Author: roovari

ಮೂಡುಬಿದಿರೆ : ಆಮ್ನಾಯಃ – ಯಕ್ಷಸಂಸ್ಕೃತಿ ಬಳಗ ಗಾಳಿಮನೆ ಇದರ ವತಿಯಿಂದ ಧವಳತ್ರಯಜೈನಕಾಶಿ ಟ್ರಸ್ಟ್ ಜೈನ ಮಠ ಮೂಡುಬಿದಿರೆ ಮತ್ತು ಯಕ್ಷಗಾನ ಅಭಿಮಾನಿ ಬಳಗ ಮೂಡುಬಿದಿರೆ ಇವರ ಸಹಕಾರದೊಂದಿಗೆ ಪಾಕ್ಷಿಕ ತಾಳಮದ್ದಲೆ ಸರಣಿ – ವಿಶ್ವಾವಸು 5127 ದ್ವಿತೀಯ ಪ್ರದರ್ಶನವು ದಿನಾಂಕ 24 ಜುಲೈ 2025ರಂದು ಸಂಜೆ 6-00 ಗಂಟೆಗೆ ಮೂಡುಬಿದಿರೆಯ ಶ್ರೀಜೈನ ಮಠದ ಭಟ್ಟಾರಕ ಸಭಾಂಗಣದಲ್ಲಿ ನಡೆಯಲಿದೆ. ಕವಿ ಪಾರ್ತಿಸುಬ್ಬ ವಿರಚಿತ ‘ಪಾದುಕಾ ಪಟ್ಟಾಭಿಷೇಕ’ ಎಂಬ ಆಖ್ಯಾನದ ತಾಳಮದ್ದಲೆಯು ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಯಕ್ಷೋತ್ಸವ ಸಮಿತಿ ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಮಿತಿ ವತಿಯಿಂದ ದಿನಾಂಕ 21 ಜುಲೈ 2025ರಂದು ಕಾಲೇಜು ಸಭಾಂಗಣದಲ್ಲಿ ಪಾತಾಳ ವೆಂಕಟರಮಣ ಭಟ್ ಮತ್ತು ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಮರಣಾ ಜ್ಯೋತಿ ಬೆಳಗಿ ನುಡಿ ನಮನ ಸಲ್ಲಿಸಿದ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ‌. ಭಾಸ್ಕರ ರೈ ಕುಕ್ಕುವಳ್ಳಿ “ಯಕ್ಷಗಾನ ರಂಗಕ್ಕೆ ವಿಶಿಷ್ಟ ಕೊಡುಗೆ ನೀಡಿದ ಮಾರ್ಗದರ್ಶಕ ಕಲಾವಿದರಿಬ್ಬರನ್ನು ಕೇವಲ ಎರಡು ದಿನಗಳ ಅಂತರದಲ್ಲಿ ಕಳೆದುಕೊಂಡಿದ್ದೇವೆ. ಶತಮಾನದ ಹಾದಿಯಲ್ಲಿದ್ದ 92ರ ಹರೆಯದ ಪಾತಾಳ ವೆಂಕಟರಮಣ ಭಟ್ಟರು ಯಕ್ಷಗಾನದ ವೇಷ ಭೂಷಣ, ನೃತ್ಯಾಭಿನಯಗಳಲ್ಲಿ ಹೊಸ ಪ್ರಯೋಗಶೀಲತೆಯ ಮೂಲಕ ಪರಂಪರೆಯನ್ನು ಎತ್ತಿ ಹಿಡಿದವರು; ಹಾಗೆಯೇ ಇನ್ನೂ ಬದುಕಿ ರಂಗದಲ್ಲಿ ಮೆರೆಯಬೇಕಾಗಿದ್ದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರರು ಬಣ್ಣದ ವೇಷಗಾರಿಕೆಯಲ್ಲಿ ಸೃಜನಶೀಲತೆಯನ್ನು ತೋರಿದವರು.ಇವರ ಕಣ್ಮರೆ ಯಕ್ಷಗಾನ ವಲಯದಲ್ಲಿ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಹೋಬಳಿ ಘಟಕದ ಶಾಲಾ-ಕಾಲೇಜುಗಳ ಶಿಕ್ಷಕರುಗಳಿಗೆ “ಕನ್ನಡ ಭಾಷೆಯ ಬೆಳವಣಿಗೆಗಾಗಿ ಮಾರ್ಗೋಪಾಯಗಳು” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಪ್ರಬಂಧ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ದಿನ್ನಕ 26 ಜುಲೈ 2025ರಂದು ಬೆಳಗ್ಗೆ 10-30 ಗಂಟೆಗೆ ಮೂರ್ನಾಡುವಿನ ಪಿ.ಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಜೊತೆಗೆ ಮೂರ್ನಾಡು ಹೋಬಳಿ ಘಟಕದಲ್ಲಿ ಪ್ರಪ್ರಥಮ ಬಾರಿಗೆ ದಿ. ಕೊಕ್ಕಲೆರ ಚಂಗಪ್ಪನವರ ಜ್ಞಾಪಕಾರ್ಥವಾಗಿ ಪತ್ನಿ ನಿವೃತ್ತ ಶಿಕ್ಷಕಿ ಕೊಕ್ಕಲೆರ ಬೋಜಮ್ಮ ಮತ್ತು ಮಕ್ಕಳು ಸ್ಥಾಪಿಸಿದ ದತ್ತಿನಿಧಿ ಸ್ವೀಕಾರ ಹಾಗೂ ಹಿರಿಯ ಸಾಹಿತಿಗಳಾದ ಕಿಗ್ಗಾಲು ಎಸ್. ಗಿರೀಶ್ ಇವರ ‘ಕಣ್ಮರೆಯಾದ ಕಾಂತಾಮಣಿ’ ಪತ್ತೆದಾರಿ ಕಾದಂಬರಿ ಬಿಡುಗಡೆ ಕಾರ್ಯಕ್ರಮವಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ವಹಿಸಲಿದ್ದು, ಉದ್ಘಾಟಕರಾಗಿ ನಿವೃತ್ತ ದೈಹಿಕ ಶಿಕ್ಷಕ…

