Author: roovari

ಹೊಸನಗರ : ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ 2024-25ನೇ ಉಚಿತ ಯಕ್ಷಗಾನ ತರಬೇತಿ ಉದ್ಘಾಟನಾ ಸಮಾರಂಭವು ದಿನಾಂಕ 24-06-2024ರಂದು ಹೊಸನಗರದ ಈಡಿಗರ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟ್ ಸ್ಥಾಪಕ ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ “ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಫೌಂಡೇಷನ್ ಮುಂದಾಗಿದೆ. ಈಗಾಗಲೇ ಸಾವಿರಾರು ಮಕ್ಕಳಿಗೆ ತರಬೇತಿ ನೀಡಲಾಗಿದ್ದು, ಮುಂದಿನ ದಿನದಲ್ಲಿ ಅವರಿಗೆ ವೇದಿಕೆ ಒದಗಿಸುವ ಪ್ರಯತ್ನವೂ ನಡೆಯಲಿದೆ. ಶಾಲೆಯ ಮಕ್ಕಳಿಗೆ ಸಾಂಸ್ಕೃತಿಕ ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯಗಳು ಇರುವುದಿಲ್ಲ. ಅವರಿಗೆ ಬಾಲ್ಯದಲ್ಲೇ ಯಕ್ಷಗಾನದ ಬಗ್ಗೆ ಜ್ಞಾನ ಹಾಗೂ ಅಭಿರುಚಿ ಮೂಡಿಸುವುದು ಟ್ರಸ್ಟ್ ಉದ್ದೇಶವಾಗಿದೆ. ಯಕ್ಷಗಾನ ಕಲಾವಿದರು ಕನಿಷ್ಟ ಸಂಬಳ ಪಡೆದು ಮೇಳದಲ್ಲಿ ಕೆಲಸ ಮಾಡುತ್ತಿದ್ದು, ತಮ್ಮ ಕುಟುಂಬದ ನಿರ್ವಹಣೆಯ…

Read More

ಉಡುಪಿ : ಮುದ್ರಾಡಿಯ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಬೆಂಗಳೂರಿನ ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ.ಜಿ.ಕೆ. ರಂಗ ಪುರಸ್ಕಾರ 2024’ ಪ್ರದಾನ ಸಮಾರಂಭವು ದಿನಾಂಕ 27-06-2024ರಂದು ಸಂಜೆ 6-00 ಗಂಟೆಗೆ ಉಡುಪಿ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಹವಾ ನಿಯಂತ್ರಣ ಸಭಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಉಡುಪಿಯ ತುಳುಕೂಟ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರು ಸಭಾಧ್ಯಕ್ಷತೆ ವಹಿಸಲಿದ್ದು, ಮಣಿಪಾಲದ ಹಿರಿಯ ವಿದ್ವಾಂಸರಾದ ನಾಡೋಜ ಡಾ. ಕೆ.ಪಿ. ರಾವ್ ಪ್ರಶಸ್ತಿ ಪ್ರದಾನ ಮಾಡಲಿರುವರು. ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ, ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಮತ್ತು ಕಲಾವಿದರಾದ ಮೈಮ್ ರಾಮದಾಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.…

