Author: roovari

ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರರಾದ ವೈದೇಹಿಯವರ ಮೂಲ ಹೆಸರು ವಾಸಂತಿ. ತಮ್ಮ 23ನೇ ವಯಸ್ಸಿನಲ್ಲಿ ಕೆ.ಎಲ್. ಶ್ರೀನಿವಾಸ ಮೂರ್ತಿಯವರನ್ನು ವಿವಾಹವಾದ ನಂತರ ತಮ್ಮ ಹೆಸರನ್ನು ಜಾನಕಿ ಶ್ರೀನಿವಾಸ ಮೂರ್ತಿ ಎಂದು ಬದಲಾಯಿಸಿಕೊಂಡರು. ಇವರ ರಚನೆಯ ‘ನೀರೆಯರ ಮನ’ ಎಂಬ ನೈಜ ಘಟನೆಯನ್ನಾಧರಿಸಿದ ಕತೆಯನ್ನು ಪ್ರಕಟಣೆಗಾಗಿ ಸುಧಾ ವಾರ ಪತ್ರಿಕೆಗೆ ‘ಜಾನಕಿ’ ಎಂಬ ಕಾವ್ಯನಾಮದಲ್ಲಿ ಕಳುಹಿಸಿದರು. ಆದರೆ ಆಗಿನ ಸಂಪಾದಕರು ‘ವೈದೇಹಿ’ ಎಂಬ ಕಾವ್ಯನಾಮದಲ್ಲಿ ಈ ಕಥೆಯನ್ನು ಪ್ರಕಟಿಸಿದರು. ಅಂದಿನಿಂದ ಜಾನಕಿಯವರು ‘ವೈದೇಹಿ’ ಎಂಬ ಕಾವ್ಯನಾಮದಲ್ಲಿಯೇ ಸಾಹಿತ್ಯ ರಚನೆ ಮಾಡಲಾರಂಬಿಸಿದರು. ಇವರ ಹಲವಾರು ಕಥೆಗಳು ಕರ್ಮವೀರ, ಮಯೂರ, ಸುಧಾ, ಪ್ರಜಾವಾಣಿ, ಉದಯವಾಣಿ, ಕಸ್ತೂರಿ ಮುಂತಾದ ದೈನಿಕ ವಾರಪತ್ರಿಕೆ ಹಾಗೂ ಪಾಕ್ಷಿಕಗಳಲ್ಲಿಯೂ ಪ್ರಕಟಗೊಂಡವು. ಸ್ತ್ರೀ ಪ್ರಪಂಚದ ನೋವು, ನಲಿವು, ಸಹನೆ, ನರಳುವಿಕೆಗಳಿಗೆ ಸ್ಪಂದಿಸಿ, ತಾವು ಕಂಡದ್ದನ್ನು, ಅನುಭವಿಸಿದ್ದನ್ನು ಸ್ತ್ರೀ ಪಾತ್ರಗಳ ಮೂಲಕ ಬರಹರೂಪಕ್ಕಿಳಿಸಿ ಅನಾವರಣಗೊಳಿಸಿದವರು ವೈದೇಹಿಯವರು. ಆದ್ದರಿಂದಲೇ ಅವರ ಸಾಹಿತ್ಯ ಕೃತಿಗಳಲ್ಲಿ ಸಹಜತೆ ಮತ್ತು ವಾಸ್ತವತೆ ನೈಜವಾಗಿರುವುದು ಮಾತ್ರವಲ್ಲ, ಕುಂದಾಪುರ ಕನ್ನಡದ ಸೊಗಡು…

Read More

ಕದಲಗೆರೆ : ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಇವರು ಆಯೋಜಿಸುವ ಭೀಮೇಶ್ ಹೆಚ್. ಎನ್. ದಾವಣಗೆರೆ ಇವರ ನಿರ್ದೇಶನದಲ್ಲಿ ಬಳ್ಳಾರಿ ಸಿರಿಗೇರಿಯ ಧಾತ್ರಿ ರಂಗ ಸಂಸ್ಥೆ (ರಿ.) ಇವರು ಅಭಿನಯಿಸುವ ‘ಶ್ರೀ ಕೃಷ್ಣ ಸಂಧಾನ’ ನಗೆ ನಾಟಕ ಪ್ರದರ್ಶನವನ್ನು ದಿನಾಂಕ 14 ಫೆಬ್ರವರಿ 2025 ರಂದು ಸಂಜೆ 7-30 ಗಂಟೆಗೆ ಕದಲಗೆರೆ ಅರಳಿಮರದ ಹತ್ತಿರ ಹಮ್ಮಿಕೊಳ್ಳಲಾಗಿದೆ.

