Author: roovari

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ 2022-23ನೇ ಸಾಲಿನ ‘ವರ್ಣಶ್ರೀ’ ಪ್ರಶಸ್ತಿಗೆ ಖ್ಯಾತ ಚಿತ್ರ ಕಲಾವಿದೆ ವೀಣಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ. ಮಂಗಳೂರು ಕೆ. ಎಸ್. ರಾವ್ ರೋಡ್ ನಿವಾಸಿಯಾಗಿರುವ ವೀಣಾ ಶ್ರೀನಿವಾಸ್ ಕಾವಿ ಕಲೆಯಲ್ಲಿ ಹೆಸರು ಗಳಿಸಿದ್ದಾರೆ. 16ನೆಯ ಶತಮಾನದ ಸಾಂಪ್ರದಾಯಕ ಕಲಾಪ್ರಕಾರವಾಗಿರುವ ಕಾವಿ ಕಲೆಯ ಪುನರುಜ್ಜಿವನ ಮತ್ತು ಪ್ರಚಾರದಲ್ಲಿ ದೊಡ್ಡ ಕೊಡುಗೆ ನೀಡಿರುವ ಇವರು ಯುವ ಜನಾಂಗದಲ್ಲಿಯೂ ಕಾವಿ ಕಲೆಯ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಶ್ರಮಿಸುತ್ತಿದ್ದಾರೆ. ಎಂ. ಆರ್. ಪಾವಂಜೆಯವರ ಶಿಷ್ಯೆ ಯಾಗಿರುವ ವೀಣಾ ಅವರ ಅಜ್ಜ ವೆಂಕಟ್ರಾಯ ಕಾಮತ್ ಮುಂಬಯಿಯ ಜೆ. ಜೆ. ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದರು.

Read More

ಕಾಸರಗೋಡು : ಮನಸ್ಸಿಗೆ ಸಂತೋಷ ನೀಡುವ ಸಂಗೀತದಿಂದ ಆತಂಕ ನೆಮ್ಮದಿ ಒತ್ತಡ, ನಿವಾರಣೆಯಾಗುತ್ತದೆ. ಸಂಗೀತ ಆಲಿಸುವ ಮೂಲಕ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಜೀವನದ ಪ್ರತಿಯೊಂದು ಕ್ಷಣದಲ್ಲೂ ಪ್ರಮುಖ ಪಾತ್ರವಹಿಸುವ ಸಂಗೀತ ಮನಸು ಕದಡಿದಾಗ ಶಾಂತಗೊಳಿಸುತ್ತದೆ. ಸಂಗೀತದಿಂದ ಗುರುತಿಸಿಕೊಳ್ಳಬೇಕು. ಕರೋಕೆ ಗಾಯಕರ ಸಮ್ಮಿಲನ ಕಾರ್ಯಕ್ರಮದ ಮೂಲಕ ಸಂಗೀತ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರ ಸಹಾಯಕ ಯೋಜನಾ ಅಧಿಕಾರಿ, ಖ್ಯಾತ ರಂಗಭೂಮಿ ಹಾಗೂ ಸಂಗೀತ ಕಲಾವಿದ ನಾಗೇಂದ್ರ ಮಂಗಳೂರು ಅವರು ಹೇಳಿದರು. ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಸಂಗೀತ ಘಟಕ ಸ್ವರ ಚಿನ್ನಾರಿ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಬೆಂಗಳೂರು ಇದರ ಸಹಯೋಗದೊಂದಿಗೆ ದಿನಾಂಕ 09 ಫೆಬ್ರವರಿ 2025 ರಂದು  ಕರಂದಕ್ಕಾಡ್ ನ ಪದ್ಮಗಿರಿ ಕಲಾ ಕುಟೀರದಲ್ಲಿ ಆಯೋಜಿಸಿದ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ವೈದ್ಯರಾದ ಡಾ. ಕೆ. ಶಾನುಭೋಗ್ ರವರು…

