Author: roovari

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕಾಟಿಪಳ್ಳದ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಆಯೋಜಿಸಿದ್ದ ವೃತ್ತಿಪರ ಯಕ್ಷಗಾನ ಮೇಳದ ಪ್ರಥಮ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ ಅವರ ಸಂಸ್ಮರಣಾ ಗೋಷ್ಠಿ ಕಾರ್ಯಕ್ರಮವು ದಿನಾಂಕ 12 ಅಕ್ಟೋಬರ್ 2025ರ ಭಾನುವಾರದಂದು ಮಂಗಳೂರಿನ ತುಳು ಸಾಹಿತ್ಯ ಅಕಾಡೆಮಿಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಯಕ್ಷಗಾನ ತಜ್ಞ ಪ್ರಭಾಕರ ಜೋಶಿ ಮಾತನಾಡಿ “ಮಹಿಳಾ ಕಲಾವಿದೆಯಾಗಿ ಮಾತ್ರವಲ್ಲ, ಭಾಗವತಿಕೆ ವಲಯದಲ್ಲೇ ಪ್ರಥಮರ ಸಾಲಿನಲ್ಲಿ ನಿಲ್ಲುವ ಲೀಲಾವತಿ ಬೈಪಾಡಿತ್ತಾಯ ಅವರ ಯಕ್ಷಗಾನ ಪ್ರಾವೀಣ್ಯವು ‘ಲೀಲಾವತಿ ಪ್ರಜ್ಞೆ’ಯಾಗಿ ಕಲಾಕ್ಷೇ ತ್ರದಲ್ಲಿ ಪುನರುತ್ಥಾನಗೊಳ್ಳಬೇಕು. ಯಕ್ಷಗಾನದಲ್ಲಿ ಮಹಿಳೆಯರ ಚಾಪು ಮೂಡಿ ವರ್ಷಗಳು ಅನೇಕ ಆಗಿವೆ. ಆದರೆ ಪೂರ್ಣಾವಧಿ ಕಲಾವಿದೆಯಾಗಿ, ವೃತ್ತಿಪರತೆಯನ್ನು ಮೂಡಿಸಿದ ಮೊದಲಿಗರು ಲೀಲಾವತಿ. ಅವರಿಗೆ ಆರಂಭದಲ್ಲಿ ಆರ್ಥಿಕ ಬಡತನ ಇದ್ದರೂ ಕಲಾಶ್ರೀಮಂತಿಕೆ ಇತ್ತು. ರಾಗ, ಲಯ, ತಾಳ, ಕಾಲಪ್ರಭೇದ ಅರಿತು ಭಾಗವತಿಕೆ ಮಾಡಿ ಅವರು ಯಕ್ಷಗಾನದ ಗುರುವಾಗಿಯೂ ಹೆಸರು ಮಾಡಿದ್ದಾರೆ. ನಿಷ್ಕಲ್ಮಶ, ಗಂಭೀರ ವ್ಯಕ್ತಿತ್ವ ಹೊಂದಿದ್ದ…

