Author: roovari

ಕಿನ್ನಿಗೋಳಿ : ಶಿವಪ್ರಣಂ (ರಿ.) ನೃತ್ಯ ತರಗತಿಯ ವತಿಯಿಂದ ಕಿನ್ನಿಗೋಳಿಯ ಯುಗಪುರುಷ ಮತ್ತು ನೇಕಾರ ಸೌಧ ಇವುಗಳ ಸಹಯೋಗದೊಂದಿಗೆ ‘ಶಿವಾಂಜಲಿ 2024’ ನೃತ್ಯ ಪ್ರದರ್ಶನದ ಎರಡನೇ ದಿನದ ಕಾರ್ಯಕ್ರಮವು ದಿನಾಂಕ 09-06-2024ರಂದು ಕಿನ್ನಿಗೋಳಿಯ ಯುಗಪುರುಷದಲ್ಲಿ ನಡೆಯಿತು. ಭರತಾಂಜಲಿ ಸಂಸ್ಥೆಯ ನಿರ್ದೇಶಕರಾದ ಗುರು ಶ್ರೀಧರ ಹೊಳ್ಳ ಹಾಗೂ ಶ್ರೀಮತಿ ಪ್ರತಿಮಾ ಶ್ರೀಧರ್ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭುವನಾಭಿರಾಮ ಉಡುಪ, ದುಗ್ಗಣ್ಣ ಸಾವಂತರು, ಡಾ. ಅರುಣ್ ಉಳ್ಳಾಲ ಇವರುಗಳು ಭಾಗವಹಿಸಿ ಶುಭಾ ಕೋರಿದರು. ಆಶಾ ಕೀರ್ತಿ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ನಿರ್ದೇಶಕಿ ಅನ್ನಪೂರ್ಣ ರಿತೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿವಪ್ರಣಂ ಸಂಸ್ಥೆಯ ವಿದ್ಯಾರ್ಥಿಗಳು ‘ಶಿವಾಂಜಲಿ’ ನೃತ್ಯ ಪ್ರದರ್ಶನ ನೀಡಿದರು.

Read More

ಸುರತ್ಕಲ್ : ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯು ದಿನಾಂಕ 21-06-2024ರಂದು ಪ್ರಾರಂಭಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಮುಂಬೈನ ವಿ.ಕೆ. ಸಮೂಹ ಸಂಸ್ಥೆಯ ಸಿ.ಎಂ.ಡಿ. ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಇವರು ಮಾತನಾಡಿ “ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲೂ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ಧಿಯಾಗುತ್ತದೆ” ಎಂದು ಹೇಳಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ, “ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ನೀಡಲಾಗುತ್ತಿದೆ” ಎಂದರು. ಪಟ್ಲ ಫೌಂಡೇಷನ್‌ನ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ಮಾಧವ ಶೆಟ್ಟಿ ಬಾಳ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಯಕ್ಷಗಾನ ಶಿಕ್ಷಕಿ ಪೂರ್ಣಿಮಾ ಯತೀಶ್ ರೈ, ಫೌಂಡೇಷನ್‌ನ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ,…

Read More

ಮಣಿಪಾಲ : ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ (ರಿ.) ಸರಳೇಬೆಟ್ಟು ಮಣಿಪಾಲ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ದಿನಾಂಕ 30-06-2024ರಂದು ಅಪರಾಹ್ನ 3-30 ಗಂಟೆಗೆ ಮಣಿಪಾಲದ ಸರಳೇಬೆಟ್ಟು ರತ್ನ ಸಂಜೀವ ಕಲಾಮಂಡಲದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯದ ‘ಆತ್ಮ ವಿಕ್ರಯ’ ಎಂಬ ಭಾಗವನ್ನು ಮಂಚಿಯ ಗಮಕಿ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಭಟ್ ಇವರು ವಾಚನ ಮತ್ತು ಡಾ. ರಾಘವೇಂದ್ರ ರಾವ್ ಇವರು ವ್ಯಾಖ್ಯಾನ ನೀಡಲಿರುವರು.

