Author: roovari

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಹಾಗೂ ಸಂತ ಫ್ರಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆ ಬಿಜೈ ಇವುಗಳ ಜಂಟಿ ಆಶ್ರಯದಲ್ಲಿ 113ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ದಿನಾಂಕ 23 ಆಗಸ್ಟ್ 2025 ಶನಿವಾರ ಸಂತ ಫ್ರಾನ್ಸಿಸ್ ಹಿರಿಯ ಪ್ರಾಥಮಿಕ ಶಾಲೆ ಬಿಜೈಯಲ್ಲಿ ಮುಖ್ಯೋಪಾಧ್ಯಾಯರಾದ ನಿರ್ಮಲ ಸಿಲ್ವಿಯ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ನಿವೃತ್ತ ಶಿಕ್ಷಕಿ ಹಾಗೂ ಇನ್ನರ್ವಿಲ್ ಕ್ಲಬ್ ಮಂಗಳೂರು ನಾರ್ತ್ ಮಾಜಿ ಅಧ್ಯಕ್ಷರಾದ ಗೀತಾ ಬಿ. ರೈ, ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್ ಮತ್ತು ವಿಜಯಾ ಕರ್ನಾಟಕ ದೈನಿಕ ಪತ್ರಿಕೆಯ ಚೀಫ್ ಕಾಫಿ ಎಡಿಟರ್ ಆರ್.ಸಿ. ಭಟ್. ವೇದಿಕೆಯಲ್ಲಿ ಉಪಸ್ಥಿತರಿದರು. ಶಿಕ್ಷಕಿ ಹಾಗೂ ಲೇಖಕಿ ಸುರೇಖಾ ಯಾಳವಾರ ಕಾರ್ಯಕ್ರಮ ನಿರೂಪಿಸಿ, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು.

Read More

ಉಡುಪಿ : ರಾಧಾಕೃಷ್ಣ ನೃತ್ಯನಿಕೇತನ (ರಿ.) ಉಡುಪಿ ಪ್ರಸ್ತುತ ಪಡಿಸುವ ‘ನೃತ್ಯಾರ್ಪಣ’ ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 28 ಆಗಸ್ಟ್ 2025ರಂದು ಸಂಜೆ 5-15 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿದುಷಿ ವೀಣಾ ಎಂ. ಸಾಮಗರ ಶಿಷ್ಯೆ ಕುಮಾರಿ ಅದಿತಿ ಜಿ. ನಾಯಕ್ ಇವರು ನೃತ್ಯ ಕಾರ್ಯಕ್ರಮ ನೀಡಲಿದ್ದು, ನಟುವಾಂಗ, ಹಾಡುಗಾರಿಕೆ ಮತ್ತು ನೃತ್ಯ ನಿರ್ದೇಶನದಲ್ಲಿ ವಿದುಷಿ ವೀಣಾ ಎಂ. ಸಾಮಗರ, ಮೃದಂಗದಲ್ಲಿ ಮಂಗಳೂರಿನ ವಿದ್ವಾನ್ ಮನೋಹರ್ ರಾವ್, ವಯೋಲಿನ್ ನಲ್ಲಿ ಉಡುಪಿಯ ವಿದ್ವಾನ್ ಶ್ರೀಧರ ಆಚಾರ್ಯ ಮತ್ತು ಕೊಳಲಿನಲ್ಲಿ ಮಣಿಪಾಲದ ಡಾ. ಬಾಲಕೃಷ್ಣ ಇವರುಗಳು ಸಹಕರಿಸಲಿದ್ದಾರೆ.

