Subscribe to Updates
Get the latest creative news from FooBar about art, design and business.
Author: roovari
ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಇವರ ಸಹಕಾರದೊಂದಿಗೆ ‘ನವರಂಗೋತ್ಸವ’ ಶರನ್ನವರಾತ್ರಿಯ ಪ್ರಯುಕ್ತ ನೃತ್ಯ ಸ್ಪರ್ಧೆ (ಸಾಮೂಹಿಕ ವಿಭಾಗ)ಯು ದಿನಾಂಕ 15-10-2023ನೇ ರವಿವಾರ ಸಂಜೆ ಗಂಟೆ 5ಕ್ಕೆ ಮುದ್ರಾಡಿಯ ನಾಟ್ಕದೂರು ಬಿ.ವಿ.ಕಾರಂತ ಬಯಲು ರಂಗಸ್ಥಳದಲ್ಲಿ ನಡೆಯಲಿದೆ. ಸ್ಪರ್ಧೆಯ ನಿಯಮಗಳು : * ಭಕ್ತಿ ಪ್ರಧಾನ ನೃತ್ಯಕ್ಕೆ ಮಾತ್ರ ಅವಕಾಶ. * ಸಮಯ 5 ನಿಮಿಷ ಮಾತ್ರ. * ಸಾಮೂಹಿಕ ವಿಭಾಗದಲ್ಲಿ ಕನಿಷ್ಠ 6 ಮಂದಿ ಇರಲೇಬೇಕು. * ತೀರ್ಪುಗಾರರ ತೀರ್ಮಾನವೇ ಅಂತಿಮ. * ಹೆಬ್ರಿ ತಾಲೂಕು ವ್ಯಾಪ್ತಿಯವರಾಗಿರಬೇಕು. * 16 ವರ್ಷದೊಳಗಿನವರಿಗೆ ಮಾತ್ರ ಅವಕಾಶ. ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ತಂಡಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಭಾಗವಹಿಸುವವರು ದಿನಾಂಕ 12-10-2023 ಗುರುವಾರದೊಳಗೆ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ವಿನಂತಿ. ಹೆಸರನ್ನು ನೋಂದಾಯಿಸುವವರು 9449904727, 9743218708 ಈ ವಾಟ್ಸಪ್ ನಂಬರನ್ನು ಸಂಪರ್ಕಿಸಬಹುದು.
ಮಂಗಳೂರು : ಕೊಂಕಣಿಯ ಪ್ರಸಿದ್ಧ ಕಲಾ ತಂಡ ‘ಕೊಮಿಡಿ ಕಂಪೆನಿ’ಯು ತಮ್ಮ ತಂಡದ ಸದಸ್ಯ ದಿ. ಸುನಿಲ್ ಕ್ರಾಸ್ತಾ ಸ್ಮರಣಾರ್ಥ ಆಯೋಜಿಸಿದ ‘ಕರ್ ನಾಟಕ್’ ಆಹ್ವಾನಿತ ತಂಡಗಳ ನಾಟಕ ಸ್ಪರ್ಧೆಯ ಸಮಾರೋಪ ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಿನಾಂಕ 24-09-2023ರಂದು ನಡೆಯಿತು. ಲೋಗೋಸ್ ಥಿಯೇಟರ್ ತಂಡದ ‘ನಾನ್ ಲೈಂಗಿಕ ತೊಳಿಲಾಲಿ’ ನಾಟಕವು ರೂ.40,000/- ಬಹುಮಾನ ಮೊತ್ತದೊಡನೆ ಪ್ರಥಮ ಸ್ಥಾನ ಪಡೆಯಿತು. ರಂಗ್ ಥಿಕಾಂ ತಂಡದ ‘ಸೊರ್ ಯಾ ವ್ಯಾಪಾರಿಚೊ ದುಡು’ ನಾಟಕಕ್ಕೆ ರೂ.30,000/- ದ್ವಿತೀಯ ಸ್ಥಾನ, ಉತ್ಸಾಹಿ ಕಲಾಕಾರ್ ಗಂಟಾಲ್ಕಟ್ಟೆ ತಂಡದ ‘ಮ್ಹಜ್ಯಾ ಪುತಾಚೊ ಕಿಣ್ಕುಳೊ’ ನಾಟಕವು ತೃತೀಯ ಸ್ಥಾನಿಯಾಗಿ ರೂ.20,000/- ಬಹುಮಾನ ಪಡೆಯಿತು. ಉತ್ತಮ ನಟ-ಪ್ರಕಾಶ್ ಕೆ., ಉತ್ತಮ ನಟಿ- ಸ್ಪೀಡಲ್ ಡಿ’ಸೋಜಾ, ಪೋಷಕ ಪಾತ್ರ-ಡೊನ್ನಾ ಡಿ’ಸೋಜಾ, ಸಂಗೀತ- ಕ್ಲಾನ್ವಿನ್ ಫೆರ್ನಾಂಡಿಸ್, ನಿರ್ದೇಶಕ -ಕ್ರಿಸ್ಟೋಫರ್ ಡಿ’ಸೋಜಾ, ಕಥೆ – ಚಾಫ್ರಾ ಡಿ’ಕೋಸ್ತಾ, ತೀರ್ಪುದಾರರ ಮೆಚ್ಚುಗೆಯ ಪಾತ್ರ- ಕಿಯಾರಾ ಪಿರೇರಾ, ಸ್ತ್ರೀ ಲೇಖಕಿ ಪ್ರೀತಿ ಮಾರ್ತಾ ಡಿ’ಸೋಜಾ ಅವರನ್ನೂ ಗೌರವಿಸಲಾಯಿತು. ಲಿನೆಟ್…
