Author: roovari

ಬೆಳ್ತಂಗಡಿ ತಾಲೂಕಿನ ಸವಣಾಲು ಡಿ.ದೇವಪ್ಪ ಶೆಟ್ಟಿ ಮತ್ತು ಲಕ್ಷ್ಮೀ ಶೆಟ್ಟಿ ದಂಪತಿಗೆ 01-06-1948ರಂದು ಜನಿಸಿದ ದಯಾನಂದ ಶೆಟ್ಟರು ಕಲಿತದ್ದು ಎರಡನೇ ತರಗತಿ. ಯಕ್ಷಗಾನದ ಸಾಮಾನು ಸರಂಜಾಮುಗಳನ್ನು ಎತ್ತಿನ ಗಾಡಿಯಲ್ಲಿ ಸಾಗಿಸುತ್ತಿದ್ದ ಕಾಲದಲ್ಲಿ 12ನೇ ವರ್ಷ ಪ್ರಾಯದ ದಯಾನಂದ ಕುಮಾರ ವೇಣೂರು ದೇಲಂಪುರಿ ಮೇಳದಲ್ಲಿ ಬಾಲ ಕಲಾವಿದರಾಗಿ ಸೇರಿಕೊಂಡರು. ದಶಾವತಾರಿ ಸೂರಿಕುಮೇರಿ ಗೋವಿಂದ ಭಟ್ಟರಿಂದ ಯಕ್ಷಗಾನದ ಪ್ರಾಥಮಿಕ ಹೆಜ್ಜೆಗಳನ್ನು ಕಲಿತ ಅವರು ಮುಂದೆ ತಮ್ಮ ನೃತ್ಯಾಭಿನಯವನ್ನು ವಿಸ್ತರಿಸಿಕೊಂಡದ್ದು ಇತರರನ್ನು ನೋಡಿಯೇ. ಕುಂಡಾವು ಮೇಳದಲ್ಲಿ ಅರುವ ಕೊರಗಪ್ಪ ಶೆಟ್ಟರ ಸಾಂಗತ್ಯದಲ್ಲಿ ಅದು ಸ್ಪುಟಗೊಂಡಿತು. ಮುಂದೆ ಕರ್ನಾಟಕ ಮೇಳವೊಂದರಲ್ಲೇ 36ವರ್ಷ ವ್ಯವಸಾಯ ಮಾಡಿದ ಹಿರಿಮೆ ಅವರದು. ದಾಮೋದರ ಮಂಡೆಚ್ಚ, ಅಳಿಕೆ, ಬೋಳಾರ, ಮಂಕುಡೆ, ಸಾಮಗ, ಕ್ರಿಶ್ಚನ್ ಬಾಬು, ಮಿಜಾರು, ಕೋಳೂರು ಮೊದಲಾದ ದಿಗ್ಗಜರ ಒಡನಾಟದಲ್ಲಿ ಕಲ್ಲಾಡಿ ಮನೆತನದ ಮೂವರು ಯಜಮಾನರನ್ನು ಕಂಡ ದಯಾನಂದ, ಕಲ್ಲಾಡಿ ಕೊರಗ ಶೆಟ್ಟರಿಂದಾಗಿ ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ನೆಲೆಸಿ ಜಪ್ಪು ದಯಾನಂದ ಶೆಟ್ಟಿ ಎಂದಾದರು. ಖಚಿತ ಲಯ ಜ್ಞಾನ, ಲಾಲಿತ್ಯ ಪೂರ್ಣ…

Read More

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಆಕಾಡೆಮಿಯು ಹಮ್ಮಿಕೊಂಡ ‘ನೃತ್ಯಾಂತರಂಗ’ದ 104ನೇ ಸರಣಿ ಕಾರ್ಯಕ್ರಮವು ದಿನಾಂಕ 16-09-2023ರಂದು ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಿನ್ನಿಗೋಳಿಯ ‘ಶಿವ ಪ್ರಣಾಮ್’ ನೃತ್ಯ ಸಂಸ್ಥೆಯ ನಿರ್ದೇಶಕಿಯಾದ ವಿದುಷಿ ಅನ್ನಪೂರ್ಣ ರಿತೇಶ್ ಮೂಲ್ಕಿ ಇವರು ಭರತನಾಟ್ಯ ಪ್ರದರ್ಶನ ನೀಡಿದರು. ಕಾರ್ಯಕ್ರಮದ ಮೊದಲಿಗೆ ಸಂಸ್ಥೆಯ ನಿರ್ದೇಶಕ ವಿದ್ವಾನ್ ದೀಪಕ್ ಇವರಿಂದ ಶಂಖನಾದ ಹಾಗೂ ಸಂಸ್ಥೆಯ ಸಂಗೀತ ನಿರ್ದೇಶಕಿಯಾದ ವಿದುಷಿ ಪ್ರೀತಿಕಲಾ ದೀಪಕ್ ಇವರಿಂದ ಮಂಗಳಮಯ ಓಂಕಾರನಾದ ಮತ್ತು ಸಂಸ್ಥೆಯ ಪುಟಾಣಿ ಕಲಾವಿದರ ‘ಅಲಪದ್ಮ’ ತಂಡದಿಂದ ಪ್ರಾರ್ಥನೆ ನಡೆಯಿತು. ಅಭ್ಯಾಗತರಾಗಿ ಆಗಮಿಸಿದ ಪತ್ರಕರ್ತ ಶ್ರೀಯುತ ಹರಿಪ್ರಸಾದ್ ನೆಲ್ಯಾಡಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಂತರ ಶ್ರೀ ಹಿಮನೀಶ್, ಕುಮಾರಿಯರಾದ ಅಪೇಕ್ಷಾ ಮತ್ತು ದಿಶಾ ಆರ್.ಶೆಟ್ಟಿ ಅಭ್ಯಾಗತರನ್ನು ಹಾಗೂ ಕಲಾವಿದರನ್ನು ಪರಿಚಯಿಸಿದರು. ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಕಲಾವಿದೆಯಾದ ಕುಮಾರಿ ಅಕ್ಷಯ ಪಾರ್ವತಿ ಸರೊಳಿ ತುಳುವಿನಲ್ಲಿ ನಿರೂಪಿಸಿದರು. ಮಂಗಳೂರಿನ ಭಾರತಾಂಜಲಿ ನೃತ್ಯ ಸಂಸ್ಥೆಯ ಗುರು ಪ್ರತಿಮಾ ಶ್ರೀಧರ್ ಹಾಗೂ…

Read More

ಮಂಗಳೂರು : ಕನ್ನಡ ನಾಡಿನ ಹೆಮ್ಮೆಯ ‘ಚಂದನ ವಾಹಿನಿ’ಯಲ್ಲಿ 4000 ಕಂತುಗಳನ್ನು ದಾಟಿ ಮುಂದುವರೆದು ಭಾರತದ ಟೆಲಿವಿಶನ್ ಇತಿಹಾಸದಲ್ಲೇ ದಾಖಲೆಯನ್ನು ಸೃಷ್ಟಿಸಿರುವ ‘ಥಟ್ಟಂತ ಹೇಳಿ’ ಕಾರ್ಯಕ್ರಮದ ಮೂಲಕ ಜನಮಾನಸಕ್ಕೆ ಚಿರಪರಿಚಿತರಾಗಿ ಖ್ಯಾತರಾದವರು ಡಾ. ನಾ.ಸೋಮೇಶ್ವರರು. ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಂಡು 30ಕ್ಕೂ ಹೆಚ್ಚು ವಿವಿಧ ವಿಷಯಾಧಾರಿತ ಪುಸ್ತಕಗಳನ್ನು ಬರೆದಿದ್ದಾರೆ. ಈ ಪೈಕಿ ‘ಏಳು ಸುತ್ತಿನ ಕೋಟೆಯಲಿ ಎಂಟು ಕೋಟೆ’ ಎನ್ನುವ ಕೃತಿ ಹೆಚ್ಚು ಪ್ರಸಿದ್ದವಾಗಿದೆ. ವೈದ್ಯ ಸಾಹಿತ್ಯ ಪ್ರಶಸ್ತಿ -2003, ಡಾಕ್ಟರ್ಸ್ ಡೇ ಅವಾರ್ಡ್, ಕರ್ನಾಟಕ ಸಾಹಿತ್ಯ ಅಕಾಡಮಿ ಅವಾರ್ಡ್, ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಸಹಿತವಾಗಿ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಡಾ. ನಾ.ಸೋಮೇಶ್ವರ ಅವರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಕಾರಂತ ಪ್ರಶಸ್ತಿ -2023’ಗೆ ಆಯ್ಕೆ ಮಾಡಲಾಗಿದೆ. ದಿನಾಂಕ 10-10-2023ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

Read More

ದೆಹಲಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕ ಮತ್ತು ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಬೆಳ್ಳಾರೆ ಆಯೋಜಿಸುವ ‘ಯಕ್ಷಧ್ರುವ ಪಟ್ಲ ಸಂಭ್ರಮ 2023’ವು ದಿನಾಂಕ 30-09-2023ರಂದು ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಶ್ರೀ ಶಶಿಧರ ಶೆಟ್ಟಿ ಬರೋಡ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಚಲನ ಚಿತ್ರನಟ ಶ್ರೀ ದಯಾನಂದ ಶೆಟ್ಟಿಯವರು ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಅರುವ ಕೊರಗಪ್ಪ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಜಯರಾಮ ಬನಾನ್ ಮತ್ತು ದೆಹಲಿ ಕನ್ನಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಡೇರೆಲ್ ಜೆಸ್ಸಿಕಾ ಫೆರ್ನಾಂಡಿಸ್ ಇವರುಗಳನ್ನು ಸನ್ಮಾನಿಸಲಾಗುವುದು. ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಇವರಿಂದ ‘ಮಾಯಾ ಮೋಹಿನಿ’ ಮತ್ತು ‘ವೀರ ಭಾರ್ಗವ’ ಯಕ್ಷಗಾನ ಪ್ರದರ್ಶನ ಹಾಗೂ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಬೆಳ್ಳಾರೆ ಇವರಿಂದ ‘ಪಜ್ಜೆ ಗೆಜ್ಜೆ’ ತುಳು, ಕನ್ನಡ ಜಾನಪದ ಮತ್ತು…

Read More

ಬಂಟ್ವಾಳ : ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ‘ಶ್ರಾವಣ ಮಾಸದ ತಾಳಮದ್ದಳೆ ಸೇವೆ’ಯು ದಿನಾಂಕ 10-09-2023ರಂದು ಸಮಾರೋಪಗೊಂಡಿತು. ಸಮಾರೋಪ ಸಂದರ್ಭ ವಾರ್ಷಿಕೋತ್ಸವ, ಸನ್ಮಾನ, ಪ್ರಸಿದ್ಧ ಕಲಾವಿದರಿಂದ ತಾಳಮದ್ದಳೆ ನೆರವೇರಿತು. ಇದೇ ಸಂದರ್ಭದಲ್ಲಿ ಕಲಾಪೋಷಕ, ಸಂಘಟಕ, ಕಲಾವಿದ ಶ್ರೀ ವಾಸುದೇವ ರಾವ್ ಸುರತ್ಕಲ್ ಮತ್ತು ಸ್ನೇಹಶೀಲ ಭಾಗವತರಾದ ಶ್ರೀ ಸೀತಾರಾಮ ಸಾಲೆತ್ತೂರು ಅವರನ್ನು ಸನ್ಮಾನಿಸಲಾಯಿತು. ಮಹಿಳಾ ಹವ್ಯಾಸಿ ಭಾಗವತರಾದ ಮಂಗಳೂರು ಆಕಾಶವಾಣಿ ಎ ಗ್ರೇಡ್ ನಾಟಕ ಕಲಾವಿದೆ ಮಲ್ಲಿಕಾ ಅಜಿತ್ ಶೆಟ್ಟಿಯವರು ಸನ್ಮಾನ ಪತ್ರ ವಾಚಿಸಿ ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ವಾಸುದೇವ ರಾವ್ ಸುರತ್ಕಲ್, ತನ್ನ ಜೀವನದಲ್ಲಿ ಯಕ್ಷಗಾನದ ನಂಟನ ವಿಷಯವನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮೊಕ್ತೇಸರ ಅಶೋಕ್ ಶೆಣೈ ಮಾತನಾಡಿ, ಶ್ರಾವಣ ಮಾಸದ ಮಹತ್ವದ ಬಗ್ಗೆ ವಿವರಿಸಿದರು. ದೇಗುಲದ ಮೊಕ್ತೇಸರರಾದ ಭಾಮಿ ನಾಗೇಂದ್ರ ಶೆಣೈ ಉಪಸ್ಥಿತರಿದ್ದರು. ನಾಗೇಂದ್ರ ಪೈ ಸ್ವಾಗತಿಸಿ, ಸಮಿತಿಯ ಕಾರ್ಯದರ್ಶಿ ಅರ್ಲ ಯೋಗೀಶ ಪ್ರಭು ವರದಿ ವಾಚಿಸಿದರು. ರೋಟೀರಿಯನ್ ಪಿ.…

Read More

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯಿಂದ ಸಾಹಿತಿ ದಿವಂಗತ ಯಶವಂತಿ ಸುವರ್ಣ ಇವರ ಸಂಸ್ಮರಣೆ ಹಾಗೂ ಕೃತಿ ವಿಮರ್ಶೆ ಕಾರ್ಯಕ್ರಮವು ಕಾರ್ಕಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 16-09-2023ರಂದು ಜರುಗಿತು. “ಯಶವಂತಿ ಸುವರ್ಣ ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಾಹಿತ್ಯಿಕ ರಂಗದಲ್ಲಿ ಕ್ರಿಯಾಶೀಲರಾಗಿದ್ದು ತಮ್ಮ ಸ್ತ್ರಿಪರ ಚಿಂತನೆಯಿಂದ ಜನಪ್ರಿಯರಾಗಿದ್ದರು” ಎಂದು ಪ್ರಸ್ತಾವಿಕ ನುಡಿಗಳಲ್ಲಿ ಸುಲೋಚನಾ ತಿಲಕ್ ಇವರು ನುಡಿದರು. ಯಶವಂತಿ ಸುವರ್ಣರ ‘ದಾರಿ’ ಕಥಾ ಸಂಕಲನದ ವಿಮರ್ಶೆ ಮಾಡಿದ ಶ್ಯಾಮಲಾ ಕುಮಾರಿ ಬೇವಿಂಜೆ ಇವರು “ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಯಶವಂತಿಯವರಂತಹ ಹೆಣ್ಣು ಮಗಳು ಸಮಾಜದ ಓರೆ ಕೋರೆಗಳು, ರಾಜಕೀಯ ತಂತ್ರಗಳು, ಅಧಿಕಾರಶಾಹಿ, ಕಾಮ ಪ್ರೇಮಗಳ ಕುರಿತು ದಿಟ್ಟವಾಗಿ ತೆರೆದುಕೊಳ್ಳುವುದು ಅಚ್ಚರಿ ಮೂಡಿಸಿತು” ಎಂದರು. ಅವರ ತುಳು ಕೃತಿಗಳ ಬಗ್ಗೆ ಮಾತನಾಡಿದ ಡಾ.ಸುಮತಿ ಪಿ. ಇವರು “ಯಶವಂತಿ ಸುವರ್ಣರಿಂದ ತುಳುನಾಡಿನ ಪರಂಪರೆ ಮತ್ತು ದೈವಗಳ ಕುರಿತು ಅಧ್ಯಯನ ಯೋಗ್ಯ ರಚನೆ ಆಗಿದೆ” ಎಂದರು. ಅವರ ಆತ್ಮಕತೆ ‘ಪಶ್ಚಿಮಕ್ಕೆ…

Read More

ಬೆಂಗಳೂರು: ದಿನಾಂಕ 19-09-2023 ರಂದು ಎ.ಡಿ.ಎ. ರಂಗಮಂದಿರದಲ್ಲಿ ನಡೆದ ‘ಲೀಲಾ ನಾಟ್ಯ ಕಲಾವೃಂದ’ದ ಯಶಸ್ವೀ 47ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿವಿಧ ಆಕರ್ಷಕ ನೃತ್ಯಾವಳಿಗಳು ಕಣ್ಮನ ಸೆಳೆದವು. ಸುಮಾರು 150 ಮಂದಿ ನೃತ್ಯಾಕಾಂಕ್ಷಿಗಳು ಅತ್ಯುತ್ಸಾಹದಿಂದ ಭಾಗವಹಿಸಿದ ನಲಿವಿನ ಹೆಜ್ಜೆ-ಗೆಜ್ಜೆಗಳ ಸಮೂಹ ನೃತ್ಯಾರ್ಪಣೆಯ ಸೌಂದರ್ಯಕರ ನೋಟ ಮುದನೀಡಿತು. ಪುಟಾಣಿ ಮಕ್ಕಳಿಂದ ಹಿಡಿದು ಹದಿಹರೆಯದ ಲಲನೆಯರರೂ ಅಂದವಾದ ಅಲಂಕಾರ, ಸುಮನೋಹರ ವೇಷಭೂಷಣಗಳಲ್ಲಿ ಶೋಭಿಸಿ ರಂಗದ ಮೇಲೆ ವಿವಿಧ ಸುಂದರ ಕೃತಿಗಳನ್ನು ನಿರೂಪಿಸಿದರು. ಅಂಗಶುದ್ಧ-ಲವಲವಿಕೆಯ ನರ್ತನ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಕೊನೆಯಲ್ಲಿ ಪ್ರಸ್ತುತವಾದ ‘ನವರಸ ರಾಮಾಯಣ’-ನೃತ್ಯರೂಪಕದ ವಿಶೇಷವೆಂದರೆ, ಇದು ಕೇವಲ ನೃತ್ಯ ನಾಟಕವಾಗಿರದೆ, ‘ಮಾರ್ಗಂ’ ಸಂಪ್ರದಾಯದ ‘ವರ್ಣ’ ಸ್ವರೂಪ-ವಿನ್ಯಾಸಗಳಲ್ಲಿ, ಅದರ ಎಲ್ಲ ಶಾಸ್ತ್ರೀಯ ವ್ಯಾಕರಣಾಂಶಗಳನ್ನೂ ಒಳಗೊಂಡು ನಿರೂಪಿತವಾದ ಹೊಸ ಪ್ರಯೋಗವಾಗಿತ್ತು. ನೃತ್ತ-ನೃತ್ಯ ಮತ್ತು ಅಭಿನಯಗಳ ಮೆರುಗಿನಲ್ಲಿ ರಾಮಾಯಣದ ಹಲವು ರಸಘಟ್ಟಗಳನ್ನು ಪ್ರದರ್ಶಿಸಲಾಯಿತು. ಭರತನಾಟ್ಯದಲ್ಲಿ ‘ನವರಸ’ಗಳು ತನ್ನದೇ ಆದ ವಿಶೇಷ ಸ್ಥಾನ-ವೈಶಿಷ್ಟ್ಯಗಳನ್ನು ಪಡೆದಿವೆ. ಶೃಂಗಾರ, ಹಾಸ್ಯ, ಭಯಾನಕ, ಕ್ರೋಧ, ವೀರ, ಅದ್ಭುತ, ಭೀಭತ್ಸ, ಕರುಣಾ ಮತ್ತು ಶಾಂತ ಮುಂತಾದ…

Read More

ಮಡಿಕೇರಿ : ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರನ್ನು ಪುನರ್ ನೇಮಕ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ತೋಂಟದಾರ್ಯ ತಿಳಿಸಿದ್ದಾರೆ. ಪರಿಷತ್ತಿನ ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಹೊಣೆಗಾರಿಕೆಯನ್ನು ಮಧೋಶ್ ಪೂವಯ್ಯ ಅವರಿಗೆ ನೀಡಲಾಗಿದೆ. ತೂಕ್ ಬೊಳಕ್ ಕಲೆ, ಕ್ರೀಡೆ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಮಧೋಶ್ ಪೂವಯ್ಯ ಪ್ರಸ್ತುತ ಕೊಡಗು ಪತ್ರಕರ್ತ ಸಂಘದ ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ನಾನಾ ಹುದ್ದೆಗಳನ್ನು ಅಲಂಕರಿಸಿದ್ದಾರೆ.

Read More

ಕೊಣಾಜೆ: ಬೊಟ್ಟಿಕೆರೆಯ ಅಂಬುರುಹ ಯಕ್ಷ ಪ್ರತಿಷ್ಠಾನದ ವತಿಯಿಂದ ಅಂಬುರುಹದಲ್ಲಿ ಯಕ್ಷಶ್ರಾವಣ 2023 ಹಾಗೂ ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಯಕ್ಷಗಾನ ಪ್ರಸಂಗ ‘ಲೋಕಾಭಿರಾಮ’ ಕೃತಿ ಬಿಡುಗಡೆಕಾರ್ಯಕ್ರಮವು ದಿನಾಂಕ 17-09-2023ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿ.ವಿ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಶ್ರೀಪತಿ ಕಲ್ಲೂರಾಯ “ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಯಕ್ಷಗಾನದ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ತೊಡಗಿಕೊಂಡು ಸವ್ಯಸಾಚಿಯಾಗಿ ಗುರುತಿಸಿಕೊಂಡವರು. ಜೊತೆಗೆ ಯಕ್ಷಗಾನ ಸಾಹಿತ್ಯ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಓರ್ವ ವಿದ್ವತ್ ಪೂರ್ಣ ಕಲಾವಿದ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟಿಕೆರೆಯ ಅಂಬುರುಹ ಯಕ್ಷ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಪೂಂಜ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ರಾಂ ಹೊಳ್ಳ ಸ್ವಾಗತಿಸಿ, ದೀವಿತ್ ಕೋಟ್ಯಾನ್ ಕೃತಿಯನ್ನು ಪರಿಚಯಿಸಿ, ಸದಾಶಿವ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಲೋಕಾಭಿರಾಮ ಪ್ರಸಂಗದ ಆಯ್ದ ಭಾಗದ ಯಕ್ಷಗಾನ ತಾಳಮದ್ದಳೆ ಹಾಗೂ ನರಶಾರ್ದೂಲ ಯಕ್ಷಗಾನ ಪ್ರದರ್ಶನ ನಡೆಯಿತು.

Read More

ಮಂಗಳೂರು : ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವಠಾರದಲ್ಲಿ ಶ್ರೀಕಾಳಿಕಾಂಬಾ ವಿನಾಯಕ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ‘ಶ್ರೀದೇವಿ ಮಹಿಷಮರ್ದಿನಿ’ ಎನ್ನುವ ಯಕ್ಷ ಕಥಾನಕವನ್ನು ದಿನಾಂಕ 17-09-2023ರ ಶ್ರೀವಿಶ್ವಕರ್ಮ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು. ಯಕ್ಷ ಗುರು ಡಾ. ದಿನಕರ್ ಪಚ್ಚನಾಡಿಯವರ ನಿರ್ದೇಶನದಲ್ಲಿ ಪ್ರದರ್ಶಿಸಲ್ಪಟ್ಟ ಈ ಪ್ರಸಂಗದ ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯಶ್ರೀ ಮಂಡೆಕೋಲು ಅತ್ಯುತ್ತಮ ಸ್ವರ ಮಾಧುರ್ಯದ ಮೂಲಕ ಅಪಾರ ಜನ ಮೆಚ್ಚುಗೆಗೆ ಪಾತ್ರರಾದರು. ಹಾಗೆಯೇ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪ್ರದರ್ಶನವನ್ನು ನೀಡಿದರೂ ಕೂಡ ಯಾವುದೇ ವೃತ್ತಿಪರರಿಗೆ ಕಡಿಮೆ ಇಲ್ಲದಂತೆ ತಮ್ಮ ಆಂಗಿಕ – ವಾಚಿಕ-ಶಾರೀರಿಕ ಅಭಿನಯದ ಮೂಲಕ ಕಲಾಸಕ್ತರ ಮನಸೂರೆಗೊಂಡರು. ಈ ಸಂದರ್ಭದಲ್ಲಿ ಯಕ್ಷ ತರಬೇತಿ ನೀಡಿದ ದಿನಕರ್ ಪಚ್ಚನಾಡಿಯವರನ್ನು ಅಭಿನಂದಿಸಲಾಯಿತು. ಶ್ರೀಕಾಳಿಕಾಂಬಾ ವಿನಾಯಕ ದೇವಸ್ಥಾನದ ಸದಸ್ಯರಾದ ಕೆ. ಕೆ. ವಿಠ್ಠಲ್ ಹಾಗೂ ಜಯಕರ ಟಿ ಉಪಸ್ಥಿತರಿದ್ದರು. ಯಕ್ಷಗಾನ ಕೇಂದ್ರದ ಅಧ್ಯಕ್ಷರಾದ ಶ್ರೀ ಗುರುರಾಜ್ ಕೆ ಜೆ, ಸಂಚಾಲಕರಾದ ನಾಗರಾಜ್ ಆಚಾರ್ ಹಾಗೂ ಕಾರ್ಯದರ್ಶಿ ಪ್ರದೀಪ್ ಆಚಾರ್ಯ ಉರ್ವ…

Read More