Subscribe to Updates
Get the latest creative news from FooBar about art, design and business.
Author: roovari
ಕಾರ್ಕಳ : ಕಾರ್ಕಳ ಯಕ್ಷಕಲಾರಂಗ ಮತ್ತು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸಹಯೋಗದಲ್ಲಿ ಪ್ರಾಥಮಿಕ ಮಕ್ಕಳಿಗೆ ಉಚಿತವಾಗಿ ನಡೆಯುವ ಯಕ್ಷ ಶಿಕ್ಷಣ ಅಭಿಯಾನವು ದಿನಾಂಕ 23 ಜೂನ್ 2025ರ ಸೋಮವಾರದಂದು ಕುಕ್ಕುಂದೂರು ಅಯ್ಯಪ್ಪ ನಗರ ಸರಕಾರಿ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದ ಸಭಾದ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳ ಅಯ್ಯಪ್ಪ ನಗರ ಸರಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುಮೀತ್ “ಶಿಕ್ಷಣವನ್ನು ಪ್ರೀತಿಸಿ, ಕಲೆಯನ್ನು ಗೌರವಿಸಿದ ಒಬ್ಬ ಸುಸಂಸ್ಕೃತ ವಿದ್ಯಾರ್ಥಿ ಜೀವನ ಸಾಪಲ್ಯತೆ ಪಡೆಯುತ್ತಾನೆ” ಎಂದು ಹೇಳಿದರು. ಯಕ್ಷ ಶಿಕ್ಷಣ ಅಭಿಯಾನ ಉದ್ಘಾಟಿಸಿದ ನಿಕಟಪೂರ್ವ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸದಾನಂದ ಪುರೋಹಿತರು ಮಾತನಾಡಿ “ಭಾಷಾ ಪಾಂಡಿತ್ಯ, ಸಂಸ್ಕಾರ, ಗೌರವ ಕೊಡುವ ಶಿಸ್ತಿನ ಸಾಹಿತ್ಯ ಕಲೆ ಯಕ್ಷಗಾನ. ಈ ಕಲೆ ಪ್ರಾಥಮಿಕ ಹಂತದಲ್ಲೇ ತಿಳಿ ಹೇಳಬೇಕು” ಎಂದರು. ಯಕ್ಷ ಶಿಕ್ಷಣದ ಬಗ್ಗೆ ಪ್ರಾಸ್ತಾವಿಕವಾಗಿ ಕಲಾವಿದ ಮಹಾವೀರ ಪಾಂಡಿ ಮಾತಾನಾಡಿದರು. ಯಕ್ಷಕಲಾರಂಗದ ಅಧ್ಯಕ್ಷ ವಿಜಯ ಶೆಟ್ಟಿ, ಕೋಶಾಧ್ಯಕ್ಷ ಶ್ರೀ ವರ್ಮ ಅಜ್ರಿ ಸಾಂಧರ್ಬಿಕವಾಗಿ ಮಾತನಾಡಿದರು. ಇನ್ನೋರ್ವ ನಿಕಟ…
ಮಂಗಳೂರು : ಅರೆಹೊಳೆ ಪ್ರತಿಷ್ಠಾನ, ನಂದಗೋಕುಲ, ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ (ಪರಿಗಣಿತ) ವಿಶ್ವ ವಿದ್ಯಾಲಯ, ಅಸ್ತಿತ್ವ (ರಿ.) ಕಲಾಭಿ (ರಿ.) ರೂವಾರಿ ಜಂಟಿಯಾಗಿ ಆಯೋಜಿಸುವ ‘ದಶಾನನ ಸ್ವಪ್ನಸಿದ್ಧಿ’ ಕುವೆಂಪು ವಿರಚಿತ ಶ್ರೀ ರಾಮಾಯಣ ದರ್ಶನಂ ಕೃತಿಯಿಂದ ಆಯ್ದ ರಂಗಪ್ರಯೋಗ ದಿನಾಂಕ 30-06-2025ರಂದು ಎಲ್.ಸಿ.ಆರ್.ಐ. ಸಂತ ಅಲೋಶಿಯಸ್ (ಪರಿಗಣಿತ) ವಿಶ್ವವಿದ್ಯಾಲಯದಲ್ಲಿ ಪ್ರದರ್ಶನಗೊಳ್ಳಲಿದೆ. ಮಂಜು ಕೊಡಗು ಇವರು ಈ ರಂಗಪ್ರಯೋಗದ ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದು, ರಂಗದ ಮೇಲೆ ಅವಿನಾಶ್ ರೈ, ಶ್ವೇತಾ ಅರೆಹೊಳೆ, ಚೈತ್ರ ಕೋಟ್ಯಾನ್ ಮತ್ತು ಚರಿತ್ ಸುವರ್ಣ ಇವರು ಅಭಿನಯಿಸಲಿದ್ದು, ಅರುಣ್ ಕುಮಾರ್ ಎಂ. ಸಂಗೀತ ವಿನ್ಯಾಸ ಮತ್ತು ಮಂಜುನಾಥ ಹಿರೇಮಠ ಬೆಳಕು ವಿನ್ಯಾಸ ಮಾಡಿರುತ್ತಾರೆ. ಹೆಚ್ಚಿನ ವಿವರಗಳಿಗಾಗಿ 9632794477 ಸಂಖ್ಯೆಯನ್ನು ಸಂಪರ್ಕಿಸಿರಿ.
ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ -2’ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮವನ್ನು ದಿನಾಂಕ 28 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ಸೂರಂಬೈಲ್ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ವಿ.ಬಿ. ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಕಾರ್ಳೆ ಶ್ರೀ ಕಾಳಿಕಾಂಬಾ ದೇವಸ್ಥಾನದ ತಂತ್ರಿವರ್ಯ ಬ್ರಹ್ಮಶ್ರೀ ಪುರೋಹಿತ ಕೆ. ರಾಮಕೃಷ್ಣ ಆಚಾರ್ಯ ಇವರು ಉದ್ಘಾಟನೆ ಮಾಡಲಿದ್ದಾರೆ. ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ, ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಮತ್ತು ಸಾಹಿತಿ ವಿರಾಜ್ ಅಡೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಜಿ. ಕೆ. ಐತಾಳ್ ಎಂದೆ ಪ್ರಸಿದ್ಧರಾದ ಗೋಪಾಲಕೃಷ್ಣ ಐತಾಳರು 1951ರ ಜೂನ್ 25ರಂದು ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಜನಿಸಿದರು. ಇವರು ಸಾಹಿತ್ಯ, ಜಾನಪದ, ರಂಗಭೂಮಿಗಳಲ್ಲಿ ಸಕ್ರಿಯರಾಗಿದ್ದ ವಿಶಿಷ್ಟ ವ್ಯಕ್ತಿ. ತಾಯಿ ಲಕ್ಷ್ಮೀದೇವಿ, ತಂದೆ ಸೂರ್ಯನಾರಾಯಣ ಐತಾಳ್. ರಂಗ ಕಲೆಯ ಬಗ್ಗೆ ವಿಶೇಷ ಆಸಕ್ತಿ, ಪ್ರೀತಿ, ಗೌರವಗಳನ್ನು ಹೊಂದಿದ್ದ ನಾರಾಯಣ ಐತಾಳರು ಕೋಟೇಶ್ವರದ ‘ಶ್ರೀ ಲಲಿತಾ ಕಲಾ ಪ್ರೇಮಿ ನಾಟಕ ಮಂಡಲಿ’ ಹಾಗೂ ಕುಂದಾಪುರದ ‘ರೂಪರಂಗ’ ಸಂಸ್ಥೆಗಳ ಸ್ಥಾಪಕರು. ತಂದೆಯಿಂದ ಬಳುವಳಿಯಾಗಿ ಪಡೆದ ರಂಗಪ್ರೀತಿ, ಸಾಹಿತ್ಯದ ಅಭಿರುಚಿ, ಕಲೆಯ ಒಲವು ಜಿ.ಕೆ. ಐತಾಳ್ ಅವರನ್ನು ಅನನ್ಯ ಸಾಹಿತ್ಯಿಯನ್ನಾಗಿ ಮಾಡಿದ್ದು ಈಗ ಇತಿಹಾಸ. ಕರ್ನಾಟಕ ಬ್ಯಾಂಕ್ ಉದ್ಯೋಗಿಯಾಗಿದ್ದ ಐತಾಳರು ಹವ್ಯಾಸಿ ಬರಹಗಾರರಾಗಿ ಬೀರಿದ ಪರಿಣಾಮ ಮಹತ್ವದ್ದು. ಹಲವು ನಿರ್ಲಕ್ಷಿತ ವಿಚಾರಗಳನ್ನು ಬೆಳಕಿಗೆ ತಂದು ಅನೇಕ ಅಭಿವೃದ್ಧಿಗಳನ್ನು ಮಾಡುವಲ್ಲಿ ಇವರ ಲೇಖನಗಳು ಸಹಕಾರಿಯಾದವು. ಹಲವು ಕಲಾವಿದರ ಬಗ್ಗೆ ಬರೆದ ಲೇಖನಗಳಿಂದ ಆ ಕಲಾವಿದರಿಗೆ ಪ್ರೋತ್ಸಾಹ ದೊರಕಿತು – ಮಾನ್ಯತೆ ಸಿಕ್ಕಿತು. ಸಣ್ಣ ಕಥೆಗಳ ಸ್ಪರ್ಧೆಯಲ್ಲಿ ಐತಾಳರಿಗೆ…
