Author: roovari

ಪುತ್ತೂರು : ಭಾರತ ಉತ್ಕೃಷ್ಟ ಕ್ಷಾತ್ರ ಪರಂಪರೆಯನ್ನು ಹೊಂದಿರುವ ಮಹಾನ್ ರಾಷ್ಟ್ರ. ಪುರುಷರು ಮಹಿಳೆಯರಾದಿಯಾಗಿ ಅನೇಕರು ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನ ನೀಡಿದ್ದಾರೆ. ಅದೆಷ್ಟೋ ವೀರಗಾಥೆ ಇತಿಹಾಸದ ಪುಟಗಳಲ್ಲಿ ಅಳಿದು ಹೋಗಿದೆ. ಇನ್ನೊಂದಷ್ಟು ವಿಚಾರಗಳು ಬಲವಂತಕ್ಕೆ ಮಣಿದು ತೆರೆಮರೆಗೆ ಸರಿಸಲ್ಪಟ್ಟಿವೆ. ಅಂತಹ ಪರಂಪರೆಯಲ್ಲಿ ಕ್ಷಾತ್ರ ತೇಜದಲ್ಲಿ ಹೊಳೆಯಬೇಕಾಗಿದ್ದ ಮಹಿಳೆಯರದ್ದೂ ಸೇರಿಕೊಂಡಿದೆ ಅನ್ನುವುದು ದುರಂತ. ಹೆಣ್ಣನ್ನು ಅಬಲೆ, ಶೋಷಿತೆ ಎಂದು ನಮ್ಮ ಇತಿಹಾಸ ಪುಸ್ತಕಗಳು ಬಿಂಬಿಸಿದ್ದೇ ಹೆಚ್ಚು. ಆದರೆ ನಿಜವಾದ ಭಾರತದ ಇತಿಹಾಸವನ್ನು ಗಮನಿಸಿದರೆ ಅಲ್ಲಿ ಅಪ್ರತಿಮ ಧೈರ್ಯ, ಶೌರ್ಯ, ತ್ಯಾಗ ಮತ್ತು ಬುದ್ಧಿಮತ್ತೆಯನ್ನು ಮೆರೆದ ಅನೇಕ ವೀರ ಮಹಿಳೆಯರು ದೇಶಭಕ್ತಿಯ ಅತ್ಯುತ್ತಮ ನಿದರ್ಶನ ನೀಡಿರುವುದನ್ನು ಗಮನಿಸಬಹುದು. ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಓನಕೆ ಓಬವ್ವ, ರಾಣಿ ದುರ್ಗಾವತಿ ಮೊದಲಾದವರು ಪರಕೀಯರ ವಿರುದ್ಧ ಮತ್ತು ಅನ್ಯಾಯದ ವಿರುದ್ಧ ಹೋರಾಡಿ, ಇಂದಿನ ಪೀಳಿಗೆಗೆ ಮಾದರಿಯಾಗಿದ್ದಾರೆ. ಭವ್ಯ ಭಾರತದ ಕನಸು ನನಸಾಗಬೇಕಾದರೆ ಅಳಿದು ಹೋಗುವುತ್ತಿರುವುದನ್ನು ಕೆದಕ…