Read More

ಅಂಕೋಲಾ : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿನಾಂಕ 25 ಫೆಬ್ರವರಿ 2025ರಂದು ಅಂಕೋಲಾ ತಾಲೂಕಿನಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಕಾರ್ಯಕ್ರಮವು ದಿನಾಂಕ 11 ಫೆಬ್ರವರಿ 2025ರಂದು ಅಂಕೋಲಾದ ನಾಡವರ ಸಭಾಭವನದಲ್ಲಿ ನಡೆಯಿತು. ಅಂಕೋಲಾ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ಭಟ್ ಇವರು ಲಾಂಛನವನ್ನು ಬಿಡುಗಡೆಗೊಳಿಸಿ “ಅಂಕೋಲಾ ಸಾಹಿತ್ಯದ ತವರೂರು. ಈ ಲಾಂಛನವು ಅಂಕೋಲಾದ ಸಮಗ್ರತೆಯನ್ನು ಬಿಂಬಿಸುವ ಹಾಗೂ ಗೌರವ ತಂದುಕೊಟ್ಟ ಸಂಗತಿಗಳ ಸಮ್ಮಿಶ್ರಣವಾಗಿದ್ದು, ಅತ್ಯಂತ ಸುಂದರವಾಗಿ ರಚಿತವಾಗಿದೆ. ಆದ್ದರಿಂದ ಸಮ್ಮೇಳನ ಸಹ ಸಮಗ್ರತೆಯಿಂದ ಕೂಡಿರಲಿದ್ದು ಅದನ್ನು ನಾವೆಲ್ಲರೂ ಯಶಸ್ವಿಗೊಳಿಸಬೇಕಾಗಿದೆ” ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ನಾಯಕ ಸ್ವಾಗತಿಸಿ, ಕ.ಸಾ.ಪ. ತಾಲೂಕು ಕಾರ್ಯದರ್ಶಿ ಜಗದೀಶ ನಾಯಕ ವಂದಿಸಿದರು. ಈ ಸಂದರ್ಭದಲ್ಲಿ ವಿನಾಯಕ ಹೆಗಡೆ, ಮಂಜುನಾಥ ಇಟಗಿ, ಮಹಾಂತೇಶ ರೇವಡಿ, ಅರುಣ ಶೆಟ್ಟಿ, ಸುಜೀತ ನಾಯ್ಕ, ಪುಷ್ಪಾ ನಾಯ್ಕ, ಎಸ್‌.ವಿ. ವಸ್ತ್ರದ, ರಪೀಖ್ ಶೇಖ್, ಎನ್.ವಿ. ರಾತೋಡ, ಎಂ.ಬಿ.…

Read More

ಕಾಸರಗೋಡು : ಶ್ರೀನಿವಾಸ್ ಯುನಿವರ್ಸಿಟಿಯಿಂದ ಶ್ರೀ ಶ್ಯಾಮರಾವ್ ಸ್ಮರಣೆಯಲ್ಲಿ ನೀಡಲಾಗುತ್ತಿರುವ ‘ಸಾಧನಶ್ರೀ -2025’ ಪ್ರಶಸ್ತಿಗೆ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಭಾಗವತರಾದ ಸನ್ಮಾನ್ಯ ಶ್ರೀ ರಾಮಕೃಷ್ಣ ಮಯ್ಯ ಇವರನ್ನು ಆಯ್ಕೆ ಮಾಡಲಾಗಿದ್ದು, ದಿನಾಂಕ 14 ಫೆಬ್ರವರಿ 2025ರಂದು ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.

