Author: roovari

ಬೆಂಗಳೂರು: ಒಂದು ಆದರ್ಶಕ್ಕೆ, ಒಂದು ವಿಷಯಕ್ಕೆ ನಮ್ಮನ್ನು ಸಮರ್ಪಿಸಿಕೊಂಡರೆ ಅವೇ ನಮ್ಮ ದಿನನಿತ್ಯದ ಹೆಚ್ಚಿನ ಭಾಗವಾಗಿರುತ್ತದೆ.ಅದರಲ್ಲೂ ಸಂಘಟನೆಗೆ ಸಮರ್ಪಿಸಿಕೊಂಡರಂತೂ ನಮ್ಮ ವೈಯಕ್ತಿಕ ಬೆಳವಣಿಯು ಅರ್ಧ ಕುಂಠಿತವಾದಂತೆ. ಕಲಾವಿದರಾಗಿ ನಾವು ಇಂತಹ ಹುಚ್ಚು ಪ್ರಯಾಸಗಳಲ್ಲಿ ಇಳಿದಿರುತ್ತೇವೆ. ಕಲೆಯನ್ನು ಪಂಚಮವೇದ ಅಂತಲೇ ಪರಿಗಣಿಸಿದ್ದಾರೆ. ಹಾಗಾಗಿ ಸಾಂಸ್ಕೃತಿಕ ಕ್ಷೇತ್ರಕ್ಕೆ ಮಾಡುವ ಕೊಡುಗೆ ಕೂಡ ಅತ್ಯಂತ ಶ್ರೇಷ್ಠವಾದದ್ದು ಅಂತ ತಿಳಿದು ನಮಗೆ ನಾವೇ ಸಮಾಧಾನಮಾಡಿಕೊಂಡು ಕೆಲಸ ಮಾಡಬೇಕು. ಇಂತಹ ಸಾಹಸ ಯಾತ್ರೆಯಲ್ಲಿ ಸ್ನೇಹಿತರಾದ ಧನನ್ಜೋಯ್ ದಾಸ್ ಅವರು ಬ್ರಿಗೇಡ್ ರೋಡ್ ನಲ್ಲಿಯ ‘ಆರ್ಟ್ಮಾ ಆರ್ಟ್ ಗ್ಯಾಲರಿ’ಯಲ್ಲಿ ‘ಆರ್ಟ್ ಎಕ್ಸಟ್ರಾವಗಝ’ ಹೆಸರಿನಲ್ಲಿ ಸಮೂಹ ಕಲಾ ಪ್ರದರ್ಶನ ಆಯೋಜನೆ ಮಾಡಿದ್ದರು. ದಿನಾಂಕ 16-9-23ರ ಶನಿವಾರ ಸಂಜೆ ಹಿರಿಯ ಕಲಾವಿದರಾದ ಶ್ರೀ ಚಿ.ಸು.ಕೃಷ್ಣ ಸೆಟ್ಟಿ ಸಿ.ಎಸ್, ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಶುಭಾ ಸುರೇಶ್, ಕಲಾವಿದರಾದ ಶ್ರೀ ಗಣಪತಿ ಎಸ್.ಹೆಗಡೆಯವರಿಂದ ಉದ್ಘಾಟನೆಗೊಂಡಿತು. ಬೇರೆ ಬೇರೆ ಕ್ಷೇತ್ರದಿಂದ, ಬೇರೆ ಬೇರೆ ನೆಲೆಯಿಂದ ಬಂದ ಎಂಟು ಕಲಾವಿದರು ಈ ಕಲಾಪ್ರದರ್ಶನದಲ್ಲಿ ಭಾಗವಹಿಸಿದ್ದರು.ಇದನ್ನ UXDD (ಯೂಸರ್ ಎಕ್ಸ್…

