Subscribe to Updates
Get the latest creative news from FooBar about art, design and business.
Author: roovari
ಉಡುಪಿ : ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ಡಿ)ಯ ವಾರಣಾಸಿ ಕೇಂದ್ರದ 20 ಮಂದಿಯ ತಂಡವು ಯಕ್ಷಗಾನ ಕಲಿಕೆಗಾಗಿ ಉಡುಪಿಗೆ ಆಗಮಿಸಿದ್ದಾರೆ. ತಂಡದಲ್ಲಿ 11 ಮಂದಿ ಹುಡುಗರು ಮತ್ತು 9 ಮಂದಿ ಹುಡುಗಿಯರಿದ್ದಾರೆ. ಡೆಲ್ಲಿ, ಮಣಿಪುರ, ಬಿಹಾರ, ನಾಗಾಲ್ಯಾಂಡ್, ಜಾರ್ಖಂಡ್, ಛತ್ತೀಸ್ಗಡ, ಉತ್ತರ ಪ್ರದೇಶ ಮೊದಲಾದ ರಾಜ್ಯಗಳ ವಿದ್ಯಾರ್ಥಿಗಳು ಈ ತಂಡದಲ್ಲಿದ್ದಾರೆ. ಇವರು ಉಡುಪಿಯ ಅದಮಾರು ಮಠದ ಅತಿಥಿಗೃಹದಲ್ಲಿ ತಂಗಿದ್ದು, 04-06-2024ರಿಂದ ಯಕ್ಷಗಾನದ ವಿವಿಧ ಮಟ್ಟು, ತಿಟ್ಟುಗಳನ್ನು ಕಲಿಯುತ್ತಿದ್ದಾರೆ. ಯಕ್ಷಗುರು ಉಡುಪಿಯ ಯಕ್ಷಸಂಜೀವ ಯಕ್ಷಗಾನ ಕೇಂದ್ರದ ಬನ್ನಂಜೆ ಸಂಜೀವ ಸುವರ್ಣ ಇವರಿಗೆ ಯಕ್ಷ ತರಬೇತಿ ನೀಡುತ್ತಿದ್ದಾರೆ. ಪೂರ್ಣಪ್ರಜ್ಞ ಯಕ್ಷಗಾನ ಕೇಂದ್ರ ಪೂರಕ ಸಹಕಾರ ನೀಡುತ್ತಿದೆ. ಯಕ್ಷಗಾನ ಮಟ್ಟುಗಳನ್ನು ಅಭ್ಯಸಿಸಿರುವ ಇವರು ಪೂರ್ವರಂಗ, ತಾಳಗಳು, ಕುಣಿತ ಇತ್ಯಾದಿಗಳನ್ನು ಕಲಿಯುತ್ತಿದ್ದಾರೆ. ಯಕ್ಷಗಾನದ ಸುಮಾರು 15 ರಾಗಗಳನ್ನು ಕಲಿತಿದ್ದಾರೆ. ಸಂಗೀತ, ನೃತ್ಯ ಇತ್ಯಾದಿಗಳ ತಳಸ್ಪರ್ಷಿ ಜ್ಞಾನ ಹೊಂದಿದ್ದು ಈ ವಿದ್ಯಾರ್ಥಿಗಳು ಯಕ್ಷಗಾನವನ್ನು ಚೆನ್ನಾಗಿ ಅಭ್ಯಸಿಸುವ ಈ ವಿದ್ಯಾರ್ಥಿಗಳ ಜೊತೆಗೆ ಕೇಂದ್ರದ ನಿರ್ದೇಶಕ ಪ್ರವೀಣ್ ಗುಂಜನ್ ಇದ್ದಾರೆ. ಯಕ್ಷಗಾನ…
ಮಂಗಳೂರು : ಕೃಷ್ಣಾಪುರ ಯುವಕಮಂಡಲ ಆಯೋಜಿಸುವ ದಕ್ಷಿಣ ಕನ್ನಡ ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಜನಪದ ನೃತ್ಯ ಸ್ಪರ್ಧೆಯು ದಿನಾಂಕ 08-09-2024ರಂದು ಸಂಜೆ ಘಂಟೆ 5.00ರಿಂದ ನಡೆಯಲಿದೆ. ಸ್ಪರ್ಧೆಯಲ್ಲಿ ಒಂದು ಸಂಸ್ಥೆಯಿಂದ ಒಂದು ತಂಡ ಹಾಗೂ ಒಬ್ಬ ಸ್ಪರ್ಧಿ ಒಂದೇ ತಂಡದಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಗರಿಷ್ಠ 10 ತಂಡಗಳಿಗೆ ಮಾತ್ರ ಅವಕಾಶ ಇದೆ. ಸ್ಪರ್ಧಾಳುಗಳಿಗೆ ವಯಸ್ಸಿನ ಮಿತಿ ಇರುವುದಿಲ್ಲ. ಹಾಗೂ ಸ್ಪರ್ಧಾ ಕೂಟಕ್ಕೆ ಪ್ರವೇಶ ಶುಲ್ಕ ಇರುವುದಿಲ್ಲ. ನೃತ್ಯವು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು ಮತ್ತು ಯಾವುದೇ ಜಾತಿ-ಮತ-ಧರ್ಮ ಅಥವಾ ಧರ್ಮಾಚರಣೆಗಳನ್ನು ಅವಹೇಳನಕಾರಿಯಾಗಿ ಅಣಕಿಸುವಂತಿರಬಾರದು. ಹೆಸರು ನೊಂದಾಯಿಸಲು ಕೊನೆಯ ದಿನಾಂಕ 15-08-2024. ಹೆಚ್ಚಿನ ವಿವರಗಳಿಗಾಗಿ ಸಂಪರ್ಕ ಸಂಖ್ಯೆ : 7259595962, 9611475265, 9448094050.