Read More

ಕಾಸರಗೋಡು : ದ್ರಾವಿಡ ಭಾಷಾ ಅನುವಾದಕರ ಸಂಘ ಹಾಗೂ ಕಾಸರಗೋಡು ನುಳ್ಳಿಪ್ಪಾಡಿ ಕನ್ನಡ ಭವನ ಗ್ರಂಥಾಲಯದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 09 ಮಾರ್ಚ್ 2025ರಂದು ಒಂದು ದಿನದ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕನ್ನಡ ಭವನ ಗ್ರಂಥಾಲಯದಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಖ್ಯಾತ ಭಾಷಾಂತರಕಾರರು ಮಲಯಾಳದಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ಮಲಯಾಳಂಗೆ ಭಾಷಾಂತರ ಮಾಡುವಾಗ ಎದುರಿಸಬೇಕಾದ ಸಮಸ್ಯೆಗಳನ್ನು ಕುರಿತು ತರಗತಿಗಳನ್ನು ತೆಗೆದುಕೊಳ್ಳಲಿದ್ದಾರೆ. ಕನ್ನಡ ಮತ್ತು ಮಲಯಾಳಂ ಓದಲು ಮತ್ತು ಬರೆಯಲು ತಿಳಿದಿರುವ ಮತ್ತು ಅನುವಾದದಲ್ಲಿ ಆಸಕ್ತಿಯುಳ್ಳವರು ದಿನಾಂಕ 28 ಫೆಬ್ರವರಿ 2025ರೊಳಗೆ ಈ ಕೆಳಗಿನ ಸಂಖ್ಯೆಗಳಲ್ಲಿ ಒಂದನ್ನು ಸಂಪರ್ಕಿಸಬೇಕು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು. ಕಾರ್ಯಾಗಾರಕ್ಕೆ ಯಾವುದೇ ನೋಂದಣಿ ಶುಲ್ಕವಿಲ್ಲ ಹಾಗೂ ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷೆ ಡಾ. ಸುಷ್ಮಾ ಶಂಕರ್, ಗ್ರಂಥಾಲಯ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಡಿಬಿಟಿಎ ಮಲಯಾಳಂ ಸಂಯೋಜಕ ರವೀಂದ್ರನ್ ಪಾಡಿ ಮಾಹಿತಿ ನೀಡಲಿದ್ದು, ಹೆಚ್ಚಿನ ಮಾಹಿತಿಗಾಗಿ…

Read More

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಶ್ರೀಮತಿ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 23 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಪ್ರಶಸ್ತಿಯನ್ನು ತುಳು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಗಾಗಿ ನವೀನ್ ಡಿ. ಪಡೀಲ್ ಇವರಿಗೆ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸದಾನಂದ ಸುವರ್ಣ ಇವರ ನಿರ್ದೇಶನದಲ್ಲಿ ಮಂಗಳೂರಿನ ಸುವರ್ಣ ಪ್ರತಿಷ್ಠಾನದವರು ‘ಕೋರ್ಟ್ ಮಾರ್ಷಲ್’ ನಾಟಕ ಪ್ರದರ್ಶನ ನೀಡಲಿದ್ದಾರೆ.

Read More

ಮಂಗಳೂರು: ರಾಷ್ಟ್ರೀಯ ಸಾಂಸ್ಕೃತಿಕ ಸಂಘಟನೆಯಾದ ‘ಸ್ಪಿಕ್ ಮೆಕೆ’ಯ ಪ್ರಾದೇಶಿಕ ಕೇಂದ್ರಗಳಲ್ಲಿ ಒಂದಾದ ಎನ್. ಐ. ಟಿ. ಕೆ. ಸುರತ್ಕಲ್ ಇಲ್ಲಿನ ವಿದ್ಯಾರ್ಥಿಗಳು ಆಯೋಜಿಸುವ ‘ಆರಾಧನ 2025’ರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ಚಿನ್ಮಯೀ ಕೋಟಿಯಾನ್ ಇವರಿಂದ ಭರತನಾಟ್ಯ ಕಾರ್ಯಕ್ರಮ ದಿನಾಂಕ 06 ಫೆಬ್ರವರಿ 2025 ರಂದು ನಡೆಯಿತು. ಈಕೆ ಡಾ. ಭ್ರಮರಿ ಶಿವಪ್ರಕಾಶ್ ನೇತೃತ್ವದ ‘ನಾದನೃತ್ಯ ಕಲಾಸಂಸ್ಥೆ’ಯಲ್ಲಿ 7 ವರ್ಷಗಳಿಂದ ನೃತ್ಯ ಶಿಕ್ಷಣ ಪಡೆಯುತ್ತಿದ್ದಾರೆ. ಮಂಗಳೂರಿನಲ್ಲಿರುವ ಶಾರದಾ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಈಕೆ ಸಂಗೀತ, ಭರತನಾಟ್ಯ, ಭಾಗವದ್ಗೀತ ಕಂಠಪಾಠ, ಮೂಕಾಭಿನಯ, ಪ್ರಬಂಧ ಸ್ಪರ್ಧೆ ಮುಂತಾದವುಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆದ್ದಿರುತ್ತಾಳೆ. ಸಂಗೀತದಲ್ಲೂ ಆಸಕ್ತಿ ಹೊಂದಿರುವ ಈಕೆ ಸಂಗೀತದ ಆರಂಭಿಕ ಶಿಕ್ಷಣವನ್ನು ವಿದುಷಿ ಸಾವಿತ್ರಿ ರಾವ್ ಇವರಿಂದ ಪಡೆದು ಇದೀಗ ಸೀನಿಯರ್ ಹಂತದ ಶಿಕ್ಷಣವನ್ನು ವಿದುಷಿ ಶಿಲ್ಪಾ ರಾವ್ ಇವರ ಬಳಿ ಮುಂದುವರಿಸುತ್ತಿದ್ದಾಳೆ. ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ 96% ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ಈಕೆ ವೀಣಾ ವಾದನದಲ್ಲೂ ಆಸಕ್ತಿ ಹೊಂದಿದ್ದು, ಗುರು…

Read More

ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿರುವ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದಿನಾಂಕ 08 ಫೆಬ್ರವರಿ 2025ರಂದು ನಡೆಯಿತು ಹಿರಿಯ ರಂಗಕರ್ಮಿ ಗುಲ್ವಾಡಿ ರಾಮದಾಸ್ ದತ್ತಾತ್ರೇಯ ಭಟ್ ಇವರಿಗೆ ‘ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪುರಸ್ಕಾರ’ ಹಾಗೂ ಹಿರಿಯ ಸಾಹಿತಿ, ಅನುವಾದಕಿ ಡಾ. ಗೀತಾ ಶೆಣೈಯವರಿಗೆ ‘ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಪ್ರಸ್ತಾವಿಕವಾಗಿ ಮಾತನಾಡಿ, “ಡಾ. ಪಿ. ದಯಾನಂದ ಪೈಯವರು ಒಂದು ಕೋಟಿ ರೂ. ದೇಣಿಗೆಯನ್ನು ವಿಶ್ವ ಕೊಂಕಣಿ ಕೇಂದ್ರಕ್ಕೆ ನೀಡಿದ್ದು, ಇದನ್ನು ಬಳಸಿಕೊಂಡು ಪ್ರತಿ ವರ್ಷ…

