Author: roovari

ವಿಟ್ಲ : ನಾಟ್ಯ ವಿದ್ಯಾನಿಲಯ ಕುಂಬಳೆ ಇದರ ನೃತ್ಯಗುರುಗಳಾದ ವಿದುಷಿ ಡಾ. ವಿದ್ಯಾಲಕ್ಷ್ಮೀ ಇವರ ಶಿಷ್ಯೆ ವಿದುಷಿ ಸಿಂಚನ ಲಕ್ಷ್ಮೀ ಕೋಡಂದೂರು ಇವರ ಭರತನಾಟ್ಯ ರಂಗಪ್ರವೇಶದ ಸಮಾರಂಭವು ದಿನಾಂಕ 24 ಏಪ್ರಿಲ್ 2025ರ ಗುರುವಾರದಂದು ವಿಟ್ಲ ಗಾರ್ಡನ್ ಆಡಿಟೋರಿಯಂ ಇಲ್ಲಿ ನಡೆಯಿತು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಇದರ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದ್ವಾನ್ ಕೆ.ಚಂದ್ರಶೇಖರ ನಾವಡ ಮಾತನಾಡಿ “ಸಂಗೀತ ಹಾಗೂ ನೃತ್ಯ ಏಕಕಾಲಕ್ಕೆ ಎಲ್ಲರಿಗೂ ಒಲಿಯುವುದಿಲ್ಲ. ಆದರೆ ನಾಟ್ಯವಿದ್ಯಾನಿಲಯದ ಸಿಂಚನ ಅದೆಲ್ಲವನ್ನೂ ಮೀರಿದ ಸಾಧನೆಯನ್ನು ಮಾಡಿ ರಂಗಪ್ರವೇಶವನ್ನು ಮಾಡಿದ್ದಾಳೆ. ರಂಗಪ್ರವೇಶವು ನಿಂತ ನೀರಾಗದೆ ನಾದವು ನಿರಂತರ ಹರಿಯುತ್ತಿರಬೇಕು. ಭರತನಾಟ್ಯವೆಂಬ ಕಲೆಯ ಮೂಲಕ ಅನೇಕ ಶಿಷ್ಯಂದಿರನ್ನು ಬೆಳಕಿಗೆ ತಂದ ಡಾ. ವಿದ್ಯಾಲಕ್ಷ್ಮೀ ಅವರು ಜನಮೆಚ್ಚುವ ಸಾಧನೆಯನ್ನು ಮಾಡಿದ್ದಾರೆ. ಸಿಂಚನಲಕ್ಷ್ಮೀಯಂತಹ ಅನೇಕ ಪ್ರತಿಭೆಗಳನ್ನು ನೀಡಿ ಕಲೆಯ ಮೇಲಿನ ಪ್ರೀತಿಯನ್ನು ಅವರು ತೋರ್ಪಡಿಸಿದ್ದಾರೆ” ಎಂದರು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ಪ್ರದರ್ಶನ ನೀಡಿದ ವಿದುಷಿ ಸಿಂಚನ ಲಕ್ಷ್ಮೀ ಕೋಡಂದೂರು ಪುಷ್ಪಾಂಜಲಿ…