Read More

ಬೆಂಗಳೂರು : ಅಂತರಂಗ ಬಹಿರಂಗ ತಂಡ ಪ್ರಸ್ತುತ ಪಡಿಸುವ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಬಸವನಗುಡಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಟರ್‌ ವಾಡಿಯಾ ಸಭಾಂಗಣದಲ್ಲಿ ಆಯೋಜಿಲಾಗಿದೆ. ಮೋಲಿಯ‌ರ್ ಮೂಲ ಕಥೆಯನ್ನು ಎಂ. ರಾಮಾರಾವ್ ಅನುವಾದಿಸಿದ್ದು, ಎಸ್. ವಿಕಾಸ್ ನಿರ್ದೇಶನ ಮಾಡಿದ್ದಾರೆ. ಬುಕ್ ಮೈ ಶೋನಲ್ಲಿ ಟಿಕೆಟ್ ಲಭ್ಯವಿದ್ದು, ನೇರ ಬುಕ್ಕಿಂಗ್‌ಗಾಗಿ 86605 47776 ಸಂಖ್ಯೆಯನ್ನು ಸಂಪರ್ಕಿಸಬಹುದು. ಹವ್ಯಾಸಿ ರಂಗಭೂಮಿಯಲ್ಲಿ ಸಾಕಷ್ಟು ಪರಿಣಿತಿಯನ್ನು ಪಡೆದಂತಹ ಹತ್ತಾರು ಹುಡುಗರು ಸೇರಿ ಸ್ಥಾಪಿಸಲ್ಪಟ್ಟ ಸಂಸ್ಥೆಯೇ ‘ಅಂತರಂಗ ಬಹಿರಂಗ’. ಈ ತಂಡದ ಮುಖ್ಯ ಉದ್ದೇಶ ಹೊಸ ಕಲಾವಿದರಿಗೆ ಅವಕಾಶ ಹಾಗೂ ಆಧುನಿಕ ಕಾಂಟೆಂಪರರಿ ವಿಷಯ ಆಧಾರಿತ ಕಥಾ ವಸ್ತು ಕೊಡುವುದು. ಅದರಂತೆಯೇ ನಡೆದು ಬರುತ್ತಿದ್ದು, ಇದರ ಜೊತೆಗೆ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರ, ಸಾಂಸ್ಕೃತಿಕ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಒಯ್ಯುವುದು ಹಾಗೂ ಆದಷ್ಟು ಹಳೆ ಪ್ರೇಕ್ಷಕರ ಜೊತೆ ಜೊತೆಗೆ ಹೊಸ ಪ್ರೇಕ್ಷಕರನ್ನು ರಂಗಭೂಮಿಗೆ ಆಕರ್ಷಿಸುವುದು…

Read More

ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ ‘ವರ್ಣಶ್ರೀ’ ಪ್ರಶಸ್ತಿಗೆ ಖ್ಯಾತ ಚಿತ್ರ ಕಲಾವಿದ ಸೈಯ್ಯದ್ ಆಸಿಫ್ ಅಲಿ ಆಯ್ಕೆಯಾಗಿದ್ದಾರೆ. ಸೈಯದ್ ಆಸಿಫ್ ಮೂಲತಃ ಮಂಗಳೂರಿನವರಾಗಿದ್ದು ಫೈನ್ ಆರ್ಟ್‌ನಲ್ಲಿ ಹೆಸರು ಗಳಿಸಿದ್ದಾರೆ. ಆಧುನಿಕ ಮತ್ತು ಪ್ರಾಚೀನ ಕಲೆಗಳ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿರುವ ಇವರು ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಲೆಗಳಿಗೆ ಸಂಬಂಧಿಸಿದಂತೆ ಹಲವಾರು ಪ್ರದರ್ಶನಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಇವರು ಮಂಗಳೂರಿನ ಮಹಾಲಸಾ ಕಾಲೇಜ್ ಆಫ್ ವಿಶುವಲ್ ಆರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಮಂಗಳೂರು : ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹಯೋಗದಲ್ಲಿ ‘ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಸಂಸ್ಮರಣ ಪ್ರಶಸ್ತಿ ಪ್ರದಾನ ಸಮಾರಂಭ -2025’ವನ್ನು ದಿನಾಂಕ 21 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಾನ್ನಿಧ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಾಹಿತಿಗಳು, ಪ್ರಕಾಶಕರಾದ ಡಾ. ವಾಮನ ನಂದಾವರ ಮತ್ತು ಶ್ರೀಮತಿ ಚಂದ್ರಕಲಾ ನಂದಾವರ ಇವರು 2024ನೆಯ ಸಾಲಿನ ಪ್ರಶಸ್ತಿ ಪುರಸ್ಕೃತರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪಿ. ಶ್ರೀಕೃಷ್ಣ ಭಟ್ ಇವರು 2025ನೆಯ ಸಾಲಿನ ಪ್ರಶಸ್ತಿ ಪುರಸ್ಕೃತರು. ಈ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ವಿ.ಪಿ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎ. ವಿವೇಕ ರೈ ಇವರು ವಹಿಸಲಿದ್ದು, ಸಂತ ಅಲೋಶಿಯಸ್ ಸ್ವಾಯತ್ತ ಮಹಾವಿದ್ಯಾಲಯದ ಕುಲಸಚಿವರಾದ ಡಾ. ಅಲ್ವಿನ್ ವಿ. ಡೆ’ಸಾ ಇವರು ಶುಭಾಶಂಸನೆ ಗೈಯಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಂಕಿತ ಪುಸ್ತಕ ಬೆಂಗಳೂರು…

