಲ್ಲೆಯ ಪರಂಪರೆ ಮತ್ತು ಸಂಸ್ಕತಿಯನ್ನು ಕಾಣುವುದಿದ್ದರೆ ಅದು ಪುನರೂರರಿಂದ ಮಾತ್ರ. ಇವರ ಸೇವಾ ಗುಣವು ನಿಜಕ್ಕೂ ಸಮಾಜಕ್ಕೆ ಮಾದರಿ. ಮನುಷ್ಯ ಕೊನೆಗೆ ಹೋಗುವಾಗ ತನ್ನ ಯಾವುದೇ ಅಧಿಕಾರವನ್ನು ತೆಗೆದುಕೊಂಡು ಹೋಗುವುದಿಲ್ಲ. ಆತ ಯಾವುದನ್ನಾದರೂ ತೆಗೆದುಕೊಂಡು ಹೋಗುವುದಿದ್ದರೆ ಅದು ಪ್ರೀತಿ ಮತ್ತು ವಿಶ್ವಾಸ ಮಾತ್ರ” ಎಂದರು.…

Read More

ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ‘ಡಿವೈನ್ ಸೋಜರ್ನ್’ ಸಂಗೀತ ಕಾರ್ಯಾಗಾರವು ದಿನಾಂಕ 24 ಮತ್ತು 25 ಮೇ 2025ರಂದು ಸಂಜೆ 8-00 ಗಂಟೆಗೆ ಗೂಗಲ್ ಮೀಟ್ ನಲ್ಲಿ ನಡೆಯಲಿದೆ. ಸಂಗೀತ ಸಾಮ್ರಾಟ್ ಚಿತ್ರವೀಣಾ ಎನ್. ರವಿಕಿರಣ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 7411916098 ಸಂಖ್ಯೆಯನ್ನು ಸಂಪರ್ಕಿಸಿರಿ.

Read More