Subscribe to Updates
Get the latest creative news from FooBar about art, design and business.
Author: roovari
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಅನುಗ್ರಹ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸಮಾಲೆ – 8ರಲ್ಲಿ ಗಿರೀಶ್ ಕಾರ್ನಾಡ್ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 09 ಸೆಪ್ಟೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಉಪನ್ಯಾಸ ಮಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜು (ಸ್ವಾಯತ್ತ) ಕನ್ನಡ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಭವ್ಯಶ್ರೀ ಆರ್. ಬಲ್ಲಾಳ್ ಇವರು ಉಪನ್ಯಾಸ ನೀಡಲಿದ್ದಾರೆ. ಉಜಿರೆಯ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಇವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಟಿತ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಮೈಸೂರಿನ ಡಾ. ಬಿ.ಎಸ್. ಪ್ರಣತಾರ್ತಿಹರನ್ ಇವರನ್ನು ಆಯ್ಕೆ ಮಾಡಲಾಗಿದೆ. ಕನ್ನಡದ ಹಿರಿಯ ವಿದ್ವಾಂಸರಾದ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಯವರ ಅಭಿಮಾನಿಗಳು ಮತ್ತು ಬಂಧುಗಳು 2001ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ನಿಧಿಯನ್ನು ಸ್ಥಾಪಿಸಿದ್ದು, ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿಗಳು ಕಾರ್ಯ ನಿರ್ವಹಿಸಿದ ಹಳಗನ್ನಡ ಸಾಹಿತ್ಯದ ಅಧ್ಯಯನ, ಛಂದಸ್ಸು, ವ್ಯಾಕರಣ, ನಿಘಂಟು ರಚನೆ, ಗ್ರಂಥ ಸಂಪಾದನೆ, ಭಾಷಾ ಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿರುವವರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂಬುದು ದತ್ತಿಯ ಆಶಯವಾಗಿದೆ. 2025ನೆಯ ಸಾಲಿಗೆ ‘ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ ವಿದ್ವತ್ ಪ್ರಶಸ್ತಿ’ಗೆ ಆಯ್ಕೆಯಾಗಿರುವ ಡಾ. ಬಿ.ಎಸ್. ಪ್ರಣತಾರ್ತಿಹರನ್ ಬಾನುಲಿ ನಿಲಯದಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿದ ನಂತರ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ 25 ವರ್ಷ ಸೇವೆ ಸಲ್ಲಿಸಿದವರು. ಸಂಕೇತಿ ಸಮುದಾಯದ ಅಧ್ಯಯನಕ್ಕೆ ಪಿ.ಎಚ್.ಡಿ. ಪದವಿಯನ್ನು ಪಡೆದು, ಜೊತೆಗೆ ‘ಸಂಕೇತಿ’…
ಉಪ್ಪಿನಂಗಡಿ : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ (ರಿ.) ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ನಡೆಸಲ್ಲಡುತ್ತಿರುವ ಶ್ರೀ ಮಹಾಭಾರತ ಸರಣಿಯ ಸುವರ್ಣ ಶತಕ ತಾಳಮದ್ದಳೆಯ ಅಂಗವಾಗಿ ದಿನಾಂಕ 06 ಸೆಪ್ಟೆಂಬರ್ 2025ರಂದು ತಾಳಮದ್ದಳೆ ಕಾರ್ಯಕ್ರಮವು ಉಪ್ಪಿನಂಗಡಿ ರಾಮ ನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ‘ಕರ್ಣ ಭೇದನ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಯಲ್.ಯನ್. ಭಟ್, ಚೆಂಡೆ ಮದ್ದಳೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ್ ಬಾರ್ಯ (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಕರ್ಣ), ದುಗ್ಗಪ್ಪ ನಡುಗಲ್ಲು (ಸೂರ್ಯ), ಕಿಶೋರಿ ದುಗ್ಗಪ್ಪ ನಡುಗಲ್ಲು (ಕುಂತಿ) ಸಹಕರಿಸಿದರು.
