Author: roovari

ಉಡುಪಿ : ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ ಮತ್ತು ರಾಷ್ಟ್ರೀಯ ಸೇವೆ ಯೋಜನೆ ಘಟಕ ಇದರ ವತಿಯಿಂದ ದಿನಾಂಕ 15 ಮಾರ್ಚ್ 2025ರಂದು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಎನ್.ಎಸ್.ಎಸ್. ಸಹಯೋಗದೊಂದಿಗೆ ‘ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದಲ್ಲಿ ಭಾಗವಹಿಸಿದ ಛಾಯಾಚಿತ್ರ ಪತ್ರಕರ್ತ ಜನಾರ್ದನ ಕೊಡವೂರು ಮಾತನಾಡುತ್ತಾ “ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. ಜೀವ ಜಡ ಜಗತ್ತನ್ನು ಸೀಮಿತ ಪರಿಧಿಯೊಳಗೆ ಸೆರೆಹಿಡಿಯಬಲ್ಲಾತನೇ ಸಮರ್ಥ ಛಾಯಾಗ್ರಾಹಕ. ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ.ಯವರು ವಹಿಸಿಕೊಂಡಿದ್ದರು. ಕನ್ನಡ ವಿಭಾಗದ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ನಾ ಡಿಸೋಜಾ ದತ್ತಿ ನಿಧಿ ಕಾರ್ಯಕ್ರಮವು ದಿನಾಂಕ 20 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ವಹಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್ ಇವರು ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ. ವಿರಾಜಪೇಟೆಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ. ದಯಾನಂದ ಇವರು ಉದ್ಘಾಟನೆಯನ್ನು ನಡೆಸಲಿದ್ದು, ದತ್ತಿ ಉಪನ್ಯಾಸಕರಾಗಿ ಗಾಳಿಬೀಡು ನವೋದಯ ವಿದ್ಯಾಲಯ ಉಪನ್ಯಾಸಕರು ಹಾಗೂ ಸಾಹಿತಿ ಮಾರುತಿ ದಾಸಣ್ಣನವರ್ ಇವರು ಭಾಗವಹಿಸಲಿರುವರು. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಉಪವಿಭಾಗದ ಪೋಲೀಸ್ ಉಪ ಅಧೀಕ್ಷಕರು ಎಸ್. ಮಹೇಶ್ ಕುಮಾರ್, ವಿರಾಜಪೇಟೆ ತಾಲೂಕು ಕನ್ನಡ…

Read More

ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘ (ರಿ.) ಇದರ ವತಿಯಿಂದ ‘ಅರಿವೆಂಬುದು ಬಿಡುಗಡೆ’ 8ನೆಯ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನವನ್ನು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಬೆಂಗಳೂರಿನ ಮಹಾರಾಣಿ ಕಾಲೇಜಿನ ಪಕ್ಕ ಅರಮನೆ ರಸ್ತೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆವರಣದ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 22 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಗೀತ ಗಾಯನ. ಖ್ಯಾತ ಸ್ತ್ರೀವಾದಿ ಚಿಂತಕರಾದ ಡಾ. ಎಚ್. ಎಸ್. ಶ್ರೀಮತಿ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಮಾನ್ಯ ಮುಖ್ಯ ಮಂತ್ರಿಗಳು ಸಿದ್ಧರಾಮಯ್ಯರವರು ಈ ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ‘ವಿಶೇಷ ಲೇಖಕಿ’, ‘ಲೇಖ ಲೋಕ -9’, ಕರ್ನಾಟಕ ಲೇಖಕಿಯರ ಸಂಘ ನಡೆದು ಬಂದ ದಾರಿಯ ಕಥನ’ ಮತ್ತು ‘ಊರ್ಮಿಳಾ’ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಕರ್ನಾಟಕ ಲೇಖಕಿಯರ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ ನಡೆಯಲಿದೆ. ಶ್ರೀಷ್ಮಾ ಸುಕುಮಾರ್, ಲಕ್ಷ್ಮೀ ಶ್ರೀನಿವಾಸ್, ಲತಾ ಪ್ರಶಾಂತ್, ರಮ್ಯಾ ಸುಧೀರ್…

Read More

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಆಯೋಜಿಸಿದ ‘ಹಿರಿಯ ಸಾಹಿತಿಗಳ ಸಂಪರ್ಕ’ ಅಭಿಯಾನದ ಕಾರ್ಯಕ್ರಮವು ದಿನಾಂಕ 16 ಮಾರ್ಚ್ 2025ರ ಭಾನುವಾರ ಜಾನಪದ ವಿದ್ವಾಂಸ, ಹಿರಿಯ ಸಾಹಿತಿ ಡಾ. ಗಣೇಶ್ ಅಮೀನ್ ಸಂಕಮಾರ್ ಇವರ ಸ್ವಗೃಹದಲ್ಲಿ ನಡೆಯಿತು. ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಡಾ. ಗಣೇಶ್ ಅಮೀನ್ ಸಂಕಮಾರ್ ಮಾತನಾಡಿ “ಅಕ್ಷರ ಲೋಕಕ್ಕೆ ಪ್ರಬಲವಾದ ಶಕ್ತಿ ಇದೆ. ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದುವ ಅಭಿರುಚಿ ಬೆಳೆಸುವುದು ಅವಶ್ಯವಾಗಿದೆ. ಗೂಗಲ್ ಬದಲು ಗ್ರಂಥಾಲಯ ಅವಲಂಬಿಸಲು ಪ್ರೇರಣೆ ನೀಡಬೇಕು. ಸಾಹಿತ್ಯದ ಮೂಲಬೇರು ನಮ್ಮ ಜನಪದದಲ್ಲಿದೆ. ಬದುಕಿನ ನೋವು ಜನಪದ ಸಾಹಿತ್ಯದ ಮೂಲಕ ಹೊರಹೊಮ್ಮಲು ಸಾಧ್ಯವಾಗಿದೆ. ಸಾಹಿತಿಗಳು ಮನಸ್ಸುಗಳನ್ನು ಕಟ್ಟುವ ಜತೆಗೆ ಸಮಾಜದ ಧ್ವನಿಯಾಗಬೇಕು. ಇಂದು ಸಾಹಿತ್ಯ ಸಮ್ಮೇಳನಗಳು ರಾಜಕೀಯ ಅಬ್ಬರದ ಪ್ರದರ್ಶನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಸಮ್ಮೇಳನ ನಿಜಾರ್ಥದಲ್ಲಿ ಸಾಹಿತಿಗಳ ಸಮ್ಮೇಳನವಾಗಬೇಕು” ಎಂದು ಅಭಿಪ್ರಾಯ ಪಟ್ಟರು. ಅ. ಭಾ. ಸಾ. ಪ. ಜಿಲ್ಲಾ ಖಜಾಂಜಿ ಭಾಸ್ಕರ ರೈ ಕಟ್ಟ, ಸಾಹಿತ್ಯ ಕೂಟದ ಮುಖ್ಯಸ್ಥೆ ಗೀತಾ ಲಕ್ಷ್ಮೀಶ್,…

Read More

ವ್ಯಕ್ತಿಯೊಬ್ಬರ ಅಸಹಾಯಕತೆಯನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವ ಶಕ್ತಿಗಳು ಸಾಮಾಜಿಕ ವ್ಯವಸ್ಥೆಯಲ್ಲಿ ಹೇಗೆಲ್ಲಾ ಆಟವಾಡುತ್ತವೆ ಎಂದು ಹೇಳುವ ನಾಟಕ ‘ಈ ಪರಗಣ’. ‘ಸುಸ್ಥಿರ ಫೌಂಡೇಶನ್’ ಆಯೋಜಿಸಿದ್ದ ರಂಗ ತರಬೇತಿ ಶಿಬಿರದ ಭಾಗವಾಗಿ ನಿರ್ಮಿಸಿರುವ ಈ ಹಾಸ್ಯಮಯ ನಾಟಕವನ್ನು ಜೋಸೆಫ್ ಜಾನ್ ರವರು ನಿರ್ದೇಶಿಸಿದ್ದು, ದಿನಾಂಕ 14 ಮಾರ್ಚ್ 2025ರಂದು ಕಲಾಗ್ರಾಮದ ರಂಗಮಂದಿರದಲ್ಲಿ ಪ್ರದರ್ಶನಗೊಂಡು ನೋಡುಗರನ್ನು ವಿನೋದದಲ್ಲಿ ತೇಲಿಸಿ ವಿಷಾದದಲ್ಲಿ ಮುಳುಗಿಸಿತು. ಕಲ್ಲೂರಿನ ರಾಜಪ್ಪ ಎನ್ನುವ ವ್ಯಕ್ತಿ ಬದುಕಿನಲ್ಲಿ ಹತಾಶೆಗೊಳಗಾಗಿ ಮರವೊಂದನ್ನು ಹತ್ತಿದ್ದರ ಸುತ್ತ ಇಡೀ ನಾಟಕ ಸುತ್ತುತ್ತದೆ. ಈ ಸಂಗತಿ ಸುದ್ದಿ ಮಾಧ್ಯಮದಲ್ಲಿ ಪ್ರಚಾರ ಪಡೆದು ಜನಜಂಗುಳಿ ಸೇರಿದ ಸನ್ನಿವೇಶವನ್ನು ಪಂಚಾಯಿತಿ ಅಧ್ಯಕ್ಷ ಕಣ್ಣಪ್ಪನಂತವರು ಹೇಗೆ ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ ಎಂಬುದನ್ನು ವಿಡಂಬನಾತ್ಮಕವಾಗಿ ನಾಟಕದಾದ್ಯಂತ ತೋರಿಸಲಾಗಿದೆ. ಮರವೇರಿ ಸಾಯುತ್ತೇನೆ ಎನ್ನುವಾತನನ್ನು ನೋಡಲು ಜನಜಾತ್ರೆ ಸೇರಿದ್ದನ್ನೇ ನೆಪವಾಗಿಸಿಕೊಂಡು ವ್ಯಾಪಾರಸ್ಥರು ಲಾಭ ಮಾಡಿಕೊಳ್ಳಲು ಹಾತೊರೆದರೆ, ಲೋಕಲ್ ಪುಡಾರಿಗಳು ವಾಹನಗಳ ಪಾರ್ಕಿಂಗ್ ಫೀಸ್‌ ವಸೂಲಿ ದಂಧೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಕ್ಕಿಳಿಯುತ್ತಾರೆ. ರಾಜಕಾರಣಿಗಳು ಪಾರ್ಟಿ ಫಂಡ್ ಬರುವುದಾದರೆ…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ‘ಆಜೀವಿಕ’ ಪ್ರಸ್ತುತ ಪಡಿಸುವ ಹೊಸ ನಾಟಕ ‘ಅಲ್ಲಮನ ಬಯಲಾಟ’ ಮೊದಲ ಪ್ರದರ್ಶನವನ್ನು ದಿನಾಂಕ 22 ಮಾರ್ಚ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ರಚನೆ : ಲಕ್ಷ್ಮೀಪತಿ ಕೋಲಾರ, ನಿರ್ದೇಶನ : ಡಾ. ಉದಯ್ ಸೋಸಲೆ, ಸಹ ನಿರ್ದೇಶನ : ವಾಸವಿ, ಸಂಗೀತ: ಹನುಮಂತ್ ಮಂಡ್ಯ, ಬೆಳಕು : ಮಹದೇವಸ್ವಾಮಿ ಮತ್ತು ಪ್ರಸಾಧನ : ಮೋಹನ್ ಕುಮಾರ್ ಇವರದ್ದು. ಹೆಚ್ಚಿನ ಮಾಹಿತಿಗಾಗಿ 9901290575 ಸಂಖ್ಯೆಯನ್ನು ಸಂಪರ್ಕಿಸಿರಿ. ಅಲ್ಲಮನ ತಾತ್ವಿಕ ಯಾನದಲ್ಲಿ ಜತೆಗೂಡಿ ಈ ನೆಲದ ಸಂಸ್ಕೃತಿ ಇತಿಹಾಸದ ಅಜ್ಞಾತ ಮಗ್ಗಲುಗಳ ಸ್ಪಷ್ಟವಾದ ಅರಿವು ದಕ್ಕಿಸಿಕೊಳ್ಳುತ್ತ, ಆ ಹುಡುಕಾಟದ ಜಾಡಿನಲ್ಲೇ ನಡೆಯುತ್ತ, ಸಮಗ್ರ ಬದಲಾವಣೆಗೆ ಅಗತ್ಯವಾದ ಮೊದಲ ಹಂತದ ಸಾಂಸ್ಕೃತಿಕ ಕ್ರಾಂತಿಯ ವಿನ್ಯಾಸವನ್ನು ಹಾಗೂ ಸಂಶೋಧನಾತ್ಮಕ ಮಾದರಿಯೊಂದನ್ನು ರೂಪಿಸುವಂತಹ ಮಹತ್ವದ ಹೊಣೆಗಾರಿಕೆಯನ್ನು ಸ್ವಯಂ ಹೆಗಲಿಗೇರಿಸಿಕೊಂಡಿರುವ ‘ಆಜೀವಿಕ’ ಬದ್ಧತೆ ಪ್ರಾಮಾಣಿಕ ಮನಸ್ಸುಗಳ…

