Author: roovari

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಕೊಡಮಾಡುವ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಗೊಂಡಿದೆ. ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ – ಬೆಂಗಳೂರು ಇದರ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಬ್ಯಾರಿ – ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯರಾದ ಬೆಂಗಳೂರಿನ ಡಾ. ಮನ್ಸೂದ್ ಅಹ್ಮದ್ ಮುಲ್ಕಿ (ಬ್ಯಾರಿ ಭಾಷೆ ಮತ್ತು ಸಂಘಟನೆ), ಬ್ಯಾರಿ ಕವಿ ಮತ್ತು ಲೇಖಕ ಹೈದರ್ ಅಲಿ ಕಾಟಿಪಳ್ಳ (ಬ್ಯಾರಿ ಸಾಹಿತ್ಯ), ಹಿರಿಯ ಬ್ಯಾರಿ ಹಾಡುಗಾರ ಹಾಗೂ ಕವಿ ಪಿ. ಎಂ. ಹಸನಬ್ಬ ಮೂಡುಬಿದರೆ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬ್ಯಾರಿ ಅಕಾಡಮಿಯ ಮಾಜಿ ಸದಸ್ಯರಾದ ಟಿ. ಕೆ. ಶರೀಫ್, ಮುಹಮ್ಮದ್ ಶರೀಫ್ ನಿರ್ಮುಂಜೆ, ಹಂಝ ಮಲಾ‌ರ್, ಮರಿಯಮ್ ಇಸ್ಮಾಯಿಲ್ ಮತ್ತು ಲೇಖಕಿ ಶಮೀಮಾ ಕುತ್ತಾರ್ ಗೌರವ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಬ್ಯಾರಿ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿತ್ತು.…

Read More

ಕಾಸರಗೋಡು : ಕಳೆದ ಎರಡು ದಶಕಗಳಿಂದ ಕಾಸರಗೋಡಿನ ಹೃದಯ ಭಾಗ ಕರಂದಕ್ಕಾಡಿನಲ್ಲಿ ಸಕ್ರಿಯವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತಿರುವ ‘ಪದ್ಮಗಿರಿ ಕಲಾ ಕುಟೀರ’ಕ್ಕೆ ಮಂಗಳೂರಿನ ‘ಟಾಪ್ ವಿಡಿಯೋ ಅಂಡ್ ಫೋಟೋ ಸಂಸ್ಥೆ’ಯವರು ಕುಡಿಯುವ ನೀರಿನ ಘಟಕವನ್ನು ದಿನಾಂಕ 20 ಜುಲೈ 2025ರಂದು  ಕೊಡುಗೆಯಾಗಿ ನೀಡಿದ್ದಾರೆ. ಸಂಸ್ಥೆಯ ಪದಾಧಿಕಾರಿಗಳಾದ ಚಂದ್ರಕಾಂತ ವೋರಾ (ಟಿಕ್ಕು) ಅವರು ಪ್ರಥಮ ನೀರಿನ ಲೋಟವನ್ನು ಖ್ಯಾತ ಮೂಳೆ ತಜ್ಞರಾದ ಡಾ. ಕೆ. ಕೆ. ಶಾನು ಭೋಗ್ ಅವರಿಗೆ ನೀಡಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಛಾಯಾಗ್ರಾಹಕ ಕೆ. ಗಣೇಶ್ ಶಣೈ, ಚಲನಚಿತ್ರ ನಟಿ ಶೋಭಾ ಶೆಟ್ಟಿ ಭಾಗವಹಿಸಿದ್ದರು. ರಂಗ ಚಿನ್ನಾರಿಯ ನಿರ್ದೇಶಕರು ಹಾಗೂ ಸಂಚಾಲಕರಾದ ಕಾಸರಗೋಡು ಚಿನ್ನಾ, ನಿರ್ದೇಶಕ ಕೆ. ಸತೀಶ್ ಚಂದ್ರ ಭಂಡಾರಿ, ಲೇಖಕಿ ವಿಜಯಲಕ್ಷ್ಮೀ ಶಾನುಭೋಗ್, ಸೂರ್ಯಕಾಂತಿ, ಸ್ವರ ಚಿನ್ನಾರಿಯ ಬಬಿತಾ ಆಚಾರ್ಯ, ಪದಾಧಿಕಾರಿಗಳು ಹಾಗೂ ಅಂತರ್ ಧ್ವನಿಯ ಗಾಯಕ ಗಾಯಕಿಯರು ಉಪಸ್ಥಿತರಿದ್ದರು.