ಬೆಳಗಾವಿ : ರಂಗಶಂಕರ ಬೆಂಗಳೂರಿನ ಒಂದು ವಿಶೇಷ ವಿಭಿನ್ನ ರೀತಿಯ ರಂಗಯೋಜನೆಗೆ ನಮ್ಮ ಹೆಮ್ಮೆಯ ರಂಗಸಂಪದ ಬೆಳಗಾವಿಯ ತಂಡ ಆಯ್ಕೆಯಾಗಿದೆ ಎಂಬುದು ಅಭಿಮಾನದ ಸಂಗತಿ. ಇದರ ಅಡಿಯಲ್ಲಿ ಎನ್.ಎಸ್.ಡಿ. ಪದವೀಧರೆ ಸವಿತಾ ಬೈರಪ್ಪ ಇವರು ಎಸ್. ಸಂಧ್ಯಾರವರ ‘ನಕ್ಷತ್ರ ಯಾತ್ರಿಕರು’ ಎಂಬ ನಾಟಕವನ್ನು ನಿರ್ದೇಶಿಸಿ ರಂಗಸಂಪದ ಬೆಳಗಾವಿಯ ತಂಡಕ್ಕೆ ತಯಾರಿಸುತ್ತಿದ್ದಾರೆ. ಇದರ ತಾಲೀಮು ದಿನಾಂಕ 28 ಸೆಪ್ಟೆಂಬರ್ 2025ರಿಂದ ಪ್ರಾರಂಭವಾಗುವದು. ಇದರ ಮೊದಲ ಪ್ರದರ್ಶನ ದಿನಾಂಕ 02 ನವೆಂಬರ್ 2025ರಂದು ಬೆಳಗಾವಿಯಲ್ಲಿ ನಂತರ ದಿನಾಂಕ 15 ನವೆಂಬರ್ 2025ರಂದು ಸಿದ್ದಾಪುರದಲ್ಲಿ ನಂತರ ಧಾರವಾಡ, ಹಾನಗಲ್ಲ, ಬೆಂಗಳೂರು ಇತ್ಯಾದಿ ಕಡೆಗಳಲ್ಲಿ ಜರುಗುವದು. ಈ ನಾಟಕಕ್ಕಾಗಿ ಕಲಾವಿದರ ಆಯ್ಕೆಯನ್ನು ರಂಗಸಂಪದ ಬೆಳಗಾವಿಯ ತಂಡ ಸವಿತಾ ಬೈರಪ್ಪರವರ ಉಪಸ್ಥಿತಿಯಲ್ಲಿ ಈ ಕೆಳಗಿನ ದಿನ ಮತ್ತು ಸ್ಥಳಗಳಲ್ಲಿ ಮಾಡುತ್ತಿದೆ. 1) ಶನಿವಾರ ದಿನಾಂಕ 27 ಸೆಪ್ಟೆಂಬರ್ 2025ರಂದು ಸಂಜೆ ಗಂಟೆ 4-30ರಿಂದ 7-30 ಶ್ರೀ ಗುರುನಾಥ ಕುಲಕರ್ಣಿಯವರ ಸ್ವಗೃಹ, ಎರಡನೆಯ ಮಹಡಿ, ಕಲಾಶ್ರೀ ಅಪಾರ್ಟ್ಮೆಂಟ್, ಎಚ್.ಪಿ. ಆಫೀಸ…
ಮಂಗಳೂರು : ಹರಿಕಥಾ ಪರಿಷತ್ (ರಿ.) ಮಂಗಳೂರು ಇವರು ಆಯೋಜಿಸಿದ್ದ ವಿದ್ವಾನ್ ಎಂ. ಲಕ್ಷ್ಮೀನಾರಾಯಣ ಭಟ್ ಸಂಸ್ಮರಣಾರ್ಥ ದಿನಾಂಕ 30 ಆಗಸ್ಟ್ 2025ರಂದು ಮಂಗಳೂರು ಶರವು ರಸ್ತೆಯ ಶ್ರೀ ರಾಧಾಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ‘ಹರಿಕಥಾ ಸಪ್ತಾಹ’ವು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಾರದೀ ಪ್ರಕಾಶನ ಪ್ರಕಟಿಸಿದ ಲಕ್ಷ್ಮೀನಾರಾಯಣ ಭಟ್ಟರ ಕುರಿತಾದ ಪುಸ್ತಕ ‘ನುಡಿನಮನ’ವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ “ಹರಿಕಥಾ ರಂಗಕ್ಕೆ ಬಹಳಷ್ಟು ಕೊಡುಗೆ ನೀಡಿರುವ ಖ್ಯಾತ ತಬ್ಲಾ ವಾದಕ ಕೀರ್ತಿಶೇಷ ಎಂ. ಲಕ್ಷ್ಮೀನಾರಾಯಣ ಭಟ್ಟರಂತಹ ಹಿರಿಯ ಕಲಾವಿದರ ಸಂಸ್ಮರಣೆ ಯುವಕಲಾವಿದರಿಗೆ ಪ್ರೇರಣೆಯಾಗುವುದಲ್ಲದೆ ಹರಿಕಥಾ ಪರಂಪರೆಯ ಪೋಷಣೆಗೆ ಸಹಕಾರಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟರು. ರಾಧಾಕೃಷ್ಷ ದೇವಸ್ಥಾನದ ಅರ್ಚಕರಾದ ವೇದಮೂರ್ತಿ ಎಂ. ಕೇಶವ ಭಟ್ ಸಪ್ತಾಹವನ್ನು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹರಿಕಥಾ ಪರಿಷತ್ತಿನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಹರಿಕಥಾ ರಂಗಕ್ಕೆ ಲಕ್ಷ್ಮೀನಾರಾಯಣ ಭಟ್ಟರ ಕೊಡುಗೆಯನ್ನು ಸ್ಮರಿಸಿದರು. ‘ನುಡಿನಮನ’ ಪುಸ್ತಕದ ಸಂಪಾದಕರಾದ ಡಾ. ಎಲ್. ದತ್ತಾತ್ರೇಯ…
ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 07 ಸೆಪ್ಟೆಂಬರ್ 2025 ಭಾನುವಾರದಂದು ‘ಯಾಗ ಸನ್ನಾಹ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಹಾಗೂ ಮದ್ದಳೆಯಲ್ಲಿ ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಕೃಷ್ಣ : ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಧರ್ಮರಾಯ : ಶ್ರೀ ಗೋಪಾಲ ಅಡಿಗಳು ಕೂಡ್ಲು, ಭೀಮ : ಶ್ರೀ ಮಯೂರ ಆಸ್ರ ಉಳಿಯ, ಅರ್ಜುನ : ಶ್ರೀಮತಿ ರಕ್ಷಾ ರಾಮ್ ಕಿಶೋರ ಆಸ್ರ, ಇಂದ್ರಸೇನ : ಶ್ರೀಮತಿ ಧನ್ಯಮುರಳಿ ಕೃಷ್ಣ ಆಸ್ರ ಇವರುಗಳು ಭಾಗವಹಿಸಿದ್ದರು.
