Author: roovari

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ 2025ನೆಯ ಸಾಲಿನ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಪಿ.ಸಿ. ಅಂಥೋನಿ ಸ್ವಾಮಿ ಮತ್ತು ಬಿ.ಎಸ್. ತಲ್ವಾಡಿಯವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಫಾದರ್ ಚೌರಪ್ಪ ಸೆಲ್ವರಾಜ್ ಸಾಹಿತ್ಯಕ, ಸಾಂಸ್ಕೃತಿಕ ಬಳಗದಲ್ಲಿ ಚಸರಾ ಎಂದೇ ಪರಿಚಿತರು. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಚಸರಾ ಚರ್ಚ್ಗಳಲ್ಲಿ ಕನ್ನಡ ಬಳಕೆ ಮತ್ತು ಕನ್ನಡಿಗರಿಗೆ ದೊರಕಬೇಕಾದ ಸವಲತ್ತುಗಳ ಕುರಿತಾಗಿ ಸುದೀರ್ಘ ಹೋರಾಟ ಮಾಡಿದರು. ಪ್ರಗತಿಪರ ಚಳುವಳಿಗೆ ಜೊತೆಗೆ ಸದಾ ಇರುತ್ತಿದ್ದ ಚಸರಾ ಸ್ವತ: ಉತ್ತಮ ಬರಹಗಾರರು, ಕ್ರೈಸ್ತ ಸಾಹಿತ್ಯ ಮತ್ತು ಸಂಗೀತಕ್ಕೆ ಘನತೆಯನ್ನು ತಂದು ಕೊಟ್ಟರು. 16 ಕನ್ನಡ ಕ್ರೈಸ್ತ ಭಕ್ತಿಗೀತೆಗಳ ಜೊತೆಗೆ 200ಕ್ಕೂ ಹೆಚ್ಚು ಕ್ರೈಸ್ತ ಗೀತೆಗಳಿಗೆ ಸಾಹಿತ್ಯ ರಚನೆ ಮಾಡಿದ್ದಾರೆ. ಅವರ ನೆನಪಿನಲ್ಲಿ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಚಲನ ಬಳಗದವರು ಸ್ಥಾಪಿಸಿದ್ದು, ಪ್ರತಿ ವರ್ಷ ಒಬ್ಬ ಪ್ರತಿಭಾವಂತ ಕ್ರೈಸ್ತ ಸಾಹಿತಿ…

Read More

ಧಾರವಾಡ : 2024ನೇ ಸಾಲಿನ ಸುನಂದಾ ಬೆಳಗಾಂವಕರ ಕಾದಂಬರಿ ಪ್ರಶಸ್ತಿಗೆ ಶ್ರೀ ಎಂ. ಆರ್. ದತ್ತಾತ್ರಿ ಇವರ ‘ಸರ್ಪಭ್ರಮೆ’ ಕಾದಂಬರಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ಒಂದು ಸಾಂಕೇತಿಕ ಮೊತ್ತ, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ. ಈ ಸ್ಪರ್ಧೆಗೆ ಯುವ ವಿಮರ್ಶಕ ಡಾ. ಸುಭಾಷ್ ಪಟ್ಟಾಜೆ ಮತ್ತು ಪ್ರಬುದ್ಧ ಓದುಗ ಡಾ. ಪ್ರಶಾಂತ್ ಮಾಡಳ್ಳಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ವರ್ಷ 30ಕ್ಕೂ ಅಧಿಕ ಕಾದಂಬರಿಗಳು ಬಂದಿದ್ದು, ಕಳೆದ ವರ್ಷದಂತೆ ಈ ವರ್ಷವೂ ಪ್ರಶಸ್ತಿ ವಿಜೇತ ಕಾದಂಬರಿಯಾದ ‘ಸರ್ಪಭ್ರಮೆ’ಯನ್ನು ಓದುಗರೇ ಕಳಿಸಿದ್ದು ವಿಶೇಷ. ಪ್ರಶಸ್ತಿ ಪ್ರದಾನ ಸಮಾರಂಭವು 19 ಎಪ್ರಿಲ್ 2025ರ ಶನಿವಾರದಂದು ಧಾರವಾಡದಲ್ಲಿ ಜರುಗಲಿದೆ.