Read More

ಮಂಗಳೂರು: ಮಂಗಳೂರಿನ ಆರ್ಟ್ ಕೆನರಾ ಟ್ರಸ್ಟ್ ವತಿಯಿಂದ ಖ್ಯಾತ ಕವಿ ಬಿ.ಆರ್. ಲಕ್ಷ್ಮಣ ರಾವ್ ಅವರೊಂದಿಗಿನ ಸಂವಾದ ಕಾರ್ಯಕ್ರಮ ದಿನಾಂಕ 09 ಫೆಬ್ರವರಿ 2025 ರಂದು ಮಂಗಳೂರಿನ ಕೊಡಿಯಾಲ್ ಗುತ್ತು ಕಲೆ ಸಂಸ್ಕೃತಿ ಕೇಂದ್ರದಲ್ಲಿ ನಡೆಯಿತು. ಸಂವಾದದಲ್ಲಿ ಮಾತನಾಡಿದ ಖ್ಯಾತ ಕವಿ ಬಿ.ಆರ್. ಲಕ್ಷ್ಮಣ ರಾವ್ “ನನ್ನನ್ನು ಭಾವಗೀತೆಗಳಿಂದಲೇ ಗುರುತಿಸುತ್ತಾರೆ. ಭಾವಗೀತೆಗಳು ಅರಮನೆಯ ಹೆಬ್ಬಾಗಿಲಿನಂತೆ. ಒಳಗಡೆಗೂ ಹೋಗಬೇಕು. ಭಾವಗೀತೆಗಳ ಬಗ್ಗೆ ಮಾತನಾಡುವಾಗ ಅದರಲ್ಲಿರುವ ಕಾವ್ಯಾಂಶಗಳ ಬಗ್ಗೆ ಮಾತಾಡಿ, ನನ್ನ ಕವನಗಳು ಜನಮಾನಸದಲ್ಲಿ ಉಳಿದಿದೆ ಎನ್ನುವಾಗ ಸಾರ್ಥಕತೆ ಮತ್ತು  ಕವನ ಪದ್ಯವಾಗಿ ಹಾಡಾಗಿ ಉಳಿದಾಗ ಖುಷಿಯಾಗುತ್ತದೆ. ಗಂಭೀರ ಕವನಗಳೂ ನವ್ಯ ಕವನಗಳೂ ಉಳಿದಿವೆ ಎಂದ ಅವರು ಮೂವತ್ತು ವರ್ಷಗಳ ಹಿಂದೆ ಕ್ಯಾಸೆಟ್ ಕಾಲದಲ್ಲಿ ಮದ್ರಾಸಿಗೆ ಹೋಗಿದ್ದೆವು ರೆಕಾರ್ಡ್‌ಗೆ. ಅಲ್ಲಿಂದ ರೆಕಾರ್ಡ್ ಮುಗಿಸಿ ರೈಲಿನಲ್ಲಿ ನಾನು ಸಿ. ಅಶ್ವತ್ ಬಾಲಿ ವಾಪಾಸು ಬರಲು ನಿಂತಿದ್ದಾಗ ಇಬ್ಬರು ಪೊಲೀಸರು ಬಂದು ಅಶ್ವತ್‌ರಿಗೆ ಅಡ್ಡ ಬಿದ್ದು ನಮಸ್ಕರಿಸಿ ನಿಮ್ಮ ಅಭಿಮಾನಿಗಳು ನಾವು ನಿಮ್ಮ ಹಾಡು ಕೇಳಿ ಮಲಗೋದು…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ರ ಜನವರಿಯಿಂದ ಡಿಸಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ಒಟ್ಟು 52 ದತ್ತಿಗಳ 56 ಪ್ರಶಸ್ತಿಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದರಲ್ಲಿ ವಸುದೇವ ಭೂಪಾಲಂ ದತ್ತಿಯಲ್ಲಿ ನಾಲ್ಕು ಪುಸ್ತಕಗಳಿಗೂ ಮತ್ತು ರತ್ನಾಕರವರ್ಣಿ-ಮುದ್ದಣ ಅನಾಮಿಕ ದತ್ತಿಯಲ್ಲಿ ಎರಡು ಪುಸ್ತಕಗಳಿಗೂ ಬಹುಮಾನ ನೀಡಲಾಗುತ್ತದೆ. ಇದಕ್ಕೆ ರಾಜ್ಯ, ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ ಹನ್ನೆರಡು ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ ಆಯ್ಕೆ ಮಾಡಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರ ನೇತೃತ್ವದ ಸಮಿತಿ ಪಾರದರ್ಶಕವಾಗಿ ಕೆಳಕಂಡ ಅಂತಿಮ ಪಟ್ಟಿಯನ್ನು ಆಯ್ಕೆ ಮಾಡಿದ್ದು, ಶೀಘ್ರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ. ಈ ಪುಸ್ತಕ ದತ್ತಿ ಪ್ರಶಸ್ತಿಗಳಿಂದ ‘ಪುಸ್ತಕ ಸಂಸ್ಕೃತಿ ನಮ್ಮಲ್ಲಿ ಇನ್ನಷ್ಟು ಬೆಳೆಯಲಿದೆ ಎಂದು ಆಶಿಸಿರುವ ಅವರು ಯುವಜನರು ಪುಸ್ತಕಗಳನ್ನು ಪ್ರಕಟಿಸಲು ಇದು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದಿದ್ದಾರೆ. ಬರಹಗಾರರ ಸಂಖ್ಯೆ ಇನ್ನಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡಾಭಿಮಾನಿಗಳು ಇನ್ನಷ್ಟು ‘ಪುಸ್ತಕ…

Read More

ಉಡುಪಿ : ಆದರ್ಶ ಆಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯಲ್ಲಿ ಉಡುಪಿ ರಂಗಭೂಮಿಯು ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ ನೀಡುವ ‘ಪುಸ್ತಕ ಪ್ರಶಸ್ತಿ’ಯ ದ್ವಿತೀಯ ವರ್ಷದ ಪುರಸ್ಕಾರಕ್ಕೆ ಬೆಂಗಳೂರಿನ ಉಪನ್ಯಾಸಕರಾದ ಎನ್.ಸಿ. ಮಹೇಶ್ ಇವರ ‘ಸಾಕುತಂದೆ ರೂಮಿ’ ನಾಟಕ ಕೃತಿಯು ಆಯ್ಕೆಯಾಗಿದೆ. ಮೂವರು ತೀರ್ಪುಗಾರರ ಸಮಿತಿಯ ಸಲಹೆಯಂತೆ ಈ ಕೃತಿಯನ್ನು ಆಯ್ಕೆ ಮಾಡಲಾಗಿದೆ ಎಂದು ರಂಗಭೂಮಿ (ರಿ.) ಉಡುಪಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟರು ತಿಳಿಸಿರುವರು. ಅಂಬಾತನಯ ಮುದ್ರಾಡಿಯವರ ಸಂಸ್ಮರಣೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರಕಟವಾದ ಕನ್ನಡ ನಾಟಕ ಕೃತಿಗೆ ನೀಡಲಾಗುವ ದ್ವಿತೀಯ ವರ್ಷದ ಈ ಪ್ರಶಸ್ತಿಯು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ರೂಪಾಯಿ ಹದಿನೈದು ಸಾವಿರ ನಗದು ಬಹುಮಾನವನ್ನು ಒಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 27 ಮಾರ್ಚ್ 2025ರಂದು ‘ವಿಶ್ವರಂಗಭೂಮಿ ದಿನಾಚರಣೆ’ಯಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರುಗಲಿದೆ. ಕಳೆದ ವರ್ಷ ಈ ಪ್ರಶಸ್ತಿಯು ರಂಗಭೂಮಿಗೆ…

Read More

ಕಾಸರಗೋಡು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025ರಂದು ನಡೆಯುವ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ -2025 ಮತ್ತು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ, ಕಾಸರಗೋಡು ಹಾಗೂ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ನೇತೃತ್ವದಲ್ಲಿ ಕರ್ನಾಟಕ ಗಡಿನಾಡ ಉತ್ಸವ ಹಾಗೂ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಬೆಂಗಳೂರು ಕನ್ನಡ ನಾಟಕೋತ್ಸವವನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ಕವಿ, ಸಾಹಿತಿಗಳು, ಮುಖ್ಯ ಅತಿಥಿಗಳು, ಕನ್ನಡ ವಿದ್ಯಾರ್ಥಿಗಳಿಗೆ ನೀಡಲು ಪುಸ್ತಕ ಹಬ್ಬ, ಪುಸ್ತಕ ದಾನ – ಶ್ರೇಷ್ಠದಾನ ಸಾಹಿತ್ಯ ಪುಸ್ತಕಗಳ ಕೊಡುಗೆಗಳಿಗೆ ಆಹ್ವಾನ ಎಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ ಮಾಹಿತಿಯನ್ವಯ ಬೆಳ್ತಂಗಡಿಯ ಮೂಲದ ಮಹಾರಾಷ್ಟ್ರದ ಕಲ್ಯಾಣದ ಲೇಖಕಿ, ಕವಯತ್ರಿ, ಕುಮುದಾ ಡಿ. ಶೆಟ್ಟಿಯವರು 38 ಕೃತಿಗಳ ಕೊಡುಗೆಯನ್ನು ನೀಡಿದ್ದಾರೆ. ಅವರಿಗೆ ಕಾಸರಗೋಡು ಜಿಲ್ಲಾ…

Read More

ಬೆಂಗಳೂರು : ಅನೂರ್ ಅನಂತಕೃಷ್ಣ ಶರ್ಮಾ ಫೌಂಡೇಷನ್ ಫಾರ್ ಮ್ಯೂಜಿಕ್ ಇದರ ಸಹಯೋಗದೊಂದಿಗೆ ದೇವ ಕೃಪಾ ಆಡಿಟೋರಿಯಮ್ ಆಂಡ್ ಜಂ ರೂಮ್ ಪ್ರಸ್ತುತ ಪಡಿಸುವ ಸಂಗೀತ ಕಾರ್ಯಕ್ರಮವು ದಿನಾಂಕ 19 ಫೆಬ್ರವರಿ 2025ರಂದು 6-30 ಗಂಟೆಗೆ ಬೆಂಗಳೂರಿನ ಗಿರಿನಗರದಲ್ಲಿರುವ ದೇವ ಕೃಪಾ ಆಡಿಟೋರಿಯಂನಲ್ಲಿ ನಡೆಯಲಿದೆ. ವಿದುಷಿ ಮಧುಮಿತಾ ರಾಯ್ ಇವರ ಹಾಡುಗಾರಿಕೆಗೆ ಪಾರ್ಥ ಮುಖರ್ಜಿ ಇವರು ತಬಲಾ ಮತ್ತು ನರಸಿಂಹ ಕುಲಕರ್ಣಿ ಇವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.

Read More