Author: roovari

ಪುತ್ತೂರು : ದ.ಕ ಜಿಲ್ಲಾ ಕ.ಸಾ.ಪ ಪುತ್ತೂರು ತಾಲೂಕು ಘಟಕ ಮತ್ತು ಉಪ್ಪಿನಂಗಡಿ ಹೋಬಳಿ ಘಟಕದ ನೇತೃತ್ವದಲ್ಲಿ ಹಾಗೂ ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ಸಂಚಾಲಕತ್ವದಲ್ಲಿ ಆಯೋಜಿಸುವ ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯು ದಿನಾಂಕ 01-10-2023ರ ಆದಿತ್ಯವಾರದಂದು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಈ ಎರಡೂ ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನವನ್ನು ನೀಡಿ ಗೌರವಿಸಲಾಗುವುದು. ನಿಯಮಗಳು : ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ ಜಯಂತಿ/ಸ್ವಾತಂತ್ರ್ಯ/ ದೇಶಭಕ್ತಿ ಯಾವುದೇ ವಿಷಯವನ್ನು ಆಯ್ಕೆ ಮಾಡಬಹುದು, ದೇಶಭಕ್ತಿ ಗೀತೆಗೆ ಕರೋಕೆ ಬಳಸಲು ಅವಕಾಶವಿಲ್ಲ, ಸಮೂಹ ಗೀತೆಗೆ ಅವಕಾಶವಿಲ್ಲ, ಜಾತಿ, ಮತ, ಧರ್ಮ ನಿಂದನೆಗೆ ಹಾಗೂ ರಾಜಕೀಯ ವಿಷಯಗಳಿಗೆ ಅವಕಾಶ ಇಲ್ಲ. ಪುತ್ತೂರು ತಾಲೂಕಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ಹಾಗೂ ಪುತ್ತೂರು…

Read More

ಮಂಗಳೂರು : ಆರ್ಟ್ ಕೆನರಾ ಟ್ರಸ್ಟ್, ಮಂಗಳೂರು ಮತ್ತು ಕವಿತಾ ಕುಟೀರ, ಪೆರಡಾಲ ಇವರ ಸಹಯೋಗದಲ್ಲಿ ಕಾಸರಗೋಡಿನ ಪೆರಡಾಲದಲ್ಲಿರುವ ನವಜೀವನ ಹೈಸ್ಕೂಲಿನ ಹಿರಿಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಆಯೋಜಿಸಲಾಗುವ ನೂರ ಒಂದು(101) ಕತೆ ಮತ್ತು ಕವನಗಳನ್ನು ಒಳಗೊಂಡ ಸಂಕಲನವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವವರಿದ್ದು ಅವಕಾಶ ಪಡೆಯುವುದಕ್ಕಾಗಿ ತಮ್ಮ ಬರಹಗಳನ್ನು ದಿನಾಂಕ 30-10-2023ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಕನ್ನಡ ಭಾಷೆಯಲ್ಲಿ ರಚಿತವಾದ ಕತೆ ಮತ್ತು ಕವನಗಳನ್ನು ಕಳುಹಿಸಲು ಅವಕಾಶವಿದ್ದು, ಆಯ್ಕೆಯಾದ ಬರಹಗಳನ್ನು 30-11-2023ರ ಒಳಗೆ ತಿಳಿಸಲಾಗುವುದು. ಆಯ್ಕೆಯಲ್ಲಿ ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಬರಹಗಾರರಿಗೆ ಸಂಕಲನದ ಬಿಡುಗಡೆ ಸಂದರ್ಭದಲ್ಲಿ ಪ್ರಮಾಣಪತ್ರದೊಂದಿಗೆ ಪುಸ್ತಕವನ್ನು ಕೊಡಲಾಗುವುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹುಟ್ಟಿ ಬೆಳೆದ ಹಾಗೂ ವಿದ್ಯಾರ್ಥಿಗಳಾಗಿರುವ ಎಲ್ಲರಿಗೂ ಭಾಗವಹಿಸಲು ಅವಕಾಶವಿದ್ದು, ಲೇಖಕರು 18 ರಿಂದ 35 ವರ್ಷದ ಒಳಗಿನವರಾಗಿರಬೇಕು. (ಜನವರಿ 1988 ರಿಂದ ದಶಂಬರ 2004ರ ಮಧ್ಯೆ ಜನಿಸಿದವರು). 300 ಪದಗಳನ್ನು ಮೀರದಂತೆ ಕವನ ಮತ್ತು 500 ಪದಗಳನ್ನು ಮೀರದಂತೆ ಸಣ್ಣ ಕತೆ…

Read More

ಮಂಗಳೂರು : ಬೆಸಂಟ್ ಹಳೆ ವಿದ್ಯಾರ್ಥಿ ಸಂಘ ವಸಂತ ಪ್ರೇಮಿ ಮಂಡಳಿಯ ವತಿಯಿಂದ ಅಂತರ್ ಶಾಲಾ ಕರ್ನಾಟಕ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಕನ್ನಡ ಭಾಷಣ ಹಾಗೂ ಭಕ್ತಿಗೀತೆ ಸ್ಪರ್ಧೆಗಳು ಬೆಸಂಟ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 12-09-2023ರಂದು ಅಧ್ಯಕ್ಷೆ ಕಾತ್ಯಾಯಿನಿ ರಾವ್ ಇವರ ನೇತೃತ್ವದಲ್ಲಿ ನಡೆಯಿತು. ಬೆಸಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸತೀಶ್ ಶೆಟ್ಟಿಯವರು ಸಂಸ್ಥೆಯ ಅಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಯಕ್ ರೂಪ್ ಸಿಂಗ್, ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ತ್ರಿವೇಣಿ ಮತ್ತು ಅಧ್ಯಕ್ಷೆ ಕಾತ್ಯಾಯಿನಿ ರಾವ್ ಇವರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಗೆ ರೂ.10,000/- ದೇಣಿಗೆಯನ್ನೂ ಹಾಗೂ ಹೈಸ್ಕೂಲ್ ವಿಭಾಗದಿಂದ ಇಬ್ಬರು ಮತ್ತು ಕಾಲೇಜು ವಿಭಾಗದಿಂದ ಇಬ್ಬರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಕಾರ್ಯಕ್ರಮವನ್ನು ಹರಿಣಿ ಜೆ. ಮತ್ತು ಭಾರತಿ ಗಣೇಶ್ ನಿರೂಪಿಸಿ, ವಸಂತಿ ದೇವೇಂದ್ರ ವಂದಿಸಿದರು. ಸ್ಪರ್ಧಾ ವಿಜೇತರು: ಕರ್ನಾಟಕ ಶಾಸ್ತ್ರೀಯ ಸಂಗೀತ…

Read More

ಬೈಲೂರು : ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಿಂಹ ಮಾಸದ 5ನೇ ಕಾರ್ಯಕ್ರಮ ದಿನಾಂಕ 15-09-2023 ಶುಕ್ರವಾರ ಸಂಜೆ ಗಂಟೆ 6ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯರವರಿಂದ ಹಾಗೂ ಅವರ ಶಿಷ್ಯರಿಂದ ನೆರವೇರಿತು. ವಯೊಲಿನ್ ನಲ್ಲಿ ಶ್ರೀಧರ್ ಆಚಾರ್ ಮತ್ತು ಮೃದಂಗದಲ್ಲಿ ಬಾಲಚಂದ್ರ ಭಾಗವತ್ ಸಹಕರಿಸಿದರು. ಕಾರ್ಯದರ್ಶಿ ಶ್ರೀಯುತ ನಾರಾಯಣ ದಾಸ್ ಉಡುಪ ಕಲಾವಿದರನ್ನು ಸ್ವಾಗತಿಸಿ, ದೀಪ ಬೆಳಗಿಸುವುದರೊದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಹೆಚ್ಚು ದೇವಿ ಕೃತಿಗಳನ್ನು ಶಿಷ್ಯೆಯರಿಂದ ಹಾಡಿಸಿ, ಕೊನೆಗೆ ಫರಸ್ ರಾಗದ ಅದಿತಾಳದ ತಿಲ್ಲಾನದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು. ಕು.ಶ್ರಾವಣಿ ಶಾಸ್ತ್ರಿ, ಕು.ಜೇತ್ರ ಮಯ್ಯ, ಕು.ಹಿತಾ ಮಯ್ಯ, ಡಾ.ರಶ್ಮಿ ನಾಯಕ್, ಮಾ.ಯಶಸ್ವೀ ನಾಯಕ್, ಸ್ವಾತಿ ರಾವ್, ಸರಸ್ವತಿ ಉಡುಪ, ಸಪ್ನಾ ಕೊಳತ್ತಾಯ, ಶ್ರಾವ್ಯ ಬಾಸ್ತ್ರಿ, ರಂಜನಿ ಸಾಮಗ ಇವರೆಲ್ಲಾ ಇಂದು ಗುರುಗಳ ಜೊತೆಯಲ್ಲಿ ಹಾಡಿ ಮಹಿಷ ಮರ್ದಿನಿ ದೇವರ ಸನ್ನಿಧಿಯಲ್ಲಿ ಸಂಗೀತ ಸೇವೆ ಅರ್ಪಣೆ ಮಾಡಿದಾಗ, ರಾಮಕೃಷ್ಣ ಕೊಡಂಚರು ಧನ್ಯವಾದ ಸಮರ್ಪಸಿದರು.

Read More

ಮಂಗಳಗಂಗೋತ್ರಿ : ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಸಿದ್ಧಪಡಿಸಿದ ಶ್ರೀ ನಾಗೇಶ್ ಕಾಲೂರು ಇವರ ‘ಶ್ರೀಕಾವೇರಿ ದರ್ಶನಂ’ ಮತ್ತು ಅವರೇ ಅನುವಾದಿಸಿದ ‘ಕೊಡಗಿನಿಂದ ಗಿರಿತನಕ’ ಎಂಬ ಎರಡು ಕೃತಿಗಳು ಸಿಂಡಿಕೇಟ್ ಸಭಾಂಗಣದಲ್ಲಿ ದಿನಾಂಕ 15-09-2023ರಂದು ಬಿಡುಗಡೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಮಂಗಳೂರು ವಿವಿಯ ಕುಲಪತಿ ಪ್ರೊ. ಜಯರಾಜ್ ಅಮೀನ್ ಇವರು ಮಾತನಾಡುತ್ತಾ “ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ, ಸಂಶೋಧನೆ ಹಾಗೂ ಪ್ರಕಟಣೆಯಂತಹ ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ಸಿಗಬೇಕೇ ಹೊರತು ಇತರ ವಿಷಯಗಳಿಗಲ್ಲ. ವಿವಿಯ ಪ್ರಕಟಣೆಗಳು ಸಮಾಜಕ್ಕೆ ಉಪಯುಕ್ತವಾಗುವಂತಿದ್ದು ಸಾಮಾಜಿಕ ಸಾಂಸ್ಕೃತಿಕ ಮತ್ತು ವೈಚಾರಿಕ ಪ್ರಜ್ಞೆಯನ್ನು ಉತ್ತಮಪಡಿಸಬೇಕು. ಕಾವೇರಿ ನಮಗೆ ನದಿ ಮಾತ್ರವಲ್ಲ. ಅದರೊಂದಿಗೆ ನಮಗೊಂದು ಭಾವನಾತ್ಮಕವಾದ ನಂಟಿದೆ. ಅದರ ಒಳಹೊರಗನ್ನು ಕಾವ್ಯಾತ್ಮಕವಾಗಿ ಶ್ರೀಕಾವೇರಿ ದರ್ಶನಂ ಕಾವ್ಯ ಹಿಡಿದಿಟ್ಟಿದೆ. ಪ್ರಸಾರಾಂಗ ಇಂತಹ ಮೌಲಿಕ ಕೃತಿಗಳ ಪ್ರಕಟಣೆಯ ಮೂಲಕ ವಿವಿಯ ಗೌರವವನ್ನು ಹೆಚ್ಚಿಸಿದೆ” ಎಂದು ಹೇಳಿದರು. ಸಮಾರಂಭದಲ್ಲಿ ವಿವಿಗೆ ನೂತನ ಕುಲಸಚಿವರಾಗಿ ಬಂದು ಅಧಿಕಾರ ಸ್ವೀಕರಿಸಿದ ಕೆ.ರಾಜು ಕೆ.ಎ.ಎಸ್. ಇವರು…

Read More

ಮಂಗಳೂರು : ಗಾಂಧಿನಗರದ ಶ್ರೀ ಗೋಕರ್ಣನಾಥೆಶ್ವರ ಕಾಲೇಜಿನ ಲಲಿತಾ ಕಲಾ ಸಂಘ ಹಾಗೂ ಮಹಿಳಾ ಘಟಕದ ನೇತ್ರತ್ವದಲ್ಲಿ ಸಾಮಾಜಿಕ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಪ್ಲಾಸ್ಟಿಕ್ ಮುಕ್ತ ಭಾರತ’ ಎಂಬ ವಿಷಯದ ಕುರಿತು ಬೀದಿ ನಾಟಕ ಪ್ರದರ್ಶನವು ದಿನಾಂಕ 14-09-2023ರಂದು ಗಾಂಧಿ ಪಾರ್ಕ್ ಸಮೀಪದಲ್ಲಿ ಜರುಗಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತಾ ಸುವರ್ಣ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 25 ವಿದ್ಯಾರ್ಥಿಗಳು ಬೀದಿನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ಲಲಿತ ಕಲಾ ಸಂಘ ಮತ್ತು ಮಹಿಳಾ ಘಟಕದ ಮುಖ್ಯಸ್ಥೆಯಾದ ಡಾ. ನಿಶಾ ಯುವರಾಜ್ ಮತ್ತು ಕುಮಾರಿ ಸಂಗೀತ ಸಾಲ್ಯಾನ್ ಭಾಗವಹಿಸಿದ್ದರು.

Read More

ಮಣಿಪಾಲ : ಡಾ. ಟಿಎಂಎ ಪೈ ಫೌಂಡೇಶನ್ ವತಿಯಿಂದ 2022ನೇ ಸಾಲಿನ ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕಾಗಿ ಕೊಂಕಣಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 01-01-2019ರಿಂದ 31-12-2021ರ ಮಧ್ಯೆ ಪ್ರಕಟಿತ ದೇವನಾಗರಿ, ಕನ್ನಡ, ಮಲಯಾಳಂ, ರೋಮನ್ ಲಿಪಿಯ ಪುಸ್ತಕಗಳು ಪ್ರಶಸ್ತಿಗೆ ಅರ್ಹ. 4 ಪ್ರತಿಗಳನ್ನು ದಿನಾಂಕ 31-10-2023ರೊಳಗೆ ಅಧ್ಯಕ್ಷರು, ಡಾ. ಟಿ.ಎಂ.ಎ. ಪೈ ಫೌಂಡೇಶನ್, ಸಿಂಡಿಕೇಟ್ ಹೌಸ್, ಮಣಿಪಾಲ-576104 ಇಲ್ಲಿಗೆ ಕಳುಹಿಸಿ, www.drtmapaifoundation.com ಸಂಪರ್ಕಿಸಬಹುದು.

Read More

ಮಡಿಕೇರಿ : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಕೊಡಗು ಜಿಲ್ಲೆಯಲ್ಲಿನ ಜಾನಪದ ಕಲಾ ತಂಡ (ಬೀದಿ ನಾಟಕ)ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಬೀದಿ ನಾಟಕ ಜಾನಪದ ಕಲಾ ತಂಡದಲ್ಲಿ 8 ಜನ (ಸ್ಥಳೀಯ ಕಲಾವಿದರು) ಸದಸ್ಯರು ಇರಬೇಕು. ಇವರಲ್ಲಿ 2 ಮಹಿಳಾ ಕಲಾವಿದರಿರಬೇಕು. ಇಲಾಖೆಯ ಯೋಜನೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶನದ ಅನುಭವವಿರಬೇಕು. ಆಸಕ್ತ ಜಾನಪದ ಕಲಾತಂಡಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಐ.ಇ.ಸಿ. ವಿಭಾಗ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ಸೆಪ್ಟೆಂಬರ್ 21ರೊಳಗೆ ಸಲ್ಲಿಸಬೇಕು.

Read More

ಕಾಸರಗೋಡು : ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲಾ ಸಭಾಂಗಣದಲ್ಲಿ ಡಾ.ರಮಾನಂದ ಬನಾರಿಯವರ ನೂತನ ಕವಿತೆ, ಖಂಡ ಕಾವ್ಯಗಳ ಸಂಕಲನವಾದ ‘ಸದ್ದಾಗಿಯು ಸದ್ದಾಗದ ಸದ್ದುಗಳು’ ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 09-09-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಖ್ಯಾತ ವಿದ್ವಾಂಸ ಡಾ. ವಸಂತಕುಮಾರ್ ತಾಳ್ತಜೆಯವರು ಮಾತನಾಡುತ್ತಾ “ಡಾ. ರಮಾನಂದ ಬನಾರಿ ಮಂಜೇಶ್ವರ ಅವರದು ಸಹಜ ಕಾವ್ಯ. ಸಾಮಾಜಿಕ ಸಂಗತಿಗಳಿಗೆ, ಸಮಾಜದ ಏರುಪೇರುಗಳಿಗೆ, ಕಾಲಾನುಗತ ಬದಲಾವಣೆಗಳಿಗೆ ಅವರ ಕವಿ ಹೃದಯ ಮಿಡಿದಿದೆ. ಮೌಲ್ಯಗಳಲ್ಲಿ ಆದ ಬದಲಾವಣೆಗಳಿಗೆ ಅವರ ಕವಿತೆಗಳು ಸ್ಪಂದಿಸಿವೆ” ಎಂದು ಹೇಳಿದ್ದಾರೆ. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, “ಕುಟುಂಬ ವೈದ್ಯರಾಗಿ, ಯಕ್ಷಗಾನ ಅರ್ಥಧಾರಿಯಾಗಿ, ಸಾಹಿತಿಯಾಗಿ ಡಾ. ರಮಾನಂದ ಬನಾರಿ ಕನ್ನಡಕ್ಕೆ ಸಲ್ಲಿಸಿದ ಸೇವೆ ಮಹತ್ತರವಾದುದು. ಗಡಿನಾಡಿನಲ್ಲಿ ಸಾಹಿತ್ಯದ ಜೊತೆಗೆ ಕನ್ನಡದ ಜ್ಯೋತಿ ನಿರಂತರ ಉರಿಯುತ್ತಿರಬೇಕು ಹಾಗೂ ಕನ್ನಡ…

Read More

ಮುಂಬಯಿ : ಅಜೆಕಾರು ಕಲಾಭಿಮಾನಿ ಬಳಗದ 22ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ ದಿನಾಂಕ 10-09-2023ರಂದು ನಡೆಯಿತು. ಮುಂಬಯಿ ಕುರ್ಲಾ ಬಂಟರ ಸಂಘದ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯಕ್ಷಗಾನ, ಯಕ್ಷರಕ್ಷಾ ಪ್ರಶಸ್ತಿ ಪ್ರದಾನ ಹಾಗೂ ‘ಅರುವ’ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಾಬಾಸ್ ಗ್ರೂಫ್ ಆಫ್ ಕಂಪನೀಸ್ ನ ಆಡಳಿತ ನಿರ್ದೇಶಕರಾದ ಮಹೇಶ್ ಎಸ್.ಶೆಟ್ಟಿ “ಕಳೆದ 22 ವರ್ಷಗಳಿಂದ ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ತಮ್ಮ ಮುಂದಾಳತ್ವದ ಅಜೆಕಾರು ಕಲಾಭಿಮಾನಿ ಬಳಗದ ಆಶ್ರಯದಲ್ಲಿ ತವರೂರ ಅದೆಷ್ಟೋ ಕಲಾವಿದರನ್ನು ಈ ಮುಂಬಯಿ ಮಾಹಾನಗರಕ್ಕೆ ಆಹ್ವಾನಿಸಿ, ಯಕ್ಷಗಾನ ಮತ್ತು ತಾಳ ಮದ್ದಳೆಯನ್ನು ಪ್ರದರ್ಶಿಸುತ್ತಾ ಬಂದವರಿದ್ದಾರೆ. ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯುವ ಸುಮಾರು ಒಂದು ಸಾವಿರಕ್ಕೂ ಅಧಿಕ ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿದ ಹಿರಿಮೆ ಇವರೊಂದಿಗಿದೆ. ಕೇವಲ ಮಕ್ಕಳಿಗೆ ಮಾತ್ರವಲ್ಲ ನನ್ನನ್ನು ಸೇರಿಸಿ ಬಂಟರ ಸಂಘದ ಅನೇಕ ಪದಾಧಿಕಾರಿಗಳಿಗೆ ಯಕ್ಷಗಾನವನ್ನು ಕಲಿಸಿ, ಕಾಲಿಗೆ ಗೆಜ್ಜೆ ಕಟ್ಟಿ ಕುಣಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.…

Read More