ಮುದ್ರಾಡಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ “ಸಿ.ಜಿ.ಕೆ. ರಂಗ ಪುರಸ್ಕಾರ-2024’ಕ್ಕೆ ಉಡುಪಿ ಜಿಲ್ಲೆಯಿಂದ ನಟ ನಿರ್ದೇಶಕ ಸಂಘಟಕ ರವಿರಾಜ್ ಎಚ್.ಪಿ. ಆಯ್ಕೆಯಾಗಿರುತ್ತಾರೆ. ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಟಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ನಟನೆ ಹಾಗೂ ನಿರ್ದೇಶನಕ್ಕೆ ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುತ್ತದೆ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಇವರ ಪರಿಕಲ್ಪನೆಯಲ್ಲಿ ನಡೆಸಿದ ‘ಹೀಗೊಂದು ರಂಗ ಕಲಿಕೆ’ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿರುತ್ತಾರೆ. ಹಲವು ಟಿ.ವಿ. ಧಾರವಾಹಿ, ಚಲನಚಿತ್ರಗಳಲ್ಲಿ ಪೋಷಕ ನಟನಾಗಿ ಪಾತ್ರ ನಿರ್ವಹಿಸಿರುತ್ತಾರೆ. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ಸಂಚಾಲಕರಾಗಿ ಉಡುಪಿ ಜಿಲ್ಲೆಯಲ್ಲಿ ಹಲವಾರು ನಾಟಕ, ಸಾಂಸ್ಕೃತಿಕ ಉತ್ಸವಗಳನ್ನು ಕಳೆದ ಐದು ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಾರೆ. ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರು : ಗೌರವ ಪ್ರಶಸ್ತಿ – 2023 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನಲ್ಲಿ (1) ಕೊಂಕಣಿ ಸಾಹಿತ್ಯ, (2) ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) (3) ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ‘ಗೌರವ ಪ್ರಶಸ್ತಿ’ಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ಸನ್ಮಾನದೊಂದಿಗೆ ರೂ.50,000/- ಗೌರವಧನ ಮತ್ತು ಪ್ರಮಾಣಪತ್ರವನ್ನೊಳಗೊಂಡಿದೆ. ಪುಸ್ತಕ ಬಹುಮಾನ – 2022 ಮತ್ತು 2023 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2022ರ ಕ್ಯಾಲೆಂಡರ್ ವರ್ಷದಲ್ಲಿ (2022 ಜನವರಿ 1ರಿಂದ 2022 ಡಿಸೆಂಬರ್ 31) ಹಾಗೂ 2023ರ ಕ್ಯಾಲೆಂಡರ್ ವರ್ಷದಲ್ಲಿ (2023 ಜನವರಿ 1ರಿಂದ 2023 ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ ವಿಮರ್ಶೆ ಬಗ್ಗೆ ಲೇಖಕರಿಂದ ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ…