ಮೂಡುಬಿದಿರೆ : ಇರುವೈಲು ಮೇಳದ ಹಿರಿಯ ಹಾಸ್ಯ ಕಲಾವಿದ ಅನಂತ ಪ್ರಭು ಕಟ್ಟಣೆಗೆ (84) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇರುವೈಲು ಗ್ರಾಮದ ನಿವಾಸಿಯಾಗಿರುವ ಕಟ್ಟಣಿಕೆ ಅವರು ಯಕ್ಷಗಾನದಲ್ಲಿ ಹಾಸ್ಯಗಾರರಿಗೆ ಸ್ಟಾರ್ ವ್ಯಾಲ್ಯೂ ಇಲ್ಲದಂತಹ ಕಾಲದಲ್ಲಿ ರಂಗಸ್ಥಳದಲ್ಲಿ ಹಾಸ್ಯಗಾರನಾಗಿ ಪ್ರೇಕ್ಷಕರನ್ನು ರಂಜಿಸಿರುವ ಇವರು ಇರುವೈಲು ಮೇಳದ ಪ್ರಮುಖ ಹಾಸ್ಯ ಕಲಾವಿದರಾಗಿದ್ದರು. ದಿನ್ನಕ 25 ಜನವರಿ 1945ರಲ್ಲಿ ಇರುವೈಲಿನ ನಡುಬಾಳಿಕೆಯಲ್ಲಿ ಜನಿಸಿದ ಇವರು ತಮ್ಮ 12ನೇ ವಯಸ್ಸಿನಲ್ಲಿ ಯಕ್ಷಗಾನದ ರಂಗಸ್ಥಳವನ್ನು ಪ್ರವೇಶಿಸಿದರು. ಕಟೀಲು ಮೇಳವನ್ನು ಮುನ್ನಡೆಸುತ್ತಿದ್ದ ದಿ. ಅಣ್ಣಪ್ಪ ಸಾಮಂತರಿಂದಾಗಿ ಯಕ್ಷಗಾನದ ಒಲವು ಬೆಳೆಸಿಕೊಂಡಿದ್ದರು. ಇರುವೈಲು ವಾಸುದೇವ ಆಚಾರಿಯವರಲ್ಲಿ ಹೆಜ್ಜೆಗಾರಿಕೆಯನ್ನು ಕಲಿತು, ಸಂಜೀವ ಪ್ರಭು ಕಟ್ಟಣಿಗೆಯವರ ಮಾರ್ಗದರ್ಶನದಲ್ಲಿ, ಇರುವೈಲು ಶ್ರೀರಾಮ ಅಸ್ರಣ್ಣ ಮತ್ತು ಜನಾರ್ದನ ಆಚಾರಿ ಕಲ್ಲಮರಾಯಿ ನೇತೃತ್ವದಲ್ಲಿ ಪುನರ್ ಸಂಘಟಿತವಾದ ಇರುವೈಲು ಮೇಳದಲ್ಲಿ ಯಶಸ್ವಿ ಹಾಸ್ಯ ಕಲಾವಿದರಾಗಿ ಯಕ್ಷಗಾನ ರಂಗದಲ್ಲಿ ಮಿಂಚಿದರು. ಆರೋಗ್ಯ ಸಂಬಂಧಿ ಸಮಸ್ಯೆಯಿಂದಾಗಿ ಕಳೆದ 18 ವರ್ಷಗಳಿಂದ ಯಕ್ಷಗಾನದಿಂದ ದೂರ ಉಳಿದರೂ, ಯಕ್ಷಗಾನದತ್ತ ಸದಾ ಚಿತ್ತವಿರಿಸಿಕೊಂಡಿದ್ದರು. ಅವರ ಸೇವೆಗೆ ಹಲವು ಪ್ರಶಸ್ತಿ,…
ಮಂಗಳೂರು : ಮೂಡುಬಿದ್ರೆಯ ಎಕ್ಸೆಲೆಂಟ್ ಪ.ಪೂ ಕಾಲೇಜಿನಲ್ಲಿ ದಿನಾಂಕ 20 ಆಗಸ್ಟ್ 2025ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆಯಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ನಿಕಟಪೂರ್ವ ಅಧ್ಯಕ್ಷರಾದ ಮಂಗಳೂರು ಶ್ರೀ ಶಾರದಾ ಪ.ಪೂ. ಕಾಲೇಜಿನ ಉಪನ್ಯಾಸಕ ರಮೇಶ್ ಆಚಾರ್ಯ ನಾರಳ ಅವರು ಗೌರವಾಧ್ಯಕ್ಷರಾಗಿರುತ್ತಾರೆ. ಉಪಾಧ್ಯಕ್ಷರಾಗಿ ಮಂಗಳೂರು ಎಕ್ಸಪರ್ಟ್ ಪ.ಪೂ. ಕಾಲೇಜಿನ ಶ್ರೀನಿವಾಸ ಮಧ್ಯಸ್ಥ, ಮೂಡುಬಿದ್ರೆ ಆಳ್ವಾಸ್ ಪ.ಪೂ. ಕಾಲೇಜಿನ ಅಂಬರೀಷ ಚಿಪ್ಲೂಣಕರ್, ಸುರತ್ಕಲ್ ಗೋವಿಂದದಾಸ ಪ.ಪೂ. ಕಾಲೇಜಿನ ಪೈಕ ವೆಂಕಟರಮಣ ಭಟ್ ಇವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ. ಕಾಲೇಜಿನ ಡಾ. ಸುರೇಖಾ ತಂತ್ರಿ, ಜೊತೆ ಕಾರ್ಯದರ್ಶಿಗಳಾಗಿ ಮಂಗಳೂರು ಮ್ಯಾಪ್ಸ್ ಪ.ಪೂ. ಕಾಲೇಜಿನ ಶೈಲಜಾ ಹೆಚ್.ಎಸ್. ಮೂಡುಬಿದ್ರೆ…