ಕಾಸರಗೋಡು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು ಇದರ ಮಹಿಳಾ ಘಟಕ ನಾರಿಚಿನ್ನಾರಿಯ 9ನೇ ಸರಣಿ ಕಾರ್ಯಕ್ರಮ ‘ವರ್ಷ ರಿಂಗಣ’ವು ದಿನಾಂಕ 30-09-2023ರಂದು ಕಾಸರಗೋಡು ಕೊ-ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಮಾತನಾಡುತ್ತಾ “ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಕವಿತೆಗಳು ಸಮಾಜದ ಕನ್ನಡಿಯಾಗಬೇಕು. ಜಗತ್ತನ್ನು, ಸಮಾಜವನ್ನು ಎಚ್ಚರಿಸುವ ಮತ್ತು ತಿದ್ದುವ ದೊಡ್ಡ ಜವಾಬ್ದಾರಿ ಸಾಹಿತಿ, ಕವಿಯ ಮೇಲಿದೆ ಎಂದು ಹೇಳಿದರು. ಅವರು ‘ನೀನಿಲ್ಲ..ಇಲ್ಲಿ ನಾನು ಮಾತ್ರ’ ಲಕ್ಷ್ಮಿ ಕೆ. ಅವರ ಮೂರನೆಯ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಅವರ ಕಾವ್ಯೋತ್ಸಾಹವನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಿಚಿನ್ನಾರಿ ಕಾರ್ಯಾಧ್ಯಕ್ಷೆ ಸವಿತಾ ಟೀಚರ್ ವಹಿಸಿದರು. ಕತೆಗಾರ್ತಿ ಸ್ನೇಹಲತಾ ದಿವಾಕರ್ ಪುಸ್ತಕ ಪರಿಚಯ ಮಾಡಿದರು. ಸರೋಜಿನಿ ಕೆ. ಭಟ್ ಅವರು ಪ್ರಥಮ ಪ್ರತಿ ಸ್ವೀಕರಿಸಿ ಶುಭ ಹಾರೈಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಸಹಾಯಕ…
ತೆಕ್ಕಟ್ಟೆ : ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ ತಕ್ಕಟ್ಟೆ ಆಯೋಜಿಸಿದ ಹೊಸ ತಲೆಮಾರಿನ ಅರ್ಥಧಾರಿಗಳ ವೇದಿಕೆಯಾದ ‘ಅರ್ಥಾಂಕುರ’ ಸರಣಿಯ ಮೂರನೇ ಕಾರ್ಯಕ್ರಮವು ದಿನಾಂಕ 01-10-2023ರಂದು ರೋಟರಿ ಕ್ಲಬ್ ತೆಕ್ಕಟ್ಟೆ ಇದರ ಸಹಕಾರದೊಂದಿಗೆ ನಡೆಯಿತು. ಜೇಸಿ ತರಬೇತುದಾರರಾಗಿ, ನಿರೂಪಕರಾಗಿ, ಸಂಘಟಕರಾಗಿ, ಬರಹಗಾರರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಾರಕರಾಗಿ ಗುರುತಿಸಿಕೊಂಡು ಆದರ್ಶ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ರೂಪಿಸಿ ಇದೀಗ ಕರ್ನಾಟಕ ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶ್ರೀ ನರೇಂದ್ರ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಯಕ್ಷಗುರುಗಳಾದ ಸೀತಾರಾಮ ಶೆಟ್ಟಿ ಕೊಯಿಕೂರು “ವ್ಯಕ್ತಿ ಸಮಾಜಮುಖಿಯಾಗಿ ಬೆಳೆಯಬೇಕು. ಪ್ರತಿಭೆ ನಿಂತ ನೀರಾಗಬಾರದು. ಅವಕಾಶ ಪಡೆದು ಇತರರಿಗೆ ಅವಕಾಶ ನೀಡುವ ಸಲುವಾಗಿ ಸದಾ ಚಿಂತಿಸುವ ನರೇಂದ್ರ ಕುಮಾರ್ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಯೋಜಿಸಿ ಸೈ ಎನಿಸಿಕೊಂಡವರು. ಸಂಸ್ಥೆಯ ನಿಕಟವರ್ತಿಗಳಾದ ಇವರ ಸಾಧನೆ ಸಂಸ್ಥೆಗೆ ಹೆಮ್ಮೆ ತಂದ ವಿಶಯ. ಇವರನ್ನು ಸಮ್ಮಾನಿಸಿ ಸಂಸ್ಥೆ ಧನ್ಯತೆಯನ್ನು ಹೊಂದಿದೆ” ಎಂದು ಅಭಿನಂದನಾ ಮಾತುಗಳನ್ನಾಡಿದರು.…
ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಮುದ್ದಾಪುರದ ಏಕತಾರಿ ಕಲಾವಿದ ವೀರಭದ್ರಪ್ಪ ದಳವಾಯಿ ತನ್ನ 81ನೆಯ ವಯಸ್ಸಿನಲ್ಲಿ ಸೋಮವಾರ ದಿನಾಂಕ 02-10-2023ರಂದು ನಿಧನರಾದರು. ಅವರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ನಡೆಯಿತು. ಅವರಿಗೆ ಪತ್ನಿ, ಗೊಂಬೆಯಾಟದ ಕಲಾವಿದ ಸಿದ್ದು ಬಿರಾದಾರ ಹಾಗೂ ಐವರು ಪುತ್ರಿಯರು ಇದ್ದಾರೆ. ಏಕತಾರಿ ನುಡಿಸುತ್ತ ತತ್ವ ಪದಗಳನ್ನು ಹಾಡುತ್ತಿದ್ದ ವೀರಭದ್ರಪ್ಪ ಆಕಾಶವಾಣಿ ಕಲಾವಿದರಾಗಿದ್ದರು. ಐದು ರಾಜ್ಯಗಳಲ್ಲಿ 600ಕ್ಕೂ ಹೆಚ್ಚು ಕಲಾ ಪ್ರದರ್ಶನವನ್ನು ನೀಡಿದ್ದರು. ಮಹರ್ಷಿ ವಾಲ್ಮೀಕಿ ಸಾಂಸ್ಕೃತಿಕ ಸಂರಕ್ಷಣಾ ಕಲಾ ಸಂಘ ಸ್ಥಾಪಿಸಿ, ಮುದ್ದಾಪುರದಲ್ಲಿ ಸ್ವಂತದ 4 ಗುಂಟೆ ಜಾಗವನ್ನು ನೀಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ವೆಚ್ಚದಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಕಾಸರಗೋಡು : ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಿಂಶತಿ ವರ್ಷಾಚರಣೆಯ ಅಂಗವಾಗಿ 2023ರ ಸಾಲಿನ ‘ಭರವಸೆಯ ಬೆಳಕು’ ಪುರಸ್ಕಾರವನ್ನು ಬದಿಯಡ್ಕದ ಚಿತ್ತರಂಜನ್ ಕಡಂದೇಲು ಅವರಿಗೆ ದಿನಾಂಕ 01-10-2023ರಂದು ಪ್ರದಾನ ಮಾಡಲಾಯಿತು. ಯಕ್ಷಗಾನ ಸಹಿತ ವಿವಿಧ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಶ್ರೀ ಹರೀಶ್ ಕುಮಾರ್ ಮತ್ತು ಶಿಕ್ಷಕಿ ಶ್ರೀಮತಿ ಜ್ಯೋತ್ಸ್ನಾ ಕಡಂದೇಲು ಅವರ ಸುಪುತ್ರರಾಗಿರುವ ಚಿತ್ತರಂಜನ್ ಕಡಂದೇಲುರವರು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಕನ್ನಡ ಭವನ ಸ್ಥಾಪಕ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮತ್ತು ಪ್ರೋ. ಎಂ. ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು : ನಗರದ ಪುರಭವನದಲ್ಲಿ ತುಳುವೆರೆ ಆಯನೊ ಕೂಟ ಕುಡ್ಲ ಇದರ ಪದಗ್ರಹಣ ಸಮಾರಂಭವು ದಿನಾಂಕ 30-09-2023ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಇವರಿಗೆ ‘ತುಳುವೆರೆ ಕರ್ಣೆ’ ಬಿರುದು ನೀಡಿ ಗೌರವಿಸಲಾಯಿತು. ಅವರು ಮಾತನಾಡುತ್ತಾ “ತುಳು ಭಾಷೆಯಲ್ಲಿ ವಿವಿಧ ರೀತಿಯ ಪ್ರಾದೇಶಿಕ ಬದಲಾವಣೆ, ಜಾತಿಯಲ್ಲಿಯೂ ಭಾಷೆಯ ಬದಲಾವಣೆಗಳಿವೆ. ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವೈಶಿಷ್ಟ್ಯತೆ ಸಾರುತ್ತದೆ” ಎಂದು ಹೇಳಿದರು. ಈ ಸಮಾರಂಭವನ್ನು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಶ್ರೀ ಹರಿನಾರಾಯಣ ಆಸ್ರಣ್ಣ ಉದ್ಘಾಟಿಸಿದರು. ಸಂಸದ ಶ್ರೀ ನಳಿನ್ ಕುಮಾರ್ ಕಟೀಲು, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ಶ್ರೀ ರಮನಾಥ ರೈ, ವಿಶ್ವ ಬಂಟರ ಕೂಟಗಳ ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ, ಮಾಜಿ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಪಾಲಿಕೆ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ವರುಣ್ ಚೌಟ, ವಕೀಲ ಶ್ರೀ ಪದ್ಮರಾಜ್, ಅಖಿಲ ಭಾರತ…
ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಘಟಕವು ಚೈತನ್ಯ ಯುವ ವೃಂದ ಮತ್ತು ಚೈತನ್ಯ ಮಹಿಳಾ ವೃಂದದ ಸಹಯೋಗದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಆಯೋಜಿಸಿದ ಗಾಂಧಿ ಸ್ಮೃತಿ ಕಾರ್ಯಕ್ರಮ ದಿನಾಂಕ 02-10-2023ರಂದು ಅಪರಾಹ್ನ ಹೆಬ್ರಿ ಚೈತನ್ಯ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗಾಂಧಿ ಭಾವ ಚಿತ್ರಕ್ಕೆ ಪುಷ್ಪ ನಮನ ಹಾಗೂ ಮಹಾತ್ಮಗಾಂಧಿ ಕುರಿತ ಕವನಗೋಷ್ಠಿ – ಚಿಂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಅಧ್ಯಾಪಕರು ಮತ್ತು ರಾಜ್ಯ ಅತ್ತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ದಿನೇಶ ಶೆಟ್ಟಿಗಾರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕ.ಸಾ.ಪ ಹೆಬ್ರಿ ಇದರ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚೈತನ್ಯ ಯುವ ವೃಂದದ ಗೌರವ ಅಧ್ಯಕ್ಷರಾದ ಜನಾರ್ದನ ಹೆಚ್, ಚೈತನ್ಯ ಮಹಿಳಾ ವೃಂದದ ಅಧ್ಯಕ್ಷರಾದ ವಿದ್ಯಾ ಜನಾರ್ದನ್, ಚೈತನ್ಯ ಮಹಿಳಾ ವೃಂದದ ಕಾರ್ಯದರ್ಶಿ ಸುಮನಾ ಜಿ. ನಾಯಕ್, ಕ. ಸಾ.ಪ ಗೌರವ ಕಾರ್ಯದರ್ಶಿ ಡಾ.ಪ್ರವೀಣ್ ಕುಮಾರ್ ಅವರು ಗಾಂಧಿ ಕುರಿತು ಚಿಂತನ ಪ್ರಸ್ತುತ…