1932ರ ಜೂನ್ 25ರಂದು ಜನಿಸಿದ ಡಾ. ಶಿವಪುತ್ರಪ್ಪ ರಾಯಪ್ಪ ಗುಂಜಾಳ್ ಇವರದು ಪ್ರಾಧ್ಯಾಪಕ, ಸಂಶೋಧಕ ಹಾಗೂ ಆಡಳಿತಗಾರರಾಗಿ ಬಹುಮುಖ ವ್ಯಕ್ತಿತ್ವ. ಧಾರವಾಡ ಜಿಲ್ಲೆಯ ಕೋಳಿವಾಡದಲ್ಲಿ ಜನಿಸಿದ ಇವರ ತಂದೆ ರಾಯಪ್ಪ, ತಾಯಿ ರುದ್ರಮ್ಮ. ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು 1979ರಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ವಿಭಾಗದ ಮುಖ್ಯಸ್ಥರಾಗಿದ್ದರು. ‘ಉತ್ತಂಗಿ ಚನ್ನಪ್ಪನವರ ಜೀವನ ಮತ್ತು ಕೃತಿಗಳು : ಒಂದು ಅಧ್ಯಯನ’ ಪ್ರಬಂಧಕ್ಕೆ ಬಂಗಾರದ ಪದಕದೊಡನೆ ಪಿ.ಎಚ್.ಡಿ. ಪದವಿಯನ್ನು ಗಳಿಸಿಕೊಂಡರು. ಅಧ್ಯಾಪನದ ಜೊತೆಗೆ ಸಂಶೋಧನೆ, ಬರವಣಿಗೆ, ಗ್ರಂಥಾಲಯ ವಿಜ್ಞಾನ ಗ್ರಂಥಗಳು ಸೇರಿದಂತೆ 72 ಕೃತಿಗಳು 150 ಲೇಖನಗಳನ್ನು ರಚಿಸಿದರು. ಇಪ್ಪತ್ತು ವಿಶ್ವ ವಿದ್ಯಾಲಯಗಳ ಅಭ್ಯಾಸ ಮಂಡಳಿಯ ಸದಸ್ಯರಾಗಿ, ಗುಲ್ಬರ್ಗ ವಿಶ್ವ ವಿದ್ಯಾಲಯದ ಸಮಾಜ ವಿಜ್ಞಾನ ವಿಭಾಗದ ಡೀನ್ ಆಗಿ ಅಪ್ರತಿಮ ಶೈಕ್ಷಣಿಕ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಶರಣ ಸಾಹಿತ್ಯ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳಿಂದ ಭೂಷಿತರಾದ ಗುಂಜಾಳ್ ನಿಯತಕಾಲಿಕೆಗಳ ಸಂಪಾದಕರು…
ಬೆಂಗಳೂರು: ಸ್ನೇಹ ಪಬ್ಲಿಷಿಂಗ್ ಹೌಸ್ ಪ್ರಕಟಿಸಿರುವ ಮಹಾಮಹೋಪಾಧ್ಯಾಯ ಡಾ. ಎಸ್. ರಂಗನಾಥ್ ಅವರ ‘ಕರ್ನಾಟಕದ ಶತಾಯಿಷಿಗಳು’ ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ 25 ಜೂನ್ 2025ರ ಬುಧವಾರ ಸಂಜೆ ಘಂಟೆ 5.00ಕ್ಕೆ ನಡೆಯಲಿದೆ. ಹಿರಿಯ ವಿದ್ವಾಂಸರು, ಭಾಷಾ ಸಮ್ಮಾನ್ ಪುರಸ್ಕೃತರೂ ಆದ ನಾಡೋಜ ಡಾ. ಟಿ. ವಿ. ವೆಂಕಟಾಚಲಶಾಸ್ತ್ರೀಗಳು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಾಧೀಶರೂ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರೂ ಆದ ನ್ಯಾಯಮೂರ್ತಿ ಎಂ. ಎನ್. ವೆಂಕಟಾಚಲಯ್ಯನವರು ತಮ್ಮ ಘನ ಉಪಸ್ಥಿತಿಯ ಮೂಲಕ ಸಭೆಗೆ ಶೋಭೆಯನ್ನು ತರಲಿದ್ದಾರೆ. ಕಾರ್ಯಕ್ರಮದ ಆರಂಭಕ್ಕೆ ಮೊದಲು ಸಂಜೆ 4.30ಕ್ಕೆ ಹಂಸಲೇಖ ದೇಸಿ ವಿದ್ಯಾಸಂಸ್ತೆ ವಿದ್ಯಾರ್ಥಿಗಳಿಂದ ‘ಕವಿಗೀತ ಗಾಯನ’ ಕಾರ್ಯಕ್ರಮ ನಡೆಯಲಿದೆ.
