Author: roovari

ಬೋಳೂರು : ಮಾತಾ ಅಮೃತಾನಂದಮಯಿಯವರ ಜನ್ಮದಿನೋತ್ಸವದ ವಿಶೇಷ ಸಂದರ್ಭದಲ್ಲಿ ದಿನಾಂಕ 11 ಅಕ್ಟೋಬರ್ 2025ನೇ ಶನಿವಾರ ಬೆಳಿಗ್ಗೆ 9-00 ಗಂಟೆಯಿಂದ ನಿರಂತರವಾಗಿ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಚಕ್ರ ಪೂಜೆ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ವಿಶೇಷವಾಗಿ ಜಗದ್ವಿಖ್ಯಾತರಾದ ಅಮ್ಮನವರ ಜೀವನ ಆಧಾರಿತ ಕಥೆಯನ್ನು ಅವಲಂಬಿಸಿ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ ವಿರಚಿತ ‘ಅಮೃತಮಯಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟವೂ ಪ್ರಸ್ತುತಗೊಳ್ಳಲಿದೆ.

Read More

ಮಂಗಳೂರು : ಸ್ಪಿಕ್ ಮಕೆ ಎನ್.ಐ.ಟಿ.ಕೆ. ಇವರು ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 6-00 ಗಂಟೆಗೆ ಎನ್.ಐ.ಟಿ.ಕೆ.ಯ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ವಿದುಷಿ ಅಮೃತ ಮುರಳಿ ಇವರ ಹಾಡುಗಾರಿಕೆಗೆ ವಿದ್ವಾನ್ ಬಿ.ಎಸ್. ಪ್ರಶಾಂತ್ ಇವರು ಮೃದಂಗದಲ್ಲಿ ಹಾಗೂ ವಿದುಷಿ ಅದಿತಿ ಕೃಷ್ಣಪ್ರಕಾಶ್ ಇವರು ವಯೋಲಿನ್ ನಲ್ಲಿ ಸಾಥ್ ನೀಡಲಿದ್ದಾರೆ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಮುಖ್ಯ ದತ್ತಿ ಪುರಸ್ಕಾರಗಳಾದ ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧೀ ಪುರಸ್ಕಾರ ಪುದವಟ್ಟು ದತ್ತಿ, ಪಂಕಜಶ್ರೀ ಸಾಹಿತ್ಯ ದತ್ತಿ, ಶ್ರೀಮತಿ ಟಿ. ಗಿರಿಜಾ ಸಾಹಿತ್ಯ ದತ್ತಿ ಪುರಸ್ಕಾರಗಳ ಪ್ರದಾನ ಕಾರ್ಯಕ್ರಮವು ದಿನಾಂಕ 10 ಅಕ್ಟೋಬರ್ 2025ರ ಶುಕ್ರವಾರ ಸಂಜೆ 5-00 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜವಹರಲಾಲ್ ನೆಹರು ತಾರಾಲಯದ ನಿರ್ದೇಶಕರಾದ ಡಾ. ಬಿ.ಆರ್. ಗುರುಪ್ರಸಾದ್ ಇವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ದತ್ತಿದಾನಿಗಳಾದ ಎ.ಆರ್. ನಾರಾಯಣಘಟ್ಟ ಮತ್ತು ಟಿ.ಎಸ್. ಶೈಲಜ ಉಪಸ್ಥಿತರಿರುತ್ತಾರೆ. ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರವನ್ನು ರಾಜ್ಯ ಸರ್ವೋದ್ಯ ಮಂಡಲದ ಅಧ್ಯಕ್ಷರಾದ ಡಾ. ಎಚ್.ಎನ್. ಸುರೇಶ್ ಇವರಿಗೂ ಪಂಕಜಶ್ರೀ ಪುರಸ್ಕಾರವನ್ನು ಮುಂಬಯಿಯಲ್ಲಿ ನೆಲೆಸಿರುವ ಹಿರಿಯ…

Read More

ಸಾಗರ : ವಿಜಯ ಸೇವಾ ಟ್ರಸ್ಟ್ (ರಿ.) ಮತ್ತು ಯಕ್ಷಶ್ರೀ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ‘ಧಾರೇಶ್ವರರ ನೆನಪು’ ಯಕ್ಷ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರರ ನೆನಪಿನಲ್ಲಿ ವಿಶಿಷ್ಟ ಯಕ್ಷಗಾನ ಹಿಮ್ಮೇಳ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಸಾಗರ ಬಿ.ಹೆಚ್. ರಸ್ತೆ, ಐ.ಬಿ. ಮುಂಭಾಗದಲ್ಲಿರುವ ಕುಡುಪಲಿ ಸದಾನಂದ ಸ್ವರಲಾಯದಲ್ಲಿ ಆಯೋಜಿಸಲಾಗಿದೆ. ಗೋಪಾಲಕೃಷ್ಣ ಭಟ್ ಜೋಗಿಮನೆ, ಸೃಜನ್ ಗಣೇಶ ಹೆಗಡೆ, ಶಂಕರ ಭಾಗವತರು, ಶರತ್ ಜಾನಕೈ, ಕಾರ್ತೀಕ್ ಧಾರೇಶ್ವರ ಮುಂತಾದ ಕಲಾವಿದರು ಭಾಗವಹಿಸಲಿದ್ದು, ಮದ್ದಳೆ ಮೋಡಿಗಾರ ಶಂಕರ ಭಾಗವತರಿಗೆ ಯಕ್ಷಶ್ರೀ ರಜತ ಸಂಭ್ರಮದ ವಿಶೇಷ ಗೌರವಾರ್ಪಣೆ ನೀಡಲಾಗುವುದು.

Read More

ಉಡುಪಿ : ಉಡುಪಿ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ‘ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 07 ಅಕ್ಟೋಬರ್ 2025ರಂದು ಉಡುಪಿಯ ಮಿಷನ್ ಕಾಂಪೌಂಡ್‌ನಲ್ಲಿರುವ ಜಗನ್ನಾಥ ಸಭಾಭವನದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ “ವಾಲ್ಮೀಕಿ ನಾಡು ಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ‘ಮಹರ್ಷಿ ವಾಲ್ಮೀಕಿ ಸಮ್ಮಾನ್ 2025’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ ಇವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅಭಿನಂದನಾ ಮಾತುಗಳನ್ನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.…

Read More

ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ 98ನೇ ಶಾಸ್ತ್ರೀಯ ಮಾಸಿಕ ಸಂಗೀತ ಕಛೇರಿ ‘ಆಲಾಪ್’ ಕಾರ್ಯಕ್ರಮವನ್ನು ದಿನಾಂಕ 11 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಜೆ.ಪಿ. ನಗರದ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ. ಈ ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಕಾರ್ಯಕ್ರಮದಲ್ಲಿ ತನ್ಮಯ್ ವಿ. ಸುಪ್ರಮೋದ ಮತ್ತು ವಿಸ್ಮಯ್ ವಿ. ಸುಪ್ರಮೋದ ಇವರ ವಯೋಲಿನ್ ದ್ವಂದ್ವ ವಾದನಕ್ಕೆ ಕಾರ್ತಿಕ್ ಪ್ರಣವ್ ಇವರು ಮೃದಂಗ ಮತ್ತು ಪ್ರಣವ್ ಶೇಷಾದ್ರಿ ಇವರು ಘಟಂ ಸಾಥ್ ನೀಡಲಿದ್ದಾರೆ. ‘ಆಲಾಪ್’ ಸರಣಿ ಸ್ವರ ಮಾಲಿಕೆಯ 98ನೇ ಕಾರ್ಯಕ್ರಮ ಇದಾಗಿದ್ದು, ಕಳೆದ 10 ವರ್ಷಗಳಿಂದ ಈ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಉದಯೋನ್ಮುಖ ಕಲಾವಿದರಿಗಾಗಿಯೇ ಆಯೋಜಿಸುವ ಈ ಸರಣಿಯಲ್ಲಿ ಒಂದು ತಿಂಗಳು ಹಿಂದೂಸ್ಥಾನಿ ಹಾಗೂ ಒಂದು ತಿಂಗಳು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಗಳು ನಡೆಯುತ್ತಿದೆ. ಶ್ರೀ ನಿವಾಸ್ ಜಿ. ಕಪ್ಪಣ್ಣ ಹಾಗೂ ಲಲಿತ ಕಪ್ಪಣ್ಣ ದಂಪತಿಗಳು ತಮ್ಮ ಮನೆಯ ಅಂಗಳದಲ್ಲಿಯೇ ಸುಸಜ್ಜಿತವಾದ ಸಭಾಂಗಣವನ್ನು ನಿರ್ಮಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿಯೇ…

