Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2022ನೇ ಸಾಲಿನಲ್ಲಿ (ದಿನಾಂಕ 01-01-2022ರಿಂದ 31-12-2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ 01-01-2023ರಿಂದ 31-12-2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನಕ್ಕಾಗಿ ಲೇಖಕರು, ಪ್ರಕಾಶಕರು ಹಾಗೂ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿಗೆ ದಿನಾಂಕ 20-07-2024ರ ಒಳಗಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಸುಳ್ಯ : ಸುಳ್ಯದ ರಂಗ ಮಯೂರಿ ಕಲಾಶಾಲೆಯ ವತಿಯಿಂದ ‘ಯಕ್ಷಗಾನದ ಒಂದು ಅವಲೋಕನ’ ಯಕ್ಷಗಾನ ಗೋಷ್ಠಿ ಮತ್ತು ತಾಳಮದ್ದಳೆ ಕಾರ್ಯಕ್ರಮವನ್ನು ದಿನಾಂಕ 06-07-2024ರಂದು ಅಪರಾಹ್ನ 2-00 ಗಂಟೆಗೆ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗ ಮಯೂರಿ ಕಲಾಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಯಕ್ಷಗಾನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳು ಮತ್ತು ಯಕ್ಷಗಾನ ಕಲಾವಿದರಾದ ಡಾ. ಪ್ರಭಾಕರ ಶಿಶಿಲ ವಹಿಸಿ, ‘ಯಕ್ಷಗಾನದ ಬೆಳವಣಿಗೆಯಲ್ಲಿ ಸಹಭಾಗಿತ್ವ’ ಎಂಬ ವಿಷಯದಲ್ಲಿ ವಿಚಾರ ಮಂಡಿಸಲಿದ್ದಾರೆ. ‘ಯಕ್ಷಗಾನವನ್ನು ತಲೆಮಾರಿಗೆ ವರ್ಗಾಯಿಸುವ ಸಾಧ್ಯತೆಗಳು’ ಎಂಬ ವಿಚಾರದ ಬಗ್ಗೆ ಲೇಖಕರು ಹಾಗೂ ಸಂಶೋಧಕರಾದ ಡಾ. ಸುಂದರ ಕೇನಾಜೆ ವಿಚಾರ ಮಂಡಿಸಲಿದ್ದಾರೆ. ‘ಯಕ್ಷಗಾನ ಸಂಘಟನೆಯ ಸವಾಲುಗಳು ಮತ್ತು ಪರಿವಾರ’ ಎಂಬ ವಿಷಯದ ಬಗ್ಗೆ ಯಕ್ಷಗಾನ ಕಲಾವಿದರು ಹಾಗೂ ಸಂಘಟಕರಾದ ಶ್ರೀ ನಾರಾಯಣ ದೇಲಂಪಾಡಿ ವಿಚಾರ ಮಂಡಿಸಲಿದ್ದಾರೆ. ಕವಿ ಮೂಲಿಕೆ ರಾಮಕೃಷ್ಣಯ್ಯ ವಿರಚಿತ ‘ಭಕ್ತ ಸುಧನ್ವ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆಯನ್ನು ಖ್ಯಾತ ಕಲಾವಿದರು ಪ್ರಸ್ತುತಪಡಿಸಲಿದ್ದಾರೆ. ಹಿಮ್ಮೇಳದಲ್ಲಿ ಭಾಗವತಿಕೆಯಲ್ಲಿ ಶ್ರೀ ಸುಬ್ರಾಯ ಸಂಪಾಜೆ, ಚೆಂಡೆ ವಾದಕರಾಗಿ ಶ್ರೀ…