Read More

ಮಂಗಳೂರು : ಗುರು ವಿದುಷಿ ಶ್ರೀಮತಿ ಸೌಮ್ಯ ಸುಧೀಂದ್ರ ರಾವ್ ಇವರ ನೃತ್ಯ ಸುಧಾ ಸಂಸ್ಥೆಯ ‘ನೃತ್ಯೋತ್ಕರ್ಷ- 2025’ ಕಾರ್ಯಕ್ರಮವು ದಿನಾಂಕ 20 ಏಪ್ರಿಲ್ 2025ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮೃದಂಗ ವಿದ್ವಾನ್ ಶ್ರೀ ಹೆಚ್. ರವಿ ಕುಮಾರ್, ವಿದ್ವಾನ್ ಚಂದ್ರಶೇಖರ ನಾವಾಡ, ಗುರು ವಿದುಷಿ ಸುಮಂಗಲ ರತ್ನಾಕರ್ ರಾವ್ ಹಾಗೂ ಸಂಸ್ಥೆಯ ನಿರ್ದೇಶಕ ಡಾ ಸುಧೀಂದ್ರ ರಾವ್ ಪಾಲ್ಗೊಂಡರು . ಸಂಸ್ಥೆಯ ಐದು ವಿದುಷಿಯರಾದ ಹರ್ಷಿತಾ ಸಾಲ್ಯಾನ್, ಸಹನಾ ಹತ್ವಾರ್, ವಿಜೇತ ಮೊಂತೆರೋ, ಸರ್ವಮಂಗಲ ಹಾಗೂ ಸ್ನೇಹ ಆಚಾರ್ಯ ಇವರಿಗೆ ‘ನೃತ್ಯ ಸುಧಾ ಕುಸುಮ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ವಿದುಷಿ ಭಾಗೀರತಿ ಎಮ್ ಸ್ವಾಗತಿಸಿ, ವಿದುಷಿ ರಚನ ಶೆಟ್ಟಿ ಹಾಗೂ ವಿದುಷಿ ವೆನೆಸ್ಸಾ ಮೊಂತೆರೊ ಕಾರ್ಯಕ್ರಮ ನಿರೂಪಿಸಿ, ವಿದುಷಿ ನಿಧಿ ಡಿ. ಶೆಟ್ಟಿ ವಂದನಾರ್ಪಣೆಗೈದರು.…

Read More

ಪೆರ್ಲ : ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ‘ಪರಿಷತ್‌ನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಸಾಹಿತಿ, ಅಂಕಣಕಾರ ಹರೀಶ ಪೆರ್ಲ ಇವರನ್ನು ಪೆರ್ಲದಲ್ಲಿರುವ ಅವರ ನಿವಾಸ ‘ಗುಲಾಬಿ’ಯಲ್ಲಿ ದಿನಾಂಕ 26 ಏಪ್ರಿಲ್ 2025ರಂದು ಅಭಿನಂದಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷರಾದ ಪ್ರೊ. ಪಿ. ಎನ್. ಮುಡಿತ್ತಾಯ, ಮಹಮ್ಮದ್ ಪೆರ್ಲ, ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಧ್ಯಾಪಕ ಹರೀಶ್ ನಾಯಕ್, ಹರೀಶ ಪೆರ್ಲರ ಬದುಕು, ಬರಹ, ವ್ಯಕ್ತಿತ್ವದ ಕುರಿತು ಮಾತನಾಡಿದರು. ಗೀತಾ ಜಿ.ನಾಯಕ್, ವಿಜಯಲಕ್ಷ್ಮಿ ಪಿ. ಶೆಣೈ, ಆಯಿಷಾ ಎ. ಎ. ಪೆರ್ಲ, ಪ್ರೇಮಾ ಶೆಟ್ಟಿ…

Read More

ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು, ಸುರತ್ಕಲ್ ಹೋಬಳಿ ಘಟಕದ ವತಿಯಿಂದ ‘ಸಾಹಿತ್ಯ ಸಂಭ್ರಮ’ ಕಾರ್ಯಾಕ್ರಮವು ದಿನಾಂಕ 04 ಮೇ 2025ರಂದು ಸಂಜೆ ಘಂಟೆ 3.00 ರಿಂದ ಸುರತ್ಕಲ್ ವಿದ್ಯಾದಾಯಿನಿ ಸಂಕೀರ್ಣದ ವಿರಾಟ್ ಸಭಾಂಗಣದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಹಾಗು ಸಂಶೋಧಕಿಯಾದ ಡಾ. ಇಂದಿರಾ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆಯಾದ ಶಕುಂತಲಾ ಟಿ. ಶೆಟ್ಟಿ, ಕಾಟಿಪಳ್ಳ ಬಿ. ಎನ್. ಜಿ. ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಪಿ . ದಯಾಕರ್, ಸಾಹಿತಿ ಡಾ. ಗಣೇಶ್ ಅಮೀನ್ ಸಂಕಮಾರ್, ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೇಂದ್ರೀಯ ಕಾರ್ಯಕಾರಿ ಸದಸ್ಯ ಡಾ. ಮಾಧವ ಎಂ. ಕೆ. ಭಾಗವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯದರ್ಶಿ ವಿನಯ ಆಚಾರ್,…