Read More

ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ಸಹಯೋಗದಲ್ಲಿ ಕೋಟ ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ ಹಾಗೂ ಯಕ್ಷಗಾನ ಪೂರ್ವರಂಗ ಕೃತಿ ಅನಾವರಣ ಸಮಾರಂಭವು ದಿನಾಂಕ 10 ಅಕ್ಟೋಬರ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಹೆಯ ಸಹಕುಲಪತಿಗಳಾದ ಡಾ. ನಾರಾಯಣ ಸಭಾಹಿತ್ ಮಾತನಾಡಿ “ಡಾ. ಶಿವರಾಮ ಕಾರಂತರು ಸಾಹಿತಿ, ಮಾನವತಾವಾದಿ, ಪರಿಸರಪ್ರೇಮಿ, ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಅಣುಸ್ಥಾವರವಾದಾಗ ಅದರ ವಿರುದ್ಧ ಪ್ರತಿಭಟನೆಗೆ ಇಳಿದ ಮೊದಲಿಗರು. ಅದಕ್ಕೋಸ್ಕರ ದೇಶದ ಲೋಕಸಭಾ ಮಹಾಚುನಾವಣೆಯಲ್ಲಿ ಕಾರವಾರದಿಂದ ಚುನಾವಣೆಗೆ ನಿಂತು ಸ್ಪರ್ಧಿಸಿದರು. ನಾನು ರಾಜಕೀಯ ವ್ಯಾಮೋಹಿಯಲ್ಲ, ಬದಲು ಪರಿಸರ ಹಾನಿಯ ವಿರೋಧಿ. ಕೈಗಾ ಅಣುಸ್ಥಾವರ ಬಂದರೆ ಉತ್ತರಕನ್ನಡದ ಜೀವವೈವಿಧ್ಯ, ಕಾಡು ಪರಿಸರ ನಾಶವಾಗುತ್ತದೆ. ಅದಕ್ಕಾಗಿ ನಾನು ಚುನಾವಣೆಗೆ ನಿಲ್ಲುತ್ತೇನೆ. ಪರಿಸರ ಜಾಗೃತಿಗಾಗಿ ನಾನು ಮನೆಮನೆ ಸುತ್ತಾಡುವೆ, ಹೊರತು ಅಧಿಕಾರಕ್ಕಾಗಿ ಅಲ್ಲ, ಎಂಬುದಾಗಿ ಲೋಕಸಭಾ ಚುನಾವಣೆಗೆ ನಿಂತು 60,000 ಮತಗಳನ್ನು…

Read More

ಪುತ್ತೂರು : ಪುತ್ತೂರಿನ ಪರ್ಲಡ್ಕದ ಡಾ. ಶಿವರಾಮ ಕಾರಂತ ಬಾಲವನದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಕೋಟ ಶಿವರಾಮ ಕಾರಂತ ಬಾಲವನ ಸಮಿತಿ ಪುತ್ತೂರು ಮತ್ತು ಉಪವಿಭಾಗಾಧಿಕಾರಿ ಕಚೇರಿ ಆಶ್ರಯದಲ್ಲಿ ದಿನಾಂಕ 10 ಅಕ್ಟೋಬರ್ 2025ರಂದು ಡಾ. ಶಿವರಾಮ ಕಾರಂತರ 124ನೇ ಜನ್ಮದಿನೋತ್ಸವ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲವನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಬಿ.ಎ. ವಿವೇಕ ರೈ “ಡಾ. ಶಿವರಾಮ ಕಾರಂತರ ಬಾಲವನ ನಿರಂತರ ಚಟುವಟಿಕೆಯ ಕೇಂದ್ರವಾಗಬೇಕು. ಬಾಲವನಕ್ಕೆ ಮೇಲ್ವಿಚಾರಕರನ್ನು ನೇಮಿಸಿ ಪ್ರತಿ ವಾರಾಂತ್ಯದಲ್ಲಿ ಮಕ್ಕಳ ನಾಟಕ, ಹಾಡು, ಕುಣಿತ, ಪೇಂಟಿಂಗ್, ವೈಚಾರಿಕ ವಿಚಾರಸಂಕಿರಣ ನಡೆಸಬೇಕು. ವರ್ಷಕ್ಕೆ ಒಂದೂ ಬಾರಿಯಾದರೂ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡು 2 ದಿನಗಳ ಕಾರಂತ ಉತ್ಸವ ನಡೆಸಬೇಕು. ಕಾರಂತರ ಆಶಯಗಳಿಗೆ ಮರುಜೀವ ಕೊಡಬೇಕು. ಹಾಗಾದರೆ ಮಾತ್ರ ಬಾಲವನ ಪುತ್ತೂರಿಗೆ ಆಕರ್ಷಣೆಯಾಗುತ್ತದೆ” ಎಂದು ಹೇಳಿದರು. ಕಾರಂತ ಸ್ಮರಣೆ ಮಾಡಿದ ಶಿವರಾಮ ಕಾರಂತರ ಸೋದರಳಿಯ, ಸಾಹಿತಿ ಶಾಂತಾರಾಮ ರಾವ್ ಮಾತನಾಡಿ “ಕಾರಂತರು ಎಲ್ಲ ಕ್ಷೇತ್ರದಲ್ಲೂ…

Read More

ಬೆಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ವರ್ಷದ ‘ಗೌರವ ಪ್ರಶಸ್ತಿ’ ಮತ್ತು ’ಸಾಹಿತ್ಯಶ್ರೀ’ ಪ್ರಶಸ್ತಿ ಪ್ರಕಟಿಸಿದ್ದು, ಐವರು ವರ್ಷದ ಗೌರವ ಪ್ರಶಸ್ತಿಗೆ ಮತ್ತು 10 ಮಂದಿ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪುರಸ್ಕೃತರ ಪಟ್ಟಿ ಪ್ರಕಟಿಸಿದ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌. ಮುಕುಂದರಾಜ್‌ ಇವರು, 2024ನೇ ಸಾಲಿನ ವರ್ಷದ ‘ಗೌರವ ಪ್ರಶಸ್ತಿ’ಗೆ ಡಾ. ಎಂ. ಬಸವಣ್ಣ (ಚಾಮರಾಜನಗರ), ಶೂದ್ರ ಶ್ರೀನಿವಾಸ್‌ (ಬೆಂಗಳೂರು), ಪ್ರತಿಭಾ ನಂದಕುಮಾರ್‌ (ಬೆಂಗಳೂರು), ಡಾ. ಡಿ.ಬಿ. ನಾಯಕ್‌ (ಕಲಬುರಗಿ) ಮತ್ತು ಡಾ. ವಿಶ್ವನಾಥ್‌ ಕಾರ್ನಾಡ್‌ (ಮುಂಬಯಿ) ಇವರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ರೂ. ಐವತ್ತು ಸಾವಿರ ನಗದು, ಪ್ರಶಸ್ತಿ ಫಲಕ, ಫಲತಾಂಬೂಲ ಒಳಗೊಂಡಿದೆ. 2024ನೇ ಸಾಲಿನ ‘ಸಾಹಿತ್ಯ ಪ್ರಶಸ್ತಿ’ಗೆ ಡಾ. ಬಿ.ಎಂ. ಪುಟ್ಟಯ್ಯ- ಚಿಕ್ಕಮಗಳೂರು, ಡಾ. ಕೆ.ವೈ. ನಾರಾಯಣಸ್ವಾಮಿ- ಬೆಂಗಳೂರು, ಪದ್ಮಾಲಯ ನಾಗರಾಜ್‌- ಕೋಲಾರ, ಡಾ. ಬಿ.ಯು. ಸುಮಾ- ತುಮಕೂರು, ಡಾ. ಮಮತಾ ಸಾಗರ- ಶಿವಮೊಗ್ಗ, ಡಾ. ಸಬಿತಾ ಬನ್ನಾಡಿ-ಉಡುಪಿ, ಅಬ್ದುಲ್‌ ಹೈ…

Read More

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಕನ್ನಡ ವಿಭಾಗ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಬೆಳ್ತಂಗಡಿ ಹೋಬಳಿ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಸಾಹಿತಿ ಪದ್ಮಭೂಷಣ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ನುಡಿನಮನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ದಿನಾಂಕ 16 ಅಕ್ಟೋಬರ್ 2025ರಂದು ಮಧ್ಯಾಹ್ನ 2-15 ಗಂಟೆಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮ್ಯಗ್ದರ್ಶನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಇವರ ಅಧ್ಯಕ್ಷತೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಇವರು ಉದ್ಘಾಟನೆ ಮಾಡಲಿದ್ದಾರೆ. ಶಾಖಾ ಪ್ರಬಂಧಕರಾದ ಶಿವಪ್ರಸಾದ್ ಸುರ್ಯ ಇವರು ನುಡಿನಮನಗಳನ್ನಾಡಲಿದ್ದು, ಡೀನ್ ಡಾ. ಭಾಸ್ಕರ ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಂದ ಧರ್ಮಶ್ರೀ, ಜಲಪಾತ, ನಾಯಿ ನೆರಳು, ತಬ್ಬಲಿಯು…

Read More

ಬೆಂಗಳೂರು : ರಂಗದರ್ಶನ ಪ್ರದರ್ಶನ ಕಲಾಕೇಂದ್ರ ಬೆಂಗಳೂರು ಇದರ ವತಿಯಿಂದ ಒಡನಾಡಿ ಬಂಧು ಸಿಜಿಕೆ – 75 ಮಾಸದ ನೆನಪು ಸರಣಿ ಕಾರ್ಯಕ್ರಮ -05 ದಿನಾಂಕ 14 ಅಕ್ಟೋಬರ್ 2025ರಂದು ಸಂಜೆ ಗಂಟೆ 6-45ಕ್ಕೆ ಬೆಂಗಳೂರಿನ ಕಲಾಗ್ರಾಮ ಮಲ್ಲತ್ತಹಳ್ಳಿಯ ಸಮುಚ್ಚಯ ರಂಗಮಂದಿರದಲ್ಲಿ ನಡೆಯಲಿದೆ. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಕೆ.ವಿ. ನಾಗರಾಜಮೂರ್ತಿ ಮತ್ತು ಹಿರಿಯ ಸಾಹಿತಿ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಭಾ ಕಾರ್ಯಕ್ರಮದ ಬಳಿಕ ಮೈಕೊ ಶಿವಶಂಕರ್ ಇವರ ನಿರ್ದೇಶನದಲ್ಲಿ ‘ದಾಳ’ ನಾಟಕ ಪ್ರದರ್ಶನಗೊಳ್ಳಲಿದೆ.

Read More

ಉಡುಪಿ : ಜೀವವಿಮ ನಿಗಮದ ನಿವೃತ್ತ ಅಧಿಕಾರಿ, ಕಲಾಪೋಷಕರು ಆಗಿದ್ದ, ಸರ್ಪಂಗಳ ಸುಬ್ರಮಣ್ಯ ಭಟ್ ಇವರ ನೆನಪಿನಲ್ಲಿ 14ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಅಕ್ಟೋಬರ್ 2025ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೖಸಿ ಸಭಾಂಗಣದಲ್ಲಿ ಜರಗಿತು. ಸುರತ್ಕಲ್, ಹನುಮಗಿರಿ ಮುಂತಾದ ವಿವಿಧ ಮೇಳಗಳಲ್ಲಿ 54 ವರ್ಷ ತಿರುಗಾಟ ಮಾಡಿದ ಹಿರಿಯ ಕಲಾವಿದರಾದ ವೇಣೂರು ಸದಾಶಿವ ಕುಲಾಲ್ ಇವರಿಗೆ ‘ಸರ್ಪಂಗಳ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮೂರು ದಶಕಗಳ ಕಾಲ ಚಕ್ರತಾಳ ಕಲಾವಿದರಾಗಿ ಸೇವೆ ಸಲ್ಲಿಸಿದ ಸುರತ್ಕಲ್ಲಿನ ಪಿ. ಸುರೇಶ್ ಕಾಮತ್ ಇವರಿಗೆ ಸರ್ಪಂಗಳ ಪುರಸ್ಕಾರ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಶ್ರೀಮತಿ ನಳಿನಿ ಸುಬ್ರಹ್ಮಣ್ಯ ಭಟ್ ಮತ್ತು ಮಕ್ಕಳು ಪ್ರಾಯೋಜಿಸಿದ ಈ ಕಾರ್ಯಕ್ರಮದಲ್ಲಿ ಡಾ. ಶೈಲಜಾ ಭಟ್, ಡಾ. ನರೇಂದ್ರ ಶೆಣೈ, ಅವಂತಿಕಾ, ಅನಿರುದ್ಧ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಸಭಾ ಕಾರ್ಯಕ್ರಮದ…

Read More

ಪೆರಿಯ : ಗೋವುಗಳಿಗೋಸ್ಕರ ಸಂಗೀತ ಸೇವೆ ನಡೆಯುವ ವಿಶ್ವದ ಏಕೈಕ ಗೋಶಾಲೆ ಎಂದು ಕರೆಯಲ್ಪಡುವ ಬೇಕಲ್ ಗೋಕುಲಂ ಗೋಶಾಲೆಯು ತನ್ನ 13 ದಿನಗಳ ಐದನೇ ದೀಪಾವಳಿ ರಾಷ್ಟ್ರೀಯ ಸಂಗೀತ ಉತ್ಸವವನ್ನು ದಿನಾಂಕ 20 ಅಕ್ಟೋಬರ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಪ್ರಾರಂಭಿಸಲಿದೆ. ವೀಣೆಗೆ ಒತ್ತು ನೀಡುವ ಈ ವರ್ಷದ ಸಂಗೀತ ಉತ್ಸವವು ಉಡುಪಿ ಪವನ ಆಚಾರ್ ನೇತೃತ್ವದ ಸಂಗೀತ ಕಚೇರಿಯೊಂದಿಗೆ ಪ್ರಾರಂಭವಾಗಲಿದ್ದು, ಅಲ್ಲಿ ಐದು ವೀಣೆಗಳು ಒಟ್ಟಿಗೆ ಸೇರುತ್ತವೆ. ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಸಿಂಗಾಪುರ ಮತ್ತು ದುಬೈನ ಸುಮಾರು ನಾಲ್ಕು ನೂರು ಕಲಾವಿದರು ಬೆಳಿಗ್ಗೆ 9-00ರಿಂದ ರಾತ್ರಿ 10-00ರವರೆಗೆ ಸತತ ಸಂಗೀತ ಕಚೇರಿಗಳಲ್ಲಿ ಭಾಗವಹಿಸಲಿದ್ದಾರೆ. ಗೋಕುಲಂ ಗೋಶಾಲೆ ಸಂಗೀತಗಾರರು ಮತ್ತು ಸಂಗೀತ ಪ್ರಿಯರನ್ನು ಸ್ವಾಗತಿಸಲು ಸಜ್ಜಾಗಿದೆ. 2010ರಲ್ಲಿ ಒಂದು ವೇಚೂರ್ ಹಸು ಮತ್ತು ಹೋರಿಯೊಂದಿಗೆ ಪ್ರಾರಂಭವಾದ ಈ ಗೋಶಾಲೆಯು, ಹದಿನೈದು ವರ್ಷಗಳ ನಂತರ ವೇಚೂರ್, ಕಾಸರಗೋಡು ಗಿಡ್ಡ, ಹಳ್ಳಿಕಾರ್, ಮಲೆನಾಡು ಗಿಡ್ಡ, ಬರ್ಗೂರ್, ಗಿರ್, ಕಂಕ್ರೆಜ್, ಓಂಗೋಲ್…

Read More

ಉಡುಪಿ : ಸಮಕಾಲೀನ ಕಲೆಯನ್ನು ಜನ ಸಾಮಾನ್ಯರೊಂದಿಗೆ ಬೆಸೆಯುವ ಪ್ರಯತ್ನದ ಶಿಕಾಗೋ ಅಂತರರಾಷ್ಟ್ರೀಯ ಟೆರ್ರೈನ್ ಬಿನಾಲೆಯು ದಿನಾಂಕ 01 ಅಕ್ಟೋಬರ್ 2025ರಿಂದ 15 ನವೆಂಬರ್ 2025ರ ತನಕ ವಿಶ್ವದಾದ್ಯಂತ ನಡೆಯುತ್ತಿದ್ದು, ಉಡುಪಿಯ ಕಾವಿ ಕಲಾವಿದ ಡಾ. ಜನಾರ್ದನ ಹಾವಂಜೆಯವರ ‘ಯಕ್ಷ’ ಕಲಾಕೃತಿಯು ಇದೇ ಸಂದರ್ಭದಲ್ಲಿ ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಅಮೇರಿಕಾ, ಡೆನ್ಮಾರ್ಕ್, ಜರ್ಮನಿ, ಗ್ರೀಸ್, ಇಟೆಲಿ ಮೊದಲಾದ ವಿಶ್ವದ ಸುಮಾರು 60ಕ್ಕೂ ಮಿಕ್ಕಿದ ಕಡೆಗಳಲ್ಲಿ 80ಕ್ಕೂ ಮಿಕ್ಕಿ ಸಮಕಾಲೀನ ಕಲಾಕೃತಿಗಳು ಇದರ ಭಾಗವಾಗಿ ಪ್ರದರ್ಶನಗೊಳ್ಳುತ್ತಿದ್ದು ಭಾರತದ ಹತ್ತು ಕಡೆಗಳಲ್ಲಿನ ಕಲಾಕೃತಿಗಳು ಈ ಪ್ರದರ್ಶನಕ್ಕೆ ಆಯ್ಕೆಯಾಗಿವೆ ಎಂಬುದಾಗಿ ಭಾರತದ ಕಲಾಪ್ರದರ್ಶನದ ಸಂಯೋಜಕಿ ಭಾಗ್ಯ ಅಜಯ್‌ ಕುಮಾ‌ರ್ ತಿಳಿಸಿದ್ದಾರೆ. ಹಾವಂಜೆಯಲ್ಲಿ ಪ್ರದರ್ಶನಗೊಳ್ಳುತ್ತಿರುವ ‘ಯಕ್ಷ’ ಮಿಶ್ರ ಮಾಧ್ಯಮದ ಕಲಾಕೃತಿಯು ಗ್ರಾಮೀಣ ಬದುಕನ್ನು ದರ್ಶಿಸುವ ಯಕ್ಷ ಕಲಾವಿದನೋರ್ವನ ಬದುಕನ್ನು ಸೆರೆಹಿಡಿದು ಪ್ರದರ್ಶನಗೊಳ್ಳುತ್ತಿದೆ. ನಿಜ ಜೀವನದ ಯಕ್ಷನನ್ನು ಬಿಂಬಿಸಿದ ಈ ಕಲಾಕೃತಿಯು ಕಾವಿ ಕಲೆಯ ಸಾಂಪ್ರದಾಯಿಕ ಸೊಗಡನ್ನು ದುಡಿಸಿಕೊಂಡು, ಗದ್ದೆಯ ಮಣ್ಣಿನ ಜೊತೆಗೆ ಕೆಮ್ಮಣ್ಣು,…

Read More

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಇದರ ವತಿಯಿಂದ ‘ಕಾರಂತ ಹುಟ್ಟುಹಬ್ಬ’ವನ್ನು ದಿನಾಂಕ 14 ಅಕ್ಟೋಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಶ್ರಾಂತ ಉಪ ಕುಲಪತಿಗಳಾದ ಬಿ.ಎ. ವಿವೇಕ ರೈ ಇವರಿಂದ ಪುಷ್ಪ ನಮನ, ಉಪಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರಿಂದ ಪ್ರಶಸ್ತಿ ಪ್ರದಾನ ಮತ್ತು ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರಿಂದ ಕಾರಂತ ಸಂಸ್ಮರಣೆ ನಡೆಯಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ಣಾಟಕ ವಿಧಾನ ಪರಿಷತ್ತು ಸಭಾಪತಿಗಳಾದ ಬಸವರಾಜ ಹೊರಟ್ಟಿ ಇವರಿಗೆ ‘ಕಾರಂತ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ತು ಸದಸ್ಯರಾದ ಐವನ್ ಡಿ.ಸೋಜ ಇವರಿಂದ ಪ್ರಬಂಧ ಸ್ಪರ್ಧೆ ಹಾಗೂ ಸಂತ ಅಲೋಶಿಯಸ್ ಪ್ರೌಢಶಾಲೆಯ ಪ್ರಾಂಶುಪಾಲರಾದ ಫಾ. ಜಾನ್ ಸನ್ ಪಿಂಟೋ ಎಸ್.ಜೆ. ಇವರಿಂದ ಚಿತ್ರಸ್ಪರ್ಧೆಯ ಬಹುಮಾನ ವಿತರಣೆ ನಡೆಯಲಿದೆ.

Read More