‘ಶಂಕಣ್ಣ ಭಟ್ಟರಿಗೆ ವಹಿವಾಟು ನೂರು/ಮನೆಯಿಂದ ಹೊರಟರೆ ಭಾರೀ ಕಾರ್ಬಾರು/ ಮಾತಿಗೆ ನಿಂತರೆ ಹೋದೀತು ಬೇಜಾರು/ ಮನೆಯಲ್ಲಿ ನೋಡಿದರೆ ಹೆಂಡತಿಯೇ ಜೋರು’, ಎಂದು ಹಾಸ್ಯ ಸಾಹಿತಿ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ಟರು ವೇದಿಕೆಯೇರಿ ಹೇಳುವಾಗ ಇಡೀ ಸಭೆಯೇ ನಗೆಗಡಲಲ್ಲಿ ತೇಲುತ್ತದೆ. ಕರತಾಡನ ಮೇರೆ ಮೀರುತ್ತದೆ. ಕೇವಲ ಹಾಸ್ಯಕ್ಕೆ ಸೀಮಿತವಾಗದೆ ಚುಟುಕು ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಅನೇಕ ರಚನೆಗಳೂ ಅವರ ಬತ್ತಳಿಕೆಯಲ್ಲಿದ್ದವು. ತಮ್ಮ ಪಾಡಿಗೆ ಸದ್ದಿಲ್ಲದೆ, ಇಳಿವಯಸ್ಸಿನಲ್ಲೂ ಮಕ್ಕಳ ಸಾಹಿತ್ಯ ಹಾಗೂ ಹಾಸ್ಯ ಸಾಹಿತ್ಯದ ಮೂಲಕ, ಅನಾರೋಗ್ಯವನ್ನೂ ಲೆಕ್ಕಿಸದೆ ಕ್ರಿಯಾಶೀಲರಾಗಿದ್ದ ಕಕ್ಕೆಪ್ಪಾಡಿ ಶಂಕರನಾರಾಯಣ ಭಟ್ಟರು ನಮ್ಮೆಲ್ಲರನ್ನೂ ನಗಿಸುತ್ತಲೇ ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ 21-06-2024ರಂದು ತಮ್ಮ ಸಾರ್ಥಕ ಬದುಕಿಗೆ ವಿದಾಯ ಹೇಳಿದರು. ಇದು ಅವರ ಆದರ್ಶದ ಬದುಕಿಗೊಂದು ಗೌರವದ ನುಡಿನಮನ. ಕಾಸರಗೋಡು ಜಿಲ್ಲೆಯ ದೇಲಂಪಾಡಿ ಗ್ರಾಮ ಪಂಚಾಯಿತಿನ ಕೊಟ್ಯಾಡಿ ಸಮೀಪದ ಕಕ್ಕೆಪ್ಪಾಡಿಯ ಶಂಕರನಾರಾಯಣ ಭಟ್ಟರು ಸಣ್ಣ ಪ್ರಮಾಣದ ಕೃಷಿಕರು, ಖ್ಯಾತ ಪಶು ನಾಟಿವೈದ್ಯರು, ಯಕ್ಷಗಾನ ಕಲಾವಿದರು, ಜನಮನ ಗೆದ್ದ ಹಾಸ್ಯ ಸಾಹಿತಿಯಾಗಿದ್ದವರು.…
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 01-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀಮತಿ ಅನ್ನಪೂರ್ಣ ರಿತೇಶ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಅನ್ನಪೂರ್ಣ ರಿತೇಶ್ ಇವರು ಶ್ರೀ ಚಂದ್ರಶೇಖರ ಶೆಟ್ಟಿ ಮತ್ತು ಶ್ರೀಮತಿ ಮಾಲತಿ ಶೆಟ್ಟಿ ದಂಪತಿಗಳ ಸುಪುತ್ರಿ. ಕೊಟ್ಟಾರದ ಭರತಾಂಜಲಿ ಸಂಸ್ಥೆಯ ಗುರುದಂಪತಿಗಳಾದ ವಿದುಷಿ ಪ್ರತಿಮಾ ಶ್ರೀಧರ್ ಹಾಗೂ ಶ್ರೀಧರ್ ಹೊಳ್ಳ ಭರತನಾಟ್ಯದ ಅಭ್ಯಾಸವನ್ನು ಪ್ರಾರಂಭಿಸಿದರು. ಮುಲ್ಕಿಯ ವಿಜಯ ಕಾಲೇಜಿನಲ್ಲಿ ಬಿ.ಬಿ.ಎಂ. ಪದವಿ ಮತ್ತು ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯನ್ನು ಪೂರೈಸಿ, ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಭರತನಾಟ್ಯದ ಎಂ.ಎ. ಪದವಿಯನ್ನು ಪ್ರಥಮ ಶ್ರೇಣಿಯೊಂದಿಗೆ ಪಡೆದಿರುವ ಇವರು ಕರ್ನಾಟಕ ಸಂಗೀತ ಅಕಾಡೆಮಿಯು ಕೊಡುವಂತಹ ಶಿಷ್ಯ ವೇತನವನ್ನು ಪಡೆದಿರುತ್ತಾರೆ. ಶಿವಪ್ರಣಾಮ್ ನೃತ್ಯ ಶಾಲೆ…