ಬೆಂಗಳೂರು: ಕನ್ನಡ ಶಾಲೆಗಳನ್ನು ಉಳಿಸಿ ಬೆಳಸಬೇಕು. ಮಕ್ಕಳಲ್ಲಿ ಕನ್ನಡ ಪ್ರಜ್ಞೆಯನ್ನು ಬೆಳೆಸಬೇಕು, ಜೊತೆಗೆ ಕನ್ನಡ ಭಾಷೆಯ ಮಹತ್ವ ಅರಿವಾಗಬೇಕು. ಕನ್ನಡ ಸಾಹಿತ್ಯ ಓದುವ ಹವ್ಯಾಸ ಮಕ್ಕಳಲ್ಲಿ ಆರಂಭಿಸುವ ಹಿನ್ನೆಲೆಯಲ್ಲಿ, ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರಕಟವಾಗಿರುವ ಮೌಲ್ಯಯುತ ಪುಸ್ತಕಗಳನ್ನು ಉಚಿತವಾಗಿ ವಿತರಿಸಲು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷ ಯೋಜನೆಯೊಂದನ್ನು ಅಳವಡಿಸಿಕೊಂಡಿದೆ. ಯೋಜನೆಯ ಬಗ್ಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ಕನ್ನಡ ಸಾಹಿತ್ಯ ಪರಿಷತ್ತು ತನ್ನ ವ್ಯಾಪ್ತಿಯಲ್ಲಿ ಬಂದಿರುವ ವಿವಿಧ ಲೇಖಕರ ಬುಹುತೇಕ ಮೌಲ್ಯಯುತ ಪುಸ್ತಕಗಳನ್ನು ಪ್ರಕಟಿಸಿ ಕನ್ನಡ ಸಾರಸ್ವತ ಲೋಕಕ್ಕೆ ನೀಡುತ್ತಾ ಬಂದಿದೆ. ಪರಿಷತ್ತಿನ 108ವರ್ಷಗಳ ಇತಿಹಾಸದಲ್ಲಿ ಸಾವಿರಾರು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅಕ್ಷರಲೋಕಕ್ಕೆ ದೊಡ್ಡ ಕೊಡುಗೆಯನ್ನು ನೀಡುತ್ತಾ ಬಂದಿದೆ. ಜೊತೆಗೆ ಹೊಸ ತಲೆಮಾರಿನ ಬರಹಗಾರರ ಪುಸ್ತಕಗಳನ್ನು ಸಹ ಪ್ರಕಟಿಸಿರುವ ಹೆಮ್ಮೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ. ಕನ್ನಡ ಸಾಹಿತ್ಯದ ಅಘಾದತೆ ಮತ್ತು ಮಹತ್ವವನ್ನು ಕಾಲ ಕಾಲಕ್ಕೆ ಜನರಿಗೆ ತಿಳಿಸುವ ಕೆಲಸವನ್ನು ಪರಿಷತ್ತು…
ಮಂಗಳೂರು : ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ ಆಯೋಜಿಸುವ 2023- 24ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಬಹುಮಾನಗಳಿಗೆ ಲೇಖಕಿಯರ ಕೃತಿಗಳನ್ನು ಆಹ್ವಾನಿಸಲಾಗಿದೆ. ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ: ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಅವರ ಹೆಸರಿನಲ್ಲಿ ಪ್ರತಿ ವರ್ಷ ಕೊಡುವ ಸಾಹಿತ್ಯ ಪ್ರಶಸ್ತಿಗೆ ‘ಪ್ರವಾಸ ಕಥನ’ ಆರಿಸಲಾಗಿದೆ. 2021, 2022, 2023ನೇ ಸಾಲಿನಲ್ಲಿ ಪ್ರಕಟವಾದ ಲೇಖಕಿಯರ ಪ್ರವಾಸ ಕಥನದ ಮೂರು ಪ್ರತಿಗಳನ್ನು ದಿನಾಂಕ 15-11-2023ರೊಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜತೆಗೆ ವೈಯಕ್ತಿಕ ಮಾಹಿತಿ ಹಾಗೂ ಸಂಪರ್ಕ ಸಂಖ್ಯೆಯಿರುವ ಪ್ರವೇಶ ಪತ್ರವನ್ನು ಲಗತ್ತಿಸಿರಬೇಕು. ಚಂದ್ರಭಾಗಿ ರೈ ದತ್ತಿ ಬಹುಮಾನ : ಕರಾವಳಿಯ ಮೊದಲ ತಲೆಮಾರಿನ ಹಿರಿಯ ಲೇಖಕಿ, ಸಂಘದ ಸದಸ್ಯೆಯಾಗಿದ್ದ ಚಂದ್ರಭಾಗಿ ರೈ ಅವರ ಹೆಸರಿನಲ್ಲಿ ಕೊಡುವ ಬಹುಮಾನಕ್ಕೆ 50 ವರ್ಷದ ಒಳಗಿನ ಲೇಖಕಿಯರ ಕನಿಷ್ಠ 40 ಸ್ವರಚಿತ ಕವನಗಳಿರುವ ಅಪ್ರಕಟಿತ ಸಂಕಲನದ ಡಿಟಿಪಿ…