ಸುಳ್ಯ : ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 7ನೇ ವರ್ಷದ ಎಂ.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿರುವ ಹಾಗೂ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಎಂ.ಜಿ.ಕಾವೇರಮ್ಮ ರವರ 86ನೇ ಹುಟ್ಟುಹಬ್ಬದ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಒಬ್ಬರು ಒಂದು ಸ್ವರಚಿತ ಅರೆಭಾಷೆ ಕವಿತೆಯನ್ನು ಈ ಕೆಳಕಂಡ ವಿಳಾಸಕ್ಕೆ ಮಿಂಚಂಚೆ ಮುಖಾಂತರ ಕಳುಹಿಸಬೇಕು. ವಾಟ್ಸ್ ಆ್ಯಪ್ ಮೂಲಕವೂ ಕಳುಹಿಸಬಹುದು. ಅಕ್ಷರ ದೋಷವಿಲ್ಲದೇ ಯಾವುದೇ ವಯೋಮಾನದವರು. ಯಾವುದೇ ವಿಷಯದ ಕುರಿತು ಕವಿತೆಯನ್ನು ರಚಿಸಬಹುದು. ಕವಿತೆಯನ್ನು ಜುಲೈ 10 ತಾರೀಖಿನ ಒಳಗಾಗಿ ತಲುಪಿಸಬೇಕು ಎಂದು ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – : 6364660272 , [email protected]
ಗದಗ : ಲಿಂಗಾಯತ ಪ್ರಗತಿಶೀಲ ಸಂಘದ 2750ನೇ ಶಿವಾನುಭವ ಕಾರ್ಯಕ್ರಮವು ದಿನಾಂಕ 16 ಜೂನ್ 2025 ರಂದು ಗದಗದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು “ಸಂಗೀತವು ಮಾನವ ಸಮಾಜದ ಸಂಸ್ಕೃತಿಯಾಗಿದೆ. ಸಂಗೀತಕ್ಕೆ ಪಂಚಮವೇದ ಎನ್ನುತ್ತಾರೆ. ಸಂಗೀತ ಜೀವನದ ಅವಿಭಾಜ್ಯ ಅಂಗವಾಗಿದೆ. ಗದುಗಿನ ಪಂಚಾಕ್ಷರಿ ಗವಾಯಿಗಳು ಹಾಗೂ ಕವಿ ಪುಟ್ಟರಾಜರು ಸಂಗೀತವನ್ನು ಕರಗತ ಮಾಡಿಕೊಂಡಿದ್ದರು. ಪುಟ್ಟರಾಜರು ತ್ರಿಭಾಷಾ ಕವಿಗಳಾಗಿದ್ದರು. ಅಂಧ ಅನಾಥ ಮಕ್ಕಳಿಗೆ ಸಂಗೀತ ವಿದ್ಯೆ ನೀಡುವ ಮೂಲಕ ಅವರ ಬಾಳಿಗೆ ದಾರಿದೀಪವಾದರು. ಪ್ರತಿಯೊಂದು ಕಾರ್ಯಕ್ರಮದಲ್ಲಿ ಸಂಗೀತ ಬೇಕೇ ಬೇಕು. ಸಂಗೀತವಿಲ್ಲದೆ ಪ್ರಾರಂಭವಾಗುವುದೆ ಇಲ್ಲ. ಶರಣರ ವಚನಗಳನ್ನು ಮೊದಮೊದಲು ಹಾಡಲು ಬರುವುದಿಲ್ಲ ಎನ್ನುತ್ತಿದ್ದರು. ಈಗ ಶರಣರ ವಚನಗಳನ್ನು ಹಾಡುವುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಳ್ಳುತ್ತವೆ. ಬಸವಣ್ಣನವರು ‘ನಾದ ಪ್ರಿಯ ಶಿವನೆಂಬರು ನಾದಪ್ರಿಯನಲ್ಲ. ಭಕ್ತಿ ಪ್ರಿಯ ನಮ್ಮ ಕೂಡಲಸಂಗಮದೇವ’ ಎಂದರು. ಮೀರಾಬಾಯಿ ಸಂಗೀತವನ್ನು ಭಕ್ತಿಯಿಂದ ಹಾಡಿದಾಗ ಶಿವನನ್ನು ಕಂಡಳು. ಭೌತ ಪ್ರಪಂಚವನ್ನ ನೋಡುವುದು ವಿಜ್ಞಾನ. ಅಂತರಂಗವನ್ನು ಅರಿಯುವುದು ಆಧ್ಯಾತ್ಮ. ಸಂಗೀತಕ್ಕೆ ಮನಸೋಲದ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಮುಖ್ಯ ದತ್ತಿ ಪ್ರಶಸ್ತಿಗಳಲ್ಲೊಂದಾದ ‘ಶ್ರೀಮತಿ ಲಿಂಗಮ್ಮ ಮತ್ತು ಡಾ.ಚಿಕ್ಕಕೊಮಾರಿಗೌಡ ಹಾರೋಕೊಪ್ಪ’ ಪುರಸ್ಕಾರದ ಪ್ರದಾನ ಸಮಾರಂಭ ದಿನಾಂಕ 23 ಜೂನ್ 2025 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಲೆರಾಂಪುರದ ಕುಂಚಿಟಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಹನುಮಂತನಾಥ ಮಹಾಸ್ವಾಮಿಗಳು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿಗಳ ಗೌರವವನ್ನು ಉಳಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ. ಅಕ್ಷರ ಸಂಸ್ಕೃತಿಯಂತೆಯೇ ನೆಲೆ ಜಲ ಸಂಸ್ಕೃತಿಯನ್ನೂ ಉಳಿಸುವ ಮಹತ್ವದ ಕೆಲಸವನ್ನು ಮಾಡುತ್ತಿದೆ” ಎಂದರು. ಇದೇ ಸಂದರ್ಭದಲ್ಲಿ 48ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಡಾ. ಜಯದೇವಿತಾಯಿ ಲಿಗಾಡೆಯವರ 113ನೆಯ ಮತ್ತು 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ಎಚ್.ಎಸ್.ವೆಂಕಟೇಶ ಮೂರ್ತಿಯವರ 81ನೆಯ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ನುಡಿ ನಮನವನ್ನು ಸಲ್ಲಿಸಲಾಯಿತು. ಈ ಇಬ್ಬರೂ ಮಹನೀಯರಿಗೆ ನುಡಿನಮನ ಸಲ್ಲಿಸಿದ ನಾಡೋಜ ಡಾ.ಮಹೇಶ ಜೋಶಿಯವರು ಗಡಿಭಾಗದಲ್ಲಿ…
ಬೆಂಗಳೂರು : ಖಿದ್ಮಾ ಫೌಂಡೇಶನ್ ಕರ್ನಾಟಕ ಹಾಗೂ ಅನ್ನದಾತ ಪ್ರಕಾಶನದಡಿಯಲ್ಲಿ ಭಾರತದ ಸ್ವಾತಂತ್ರೋತ್ಸವದ ಪ್ರಯುಕ್ತ ಪದವಿ ಪೂರ್ವದಿಂದ ಸ್ನಾತಕೋತ್ತರ ಪದವಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷರಾದ ಆಮಿರ್ ಅಶ್ಅರೀ ಬನ್ನೂರು ತಿಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು 18 ರಿಂದ 26 ವಯಸ್ಸಿನವರಿಗೆ ಮಾತ್ರ ಅವಕಾಶವಿದ್ದು, ಮೊದಲ ಹಂತದ ಸ್ಪರ್ಧೆಯು ಆನ್ಲೈನ್ ಮೂಲಕ ಮಡೆಯಲಿದೆ. ಹೆಸರು ನೊಂದಾಯಿಸಲು ಜೂನ್ 30 ಕೊನೆಯ ದಿನವಾಗಿದೆ. ಸ್ಪರ್ಧೆಗೆ ಸಂಬಂಧಪಟ್ಟ ಹೆಚ್ಚಿನ ವಿವರಣೆಗಾಗಿ 7349197313 ನಂಬರಿಗೆ ವಾಟ್ಸಪ್ ಮಾಡಬಹುದು.