ಸಾಣೇಹಳ್ಳಿ : ಶ್ರೀ ಗುರುಪಾದೇಶ್ವರ ಪ್ರೌಢಶಾಲೆ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ದಿನಾಂಕ 28-06-2204ರಂದು 2024-25ನೆಯ ಸಾಲಿನ ‘ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ’ ಸಮಾರಂಭವು ನಡೆಯಿತು. ಈ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ “ಪ್ರೌಢಶಾಲೆ ಎಷ್ಟು ಮುಖ್ಯವೋ ಪ್ರಾಥಮಿಕ ಶಾಲೆಯೂ ಅಷ್ಟೇ ಮುಖ್ಯ. ಅಧ್ಯಾಪಕರು ಆಸಕ್ತಿಯನ್ನು ವಹಿಸಿ ಬೋಧನೆ ಮಾಡಬೇಕು, ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕೇಳಬೇಕು. ಆಗ ಮಾತ್ರ ಕಲಿಕೆಯಲ್ಲಿ ಮುಂದುವರಿಯಲು ಸಾಧ್ಯ. ಕೇವಲ ಅಂಕಗಳಿಂದಲೇ ವಿದ್ಯಾರ್ಥಿಯ ಗುಣಮಟ್ಟವನ್ನು ಅಳೆಯುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳು ಓದಿನ ಜೊತೆ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಓದುವುದರೊಂದಿಗೆ ನಮ್ಮ ನಡೆ ನುಡಿಗಳೂ ಮುಖ್ಯ. ವಿದ್ಯಾರ್ಥಿಗಳು ನಕಾರಾತ್ಮಕ ಭಾವನೆಗಳನ್ನು ಬಿಟ್ಟು ಸಕಾರಾತ್ಮಕ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಮನೆಯಲ್ಲಿ ಮತ್ತು ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರ ನೀಡುವ ಕೆಲಸವೂ ಆಗಬೇಕು” ಎಂದರು. ದೀಪ ಬೆಳಗಿಸುವುದರ ಮೂಲಕ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಕಾರ್ಯ ನೆರವೇರಿಸಿದ ಹಿರಿಯೂರು…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ದಿನಾಂಕ 01-07-2024ರಂದು ಬೆಳಗ್ಗೆ 11-00 ಗಂಟೆಗೆ ಲೇಡಿಹಿಲ್-ಉರ್ವ ಮಾರ್ಕೆಟ್ ರಸ್ತೆಯ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿಧಾನ ಸಭೆ ಸಭಾಪತಿಗಳಾದ ಯು.