Read More

ಮಂಗಳೂರು : ಕಳೆದ 42 ವರ್ಷಗಳಿಂದ ತನ್ನ ಸದಸ್ಯರ ಮಕ್ಕಳ ಪ್ರತಿಭೆಯ ಅನಾವರಣ ಮತ್ತು ಪ್ರದರ್ಶನಕ್ಕೆ ಪ್ರೋತ್ಸಾಹ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಸಂಸ್ಥೆ ರಾಗ ತರಂಗ (ರಿ ) ಶೈಕ್ಷಣಿಕ, ಕ್ರೀಡಾ, ಸಂಗೀತ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ” ಪ್ರತಿಭಾ ಪುರಸ್ಕಾರ -2025″ ನ್ನು ತಾ. 05/10/2025 ರಂದು ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಸಿತ್ತು. ತನ್ನ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ವಿದ್ಯಾರ್ಥಿ ದೆಸೆಯಲ್ಲೇ ಬ್ರಿಟನ್ ಮೂಲದ ರೋಲ್ಸ್ ರಾಯ್ ಜೆಟ್ ಎಂಜಿನ್ ತಯಾರಿಕಾ ಕಂಪನಿಯಲ್ಲಿ ಅತ್ತ್ಯುತ್ತಮ ವೇತನದ ಉನ್ನತ ಉದ್ಯೋಗ ಗಳಿಸಿ ಪ್ರಸಿದ್ದಿಯಾದ ಸಹ್ಯಾದ್ರಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಕುಮಾರಿ ಋತುಪರ್ಣ ಕೆ ಎಸ್ ಸಮಾರಂಭದ ಆಹ್ವಾನಿತ ಅತಿಥಿಯಾಗಿದ್ದಳು. ಸುಮಾರು 34 ವಿದ್ಯಾರ್ಥಿಗಳನ್ನು ಅವರ ವಿವಿಧ ಕ್ಷೇತ್ರಗಳ ಸಾಧನೆಯನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಾಗೆಯೇ ಪತ್ರಿಕಾ ಮಾಧ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಶ್ರೀಮತಿ ಮಾಲತಿ ಶೆಟ್ಟಿ ಮಾಣೂರು, ಕ್ರೀಡಾ ಕ್ಷೇತ್ರದ…

Read More

ಕಾಸರಗೋಡು : ಸಿರಿಬಾಗಿಲು ಪ್ರತಿಷ್ಠಾನದ ಪ್ರಕಾಶನದಲ್ಲಿ ಕರ್ನಾಟಕ ಸಂಗೀತ ಪಿತಾಮಹರೆನಿಸಿದ ಶ್ರೀ ಪುರಂದರದಾಸರು ರಚಿಸಿದ ಯಕ್ಷಗಾನ ಪ್ರಸಂಗ ವಿಶೇಷ ಕೃತಿ ‘ಅನಸೂಯಾ ಚರಿತ್ರೆ’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 18 ಅಕ್ಟೋಬರ್ 2025ರ ಶನಿವಾರದಂದು ಬೆಳಗ್ಗೆ ಘಂಟೆ 10-00ಕ್ಕೆ ಕಾಸರಗೋಡಿನ ಸಿರಿಬಾಗಿಲಿನಲ್ಲಿರುವ ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಇವರ ಸಂಪಾದಕತ್ವದ ಈ ಅಪೂರ್ವ ಕೃತಿಯನ್ನು ಶ್ರೀಮದ್ ಜಗದ್ಗುರು ಮಧ್ವಾಚಾರ್ಯ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು, ಸಂಪುಟ ನರಸಿಂಹ ಸ್ವಾಮಿ, ಶ್ರೀ ಸುಬ್ರಹ್ಮಣ್ಯ ಮಠ ಇವರ ದಿವ್ಯ ಹಸ್ತದಲ್ಲಿ ಲೋಕಾರ್ಪಣೆಗೊಳಿಸಲಿದ್ದು, ಸಂಪಾದಕರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಮೈಸೂರು ಕೃತಿ ಪರಿಚಯವನ್ನು ಮಾಡಲಿದ್ದಾರೆ. ಡಾ. ಪಿ. ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರ, ಮಂಗಳೂರು ವಿಶ್ವವಿದ್ಯಾನಿಲಯದ ನಿರ್ದೇಶಕರಾಗಿರುವ ಡಾ. ಧನಂಜಯ ಕುಂಬಳೆ ಇವರ ಅಧ್ಯಕ್ಷತೆ ವಹಿಸಲಿದ್ದು, ಯಕ್ಷಗಾನದ ಹಿರಿಯ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಶುಭಾಶಂಸನೆ…

Read More

ವಿಜಯಪುರ : ನಗರದ ಜೋರಾಪೂರ ಪೇಠದಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದಿನಾಂಕ 06 ಅಕ್ಟೋಬರ್ 2025ರಂದು ಸಂಗೀತಜಗತ್ತು ಪ್ರಕಾಶನ (ರಿ) ವಿಜಯಪುರ ವತಿಯಿಂದ ಶ್ರೀಮತಿ ಸಂಗೀತಾ ಶ್ರೀ ವಿಶ್ವನಾಥ ಅರಬಿಯವರ ಚೊಚ್ಚಲ ಸುಪುತ್ರ ಓಂ ನ ಪ್ರಥಮ ವರ್ಷದ ಹುಟ್ಟುಹಬ್ಬ ಜೊತೆಗೆ ಶ್ರೀ ವಿಶ್ವನಾಥ ಅರಬಿಯವರ ಕೃತಿಗಳ ಲೋಕಾರ್ಪಣೆ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಮಕ್ಕಳ ಸಾಹಿತಿಗಳಾದ ಸಿಂದಗಿಯ ಶ್ರೀ ಹ. ಮ. ಪೂಜಾರ ಮಾತನಾಡಿ “ಮಕ್ಕಳ ಸಾಹಿತ್ಯವನ್ನು ಎಲ್ಲರೂ ಪ್ರೀತಿಸಬೇಕು, ಮಕ್ಕಳಿಗೆ ಓದಲು ಸಾಹಿತ್ಯವನ್ನು ನೀಡಬೇಕು, ಅರಬಿ ದಂಪತಿಗಳ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ. ಅವರ ಸುಪುತ್ರ ಓಂ ಒಬ್ಬ ಒಳ್ಳೆಯ ಸಾಹಿತಿಯಾಗಿ ಹೊರಹೊಮ್ಮಲಿ” ಎಂದು ಶುಭ ಹಾರೈಸಿದರು. ವಿಶ್ವನಾಥ ಅರಬಿಯವರ ಸ್ವರಚಿತ ಮಕ್ಕಳ ಕವನ ಸಂಕಲನ ‘ಭಾರತ ಮಾತೆಯ ಮಕ್ಕಳು ನಾವು’ ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಮಕ್ಕಳ ಸಾಹಿತಿಗಳಾದ ಪ. ಗು. ಸಿದ್ದಾಪುರ ಮಾತನಾಡಿ “ಪುಸ್ತಕಗಳು ಸವೆಯದ ಪೆಪ್ಪರಮೆಂಟು, ಸಾಹಿತ್ಯ…

Read More

ಉಡುಪಿ : ಖ್ಯಾತ ಪ್ರಸಂಗಕರ್ತ, ಅರ್ಥಧಾರಿ, ಶ್ರೇಷ್ಠ ಶಿಕ್ಷಕರಾಗಿದ್ದ ಸೀತಾನದಿ ಗಣಪಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಈ ಬಾರಿಯ ಪ್ರಶಸ್ತಿಯನ್ನು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರೂ, ಪಾರಂಪರಿಕ ಯಕ್ಷಗಾನದ ಬಗ್ಗೆ ಅಪಾರ ಅನುಭವ ಹೊಂದಿರುವ, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಎಸ್.ವಿ.ಭಟ್ ಇವರಿಗೆ ದಿನಾಂಕ 07 ಅಕ್ಟೋಬರ್ 2025ರಂದು ಗುರುಪುರದ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಳದ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಮತ್ತು ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಅಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಎಸ್‌.ವಿ. ಉದಯಕುಮಾರ್ ಶೆಟ್ಟಿ, ಕೆ. ದೇವಿಪ್ರಸಾದ ಶೆಟ್ಟಿ, ಪೊಲ್ಯ ಉಮೇಶ್ ಶೆಟ್ಟಿ, ಡಾ. ರವಿರಾಜ ಶೆಟ್ಟಿ, ಎಸ್. ಅಶೋಕ್ ಕುಮಾರ್ ಶೆಟ್ಟಿ, ಸೀತಾನದಿ ವಿಟ್ಠಲ ಶೆಟ್ಟಿ, ಎಸ್. ಜಯರಾಮ ಶೆಟ್ಟಿ, ಬಿ. ಭುವನಪ್ರಸಾದ ಹೆಗ್ಡೆ, ಡಾ. ಬಿ. ಜಗದೀಶ ಶೆಟ್ಟಿ ಉಪಸ್ಥಿತರಿದ್ದರು.

Read More