Subscribe to Updates
Get the latest creative news from FooBar about art, design and business.
Author: roovari
ಮೈಸೂರು : ಮೈಸೂರು ವಿಜ್ಞಾನ ನಾಟಕೋತ್ಸವ ಟ್ರಸ್ಟ್ (ರಿ.) ಇದರ ವತಿಯಿಂದ 8ನೇ ಆವೃತ್ತಿಯ ‘ವಿಜ್ಞಾನ ನಾಟಕೋತ್ಸವ’ವನ್ನು ದಿನಾಂಕ 24 ಜುಲೈ 2025ರಿಂದ 27 ಜುಲೈ 2025ರವರೆಗೆ ಪ್ರತಿದಿನ ಸಂಜೆ 6-30 ಗಂಟೆಗೆ ಮೈಸೂರಿನ ರಮಾಗೋವಿಂದ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ದಿನಾಂಕ 24 ಜುಲೈ 2025ರಂದು ಸಂಜೆ 5-00 ಗಂಟೆಗೆ ‘ವಿಜ್ಞಾನ ನಾಟಕೋತ್ಸವ’ದ ಉದ್ಘಾಟನೆ ನಡೆಯಲಿದ್ದು, ಬಳಿಕ ಬೆಂಗಳೂರಿನ ರಿದ್ಧಿ ತಂಡದವರಿಂದ ನೀಲಾಂಜನ್ ಚೌಧರಿ ಇವರ ನಿರ್ದೇಶನದಲ್ಲಿ ‘ಟ್ರಯಲ್ ಆಫ್ ಅಬ್ದುಸ್ ಸಲಾಮ್’, ದಿನಾಂಕ 25 ಜುಲೈ 2025ರಂದು ಮೈಸೂರಿನ ಅರಿವು ರಂಗ ತಂಡದವರಿಂದ ಪ್ರವೀಣ್ ಬೆಳ್ಳಿ ಇವರ ನಿರ್ದೇಶನದಲ್ಲಿ ‘ಹಸಿವು’, ದಿನಾಂಕ 26 ಜುಲೈ 2025ರಂದು ಮೈಸೂರಿನ ಕಲಾಸುರುಚಿ ತಂಡದವರಿಂದ ಪ್ರೊ. ಎಚ್.ಎಸ್. ಉಮೇಶ್ ಇವರ ನಿರ್ದೇಶನದಲ್ಲಿ ‘ರಾಮನ್ – ಬೆಳಕು, ಶಬ್ದ, ಸಿಡಿಲು’ ಮತ್ತು ದಿನಾಂಕ 27 ಜುಲೈ 2025ರಂದು ಮೈಸೂರಿನ ಪರಿವರ್ತನ ರಂಗಸಮಾಜ ತಂಡದವರಿಂದ ಪ್ರೊ. ಎಸ್.ಆರ್. ರಮೇಶ್ ಇವರ ನಿರ್ದೇಶನದಲ್ಲಿ ‘ಮೂರನೇ ಕಿವಿ’ ನಾಟಕ ಪ್ರದರ್ಶನಗೊಳ್ಳಲಿದೆ.