Read More

ಬೆಂಗಳೂರು : ವೀರಶೈವ ಸೇವಾ ಸಮಾಜ ಬೆಂಗಳೂರು ವತಿಯಿಂದ ಕೊಡಮಾಡುವ ‘ಶರಣ ಮುಕುಟ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 23-04-2024ರ ಭಾನುವಾರದಂದು ಜರಗನಹಳ್ಳಿಯ ವೀರಶೈವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಎಸ್. ಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಮಾರಂಭದಲ್ಲಿ ಹಿರಿಯ ಸಾಹಿತಿ ಹಾಗೂ ರಂಗಕರ್ಮಿಯಾದ ಹೂಲಿ ಶೇಖರ್ ಇವರಿಗೆ 2024ನೇ ಸಾಲಿನ ‘ಶರಣ ಮುಕುಟ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಂಗಕರ್ಮಿ ಹೂಲಿ ಶೇಖರ್ : ಸನ್ಮಾನ್ಯ ಶ್ರೀ ಹೂಲಿ ಶೇಖರ್‌ ಇವರ ಕರ್ನಾಟಕ ವಿದ್ಯುತ್ ನಿಗಮದಲ್ಲಿ 31 ವರ್ಷಗಳು ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ನಂತರ ತನ್ನನ್ನು ತೊಡಗಿಸಿಕೊಂಡಿದ್ದು ರಂಗಭೂಮಿಗೆ. ಪ್ರೌಢಶಾಲೆಯಲ್ಲಿರುವಾಗಲೇ ಆಸಕ್ತಿ ಹೊಂದಿದ್ದ ಬರವಣಿಗೆಯಿಂದ ಆಕಾಶವಾಣಿಗಾಗಿ ಕಥೆಗಳನ್ನು ಬರೆಯಲು ಆರಂಭಿಸಿದರು. ಮುಂದೆ ರಂಗನಟರಾಗಿ, ರಂಗಕರ್ಮಿಯಾಗಿ, ರಂಗ ನಿರ್ದೇಶಕರಾಗಿ, ನಾಟಕಕಾರನಾಗಿ, ರಂಗ ಸಂಘಟಕನಾಗಿ ಹಾಗೂ ಅನೇಕ ಪತ್ರಿಕೆಗಳ ಗೌರವ ಸಂಪಾದಕರಾಗಿ, ಸಾಹಿತ್ಯ…

Read More

ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಘಟಕ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ದಿನಾಂಕ 22-06-2024ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ಶೃಂಗೇರಿ ಸಂಸ್ಕೃತ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರಾಗಿರುವ ಡಾ. ವಿಶ್ವನಾಥ ಸುಂಕಸಾಳ ಇವರು ‘ಪ್ರಶ್ನೋಪನಿಷತ್’ ಕುರಿತಾಗಿ ಉಪನ್ಯಾಸ ನೀಡುತ್ತಾ “ಭಾರತೀಯ ಸಂಸ್ಕೃತಿಯಲ್ಲಿ ಪ್ರಶ್ನೆಗೆ ಅವಕಾಶವಿಲ್ಲ ಎಂಬುದು ಸಾಮಾನ್ಯ ನಂಬಿಕೆ. ಆದರೆ ನಿಜವಾಗಿ ಪ್ರಶ್ನೆ ಮತ್ತು ಉತ್ತರಗಳೇ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯಾಗಿದೆ. ಆತ್ಮಜ್ಞಾನಿಯಾದ ಗುರುವು ತನ್ನ ಜ್ಞಾನಸಂಪತ್ತನ್ನು ನೀಡುವುದಕ್ಕಾಗಿ ಅರ್ಹ ಶಿಷ್ಯನನ್ನು ಹುಡುಕುತ್ತಿರುತ್ತಾನೆ. ಯೋಗ್ಯ ಶಿಷ್ಯನಿಗೆ ತನ್ನ ಜ್ಞಾನವನ್ನು ಧಾರೆಯೆರೆದು ಗುರು ಶಿಷ್ಯ ಪರಂಪರೆಯು ಮುಂದುವರಿಯುವಂತೆ ಮಾಡುವುದೇ ನಮ್ಮ ಸಂಸ್ಕೃತಿಯ ಹಿರಿಮೆಯಾಗಿದೆ. ಪ್ರಶ್ನೋಪನಿಷತ್ತಿನಲ್ಲಿ ಆರು ಜನ ಶಿಷ್ಯರು ಬ್ರಹ್ಮಾಂಡದ ರಹಸ್ಯ, ಜೀವಗಳ ಬಾಹ್ಯ ಮತ್ತು ಸೂಕ್ಷ್ಮ ಶರೀರ, ಕರ್ಮ ಮತ್ತು ಉಪಾಸನೆ, ಆತ್ಮಜ್ಞಾನ, ಪ್ರಾಣ, ಆನಂದದ ಸ್ವರೂಪ ಮುಂತಾದ…