Read More

ಉಡುಪಿ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ಸಹಯೋಗದೊಂದಿಗೆ ಯಕ್ಷಗಾನ ಕೇಂದ್ರ ಇಂದ್ರಳಿ ಇದರ 52ನೇ ವಾರ್ಷಿಕೋತ್ಸವ ಹಾಗೂ ದಿ. ಎಂ. ಎಂ. ಹೆಗ್ಡೆ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 08 ಫೆಬ್ರವರಿ 2025 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ “ಯಕ್ಷಗಾನ ಕಲೆ ಬಹಳ ಪ್ರಾಚೀನವಾದ ರಂಗಕಲೆ. ಯಕ್ಷಗಾನದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಕನ್ನಡ ಭಾಷೆಯ ಮೇಲೆ ಹಿಡಿತ ಬರುತ್ತದೆ. ವಿದ್ಯಾರ್ಥಿಗಳು ಶಾಲಾಶಿಕ್ಷಣದ ಜೊತೆಗೆ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಇಂದ್ರಾಳಿ ಯಕ್ಷಗಾನ ಕೇಂದ್ರದ ಮೂಲಕ ವಿಶೇಷ ಪ್ರಯತ್ನ ನಡೆಯುತ್ತಾ ಬರುತ್ತಿರುವುದು ಶ್ಲಾಘನೀಯ. ಮಾಹೆ ವಿ. ವಿ. ಈ ಕಾರ್ಯಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ” ಎಂದು ಹೇಳಿದರು. ಮಾಹೆಯ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮಾತನಾಡಿ “ಶಿಕ್ಷಣದ ಜೊತೆಗೆ ಯಕ್ಷಗಾನವೂ ವಿದ್ಯಾರ್ಥಿ ಜೀವನದಲ್ಲಿ ಸಿಕ್ಕರೆ ಪ್ರತಿಭೆಯ ಅನಾವರಣಕ್ಕೆ ಹೆಚ್ಚು ಪೂರಕವಾಗಲಿದೆ. ಇಂದ್ರಾಳಿ…

Read More

ಬೆಂಗಳೂರು : ಯಶಸ್ವೀ ಕಲಾವೃಂದ (ರಿ.) ಕೊಮೆ ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ-108’ರ ಕಾರ್ಯಕ್ರಮ ದಿನಾಂಕ 08 ಫೆಬ್ರವರಿ 2025 ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಿರೀಟಕ್ಕೆ ನವಿಲಗರಿಯನ್ನು ಇಡುವ ಮೂಲಕ ಉದ್ಘಾಟಿಸಿದ ರಂಗಭೂಮಿ, ಚನಚಿತ್ರ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆಯಾದ ಡಾ. ಉಮಾಶ್ರೀ ಮಾತನಾಡಿ “ಕರಾವಳಿಯ ಜೀವಂತ ಕಲೆಯಲ್ಲಿ ಜೀವಿಸುವ ಭಾಗ್ಯ ಸಿಕ್ಕಿದೆ. ಬಹುವಾಗಿ ಪಾಂಡಿತ್ಯ ಉಳ್ಳವರು ಶಾಸ್ತೀಯವಾಗಿ ಕಲಿತು, ಪರಿಪೂರ್ಣತೆಯನ್ನು ಸಾಧಿಸಿದ ಸಾವಿರ ಸಾವಿರ ಸಂಖ್ಯೆಗೂ ಮೀರಿದ ಕಲಾವಲಯವಾಳಿದ ಲೋಕಕ್ಕೆ ನಾನು ನನ್ನ ಸಂತೋಷಕ್ಕಾಗಿ ಬಂದಿದ್ದೇನೆ. ಯಶಸ್ವೀ ಕಲಾವೃಂದದ ಶ್ವೇತಯಾನದ ನೂರೆಂಟರಲ್ಲಿ ಭಾಗವಹಿಸುವ ಅವಕಾಶ ದೊರೆತದ್ದು ನನ್ನ ಪುಣ್ಯ. ಶಾಸ್ತ್ರೀಯವಾಗಿ ಕಲಿತ ಪಂಡಿತರ ಟೀಕೆ ಟಿಪ್ಪಣಿಗಳಿಂದ ಹೊರತಾದವರು ನಾವು. ಯಾಕೆಂದರೆ ಯಕ್ಷ ಕಲೆಯೊಳಗೆ ಬೆರೆಯುವ ಅವಕಾಶಕ್ಕೆ ಖುಷಿ ಪಟ್ಟು ಬಂದವಳು ನಾನು. ಈ ಕಲೆಯನ್ನು ಗೌರವಿಸುತ್ತಾ ಒಪ್ಪಿದ್ದೇನೆ, ಅಪ್ಪಿದ್ದೇನೆ ಎಂದರು. ಪ್ರೊ. ಪವನ್ ಕಿರಣ್‌ಕೆರೆ ಮಾತನಾಡಿ ಮಕ್ಕಳಿಗೆ ಕಲೆಯನ್ನು ಕಲಿಸುತ್ತಾ ಕಲೆಯನ್ನು ಕೈ ದಾಟಿಸುವ…

Read More