ಪುತ್ತೂರು : ಪದವರ್ಣವೆಂಬುದು ಭರತನಾಟ್ಯದಲ್ಲಿ ಪ್ರಮುಖವಾದ ನೃತ್ಯಬಂಧವಾಗಿದೆ. ಸುಮಾರು 25-30 ನಿಮಿಷ ಅಥವಾ ಕೆಲವೊಮ್ಮೆ ಮುಕ್ಕಾಲು ಗಂಟೆಯವರೆಗೆ ವಿಸ್ತರಿಸುವ ಈ ನೃತ್ಯವು ಇತ್ತೀಚಿಗಿನ ದಿನಗಳಲ್ಲಿ ಭರತನಾಟ್ಯ ಕಾರ್ಯಕ್ರಮಗಳಿಂದ ಮರೆಯಾಗುತ್ತಿವೆ. ಸುದೀರ್ಘವಾದ ಪ್ರಸ್ತುತಿ, ಘನ ಸಾಹಿತ್ಯ, ಅರ್ಥವಾಗದ ತಮಿಳು, ತೆಲುಗು ಭಾಷೆಗಳು, ನಾಯಕ-ನಾಯಕಿ ಭಾವ ಇತ್ಯಾದಿಗಳೆಲ್ಲ ಇದನ್ನು ಅರ್ಥ ಮಾಡಿ ರಂಜಿಸಲು ಅಡ್ಡಿಯಾಗಿವೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಪದವರ್ಣಗಳ ಮೂಲ ಆಶಯವನ್ನು ಜಾಗೃತಗೊಳಿಸಲು ಹಾಗೂ ಪದವರ್ಣವನ್ನು ವೀಕ್ಷಿಸಲು ಬೇಕಾಗುವ ತಾಳ್ಮೆಯನ್ನು ಹೆಚ್ಚಿಸಲು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ತನ್ನ ಸರಣಿ ಕಾರ್ಯಕ್ರಮ ‘ನೃತ್ಯಾಂತರಂಗ’ದಲ್ಲಿ ಈ ಹೊಸ ಯೋಜನೆಯೊಂದಿಗೆ ‘ವರ್ಣಿಕ’ ಎಂಬ ಶೀರ್ಷಿಕೆಯಲ್ಲಿ 2 ಸರಣಿಯಲ್ಲಿ 5 ಪದವರ್ಣಗಳನ್ನು ಪ್ರಸ್ತುತಪಡಿಸಿತು. ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ದಿನಾಂಕ 08-06-2024ರಂದು ಸಂಜೆ ಗಂಟೆ 5-45ಕ್ಕೆ ‘ವರ್ಣಿಕ- 1’ ಪ್ರಾರಂಭವಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಹಿರಿಯ ವಿದ್ಯಾರ್ಥಿನಿ ವಿದುಷಿ ವಸುಧಾ ನಿರೂಪಣೆ ಮಾಡಿದರು. ಗಿರೀಶ್ ಕುಮಾರ ಶಂಖನಾದ ಹಾಗೂ ಪ್ರೀತಿಕಲಾ ಓಂಕಾರನಾದ ಮಾಡಿದರು. ಅಭ್ಯಾಗತರಾದ ಶ್ರೀ…
ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ ಇದರ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ‘ಅರೆಭಾಷೆ ಬರಹ’ಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, 1ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇರಿ -571 201 ಇಲ್ಲಿಗೆ ಕಳುಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗಳನ್ನು – 6362588677 ಇಲ್ಲಿಂದ ಪಡೆಯಬಹುದಾಗಿದೆ.