Read More

ಕುಂದಾಪುರ : ಮೊಗೇರಿ ಅಡಿಗರ ಸಮಷ್ಟಿ ಬಳಗದ ವತಿಯಿಂದ ಕವಿಗಳ ಕವಿ ಗೋಪಾಲಕೃಷ್ಣ ಅಡಿಗರ ಹುಟ್ಟು ಪರಿಸರದ ಭಾಷೆ, ಬದುಕಿನ ಸೊಗಡನ್ನೊಳಗೊಂಡಿರುವ ಉತ್ತಮ ಪುಸ್ತಕಕ್ಕೆ ನೀಡಲಾಗುತ್ತಿರುವ ಮೊದಲ ಮೊಗೇರಿ ಸಮಷ್ಟಿ ವಾರ್ಷಿಕ ಪುಸ್ತಕ ಪುರಸ್ಕಾರಕ್ಕೆ ಕೆ. ಪುಂಡಲೀಕ ನಾಯಕ್ ಅವರ ‘ಭಾವ ಸ್ಮೃತಿ’ ಆತ್ಮಕಥನ ಆಯ್ಕೆ ಆಗಿದೆ ಎಂದು ಮೊಗೇರಿ ಅಡಿಗರ ಸಮಷ್ಟಿ ಬಳಗದ ಮುಖ್ಯಸ್ಥ ಎಂ. ಜಯರಾಮ ಅಡಿಗ ಇವರು ಮೊಗೇರಿ ಸ್ವಾಣಿ ಹಬ್ಬದಲ್ಲಿ ಪ್ರಕಟಿಸಿದರು. ಮೊಗೇರಿ ಸ್ವಾಣಿ ಹಬ್ಬದ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳಿಗಾಗಿ ಕಮಲಶಿಲೆ ಪೂರ್ಣಿಮಾ ನಿರ್ದೇಶಕತ್ವದಲ್ಲಿ ಗೃಹಿಣೀ ಶಕ್ತಿ, ಮಕ್ಕಳ ಅಭಿವ್ಯಕ್ತಿ ಸರಣಿಯನ್ನು ಉದ್ಘಾಟಿಸಲಾಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಶುಭ ಹಾರೈಸಿದರು.

Read More

ಕಾಸರಗೋಡು : ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 23 ಆಗಸ್ಟ್ 2025ರಂದು ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ ‘ಕನ್ನಡದ ನಡಿಗೆ – ಶಾಲೆಯ ಕಡೆಗೆ’ ಎಂಬ 5ನೇ ಶಿಬಿರ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಶಿಕ್ಷಕ ವಿ. ಬಿ. ಕುಳಮರ್ವ ಮಾತನಾಡಿ “ನಾವು ಹೆಚ್ಚು ಹೆಚ್ಚು ಭಾಷೆಗಳನ್ನು ಕಲಿಯುವ ಕಾರಣ ಅನೇಕ ಸಂಸ್ಕೃತಿಯ ಪರಿಚಯವಾಗುತ್ತದೆ. ಭಾಷೆಯಿಂದ ಸಾಹಿತ್ಯ ಬೆಳಗುತ್ತದೆ. ಸಾಹಿತ್ಯದಿಂದ ಸಂಸ್ಕಾರ ದೊರೆಯುತ್ತದೆ. ಕನ್ನಡ ಸಾಹಿತ್ಯ ಸರಸ್ವತಿಯ ಸೇವೆ ನಿರಂತರವಾಗಬೇಕು” ಎಂದು ಹೇಳಿದರು. ಶಿಬಿರವನ್ನು ಉದ್ಘಾಟಿಸಿದ ಕಾಸರಗೋಡಿನ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಮಾತನಾಡಿ “ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಿರದೆ, ಪಠ್ಯೇತರ ಚಟುವಟಿಕೆಗೂ ಅವಕಾಶವಾಗಬೇಕು. ಶಿಬಿರಗಳಿಂದ ಜ್ಞಾನವೃದ್ಧಿಯಾಗುತ್ತದೆ. ಕನ್ನಡ ಸಾಹಿತ್ಯವು ತಲೆಮಾರಿನಿಂದ ತಲೆಮಾರಿಗೆ ಶಕ್ತವಾಗಿ ದಾಟಬೇಕು. ಇದು ಈ ಅಭಿಯಾನದ ಮೂಲ…