Read More

ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಗಿಳಿವಿಂಡು ಮಂಜೇಶ್ವರ ಇವರು ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಈ ಕಾರ್ಯಕ್ರಮದ ಹನ್ನೊಂದನೆಯ ಕವಿಗೋಷ್ಠಿಯನ್ನು ದಿನಾಂಕ 27 ಜುಲೈ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡು ಮಂಜೇಶ್ವರದ ಗಿಳಿವಿಂಡುವಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಕಾಸರಗೋಡು ಕಾವ್ಯ ಸಂಸ್ಕೃತಿ ಯಾನದ ಸರ್ವಾಧ್ಯಕ್ಷರಾಗಿದ್ದು, ಕವಯತ್ರಿ ಡಾ. ಕೆ.ವಿ. ಸಿಂಧು ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 11-30 ಗಂಟೆಗೆ ಕವಿಗೋಷ್ಠಿ – 01 ಕೃಷ್ಣನ್ ನಡುವಲತ್ತ್ ಹಾಗೂ ಮಧ್ಯಾಹ್ನ ಗಂಟೆ 2-30ಕ್ಕೆ ಕವಿಗೋಷ್ಠಿ – 02 ಡಾ. ಮೀನಾಕ್ಷಿ ರಾಮಚಂದ್ರ ಮಂಗಳೂರು ಇವರುಗಳ ಅಧ್ಯಕ್ಷತೆಯಲ್ಲಿ ಪ್ರಸ್ತುತಗೊಳ್ಳಲಿದೆ. ಮಧ್ಯಾಹ್ನ ಗಂಟೆ 1-30ಕ್ಕೆ ಸರ್ವಾಧ್ಯಕ್ಷರೊಂದಿಗೆ ‘ಕನ್ನಡ ಮತ್ತು ಮಲಯಾಳದ ನಡುವಿನ ಸೇತುವೆ ಯಾವುದು ?’ ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದ್ದು, ಸಂಜೆ…