Read More

ಮಂಗಳೂರು : ಇತ್ತೀಚೆಗೆ ನಿಧನರಾದ ಸಾಹಿತಿ ಹಾಗೂ ಪತ್ರಕರ್ತರಾದ ಹರೀಶ್ ಬೋಳಾರ್ ಇವರಿಗೆ ನುಡಿನಮನ ಕಾರ್ಯಕ್ರಮವು ಮಂಗಳೂರಿನ ‘ಕುಡ್ಲ ತುಳುಕೂಟ’ದ ವತಿಯಿಂದ ದಿನಾಂಕ 22-06-2024 ರಂದು ತುಳುಕೂಟದ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನುಡಿನಮಾನ ಸಲ್ಲಿಸಿದ ಕುಡ್ಲ ತುಳುಕೂಟದ ಅಧ್ಯಕ್ಷ ಮರೋಳಿ ಬಿ. ದಾಮೋದರ ನಿಸರ್ಗ ಮಾತನಾಡಿ “ನವಭಾರತ ಪತ್ರಿಕೆಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಹರೀಶ್ ಬೋಳಾರ್ ಇವರು ನಂತರ ಮಣಿಪಾಲದಲ್ಲಿ ಉದಯವಾಣಿ ಪತ್ರಿಕೆಯಲ್ಲಿ ಪತ್ರಕರ್ತ ಹಾಗೂ ಸಾಹಿತಿಯಾಗಿ ಬೆಳೆದರು. ವೃತ್ತಿ ಜೀವನದ ಮಧ್ಯೆಯೇ ಉಡುಪಿಯ ತುಳುಕೂಟದಲ್ಲೂ ತುಳುಭಾಷೆಗಾಗಿ ಶ್ರಮಿಸಿದ ಇವರು, ಕುಡ್ಲದ ತುಳುಕೂಟದಲ್ಲೂ ಸೇವೆಸಲ್ಲಿಸಿ ತುಳುಕೂಟವನ್ನು ಬೆಳೆಸುವಲ್ಲಿ ಯೋಗದಾನ ನೀಡಿದ್ದಾರೆ. ಅವರ ನಿಧನಕ್ಕೆ ತುಳೂಕೂಟ ಕುಡ್ಲ ಕಂಬನಿ ಮಿಡಿಯುತ್ತಿದೆ ಹಾಗೂ ಕುಟುಂಬ ಈ ದುಃಖವನ್ನು ಭರಿಸುವಂತಾಗಲಿ ಹಾಗೂ ಆತ್ಮಕ್ಕೆ ಸದ್ಗತಿ ದೊರಕಲಿ.” ಎಂದರು. ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಪಿ. ಗೋಪಾಲಕೃಷ್ಣ, ಹೇಮಾ ಡಿ. ನಿಸರ್ಗ, ರಮೇಶ್ ಕುಲಾಲ್ ಬಾಯಾರ್, ಭಾಸ್ಕರ ಕುಲಾಲ್ ಬರ್ಕೆ, ವಿಶ್ವನಾಥ ಪೂಜಾರಿ ಸೋಣಳಿಕೆ ಹಾಗೂ…