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಸಭಾಂಗಣದಲ್ಲಿ ಪರಿಷತ್ತಿನ ಎರಡು ಪ್ರಮುಖ ಪ್ರಶಸ್ತಿಗಳಾದ ‘ಕುವೆಂಪು ಸಿರಿಗನ್ನಡ ದತ್ತಿ’ ಹಾಗೂ ‘ಕನ್ನಡ ಚಳವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 21-06-2024ರಂದು ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಸಾಹಿತ್ಯ ರಾಜಕೀಯವನ್ನು ಎಚ್ಚರಿಸುವ ಶಕ್ತಿಯಾಗಬೇಕೆಂದು ರಾಷ್ಟ್ರಕವಿ ಕುವೆಂಪು ಅವರು ಬಯಸಿದ್ದರು. ‘ಅಖಂಡ ಕರ್ನಾಟಕ : ಅಲ್ತೊ ನಮ್ಮ ನಾಲ್ಕು ದಿನದ ರಾಜಕೀಯ ನಾಟಕ ! ಇಂದು ಬಂದು ನಾಳೆ ಸಂದುಹೋಹ ಸಚಿವ ಮಂಡಲ ರಚಿಸುವೊಂದು ಕೃತಕವಲ್ತೊ ಸಿರಿಗನ್ನಡ ಸರಸ್ವತಿಯವಜ್ರ ಕರ್ಣಕುಂಡಲ !’ ಎಂದು ಬಹು ಹಿಂದೆಯೇ ಎಚ್ಚರಿಸಿದ್ದರು. ಸಾಹಿತ್ಯವು ವ್ಯಕ್ತಿತ್ವ ನಿರ್ಮಾಣದಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸಬೇಕು ಎಂದು ಕುವೆಂಪು ಅವರು ಬಯಸಿದ್ದರು. ಇಂತಹ ಮನಸ್ಥಿತಿಯನ್ನು ಪಡೆಯಲು ಅವರಿಗೆ ರಾಮಕೃಷ್ಣಾಶ್ರಮದಲ್ಲಿ ದೊರೆತ ಸಂಸ್ಕಾರ ಕಾರಣವಾಗಿತ್ತು ಎಂದರು. 1928ರಲ್ಲಿ ಕಲ್ಬುರ್ಗಿಯಲ್ಲಿ ಜರುಗಿದ 14ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಟ್ಟಪ್ಪನವರ…
ಬೆಂಗಳೂರು : “ಆರ್ಯಭಟ ಸಾಂಸ್ಕೃತಿಕ ಸಂಸ್ಥೆ”ಯು 49ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, 6 ಜನ ವಿದೇಶದಲ್ಲಿದ್ದು ಸಾಧನೆ ಮಾಡಿದ ಕನ್ನಡಿಗರ ಸಮೇತ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿದ ಒಟ್ಟು 60 ಸಾಧಕರಿಗೆ ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. 23-06-2024ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ‘ಆರ್ಯಭಟ ಪ್ರಶಸ್ತಿ’ಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಬಿ. ಪ್ರಭಾಕರ ಶಾಸ್ತ್ರಿಯವರು ಪ್ರದಾನ ಮಾಡಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ರಂಗಭೂಮಿಯಲ್ಲಿ ಕಲಾವಿದರಾಗಿ, ನಿರ್ದೇಶಕರಾಗಿ, ನಾಟಕಕಾರರಾಗಿ, ರಂಗವಿಮರ್ಶಕರಾಗಿ, ರಂಗ ತರಬೇತಿ ಶಿಕ್ಷಕರಾಗಿ, ರಂಗಭೂಮಿ ಪತ್ರಿಕೆಯ ಸಂಪಾದಕರಾಗಿ, ರಂಗ ಸಂಘಟಕರಾಗಿ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲುಸುತ್ತಾ ಬಂದಿರುವ ಶಶಿಕಾಂತ ಯಡಹಳ್ಳಿಯವರು ಈ ಸಲದ ಅಂತರಾಷ್ಟ್ರೀಯ ‘ಆರ್ಯಭಟ’ ಪ್ರಶಸ್ತಿಗೆ ರಂಗಭೂಮಿ ವಿಭಾಗದಿಂದ ಆಯ್ಕೆಯಾಗಿದ್ದಾರೆ. ‘ಸೃಷ್ಟಿ ಜನನಾಟ್ಯ ಕಲಾ ಕೇಂದ್ರ’ ಎನ್ನುವ ಸಂಸ್ಥೆಯನ್ನು ಹುಟ್ಟುಹಾಕಿ ನಿರಂತರವಾಗಿ ನಾಟಕಗಳನ್ನು ರಚಿಸಿ ನಿರ್ದೇಶಿಸಿ ನಿರ್ಮಿಸುತ್ತಾ ಬಂದಿರುವ ಯಡಹಳ್ಳಿಯವರು ಕನ್ನಡ ರಂಗಭೂಮಿಗರ ತಮ್ಮದೇ ಆದ…
