Subscribe to Updates
Get the latest creative news from FooBar about art, design and business.
Author: roovari
ಪರ್ಕಳ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕೇಂದ್ರ ಪರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಮತ್ತು ಉಡುಪಿ ಘಟಕ ಇವರ ಜಂಟಿ ಆಶ್ರಯದಲ್ಲಿ ‘ಬಡಗುತಿಟ್ಟು – ನಾಟ್ಯ ತರಬೇತಿ’ಯನ್ನು ದಿನಾಂಕ 27 ಜುಲೈ 2025ರಂದು ಬೆಳಗ್ಗೆ 10-00 ಗಂಟೆಗೆ ಪರ್ಕಳ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ನುರಿತ ಯಕ್ಷ ಶಿಕ್ಷಕರಿಂದ ನಾಟ್ಯ, ಮಾತುಗಾರಿಕೆ, ಮುಖವರ್ಣಿಕೆ, ವೇಷಭೂಷಣ, ಸಂಪನ್ಮೂಲ ವ್ಯಕ್ತಿಗಳಿಂದ ಪುರಾಣ ಪರಿಚಯ ಮತ್ತು ರಂಗ ಮಾಹಿತಿಯನ್ನು ಒಳಗೊಂಡ ಸಮಗ್ರ ಅಧ್ಯಯನ ಇದಾಗಿದೆ. ನೋಂದಣಿಗಾಗಿ ಮುರಳೀಧರ ನಕ್ಷತ್ರಿ 94491 06448 ಮತ್ತು ರತನ್ ರಾಜ್ ರೈ 9741497920 ಸಂಖ್ಯೆಯನ್ನು ಸಂಪರ್ಕಿಸಿರಿ.
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಸಹಯೋಗದಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹ ದಿನಾಂಕ 25 ಜುಲೈ 2025ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ಸಪ್ತಾಹಕ್ಕೆ ಚಾಲನೆ ನೀಡಿದ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರೂ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆದ ಮೇಗಿನಗುತ್ತು ಶಿವನಾಥ ರೈ ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸಪ್ತಾಹದ ಯಶಸ್ಸಿಗೆ ಎಲ್ಲರೂ ಸಹಕಾರ ಬೇಕು ಎಂದರು. ಡಾ. ಸೀತಾರಾಮ ಭಟ್, ವ್ಯವಸ್ಥಾಪಕರು ಶ್ರೀ ರಾಘವೇಂದ್ರ ಮಠ ಕಲ್ಲಮೆ ಹಾಗೂ ಸರ್ವೆ ಶ್ರೀ ದೇವಳದ ಅರ್ಚಕ ಶ್ರೀ ರಾಮ ಕಲ್ಲೂರಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹರಿಣಾಕ್ಷಿ ಜೆ. ಶೆಟ್ಟಿ ಹಾಗೂ ಆನಂದ ಸವಣೂರು ಅತಿಥಿಗಳಿಗೆ ಶಾಲು ಹೊದಿಸಿ ಗೌರವಿಸಿದರು. ಸಂಘದ ಹಿರಿಯ ಕಲಾವಿದ…
ಮಣಿಪುರ : ಸರಕಾರಿ ಪ್ರೌಢಶಾಲೆ ಮಣಿಪುರ ಇಲ್ಲಿ ದಿನಾಂಕ 22 ಜುಲೈ 2025ರ ಮಂಗಳವಾರದ೦ದು ಯಕ್ಷಗಾನ ಕಲಾರಂಗ ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಕಾರದೊಂದಿಗೆ ನಡೆಯುವ 2025 -26 ನೇ ಸಾಲಿನ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಶ್ರೀ ಮುರಲಿ ಕಡೆಕಾರ್ ಟ್ರಸ್ಟಿನ ವತಿಯಿಂದ ಯಕ್ಷಗಾನ ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ತಿಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕ್ಷಶಿಕ್ಷಣ ಟ್ರಸ್ಟ್ ಇದರ ವಿಶ್ವಸ್ಥರಾದ ಶ್ರೀ ನಾರಾಯಣ ಎಂ. ಹೆಗಡೆ, ಶುಭ ಹಾರೈಸಿದರು. ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರದ ಶ್ರೀ ವಿ. ಜಿ. ಶೆಟ್ಟಿ ಹಾಗೂ ಯಕ್ಷಗಾನ ಗುರುಗಳಾದ ಶ್ರೀ ನಿತ್ಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು .ಡಯಟ್ ಪ್ರಾಂಶುಪಾಲರಾದ ಡಾ.ಅಶೋಕ ಕಾಮತ್ ಇವರು ಯಕ್ಷಗಾನದಿಂದ ಆಗುವ ಪ್ರಯೋಜನ ಹಾಗೂ ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯವನ್ನು ಶ್ಲಾಘಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ರೂಪರೇಖಾ ಹೆಚ್.…
ಬ್ರಹ್ಮಾವರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ‘ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಅನುಷ್ಠಾನ’ ಹಾಗೂ ಜಿಲ್ಲಾ ಜಾಗೃತಿ ಸಮಿತಿ ರಚನೆಯ ಪೂರ್ವಭಾವಿ ಸಭೆಯನ್ನು ದಿನಾಂಕ 27 ಜುಲೈ 2025ರಂದು ಪೂರ್ವಾಹ್ನ 10-00 ಗಂಟೆಗೆ ಬ್ರಹ್ಮಾವರ ರೋಟರಿ ಕ್ಲಬ್ ಇಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲೆ ಕ.ಸಾ.ಪ.ದ ಸ್ಥಾಪಕಧ್ಯಕ್ಷರಾದ ಎ.ಎಸ್.ಎನ್. ಹಬ್ಬಾರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಸಾಂಸ್ಕೃತಿಕ ಚಿಂತಕರಾದ ನಾಡೋಜ ಕೆ.ಪಿ. ರಾವ್ ಇವರು ಕರಪತ್ರ ಬಿಡುಗಡೆ ಮಾಡಲಿದ್ದು, ಉಡುಪಿ ಜಿಲ್ಲೆ ಕ.ಸಾ.ಪ.ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಇವರು ನಲ್ನುಡಿಗಳನ್ನಾಡಲಿದ್ದಾರೆ.
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ದಿನಾಂಕ 18 ಜುಲೈ 2025ರಂದು ‘ಬರಹ ಕೌಶಲ್ಯ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ. ರಾಮಕೃಷ್ಣಶಾಸ್ತ್ರಿ ಇವರು ‘ಬರಹ ಕೌಶಲ್ಯ’ ವಿಷಯದ ಕುರಿತು ಮಾತನಾಡಿ “ಸಾಹಿತ್ಯಾಸಕ್ತಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಬದುಕಿನೊಂದಿಗೆ ನೆಮ್ಮದಿ, ಗೌರವ, ಪ್ರಶಸ್ತಿಗಳನ್ನು ಪಡೆದುಕೊಳ್ಳಬಹುದು. ಜೀವನದ ಕಷ್ಟ ಸುಖದ ಅನುಭವಗಳನ್ನು ಮತ್ತು ನಮ್ಮ ಹತ್ತಿರದ ವಿಷಯ ಅಥವಾ ಘಟನೆಗಳನ್ನು ಆಸಕ್ತಿಯಿಂದ ಗಮನಿಸಿದಾಗ ಅದು ಬರವಣಿಗೆಗೆ ಸ್ಫೂರ್ತಿಯಾಗುತ್ತದೆ. ಸಾಹಿತ್ಯಕ್ಕೆ ವಿಷಯಗಳನ್ನು ನಾವೇ ಹುಡುಕಿಕೊಂಡು ಹೋಗಬೇಕಾಗುತ್ತದೆ. ಲೇಖನಗಳು ಅಥವಾ ಕಥೆಗಳು ಓದುಗರ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ತರುವುದರೊಂದಿಗೆ ಸಮಾಜದಲ್ಲಿ ನೈತಿಕತೆಯನ್ನು ಕಂಡುಕೊಳ್ಳಬಹುದು” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಚಿಸಿದ ‘ಅಕ್ಷರ ವಾಣಿ’ ಭಿತ್ತಿಪತ್ರಿಕೆಯನ್ನು ಹಿರಿಯ ಸಾಹಿತಿ ಪ. ರಾಮಕೃಷ್ಣಶಾಸ್ತ್ರಿ ಅನಾವರಣಗೊಳಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ವಿಷ್ಣು ಪ್ರಕಾಶ್ ಎಂ.ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕರಾದ ರಮ್ಯಾ ಜೋಶಿ ಮತ್ತು ಅಭ್ಯುದಯ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸನಾ ಶರಿನಾ ಪಿಂಟೋ ಸ್ವಾಗತಿಸಿ,…
