Subscribe to Updates
Get the latest creative news from FooBar about art, design and business.
Author: roovari
1970ರ ದಶಕ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ನಿರ್ಣಾಯಕ ಪರ್ವ. ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ಕನಸುಗಳು ಭಗ್ನವಾಗುತ್ತಿರುವ ಆತಂಕಗಳು ಹೆಚ್ಚಾಗಿ ವ್ಯಕ್ತವಾಗತೊಡಗಿದ್ದು 1960-70ರ ದಶಕದಲ್ಲೇ. ಇದು ಭ್ರಮಾಧೀನ ಸಮಾಜದ ಅಭಿವ್ಯಕ್ತಿಯಾಗಿರಲಿಲ್ಲ, ಬದಲಾಗಿ ನೆಲದ ವಾಸ್ತವವಾಗಿತ್ತು (Ground Reality). ಸ್ವಾತಂತ್ರ್ಯದ ಪೂರ್ವಸೂರಿಗಳು ಬಯಸಿದ ಅಥವಾ ಕನಸಿದ ಆದರ್ಶ ಭಾರತವನ್ನು ಕಟ್ಟುವುದರಲ್ಲಿ ಆಳುವ ವರ್ಗಗಳು ಎಡವುತ್ತಲೇ ಬಂದಾಗ, ಸಾಮಾಜಿಕ ಪಿರಮಿಡ್ಡಿನ ತಳಪಾಯದಲ್ಲಿರುವ ಬಹುಸಂಖ್ಯೆಯ ಜನರಲ್ಲಿ ಸಹಜವಾಗಿಯೇ ತಲ್ಲಣಗಳು, ಆತಂಕಗಳು ಹೆಚ್ಚಾಗುತ್ತಾ ಹೋಗಿದ್ದವು. ಸಮಾಜದ ಒಂದು ಸಣ್ಣ ವರ್ಗ ಫಲಾನುಭವಿಗಳಾಗಿ ಮೇಲೇರುತ್ತಾ ಹೋದಂತೆಯೇ ಮತ್ತೊಂದು ದೊಡ್ಡ ವರ್ಗ ಅವಕಾಶವಂಚಿತರಾಗಿ ನಾಳೆಗಳನ್ನು ಎಣಿಸುವಂತಾಗಿದ್ದು ಚಾರಿತ್ರಿಕ ಸತ್ಯ. ಈ ತುಮುಲಗಳಿಗೆ ಸ್ಪಂದಿಸುವ ಒಂದು ಪ್ರಜ್ಞಾವಂತ, ಸಂವೇದನಾಶೀಲ ಸಮಾಜವೂ ಜೊತೆಜೊತೆಗೇ ನಡೆದುಬಂದಿದ್ದು, ಈ ಸಮಾಜದ ಸದಸ್ಯರು ಅಥವಾ ಸಾಮಾನ್ಯ ಪರಿಭಾಷೆಯಲ್ಲಿ ಬುದ್ಧಿಜೀವಿಗಳು, ನೆಲ ನೋಡುತ್ತಾ ನಡೆಯುತ್ತಿದ್ದರಿಂದ, ತಳಸಮಾಜದ ತಲ್ಲಣಗಳನ್ನು, ನಾಡಿಮಿಡಿತವನ್ನು ಗ್ರಹಿಸಲು ಸಾಧ್ಯವಾಗಿತ್ತು. ಇದು ಹಲವು ಆಯಾಮಗಳಲ್ಲಿ ಪ್ರಕಟಗೊಂಡಿತ್ತು. ಸಾಹಿತ್ಯ, ರಂಗಭೂಮಿ, ಸಂಘಟನೆ, ಹೋರಾಟ, ಪ್ರತಿರೋಧ ಇತ್ಯಾದಿ…
ಧಾರವಾಡ : ಕರ್ನಾಟಕ ಮಾಧ್ಯಮ ಅಕಾಡೆಮಿ 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಇವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ‘ಅಭಿಮಾನಿ ಪ್ರಶಸ್ತಿ’, ಮೈಸೂರಿನ ‘ಮೈಸೂರು ದಿಗಂತ’ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ‘ಮೈಸೂರು ದಿಗಂತ ಪ್ರಶಸ್ತಿ’, ಬೆಂಗಳೂರಿನ ‘ಅಭಿಮನ್ಯು ಪತ್ರಿಕೆ’ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿ ವರದಿಗೆ ‘ಅಭಿಮನ್ಯು ಪ್ರಶಸ್ತಿ’, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ‘ಪ್ರಜಾ ಸಂದೇಶ ದತ್ತಿ ಪ್ರಶಸ್ತಿ’ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ…
ಮಡಿಕೇರಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಮಡಿಕೇರಿ ನಗರದಲ್ಲಿರುವ ಸಂಸ್ಥೆಯ ಸ್ಕೌಟ್ಸ್ ಗೈಡ್ಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ದಿನಾಂಕ 26 ಅಕ್ಟೋಬರ್ 2025ರಂದು ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್, ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗಾಗಿ ವೇಷ ಭೂಷಣಗಳೊಂದಿಗೆ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು. ಸಮವಸ್ತ್ರ ಧರಿಸಿದ್ದ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿದ ಗೀತಾ ಗಾಯನವು ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ದೇಶಭಕ್ತಿ ಗೀತೆ ಹಾಡಿ ಸಂತಸಪಟ್ಟರು. ಗೀತಾ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, “ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಭಾತೃತ್ವ, ರಾಷ್ಟ್ರೀಯ ಪ್ರಜ್ಞೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ, ಬೆಳೆಸುವ ಉದ್ದೇಶದಿಂದ ದೇಶಭಕ್ತಿ ಗೀತೆಯಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇಂದಿನ ದಿನಗಳಲ್ಲಿ ರಾಷ್ಟ್ರೀಯ ಭಾವೈಕ್ಯ, ಕೋಮುಸೌಹಾರ್ದ, ರಾಷ್ಟ್ರೀಯ ಪ್ರಜ್ಞೆ, ಪರಿಸರ…
ಸೋಮವಾರಪೇಟೆ : ಕನ್ನಡ ಸಾಹಿತ್ಯ ಪರಿಷತ್ ಸೋಮವಾರಪೇಟೆ ತಾಲ್ಲೂಕು, ಮಹಿಳಾ ಸಹಕಾರ ಸಂಘದ ಆಶ್ರಯದಲ್ಲಿ ಹಿರಿಯ ಸಾಹಿತಿ ಜಲಜಾ ಶೇಖರ್ ಬರೆದಿರುವ ‘ಕನ್ನಡಿಯ ಪ್ರತಿಬಿಂಬ’ ಕವನ ಸಂಕಲನ ಮತ್ತು ‘ದೂರದ ತೀರಯಾನ’ ಪ್ರವಾಸ ಕಥನ ಪುಸ್ತಕಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 26 ಅಕ್ಟೋಬರ್ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಸಾಹಿತಿ ಮತ್ತು ಜಾನಪದ ವಿದ್ವಾಂಸರಾದ ಡಾ. ಬೆಸೂರು ಮೋಹನ್ ಪಾಳೇಗಾರ್ ಮಾತನಾಡಿ “ಕಾವ್ಯ ಜನರ ಹೃದಯವನ್ನು ತಟ್ಟಿದಾಗ ಮಾತ್ರ ಕವಿಯ ಬರವಣಿಗೆ ಸಾರ್ಥಕವಾಗುತ್ತದೆ. ಕೃತಿ ಮತ್ತು ಕಾವ್ಯ ವಿಮರ್ಶೆಯ ಹೆಸರಿನಲ್ಲಿ ವಿಪರೀತ ಟೀಕೆ ಮಾಡಿದರೆ, ಒಬ್ಬ ಸಾಹಿತಿ ಮತ್ತು ಕವಿ, ಸಾಹಿತ್ಯ ಕೃಷಿಯನ್ನೇ ತ್ಯಜಿಸುವ ಸಂಭವಿರುತ್ತದೆ. ಪ್ರತಿಯೊಬ್ಬರು ಅವರ ಭಾಷಾ ಜ್ಞಾನಕ್ಕೆ ಅನುಗುಣವಾಗಿ ಬರೆದಿರುತ್ತಾರೆ. ಅದು ಸಾಮಾನ್ಯ ಓದುಗನಿಗೆ ಅರ್ಥವಾದರೆ ಸಾಕು ಎಂದು ಅಭಿಪ್ರಾಯಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷರಾದ ಟಿ. ಪಿ. ರಮೇಶ್ ಮಾತನಾಡಿ ಲೇಖಕನಿಗೆ ಇಡೀ ಸಮಾಜವನ್ನು ಮೆಚ್ಚಿಸಲು ಸಾಧ್ಯವಿಲ್ಲ. ಕನ್ನಡ ಭಾಷೆಯ…
ಕೋಲಾರ : ಬಿ. ಶಿವಕುಮಾರ್ ಸಾರಥ್ಯದ ಸ್ವರ್ಣಭೂಮಿ ಫೌಂಡೇಷನ್ ಕರ್ನಾಟಕ ಹಾಗೂ ರೋಟರಿ ಕ್ಲಬ್ ಕೋಲಾರ ಇವುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ನುಡಿ ಸಂಭ್ರಮ -2025’ವನ್ನು ದಿನಾಂಕ 02 ನವೆಂಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ‘ಸ್ವರ್ಣಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಹಾಗೂ ‘ಬಾಲಚೇತನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮುಳ್ಳೇರಿಯ : ಹಿರಿಯ ವೈದ್ಯ, ಸಾಹಿತಿ ಡಾ.ರಮಾನಂದ ಬನಾರಿ ಅವರು ಬರೆದು ಪ್ರಕಟಿಸಿದ ‘ಕನ್ನಡಿಯಲ್ಲಿ ಕನ್ನಡಿಗ’ ಕೃತಿಯ ಐದನೇ ಸಂಚಿಕೆಯ ಲೋಕಾರ್ಪಣಾ ಸಮಾರಂಭವು ದಿನಾಂಕ 25 ಅಕ್ಟೋಬರ್ 2025ರ ಶನಿವಾರದಂದು ದೇಲಂಪಾಡಿಯ ಕೀರಿಕ್ಕಾಡು ಸಾಂಸ್ಕಂತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಹಿರಿಯ ಲೇಖಕ, ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ ಮಾತನಾಡಿ “ನಾಡು-ನುಡಿಗೆ ಬಹುಮುಖ ಆಯಾಮಗಳಲ್ಲಿ ಸೇವೆ ಸಲ್ಲಿಸಿದ ವಿಶಿಷ್ಟ ಸಾಧಕರ ಜೀವನಾದರ್ಶ, ಬದುಕಿನ ಪಥಗಳು ಹೊಸ ತಲೆಮಾರಿಗೆ ಮಾರ್ಗದರ್ಶಕವೂ, ಪ್ರೇರಣದಾಯಿಯಾಗಿರುತ್ತದೆ. ಅವನ್ನು ಪರಿಚಯಿಸುವ ಹೊತ್ತಗೆ ತರುವುದು ಸಮಾಜಕ್ಕೆ ನಾವು ನೀಡುವ ದೊಡ್ಡ ಕೊಡುಗೆಗಳಲ್ಲಿ ಒಂದಾಗಿದ್ದು ಇದಕ್ಕೆ ಬೆಂಬಲ ಅಗತ್ಯ. ಡಾ. ಬನಾರಿಯವರು ಕೈಗೆತ್ತಿಕೊಂಡಿರುವ ಅಧ್ಯಯನಶೀಲ ಇಂತಹ ಕೃತಿ ಸಂಪುಟಗಳು ನಾಡಿನ ಆಸ್ತಿಯಾಗಿದ್ದು, ಮಣ್ಣಿನ ಸಾಧನಾ ಪುರುಷರ ಮಾಹಿತಿಗಳು ಏಕ ಗವಾಕ್ಷಿಯಲ್ಲಿ ಲಭ್ಯವಾಗುವುದು ವಿಶೇಷವಾಗಿದೆ” ಎಂದರು. ಕೃತಿಕಾರ ಡಾ. ರಮಾನಂದ ಬನಾರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದ ಮುಖ್ಯ ಅತಿಥಿಯಾದ ಮಂಗಳೂರು ಆಕಾಶವಾಣಿಯ…