ಟಿ. ಖಾದರ್ ಇವರು ಈ ಸಮಾರಂಭದ ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರಾದ ತಾರಾನಾಥ ಕಾಮತ್ ಇವರಿಗೆ ಸನ್ಮಾನಿಸಲಾಗುವುದು. ನಿವೃತ್ತ ಉಪನ್ಯಾಸಕರು ಹಾಗೂ ಅಂಕಣಕಾರರಾದ ಶ್ರೀಮತಿ ಭುವನೇಶ್ವರಿ ಹೆಗಡೆ ಇವರು ‘ಮಾಧ್ಯಮ ಹಾಗೂ ಸಾಮಾಜಿಕ ಜವಾಬ್ದಾರಿ’ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಜುಲೈ ತಿಂಗಳ ಸಾಪ್ತಾಹಿಕ ಸರಣಿ ಕಾರ್ಯಕ್ರಮವು ದಿನಾಂಕ 01-07-2024, 08-07-2024, 15-07-2024, 22-07-2024 ಮತ್ತು 29-07-2024ರಂದು ಪ್ರತೀ ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ದಿನಾಂಕ 01-07-2024ರಂದು ನಡೆಯಲಿರುವು ಸರಣಿ 52ರಲ್ಲಿ ಮಂಗಳೂರಿನ ಶ್ರೀಮತಿ ಅನ್ನಪೂರ್ಣ ರಿತೇಶ್, ದಿನಾಂಕ 08-07-2024ರಂದು ನಡೆಯಲಿರುವು ಸರಣಿ 53ರಲ್ಲಿ ಬೆಂಗಳೂರಿನ ಅರ್ಚನ ಹೆಚ್.ಆರ್., ದಿನಾಂಕ 15-07-2024ರಂದು ನಡೆಯಲಿರುವು ಸರಣಿ 54ರಲ್ಲಿ ಉಡುಪಿಯ ಕುಮಾರಿ ಗೌತಮಿ, ದಿನಾಂಕ 22-07-2024ರಂದು ನಡೆಯಲಿರುವು ಸರಣಿ 55ರಲ್ಲಿ ಉಡುಪಿಯ ವಿದುಷಿ ಕುಮಾರಿ ವಸುಂಧರಾ ಮತ್ತು ದಿನಾಂಕ 29-07-2024ರಂದು ನಡೆಯಲಿರುವು ಸರಣಿ 56ರಲ್ಲಿ ಕುಮಾರಿ ಖುಷಿ ಕನ್ನರ್ಪಾಡಿ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.
ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡದ ಹೊಸ ನಾಟಕ ‘ನಾಣಿ ನಾರಾಯಣ’ ಇದರ ಪ್ರಥಮ ಪ್ರದರ್ಶನ ದಿನಾಂಕ 24-06-2024ರಂದು ನಡೆಯಿತು. ಈ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಬ್ರಹ್ಮಣ್ಯ ಇವರು ನೆರವೇರಿಸಿದರು. ಈ ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ ಪಾತ್ರಗಳಲ್ಲಿ ಅಭಿನಯಿಸಿದರು. ಈ ನಾಟಕದ ರಂಗರೂಪ ಶ್ರೀ ವಿಧೇಯನ್, ಸಾಹಿತ್ಯ ಸುರೇಶ್ ಬಾಳಿಲ, ಸಂಗೀತ ಶ್ರೀ ದಿವಾಕರ್ ಕಟೀಲು ಹಾಗೂ ಗೌತಮ್ ಬಿರುವ, ನಿರ್ದೇಶನ ಶ್ರೀ ವಿದ್ದು ಉಚ್ಚಿಲ. ನಾಟಕ ತಂಡ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಗಣೇಶ್ ಪ್ರಸಾದ್, ಸಂಚಾಲಕ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ರಂಗಪ್ರೇರಣ ನಾಟಕ ತಂಡದ ಸಂಯೋಜಕರಾದ ಶ್ರೀ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ನಾಟಕದ ವೀಕ್ಷಣೆಯನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾಡಿದರು.