ವಿರಾಜಪೇಟೆ : ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ವಿರಾಜಪೇಟೆ ಮೂಲದ ದುದ್ದಿಯಂಡ ಮುಸ್ಕಾನ್ ಸೂಫಿ ಇವರ ಚೊಚ್ಚಲ ಇಂಗ್ಲೀಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತಾರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿದ್ದು, ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತಾರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ಕ್ಕೆ ನಾಮನಿರ್ದೇಶನಗೊಂಡಿದೆ. ಬುಕ್ ಲಿಫ್ ಪಬ್ಲಿಕೇಶನ್ ಇತ್ತೀಚೆಗೆ ಏರ್ಪಡಿಸಿದ 21 ದಿನಗಳಲ್ಲಿ 21 ಕವನ ರಚಿಸುವ ‘ಸವಾಲುಗಳ ಅಭಿಯಾನ’ದಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯ ಮತ್ತು ಮನೋ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಮುಸ್ಕಾನ್ ಸೂಫಿ ಸವಾಲುಗಳ ನಿರ್ದಿಷ್ಟ ಗುರಿ ಸಾಧಿಸಿ ಗಮನ ಸೆಳೆದಿದ್ದಾರೆ. ಕಾಲೇಜು ತರಗತಿಗಳ ಬಿಡುವಿನ ಸಮಯದಲ್ಲಿ ಕಾವ್ಯಕೃಷಿಯನ್ನು ಆರಂಭಿಸಿ ಕವನ ರಚನೆಗಳ ಕುರಿತ ಅಭಿಯಾನದ ಗುರಿ ಸಾಧಿಸಿದ ಮುಸ್ಕಾನ್ ಸೂಫಿ, ತಮ್ಮ ಮನದ ಮೂಸೆಯಲ್ಲಿ…
ಬೆಂಗಳೂರು : ರಂಗಪಯಣ (ರಿ.) ಅರ್ಪಿಸುವ ‘ಗುಲಾಬಿ ಗ್ಯಾಂಗು’ ಭಾಗ -3 ಮತ್ತೆ ಬಂತು ಕ್ರಾಂತಿಕಾರಿ ಮಹಾಕಾವ್ಯ ನಾಟಕ ಪ್ರದರ್ಶನವನ್ನು ದಿನಾಂಕ 30 ಜುಲೈ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಸಹಾಯಕರು ಎಂದುಕೊಂಡಿದ್ದ ನನ್ನ ತಾಯಂದಿರು ಅಭೂತಪೂರ್ವ ಗೆಲುವು ದಾಖಲಿಸಿದ ವೀರಗಾಥೆ ಇದಾಗಿದೆ. ಈ ನಾಟಕದ ರಚನೆ ಪರಿಕಲ್ಪನೆ, ಸಂಗೀತ ಮತ್ತು ನಿರ್ದೇಶನವನ್ನು ರಾಜಗುರು ಹೊಸಕೋಟೆ ಇವರು ಹಾಗೂ ನಿರ್ವಹಣೆ ಹಾಗೂ ವಸ್ತ್ರವಿನ್ಯಾಸ ನಯನ ಜೆ. ಸೂಡ ಇವರು ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 88847 64509 ಸಂಖ್ಯೆಯನ್ನು ಸಂಪರ್ಕಿಸಿರಿ.
ಹುಟ್ಟಿ ಬೆಳೆದಿದ್ದು ಶೃಂಗೇರಿ. ಕಲಾವಿದರ ಮನೆತನ. ಚಿಕ್ಕ ವಯಸ್ಸಿನಲ್ಲಿಯೇ ಭರತನಾಟ್ಯ, ಸಂಗೀತ, ನಾಟಕ, ರಂಗಭೂಮಿ ಹಾಗೂ ಯಕ್ಷಗಾನ ಕಲೆಯ ಮೇಲೆ ಬಹಳ ಆಸಕ್ತಿ. ಶೃಂಗೇರಿಯಲ್ಲಿ ಇವರ ತಂದೆ ಕಟ್ಟಿ ಬೆಳೆಸಿದ “ಗೆಳೆಯರ ಬಳಗ” ಎಂಬ ಒಂದು ರಂಗ ತಂಡ ಇದೆ. ಆ ತಂಡದಲ್ಲಿ ಇವರು ನಾಟಕದಲ್ಲಿ ಭಾಗಿಯಾಗುತ್ತಿದ್ದರು. ಅಲ್ಲಿಂದ ರಂಗಭೂಮಿ ಹತ್ತಿರವಾಯಿತು. ಮುಂದೆ ಬೆಂಗಳೂರಿನಲ್ಲಿ ಕಾಲೇಜ್ ವಿದ್ಯಾಭ್ಯಾಸ ಸಂದರ್ಭದಲ್ಲಿ “ಬಣ್ಣದ ಮನೆ” ಎಂಬ ಒಂದು ರಂಗ ತಂಡ ಕಟ್ಟಿ ಅನೇಕ ನಾಟಕ ಮಾಡಿದ ಕೀರ್ತಿ ಇವರದು. ಮಲೆನಾಡಿನ ಚಿಕ್ಕಮಂಗಳೂರಿನ ಶೃಂಗೇರಿಯ ರಮೇಶ್ ಬೇಗಾರ್ ಹಾಗೂ ಭಾಗ್ಯಶ್ರೀ ಇವರ ಮಗಳಾಗಿ 26.07.2001ರಂದು ನಾಗಶ್ರೀ ಬೇಗಾರ್ ಅವರ ಜನನ. ವಿದ್ಯಾಭ್ಯಾಸ: ಪ್ರಾಥಮಿಕ – ಪ್ರೌಢ ಶಿಕ್ಷಣ:- ಜೆಸಿಸ್ ಶೃಂಗೇರಿ. ಕಾಲೇಜು ಶಿಕ್ಷಣ:- ಬಿ ಜಿ ಎಸ್ ಶೃಂಗೇರಿ. ಪದವಿ:- ಕ್ರೈಸ್ಟ್ ಬೆಂಗಳೂರು. ಮಾಕರಸು ಅಶ್ವಥ್ ನಾರಾಯಣ ಯಕ್ಷಗಾನ ಗುರುಗಳು. ಭಾರ್ಗವ ಶರ್ಮಾ ಭರತನಾಟ್ಯ ಗುರುಗಳು. ಸಾವಿತ್ರಿ ಪ್ರಭಾಕರ್ ಸಂಗೀತ ಗುರುಗಳು. ಭರತನಾಟ್ಯ ಹಾಗೂ ಸಂಗೀತ…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಪರಪು ಹಳೆ ವಿದ್ಯಾರ್ಥಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ‘ಪಗೆಲಿಡೀ ಪದ್ರಾಡ್ ಮುಡಿ’ಯ ಸಮಾರೋಪ ಸಮಾರಂಭವು ದಿನಾಂಕ 20 ಜುಲೈ 2025ರ ಆದಿತ್ಯವಾರದಂದು ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿರುವ ಶ್ರೀ ಅಚ್ಚುತ ಗಟ್ಟಿ “ತುಳುವರು ತುಳು ಸಂಸ್ಕೃತಿಯನ್ನು ಮರೆಯುತ್ತಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳು ಅರ್ಥಪೂರ್ಣ. ತುಳುಭಾಷೆ, ತುಳು ಸಂಸ್ಕೃತಿ, ತುಳು ಸಂಸ್ಕಾರಗಳನ್ನು ಉಳಿಸುವಲ್ಲಿ ನಮ್ಮೆಲ್ಲರ ಜಬಾಬ್ದಾರಿಯಿದೆ. ಮಕ್ಕಳಿಗೆ ದೈವಾರಾಧನೆ, ಕೃಷಿಗೆ ಸಂಬoಧಿಸಿದ ಪರಿಕರಗಳನ್ನು ಪರಿಚಯಿಸುವ ಅಗತ್ಯವಿದೆ. ಮೌಲ್ಯಾಧಾರಿತ ಶಿಕ್ಷಣದ ಮೂಲ️ಕ ಮಕ್ಕಳು ತುಳು ಸಂಸ್ಕೃತಿಯನ್ನು ಅರಿಯಬೇಕಾಗಿದೆ” ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಂಯೋಜಕರಾದ ಡಾ. ಮಾಧವ ಎಂ.ಕೆ. “ತುಳು ಸಂಸ್ಕೃತಿ, ಸಂಸ್ಕಾರ ಮನೆಯಿಂದಲೇ ಆರಂಭವಾಗಬೇಕು. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಅವರಿಗೆ ಎಳವೆಯಲ್ಲಿಯೇ ಸಂಸ್ಕಾರಗಳನ್ನು…
ಕಾಸರಗೋಡು : ತುಳುವ ಮಹಾಸಭೆ ಕಾಸರಗೋಡು ತಾಲೂಕು ಇದರ ವತಿಯಿಂದ ಮಂದಾರ ರಾಮಾಯಣ ಸುಗಿಪು ದುನಿಪು ಕಾರ್ಯಕ್ರಮವನ್ನು ದಿನಾಂಕ 01 ಆಗಸ್ಟ್ 2025ರಂದು ಬೆಳಗ್ಗೆ 9-30 ಗಂಟೆಗೆ ಕಾಸರಗೋಡು ಕಾರ್ಮಾರು ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರಿಂದ ದುನಿಪು ಹಾಗೂ ಪ್ರಶಾಂತ ರೈ ಪುತ್ತೂರು ಮತ್ತು ರಚನಾ ಚಿತ್ಗಲ್ ಇವರಿಂದ ಸುಗಿಪು ಹಾಗೂ ಲವಕುಮಾರ್ ಐಲ ಮದ್ದಲೆಯಲ್ಲಿ ಸಹಕರಿಸಲಿದ್ದಾರೆ. ತುಳುವರ್ಲ್ಡ್ ಫೌಂಡೇಶನ್ ಕಟೀಲ್ ಇವರ ಸಂಯೋಜನೆ ಹಾಗೂ ಮಂಗಳೂರು ಮಂದಾರ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಡಾ. ರಾಜೇಶ್ ಭಟ್ ಮಂದಾರ ಇವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.