Read More

ಯಕ್ಷಗಾನ ಕರ್ನಾಟಕದ ಕರಾವಳಿ ತೀರದ ವಿಶಿಷ್ಟ ಶಾಸ್ತ್ರೀಯ ಸಾಂಪ್ರದಾಯಿಕ ಕಲೆ. ಇಂದಿನ ಡಿಜಿಟಲ್ ಯುಗದಲ್ಲೂ ಈ ಗಂಡುಕಲೆ ಯಕ್ಷಗಾನ ಮನೆ ಮನಗಳಲ್ಲಿ ಗಟ್ಟಿಯಾಗಿ ಬೇರೂರಿದೆ. ಇಂತಹ ಶಾಸ್ತ್ರೀಯ ಹಾಗೂ ಶ್ರೀಮಂತ ಕಲೆಯಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಿರುವ ಯುವ ಕಲಾವಿದ ಮುಖೇಶ್ ದೇವಧರ್ ನಿಡ್ಲೆ. 20.02.2000 ರಂದು ಮುಕುಂದ ದೇವಧರ್ ಹಾಗೂ ಶುಭಾ ದೇವಧರ್ ಇವರ ಮಗನಾಗಿ ಮುಖೇಶ್ ಅವರ ಜನನ. ಎಂ.ಎ (ಕನ್ನಡ) ಇವರ ವಿದ್ಯಾಭ್ಯಾಸ. ಅಜ್ಜ ಗಣಪತಿ ದೇವಧರ್ ಹವ್ಯಾಸಿ ತಾಳಮದ್ದಳೆ ಅರ್ಥಧಾರಿಗಳಾಗಿದ್ದರು ಹಾಗೂ ಊರಿನ ಯಕ್ಷಗಾನೀಯ ಪರಿಸರ ಯಕ್ಷಗಾನವನ್ನು ಕಲಿಯಲು ಪ್ರೇರಣೆಯಾಯಿತು ಎಂದು ಹೇಳುತ್ತಾರೆ ಮುಖೇಶ್. ಯಕ್ಷಗಾನ ಗುರುಗಳು: ಡಾ.ಕೋಳ್ಯೂರು ರಾಮಚಂದ್ರ ರಾವ್. ಶ್ರೀ ಉಮೇಶ್ ಹೆಬ್ಬಾರ್. ಶ್ರೀ ವಿಠ್ಠಲ ಹೆಬ್ಬಾರ್. ಶ್ರೀ ಅರುಣ್ ಕುಮಾರ್ ಧರ್ಮಸ್ಥಳ. ನೆಚ್ಚಿನ ಪ್ರಸಂಗಗಳು: ಎಲ್ಲಾ ಪೌರಾಣಿಕ ಪ್ರಸಂಗಗಳು ಅಚ್ಚುಮೆಚ್ಚಿನ ಪ್ರಸಂಗಗಳಾಗಿದ್ದು, ಪ್ರಮುಖವಾಗಿ ಮಹಿರಾವಣ ಕಾಳಗ, ರಾವಣ ವಧೆ, ಕುರುಕ್ಷೇತ್ರ, ಕನ್ಯಾಂತರಂಗ, ಚೂಡಾಮಣಿ, ಕುಮಾರವಿಜಯ, ಅತಿಕಾಯ ಮೋಕ್ಷ ನೆಚ್ಚಿನವು. ನೆಚ್ಚಿನ ವೇಷಗಳು: ರಾವಣ,…

Read More

ಬೆಂಗಳೂರು : ವೈಟ್‌ಫೀಲ್ಡ್ ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟಿನಲ್ಲಿ ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ದಿನಾಂಕ 20 ಜುಲೈ 2025ರಂದು ಆಚರಿಸಿದರು. ಈ ಸಂಭ್ರಮದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಚುಟುಕು ಕವಿ-ಕಾವ್ಯ ಸಂಗಮ ನಡೆಯಿತು. ಭಾಷೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದವರಿಗೆ, ಕಾಸರಗೋಡು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯವು 2025ನೇ ಸಾಲಿನ ರಾಷ್ಟ್ರಕವಿ ಗೋವಿಂದಪೈ ರಾಷ್ಟ್ರ ಪ್ರಶಸ್ತಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣರಾಯ ರಾಷ್ಟ್ರ ಪ್ರಶಸ್ತಿ ಮತ್ತು ಕನ್ನಡ ಪಯಸ್ವಿನಿ ಪ್ರಶಸ್ತಿಗಳನ್ನು ಪ್ರದಾನ ಮಾಡಿತು. ಡಾ. ಸುಷ್ಮಾ ಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕರಾದ ಡಾ. ವಾಮನ್‌ರಾವ್ –…

Read More

ಪುತ್ತೂರು : ಪುತ್ತೂರು ಶಿವಸದನದ ಹಿರಿಯರು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಯಕ್ಷಗಾನ ತಾಳಮದ್ದಳೆ ಸಂಭ್ರಮವನ್ನು ಮಂಗಳೂರಿನ ಪ್ರಖ್ಯಾತ ‘ಯಕ್ಷ ಮಂಜುಳಾ’ ಕದ್ರಿ ಮಹಿಳಾ ಬಳಗ ಇವರ ತಂಡದಿಂದ ‘ದಕ್ಷ ಯಜ್ಞ’ ತಾಳಮದ್ದಲೆಯು ಅಮೋಘವಾಗಿ ದಿನಾಂಕ 18 ಜುಲೈ 2025ರಂದು ಶಿವ ಸದನದಲ್ಲಿ ಪ್ರದರ್ಶಿಸಲ್ಪಟ್ಟಿತು. ಇದರಲ್ಲಿ ಭಾಗವಹಿಸಿದ ಕಲಾವಿದರೆಲ್ಲರೂ ಮೇರು ವ್ಯಕ್ತಿತ್ವದವರು. ಪ್ರಧಾನ ಸಂಚಾಲಕರಾಗಿರುವ ಶ್ರೀಮತಿ ಪೂರ್ಣಿಮಾ ಪ್ರಭಾಕರ್ ರಾವ್ ಪೇಜಾವರ ಹಾಗೂ ಇವರ ಪತಿ ಶ್ರೀ ಪ್ರಭಾಕರ್ ರಾವ್ ಪೇಜಾವರ ಯಕ್ಷ ಮಂಜುಳಾದ ಗೌರವಾಧ್ಯಕ್ಷರಾಗಿ ತುಂಬಾ ಸಮಯದಿಂದ ಯಕ್ಷಗಾನದಲ್ಲಿ ಅಭಿರುಚಿ ಹೊಂದಿ ಯಕ್ಷಗಾನದ ಮೇಲಿನ ಅಭಿಮಾನದಿಂದ ಈ ಸಂಸ್ಥೆಯನ್ನು ಹುಟ್ಟು ಹಾಕಿ ದಂಪತಿಗಳು ಪ್ರೋತ್ಸಾಹ ನೀಡುತ್ತಾ ಬರುತ್ತಿರುವರು. ಈ ತಂಡದ ನಿರ್ದೇಶಕರಾಗಿ ಶ್ರೀ ಅಲೆವೂರಾಯರು ಪ್ರಸಿದ್ಧ ಸ್ತ್ರೀ ವೇಷಧಾರಿಯೂ ಹೌದು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಬಸವಕಲ್ಯಾಣ ಪ್ರಶಸ್ತಿ ಪಡೆದು ಅನೇಕ ಸಂಘಗಳನ್ನು ರಚಿಸಿ ‘ಸರಯೂ’ ಬಾಲ ಯಕ್ಷ ವೃಂದ ರಚಿಸಿ ಯಕ್ಷಗಾನ ಕಲೆಯ ಪರಿಚಯವನ್ನು ಅನೇಕ ಮಕ್ಕಳಿಗೆ ಪರಿಚಯಿಸಿ ದಾರಿದೀಪವಾಗಿದ್ದಾರೆ. ಇಂಜಿನಿಯರಿಂಗ್…

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 132ನೇ ಸರಣಿಯಲ್ಲಿ ದಿನಾಂಕ 06 ಜುಲೈ 2025ರಂದು ಶಶಿಶಂಕರ ಸಭಾಂಗಣದಲ್ಲಿ ಉಡುಪಿಯ ಕುಮಾರಿ ಶ್ರೇಷ್ಠ ದೇವಾಡಿಗ ಇವರಿಂದ ಭರತನಾಟ್ಯ ಕಾರ್ಯಕ್ರಮ ಬಹಳಷ್ಟು ಆಕರ್ಷಕವಾಗಿ ನಡೆಯಿತು. ಉತ್ತಮ ಅಂಗಶುದ್ಧ ಹಾಗೂ ಹಿತಮಿತ ಅಭಿನಯದಿಂದ ಜನರ ಮೆಚ್ಚುಗೆ ಪಡೆದ ಶ್ರೇಷ್ಠ ದೇವಾಡಿಗ ಉಡುಪಿಯ ಡಾ. ಮಂಜರಿಚಂದ್ರರವರ ಶಿಷ್ಯೆ. ಈ ನೃತ್ಯಾಂತರಂಗದಲ್ಲಿ ಅಭ್ಯಾಗತರಾದ ರಂಗಕಲಾವಿದ ಶ್ರೀ ಸದಾಶಿವ ಶಿವಗಿರಿಯವರು ನೃತ್ಯ ಸಂಸ್ಥೆಯ ಸಾಂಸ್ಕೃತಿಕ ಚಟುವಟಿಕೆಯ ಬಗ್ಗೆ ಹಾಗೂ ಮಕ್ಕಳಲ್ಲಿ ಲಲಿತ ಕಲೆಗಳ ಸತ್ಪರಿಣಾಮಗಳ ಬಗ್ಗೆ ಸವಿವರವಾಗಿ ಹೇಳಿದರು. ಕುಮಾರಿ ಅಕ್ಷರಿ ಕೆ. ಇವರು ನಿರೂಪಣೆಗೈದರೆ, ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ಆಯೋಜಿಸಿದ್ದರು. ವಿದುಷಿ ಸುಮಂಗಲ ಗಿರೀಶ್ ಅಭಿಪ್ರಾಯ ತಿಳಿಸಿ, ಶೌರೀಕೃಷ್ಣ ಪ್ರಾರ್ಥನೆ, ಕುಮಾರಿ ನಯೋಮಿ ಪಂಚಾಂಗ ವಾಚನ, ಕುಮಾರಿ ಪ್ರಾರ್ಥನಾ ಎಂ. ಮತ್ತು ಬಿಂದು ಕಲಾವಿದರ ಪರಿಚಯ, ವಿದ್ವಾನ್ ಗಿರೀಶ್ ಕುಮಾರ್ ಶಂಖ ನಾದ ಮತ್ತು ಕುಮಾರಿ ಪ್ರಣಮ್ಯ ಪಾಲೆಚ್ಚಾರು ವಿಷಯ ಮಂಡನೆ…