ಪೆರಿಯ : ಬೇಕಲದ ಗೋಕುಲಂ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ಅಡಿಯಲ್ಲಿ ನಡೆಯುತ್ತಿರುವ ಐದನೇಯ ದೀಪಾವಳಿ ಸಂಗೀತೋತ್ಸವದ ದಿನಾಂಕ 27 ಅಕ್ಟೋಬರ್ 2025ರ ಒಂಬತ್ತನೇ ದಿನ ಕಾಂತಾರ ಚಲನಚಿತ್ರದ ‘ವರಾಹ ರೂಪಂ’ ಗೀತೆಯನ್ನು ಹಾಡಿ ಖ್ಯಾತರಾದ ಸಾಯಿ ವಿಘ್ನೇಶ್ ಇವರು ಆಕರ್ಷಕ ಸಂಗೀತ ಕಛೇರಿ ನಡೆಸಿಕೊಟ್ಟರು. ಬಾಲಮುರಳಿಕೃಷ್ಣ ಇವರ ಷಣ್ಮುಗಪ್ರಿಯ ರಾಗದಲ್ಲಿ ವರ್ಣ ಓಂಕಾರ ಪ್ರಣವದಿಂದ ಪ್ರಾರಂಭಿಸಿ ಸಿಂಹೇಂದ್ರ ಮಾಧ್ಯಮವನ್ನು ಹಾಡಿದರು. ಕೊನೆಗೆ ಕಾಂತಾರದಲ್ಲಿ ವರಾಹ ರೂಪವನ್ನು ಹಾಡಿದಾಗ ನೆರೆದ ಸಭಿಕರು ಚಪ್ಪಾಳೆ ತಟ್ಟಿದರು. ಒಂಬತ್ತನೇ ದಿನ ಆದಿತ್ಯ ಮೋಹನ್ ಅವರ ಸಂಗೀತ ಕಚೇರಿಯೊಂದಿಗೆ ಪ್ರಾರಂಭವಾಯಿತು. ನಂತರ ಭರತ್ ಕೃಷ್ಣ, ಶ್ಯಾಮ್ ಕೃಷ್ಣ, ಅನೀಶ್ ವಿ. ಭಟ್, ಗಿರಿಜಾ ಶಂಕರ್ ಸುಂದರೇಶನ್ ಮತ್ತು ವಿಭಾ ರಾಜೀವ್ ಸಂಗೀತ ಕಾರ್ಯಕ್ರಮ ನೀಡಿದರು. ಗೋಶಾಲೆಯಲ್ಲಿ ಜಯಲಕ್ಷ್ಮಿ ಶೇಖರ್ ಮತ್ತು ನಿವೇದಿತಾ ಅರುಣ್ ಇವರ ವೀಣಾ ಕಛೇರಿ ನಡೆಸಿದರು. ದೀಪಾವಳಿ ಸಂಗೀತೋತ್ಸವದ ನಂದಿ ಮಂಟಪದಲ್ಲಿ ಗೋಶಾಲೆಯನ್ನು ರೋಮಾಂಚನಗೊಳಿಸುವ ತನಿಯಾವರ್ತನವನ್ನು ಪ್ರದರ್ಶಿಸಲಾಯಿತು. ಮೈಸೂರಿನ ಪ್ರಸಿದ್ಧ ವೀಣಾ ವಿದ್ವಾಂಸ ಆರ್.ಕೆ.…
ತೆಕ್ಕಟ್ಟೆ : ಬಹು ಓದು ಬಳಗ ಮಂಗಳೂರು ಮತ್ತು ಆಕೃತಿ ಆಶಯ ಪ್ರಕಾಶನ ಮಂಗಳೂರು ಇವರ ಆಶ್ರಯದಲ್ಲಿ ದಿನಾಂಕ 26 ಅಕ್ಟೋಬರ್ 2025ರಂದು ತೆಕ್ಕಟ್ಟೆ ಹಯಗ್ರೀವ ಸಭಾ ಭವನದಲ್ಲಿ ‘ಬತ್ತದ ಚಿತ್ರಗಳು’ ಎಂಬ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಯಿತು. ಪ್ರೊ. ರಾಘವೇಂದ್ರ ಹೇರ್ಳೆ ಗಿಳಿಯಾರು, ಡಾ. ಶ್ರೀನಿವಾಸ ಗಿಳಿಯಾರು ಹಾಗೂ ಡಾ. ಕೃಷ್ಣರಾಜ ಕರಬ ಉಳ್ತೂರು ಇವರ ಮಿತ್ರತ್ವದ ನೆನಪಿಗಾಗಿ ಇವರಿಂದ ರಚಿಸಲ್ಪಟ್ಟ ‘ಬತ್ತದ ಚಿತ್ರಗಳು’ ಎಂಬ ಕೃತಿಯನ್ನು ಬರಹಗಾರರು, ಚಿಂತಕರು ನಿವೃತ್ತ ಕನ್ನಡ ಪ್ರಾಧ್ಯಾಪಕರು ಆದ ಡಾ. ರೇಖಾ ಜಿ. ಬನ್ನಾಡಿ ಬಿಡುಗಡೆಗೊಳಿಸಿ ಮಾತನಾಡುತ್ತಾ, “ಮೂರು ದಶಕಗಳ ಸ್ನೇಹವನ್ನು ರುಜು ಮಾಡಿದ ಈ ಕೃತಿ ವಿಶೇಷವಾಗಿ ಸ್ವಾತಂತ್ರ್ಯ, ಸಹಬಾಳ್ವೆಯೊಂದಿಗೆ ಒಂದು ಸಾಂಸ್ಕೃತಿಕ ಅರಿವನ್ನು ಮೂಡಿಸುವ ಪ್ರಯತ್ನ ಮಾಡಿದೆ. ಶ್ರಮ ಭರವಸೆ ಪ್ರೀತಿಯೊಂದಿಗೆ ಬಹುತ್ವವೇ ದೇಶದ ಉಸಿರಾಗಿದೆ. ನಮ್ಮನ್ನೇ ನಾವು ಪ್ರಶ್ನೆ ಮಾಡಿಕೊಳ್ಳುವ ಸೂಕ್ಷ್ಮತೆಯಿಂದ ನಮ್ಮೆದುರಿನ ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು. ವರ್ತಮಾನದ ತಲ್ಲಣಗಳೇ ಇಲ್ಲಿನ ಕವಿತೆಗಳಲ್ಲಿ ಕಾಣುವ ಪ್ರಮುಖ ಅಂಶ” ಎಂದರು.…