Read More

ಉಡುಪಿ : ಕೊಡವೂರಿನ ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನ ಮತ್ತು ನೃತ್ಯ ನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯ ಸರಣಿ ‘ನೃತ್ಯ ಶಂಕರ’ ಇದರ 88ನೇ ಕಾರ್ಯಕ್ರಮ ದಿನಾಂಕ 17 ಮಾರ್ಚ್ 2025ರಂದು ಸಂಜೆ ಘಂಟೆ 6.30 ರಿಂದ ಶ್ರೀ ಕ್ಷೇತ್ರದ ವಸಂತ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದುಷಿ ಯುಕ್ತಿ ಉಡುಪ ಬಳ್ಕೂರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ಯುಕ್ತಿ ಉಡುಪ : ಶ್ರೀ ಬಿ. ರಾಘವ ಉಡುಪ ಹಾಗೂ ಶ್ರೀಮತಿ ಶ್ರೀ ಕಾಂತಿ ಉಡುಪ ಇವರ ಪುತ್ರಿಯಾದ ಯುಕ್ತಿ ಉಡುಪ ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ಗುರು ವಿದುಷಿ ಶ್ರೀಮತಿ ಪ್ರವಿತ ಅಶೋಕ್ ಇವರ ಬಳಿ ಕಳೆದ 12 ವರ್ಷಗಳಿಂದ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ. 2022ರಲ್ಲಿ ವಿದ್ವತ್ ಅಂತಿಮವನ್ನು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಇವರು ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂ. ಬಿ. ಎ. ಪದವಿಯನ್ನು ಪೂರೈಸಿದ್ದಾರೆ. ಕಳೆದ ವರ್ಷ ತನ್ನ ಸಹೋದರಿಯಾದ ಸುನಿಧಿ ಉಡುಪ ಇವರೊಂದಿಗೆ ಭರತನಾಟ್ಯ ರಂಗಪ್ರವೇಶವನ್ನು…

Read More

ಹೊಸನಗರ : ಹೊಂಬುಜ ಜೈನ ಮಠದ ಪ್ರಸಕ್ತ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ಕರ್ನಾಟಕ ಸಂಸ್ಕೃತ ವಿ. ವಿ. ಇದರ ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಮೈಸೂರಿನ ಪ್ರೊ. ಪದ್ಮಾ ಶೇಖರ್ ಇವರಿಗೆ ನೀಡಲಾಗುವುದು ಎಂದು ಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಘೋಷಿಸಿದ್ದಾರೆ. ಈ ಪ್ರಶಸ್ತಿಯು 51 ಸಾವಿರ ರೂ. ನಗದು ಪುರಸ್ಕಾರ ಹೊಂದಿದ್ದು, 21 ಮಾರ್ಚ್ 2025ರಂದು ಜರುಗುವ ಹೊಂಬುಜ ಮಠದ ವಾರ್ಷಿಕ ಮಹಾರಥ ಯಾತ್ರಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಕನ್ನಡ, ಸಂಸ್ಕೃತ, ಇಂಗ್ಲಿಷ್, ಪ್ರಾಕೃತ ಭಾಷೆ ಮತ್ತು ಜೈನ ಸಾಹಿತ್ಯ ಕುರಿತಂತೆ ವಿಶೇಷ ಅಧ್ಯಯನ ಮತ್ತು ಅಧ್ಯಾಪನಾ ನಡೆಸಿ ಸಾಹಿತ್ಯ ವಿಮರ್ಶೆ, ಸಂಶೋಧನೆ, ಕಾವ್ಯ, ಜೀವನ ಚರಿತ್ರೆ ಸೇರಿದಂತೆ ಬಹು ಸಾಹಿತ್ಯಿಕ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ಮುಂದಾಳತ್ವದಲ್ಲಿ 6,000ಕ್ಕೂ ಹೆಚ್ಚು ಪ್ರಾಚೀನ ತಾಳಪತ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಪಿ. ಎಚ್‌. ಡಿ. ಸಂಶೋಧಕರಿಗೆ ಮಾರ್ಗದರ್ಶಕರಾಗಿ ಜೈನ ಸಾಹಿತ್ಯ, ಕನ್ನಡ ಸಾಹಿತ್ಯ,…

Read More

ಧಾರವಾಡ : ಕನ್ನಡದ ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ,ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕ. ಡಾ.ಪಂಚಾಕ್ಷರಿ ಹಿರೇಮಠ ಇವರು ದಿನಾಂಕ 14 ಮಾರ್ಚ್ 2025 ರಂದು ಧಾರವಾಡದ ಜಯನಗರದಲ್ಲಿನ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ.ಪಂಚಾಕ್ಷರಿ ಹಿರೇಮಠ ಅವರು ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 6 ಜನವರಿ 1933ರಂದು ಜನಿಸಿದ್ದಾರೆ. ನಿಜವಾದ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಕವಿ, ಬಹುಭಾಷಾ ವಾಗ್ಮಿ, ಕಥೆಗಾರ, ಪ್ರಬಂಧಕಾರ, ವಿಮರ್ಶಕ, ಅನುವಾದಕ ಎಂದು ಹೆಸರುವಾಸಿಯಾಗಿದ್ದಾರೆ. ವಿದ್ಯಾವಾಚಸ್ಪತಿ ಬಿರುದಾಂಕಿತರಾದ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ…

Read More

ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಕನ್ನಡ ಚುಟುಕು ರಚನಾ ಸ್ಪರ್ಧೆ -2025 ನಡೆಯಲಿದೆ. ಸ್ಪರ್ಧೆಗೆ ವಿಷಯ ನಿರ್ಬಂಧ ಇಲ್ಲ. ಒಬ್ಬರು 4 ಸಾಲಿನ ಉತ್ತಮ ಎನಿಸುವ ಐದು ಚುಟುಕವನ್ನು ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ಕಾಸರಗೋಡು ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಂಘಟಕರ ತೀರ್ಮಾನವೇ ಅಂತಿಮ. ಆಸಕ್ತರು 15 ಏಪ್ರಿಲ್ 2025ರ ಮೊದಲು 9746093552 ಅಥವಾ 9633073400 ಸಂಖ್ಯೆಗೆ ವಾಟ್ಸಪ್ ಮೂಲಕ ಚುಟುಕಗಳನ್ನು ಕಳುಹಿಸಬಹುದು. ಚುಟುಕಗಳ ಜತೆಗೆ ಸ್ಪಷ್ಟ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು. ಎಂದು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರು ತಿಳಿಸಿದ್ದಾರೆ.