ಉಜಿರೆ : ವಿದುಷಿ ಚೈತ್ರಾ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭವು ದಿನಾಂಕ 22-06-2024ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಇವರು ಮಾತನಾಡಿ “ಭಾರತದ ಅಪೂರ್ವ ಕಲೆಗಳು ಮತ್ತು ಮಾನವಸಂಪನ್ಮೂಲ ಇವು ದೇಶದ ಅಮೂಲ್ಯ ಸಂಪತ್ತು ಹಾಗೂ ವರದಾನವಾಗಿದೆ. ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಕಲೆಗಳನ್ನೂ ಹವ್ಯಾಸವಾಗಿ ಕರಗತ ಮಾಡಿಕೊಳ್ಳಬೇಕು. ಎಂಟು ವಿಧದ ಶಾಸ್ತ್ರೀಯ ನೃತ್ಯಗಳಲ್ಲಿ ಭರತನಾಟ್ಯ ಸರ್ವಶ್ರೇಷ್ಠ ಕಲೆಯಾಗಿದೆ. ಹಿಂದೆ ಕೇವಲ ಬೆರಳಣಿಕೆಯಷ್ಟು ನೃತ್ಯ ಶಿಕ್ಷಕರಿದ್ದರೆ ಇಂದು ಕರ್ನಾಟಕದಲ್ಲಿ ಸುಮಾರು ಮೂರು ಸಾವಿರ ನೃತ್ಯ ಶಿಕ್ಷಕರಿದ್ದಾರೆ. ನೃತ್ಯ ಅಭ್ಯಾಸ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ” ಎಂದರು. ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, “ಭಾವ ಪ್ರಧಾನವಾದ ನಾಟ್ಯಕ್ಕೆ ಭಾಷೆಯ ಹಂಗಿಲ್ಲ” ಎಂದರು. ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ “ಯುವ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು” ಎಂದು ಹೇಳಿದರು. ರಾಜಶ್ರೀ ಉಳ್ಳಾಲ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ ‘ಚಾವುಂಡರಾಯ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭವು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದಿನಾಂಕ 28-06-2024ರಂದು ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಮಾತನಾಡಿ “ಕನ್ನಡ ಸಾಹಿತ್ಯಕ್ಕೆ ಜೈನರು ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಅದರ ಅಡಿಪಾಯದ ಮೇಲೆ ನಮ್ಮ ಭವ್ಯ ಸಾಹಿತ್ಯ ಸೌಧ ನಿರ್ಮಾಣಗೊಂಡಿದೆ. ಇವತ್ತು ಜೈನರ ಒಟ್ಟು ಜನಸಂಖ್ಯೆಯ ಪ್ರಮಾಣ ಶೇಕಡಾ ಒಂದಕ್ಕಿಂತ ಕಡಿಮೆ ಇರಬಹುದು. ಆದರೆ ಪ್ರಾಚೀನ ಕನ್ನಡ ಸಾಹಿತ್ಯದ ಆರಂಭದಿಂದ ತೊಡಗಿ ನಡುಗನ್ನಡವನ್ನೂ ಸೇರಿಸಿಕೊಂಡರೆ ಅವರ ಕೊಡುಗೆ ಸಂಖ್ಯೆಯಲ್ಲಿ ಮಾತ್ರ ಅಲ್ಲ, ಗುಣಮಟ್ಟದಲ್ಲೂ ಕನ್ನಡ ಸಾಹಿತ್ಯದ ಅರ್ಧಭಾಗವನ್ನು ಗಾಢವಾಗಿ ಆವರಿಸುತ್ತದೆ. ಒಂದು ಅಂದಾಜಿನ ಪ್ರಕಾರ ಸುಮಾರು 450 ಜೈನ ಕವಿಗಳು, 520ಕ್ಕೂ ಹೆಚ್ಚಿನ ಕನ್ನಡ ಕೃತಿಗಳನ್ನು ರಚಿಸಿದ್ದಾರೆ. ಪುರಾಣ, ಮಹಾಕಾವ್ಯ, ಜನಪದ ಕಥೆ, ಕಾವ್ಯಶಾಸ್ತ್ರ, ಛಂದಸ್ಸು, ವ್ಯಾಕರಣ, ಸೂಪಶಾಸ್ತ್ರ, ಗಣಿತಶಾಸ್ತ್ರ, ಚಂಪೂ, ಗದ್ಯ, ಸಾಂಗತ್ಯ, ಮುಕ್ತಕ -ಹೀಗೆ ಹಲವು ಪ್ರಕಾರಗಳಲ್ಲಿ ಹಲವು…