Read More

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ರೇವಾ ಯುನಿವರ್ಸಿಟಿಯ ಪ್ರದರ್ಶನ ಕಲೆಗಳ ವಿಭಾಗ ಮತ್ತು ಧಾರಣಾ- ಭಾರತೀಯ ಜ್ಞಾನ ವ್ಯವಸ್ಥೆ ಅಧ್ಯಯನ ಕೇಂದ್ರದ ವತಿಯಿಂದ ಕರಾವಳಿಯ ಭರತನಾಟ್ಯ ಕಲಾವಿದರಾದ ವಿದ್ವಾನ್ ಮಂಜುನಾಥ.ಎನ್ ಪುತ್ತೂರು ಅವರು ರೂಪಿಸಿರುವ ಪರಿಕಲ್ಪನೆ “ಭರತನಾಟ್ಯದಲ್ಲಿ ತಾಳಾವಧಾನ” ಶೈಕ್ಷಣಿಕವಾಗಿ ಮೂರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ರೂಪದಲ್ಲಿ ಮೂಡಿಬರುತ್ತಿದೆ. ಪ್ರದರ್ಶನ ಕಲೆಗಳ ವಿಭಾಗದ ನಿರ್ದೇಶಕರಾದ ಹಿರಿಯ ನೃತ್ಯಗುರು ಡಾ.ವಿದ್ಯಾ ಕುಮಾರಿ ಅವರು ಆನ್ಲೈನ್ ಮುಖಾಂತರ ಈ ಕೋರ್ಸಿಗೆ ಸೆಪ್ಟೆಂಬರ್ 6 ರಂದು ಅಧಿಕೃತವಾಗಿ ಚಾಲನೆ ನೀಡಿ ಶ್ಲಾಘಿಸಿದರು. ಇದನ್ನು ಭರತನಾಟ್ಯ ಕ್ಷೇತ್ರಕ್ಕೆಂದೇ ಅನ್ವೇಷಿಸಿ,ರೂಪಿಸಿದವರು ಯುವ ವಿದ್ವಾಂಸರಾದ ಭರತನಾಟ್ಯ ಕಲಾವಿದ ವಿದ್ವಾನ್ ಮಂಜುನಾಥ ಎನ್ ಪುತ್ತೂರು. ಈ ಕೋರ್ಸಿನಲ್ಲಿ ನಾಲ್ಕು ಅಧ್ಯಾಯಗಳಿದ್ದು, ಹೊಸ ಪ್ರಯೋಗಗಳನ್ನು ಮತ್ತು ನೃತ್ಯಕ್ಕೆ ಸಂಬಂಧಪಟ್ಟ ಹಲವಾರು ಚಟುವಟಿಕೆಗಳನ್ನು ಒಳಗೊಂಡಿದೆ.ಆಳ್ವಾಸ್ ಪದವಿ ಕಾಲೇಜಿನಲ್ಲಿ ಶೈಕ್ಷಣಿಕವಾಗಿ ಪ್ರಾರಂಭಗೊಂಡು ಇದೀಗ ರೇವಾ ಯುನಿವರ್ಸಿಟಿಯಲ್ಲಿ ಸರ್ಟಿಫಿಕೇಟ್ ಕೋರ್ಸ್ ರೂಪದಲ್ಲಿ ಮೂಡಿಬರುತ್ತಿದೆ.

Read More

ಬದಿಯಡ್ಕ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ರಂಗಸಿರಿ ಗ್ರಾಮಪರ್ಯಟನೆಯ 7ನೇ ಕಾರ್ಯಕ್ರಮ ದಿನಾಂಕ 17-09-2023ರ ಭಾನುವಾರ ಬದಿಯಡ್ಕದ ಸಂತ ಬಾರ್ತಲೋಮಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ವಯಲಿನ್ ವಾದಕರಾದ ವಿದ್ವಾನ್ ಪ್ರಭಾಕರ ಕುಂಜಾರು “ಗ್ರಾಮೀಣ ಪ್ರದೇಶಗಳನ್ನು ತಲುಪುವ ರಂಗಸಿರಿಯ ಗ್ರಾಮಪರ್ಯಟನೆಯಂತಹ ಕಾರ್ಯಕ್ರಮಗಳು ತುಂಬಾ ಪರಿಣಾಮಕಾರಿಯಾಗಿವೆ” ಎಂದು ಸಂತಸ ವ್ಯಕ್ತಪಡಿಸಿದರು. ರಂಗಸಿರಿ ಸಾಂಸ್ಕ್ರತಿಕ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ಕೆದಿಲಾಯ ಪುಂಡೂರು ಸಭೆಯ ಅಧ್ಯಕ್ಷತೆ ವಹಿಸಿ, ಬದಿಯಡ್ಕ ಗ್ರಾಮಪಂಚಾಯತಿನ ಜನಪ್ರತಿನಿಧಿ ಶ್ರೀ ಶಂಕರ.ಡಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ಕ್ರಿಸ್ಟೆಲ್ಲ ಫೆರ್ನಾಂಡಿಸ್ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶ್ರೀಮತಿ ಭುವನೇಶ್ವರಿ.ಪಿ ಇವರು ಮಂಡಲ ಆರ್ಟ್ ನ ಬಗ್ಗೆ ಪರಿಚಯ ನೀಡಿದರು. ಸಭಾ ಕಾರ್ಯಕ್ರಮದ ಬಳಿಕ ಮಂಡಲ ಆರ್ಟ್ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದಲ್ಲಿ ಕಾಸರಗೋಡಿನ ವಿವಿಧ ಭಾಗಗಳಿಂದ ಮಕ್ಕಳು ಹಾಗೂ ಹಿರಿಯರು ಪಾಲ್ಗೊಂಡರು.

Read More

ಮಂಗಳೂರು : ರಾಮಕೃಷ್ಣ ಮಠದಲ್ಲಿ ಸೆಪ್ಟೆಂಬರ್ ತಿಂಗಳ ಭಜನ್‌ ಸಂಧ್ಯಾ ಕಾರ್ಯಕ್ರಮ ಸಂಪನ್ನಗೊಂಡಿತು. ಭಜನ್ ಸಂಧ್ಯಾದ ಐದನೇ ವಾರದ ಕಾರ್ಯಕ್ರಮವನ್ನು ದಿನಾಂಕ 03-09-2023ರಂದು ಬೋಳಾರದ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಸದಸ್ಯರು ಹಾಗೂ ಆರನೇ ವಾರದ ಭಜನಾ ಸೇವೆಯನ್ನು ದಿನಾಂಕ 10-09-2023ರಂದು ಜಪ್ಪು ಮಹಾಕಾಳಿಪಡ್ಪಿನ ಶ್ರೀ ಆದಿಮಹೇಶ್ವರಿ ವೈದ್ಯನಾಥ ಭಜನಾ ಮಂಡಳಿಯವರು ನೆರವೇರಿಸಿದರು. ಭಜನಾ ತಂಡದ ಸೇವೆಯ ನಂತರ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ವತಿಯಿಂದ ಭಜನಾ ತಂಡಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತದನಂತರ ಆರತಿ ಹಾಗೂ ಆಶ್ರಮದ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಆಶ್ರಮದ ಭಕ್ತರು, ಸ್ವಯಂಸೇವಕರು ಹಾಗೂ ಹಲವಾರು ಸಾರ್ವಜನಿಕರು ಭಾಗವಹಿಸಿದರು. ಮುಂದಿನ ತಿಂಗಳ ಭಜನ್‌ ಸಂಧ್ಯಾ ಕಾರ್ಯಕ್ರಮವು ದಿನಾಂಕ 01-10-2023 ಭಾನುವಾರದಂದು ಸಂಜೆ 4 ಗಂಟೆಗೆ ಸರಿಯಾಗಿ ಶ್ರೀ ಜನಾರ್ದನ ಭಜನಾ ಮಂಡಳಿ ಜಪ್ಪು ಬಪ್ಪಾಲ್, ಮಂಗಳೂರು ಇವರಿಂದ ಭಜನಾ ಸೇವೆ ನಡೆಯಲಿದೆ. ಶ್ರೀ…

Read More

ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ವತಿಯಿಂದ ಸುರತ್ಕಲ್‌ನ ಭಾಗ್ಯ ರೆಸಿಡೆನ್ಸಿಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭ ದಿನಾಂಕ 18-09-2023ರಂದು ನಡೆಯಿತು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನಗೊಳಿಸಿ ಮಾತನಾಡಿದ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೃಷ್ಣಮೂರ್ತಿಯವರು “ವ್ಯಕ್ತಿಯ ಅಂತಸ್ಸತ್ವ ಅಭಿವ್ಯಕ್ತಪಡಿಸುವಲ್ಲಿ ಶಾಸ್ತ್ರೀಯ ಸಂಗೀತ ಕಲೆಯ ಅಭ್ಯಾಸ ವಿಶಿಷ್ಟವಾದುದು” ಎಂದರು. ಅಧ್ಯಕ್ಷತೆವಹಿಸಿ ಮಾತನಾಡಿದ ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಸಂಸ್ಥೆಯ ಗೌರವಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು “ಶಾಸ್ತ್ರೀಯ ಸಂಗೀತ ದೈವಿಕ ಕಲೆಯಾಗಿದ್ದು ಪೋಷಕರು ಮಕ್ಕಳಿಗೆ ಎಳವೆಯಲ್ಲಿಯೇ ಶಾಸ್ತ್ರೀಯ ಸಂಗೀತದ ಕುರಿತು ಆಸಕ್ತಿ ಮೂಡಿಸಬೇಕು” ಎಂದು ನುಡಿದರು. ಅಗರಿ ಸಮೂಹ ಸಂಸ್ಥೆಗಳ ಮಾಲೀಕ ಅಗರಿ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಮಾತನಾಡಿ “ಸನಾತನ ಧರ್ಮದ ಶ್ರೇಷ್ಠತೆಯ ಅರಿವನ್ನು ಹಿರಿಯರು ಮಕ್ಕಳಿಗೆ ತಿಳಿಯಪಡಿಸಬೇಕು” ಎಂಬ ಸಂದೇಶ ನೀಡಿದರು. ಹಿರಿಯ ನಾದಸ್ವರ ಕಲಾವಿದರಾದ ವಿದ್ವಾನ್ ನಾಗೇಶ ಎ.ಬಪ್ಪನಾಡು “ಮಣಿಕೃಷ್ಣ ಸ್ವಾಮಿ ಅಕಾಡೆಮಿ ಸಂಗೀತ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿದೆ” ಎಂದು ಶುಭ ಹಾರೈಸಿದರು. ಸುರತ್ಕಲ್ ನಾಗರಿಕ…

Read More

ಮಂಗಳೂರು : ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯ ಬಜಪೆ ಆಯೋಜಿಸಿದ ಯಕ್ಷಗಾನ ಚಂಡೆ, ಮದ್ದಳೆ ಹಾಗೂ ಭಾಗವತಿಕೆ ತರಗತಿಗಳ ಉದ್ಘಾಟನಾ ಸಮಾರಂಭ ದಿನಾಂಕ 17-09-2023ರಂದು ಬಜಪೆಯ ಪೆರ್ಮುದೆಯಲ್ಲಿರುವ ಶಾರದಾ ಯಕ್ಷಗಾನ ಮಂಡಳಿ (ರಿ.)ಯಲ್ಲಿ ನಡೆಯಿತು. ಯಕ್ಷಗಾನ ತರಗತಿಯನ್ನು ಚಂಡೆ, ಮದ್ದಳೆ ಹಾಗೂ ಭಾಗವತಿಕೆ ಗುರುಗಳಾದ ಮಣಿಮುಂಡ ಸುಬ್ರಮಣ್ಯ ಶಾಸ್ತ್ರಿ ಉದ್ಘಾಟಿಸಿದರು, ಈ ಕಾರ್ಯಕ್ರಮದಲ್ಲಿ ಯಕ್ಷಗಾನ ನಾಟ್ಯ ಗುರುಗಳಾದ ರಾಜೇಶ್ ಕಟೀಲು, ಕೃಷ್ಣ, ದಯಾವತಿ, ಗುರುರಾಜ ಶೆಟ್ಟಿ, ಭರತೇಶ್ ಶೆಟ್ಟಿ, ಸುರೇಶ್ ಬಜಪೆ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಕೋಟ : ಯಶಸ್ವೀ ಕಲಾವೃಂದ (ರಿ.) ಕೊಮೆ, ತೆಕ್ಕಟ್ಟೆ ಸಂಸ್ಥೆಯ ಪುಟಾಣಿಗಳ ‘ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ’ಯು  ದಿನಾಂಕ 15-09-2023ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಎಮ್.ಜಿ.ಎಮ್.ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀವಟಿಕೆಗೆ ಎಣ್ಣೆ ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕೋಟ ವಿವೇಕ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ ನಾವುಡ “ಯಕ್ಷಗಾನದ ಮೂಲ ಸತ್ವವು ಯಕ್ಷರಂಗದಲ್ಲಿ ವಿರಳವಾಗಿದೆ. ಪೂರ್ವರಂಗ ಪ್ರಾತ್ಯಕ್ಷಿಕೆಯ ಮೂಲಕ ರಂಗದಲ್ಲಿ ಎಳೆ ಎಳೆಯಾಗಿ ಮಕ್ಕಳಿಗೆ ಬಿತ್ತರಿಸುವ ಕಾರ್ಯ ಮಹತ್ತರವಾದದ್ದು. ಯಶಸ್ವೀ ಕಲಾವೃಂದ ಹಲವಾರು ವರ್ಷಗಳಿಂದ ಅತ್ಯುನ್ನತ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಮೆರೆದಿರುವುದನ್ನು ಹತ್ತಿರದಿಂದ ಬಲ್ಲೆವು. ಚಿಣ್ಣರ ಮೂಲಕವೇ ಚಿಣ್ಣರಿಗೆ ಕಲೆಯನ್ನು ಉಣಿಸಿದಾಗ ಹೆಚ್ಚು ಫಲಕಾರಿಯಾಗುವುದರಲ್ಲಿ ಸಂಶಯವಿಲ್ಲ” ಎಂದು ಅಭಿಪ್ರಾಯ ಪಟ್ಟರು. ಗೌರವ ಉಪಸ್ಥಿತಿಯಲ್ಲಿ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯರಾದ ಭಾಸ್ಕರ ಆಚಾರ್ಯ, ಕೋಟ ವಿದ್ಯಾ ಸಂಘದ ಜೊತೆ ಕಾರ್ಯದರ್ಶಿಗಳಾದ ಮಂಜುನಾಥ ಉಪಾಧ್ಯ, ಯಕ್ಷ ಗುರು ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು. ವಿವೇಕ ಬಾಲಕಿಯರ…

Read More

ಪುತ್ತೂರಿನ ನೆಲದ ಮಹತ್ವವನ್ನು ಜಗತ್ತಿನ ಸಾಂಸ್ಕೃತಿಕ ಲೋಕಕ್ಕೆಲ್ಲ ತಿಳಿಯುವ ಹಾಗೆ ಮಾಡಿದ ಇಬ್ಬರು ಮಹನೀಯರೆಂದರೆ… ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ. ಶಿವರಾಮ ಕಾರಂತ ಮತ್ತು ಪದ್ಮಶ್ರೀ ಪ್ರಶಸ್ತಿ ಪಡೆದ ಬಿ.ವಿ. ಕಾರಂತ. ಡಾ. ಶಿವರಾಮ ಕಾರಂತರು, ಬಿ.ವಿ. ಕಾರಂತರಂತಹ ಹಿರಿಯರು ರಂಗಭೂಮಿಯಲ್ಲಿ ಸಾಂಸ್ಕೃತಿಕ ಶಿಕ್ಷಣವನ್ನು ನಾಡಿನಾದ್ಯಂತ ಪಸರಿಸುವುದರಲ್ಲಿ ಹೆಸರು ಮಾಡಿದವರು, ಮಾತ್ರವಲ್ಲ ನಾಡಿನ ಎಲ್ಲರ ಸಾಂಸ್ಕೃತಿಕ ಬದುಕಿನಲ್ಲಿ ಎಚ್ಚರವಾಗಿಯೂ ಕೆಲಸ ಮಾಡಿದವರು. ಮುಖ್ಯವಾಗಿ ಮಕ್ಕಳ ಸಾಂಸ್ಕೃತಿಕ ಶಿಕ್ಷಣಕ್ಕೆ ಬಹುಮುಖ್ಯ ಕೊಡುಗೆ ನೀಡಿದವರು ಶಿವರಾಮ ಕಾರಂತರು. ಇವರು ಪುತ್ತೂರನ್ನು ಅರಸಿ ಬಂದು ಇಲ್ಲಿ ನೆಲೆಯಾಗಿ ಸುದೀರ್ಘ ಕಾಲ ತಮ್ಮ ಸಾಹಿತ್ಯ, ರಂಗಭೂಮಿ, ಶಿಕ್ಷಣ, ಪರಿಸರ ಮುಂತಾದ ಹಲವು ಹತ್ತು ಮುಖಗಳನ್ನು ತೆರೆದಿಡುತ್ತಾರೆ. ಬಿ.ವಿ. ಕಾರಂತರು ಪುತ್ತೂರಿಗೆ ಬಂದು ಇಲ್ಲಿ ನಿಲ್ಲದೆ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಎನ್ನುತ್ತಾ ಜಗದಗಲಕ್ಕೆ ಜಂಗಮರ ಹಾಗೆ ಪಯಣ ನಡೆಸುತ್ತಾ ರಂಗಭೂಮಿಯ ಬಹುಮುಖ್ಯ ಆಯಾಮಗಳ ಸಾಧ್ಯತೆಗಳನ್ನು ಪರಿಚಯಿಸುತ್ತಾರೆ. ಕನ್ನಡದಲ್ಲಿ ಒಂದು ಮಾತಿದೆ. ‘ಹತ್ತೂರು ಕೊಟ್ಟರೂ ಪುತ್ತೂರು ಬಿಡ’ ಎಂಬುದಾಗಿ. ಪುತ್ತೂರಿನ…

Read More

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಇದರ ವತಿಯಿಂದ ದಿನಾಂಕ 24-12-2023 ಹಾಗೂ 25-12-2023ರಂದು ಉಡುಪಿ ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಹಮ್ಮಿಕೊಳ್ಳಲಿರುವ ಎರಡು ದಿನಗಳ ಶಾಸ್ತ್ರೀಯ ನೃತ್ಯ ಕಲಾವಿದರ ನೃತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕರಾವಳಿಯ ಮೂಲದ ನೃತ್ಯ ವಿದ್ವಾಂಸ ನಾಟ್ಯಾಚಾರ್ಯ ಪ್ರೊಫೆಸರ್ ಕೆ.ರಾಮಮೂರ್ತಿ ರಾವ್ ಇವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಪ್ರೊ.ಕೆ.ರಾಮಮೂರ್ತಿಯವರು ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದು ನೂಪುರ ಎಂಬ ನೃತ್ಯ ಸಂಸ್ಥೆಯ ಮೂಲಕ ಕಲಾ ಸೇವೆಯನ್ನು ಮಾಡುತ್ತಿದ್ದಾರೆ. ಒರ್ವ ಕಲಾವಿದರಾಗಿ, ಗುರುವಾಗಿ, ನೃತ್ಯ ನಿರ್ದೇಶಕರಾಗಿ, ಕಲಾ ವಿಮರ್ಶಕರಾಗಿ ಮತ್ತು ಬರಹಗಾರರಾಗಿ ನೃತ್ಯಕ್ಷೇತ್ರದಲ್ಲಿ ಅವರದ್ದು ವೈವಿಧ್ಯಮಯ ವ್ಯಕ್ತಿತ್ವ. ನಾಟ್ಯಾಚಾರ್ಯ ದಿ.ವಿಷ್ಣುದಾದಾಸ್ ಇವರಲ್ಲಿ ನೃತ್ಯಭ್ಯಾಸ ಮೈಸೂರಿನ ಆಸ್ಥಾನ ವಿದ್ವಾನ್ ಎಸ್.ಎನ್.ಮರಿಯಪ್ಪ ಮತ್ತು ಲಕ್ಷ್ಮೀಪತಿ ಭಾಗವತರಿಂದ ಸಂಗೀತಭ್ಯಾಸ ಮಾಡಿರುವರು. ನಟುವಾಂಗದಲ್ಲಿ. ವಿಶೇಷ ಪರಿಣತಿ ಹೊಂದಿರುವ ಇವರು ಭರತನಾಟ್ಯದ ಜೂನಿಯರ್ ಸೀನಿಯರ್ ವಿದ್ವತ್ ಈ ಎಲ್ಲಾ ಪರೀಕ್ಷೆಗಳಲ್ಲೂ ರಾಂಕ್ ವಿಜೇತರು. ನೃತ್ಯಕ್ಕೆ ಸಂಬಂಧಿಸಿದ ನೂರಾರು…

Read More

ಇತೀಚಿನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಲನಚಿತ್ರ ಖ್ಯಾತಿಯ ಗಗನ್ ರಾಮ್ ಪ್ರಸಕ್ತ ಸಾಲಿನ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಗೆ ಆಯ್ಕೆಯಾದ ಕರ್ನಾಟಕದ ಏಕೈಕ ರಂಗ ವಿದ್ಯಾರ್ಥಿ. ಶಾಲಾ ದಿನಗಳಿಂದ, ಅಂದರೆ 2005 ರಿಂದ ಇಲ್ಲಿಯವರೆಗೂ ಸುಮಾರು 18 ವರ್ಷಗಳಿಂದ ರಂಗಭೂಮಿಯಲ್ಲಿ ಗಗನ್ ರಾಮ್ ತೊಡಗಿಕೊಂಡಿರುತ್ತಾರೆ. ಖ್ಯಾತ ಸಾಹಿತಿಗಳಾದ ಡಿ.ಆರ್.ನಾಗರಾಜ್ ಅವರ ಶ್ರೀಮತಿಯವರಾದ ಸಿ.ಎನ್.ಗಿರಿಜಮ್ಮ ಇವರಿಂದ ರಂಗಭೂಮಿ ಪರಿಚಯವಾಯಿತು. ಶಾಲಾ ದಿನಗಳಲ್ಲಿ ಗಗನ್ ರಾಮ್ ಮಾಡಿದ ಪ್ರಮುಖ ನಾಟಕಗಳೆಂದರೆ ‘ಮಾಮಾ ಮೋಶಿ’, ‘ಗಾಂಪರ ಗುಂಪು’, ‘ಕಣ್ಣಿಗೆ ಮಣ್ಣು’. ಶಾಲಾ ಮತ್ತು ಕಾಲೇಜು ದಿನಗಳಲ್ಲಿ ಆರಂಭವಾದ ರಂಗಭೂಮಿಯ ನಂಟನ್ನು ಮುಂದುವರಿಸುತ್ತ, ಮುಂದೆ 2010 ರಿಂದ ಬೆಂಗಳೂರಿನ ಸುಮಾರು 26ಕ್ಕೂ ಹೆಚ್ಚು ಹವ್ಯಾಸಿ ಮತ್ತು ವೃತ್ತಿಪರ ತಂಡಗಳಲ್ಲಿ ಇದುವರೆಗೂ 80ಕ್ಕೂ ಹೆಚ್ಚು ನಾಟಕಗಳಲ್ಲಿ ಭಾಗವಹಿಸಿದ್ದಾರೆ ಮತ್ತು ಅವುಗಳ ಒಟ್ಟು 550ಕ್ಕೂ ಹೆಚ್ಚು ಪ್ರದರ್ಶನಗಳಲ್ಲಿ ನಟನಾಗಿ ರಂಗದ ಮೇಲೆ ಕಾಣಿಸಿಕೊಂಡಿರುತ್ತಾರೆ. ಎಂ.ಬಿ.ಎ ಸ್ನಾತಕೋತ್ತರ ಪದವೀಧರರಾಗಿರುವ ಗಗನ್ ರಾಮ್, ಕಲೆಯನ್ನೇ ವೃತ್ತಿಯಾಗಿಸಿಕೊಳ್ಳಬೇಕೆಂದು ನಿರ್ಧರಿಸಿದ ನಂತರ 2018ರಲ್ಲಿ ನೀನಾಸಂ ರಂಗ…

Read More