ಮೂಡಬಿದ್ರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಮೂಡಬಿದ್ರೆಯ ಕಡಂದಲೆ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಡಬಿದ್ರಿ ಘಟಕದ ಸಹಕಾರದೊಂದಿಗೆ ಯಕ್ಷಶಿಕ್ಷಣ ನಾಟ್ಯ ತರಬೇತಿ ಅಭಿಯಾನ ಕಾರ್ಯಕ್ರಮವು ದಿನಾಂಕ 21-06-2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರಿ ಕ್ಷೇತ್ರದ ಶಾಸಕರಾದ ಶ್ರೀಯುತ ಉಮನಾಥ್ ಕೋಟ್ಯಾನ್ ಇವರು ಉದ್ಘಾಟಿಸಿದರು. ವೇದಿಕೆಯಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟಿನ ಮೂಡುಬಿದ್ರೆ ಘಟಕದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಖಂಡಿಗೆ, ಅಭಯಚಂದ್ರ ಜೈನ್, ಶ್ರೀಪತಿ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ದಿನಕರ್ ಕುಂಭಾಶಿ, ನಾಟ್ಯ ಗುರುಗಳಾದ ಅನ್ವಿತಾ ಕೆರೆಕಾಡು ಉಪಸ್ಥಿತರಿದ್ದರು ಹಾಗೂ ಪಟ್ಲ ಫೌಂಡೇಶನ್ ಮೂಡುಬಿದ್ರೆ ಘಟಕದಿಂದ ಸದಾಶಿವ ನೆಲ್ಲಿಮಾರ್, ಸದಾಶಿವ ಶೆಟ್ಟಿಗಾರ್, ಮನೋಜ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಸಮಾಜ ಮಂದಿರ, ನವೀನ್ ಶೆಟ್ಟಿ, ಶಾಲಾ ಶಿಕ್ಷಕ ಶಿಕ್ಷಕಿಯರು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಘಟಕದ ಸಂಚಾಲಕರಾದ ರವಿಪ್ರಸಾದ್ ಕೆ. ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿ, ಶಾಲಾ…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ಕನಕದಾಸ ಅಧ್ಯಯನ ಪೀಠ, ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ‘ಕನಕ ಸ್ಮೃತಿ’ ಕಾರ್ಯಕ್ರಮವನ್ನು ದಿನಾಂಕ 25-06-2024ರಂದು ಮಂಗಳಗಂಗೋತ್ರಿ ಡಾ. ಯು.ಆರ್. ರಾವ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, 2023-24ನೇ ಸಾಲಿನ ‘ಕನಕ ಪುರಸ್ಕಾರ ಪ್ರದಾನ’ ಮತ್ತು ಕನಕ ಪುರಸ್ಕಾರ ಪಡೆದ ಆಯ್ದ ಗಾಯಕರಿಂದ ಕನಕ ಕೀರ್ತನ ಪ್ರಸ್ತುತಿ ನಡೆಯಲಿದೆ. ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ನರೇಂದ್ರ ರೈ ದೇರ್ಲ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.