Read More

ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 13, 14, 21 ಮತ್ತು 22 ಫೆಬ್ರುವರಿ 2026ರಂದು (ಶನಿವಾರ ಮತ್ತು ಭಾನುವಾರ) ಸಂಜೆ 8-00 ಗಂಟೆಯಿಂದ 9-15ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ವಿದುಷಿ ಲಕ್ಷ್ಮೀ ನಾಗರಾಜ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ದಾಸರ ಪದಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಶಿವಮೊಗ್ಗ ಇದರ ವತಿಯಿಂದ ಮತ್ತು ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಇವರ ಸಹಯೋಗದಲ್ಲಿ ದತ್ತಿನಿಧಿ ಕಾರ್ಯಕ್ರಮವನ್ನು ದಿನಾಂಕ 13 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಶಿವಮೊಗ್ಗದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀ ಶಂಕರನಾರಾಯಣ ಉಪಾಧ್ಯಾ ದತ್ತಿ ಮತ್ತು ದಿ. ಶ್ರೀಮತಿ ಜಯಮ್ಮ ಮತ್ತು ದಿ. ಕರಿಯಪ್ಪ ಅಡಗಡಿ ಗ್ರಾಮ ಮಂಡಗಟ್ಟ ಆಯನೂರು ದತ್ತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ದೊಡ್ಡಮತ್ತಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಸಂತ್ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಉದ್ಘಾಟನೆ ಮಾಡಲಿದ್ದಾರೆ. ‘ಸಮಾಜ ಸೇವೆಯಲ್ಲಿ ಯುವಜನರ ಪಾತ್ರ’ ಎಂಬ ವಿಷಯದ ಬಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಕಂದಯಾಧಿಕಾರಿ ಡಿ. ನಾಗೇಂದ್ರ ಮತ್ತು ‘ಸಂವಿಧಾನದ ಅಶಯಗಳು ಈ ಹೊತ್ತಿನ ಭಾರತ’ ಎಂಬ ವಿಷಯದ ಬಗ್ಗೆ ಪ್ರಾಚಾರ್ಯರಾದ…

Read More

ಮಂಗಳೂರು : ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.) ಇದರ ವತಿಯಿಂದ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭವು ದಿನಾಂಕ 07 ಫೆಬ್ರುವರಿ 2026ರಂದು ಮಂಗಳೂರಿನ ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ನಡೆಯಿತು. ಮುಂಬಯಿಯ ಡಾ. ಸುನೀತಾ ಎಂ. ಶೆಟ್ಟಿ ಪ್ರಾಯೋಜಿಸುವ ‘ತೌಳವ ಸಿರಿ ಪ್ರಶಸ್ತಿ’ಯನ್ನು ಕ್ಯಾಥರಿನ್ ರಾಡ್ರಿಗಸ್ ಇವರಿಗೆ ಮತ್ತು ‘ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ’ಯನ್ನು ಸುಖಲಾಕ್ಷಿ ಸುವರ್ಣ ಇವರಿಗೆ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ಮಾತನಾಡಿದ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ “ಸಾಹಿತ್ಯದ ಬೆಳವಣಿಗೆಯಲ್ಲಿ ಸಹೃದಯರ ಪಾತ್ರ ಮುಖ್ಯ. ಉತ್ತಮ ಓದುಗರ ಸ್ಪಂದನೆಯಿಂದ ಸಾಹಿತ್ಯ ರಚನೆ ಸಾಕಾರಗೊಳ್ಳುತ್ತದೆ. ಓದುಗರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾದಾಗ ಸಾಹಿತಿಗೆ ಪ್ರೇರಣೆ ಸಿಕ್ಕಿದಂತಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದಾಗ ಸಾಮಾಜಿಕ ಬದ್ಧತೆಯ ಅರಿವಾಗುತ್ತದೆ. ಕೃತಿಗೆ ಹೆಚ್ಚು ಗೌರವವೂ ಸಿಗುತ್ತದೆ” ಎಂದು ಅಭಿಪ್ರಾಯಪಟ್ಟರು. ಸಂತ ಅಲೋಶಿಯಸ್ ಮಹಾ ವಿದ್ಯಾಲಯದ ನಿವೃತ್ತ ಉಪನ್ಯಾಸಕಿ ಸಾಹಿತಿ ಸರಸ್ವತಿ ಕುಮಾರಿ ಮಾತನಾಡಿ “ಉದ್ಯೋಗ, ಸಂಶೋಧನೆ, ಗಂಡ-ಮಕ್ಕಳ…