Read More

ಉಡುಪಿ : ಸ್ವಾತಂತ್ರ್ಯ ಹೋರಾಟಗಾರರಾಗಿ, ಹರಿದಾಸರಾಗಿ, ಯಕ್ಷಗಾನದ ನವಯುಗದ ಪ್ರವರ್ತಕರಾದ ಕೀರ್ತಿಶೇಷ ಮಲ್ಪೆ ಶಂಕರನಾರಾಯಣ ಸಾಮಗರ ಜೀವನ ದರ್ಶನವನ್ನು ಚಿತ್ರಿಸುವ ದಿನೇಶ ಉಪ್ಪೂರ ವಿರಚಿತ ‘ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಉಡುಪಿಯ ಯಕ್ಷಗಾನ ಕಲಾರಂಗದ ನೂತನ ಐವೈಸಿ ಸಭಾಂಗಣದಲ್ಲಿ ದಿನಾಂಕ 29-06-2024ರಂದು ಸಂಜೆ 3-00 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಕಾಸರಗೋಡಿನ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಪುಸ್ತಕವನ್ನು ಅನಾವರಣಗೊಳಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಇವರು ವಹಿಸಿಕೊಳ್ಳಲಿದ್ದು, ಶುಭಾಶಂಸನೆಯನ್ನು ಸಾಮಗರ ಸಹಕಲಾವಿದರಾದ ಡಾ. ಎಂ. ಪ್ರಭಾಕರ ಜೋಶಿಯವರು ಮತ್ತು ಪುಸ್ತಕ ಪರಿಚಯವನ್ನು ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಮಾಡಲಿರುವರು. ಮುಖ್ಯ ಅಭ್ಯಾಗತರಾಗಿ ಮಾಜಿಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಾಹೆಯ ಸಹಕುಲಾಧಿಪತಿಗಳಾದ ಡಾ. ನಾರಾಯಣ ಸಭಾಹಿತ್, ಮಣಿಪಾಲ ಯುನಿವರ್ಸಲ್ ಪ್ರೆಸ್ ಪ್ರಧಾನ ಸಂಪಾದಕರಾದ ಪ್ರೊ. ನೀತಾ ಇನಾಂದಾರ್ ಹಾಗೂ ಕಸಾಪ ದ.ಕ.ಜಿಲ್ಲೆ ಅಧ್ಯಕ್ಷರಾದ ಶ್ರೀ ಪ್ರದೀಪ ಕುಮಾರ್ ಕಲ್ಕೂರ್ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ…

Read More

ಬಂಟ್ವಾಳ : ಬಂಟ್ವಾಳ ತಾಲೂಕಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಎರಡನೇ ವರ್ಷದ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆಯು ದಿನಾಂಕ 18-06-2024ರಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆಯಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಖ್ಯಾತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಪ್ರೇಮ, ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ಕಾರ್ಯದರ್ಶಿ ಮೋಹನದಾಸ್ ಕೊಟ್ಟಾರಿ, ಯಕ್ಷ ಗುರುಗಳಾದ ಓಂ ಪ್ರಕಾಶ್, ಮಾತೃ ಸಮಿತಿಯ ಅಧ್ಯಕ್ಷೆ ಪ್ರಿಯಾ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Read More

ಮಂಗಳೂರು : ಸಂಗೀತ್ ಭಾರತಿ ಫೌಂಡೇಷನ್ (ರಿ.) ಪ್ರಸ್ತುತ ಪಡಿಸುವ ಕರೆ ರಾಗಗಳ ಬೈಠಕ್ ‘ರಾಗ್ ಪರಿಚಯ್’ ಕಾರ್ಯಕ್ರಮವನ್ನು ದಿನಾಂಕ 30-06-2024ರಂದು ಸಂಜೆ 5-30ಕ್ಕೆ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ ಕಾರ್ನಿಕ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ರಾಗಗಳ ಬಗ್ಗೆ ವಿವರಣೆ ನೀಡಲು ಬೆಂಗಳೂರಿನ ಪಂಡಿತ್ ವ್ಯಾಸಮೂರ್ತಿ ಕಟ್ಟಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಮನಸಾ ಶಾಸ್ತ್ರಿ, ರತೀಂದ್ರ ದಾಸ್ ಗುಪ್ತ, ಸಾಗರ್ ಭರತ್ ರಾಜ್ ಮತ್ತು ಮಂಗಳೂರಿನ ನಾಗ್ ಕಿರಣ್ ನಾಯಕ್ ಹರೇಕಳ ಇವರುಗಳು ಕಾರ್ಯಕ್ರಮ ನೀಡಲಿದ್ದಾರೆ.

Read More

ಮಂಗಳೂರು : ನೃತ್ಯಾಂಗಣ ವತಿಯಿಂದ ಡಾ. ಅರುಣ್ ಕುಮಾರ್ ಮೈಯ್ಯ ಇವರ ಸ್ಮರಣಾರ್ಥ ಪ್ರಸ್ತುತ ಪಡಿಸಿದ ‘ಯುವ ನೃತ್ಯೋತ್ಸವ 2024’ವು ದಿನಾಂಕ 23-06-2024ರಂದು ಡಾನ್ ಬೋಸ್ಕೋ ಹಾಲ್ ನಲ್ಲಿ ನಡೆಯಿತು. ಈ ನೃತ್ಯೋತ್ಸವ ಕಾರ್ಯಕ್ರಮವನ್ನು ಗಾನ ನೃತ್ಯ ಅಕಾಡೆಮಿ ಇದರ ನಿರ್ದೇಶಕರಾದ ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಶಾಸ್ತ್ರೀಯ ನೃತ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಯುವ ಮತ್ತು ಉದಯೋನ್ಮುಖ ಕಲಾವಿದರಾದ ಸಂಜನಾ ರಾಜೇಶ್, ಯುಕ್ತಿ ಉಡುಪ, ಸ್ವರಲಿ ಘನ್ಗುರ್ಡೆ, ಅದಿತಿ ರವಿ ಪ್ರಕಾಶ್, ಅಪೇಕ್ಷಾ ಕಾಮತ್, ಅನಂತಕೃಷ್ಣ ಸಿ.ವಿ. ಮತ್ತು ಶಿಲ್ಪ ವರಕ್ಕೋತ್ ಏಕವ್ಯಕ್ತಿ ಪ್ರದರ್ಶನ ನೀಡಿದರು. ಯುವ ನೃತ್ಯೋತ್ಸವದ ಅಂಗವಾಗಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಮತ್ತು ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶಿಸಿದರು. ಗುರು ಪ್ರವಿತಾ ಅಶೋಕ್ ಇವರ ಶಿಷ್ಯೆ ಕುಂದಾಪುರದ ಯುಕ್ತಿ ಉಡುಪ ಪ್ರಥಮ ಸ್ಥಾನ ಪಡೆದು ‘ಅರುಣೋದಯ ಪ್ರಶಸ್ತಿ’ ಪಡೆದರು. ಬೆಂಗಳೂರಿನ ಉಪಾಧ್ಯೆ ಸ್ಕೂಲ್…

Read More

ಮುದ್ರಾಡಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ.ಜಿ.ಕೆ. ರಂಗಪುರಸ್ಕಾರ 2024’ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರರು. ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯೂ, ಸರದಾರನ ಸ್ವಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, ಮಿನುಗೆಲೆ ಮಿನುಗೆಲೆ ನಕ್ಷತ್ರ, ವ್ಯೂಹ, ಮರಗಿಡಬಳ್ಳಿ, ಪರಶುರಾಮ, ಛತ್ರಪತಿ ಶಿವಾಜಿ, ನೆಮ್ಮದಿ ಅಪಾರ್ಟ್‌ಮೆಂಟ್ ಬ್ಲಾಕ್ ಬಿ ಇತ್ಯಾದಿ. ಪೊಸ ಒಸರ್, ಪರ್ಂದ್ ಪೆಲಕಾಯಿ, ಬರ್ಬರೀಕ, ಪಿಲಿತ ಪಂಜ, ಬಿಂಬದುಲಾಯಿದ ಬಿಂಬ, ಮಾಲೆ ಪಟಾಕಿ, ಪುದ್ದು ಕೊಡ್ತರ್ ಇತ್ಯಾದಿ ತುಳು ಪುಸ್ತಕಗಳು. ಧಾರವಾಡದ ದ.ರಾ.ಬೇಂದ್ರೆ ಪ್ರಶಸ್ತಿ, ಫ.ಶಿ. ಭಾಂಡಗೆ ಪ್ರಶಸ್ತಿ, ರಂಗಭೂಮಿ ನಾಟಕ ರಚನಾ ಪ್ರಶಸ್ತಿ, ಎರಡು ಸಲ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎರಡು ಸಲ…

Read More