Read More

ಮೈಸೂರು : ಪರಿವರ್ತನ ರಂಗ ಸಮಾಜ (ರಿ.) ಇದರ 25ನೇ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಸ್ತುತಪಡಿಸುವ ತಂಡದ 30ನೇ ನಾಟಕ ರವೀಂದ್ರ ಭಟ್ ಇವರ ಕೃತಿ ಆಧಾರಿತ ‘ಮೂರನೇ ಕಿವಿ’ ನಾಟಕ ಪ್ರದರ್ಶನವನ್ನು ದಿನಾಂಕ 27 ಜುಲೈ 2025ರಂದು ಸಂಜೆ 6-30 ಗಂಟೆಗೆ ರಮಾಗೋವಿಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರೊ. ಎಸ್.ಆರ್. ರಮೇಶ್ ಇವರು ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿವಿಧ ಪ್ರಕಾರಗಳಲ್ಲಿ ಪುರಸ್ಕಾರಗಳನ್ನು ನೀಡಲು ಒಟ್ಟು 54 ದತ್ತಿ ಪುರಸ್ಕಾರಗಳಿದ್ದು, ಇವುಗಳಿಗೆ 2024ರ ಜನವರಿ 1ರಿಂದ ಡಿಸಂಬರ್ 31ರೊಳಗೆ ಪ್ರಕಟವಾದ ಪುಸ್ತಕಗಳನ್ನು ಕಳುಹಿಸಲು ಆಹ್ವಾನಿಸಲಾಗಿತ್ತು. ಇದಕ್ಕೆ ಜುಲೈ 20ರಂದು ಕೊನೆಯ ದಿನವಾಗಿತ್ತು. ಆದರೆ ದೇಶ-ವಿದೇಶಗಳಿಂದ ಅನೇಕ ಬರಹಗಾರರು ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿಕೊಂಡಿದ್ದಾರೆ. ಈ ಸಾರ್ವಜನಿಕ ಒತ್ತಾಯವನ್ನು ಪರಿಗಣಿಸಿ ಕೊನೆಯ ದಿನಾಂಕವನ್ನು ಆಗಸ್ಟ್ 20ರ ಬುಧವಾರಕ್ಕೆ ವಿಸ್ತರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಕಾದಂಬರಿ, ಕಥಾ ಸಂಕಲನ, ಅನುವಾದ, ಸಂಶೋಧನೆ, ಮಕ್ಕಳ ಸಾಹಿತ್ಯ, ವೈಚಾರಿಕ ಬರಹಗಳು, ವೈದ್ಯಕೀಯ ಸಾಹಿತ್ಯ, ಇತಿಹಾಸ, ಜಾನಪದ, ಮನೋವಿಜ್ಞಾನ, ಸಿನಿಮಾ ಸಾಹಿತ್ಯ, ಕೃಷಿಗೆ ಸಂಬಂಧಿಸಿದ ಕೃತಿಗಳು, ಪ್ರವಾಸ ಸಾಹಿತ್ಯ ಮಹಿಳೆಯರಿಗೆ ಸಂಬಂಧಿಸಿದ ಮಹಿಳೆಯರು ರಚಿಸಿದ ಕೃತಿಗಳು, ನಾಟಕ, ಪ್ರಬಂಧ, ಸಂಪಾದನೆ, ಜೈನ ಸಾಹಿತ್ಯದ ಕುರಿತ ಸಂಶೋಧನೆ ಮೊದಲಾದ ಕ್ಷೇತ್ರಗಳಿಗೆ ರಚಿತವಾದ ಕೃತಿಗಳಿಗೆ ದತ್ತಿ ಪುರಸ್ಕಾರಗಳು ಇರುತ್ತವೆ. ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕ…

Read More