ವಗ್ಗ : ಯಕ್ಷಾವಾಸ್ಯಮ್ ಕಾರಿಂಜ (ರಿ.) ಸಂಸ್ಥೆಯ ‘ಪಂಚಮ ವಾರ್ಷಿಕೋತ್ಸವ’ವನ್ನು ದಿನಾಂಕ 01 ನವೆಂಬರ್ 2025ರಂದು ಪೂರ್ವಾಹ್ನ 10-00 ಗಂಟೆಗೆ ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ ಜೈನ್ ಇವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವರಾದ ಬಿ. ರಾಮನಾಥ ರೈ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಮಂಜಪ್ಪ ನಾಯ್ಕ, ಶ್ರೀಮತಿ ಬೊಮ್ಮಿ, ಶಾರದಾ ಜಿ. ಬಂಗೇರ, ಲೋಕಯ್ಯ ಗೌಡ ಮತ್ತು ವಾಸುದೇವ ಪ್ರಭು ಇವರಿಗೆ ಯಕ್ಷಾವಾಸ್ಯಮ್ ಗೌರವ ಸಂಮಾನ ಮಾಡಲಾಗುವುದು. ಪೂರ್ವಾಹ್ನ 11-00 ಗಂಟೆಗೆ ಪೂರ್ವರಂಗ ಮತ್ತು ‘ಶ್ರೀಕೃಷ್ಣ ಲೀಲೆ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಪರಾಹ್ನ 2-30 ಗಂಟೆಗೆ ಮಾನ್ಯ ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಪರ್ವದಲ್ಲಿ ರಂಗ ನಾಯಕ ಕುರಿಯ ಗಣಪತಿ ಶಾಸ್ತ್ರಿ ಇವರಿಗೆ ‘ಯಕ್ಷಾವಾಸ್ಯಮ್’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ 4-30 ಗಂಟೆಗೆ ಯಕ್ಷಾವಾಸ್ಯಮ್ ವಿದ್ಯಾರ್ಥಿಗಳಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.…
ಬೆಂಗಳೂರು : ಪ್ರಸನ್ನ ಇವರ ಕಲಾಕೃತಿಗಳ ಪ್ರದರ್ಶನ ‘ನಾಟಕವು ಬದುಕಿನೊಳಗೋ ಬದುಕು ನಾಟಕದೊಳಗೋ’ ದಿನಾಂಕ 30 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಬೆಂಗಳೂರಿನ ಚಿತ್ರ ಕಲಾ ಪರಿಷತ್ ಗ್ಯಾಲರಿ 4ರಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಕಲಾ ಪ್ರದರ್ಶನಕ್ಕೆ ದೆಹಲಿ ಖ್ಯಾತ ಕಲಾ ವಿಮರ್ಶಕರಾದ ರವೀಂದ್ರ ತ್ರಿಪಾಠಿ ಇವರು ಚಾಲನೆ ನೀಡಲಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಪ.ಸ. ಕುಮಾರ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಲಾಕೃತಿಗಳ ಪ್ರದರ್ಶನವು ದಿನಾಂಕ 30 ಅಕ್ಟೋಬರ್ 2025ರಿಂದ 02 ನವೆಂಬರ್ 2025ರ ತನಕ ನಡೆಯಲಿದೆ.