Read More

ಬೆಂಗಳೂರು : ಕಲಾವಿಲಾಸಿ ತಂಡದ ಕಲಾವಿದರು ಪ್ರಸ್ತುತ ಪಡಿಸುವ ‘ಕ್ರಾಂತಿ ಬಂತು # ಕ್ರಾಂತಿ’ ಎಂಬ ನಾಟಕ ಪ್ರದರ್ಶನವನ್ನು ದಿನಾಂಕ 16 ಮಾರ್ಚ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರಿನ ಎನ್.ಆರ್. ಕಾಲೋನಿಯ ಡಾ. ಸಿ. ಅಶ್ವತ್ಥ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಯುವ ನಿರ್ದೇಶಕ ಅಭಿಷೇಕ ಚಕ್ರಣ್ಣವರ ನಿರ್ದೇಶಿಸುತ್ತಿರುವ ನಾಟಕವನ್ನು ಹಿರಿಯ ರಂಗಕರ್ಮಿ ಮಹಾದೇವ ಹಡಪದ ಇವರು ವಿನ್ಯಾಸ ಮಾಡಿದ್ದಾರೆ. ನಾಟಕದ ಅವಧಿ 100 ನಿಮಿಷಗಳು. ಹೆಚ್ಚಿನ ಮಾಹಿತಿಗೆ 8861465482 ಸಂಖ್ಯೆಗೆ ಕರೆ ಅಥವಾ ವಾಟ್ಸಪ್‌ ಮಾಡಬಹುದು. ‘ಕ್ರಾಂತಿ ಬಂತು # ಕ್ರಾಂತಿ’ ನಾಟಕವನ್ನು ಸಾಹಿತಿ ಪಿ. ಲಂಕೇಶ್‌ ಅವರ ‘ಕ್ರಾಂತಿ ಬಂತು ಕ್ರಾಂತಿ’ ನಾಟಕದ ಪಠ್ಯವನ್ನು ಪ್ರಸ್ತುತಕ್ಕೆ ಅಳವಡಿಸಿಕೊಂಡು ಕಟ್ಟಲಾಗಿದೆ. ಈ ನಾಟಕವು ಮೊದಲ ಬಾರಿಗೆ ಪ್ರಕಟವಾಗಿದ್ದು 1971ರಲ್ಲಿ. ಸಾಮಾಜಿಕ ಮತ್ತು ರಾಜಕೀಯ ಪರಿಸ್ಥಿತಿಗಳಲ್ಲಿ ಅಂದಿಗೂ – ಇಂದಿಗೂ ಸಾಕಷ್ಟು ಬದಲಾವಣೆಗಳು ಕಂಡುಬಂದರೂ, ಆ ಬದಲಾದ ಪರಿಸ್ಥಿತಿಗಳು ತಮ್ಮ ಮೂಲ ಸ್ವರೂಪವನ್ನು ಹಾಗೆಯೇ ಉಳಿಸಿಕೊಂಡಿರುವುದು ನೋವಿನ ಸಂಗತಿ. ಸಮಾಜವಾದ, ಸಮತಾವಾದ, ಕ್ರಾಂತಿಯಂತಹ…

Read More

ಐರೋಡಿ : ಯಕ್ಷಗಾನ ಕಲಾಕೇಂದ್ರ (ರಿ.) ಹಂಗಾರಕಟ್ಟೆ – ಐರೋಡಿ ಆಯೋಜಿಸುವ ‘ನಲಿ- ಕುಣಿ’ ಯಕ್ಷಗಾನ ತರಬೇತಿ ಶಿಬಿರ – 2025ಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದು. ಕಳೆದ 53 ವರ್ಷಗಳಿಂದ ಯಕ್ಷಗಾನ ಕ್ಷೇತ್ರಕ್ಕೆ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸಂಸ್ಥೆ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ಮುಖ್ಯೋಪಾಧ್ಯಾಯ ದಿವಂಗತ ಐರೋಡಿ ಸದಾನಂದ ಹೆಬ್ಬಾರರಿಂದ ಸ್ಥಾಪಿಸಲ್ಪಟ್ಟು ದಿವಂಗತ ನಾರ್ಣಪ್ಪ ಉಪ್ಪೂರರು ಸ್ಥಾಪಕ ಪ್ರಾಚಾರ್ಯರಾಗಿದ್ದ, ದಿ. ಕಾಳಿಂಗ ನಾವಡರಂಥ ಹಲವಾರು ಶ್ರೇಷ್ಠ ಕಲಾವಿದರನ್ನು ಯಕ್ಷಲೋಕಕ್ಕೆ ನೀಡಿದ ಸಂಸ್ಥೆ ಇದು. ಐವತ್ತೆರಡು ವರ್ಷದ ಅನುಭವ ಹೊಂದಿರುವ ಈ ಸಂಸ್ಥೆಯು ಕಳೆದ ಹನ್ನೆರಡು ವರ್ಷಗಳಿಂದ ಮಕ್ಕಳಿಗಾಗಿ ಯಕ್ಷಗಾನ ತರಬೇತಿ ಶಿಬಿರವನ್ನು ನಡೆಸುತ್ತಾ ಬಂದಿದೆ. ಈ ವರ್ಷ ದಿನಾಂಕ 13 ಏಪ್ರಿಲ್ 2025ರ ಆದಿತ್ಯವಾರದಿಂದ 03 ಮೇ 2025ರ ಶನಿವಾರದ ವರೆಗೆ ಬೆಳಿಗ್ಗೆ ಘಂಟೆ 9.15 ರಿಂದ ಮಧ್ಯಾಹ್ನ ಘಂಟೆ 1.15ರ ತನಕ ಶಾಲಾ ವಿದ್ಯಾರ್ಥಿಗಳಿಗಾಗಿ “ನಲಿ-ಕುಣಿ” ಎಂಬ ಯಕ್ಷಗಾನ…