Read More

‘ಯಥಾ ಗುರು ತಥಾ ಶಿಷ್ಯ’ ಎಂಬ ನಾಣ್ಣುಡಿಗೆ ಅನ್ವಯರಾಗಿರುವ ನೃತ್ಯಗುರು ವಿದುಷಿ ಮೇದಿನಿ ಭರತ್ ಮತ್ತು ಕಲಾವಿದೆ ಕುಮಾರಿ ಶ್ರೇಯಾ ರಾಜಶೇಖರ್ ಹಿರೇಮಠ್ ಇಬ್ಬರೂ ಬಹುಮುಖ ಪ್ರತಿಭಾನ್ವಿತರು. ನೃತ್ಯಕಲಾವಿದೆ ಹಾಗೂ ಗುರುವಾಗಿ ಬದ್ಧತೆಯಿಂದ ‘ಚಿತ್ಸಭಾ ಕಲಾಶಾಲೆ’ ನೃತ್ಯಸಂಸ್ಥೆಯ ಮೂಲಕ ನೂರಾರು ಉದಯೋನ್ಮುಖ ಕಲಾವಿದರನ್ನು ರೂಪಿಸುತ್ತಿರುವ ಮೇದಿನಿಯವರ ನುರಿತ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಕಲಾಶಿಲ್ಪ ಈ ಶ್ರೇಯಾ. ಶ್ರೀ ರಾಜಶೇಖರ್ ಹಿರೇಮಠ ಮತ್ತು ಬಿ.ಹೆಚ್. ರೇಣುಕಾರ ಪುತ್ರಿ ಶ್ರೇಯಾ, ಕಳೆದ ಹಲವಾರು ವರ್ಷಗಳಿಂದ ಭರತನಾಟ್ಯಾಭ್ಯಾಸ ಮಾಡುತ್ತಿದ್ದು, ಈಗಾಗಲೇ ಇವಳು ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯ ಮಂಡಲ ನೃತ್ಯ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿದ್ದು ಅನೇಕ ವೇದಿಕೆಗಳಲ್ಲಿ ತನ್ನ ಪ್ರತಿಭಾ ಪ್ರದರ್ಶನ ಮಾಡಿದ್ದಾಳೆ. ರಂಗಭೂಮಿ- ಚಲನಚಿತ್ರಗಳ ಅಭಿನಯ ತರಬೇತಿ ಹೊಂದಿರುವ ಶ್ರೇಯಾಗೆ ಬರವಣಿಗೆ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ಕೂಡ ಹವ್ಯಾಸ. ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪದವಿ ತರಗತಿಯಲ್ಲಿ ಓದುತ್ತಿರುವ ಶ್ರೇಯಾ, ದಿನಾಂಕ 30 ಆಗುಸತ 2025ರ ಶನಿವಾರ ಸಂಜೆ 5-30 ಗಂಟೆಗೆ ನಗರದ ಜೆ.ಎಸ್.ಎಸ್. ಆಡಿಟೋರಿಯಂನಲ್ಲಿ…

Read More

ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಹಾಗೂ ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ ಇದರ ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ವರ್ಷಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ದಿನಾಂಕ 27 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ನಿರ್ದೇಶಕರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಇವರು ದೀಪ ಪ್ರಜ್ವಲನೆ ಮಾಡಲಿದ್ದು, ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ಟೀಚರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರು ಅಧ್ಯಕ್ಷತೆ ವಹಿಸಲಿದ್ದು, ಜನಪ್ರಿಯ ಪತ್ರಕರ್ತ, ಸಾಹಿತಿ ನಿರ್ಮಾಪಕರಾದ ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ -2025’ ಪ್ರದಾನ ಸಮಾರಂಭ ನಡೆಯಲಿದೆ.