Read More

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ, ಕೇಂದ್ರ ಸಮಿತಿಯ ಸಹಕಾರದಲ್ಲಿ ಬೇಕಲ ರಾಮ ನಾಯಕ ಸ್ಮರಣಾಂಜಲಿಯ ಅಂಗವಾಗಿ ವಸಂತ ಚುಟುಕು ಕವಿಗೋಷ್ಠಿಯು ದಿನಾಂಕ 27 ಏಪ್ರಿಲ್ 2025ರ ಭಾನುವಾರದಂದು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಕೆ. ನರಸಿಂಹ ಭಟ್ ಏತಡ್ಕ ಮಾತನಾಡಿ “ಚುಟುಕುಗಳು ಅಂತ್ಯ ಪ್ರಾಸವಿರುವ ನಾಲ್ಕು ಸಾಲಿನ ಕವನ. ಹನಿಗವನಕ್ಕೂ ಚುಟುಕಿಗೂ ವ್ಯತ್ಯಾಸ ಇದೆ. ಚುಟುಕುಗಳು ಸಂದೇಶವನ್ನು ಕೊಡುವ ಹಾಗಿರಬೇಕು. ಸಮಯೋಚಿತ ಚುಟುಕುಗಳು ಆಸಕ್ತರಿಂದ ಹೆಚ್ಚು ಮೆಚ್ಚುಗೆಯನ್ನು ಪಡೆಯುತ್ತವೆ. ಯಾವುದೇ ವಿಷಯವನ್ನಾದರೂ ಚುಟುಕನ್ನಾಗಿಸುವ ಸಾಮರ್ಥ್ಯ ಚುಟುಕು ಕವಿಗಿರಬೇಕು. ಇದು ಅಭ್ಯಾಸದಿಂದ ಸಿದ್ಧಿಸುತ್ತದೆ” ಎಂದರು. ಚುಟುಕು ಕವಿಗೋಷ್ಠಿಯಲ್ಲಿ ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು, ನಾರಾಯಣ ನಾಯ್ಕ ಕುದುಕೋಳಿ, ಶಾರದಾ ಮೊಳೆಯಾರ್ ಎಡನೀರು, ಹರ್ಷಿತಾ ಶಾಂತಿಮೂಲೆ, ಶಶಿಕಲಾ ಟೀಚರ್ ಕುಂಬಳೆ, ರೇಖಾ ರೋಶನ್ ಕಾಸರಗೋಡು, ಚಿತ್ರಕಲಾ…

Read More

ಬಳ್ಳಾರಿ : ಬಳ್ಳಾರಿಯ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಆಯೋಜಿಸಿದ್ದ ನಾಡೋಜ ಬೆಳಗಲ್ಲು ವೀರಣ್ಣ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 27 ಏಪ್ರಿಲ್ 2025ರ ಭಾನುವಾರ ಸಂಜೆ ಧಾರವಾಡದ ಡಾ. ‌ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಹಾಗೂ ಸಾಹಿತಿಯಾದ ಡಾ.‌ ವಸುಂಧರಾ ಭೂಪತಿ ಮಾತನಾಡಿ “ತೊಗಲು ಗೊಂಬೆ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಕರ್ನಾಟಕ ಸರಕಾರ ಪ್ರಶಸ್ತಿ ಆರಂಭಿಸಬೇಕು. ಅಳಿವಿನಂಚಿನಲ್ಲಿರುವ ತೊಗಲುಗೊಂಬೆಯಾಟಕ್ಕೆ ಆಧುನಿಕ ಸ್ಪರ್ಶ ನೀಡಿ ದೇಶ ವಿದೇಶಗಳಲ್ಲಿ ತಮ್ಮ‌ ಮೇಳದ ಮೂಲಕ ಪ್ರದರ್ಶನ ನೀಡಿರುವ ಇವರ ಜೀವನ, ಜಾನಪದ ಮತ್ತು ರಂಗಭೂಮಿಯ ಕೊಡುಗೆಯನ್ನು‌ ಪಠ್ಯದಲ್ಲಿ ಅಳವಡಿಸಿ‌ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಐದು ದಶಕಗಳ‌ಕಾಲ ವಾಸವಿದ್ದ ನಿವಾಸದ ಸಮೀಪದ ರೇಡಿಯೋ ಪಾರ್ಕ್ ರಸ್ತೆಗೆ ನಾಡೋಜ ಬೆಳಗಲ್ಲು ವೀರಣ್ಣ ಹೆಸರಿಡಬೇಕು ಎಂದು ಮಹಾನಗರ ಪಾಲಿಕೆಗೆ ಮನವಿ ಮಾಡಿದರು. ನಾಡೋಜ ಬೆಳಗಲ್ಲು ವೀರಣ್ಣ…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಆಯೋಜಿಸುವ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಕೃತಿ – 2025’ ದಿನಾಂಕ 30 ಏಪ್ರಿಲ್ ಹಾಗೂ 01 ಮೇ 2025ರಂದು ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿಗಳು, ಸಂಶೋಧಕರು, ವಿದ್ವಾಂಸರಾದ ಪಾದೆಕಲ್ಲು ವಿಷ್ಣುಭಟ್ಟ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದಂಗಳವರು ಹಾಗೂ ಕಿರಿಯ ಸ್ವಾಮಿಗಳಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀ ಪಾದಂಗಳವರು ದೀಪ ಪ್ರಜ್ವಲನಗೈದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕ. ಸಾ. ಪ. ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಾಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ…

Read More

ಬೆಂಗಳೂರು : ಬಸವ ವೇದಿಕೆಯು ಕಳೆದ 29 ವರ್ಷಗಳಿಂದ ನಾಡಿನ ವಿವಿಧ ಕ್ಷೇತ್ರಗಳ ಮಹಾನ್ ಸಾಧಕರುಗಳಿಗೆ “ಬಸವ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾ ಬಂದಿದೆ.ಈ ದಿಸೆಯಲ್ಲಿ ಹಲವಾರು ಹಿರಿಯ ಸಾಹಿತಿಗಳಿಗೆ ನಾಡಿನ ಪ್ರತಿಷ್ಠಿತ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ಈಗಾಗಲೇ ನೀಡಿ ಗೌರವಿಸಿದೆ ಈ ವರ್ಷ ಶರಣ ಚಿಂತಕರು 87ನೇ ಅಖಿಲ ಭಾರತ ಕನ್ನಡ ಸಮ್ಮೇಳನ ಅಧ್ಯಕ್ಷರಾಗಿದ್ದ ನಾಡೋಜ ಗೊ. ರು. ಚನ್ನಬಸಪ್ಪನವರಿಗೆ 2025ನೇ ಸಾಲಿನ ‘ಬಸವ ಶ್ರೀ’ ಪ್ರಶಸ್ತಿಯನ್ನು 03 ಮೇ 2025ರ ಶನಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೀಡಿ ಗೌರವಿಸುತ್ತಿದೆ. ಇದೇ ಸಂದರ್ಭದಲ್ಲಿ ‘ವಚನ ಸಾಹಿತ್ಯ ಶ್ರೀ’ ಪ್ರಶಸ್ತಿಯನ್ನು ಬಿಜಾಪುರದ ಬಿ. ಎಲ್. ಡಿ. ಸಂಸ್ಥೆಯ ವಚನ ಪಿತಾಮಹ ಹಾಗೂ ಡಾ ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರಕ್ಕೆ ಹಾಗೂ ಪ್ರಖ್ಯಾತ ವಚನ ಸಂಗೀತ ಗಾಯಕಿ ಎಂ. ಡಿ. ಪಲ್ಲವಿ ಇವರಿಗೆ ನೀಡಲಾಗುತ್ತಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವ ವೇದಿಕೆಯ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್…

Read More

ಬಂಟ್ವಾಳ : ಮಂಗಳೂರು ಹಾಗೂ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವವು ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಿನಾಂಕ 26 ಏಪ್ರಿಲ್ 2025ರಂದು ನಡೆಯಿತು. ಇದೇ ಸಮಾರಂಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಇವರುಗಳಿಗೆ ಗೌರವ ಸಮ್ಮಾನ ನೀಡಲಾಯಿತು. ರಂಗಕರ್ಮಿ-ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಮಾತನಾಡಿ “ಮಕ್ಕಳನ್ನು ಬಾಲ್ಯದಲ್ಲಿಯೇ ಸಾಂಸ್ಕೃತಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮುಂದೆ ಅವರ ಆ ಕ್ಷೇತ್ರದಲ್ಲಿ ಸಾಧನೆ ಮಾಡುವ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುತ್ತಾರೆ” ಎಂದರು. ಪುತ್ತೂರಿನ ಬಿಲ್ಡರ್ ಅಬ್ದುಲ್ ರೆಹಮಾನ್ ಮಾತನಾಡಿ “ವಿದ್ಯಾರ್ಥಿಗಳು ಒಂದೇ ತಾಯಿಯ ಮಕ್ಕಳ ರೀತಿ ಕಲಿತು ತಮ್ಮ ಸಾಧನೆಯ ಮೂಲಕ ವಿದ್ಯಾ ಸಂಸ್ಥೆ, ಹೆತ್ತವರಿಗೆ ಕೀರ್ತಿ ತರುವ ಜತೆಗೆ ದೇಶದ ಆಸ್ತಿಯಾಗಬೇಕಿದೆ” ಎಂದರು. ಕಾಲೇಜಿನ ಪ್ರಾಂಶುಪಾಲ ರಾಕೇಶ್‌ ಕುಮಾರ್ ಮಾತನಾಡಿ “ಮೈಟ್ ಕಾಲೇಜು 2001ರಲ್ಲಿ ಮಂಗಳೂರಿನ…

Read More

ಮಡಿಕೇರಿ : ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇದರ ವತಿಯಿಂದ ಕಾಲೇಜು ಸಭಾಂಗಣದಲ್ಲಿ ‘ಕಲೋತ್ಸವ -2025’ ಜಿಲ್ಲಾ ಮಟ್ಟದ ಅಂತ‌ರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎನ್. ಪೊನ್ನಣ್ಣ “ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದೊಂದಿಗೆ ಕಲೆ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಶನಕ್ಕೆ ಎಲ್ಲರೂ ಶ್ರಮಪಡಬೇಕು. ಪ್ರತಿಯೊಬ್ಬರಲ್ಲಿಯೂ ಸಹ ಒಂದಲ್ಲ ಒಂದು ರೀತಿ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಭವಿಷ್ಯದಲ್ಲಿ ಸ್ಮರಿಸುವಂತಹ ಬದುಕನ್ನು ಕಟ್ಟಿಕೊಳ್ಳಬೇಕು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಇಂತಹ ಕಲೋತ್ಸವ ಕಾರ್ಯಕ್ರಮಗಳು ಪ್ರತಿಯೊಬ್ಬ…

Read More