Read More

ಮಡಿಕೇರಿ : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭವನ್ನು ದಿನಾಂಕ 23 ಮಾರ್ಚ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ, ಹಿರಿಯ ಸಾಹಿತಿ ಭಾರಧ್ವಜ್ ಕೆ. ಆನಂದತೀರ್ಥ, ಕನ್ನಡ ಭವನ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಪಿ. ರಾಜೇಶ್ ಚಂದ್ರ ಪಾಲ್ಗೊಳ್ಳಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷೆ…

Read More

ಪುತ್ತೂರು : ಪುತ್ತೂರಿನ ‘ಬಹುವಚನಂ’ ಹಾಗೂ ನಿರತ ನಿರಂತ ಆಯೋಜನೆಯಲ್ಲಿ ವಿಶ್ವರಂಗಭೂಮಿ ದಿನಾಚರಣೆಯ ಅಂಗವಾಗಿ ‘ಥೇಟರ್ ಮಾರ್ಚ್’ ಕಾರ್ಯಕ್ರಮವು ದಿನಾಂಕ 16 ಮಾರ್ಚ್ 2025ರ ಭಾನುವಾರದಂದು ಪರ್ಲಡ್ಕದಲ್ಲಿರುವ ಪದ್ಮಿನಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷ ರಂಗೋಪನ್ಯಾಸ ನೀಡಲು ಆಗಮಿಸಿದ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಮಾತನಾಡಿ “ನಾಟಕದ ಹುಟ್ಟಿನ ಹಿನ್ನೆಲೆಯಲ್ಲೂ ಆರಾಧನಾ ಪರಂಪರೆ ಇದೆ. ಗ್ರೀಕ್ ನೆಲದಲ್ಲಿ ರಂಗಭೂಮಿ ಬೆಳೆದು ಬಂದ ವಿವಿಧ ಆಯಾಮಗಳನ್ನು ವಿವಿಧ ನಾಟಕ, ನಾಟಕಕಾರರು ಹಾಗೂ ಪಾತ್ರಗಳ ಮೂಲಕ ತೆರೆದಿಟ್ಟರು. ರಂಜನೆ ಎಂಬ ಬೆಲ್ಲವನ್ನು ಸವರಿಕೊಂಡ ಕಹಿಗುಳಿಗೆ ರಂಗಭೂಮಿ. ರಂಗಭೂಮಿ ಕಾಲವನ್ನು ನಮ್ಮೆದುರಿಗೆ ಇಟ್ಟು ಮಾತನಾಡುತ್ತದೆ, ಶಿಕ್ಷಣದ ನೆಲೆ, ಹಿಡಿತದ ಭಾವ, ಪ್ರಖರ ವೈಚಾರಿಕತೆಯ ನೆಲೆಗಟ್ಟು, ಪ್ರಶ್ನೆ, ವಿಮರ್ಶೆ, ಸರಿಯಾದ ತಿಳುವಳಿಕೆಯೇ ರಂಗಭೂಮಿಯ ಹಿರಿಮೆ. ಅರಸು ರಾಕ್ಷಸ ಮಂತ್ರಿಯೆಂಬುವ ಮೊರೆವ ಹುಲಿ ಪರಿವಾರ ಹದ್ದಿನ ನೆರವಿ ಬಡವರ ಬಿನ್ನಪವನಿನ್ನಾರು ಕೇಳುವರು ಉರಿ ಉರಿವುತಿದೆ ದೇಶ ನಾವಿ ನ್ನಿರಲು ಬಾರದೆನುತ್ತ ಜನ ಬೇ ಸರದ ಬೇಗೆಯಲಿರದಲೇ ಭೂಪಾಲ…

Read More

ಬೆಂಗಳೂರು: ಡಿ. ವಿ. ಜಿಯವರ 138ನೆಯ ಮತ್ತು ಪು. ತಿ. ನ ಅವರ 120ನೆಯ ಜನ್ಮದಿನೋತ್ಸವ ಕಾರ್ಯಕ್ರಮವನ್ನು ದಿನಾಂಕ 18 ಮಾರ್ಚ್ 2025 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಇವರಿಬ್ಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಮಾತನಾಡಿ “ಡಿ. ವಿ. ಜಿ ಮತ್ತು ಪು. ತಿ. ನ ಇಬ್ಬರೂ ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಗಳನ್ನು ನೀಡಿದ್ದಾರೆ. ಇವತ್ತು ಕನ್ನಡ ಸಾಹಿತ್ಯ ಇಷ್ಟೊಂದು ಬಹುಮುಖಿಯಾಗಿ ಬೆಳೆಯಲು ಅವರ ಕೊಡುಗೆಗಳು ಮುಖ್ಯ ಕಾರಣ. ವಿದ್ವಾಂಸರು, ಪತ್ರಿಕಾ ಸಂಪಾದಕರು, ಸಾಹಿತ್ಯ ವಿದ್ವಾಂಸರ ನಿಕಟ ಪರಿಚಯವಿದ್ದ ಡಿ. ವಿ. ಗುಂಡಪ್ಪನವರು 1933ರಲ್ಲಿ ಪರಿಷತ್ತಿಗೆ ಉಪಾಧ್ಯಕ್ಷರಾಗಿ ಬಂದ ಮೇಲೆ ಪರಿಷತ್ತಿಗೆ ಹೊಸ ಹುರುಪು ಉಂಟಾಯಿತು. ಪರಿಷತ್ತಿಗೆ ಭವ್ಯವಾದ ಶ್ರೀಕೃಷ್ಣರಾಜಪರಿಷತ್ತಿನ ಮಂದಿರ ಕಟ್ಟಡ ನೆಲೆಯಾಗಿ ಸಿಕ್ಕಿತು. ಪರಿಷತ್ತಿನ ಕಾರ್ಯಾಲಯವನ್ನು ಸುವ್ಯವಸ್ಥೆಗೊಳಿಸಿದರು. ಪ್ರತಿವಾರವೂ ಪರಿಷತ್ತಿನಲ್ಲಿ ಸಾರ್ವಜನಿಕವಾಗಿ ಭಾಷಣ, ಕಾವ್ಯವಾಚನ ಇತ್ಯಾದಿ ನಡೆಯತೊಡಗಿತು. ಪರಿಷತ್ತು ಜನಪ್ರಿಯವಾಗಲು ಹೆಚ್ಚು ಹೆಚ್ಚು ಜನರು…

Read More

ಹಂಪಿ : ಹಸ್ತಪ್ರತಿಶಾಸ್ತ್ರ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಆಯೋಜಿಸುವ ಅಖಿಲ ಕರ್ನಾಟಕ ಇಪ್ಪತ್ತೊಂದನೆಯ ಹಸ್ತಪ್ರತಿ ಸಮ್ಮೇಳನವು ದಿನಾಂಕ 25 ಮತ್ತು 26 ಮಾರ್ಚ್ 2025ರಂದು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ನಡೆಯಲಿದೆ. ದಿನಾಂಕ 25 ಮಾರ್ಚ್ 2025ರಂದು ಬೆಂಗಳೂರಿನ ಹಿರಿಯ ವಿದ್ವಾಂಸರಾದ ಡಾ. ಜಿ. ಜ್ಞಾನಾನಂದ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವಿಶ್ವಬ್ರಾಹ್ಮಣ ಮಠಾಧಿಪತಿ ಮತ್ತು ಪೀಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಮೂರುಜಾವದ ಮಠ ಆಲಮೇಲ ಸಿಂದಗಿ ಇಲ್ಲಿನ ಪ. ಪೂ. ಶ್ರೀ ರಾಮಚಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಂದು ಬೆಳಿಗ್ಗೆ ಘಂಟೆ 10.30ಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ. ವಿ. ಪರಮಶಿವಮೂರ್ತಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ವಿಶ್ರಾಂತ ಆಯುಕ್ತರಾದ ಶ್ರೀ ಶ್ರೀನಿವಾಸಾಚಾರಿ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಶ್ರೀ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ (ರಿ.) ಶಿರಸಂಗಿ ಇದರ…

Read More