ಶಾಂತಿನಾಥ ದೇಸಾಯಿ ಅವರು ಲೇಖಕ, ವಿಮರ್ಶಕ ಮತ್ತು ಕಾದಂಬರಿ ಲೋಕಕ್ಕೆ ಒಂದು ಹೊಸ ಮಾರ್ಗವನ್ನು ತಂದವರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 22 ಜುಲೈ 1929ರಂದು ಇವರು ಜನಿಸಿದರು. ಹಳಿಯಾಳ ಒಂದು ಕಾಡು ಪ್ರದೇಶ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲಿ ಮುಗಿಸುವುದರೊಂದಿಗೆ ಒಬ್ಬ ಉತ್ತಮ ವಿದ್ಯಾರ್ಥಿಯಾಗಿ ಎಲ್ಲರ ಗಮನ ಸೆಳೆದ ಇವರು ಮೆಟ್ರಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದುವ ಉದ್ದೇಶದಿಂದ ಧಾರವಾಡದ ಶಾಲೆಗೆ ಸೇರಿದರು. ಸಾಹಿತಿ ಗಂಗಾಧರ ಚಿತ್ತಾಲರ ಪ್ರಭಾವಕ್ಕೆ ಒಳಗಾಗಿ ಚಿಂತನಶೀಲತೆಯ ಜೊತೆಗೆ ವಿದ್ಯಾರ್ಜನೆಯಲ್ಲಿಯೂ ಅತಿಯಾದ ಆಸಕ್ತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಧಾರವಾಡಕ್ಕೆ ಬಂದ ಚಿಂತನಕಾರ ಮಾನವೇಂದ್ರರಾಯರ ಮಾನವತವಾದದ ಬಗ್ಗೆಯೂ ಆಕರ್ಷಿತರಾದರು. ಉತ್ತಮ ವಿದ್ಯಾರ್ಥಿಯಾದ ಇವರು ಆಂಗ್ಲ ಭಾಷಾ ಅಧ್ಯಾಪಕರ ಗಮನ ಸೆಳೆದ ಪರಿಣಾಮವಾಗಿ ಇಂಗ್ಲಿಷ್ ಭಾಷೆಯಲ್ಲಿ ವಿಶೇಷ ಅಧ್ಯಯನಕ್ಕಾಗಿ ಮುಂಬೈಯ ಪ್ರಸಿದ್ಧವಾದ ವಿಲ್ಸನ್ ಕಾಲೇಜಿಗೆ ಸೇರಿದರು. ಮುಂದೆ ಪಿ. ಎಚ್. ಡಿ. ಪದವಿಯನ್ನು ಪಡೆದುಕೊಂಡರು. ಬ್ರಿಟಿಷ್ ಕೌನ್ಸಿಲ್ ಪ್ರಣೀತ ಇಂಗ್ಲೆಂಡಿಗೆ ಹೋಗುವ ಒಂದು ಉತ್ತಮ ಅವಕಾಶ…
ಬೆಂಗಳೂರು : ‘ರಂಗಸ್ಥಳ ಯಕ್ಷಮಿತ್ರ ಕೂಟ’ದ ರಜತ ಪರ್ವ ೨೦೨೫ ರ ಅಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದೊಂದಿಗೆ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸರಣಿ ಕಾರ್ಯಕ್ರಮವಾಗಿ ಹಾರಾಡಿ ಮತ್ತು ಮಟಪಾಡಿ ಯಕ್ಷಗಾನ ಶೈಲಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ದಿನಾಂಕ 22 ಜುಲೈ 2025ರಂದು ಬೆಂಗಳೂರಿನ ನಾಗರಬಾವಿಯ ಶ್ರೀಗಂಧ ಕಾವಲು, ಶ್ರೀ ವೇಣುಗೋಪಾಲಕೃಷ್ಣ ಸಮುದಾಯ ಭವನದಲ್ಲಿ ನಡೆಯಿತು. ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರಾದ ಎಚ್. ಶ್ರೀಧರ ಹಂದೆಯವರ ನಿರ್ದೇಶನದಲ್ಲಿ ಸುಜಯೀಂದ್ರ ಹಂದೆ ಮತ್ತು ಬಳಗದವರು ಹಾರಾಡಿ ತಿಟ್ಟಿನ ಗತ್ತುಗಾರಿಕೆಯ ಹೆಜ್ಜೆ ಮತ್ತು ಮಟಪಾಡಿ ಶೈಲಿಯ ಲಾಲಿತ್ಯ ಪೂರ್ಣವಾದ ಕುಣಿತಗಳನ್ನು ಅಭಿನಯಿಸಿ ತೋರಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾರಾಡಿ ರಾಮ ಗಾಣಿಗ, ಕುಷ್ಟ (ಕೃಷ್ಣ) ಗಾಣಿಗ, ಹಾರಾಡಿ ನಾರಾಯಣ ಗಾಣಿಗ, ಮಟಪಾಡಿ ವೀರಭದ್ರ ನಾಯಕ್ ಮೊದಲಾದ ಹಿರಿಯ ಕಲಾವಿದರ ನೆನಪು ಮೂಡಿಸುವಂತೆ ಒಡ್ಡೋಲಗ, ಯುದ್ಧ ಕುಣಿತ, ಹಸ್ತಾಭಿನಯ, ವಿವಿಧ ಪ್ರಸಂಗಗಳ ಪದ್ಯ ಪ್ರಸ್ತುತಿಯೊಂದಿಗೆ ಹಾರಾಡಿ ಮತ್ತು ಮಟಪಾಡಿ ಶೈಲಿಗಳ ನೃತ್ತ,…
ಮಂಗಳೂರು: “ಕೊಂಕಣಿಯ ವೀರಮಹಿಳೆ’ ನಾಮಾಂಕಿತ ಸಾಹಿತಿ, ಪ್ರಕಾಶಕಿ, ಕುಲಶೇಖರ ನಿವಾಸಿ ಸಿಂಪ್ರೊಜಾ ಫಿಲೋಮಿನ ಗ್ಲೇಡಿಸ್ ಸಿಕ್ವೇರಾ ಇವರು ದಿನಾಂಕ 21 ಜುಲೈ 2025ರಂದು ಉಳ್ಳಾಲದ ಸೊಮೇಶ್ವರದಲ್ಲಿರುವ “ಪಶ್ಚಿಮ್ ವೃದ್ಧಾಶ್ರಮದಲ್ಲಿ ನಿಧನ ಹೊಂದಿದರು. ಇವರಿಗೆ 80ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯ ನಿರ್ವಹಿಸಿದ ಇವರು, ಕಥೆ, ಕಾದಂಬರಿ, ಕವನ, ಲೇಖನಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಪ್ರಕಾಶಕಿಯಾಗಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿರುವ ಇವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿದ್ದರು ಇವರಿಗೆ 2004ರಲ್ಲಿ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಸಂದೇಶ ಹಾಗೂ ದಾಯ್ಜಿ ದುಬೈ ಪುರಸ್ಕಾರ ಅಭಿಸಿದೆ.
ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ನಿಧನರಾದ ಪಾತಾಳ ವೆಂಕಟರಮಣ ಭಟ್ಟ ಹಾಗೂ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 21 ಜುಲೈ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ಯಕ್ಷ ಶಾಂತಲೆಯಾಗಿ ಯಕ್ಷಗಾನ ರಂಗಸ್ಥಳದಲ್ಲಿ ಮೆರೆದ ಪಾತಾಳರು ಉಭಯ ತಿಟ್ಟುಗಳಲ್ಲೂ ಪಾರಮ್ಯವನ್ನು ಮೆರೆದು ಸ್ತ್ರೀ ಪಾತ್ರಗಳಿಗೆ ಹೊಸ ಆಯಾಮವನ್ನು ನೀಡಿದ ಅಪ್ರತಿಮ ಕಲಾವಿದರು, ಅದೇ ತೆರನಾಗಿ ಪರಂಪರೆಯ ದೈತ್ಯ ವೇಷಗಳಿಗೆ ಜೀವ ತುಂಬಿದ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಓರ್ವ ಅಪರೂಪದ ಕಲಾವಿದ” ಎಂದು ನುಡಿದರು. ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಪಾತಾಳ ವೆಂಕಟರಮಣ ಭಟ್ಟರನ್ನು ಸ್ಮರಿಸುತ್ತಾ “ಬೇಲೂರು ಶಿಲಾಬಾಲಿಕೆಯರ ಭಂಗಿಗಳನ್ನು ಅಭ್ಯಸಿಸಿ ರಂಗಸ್ಥಳದಲ್ಲಿ ಯಕ್ಷಗಾನ ಕಲೆಗೆ ಅನುಸಾರವಾಗಿ ಬಳಸಿಕೊಂಡ ಹಿರಿಮೆ ಪಾತಾಳರದ್ದು, ತನ್ನ ವೃತ್ತಿಜೀವನದ ಗಳಿಕೆಯ ಬಹುಪಾಲನ್ನು ಯಕ್ಷಗಾನ ಕಲಾವಿದರಿಗೆ ಸಮರ್ಪಿಸಿದ ಉದಾರ ಹೃದಯವಂತ ಎಂದರು,…
ಬೆಂಗಳೂರು : ಬೆಂಗಳೂರಿನ ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆಯು ಕೊಡಮಾಡುವ ಪ್ರತಿಷ್ಠಿತ “ಗಡಿನಾಡ ಸಾಹಿತ್ಯ ಭೂಷಣ ಪ್ರಶಸ್ತಿ”ಗೆ ಕಾಸರಗೋಡಿನ ಪತ್ರಕರ್ತ, ಲೇಖಕ, ಸಂಘಟಕ ರವಿ ನಾಯ್ಕಾಪು ಇವರನ್ನು ಆಯ್ಕೆ ಮಾಡಲಾಗಿದೆ. ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಹಾಗೂ ಅಖಿಲ ಕರ್ನಾಟಕ ಸಾಹಿತಿ ಕಲಾವಿದರ ಒಕ್ಕೂಟಗಳ ನೇತೃತ್ವದಲ್ಲಿ ದಿನಾಂಕ 27 ಜುಲೈ 2025ರಂದು ಬೆಂಗಳೂರಿನ ಗೆಜ್ಜೆನಾದ ಸ್ಟುಡಿಯೋ ಸಭಾಂಗಣದಲ್ಲಿ ನಡೆಯಲಿರುವ ಕನ್ನಡ ಸಂಸ್ಕೃತಿ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆಯೆಂದು ವೇದಿಕೆಯು ತಿಳಿಸಿದೆ. ಪ್ರಶಸ್ತಿಯು ರೂಪಾಯಿ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಕಳೆದ 25 ವರ್ಷಗಳಿಂದ ಕಾಸರಗೋಡಿನಲ್ಲಿ ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿರುವ ರವಿ ನಾಯ್ಕಾಪು ಇವರ ಸಾಹಿತ್ಯ ವಲಯದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ‘ದಾನಗಂಗೆ’, ‘ಸ್ನೇಹಗಂಗೆ’, ‘ಗಾನಗಂಗೆ’, ‘ಸಾವಿರದ ಸಾಧಕ’, ‘ಸಮಾಜ ಸಂಪದ’ ಎಂಬೀ ಕೃತಿಗಳನ್ನು ರಚಿಸಿರುವ ರವಿ ಅವರ “ಸ್ನೇಹಗಂಗೆ” ಕೃತಿಯ ಸಂಕ್ಷಿಪ್ತ ರೂಪವು ಮಂಗಳೂರು ವಿಶ್ವವಿದ್ಯಾನಿಲಯದ ಬಿ. ಸಿ.…
ಬೆಂಗಳೂರು : ಶ್ರೀಕಲಾ ಸಂಗೀತ ವಿದ್ಯಾಲಯ ಪ್ರಸ್ತುತ ಪಡಿಸುವ 10ನೇ ವಾರ್ಷಿಕ ‘ಗುರುವಂದನಾ’ ಕಾರ್ಯಕ್ರಮವನ್ನು ದಿನಾಂಕ 27 ಜುಲೈ 2025ರಂದು ಬೆಳಿಗ್ಗೆ 09-30 ಗಂಟೆಗೆ ಮಲ್ಲೇಶ್ವರಂ ಇಲ್ಲಿರುವ ಲೀಲಾಧ್ರಿ ಸಿಂಗರ್ಸ್ ಅಕಾಡೆಮಿ ಅಂಡ್ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಮತಿ ಶಶಿಕಲಾ ಭಟ್ ಮತ್ತು ವಿದ್ಯಾರ್ಥಿ ವೃಂದದವರಿಂದ ಹಾಗೂ ಅತಿಥಿ ಕಲಾವಿದರಾಗಿ ಭಾಗವಹಿಸಿದ ಶ್ರೀಧರ್ ಹೆಗ್ಡೆ ಕಲ್ಭಾಗ್ ಇವರ ಹಾಡುಗಾರಿಕೆಗೆ ಗೌರವ್ ಗಡಿಯಾರ್ ಹಾರ್ಮೋನಿಯಂ ಮತ್ತು ವಿಕಾಸ್ ನರೇಗಲ್ ಹಾಗೂ ಪ್ರಕಾಶ್ ದೇಶಪಾಂಡೆ ಇವರು ತಬಲಾ ಸಾಥ್ ನೀಡಲಿದ್ದಾರೆ.
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಸಹಕಾರದೊಂದಿಗೆ ಅಮೃತ ಕಾಲೇಜ್ ಪಡೀಲ್ ಇಲ್ಲಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಪಗಪು ‘ ತುಳು ನಾಟಕದ ಪ್ರಥಮ ಪ್ರದರ್ಶನವು ದಿನಾಂಕ 19 ಜುಲೈ 2025ರಂದು ಬಲ್ಮಠ ಸರಕಾರಿ ಪಿ.ಯು. ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಎಸ್ಟಿ-ಆದಾಯ ತೆರಿಗೆ ಸಲಹೆಗಾರ ಯು.ಪುಂಡರೀಕಾಕ್ಷ ಮೂಲ್ಯ ಮಾತನಾಡಿ “ತುಳುನಾಡಿನ ಗತಕಾಲದ ಸೌಹಾರ್ದದ ಬದುಕು ಹಾಗೂ ಕಥನಗಳು ಎಲ್ಲರಿಗೂ ಗೊತ್ತಿವೆ. ಆದರೆ ಮುಂದಿನ ಪೀಳಿಗೆಗೆ ಸೌಹಾರ್ದತೆಯನ್ನು ಸಾರುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ನಾಟಕ ಹಾಗೂ ಸಾಂಸ್ಕೃತಿಕ ರೂಪಕಗಳು ಹೆಚ್ಚು ಪರಿಣಾಮಕಾರಿಯಾಗುವುದು. ಜಾತಿ, ಮತ, ಭೇದವನ್ನು ಮರೆತು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ತುಳು ಭಾಷೆಗೆ ಇದೆ. ತುಳುವಿನ ಮೂಲಕ ನಾವೆಲ್ಲರೂ ಒಗ್ಗಟ್ಟನ್ನು ಮತ್ತು ಬಾಂಧವ್ಯವನ್ನು ಬೆಸೆಯೋಣ ” ಎಂದು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಂಟ್ಯಾಕ್ ಮಂಗಳೂರು ಘಟಕದ ಸಂಚಾಲಕ ಸುಭಾಶ್ ಬಸು,…
ಧಾರವಾಡ : ಕನ್ನಡದ ಮಹತ್ವದ ಲೇಖಕರಲ್ಲೊಬ್ಬರಾದ ದಿ. ಬಿ.ಸಿ. ರಾಮಚಂದ್ರ ಶರ್ಮ [1925-2005] ಅವರ ಜನ್ಮಶತಮಾನೋತ್ಸವದ ನಿಮಿತ್ತ ಸಾಹಿತ್ಯ ಗಂಗಾ ಸಂಸ್ಥೆಯು ಬಿ.ಸಿ. ರಾಮಚಂದ್ರ ಶರ್ಮ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿ 2025 ನೀಡುತ್ತಿದೆ. ಈ ಪ್ರಶಸ್ತಿಯು ಒಂದು ಸಾಂಕೇತಿಕ ಮೊತ್ತ. ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿದೆ. ಹಿಂದೆ ದಿ. ಸು.