Read More

ಉಡುಪಿ : ಉಡುಪಿಯ ಪ್ರತಿಷ್ಠಿತ ರಾಗಧನ ಸಂಸ್ಥೆಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ 38ನೆಯ ಶ್ರೀ ಪುರಂದರದಾಸರು ಮತ್ತು ಸಂಗೀತ ತ್ರಿಮೂರ್ತಿ ಉತ್ಸವ ಕಾರ್ಯಕ್ರಮವು ದಿನಾಂಕ 6ರಿಂದ 8 ಫೆಬ್ರವರಿ 2026ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಆರಂಭದ ದಿನ ಸಭಾ ಕಾರ್ಯಕ್ರಮದಲ್ಲಿ ನಾಟ್ಯಾಚಾರ್ಯ ಪ್ರೊ. ರಾಮಮೂರ್ತಿ ರಾವ್ ಮೈಸೂರು ಇವರು ಉದ್ಘಾಟಿಸಿದರು. ಗಣ್ಯರ ಸಮ್ಮುಖದಲ್ಲಿ ಸತತ ಆರು ಗಂಟೆ ಹದಿಮೂರು ನಿಮಿಷಗಳ ಕಾಲ ಪುರಂದರದಾಸರ ರಚನೆಗಳನ್ನು ತಾನೇ ಸ್ವತಃ ಹಾಡಿ ನರ್ತಿಸಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮಾಡಿದ ದೀಕ್ಷಾ ರಾಮಕೃಷ್ಣ ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಈ ದಿನ ಚೆನ್ನೈಯ ಹೆಸರಾಂತ ಕಲಾವಿದರಾದ ಸಾಯಿ ವಿಘ್ನೇಶ್ ಇವರ ಕಛೇರಿ ನಡೆಯಿತು. ಉತ್ಸವದ ಎರಡನೇ ದಿವಸ ಪಿಳ್ಳಾರಿ ಗೀತೆಗಳು ಹಾಗೂ ತ್ಯಾಗರಾಜರ ಘನ ಪಂಚರತ್ನ ಗೋಷ್ಠಿ ಗಾಯನ ಉಡುಪಿಯ ಸಂಗೀತ ಗುರುಗಳು ಹಾಗೂ ಶಿಷ್ಯಂದಿರೊಡಗೂಡಿ ಸಮರ್ಪಕವಾಗಿ ನಡೆಸಿಕೊಟ್ಟರು. ತದನಂತರ ಉತ್ಸವದಲ್ಲಿ ಡಾ. ಸುಶೀಲಾ ಉಪಾಧ್ಯಾಯ…

Read More

ಮುಂಬಯಿ : ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಆಯೋಜನೆಯಲ್ಲಿ ಕವಿ ಡಾ. ಮರಿಯಪ್ಪ ನಾಟೇಕರ್ ಇವರ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನವು ದಿನಾಂಕ 13 ಫೆಬ್ರವರಿ 2026ರ ಶುಕ್ರವಾರದಂದು ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯನ್ನು ಅಭಿಜಿತ್ ಪ್ರಕಾಶನ ಪ್ರಕಟಿಸಿದೆ. ಈ ಕಾರ್ಯಕ್ರಮವು ಸಾಂತಾಕ್ರೂಜ್ (ಪೂ) ವಿದ್ಯಾನಗರಿ ಕಲೀನಾದ ಇಂಗ್ಲೀಷ್ ವಿಭಾಗದ ನೆಲಮಹಡಿಯಲ್ಲಿ ಮಧ್ಯಾಹ್ನ 2-00 ಗಂಟೆಗೆ ನಡೆಯಲಿದ್ದು, ಸಂಘಟಕರು ಉದ್ಯಮಿಗಳು ಆಗಿರುವ ಶ್ರೀ ಪೇಟೆಮನೆ ಪ್ರಕಾಶ ಶೆಟ್ಟಿ ಇವರು ಈ ಕೃತಿಯನ್ನು ಬಿಡುಗಡೆ ಮಾಡುವರು. ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಹಿರಿಯ ಪ್ರಾಧ್ಯಾಪಕರು ