Author: roovari

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ ಈ ಬಹುಮಾನ ನೀಡಲಾಗುವುದು. 2021, 2022 ಮತ್ತು 2023ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಈ ಬಹುಮಾನಕ್ಕಾಗಿ ಆಹ್ವಾನಿಸಲಾಗಿದ್ದು, ಪ್ರತಿಸಾಲಿಗೆ ತಲಾ ಒಂದು ಪುಸ್ತಕ ಬಹುಮಾನವನ್ನು ನೀಡಲಾಗುವುದು. ಈ ಬಹುಮಾನದ ಮೊತ್ತ ರೂ.25,000/-ಗಳಾಗಿರುತ್ತವೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಲು ಕೋರಿದೆ. ನಿಬಂಧನೆಗಳು : 1. ಕೃತಿಗಳು ಜನವರಿ 2021ರಿಂದ ಡಿಸೆಂಬರ್ 2023ರೊಳಗೆ ಮುದ್ರಣವಾದ ಮೊದಲ ಪ್ರಕಟಣೆಯಾಗಿರಬೇಕು. 2. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. 3. ಪುಸ್ತಕಗಳು ಯಾವುದೇ ಪದವಿಗಾಗಿ, ಪಿ.ಹೆಚ್‌.ಡಿ.ಗಾಗಿ ಮತ್ತು ಪಠ್ಯ ಪುಸ್ತಕಕ್ಕೆ ಸಿದ್ಧಪಡಿಸಿದ ವಿಷಯವಾಗಿರಬಾರದು. 4. ಕಳುಹಿಸಲ್ಪಡುವ ಕೃತಿ ನಾಟಕವಾಗಿರಬಾರದು, ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. 5. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. 6. ಮರುಮುದ್ರಣವಾದ ಪುಸ್ತಕಗಳಾಗಿರಬಾರದು. 7. ಅಕಾಡೆಮಿಯ ಸದಸ್ಯರು ರಚಿಸಿದ ಕೃತಿಗಳಾಗಿರಬಾರದು.…

Read More

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ದೇಶಭಕ್ತ ಎನ್‌.ಎಸ್‌. ಕಿಲ್ಲೆ ಪ್ರತಿಷ್ಠಾನಗಳ ಸಹಯೋಗದೊಂದಿಗೆ ‘ಫಿಲೋ ಯಕ್ಷಾಮೃತ’ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮವು ದಿನಾಂಕ 18-06-2024ರಂದು ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಭವನದಲ್ಲಿ ನಡೆಯಿತು. ಯಕ್ಷಾಮೃತ ಸರ್ಟಿಫಿಕೇಟ್‌ ಕೋರ್ಸ್ ನಲುವತ್ತು ಗಂಟೆಗಳ ಪಠ್ಯವನ್ನು ಹೊಂದಿದ್ದು, ಲಿಖಿತ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ “ಕಲೆಯು ವಿಶ್ವ ಮಾನ್ಯ. ಅದು ಜಾತಿ ಅಂತಸ್ತುಗಳ ಪರಿಧಿಯನ್ನು ಮೀರಿ ಪ್ರತಿಭಾ ಸಂಪನ್ನರಾದ ಸರ್ವರಿಗೂ ಒಲಿಯುವ ವಿಶೇಷ ವಿದ್ಯೆ. ಅದಕ್ಕೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳಗಿಸುವ ಅಪೂರ್ವ ಶಕ್ತಿ ಇದೆ.” ಎಂದು ಹೇಳಿ ಯಕ್ಷಾಮೃತ ಪ್ರಮಾಣಪತ್ರ ಸ್ವೀಕರಿಸಲು ಅರ್ಹರಾದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು. ಯಕ್ಷಗಾನ ರಂಗ ಪ್ರಯೋಗ ಕಲೆಯ ಸರ್ಟಿಫಿಕೇಟ್‌ ಕೋರ್ಸ್ “ಯಕ್ಷಾಮೃತ”ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ದೇಶಭಕ್ತ ಎನ್‌.ಎಸ್‌.…

Read More

ಸುರತ್ಕಲ್ : ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಎಂ.ಆರ್.ಪಿ.ಎಲ್.ನ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 26-06-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಇವರು ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುತ್ತದೆ. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ. ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು, ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟಿನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ನುಡಿದರು. ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡ್ರೆ ಮಾತನಾಡಿ “ದಾನಿಗಳ ನೆರವಿನಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ, ಮನೆ…

Read More

Mumbai : A mesmerizing production of SAPTA SINDHU was premiered on the 15-06-2024 at the Swatantrya Veersavarkar auditorium Shivaji Park, Dadar, Mumbai. Both the institution Arunodaya Kala Niketan and Vaishnovi Kala Kshetra had merged together in bringing up this great show, the hours of rehearsal, costumes, light design had brought the show with a standing ovation. The inauguration was done by Hon’ble Ms Renu Prithiani (ICCR Zonal Director Mumbai), Dr. Guru Meenakshi Shriyan & Guru Asha Nambiar. Arunodaya Kala Niketan which stepped its 65th year had awarded 3 luminaries with the Suvarna Bharat Ratna Award 2024 remembering founder Guru Vidwan…

Read More

ಡೋಣಿ : ಸಂಗೀತ ನೃತ್ಯ ನಾಟಕ ಸಂಸ್ಥೆ (ಎಸ್.ಸಿ.) (ರಿ.) ಡೋಣಿ ಇದರ ವತಿಯಿಂದ ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 28-06-2024ರಂದು ಬೆಳಗ್ಗೆ 11-00 ಗಂಟೆಗೆ ಡೋಣಿಯ ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪ್ರಧಾನ ಗುರುಗಳಾದ ಶ್ರೀ ಆರ್.ಹೆಚ್. ಅಂಗಡಿ ಇವರ ಅಧ್ಯಕ್ಷತೆಯಲ್ಲಿ ಎಸ್.ಡಿ.ಎಂ.ಸಿ. ಇದರ ಅಧ್ಯಕ್ಷರಾದ ಶ್ರೀ ಶರಣಪ್ಪ ಗೋಣಿಸ್ವಾಮಿ ಇವರು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಗದಗದ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಜಯ ಕಿರೇಸೂರ ಇವರು ಉಪನ್ಯಾಸ ನೀಡಲಿದ್ದಾರೆ.

Read More

ಮುಡಿಪು : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ಸ್ಮೃತಿ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 25-06-2024ರ ಮಂಗಳವಾರದಂದು ಮಂಗಳಗಂಗೋತ್ರಿಯ ಡಾ. ಯು.ಆರ್. ರಾವ್ (ಹಳೆಯ ಸೆನೆಟ್) ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ನರೇಂದ್ರ ರೈ ದೇರ್ಲ ಮಾತನಾಡಿ “ಕರಾವಳಿ ಇಂದು ಶಿಕ್ಷಣದ ವ್ಯಾಪಾರೀಕರಣ ಮತ್ತು ಅಭಿವೃದ್ಧಿಯ ಭೌತಿಕತೆಯ ಭಾರದಲ್ಲಿ ಕುಸಿಯುತ್ತಿದೆ. ಮಾನವೀಯತೆ ಮಾಯವಾಗಿದೆ. ಮನುಷ್ಯ ಇನ್ನೊಬ್ಬರನ್ನು ಪ್ರೀತಿಯಿಂದ ನೋಡದೆ ಅನುಮಾನ, ಭಯದಿಂದ ನೋಡುವಂತಾಗಿದೆ. ಕನಕ ಹಾಗೂ ನಾರಾಯಣ ಗುರುಗಳಂತಹ ಸಂತರ ಸಂದೇಶ ಹೃದಯವನ್ನು ಮುಟ್ಟಿದರೆ ನಾವು ಮತ್ತೆ ಮನುಷ್ಯರಾಗುತ್ತೇವೆ. ಕನಕದಾಸರಿಗೆ ಅವಸರ ಪಡದೆ, ಪ್ರತಿಭಟಿಸದೆ ಕಾಯುವ ತಾಳ್ಮೆಯಿತ್ತು. ಕಾಯುವುದರ ಮೂಲಕ ಒಂದು ಅರಿವು ಸೃಷ್ಟಿಯಾಗುತ್ತದೆ ಎಂಬುದನ್ನು ನಾವು ಕನಕರಿಂದ ಹಾಗೂ ಅವರ ಚಿಂತನೆಗಳಿಂದ ಅರ್ಥ ಮಾಡಿಕೊಳ್ಳಬೇಕು. ನೈಜವಾಗಿ ಕನಕದಾಸರ ಅರಿವೇ ಭಗವಂತ ಅಥವಾ ಕೃಷ್ಣನಾಗಿದ್ದಾನೆ. ಮಂಗಳೂರು ವಿವಿಯ ಕನಕ ಅಧ್ಯಯನ ಕೇಂದ್ರ…

Read More

ಪುತ್ತೂರು : ಮಂಗಳೂರಿನ ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರ (ರಿ.) ಇದರ ತ್ರಿಂಶೋತ್ಸವದ ಅಂಗವಾಗಿ ನಡೆದ ‘ನೃತ್ಯಾಮೃತ’ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಇದರ ‘ನೃತ್ಯಾಂತರಂಗ’ ಸರಣಿ ಕಾರ್ಯಕ್ರಮದ ಸಹಯೋಗದೊಂದಿಗೆ ನಡೆದ ‘ಹಾಡೊಂದು ಭಾವ ಹಲವು’ ಕಾರ್ಯಕ್ರಮವು ದಿನಾಂಕ 23-06-2024ರಂದು ಪುತ್ತೂರಿನ ಶಶಿಶಂಕರ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಖ್ಯಾತ ತಾಳಮದ್ದಳೆಯ ಅರ್ಥಧಾರಿ ಶ್ರೀ ಹರೀಶ ಬಳಂತಿಮೊಗರು “ಭರತನಾಟ್ಯ ಕಲೆಯಲ್ಲಿ ಒಂದೇ ಹಾಡಿಗೆ ಹಲವು ದೃಷ್ಟಿಕೋನಗಳಲ್ಲಿ ರಂಗ ಪ್ರಸ್ತುತಿ ನೀಡಿದ ಪ್ರಯತ್ನ ಶ್ಲಾಘನೀಯ. ಇಂತಹ ಪ್ರಸ್ತುತಿಗಳಾದಾಗ ಕಲೆ ಶ್ರೀಮಂತವಾಗಿ ಬೆಳೆಯುತ್ತದೆ.” ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ನಗರಸಭಾ ಸದಸ್ಯ ಹಾಗೂ ವಾಸ್ತು ಶ್ರೀ ಪಿ.ಜಿ. ಜಗನ್ನಿವಾಸ ರಾವ್ ಮಾತನಾಡಿ ಹೊಸ ಕಲ್ಪನೆಯನ್ನು ಭರತನಾಟ್ಯದಲ್ಲಿ ರೂಪಿಸಿದ ಕಾರ್ಯಕ್ರಮದ ಕುರಿತು ಮೆಚ್ಚುಗೆ ಸೂಚಿಸಿದರು. ನೃತ್ಯ ಕಾರ್ಯಕ್ರಮದಲ್ಲಿ ವಿದುಷಿ ಅಕ್ಷತಾ ಕೆ. (ನೆರೆಮನೆಯ ಗೋಪಿಕೆಯಾಗಿ- ವಾತ್ಸಲ್ಯ), ಕುಮಾರಿ ಧರಿತ್ರಿ ಭಿಡೆ (ಕೃಷ್ಣನ ಪ್ರೇಮಿಯಾಗಿ-…

Read More

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಕಟೀಲು ಇದರ ಆಶ್ರಯದಲ್ಲಿ ಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಪ್ರಭಾತ 42ರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಸೇವಾ ಕಾರ್ಯಕ್ರಮವು ದಿನಾಂಕ 30-06-2024ರಂದು ಬೆಳಗ್ಗೆ 7-30 ಗಂಟೆಗೆ ಕಟೀಲು ದೇವಸ್ಥಾನದಲ್ಲಿ ನಡೆಯಲಿದೆ. ಕುಮಾರಿ ಪ್ರಣತಿ ಕೂಳೂರು ಇವರ ಹಾಡುಗಾರಿಕೆಗೆ ಶ್ರೀ ನಾಗಶಯನ ಪದಕಣ್ಣಾಯ ಪಿಟೀಲು ಮತ್ತು ಮಾಸ್ಟರ್ ಪ್ರಣವ್ ಕೂಳೂರು ಇವರು ಮೃದಂಗದಲ್ಲಿ ಸಹಕರಿಸಲಿದ್ದಾರೆ. ಪ್ರಣತಿಯು ಪ್ರಸ್ತುತ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ಯ ವಿದ್ಯಾರ್ಥಿನಿಯಾಗಿದ್ದು ಶಾಸ್ತ್ರೀಯ ಸಂಗೀತವನ್ನು ಹತ್ತು ವರ್ಷಗಳ ಕಾಲ ದಿವಂಗತ ವಿದುಷಿ ಶೀಲಾ ದಿವಾಕರ್ ಇವರಲ್ಲಿ ಅಭ್ಯಾಸ ಮಾಡುತ್ತಿದ್ದು, ಪ್ರಸ್ತುತ ಅವರ ಶಿಷ್ಯರಾಗಿರುವ ಆದರ್ಶ್ ಮುಲ್ಕಿ ಇವರಲ್ಲಿ ಅಭ್ಯಾಸ ಮುಂದುವರಿಸುತ್ತಿದ್ದಾರೆ. ಅದಲ್ಲದೆ ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಮುಗಿಸಿ ವಿದ್ವತ್ತಿಗಾಗಿ ಗುರುಗಳಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಪ್ರಣವರವರು ಪ್ರಸ್ತುತ ಜೆ.ಎಸ್.ಎಸ್. ವಿಶ್ವವಿದ್ಯಾಲಯ, ಮೈಸೂರಿನಲ್ಲಿ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು, ಮೃದಂಗ ಅಭ್ಯಾಸವನ್ನು ಹಲವು ವರ್ಷಗಳಿಂದ ವಿದ್ವಾನ್ ಶ್ರೀ…

Read More

ಪುತ್ತೂರು : ಬಹುವಚನಂ ವಿದ್ಯಾನಗರ ದರ್ಬೆ ಪುತ್ತೂರು ಇವರ ವತಿಯಿಂದ ನಿರಂಜನರಿಗೆ 100 ವರುಷಗಳು ನೆನಪಿನ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 30-06-2024ರಂದು ಸಂಜೆ 4-30 ಗಂಟೆಗೆ ಪುತ್ತೂರಿನ ದರ್ಬೆ ವಿದ್ಯಾನಗರದ ಪದ್ಮಿನೀ ಸಭಾಭವನದಲ್ಲಿ ಆಯೋಜಿಸಿಲಾಗಿದೆ. ಡಾ. ವರದರಾಜ ಚಂದ್ರಗಿರಿಯವರಿಂದ ಕುಳ್ಕುಂದ ಶಿವರಾಯರು (ನಿರಂಜನ) ಇವರ ಬಗ್ಗೆ ವಿಶೇಷ ಉಪನ್ಯಾಸ ನೀಡಲಿರುವರು.

Read More

ಕಾವೂರು : ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಮಧುರಧ್ವನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತೀ ತಿಂಗಳು ನಡೆಯುವ ಸುಪ್ರಭಾತ ಸಂಗೀತ ಸೇವೆಯ ಐವತ್ತನೇ ಕಾರ್ಯಕ್ರಮದ ಭಾಗವಾಗಿ ದಿನಾಂಕ 17-06-2024ರಂದು ಬೆಳಗ್ಗೆ 6.06ರಿಂದ ಸಂಜೆವರೆಗೆ ಕರ್ನಾಟಕ ಶಾಸ್ತ್ರೀಯ ‘ಉದಯಾಸ್ತಮಾನ ಸಂಗೀತ ಸೇವೆ’ ನಡೆಯಿತು. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕಾಸರಗೋಡು ಜಿಲ್ಲೆಗಳಿಂದ ಸಂಗೀತ ವಿದ್ಯಾರ್ಥಿಗಳು, ಗುರುಗಳು, ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀ ಶಂಕರ ಶಗ್ರಿತ್ತಾಯ ಇವರು ದೀಪ ಪ್ರಜ್ವಾಲನೆ ನೆರವೇರಿಸಿದರು. ಇದೇ ವೇಳೆ ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರೊಫೆಸರ್ ಡಾ. ಸುಬ್ರಹ್ಮಣ್ಯ ಇವರನ್ನು ಸಮ್ಮಾನಿಸಲಾಯಿತು. ಕಾವೂರು ಮಹಾಲಿಂಗೇಶ್ವರ ದೇಗುಲದ ಪ್ರಧಾನ ಅರ್ಚಕ ವೇದ ಮೂರ್ತಿ ಶ್ರೀನಿವಾಸ ಭಟ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಸದಾಶಿವ, ಪ್ರಸನ್ನ ಭಟ್, ದಾಮೋದರ ಆಚಾರ್ಯ, ಸುರೇಶ್ ರಾವ್, ಶಿವಳ್ಳಿ ಸ್ಪಂದನ ಕಾವೂರಿನ ನವೀನ್, ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು. ಮಧೂರು ಪಿ. ಬಾಲಸುಬ್ರಹ್ಮಣ್ಯಂ ವಂದಿಸಿದರು.

Read More