ರಂ. ಎಕ್ಕುಂಡಿ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲೂ ಸಹ ನಮ್ಮ ಸಂಸ್ಥೆ ಸು. ರಂ. ಎಕ್ಕುಂಡಿ ಜನ್ಮಶತಮಾನೋತ್ಸವ ಕಾವ್ಯ ಪ್ರಶಸ್ತಿ 2023 ನೀಡಿತ್ತು. ಆಸಕ್ತ ಕವಿಗಳು/ಕವಯತ್ರಿಯರು ನಿಯಮಾನುಸಾರವಾಗಿ ಹಸ್ತಪ್ರತಿ ಕಳಿಸಬಹುದು. ನಿಯಮಗಳು : 1. ಸ್ಪರ್ಧಿಗಳಿಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. 2. ಒಬ್ಬ ಸ್ಪರ್ಧಿ ಒಂದು ಹಸ್ತಪ್ರತಿ ಮಾತ್ರ ಕಳಿಸಬೇಕು. 3. ಕನಿಷ್ಠ 30 ಮತ್ತು ಗರಿಷ್ಠ 50 ಸಂಖ್ಯೆಯ ಮಿತಿಯೊಳಗೆ ಸ್ವತಂತ್ರ ಮತ್ತು ಅಪ್ರಕಟಿತ ಕವಿತೆಗಳುಳ್ಳ ಹಸ್ತಪ್ರತಿ ಮಾತ್ರ ಕಳಿಸಬೇಕು. 4. ಅನುವಾದ, ಅನುಸೃಷ್ಟಿ, ರೂಪಾಂತರ, ಸ್ಪೂರ್ತಿ ಅಥವಾ ಪ್ರೇರಣೆ ಪಡೆದ ಕವಿತೆಗಳಿರುವ ಹಸ್ತಪ್ರತಿ ಪರಿಗಣಿಸಲಾಗುವುದಿಲ್ಲ. 5.…
ಬೆಂಗಳೂರು : ಬುಕ್ ಬ್ರಹ್ಮ ಸಂಸ್ಥೆಯು ಕೋರಮಂಗಲದ ಸೇಂಟ್ ಜಾನ್ಸ್ ಸಭಾಂಗಣದಲ್ಲಿ ದಿನಾಂಕ 08 ಆಗಸ್ಟ್ 2025ರಿಂದ 10 ಆಗಸ್ಟ್ 2025ರವರೆಗೆ ‘ಬುಕ್ ಬ್ರಹ್ಮ ಸಾಹಿತ್ಯ ಉತ್ಸವ’ವನ್ನು ಹಮ್ಮಿಕೊಂಡಿದೆ. ಮೂರು ದಿನಗಳ ಈ ಉತ್ಸವದಲ್ಲಿ ಸಾಹಿತ್ಯ ಗೋಷ್ಠಿಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ದೇಶ-ವಿದೇಶದ 350ಕ್ಕೂ ಅಧಿಕ ಸಾಹಿತಿಗಳು, ಕಲಾವಿದರು ಮತ್ತು ವಿಷಯ ತಜ್ಞರು ಭಾಗವಹಿಸುತ್ತಾರೆ. ಈ ಬಾರಿ ಎಂಟು ವಿವಿಧ ಸಮಾನಾಂತರ ವೇದಿಕೆಗಳಿರಲಿದ್ದು, 180ಕ್ಕೂ ಅಧಿಕ ಗೋಷ್ಠಿಗಳು, ಎಂಟು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಆರು ಭಾಷೆಗಳ ಕೃತಿಗಳನ್ನು ಒಳಗೊಂಡ ಪುಸ್ತಕ ಮಳಿಗೆಗಳು, ಮಕ್ಕಳ ಸಾಹಿತ್ಯ ಉತ್ಸವ, ಜನಪದ ಮಾರುಕಟ್ಟೆ, ಆಹಾರ ಮಳಿಗೆ ಸೇರಿ ಹಲವು ವಿಶೇಷಗಳು ಉತ್ಸವದಲ್ಲಿ ಇರಲಿದೆ. ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿಯರಾದ ಬಾನು ಮುಷ್ತಾಕ್, ದೀಪಾ ಭಾಸ್ತಿ, ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ, ದಾಮೋದರ ಮೌಜೊ, ಮ್ಯಾಗ್ನೆಸೆ ಪ್ರಶಸ್ತಿ ಪುರಸ್ಕೃತ ಟಿ.ಎಂ. ಕೃಷ್ಣ ಅವರ ಜತೆಗೆ ಸಾಹಿತ್ಯ ಕ್ಷೇತ್ರದ ಪ್ರಮುಖರು ಪಾಲ್ಗೊಳ್ಳುತ್ತಾರೆ. ಲಕ್ಷ್ಮೀ ಚಂದ್ರಶೇಖರ,…