Read More

ಮಂಗಳೂರು : ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಚು.ಸಾ.ಪ. ಮಂಗಳೂರು ವಲಯ ಕಾರ್ಯಕ್ರಮ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ -2’ ದಿನಾಂಕ 27 ಜುಲೈ 2025ರಂದು ಅಪರಾಹ್ನ 3-00 ಗಂಟೆಗೆ ಮಂಗಳೂರಿನ ಚಿಲಿಂಬಿಯಲ್ಲಿರುವ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಇವರ ಮನೆಯಲ್ಲಿ ನಡೆಯಲಿದೆ. ಕಲ್ಲಚ್ಚು ಪ್ರಕಾಶನ ಇದರ ಸಂಸ್ಥಾಪಕರಾದ ಕಲ್ಲಚ್ಚು ಮಹೇಶ್ ಆರ್. ನಾಯಕ್ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷಟ್ಟಿನ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ಟೀಚರ್ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಸಂಯೋಜಕರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಇದೇ ಸಂದರ್ಭದಲ್ಲಿ ಸಾಧಕರಿಗೆ ‘ಸಾಧಕಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.…

Read More

ಮಡಿಕೇರಿ : ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ/ ದಾಸ ಸಾಹಿತ್ಯ/ತತ್ವಪದ ಸಾಹಿತ್ಯ ಕುರಿತು ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊಂದಕ್ಕೆ ಬಹುಮಾನ ನೀಡುವ ಯೋಜನೆಯನ್ನು ರೂಪಿಸಿದೆ. 2024ರ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು. ಗ್ರಂಥ ಬಹುಮಾನವು ರೂಪಾಯಿ 25000 ಸಾವಿರದ ನಗದು ಬಹುಮಾನ ಒಳಗೊಂಡಿಗೆ. ಪ್ರಶಸ್ತಿಗೆ ಗ್ರಂಥ ಲೇಖಕರು, ಗ್ರಂಥ ಪ್ರಕಾಶಕರು 10 ಸೆಪ್ಟೆಂಬರ್ 2025ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಮೂನೆಯನ್ನು ವೆಬ್‍ಸೈಟ್ https://kanakadasaresearchcnter.karnataka.gov.in ನಲ್ಲಿ ಅಪಲೋಡ್ ಮಾಡಲಾಗಿದ್ದು, ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.6364529319 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಧಾರವಾಡ : ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ (ರಿ) ಧಾರವಾಡ ಮತ್ತು ಅಭಿನಯ ಭಾರತಿ (ರಿ.) ಧಾರವಾಡ ಇವರ ವತಿಯಿಂದ ಮನೋಹರ ಗ್ರಂಥಮಾಲಾ ಮತ್ತು ಕುತ೯ಕೋಟಿ ಮೆಮೋರಿಯಲ್ ಟ್ರಸ್ಟ್ ಸಂಸ್ಥೆಗಳ ಸಹಕಾರದೊಂದಿಗೆ ದಿನಾಂಕ 26 ಜುಲೈ 2025ರಂದು ಮನೋಹರ ಗ್ರಂಥಮಾಲೆಯ ಅಟ್ಟದಲ್ಲಿ ಬೆಳಿಗ್ಗೆ 11-30 ಗಂಟೆಗೆ ಜಿ.ಬಿ. ಜೋಶಿ ಮತ್ತು ಕೀರ್ತಿನಾಥ ಕುರ್ತಕೋಟಿ ಸ್ಮರಣಾರ್ಥ ದತ್ತಿ ಕಾರ್ಯಕ್ರಮವನ್ನು ಏರ್ಪಡಿಸಿದೆ. ಕಲ್ಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ಅಧ್ಯಯನಾಂಗದ ನಿರ್ದೇಶಕರಾದ ಡಾ. ಬಸವರಾಜ ಡೋಣೂರ ಅವರು ‘ಜಿ.ಬಿ. ಜೋಶಿಯವರ ಕಾದಂಬರಿ ‘ಧರ್ಮಸೆರೆ’ ಇದರ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮವು ಶ್ರೀ ಜಯತೀರ್ಥ ಜಹಗೀರದಾರ ಇವರ ದತ್ತಿ ಕೊಡುಗೆಯಾಗಿದ್ದು ಧಾರವಾಡದ ಸಾಹಿತ್ಯ ಸಂಸ್ಕೃತಿ ಪ್ರಿಯರು ಈ ಸಾಹಿತ್ಯದ ರಸದೂಟವನ್ನು ಸವಿಯಬೇಕೆಂದು ಅಭಿನಯ ಭಾರತಿ ಸಂಚಾಲಕರು ವಿನಂತಿಸುತ್ತಾರೆ.

Read More

ಬ್ರಹ್ಮಾವರ : ರಾಗ ಧನ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನಮಾಲಿಕೆ – 39’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ದಿನಾಂಕ 27 ಜುಲೈ 2025ರಂದು ಅಪರಾಹ್ನ 3-00 ಗಂಟೆಗೆ ಬ್ರಹ್ಮಾವರದ ಕುಂಜಾಲು ಶ್ರೀರಾಮ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ತಿಕ್ ಶ್ಯಾಮ್ ಮುಂಡೋಳುಮೂಲೆ ಮತ್ತು ವಿದುಷಿ ಧನ್ಯಾ ದಿನೇಶ್ ರುದ್ರಪಟ್ಣಂ ಇವರ ಹಾಡುಗಾರಿಕೆಗೆ ಪಕ್ಕವಾದ್ಯ – ವಯೊಲಿನ್ ನಲ್ಲಿ ಜನಾರ್ದನ ಎಸ್. ಬೆಂಗಳೂರು ಹಾಗೂ ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ.

Read More

ತುಮಕೂರು : ಶೈನಾ ಅಧ್ಯಯನ ಸಂಸ್ಥೆ ತುಮಕೂರು ಆಯೋಜಿಸುವ ಶ್ರೀ ಬಿ. ಚನ್ನಪ್ಪಗೌರಮ್ಮ “ವಚನ ಸಾಹಿತ್ಯ ಪ್ರಶಸ್ತಿ” ಪ್ರದಾನ ಸಮಾರಂಭ ಮತ್ತು ನುಡಿನಮನ ಕಾರ್ಯಕ್ರಮವು ದಿನಾಂಕ 27 ಜುಲೈ 2025ನೇ ಭಾನುವಾರ ಬೆಳಗ್ಗೆ ಘಂಟೆ 10.30ಕ್ಕೆ ತುಮಕೂರು ಮರಳೂರಿನ ಪ್ರಗತಿ ಬಡಾವಣೆಯಲ್ಲಿರುವ ಅಂಕಿತ ಶಾಲೆಯ ಹತ್ತಿರದ ಡಾ. ಬಿ. ಸಿ. ಶೈಲಾನಾಗರಾಜ್ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಶೈನಾ ಸಂಸ್ಥೆ ತುಮಕೂರು ಇದರ ಅಧ್ಯಕ್ಷರಾದ ದೊಂಬರನಹಳ್ಳಿ ನಾಗರಾಜು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ತುಮಕೂರು ನಗರದ ಮಾನ್ಯ ಶಾಸಕರಾದ ಶ್ರೀ ಜಿ. ಬಿ. ಜ್ಯೋತಿಗಣೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರಿನ ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷರಾದ ಶ್ರೀ ಮುರುಳಿ ಕೃಷ್ಣಪ್ಪ, ಸಹಕಾರ ಇಲಾಖೆ ತುಮಕೂರಿನ ನಿವೃತ್ತ ಸಹಾಯಕ ನಿಯಂತ್ರಕರಾದ ಶ್ರೀ ಪಿ. ಎನ್. ಶಿವರುದ್ರಪ್ಪ, ಮಹಿಳಾ ಬಸವ ಕೇಂದ್ರ ತುಮಕೂರಿನ ಅಧ್ಯಕ್ಷರಾದ ಶ್ರೀಮತಿ ಕಲ್ಪನಾ ಉಮೇಶ್ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ನಿವೃತ್ತ ಪ್ರಾಧ್ಯಾಪಕರು, ವಿದ್ವಾಂಸರು ಮತ್ತು ವಚನ ಸಾಹಿತ್ಯ ಚಿಂತಕರಾದ ತುಮಕೂರಿನ ಶ್ರೀ…

Read More

ಮೈಸೂರು : ಎನ್.ಇ.ಎಸ್. ಹವ್ಯಾಸಿ ರಂಗತಂಡ ಶಿವಮೊಗ್ಗ ಅರ್ಪಿಸುವ ರಾಷ್ಟ್ರದ ಖ್ಯಾತ ಬರಹಗಾರ ಆ್ಯಂಟನ್ ಚೆಕಾವ್ ರವರ ಸಣ್ಣ ಕಥೆಗಳನ್ನು ಆಧರಿಸಿದ ಡಾ. ಹೇಮಾಪಟ್ಟಣ ಶೆಟ್ಟಿ ವಿರಚಿತ ನಾಟಕ ‘ಚೆಕಾವ್ ಟು ಶಾಂಪೇನ್’ ಇದರ ಪ್ರದರ್ಶನವನ್ನು ದಿನಾಂಕ 27 ಜುಲೈ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ನಟನ ರಂಗಶಾಲೆಯಲ್ಲಿ ಆಯೋಜಿಸಲಾಗಿದೆ. ಡಾ. ಎನ್. ಕೆ. ಚಿದಾನಂದ ಸೊರಬ ಇವರು ನಿರ್ದೇಶನ ಮತ್ತು ರಂಗವಿನ್ಯಾಸ ಮಾಡಿದ್ದು, ಲಕ್ಷ್ಮಿ ಭದ್ರಾವತಿ ಪ್ರಸಾದನ ಮತ್ತು ವಸ್ತ್ರವಿನ್ಯಾಸ, ಹರಿಗೆ ಗೋಪಾಲ್ ಸ್ವಾಮಿ ಇವರು ಪರಿಕರ ಮತ್ತು ಬೆಳಕಿನ ವಿನ್ಯಾಸ ಹಾಗೂ ವಿನ್ಯಾಸ್ ಎನ್. ವೀಚಿ ಸಂಗೀತ ನಿರ್ವಹಣೆ ಮಾಡಿರುತ್ತಾರೆ.

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ – 3ರಲ್ಲಿ ಡಾ. ಶಿವರಾಮ ಕಾರಂತ ಇವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 25 ಜುಲೈ 2025ರಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಿ. ಯದುಪತಿ ಗೌಡ ಇವರ ಅಧ್ಯಕ್ಷತೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ರಾಜೇಶ್ ಬಿ. ಇವರು ಉಪನ್ಯಾಸ ನೀಡಲಿದ್ದಾರೆ. ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್ ಇವರು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Read More

ಸಾಹಿತಿಯಾಗಿ, ಉತ್ತಮ ವಾಗ್ಮಿಯಾಗಿ, ಪತ್ರಿಕೋದ್ಯಮಿಯಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣಕ್ಕೆ ದುಡಿದ ಒಬ್ಬ ಪ್ರಮುಖ ವ್ಯಕ್ತಿಯಾಗಿ, ಹೀಗೆ ಸಮಾಜದ ವಿವಿಧ ಮುಖಗಳಲ್ಲಿ ಸೇವೆ ಸಲ್ಲಿಸಿದವರು ಮುದವೀಡು ಕೃಷ್ಣರಾಯರು. 1874 ಜುಲೈ 24ರಂದು ಹನುಮಂತ ರಾವ್ ಮತ್ತು ಗಂಗಾಬಾಯಿ ಅವರ ಪುತ್ರನಾಗಿ ಬಾಗಲಕೋಟೆಯಲ್ಲಿ ಕೃಷ್ಣರಾಯರು ಜನಿಸಿದರು. ಇವರ ಹಿರಿಯರು ಆಂಧ್ರಪ್ರದೇಶದ ಕಡಪ ಜಿಲ್ಲೆಗೆ ಸೇರಿದ ಮುದವೀಡು ಎಂಬ ಗ್ರಾಮದಿಂದ ಬಂದವರು. ಆದಕಾರಣ ಇವರ ಹೆಸರಿನೊಂದಿಗೆ ಮುದವೀಡು ಹಾಸುಹೊಕ್ಕಾಗಿದೆ. ಬಾಲ್ಯದಲ್ಲಿ ತಂದೆ ತಾಯಿಯರ ಪ್ರೀತಿಯಿಂದ ವಂಚಿತರಾದ ಮುದವೀಡು ಕೃಷ್ಣರಾಯರು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದರು. ಇವರ ಆರಂಭದ ವಿದ್ಯಾಭ್ಯಾಸ ಕಾರವಾರದಲ್ಲಿ ಮತ್ತು ಮೆಟ್ರಿಕ್ ವಿದ್ಯಾಭ್ಯಾಸ ಧಾರವಾಡದಲ್ಲಿ ನಡೆಯಿತು. ಭಾರತದ ಸ್ವಾತಂತ್ರ್ಯಕ್ಕಾಗಿ ಆಂದೋಲನ ನಡೆಯುತ್ತಿದ್ದ ಸಮಯವದು. ಇದರಿಂದ ಪ್ರಭಾವಿತರಾದ ಕೃಷ್ಣರಾಯರು ವಿದ್ಯಾಭ್ಯಾಸವನ್ನು ಬದಿಗಿಟ್ಟು ಚಳುವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಲೋಕಮಾನ್ಯ ತಿಲಕರಿಂದ ಪ್ರೇರಣೆಗೊಂಡು ಅವರ ಅನುಯಾಯಿಯಾಗಿ ಗಣೇಶೋತ್ಸವದಲ್ಲಿ ಮತ್ತು 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿಯೂ ಸಕ್ರಿಯ ಕಾರ್ಯಕರ್ತರಾಗಿ ದುಡಿದರು. ಪಾನನವಿರೋಧ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕೆ ಎರಡು ವರ್ಷ ಕಾರಾಗೃಹ…

Read More