ವಿಜಯಪುರ : ಕರ್ನಾಟಕ ರಾಜ್ಯ ಗಮಕ ಕಲಾ ಪರಿಷತ್ತು ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಹಾಗೂ ಜಿಲ್ಲಾ ಗಮಕ ಕಲಾ ಪರಿಷತ್ತು ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 31 ಆಗಸ್ಟ್ 2025 ರವಿವಾರದಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕವಿ ಲಕ್ಷ್ಮೀಶನ ಜೈಮಿನಿ ಭಾರತದ ‘ಚಂದ್ರಹಾಸ-ವಿಷಯೆ’ ವಿವಾಹ ಪ್ರಸಂಗದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಗಮಕ ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದ ಶಿಕ್ಷಕರಾದ ಡಾ. ಮಾಧವ್ ಗುಡಿಯವರು “ವಿದ್ಯಾರ್ಥಿಗಳಲ್ಲಿ ಗಮಕದ ಬೆಳವಣಿಗೆಗೆ ಕನ್ನಡ ವ್ಯಾಕರಣ ಹಾಗೂ ಕಾವ್ಯಗಳ ಓದುವಿಕೆ ಅತ್ಯವಶ್ಯ. ಕರೋನಾ ಯುಗದ ನಂತರ ಮಕ್ಕಳ ಕಲಿಯುವಿಕೆ ಕುಂಠಿತವಾಗಿದೆ. ವಿದ್ಯಾರ್ಥಿಗಳು ಮೊಬೈಲ್ ದಾಸರಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಈ ಸಂದರ್ಭದಲ್ಲಿ ಕಾವ್ಯಗಳ ವಾಚನ-ವ್ಯಾಖ್ಯಾನ ಪ್ರಕ್ರಿಯೆ ಸತತವಾಗಿ ಮುಂದುವರೆಯಬೇತು ಎಂದು ಹೇಳಿದರು. ನಂತರ ಜರುಗಿದ ಗಮಕ ಕಾರ್ಯಕ್ರಮದಲ್ಲಿ ಗಮಕ ವಿದುಷಿ ಶಾಂತಾ ಕೌತಾಳ್ ಇವರು ಲಕ್ಷ್ಮೀಶನ ಜೈಮಿನಿ ಭಾರತವನ್ನು ಓದಿದರು.…
ಮಂಗಳೂರು : ಸ್ಪೀಕ್ ಮಕೇ ಎನ್.ಐ.ಟಿ.ಕೆ. ಇದರ ವತಿಯಿಂದ ‘ಗಂಧರ್ವ ನರ್ತನ’ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 10 ಸೆಪ್ಟೆಂಬರ್ 2025ರಂದು ಸಂಜೆ 6-00 ಗಂಟೆಗೆ ಎಸ್.ಜೆ.ಎ.ಯಲ್ಲಿ ಆಯೋಜಿಸಲಾಗಿದೆ. 2020ರ ಸಂಗೀತ ನಾಟಕ ಅಕಾಡೆಮಿಯ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಮಿಥುನ್ ಶ್ಯಾಮ್ ಇವರು ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ.