Author: roovari

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಡೆಸುವ ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಅಂಗವಾಗಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರೌಢ ಶಾಲಾ ವಿಭಾಗದಲ್ಲಿ ದಿನಾಂಕ 21-06-2024ರಂದು ಚಾಲನೆಗೊಂಡಿತು. ಪುಂಜಾಲಕಟ್ಟೆ ಘಟಕ ಅಧ್ಯಕ್ಷರಾದ ಯಶೋಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮವನ್ನು ಘಟಕದ ಗೌರವ ಮಾರ್ಗದರ್ಶಿ ಜಯಂತ್ ಶೆಟ್ಟಿಯವರು ಉದ್ಘಾಟಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಂ ಪ್ರಸಾದ್ ಸಂಪಿಗೆತ್ತಾಯ, ಘಟಕದ ಯಕ್ಷಗುರು ದಿನೇಶ್ ಶೆಟ್ಟಿ ಕಾವಳಕಟ್ಟೆ, ಯಕ್ಷಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ, ಸಾಯಿಸುಮಾ ನಾವಡ, ದಿವಾಕರ ದಾಸ್ ಕಾವಳಕಟ್ಟೆ, ಘಟಕ ಮಹಿಳಾ ಸಮಿತಿ ಪ್ರಮುಖರಾದ ಲಕ್ಷ್ಮೀ ಸಂಜೀವ ಶೆಟ್ಟಿ, ಉಮಾ ಡಿ. ಗೌಡ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಮಂಜಪ್ಪ, ಜಯರಾಮ ಶೆಟ್ಟಿ, ಕಿಶೋರ್ ಶೆಟ್ಟಿ, ಘಟಕ ಪ್ರಮುಖರಾದ ಪುರುಷೋತ್ತಮ ಪೂಜಾರಿ ಬೊಳೆಕ್ಕಿನಕೋಡಿ, ರಮೇಶ್ ಶೆಟ್ಟಿ ಮಜಲೋಡಿ, ಪ್ರಭಾಕರ ಪಿ.ಎಂ., ಉದಯ ಕುಮಾರ್ ಶೆಟ್ಟಿ, ಯೋಗೀಶ್, ವಿನೋದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕುಮಂಗಿಲ, ದಿನಕರ ಶೆಟ್ಟಿ…

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆಯ ಸಾರಥ್ಯದಲ್ಲಿ ವಿಜಯ ಬ್ಯಾಂಕ್ ನ ನಿವೃತ್ತ ಮುಖ್ಯ ಪ್ರಬಂಧಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರ ‘ಪ್ರಕೃತಿಯೇ ಮಹಾಮಾತೆ’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವು ದಿನಾಂಕ 27-06-2024ರಂದು ಮಧ್ಯಾಹ್ನ 12-00 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.   ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈ ಇವರ ಅಧ್ಯಕ್ಷತೆಯಲ್ಲಿ ವಿಶ್ರಾಂತ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ. ದೇವರಾಜ್ ಇವರು ಕೃತಿ ಲೋಕಾರ್ಪಣೆ ಮಾಡಲಿರುವರು. ವಿಕಾಸ ಸೇವಾ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸಮಾಜ ಸೇವಕರಾದ ಶ್ರೀ ಸದಾನಂದ ಉಪಾಧ್ಯಾಯ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.       

Read More

ಬೆಂಗಳೂರು : ಸ್ವರ ಫೌಂಡೇಷನ್ ಸಂಸ್ಥೆಯ ವತಿಯಿಂದ ‘ಸಂಗೀತೋತ್ಸವ ಹಾಗೂ ಗೌರವ ಸನ್ಮಾನ’ ಕಾರ್ಯಕ್ರಮವನ್ನು ದಿನಾಂಕ 29-06-2024ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ಸಭಾ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಘನತೆವೆತ್ತ ರಾಜ್ಯಪಾಲರು ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಇವರು ಉದ್ಘಾಟನೆ ಮಾಡಲಿರುವರು. ಶ್ರೀಮತಿ ಭಾರತಿದೇವಿ ರಾಜಗುರು, ಖ್ಯಾತ ಹಿಂದೂಸ್ತಾನಿ ಗಾಯಕರಾದ ಪಂಡಿತ್ ವಿನಾಯಕ ತೊರವಿ ಮತ್ತು ಪದ್ಮಶ್ರೀ ಪಂಡಿತ್ ವೆಂಕಟೇಶ ಕುಮಾರ ಇವರಿಗೆ ಸನ್ಮಾನಿಸಲಾಗುವುದು. ಭಾರತ ರತ್ನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಪಂಡಿತ್ ಶೈಲೇಶ ಭಾಗವತ್ ಮತ್ತು ಖ್ಯಾತ ಅಂತರಾಷ್ಟ್ರೀಯ ಸಿತಾರ್ ವಾದಕರಾದ ಉಸ್ತಾದ್ ರಫೀಕ್ ಖಾನ್ ಇವರಿಂದ ಶಹನಾಯಿ ಸಿತಾರ್ ‘ಜುಗಲ್ ಬಂದಿ’, ಖ್ಯಾತ ನೃತ್ಯಾಂಗನೆ ವಿದುಷಿ ವಾಣಿಗಣಪತಿಯವರ ಶಿಷ್ಯೆ ವಿದುಷಿ ಮಾಳವಿಕಾ ನಾಯರ್ ಇವರಿಂದ ‘ಭರತನಾಟ್ಯ’, ಖ್ಯಾತ ಹಿಂದೂಸ್ತಾನಿ ಗಾಯಕರಾದ ಡಾ. ಮುದ್ದು ಮೋಹನ್ ಇವರಿಂದ ಹಿಂದೂಸ್ತಾನಿ ಗಾಯನ, ಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಪಂಡಿತ್ ವೆಂಕಟೇಶ ಕುಮಾರ…

Read More

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರಕಾರಿ ಪ್ರೌಢ ಶಾಲೆ ಮೀನಕಳಿಯ – ಬೈಕಂಪಾಡಿ ಇಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿಯು ದಿನಾಂಕ 19-06-2024ರಂದು ಉದ್ಘಾಟನೆಗೊಂಡಿತು. ಶ್ಯಾಮ ಕನ್ ಸ್ಟ್ರಕ್ಷನ್ಸ್ ನ ಇಂಜಿನಿಯರ್ ಶ್ರೀ ಪ್ರಸಿದ್ಧ ಪಿ. ಇವರು ಕಾರ್ಯಕ್ರಮ ಉದ್ಘಾಟಿಸಿ “ಯಕ್ಷಗಾನ ಎಲ್ಲಾ ಪ್ರಕಾರಗಳಲ್ಲಿಯೂ ಜ್ಞಾನ ವೃದ್ಧಿಗೆ ಪ್ರಯೋಜನವಾಗುತ್ತದೆ. ಯಕ್ಷಗಾನ ಬರೇ ಕಲೆಗೋಸ್ಕರ ಕಲಿಯುವುದಲ್ಲ, ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಸದಾವಕಾಶ” ಎಂದು ಹೇಳಿ ಶುಭ ಕೋರಿದರು. ಯಕ್ಷ ಶಿಕ್ಷಣ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್ (ಯು.ಎಸ್.ಎ) ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಶ್ರೀ ಶಿವರಾಮ ಪಣಂಬೂರು ಇವರು ಮಾತನಾಡುತ್ತ “ಶುದ್ಧ ಕನ್ನಡ ಇಂದಿಗೂ ಉಳಿದಿದೆ ಎಂದಾದರೆ ಅದು ಯಕ್ಷಗಾನದಿಂದ ಮಾತ್ರ. ಅಲ್ಲದೆ ಗುರು ಹಿರಿಯರನ್ನು ಗೌರವದಿಂದ ಕಾಣಲು ಇಂತಹ ಯಕ್ಷ ಶಿಕ್ಷಣದಿಂದ ಮಾತ್ರ ಸಾಧ್ಯ” ಎಂದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಲಕ್ಷ್ಮೀನಾರಾಯಣ ಇವರು ಮಾತನಾಡುತ್ತಾ “ವಿದ್ಯಾರ್ಥಿಗಳು ಉನ್ನತ ವ್ಯಾಸಂಗ…

Read More

ಸೋಮವಾರಪೇಟೆ : ಕೊಡಗು ಜಿಲ್ಲಾ ಮತ್ತು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಹಿಳಾ ಸಹಕಾರ ಸಮಾಜ, ಅಕ್ಕನ ಬಳಗದ ಆಶ್ರಯದಲ್ಲಿ ಕವಯತ್ರಿ ಜಲಜಾ ಶೇಖರ್ ಇವರ ‘ಪ್ರತೀಕ್ಷ’ ಮತ್ತು ‘ವಿಲೋಕನ’ ಕೃತಿಗಳ ಬಿಡುಗಡೆ ಸಮಾರಂಭವು ದಿನಾಂಕ 18-06-2024ರಂದು ಮಹಿಳಾ ಸಹಕಾರ ಸಮಾಜದಲ್ಲಿ ನಡೆಯಿತು. ‘ವಿಲೋಕನ’ಕೃತಿಯನ್ನು ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಬಿಡುಗಡೆಗೊಳಿಸಿ ಮಾತನಾಡಿ, “ಇಪ್ಪತ್ತೆರಡು ಲೇಖನಗಳನ್ನು ಹೊಂದಿರುವ ವಿಲೋಕನ ಒಂದು ಸುಂದರ ಪುಸ್ತಕವಾಗಿದ್ದು, ವಿವಿಧ ವಿಚಾರಗಳಿದ್ದು, ಸಂಗ್ರಹಕ್ಕೆ ಯೋಗ್ಯವಾಗಿದೆ” ಎಂದು ಹೇಳಿದರು. ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ. ಧರ್ಮಪ್ಪ ಇವರು ‘ಪ್ರತೀಕ್ಷ’ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಕೃತಿ ಕುರಿತು ಮಾತನಾಡಿ, “ಅಣ್ಣ ಬಸವಣ್ಣ ಮತ್ತು ಅಕ್ಕಮಹಾದೇವಿ ಮೇಲಿನ ಕವನಗಳು ಗಮನ ಸೆಳೆಯುತ್ತವೆ. ಕವಿಗಳು ಯಾವಾಗಲೂ ಕಲ್ಪನಾಲೋಕದಲ್ಲಿ ಇದ್ದು, ಅವರ ತಲೆಯಲ್ಲಿ ಯೋಚನಾಲಹರಿ ಹರಿಯತ್ತಿರಬೇಕು. ಆಗಾದಾಗ ಮಾತ್ರ ಕನವ ಸಂಕಲನಗಳು ಮೂಡಿಬರಲು ಸಾಧ್ಯ” ಎಂದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ…

Read More

ಧಾರವಾಡ : ಧಾರವಾಡ ತಾಲೂಕು ಬ್ರಾಹ್ಮಣ ಸಭೆಯ ಸಹಭಾಗಿತ್ವದಲ್ಲಿ ಆಯೋಜಿಸಿದ ದಿ. ಬಿ. ಟಿ. ಕುಲಕರ್ಣಿ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 20-06-2024ರ ಗುರುವಾರದಂದು ಧಾರವಾಡದ ಮಾಳಮಡ್ಡಿಯ ಗಾಯತ್ರಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಹಾಗೂ ‘ಸೃಜನಶೀಲ ಕಲೆಗಳು’ ಎಂಬ ವಿಷಯದ ಬಗ್ಗೆ ಮಾತನಾಡಿದ ಸಾಹಿತಿ ಮತ್ತು ಚಿಂತಕರಾದ ಡಾ. ಕೃಷ್ಣ ಕಟ್ಟಿ “ನಮ್ಮ ಸಂಪ್ರದಾಯದಲ್ಲಿ 64 ಕಲೆಗಳಾದರೆ, ಜೈನ ಸಂಪ್ರದಾಯದಲ್ಲಿ 72 ಕಲೆಗಳು. ಅದರಲ್ಲಿಯೂ 7 ಕಲೆಗಳು, ಸಂಗೀತ, ನಾಟಕ, ನೃತ್ಯ, ಸಾಹಿತ್ಯ, ಕಾವ್ಯ, ಹೀಗೆ ಅತೀ ಮುಖ್ಯವಾದ ಕಲೆಗಳು. ನಮ್ಮ ಶಾಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಸೃಜನಶೀಲ ಕಲೆ (ಕ್ರಾಫ್ಟ್ )ಕಾಣೆಯಾಗುತ್ತಿದೆ. ಸೃಜನ ಶೀಲ ಕಲೆಗಳು ಕೇವಲ ಮನೋರಂಜನೆ ವಸ್ತುಗಳಾಗಾದೆ, ಶಿಕ್ಷಣ, ಪ್ರತಿಭೆ, ಪರಿಶ್ರಮ, ಭಕ್ತಿ, ಸಂಸ್ಕಾರ ಹಾಗೂ ಸಂಸ್ಕೃತಿ ಎಲ್ಲವೂ ಒಂದೇ ದಾರದಲ್ಲಿ ಪೊಣಿಸಿದ ಮಣಿಗಳಂತಾದಾಗ ಮಾತ್ರ ಪರಿಶುದ್ಧ ಜ್ಞಾನ ಪ್ರಾಪ್ತವಾಗುತ್ತದೆ. ತಿಳಿನೀರಿನ ಸರೋವರದಂತೆ ಮನಕುಲಕ್ಕೆ ಹಿತವಾಗುವ ಸೃಜನಾತ್ಮಕ ಕಲೆಗಳು ದಾರಿದೀಪವಾಗಿ…

Read More

ಉಡುಪಿ : ರಾಷ್ಟ್ರೀಯ ನಾಟಕ ಶಾಲೆ (ಎನ್‌ಎಸ್‌ಡಿ)ಯ ವಾರಣಾಸಿ ಕೇಂದ್ರದ 20 ಮಂದಿಯ ತಂಡವು ಯಕ್ಷಗಾನ ಕಲಿಕೆಗಾಗಿ ಉಡುಪಿಗೆ ಆಗಮಿಸಿದ್ದಾರೆ. ತಂಡದಲ್ಲಿ 11 ಮಂದಿ ಹುಡುಗರು ಮತ್ತು 9 ಮಂದಿ ಹುಡುಗಿಯರಿದ್ದಾರೆ. ಡೆಲ್ಲಿ, ಮಣಿಪುರ, ಬಿಹಾರ, ನಾಗಾಲ್ಯಾಂಡ್, ಜಾರ್ಖಂಡ್, ಛತ್ತೀಸ್‌ಗಡ, ಉತ್ತರ ಪ್ರದೇಶ ಮೊದಲಾದ ರಾಜ್ಯಗಳ ವಿದ್ಯಾರ್ಥಿಗಳು ಈ ತಂಡದಲ್ಲಿದ್ದಾರೆ. ಇವರು ಉಡುಪಿಯ ಅದಮಾರು ಮಠದ ಅತಿಥಿಗೃಹದಲ್ಲಿ ತಂಗಿದ್ದು, 04-06-2024ರಿಂದ ಯಕ್ಷಗಾನದ ವಿವಿಧ ಮಟ್ಟು, ತಿಟ್ಟುಗಳನ್ನು ಕಲಿಯುತ್ತಿದ್ದಾರೆ. ಯಕ್ಷಗುರು ಉಡುಪಿಯ ಯಕ್ಷಸಂಜೀವ ಯಕ್ಷಗಾನ ಕೇಂದ್ರದ ಬನ್ನಂಜೆ ಸಂಜೀವ ಸುವರ್ಣ ಇವರಿಗೆ ಯಕ್ಷ ತರಬೇತಿ ನೀಡುತ್ತಿದ್ದಾರೆ. ಪೂರ್ಣಪ್ರಜ್ಞ ಯಕ್ಷಗಾನ ಕೇಂದ್ರ ಪೂರಕ ಸಹಕಾರ ನೀಡುತ್ತಿದೆ. ಯಕ್ಷಗಾನ ಮಟ್ಟುಗಳನ್ನು ಅಭ್ಯಸಿಸಿರುವ ಇವರು ಪೂರ್ವರಂಗ, ತಾಳಗಳು, ಕುಣಿತ ಇತ್ಯಾದಿಗಳನ್ನು ಕಲಿಯುತ್ತಿದ್ದಾರೆ. ಯಕ್ಷಗಾನದ ಸುಮಾರು 15 ರಾಗಗಳನ್ನು ಕಲಿತಿದ್ದಾರೆ. ಸಂಗೀತ, ನೃತ್ಯ ಇತ್ಯಾದಿಗಳ ತಳಸ್ಪರ್ಷಿ ಜ್ಞಾನ ಹೊಂದಿದ್ದು ಈ ವಿದ್ಯಾರ್ಥಿಗಳು ಯಕ್ಷಗಾನವನ್ನು ಚೆನ್ನಾಗಿ ಅಭ್ಯಸಿಸುವ ಈ ವಿದ್ಯಾರ್ಥಿಗಳ ಜೊತೆಗೆ ಕೇಂದ್ರದ ನಿರ್ದೇಶಕ ಪ್ರವೀಣ್ ಗುಂಜನ್ ಇದ್ದಾರೆ. ಯಕ್ಷಗಾನ…

Read More

ಮಂಗಳೂರು : ಕೃಷ್ಣಾಪುರ ಯುವಕಮಂಡಲ ಆಯೋಜಿಸುವ ದಕ್ಷಿಣ ಕನ್ನಡ ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಜನಪದ ನೃತ್ಯ ಸ್ಪರ್ಧೆಯು ದಿನಾಂಕ 08-09-2024ರಂದು ಸಂಜೆ ಘಂಟೆ 5.00ರಿಂದ ನಡೆಯಲಿದೆ. ಸ್ಪರ್ಧೆಯಲ್ಲಿ ಒಂದು ಸಂಸ್ಥೆಯಿಂದ ಒಂದು ತಂಡ ಹಾಗೂ ಒಬ್ಬ ಸ್ಪರ್ಧಿ ಒಂದೇ ತಂಡದಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಗರಿಷ್ಠ 10 ತಂಡಗಳಿಗೆ ಮಾತ್ರ ಅವಕಾಶ ಇದೆ. ಸ್ಪರ್ಧಾಳುಗಳಿಗೆ ವಯಸ್ಸಿನ ಮಿತಿ ಇರುವುದಿಲ್ಲ. ಹಾಗೂ ಸ್ಪರ್ಧಾ ಕೂಟಕ್ಕೆ ಪ್ರವೇಶ ಶುಲ್ಕ ಇರುವುದಿಲ್ಲ. ನೃತ್ಯವು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು ಮತ್ತು ಯಾವುದೇ ಜಾತಿ-ಮತ-ಧರ್ಮ ಅಥವಾ ಧರ್ಮಾಚರಣೆಗಳನ್ನು ಅವಹೇಳನಕಾರಿಯಾಗಿ ಅಣಕಿಸುವಂತಿರಬಾರದು. ಹೆಸರು ನೊಂದಾಯಿಸಲು ಕೊನೆಯ ದಿನಾಂಕ 15-08-2024. ಹೆಚ್ಚಿನ ವಿವರಗಳಿಗಾಗಿ ಸಂಪರ್ಕ ಸಂಖ್ಯೆ : 7259595962, 9611475265, 9448094050.

Read More

ಮುದ್ರಾಡಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ “ಸಿ.ಜಿ.ಕೆ. ರಂಗ ಪುರಸ್ಕಾರ-2024’ಕ್ಕೆ ಉಡುಪಿ ಜಿಲ್ಲೆಯಿಂದ ನಟ ನಿರ್ದೇಶಕ ಸಂಘಟಕ ರವಿರಾಜ್ ಎಚ್.ಪಿ. ಆಯ್ಕೆಯಾಗಿರುತ್ತಾರೆ. ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಟಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ನಟನೆ ಹಾಗೂ ನಿರ್ದೇಶನಕ್ಕೆ ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುತ್ತದೆ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಇವರ ಪರಿಕಲ್ಪನೆಯಲ್ಲಿ ನಡೆಸಿದ ‘ಹೀಗೊಂದು ರಂಗ ಕಲಿಕೆ’ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿರುತ್ತಾರೆ. ಹಲವು ಟಿ.ವಿ. ಧಾರವಾಹಿ, ಚಲನಚಿತ್ರಗಳಲ್ಲಿ ಪೋಷಕ ನಟನಾಗಿ ಪಾತ್ರ ನಿರ್ವಹಿಸಿರುತ್ತಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ಸಂಚಾಲಕರಾಗಿ ಉಡುಪಿ ಜಿಲ್ಲೆಯಲ್ಲಿ ಹಲವಾರು ನಾಟಕ, ಸಾಂಸ್ಕೃತಿಕ ಉತ್ಸವಗಳನ್ನು ಕಳೆದ ಐದು ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಾರೆ. ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಬೆಂಗಳೂರು : ಗೌರವ ಪ್ರಶಸ್ತಿ – 2023 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನಲ್ಲಿ (1) ಕೊಂಕಣಿ ಸಾಹಿತ್ಯ, (2) ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) (3) ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ‘ಗೌರವ ಪ್ರಶಸ್ತಿ’ಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ಸನ್ಮಾನದೊಂದಿಗೆ ರೂ.50,000/- ಗೌರವಧನ ಮತ್ತು ಪ್ರಮಾಣಪತ್ರವನ್ನೊಳಗೊಂಡಿದೆ. ಪುಸ್ತಕ ಬಹುಮಾನ – 2022 ಮತ್ತು 2023 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2022ರ ಕ್ಯಾಲೆಂಡರ್ ವರ್ಷದಲ್ಲಿ (2022 ಜನವರಿ 1ರಿಂದ 2022 ಡಿಸೆಂಬರ್ 31) ಹಾಗೂ 2023ರ ಕ್ಯಾಲೆಂಡರ್ ವರ್ಷದಲ್ಲಿ (2023 ಜನವರಿ 1ರಿಂದ 2023 ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ ವಿಮರ್ಶೆ ಬಗ್ಗೆ ಲೇಖಕರಿಂದ ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ…

Read More