Read More

ಉಡುಪಿ : ಚಿತ್ರಕಲಾ ಮಂದಿರ ಕಲಾಶಾಲೆಯ 2002-2007 ಸಾಲಿನ ಹಳೆ ವಿದ್ಯಾರ್ಥಿಗಳು ಆಯೋಜಿಸಿರುವ ‘ಸಂಗಮ’ ಸಮೂಹ ಕಲಾಪ್ರದರ್ಶನವು ದಿನಾಂಕ 23 ಆಗಸ್ಟ್ 2025ರಂದು ಕಲಾಶಾಲೆಯ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ಉದ್ಘಾಟನೆಗೊಂಡಿತು. ಈ ಕಲಾಪ್ರದರ್ಶನವನ್ನು ಉದ್ಘಾಟಿಸಿದ ಮಧುರಂ ವೈಟ್ ಲೋಟಸ್‌ನ ಆಡಳಿತ ನಿರ್ದೇಶಕರಾದ ಆಜಯ್ ಪಿ. ಶೆಟ್ಟಿಯವರು ಮಾತನಾಡಿ “ಉಡುಪಿಯ ಕಲಾವಲಯದಲ್ಲಿ ಸಾಕಷ್ಟು ಉತ್ತಮ ಕಲಾ ಪ್ರತಿಭೆಗಳಿವೆ. ಅದನ್ನು ಇನ್ನಷ್ಟು ಪೋಷಿಸುವ ಕೆಲಸವಾಗಬೇಕು. ಉಡುಪಿಯ ಪರಂಪರೆ ಜಗತ್ತಿಗೆ ತಿಳಿಯುವಂತಾಗಬೇಕು. ಈ ಕಲಾವಿದರೆಲ್ಲರೂ ಎಷ್ಟೋ ವರ್ಷಗಳ ತರುವಾಯ ಮತ್ತೆ ಸೇರಿ ಈ ಪ್ರದರ್ಶನವನ್ನು ಏರ್ಪಡಿಸಿರುವುದು ಹಾಗೂ ತಾವು ತಮ್ಮ ಗುರುಗಳಿಗೆ ಗುರುವಂದನೆ ಈ ಸಂದರ್ಭದಲ್ಲಿ ಸಲ್ಲಿಸಿರುವುದು ಬಹಳ ಮಹತ್ವಪೂರ್ಣವಾದುದು” ಎಂಬುದಾಗಿ ಅಭಿಪ್ರಾಯಪಟ್ಟರು. ಇನ್ನೋರ್ವ ಅತಿಥಿ ಸ್ಮರಣಿಕಾ ಸಂಸ್ಥೆಯ ಮಾಲಕರಾದ ದಿವಾಕರ್ ಸನಿಲ್ ಮಾತನಾಡಿ “ಗಣೇಶೋತ್ಸವದ ಈ ಶುಭ ಸಂದರ್ಭದಲ್ಲಿ ಗಣಪತಿಯ ಬಗೆಗಿನ ವಿವಿಧ ಚಿತ್ರಗಳು ಮನಸೂರೆಗೊಳ್ಳುವಂತೆ ರಚಿತವಾಗಿದ್ದು, ಕಲೆಯ ಆರಾಧನೆಯೂ ದೈವಿಕ ಭಾವನೆಯನ್ನು ಸೃಜಿಸುತ್ತದೆ” ಎಂದರು. ಗುರುವಂದನೆಯನ್ನು ಸ್ವೀಕರಿಸಿ ಮಾತನಾಡಿದ ಕಲಾಶಾಲೆಯ ಮಾಜಿ ಪ್ರಾಂಶುಪಾಲರಾದ…