Read More

ತೆಕ್ಕಟ್ಟೆ: ತೆಕ್ಕಟ್ಟೆಯ ಹಯಗ್ರೀವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಶಸ್ವೀ ಕಲಾವೃಂದದ ಸಹಕಾರದೊಂದಿಗೆ ಯಕ್ಷಾಂತರಂಗ-ವ್ಯವಸಾಯೀ ಯಕ್ಷ ತಂಡದ ಯಕ್ಷ ದುಂದುಭಿ-2024ರಲ್ಲಿ ‘ಕಾರಂತ ಯಕ್ಷಾಂತರಗ ಪ್ರಶಸ್ತಿ ಪ್ರದಾನ’ ಸಮಾರಂಭವು ದಿನಾಂಕ 23-06-2024 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ “ಹಿರಿಯರಾಗಿ ಸಾಕಷ್ಟು ಅನುಭವವುಳ್ಳ ಕೃಷ್ಣಮೂರ್ತಿ ಉರಾಳರು ಅನುಭವೀ ಕಲಾವಿದರ ತಂಡವನ್ನು ಕಟ್ಟಿಕೊಂಡು ‘ಯಕ್ಷಾಂತರಂಗ’ ಸಂಘಟನೆಯ ಮೂಲಕ ಸಾಂಪ್ರದಾಯಿಕ ಯಕ್ಷ ನಡೆಯನ್ನೇ ಸಾರ್ವತ್ರಿಕವಾಗಿ ಮತ್ತೆ ಮತ್ತೆ ನೆನಪಿಸುತ್ತಾ ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಗುವಂತೆ ಮಾಡಿದ್ದಾರೆ. ಸಂಸ್ಥೆಯು ಮತ್ತೆ ಮತ್ತೆ ಸಾಂಸ್ಕೃತಿಕವಾಗಿ ಬೆಳಗುತ್ತಾ ಇನ್ನಷ್ಟು ಕಾಲ ಕಾಂತಿಯನ್ನು ನೀಡಲಿ.” ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಖ್ಯಾತ ಪ್ರಸಂಗಕರ್ತ ಪ್ರಸಾದ್ ಕುಮಾರ್ ಮೊಗೆಬೆಟ್ಟು “ಯಕ್ಷಗಾನದ ಸರ್ವಾಂಗವನ್ನು ಬಲ್ಲ ಅನೇಕರ ಪರಂಪರೆಯ ಕೊಂಡಿ ಬಡಗು ತಿಟ್ಟಿನ ಹಿರಿಯ ಭಾಗವತ ಸಾಧಕ ಶ್ರೇಷ್ಠರು ಹೆರೆಂಜಾಲು ಗೋಪಾಲ ಗಾಣಿಗರು. ಯಕ್ಷರಂಗದಲ್ಲಿ ಹಂತ ಹಂತವಾಗಿ ಮೇಲೆ ಬಂದ ಗಾಣಿಗರು ಭಾಗವತಿಗೆ ಕಲಿತು ಮೇಳ ಸೇರಿಕೊಂಡವರು. ಮರವಂತೆಯ…

Read More

ಕಾಟಿಪಳ್ಳ : ದ .ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕದ ಆಶ್ರಯದಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮವು ದಿನಾಂಕ 22-06-2024 ರಂದು ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ‘ಅಮೃತ ಪ್ರಕಾಶ’ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಮಾತನಾಡಿ “ಇಂತಹ ಸಾಹಿತ್ಯದ ಸಂಪತ್ತನ್ನು ಹೆಚ್ಚಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಾ ಇರಲಿ.” ಎಂದು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಹಾಗೂ ವಾಗ್ಮಿಯಾದ ರೇಮಂಡ್ ಡಿ. ಕುನ್ಹಾ ಭಾಗವಹಿಸಿ ಮಕ್ಕಳಿಗೆ ಕಥೆ ಕಟ್ಟುವ ವಿಧಾನ ಹಾಗೂ ಅವುಗಳು ತೆರೆದುಕೊಳ್ಳುವಂತಹ ಕುತೂಹಲದ ಬಾಗಿಲು ಹೇಗಿರಬೇಕು ಎಂದು ತಿಳಿಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಹಿತಿ, ಚಿಂತಕ, ವಾಗ್ಮಿ ಹಾಗೂ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್, ಎಂ. ಆರ್. ಪಿ. ಎಲ್ ವಿಶ್ರಾಂತ ಪ್ರಬಂಧಕರಾದ ವೀಣಾ ಶೆಟ್ಟಿ, ತಾಲೂಕು…

Read More

ಬೆಂಗಳೂರು : ಸಾಂಸ್ಕೃತಿಕ ಸಂಘಟನೆಯಾದ ರಂಗಚಂದಿರ (ರಿ.) ಆಯೋಜಿಸಿರುವ ರಂಗಕರ್ಮಿ, ರಂಗ ನಿರ್ದೇಶಕರಾದ ದಿವಂಗತ ಪ್ರೊ. ಸಿ.ಜಿ.ಕೆ.ಯವರ 74ನೇ ಜನ್ಮದಿನದ ಸವಿನೆನಪಿನ ಅಂಗವಾಗಿ ‘ಸಿ.ಜಿ.ಕೆ. ಎಂಬ ಸೂಜಿಗಲ್ಲು’ ಕಾರ್ಯಕ್ರಮವು ದಿನಾಂಕ 27-06-2024ರಂದು ಸಂಜೆ ಗಂಟೆ 5-30ಕ್ಕೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ರಂಗಮಂದಿರದಲ್ಲಿ ನಡೆಯಲಿದೆ. ನಾಡೋಜ ಡಾ. ಸಿದ್ದಲಿಂಗಯ್ಯನವರು ರಚಿಸಿರುವ, ಸಿ.ಜಿ.ಕೆ.ಯವರ ನಿರ್ದೇಶನದ ‘ಪಂಚಮ’ ನಾಟಕ ಪ್ರದರ್ಶನ ಮತ್ತು ರಂಗ ಗೌರವ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಂತಕರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ. ಎಸ್‌.ಜಿ. ಸಿದ್ದರಾಮಯ್ಯನವರು ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪ್ರೊ. ಎಲ್.ಎನ್. ಮುಕುಂದರಾಜ್, ಶ್ರೀ ಕೆ.ವಿ. ನಾಗರಾಜಮೂರ್ತಿ, ಶ್ರೀ ಮಾವಳ್ಳಿ ಶಂಕರ್, ಶ್ರೀ ಎಂ. ಪ್ರಕಾಶ್ ಮೂರ್ತಿ, ಡಾ. ಎ.ಆರ್. ಗೋವಿಂದ ಸ್ವಾಮಿ, ಶ್ರೀ ಮಂಜುನಾಥ ಅದ್ದೆ, ಶ್ರೀಮತಿ ಜಯಲಕ್ಷ್ಮಿ ಸಿ.ಜಿ.ಕೆ. ಅವರು ಭಾಗವಹಿಸಲಿದ್ದಾರೆ. ಸಿ.ಜಿ.ಕೆ. ಯವರ ಹುಟ್ಟುಹಬ್ಬದ ಅಂಗವಾಗಿ ನಾಟಕಕಾರರಾದ ಡಾಕ್ಟರ್ ಕೆ.ವೈ. ನಾರಾಯಣಸ್ವಾಮಿ, ರಂಗ ಸಂಘಟಕರಾದ ಶ್ರೀ ರಾಮದಾಸ್ ಚಳ್ಳಕೆರೆ…

Read More

ಪುತ್ತೂರು : ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ. ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನಾಚರಣೆ “ವಿವೇಕ ನಾವಿನ್ಯ -2024” ಕಾರ್ಯಕ್ರಮವು ದಿನಾಂಕ 22-06-2024 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳುನಾಡ ಮಾಣಿಕ್ಯ ಖ್ಯಾತಿಯ ಚಲನಚಿತ್ರ ನಟ ಅರವಿಂದ ಬೋಳಾರ್‌ ಮಾತನಾಡಿ “ಪ್ರತಿಭೆ ಎನ್ನುವುದು ಭಗವಂತ ನೀಡಿದ ವರ. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಸುಪ್ತವಾಗಿ ಅಡಕವಾಗಿರುತ್ತದೆ. ಅಂತರ್ಗತವಾಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತವಾದ ವೇದಿಕೆಯ ಅವಶ್ಯಕತೆಯಿದೆ. ಸಂಪತ್ತು ಎಂದಿಗೂ ಶಾಶ್ವತವಲ್ಲ. ಕಲಿತ ವಿದ್ಯೆ ಮಾತ್ರ ಶಾಶ್ವತವಾಗಿರುತ್ತದೆ. ವಿದ್ಯಾರ್ಥಿಗಳು ವಿದ್ಯೆಯ ಮಹತ್ವವನ್ನರಿತು ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮಾತಾಪಿತರಿಗೆ ನೀಡುವ ಗೌರವ ವಿದ್ಯೆ ಕಲಿಸುವ ಗುರುವಿಗೂ ಸಲ್ಲಬೇಕು, ಆಗಲೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗಲು ಸಾಧ್ಯ. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸನ್ಮಾನಿಸುವುದು ಅತ್ಯಂತ ಉತ್ತಮವಾದ ಕೆಲಸ.” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾರಾಜ್ಞಿ ಮಾತನಾಡಿ “ಯುವಜನತೆಗೆ ಧನಸಂಪಾದನೆಯ ಜತೆಗೆ ಸಮಯದ ಸದುಪಯೋಗದ ಅರಿವು ಮುಖ್ಯ. ಮನೋಬಲದಿಂದ ಎಲ್ಲವೂ…

Read More

ಕೊಡಗು : ಸುವರ್ಣ ಕರ್ನಾಟಕ 50ರ ಸಂಭ್ರಮದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಅರಮೇರಿ ಕಳಂಚೇರಿ ಮಠ ಮತ್ತು ಎಸ್.ಎಂ.ಎಸ್. ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆಯ ಶ್ರೀಮತಿ ಸುನಂದಾದೇವಿ ಮತ್ತು ಸಂಗಮೇಶ್ವರ ಗೌಡ ಇವರು ಶರಣ ತತ್ವ ಪ್ರಚಾರ ಮತ್ತು ಶರಣ ವಿಚಾರಗಳನ್ನು ತಿಳಿಯಪಡಿಸುವುದ್ದಕೋಸ್ಕರ ಸ್ಥಾಪಿಸಿರುವ ದತ್ತಿ ಕಾರ್ಯಕ್ರಮವು ದಿನಾಂಕ 27-06-2024ರಂದು ಮಧ್ಯಾಹ್ನ 1-00 ಗಂಟೆಗೆ ಅರಮೇರಿ ಕಳಚೇರಿ ಮಠದ ಎಸ್.ಎಂ.ಎಸ್. ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಅರಮೆರಿ ಕಳಂಚೇರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಲಿದ್ದು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ವಿ. ಶಿವಪ್ಪ…

Read More

ಬಂಟ್ವಾಳ : ಬಂಟ್ವಾಳ ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿವಿಧ ರೋಟರಿ ಕ್ಲಬ್‌ಗಳ ಸಹಕಾರದೊಂದಿಗೆ ಸಂಸಾರ ಜೋಡುಮಾರ್ಗ ಆಯೋಜನೆಯಲ್ಲಿ ದಿನಾಂಕ 14-06-2024ರಂದು ಮುಂಬೈ ಛತ್ರಪತಿ ಶಿವಾಜಿ ಮಹರಾಜ್ ವಸ್ತು ಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್ಸ್’ ಕಾರ್ಯಕ್ರಮದಲ್ಲಿ ಒರಿಗಾಮಿ ಕಲಾಕೃತಿಗಳನ್ನೊಳಗೊಂಡ ‘ಒರಿಗಾಮಿ ಬಸ್’ ಬಂಟ್ವಾಳಕ್ಕೆ ಆಗಮಿಸಿದ್ದು, ಬಿ.ಸಿ. ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಶಾಲಾಮಕ್ಕಳು, ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕಾಗದದ ರಾಕೆಟ್ ಹಾರಿಬಿಡುವ ಮೂಲಕ ವೀಕ್ಷಣೆಗೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು “ಮುಂಬಯಿನ ಮ್ಯೂಸಿಯಂ ಸಂಸ್ಥೆಯೊಂದು ಈ ರೀತಿ ಹಳ್ಳಿ ಪ್ರದೇಶಕ್ಕೆ ತೆರಳಿ ಉತ್ತಮ ದರ್ಜೆಯ ಕಲೆಯನ್ನು ಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಒರಿಗಾಮಿ ಕಾಗದದ ಕಲೆಯಾಗಿದ್ದು, ಕಾಗದವನ್ನು ವಿಧವಿಧ ರೀತಿಯಲ್ಲಿ ಮಡಚಿ ಅದರಲ್ಲಿ ವಿಶಿಷ್ಟವಾದ ಆಕಾರಗಳು ಮತ್ತು ಶಿಲ್ಪಗಳನ್ನು ರಚಿಸುವುದು ಒರಿಗಾಮಿ ಕಲೆಯ ವೈಶಿಷ್ಟ್ಯತೆ. ಶಾಲಾ ಮಕ್ಕಳು ಇದರ ಸದುಪಯೋಗ ಪಡೆಯುವಂತೆ…

Read More

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ದಿನಾಂಕ 23-06-2024ರಂದು ಸಂಸ್ಥೆಯ ಐ.ವೈ.ಸಿ. ಸಭಾಭವನದಲ್ಲಿ ‘ತಾಳಮದ್ದಳೆ ಪ್ರಶಸ್ತಿ 2024’ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಮಾರಂಭದಲ್ಲಿ ಮೂಡಬಿದ್ರೆಯ ಶ್ರೀ ಜೈನ ಮಠದ ಸ್ವಸ್ತಿ ಶ್ರೀಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮಿಗಳು ಅನುಗ್ರಹ ಸಂದೇಶ ನೀಡಿ “ಯಕ್ಷಗಾನ ನಮ್ಮ ನಾಡಿನ ಪರಿಪೂರ್ಣ ಕಲಾಪ್ರಕಾರ. ತಾಳಮದ್ದಲೆ ಏಕಕಾಲದಲ್ಲಿ ಪುರಾಣದ ಕತೆಯನ್ನು ಜನ ಸಾಮಾನ್ಯರಿಗೆ ತಲಪಿಸುತ್ತಾ, ವ್ಯಾಖ್ಯಾನಿಸುತ್ತಾ, ಮುರಿದು ಕಟ್ಟುತ್ತಾ ಬಂದಿದೆ. ಅನೇಕ ವಿದ್ವಾಂಸರು ಇದನ್ನು ಶತಮಾನಗಳಿಂದ ಮಾಡುತ್ತಾ ಬಂದಿದ್ದಾರೆ. ಪ್ರಸ್ತುತ ಸಂಘರ್ಷದ ಸಂದರ್ಭದಲ್ಲಿ ಇದರ ಕೊಡುಗೆ ಅತ್ಯಂತ ಮಹತ್ವದ್ದು” ಎಂದು ಅಭಿಪ್ರಾಯಪಟ್ಟರು. ತಲಾ ರೂ.20,000/- ನಗದು ಮತ್ತು ಪ್ರಶಸ್ತಿ ಪತ್ರಗಳನ್ನೊಳಗೊಂಡಿರುವ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಜಬ್ಬಾರ್ ಸಮೊ ಅವರಿಗೂ, ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಸೇರಾಜೆ ಸೀತಾರಾಮ ಭಟ್ ಅವರಿಗೂ ಪ್ರದಾನ ಮಾಡಲಾಯಿತು. ಶಾರದಾ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಎಂ.ಬಿ. ಪುರಾಣಿಕರು ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್…

Read More