Read More

ಉಡುಪಿ : ಭಾವನಾ ಫೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೊ ಸಂಯೋಜಿಸುವ ‘ಬಾಲ ಲೀಲಾ -2025’ ಚಿಣ್ಣರ ಬೇಸಿಗೆ ಶಿಬಿರವನ್ನು ದಿನಾಂಕ 10 ಏಪ್ರಿಲ್ 2025ರಿಂದ 13 ಏಪ್ರಿಲ್ 2025ರವರೆಗೆ ಬೆಳಗ್ಗೆ 9-00 ಗಂಟೆಯಿಂದ ಸಂಜೆ 5-00 ಗಂಟೆ ತನಕ ಹಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ನೋಂದಣಿಗಾಗಿ ಸಂಪರ್ಕಿಸಿರಿ : ವಿಶು ರಾವ್ ಹಾವಂಜೆ 9880052105 ಜನಾರ್ದನ ಹಾವಂಜೆ 9845650544

Read More

ಉಡುಪಿ : ರಂಗ ಭಾಷೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ಕಲಾವಿದರುಗಳಿಗೆ ಹಾಗೂ ರಂಗಾಸಕ್ತರಿಗೆ ಮತ್ತೊಂದು ಹೆಜ್ಜೆ. ಪ್ರೇಕ್ಷಕರು – ವೀಕ್ಷಕರು ಮರೆಯಲಾಗದ ಕಲಾವಿದರಾಗ ಬಯಸುವ ಮನಗಳಿಗೆ, ಒಂದಷ್ಟು ಶಕ್ತಿ – ಬಣ್ಣ ತುಂಬಿ, ಅದ್ಭುತ ಕಲಾವಿದರಾಗಬೇಕೆಂಬ ಆಸೆಯನ್ನು ತನ್ನೊಳಗೆ ತುಂಬಿಕೊಂಡಿರುವ ಆಸಕ್ತರಿಗೆ, ಆ ಯಶಸ್ಸಿನ ದಾರಿಯ ಹುಡುಕಾಟಕ್ಕೆ ಇಂಬು ಕೊಡುವ ಪ್ರಕ್ರಿಯೆ…. ಎರಡು ದಿನಗಳ ವಿವಿಧ ರಂಗ ತರಬೇತಿಯ ಸರಣಿ ಕಾರ್ಯಾಗಾರವು ಉಡುಪಿ ರಂಗಭೂಮಿ (ರಿ.) ವತಿಯಿಂದ ದಿನಾಂಕ 29 ಮತ್ತು 30 ಮಾರ್ಚ್ 2025ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಹೆಸರಾಂತ ರಂಗ ನಿರ್ದೇಶಕ, ಝೀ ಟಿವಿಯ ಡ್ರಾಮಾ ಜ್ಯೂನಿಯರ್ ಖ್ಯಾತಿಯ ಮತ್ತು ರಂಗಭೂಮಿಯು ಆಯೋಜಿಸುವ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಮೂರು ಬಾರಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ವಿಜೇತ ಶ್ರೀ ಮಂಜುನಾಥ ಎಲ್. ಬಡಿಗೇರ್ ಇವರಿಂದ ಎರಡು ದಿನಗಳ ಅಭಿನಯ ಕೇಂದ್ರಿತ ರಂಗ ತರಬೇತಿ ಶಿಬಿರ. ಎರಡು ದಿನಗಳ ರಂಗ ತರಬೇತಿ ಶಿಬಿರದಲ್ಲಿ ಭಾಗವಹಿಸಲು,…

Read More