Read More

ಗಾಂಜಾಂ ತಿಮ್ಮಣ್ಣಯ್ಯ ಮತ್ತು ಸುಬ್ಬಮ್ಮ ದಂಪತಿಯ ದ್ವಿತೀಯ ಪುತ್ರ ಪ್ರೊ. ವೆಂಕಟಸುಬ್ಬಯ್ಯ. ಇವರು ಜನಿಸಿದ್ದು ದಿನಾಂಕ 23 ಆಗಸ್ಟ್ 1913 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಇವರ ಹಿರಿಯರು ನೆಲೆಸಿದ್ದು ಮುದಗುಂದೂರಿನಲ್ಲಿ. ಪೌರೋಹಿತ್ಯ ಕಾರ್ಯಗಳನ್ನು ಮಾಡಿಕೊಂಡು ಕಷ್ಟದಲ್ಲಿ ಸರಳ ಜೀವನ ನಿರ್ವಹಣೆ ಮಾಡುತ್ತಿದ್ದ ಇವರ ಹಿರಿಯರು ಮೈಸೂರು ರಾಜ್ಯದಲ್ಲಿ ಕ್ಷಾಮ ತಲೆದೋರಿದಾಗ ಜೀವನ ನಿರ್ವಹಣೆ ಕಷ್ಟವಾಗಿ ಶ್ರೀರಂಗಪಟ್ಟಣದ ಉಪನಗರವಾದ ಪುಟ್ಟ ಕುಗ್ರಾಮ ‘ಗಾಂಜಾಂ’ನಲ್ಲಿ ನೆಲೆಸಿದರು. ತಂದೆ ಗಾಂಜಾಂ ತಿಮ್ಮಣ್ಣಯ್ಯ ಸಂಸ್ಕೃತ ಹಾಗೂ ಕನ್ನಡದಲ್ಲಿ ವಿದ್ವಾಂಸರಾಗಿದ್ದು, ಮೈಸೂರು ಅರಮನೆಯಲ್ಲಿ ಗೌರವದ ಸ್ಥಾನವನ್ನು ಪಡೆದಿದ್ದರು. 1937ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪ್ರಥಮ ಸ್ಥಾನವನ್ನು ಸುವರ್ಣ ಪದಕದೊಂದಿಗೆ ಪಡೆದು ತೇರ್ಗಡೆ ಹೊಂದಿದರು. ಮುಂದೆ ಬಿ.ಟಿ. ಪದವಿಯನ್ನು ಪಡೆದ ಇವರು 1939ರಲ್ಲಿ ವೃತ್ತಿ ಜೀವನಕ್ಕೆ ಪಾದರ್ಪಣೆ ಮಾಡಿ 40 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದರು. ಅದಾಗಲೇ 1937ರಲ್ಲಿ ಲಕ್ಷ್ಮೀಯವರನ್ನು ಬಾಳ ಸಂಗಾತಿಯನ್ನಾಗಿ ಪಡೆದುಕೊಂಡಿದ್ದರು. ಮಂಡ್ಯದ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ, ಬೆಂಗಳೂರಿನ ಬೆಂಗಳೂರು ಹೈಸ್ಕೂಲಿನ…

Read More

ವಿಜಯಪುರ : ‘ಬೆರಗು’ ಪ್ರಕಾಶನ ಇದರ ವತಿಯಿಂದ ರಾಜ್ಯಮಟ್ಟದ ‘ಪ್ರೊ. ಎಚ್.ಟಿ. ಪೋತೆ’ ಪ್ರಶಸ್ತಿಗಾಗಿ ಸಂಶೋಧನೆ ಮತ್ತು ಅನುವಾದಿತ ಸಂಬಂಧಿ ಬರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿ ರೂ.10,000/- ನಗದು, ಪ್ರಶಸ್ತಿ, ಸ್ಮರಣಿಕೆ ಒಳಗೊಂಡಿದ್ದು, ಹಸ್ತಪ್ರತಿ ಸಲ್ಲಿಸಲು 25 ಸೆಪ್ಟೆಂಬರ್ 2025 ಕೊನೆಯ ದಿನಾಂಕವಾಗಿರುತ್ತದೆ. ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -586 202, ವಿಜಯಪುರ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 7795341335 ಸಂಪರ್ಕಿಸಿರಿ.

Read More

ವಂಡ್ಸೆ : ಆಶೀರ್ವಾದ್ ಫ್ರೆಂಡ್ಸ್ ಅಬ್ಬಿ ಹರವರಿ ವಂಡ್ಸೆ ಇವರ ಆಯೋಜನೆಯಲ್ಲಿ ‘ಯಕ್ಷ ರಾಘವ ಜನ್ಸಾಲೆ’ ಪ್ರತಿಷ್ಠಾನ (ರಿ.) ಹಾಗೂ ತೆಂಕು ಬಡಗು ತಿಟ್ಟಿನ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಗಾನ ಸಾರಥಿ ಜನ್ಸಾಲೆ ಮತ್ತು ಯಕ್ಷಧ್ರುವ ಪಟ್ಲರ ಸಾರಥ್ಯದಲ್ಲಿ ‘ಯಕ್ಷ ಹೆಜ್ಜೆ’ ಕಾರ್ಯಕ್ರಮವು ದಿನಾಂಕ 24 ಆಗಸ್ಟ್ 2025ರಂದು ಸಂಜೆ 4-30 ಗಂಟೆಗೆ ವಂಡ್ಸೆಯ ಉಪಾಧ್ಯಾಯರ ಗದ್ದೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ‘ಪಾರಿಜಾತ’ ಮತ್ತು ‘ಯಾಜ್ಞಸೇನೆ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

Read More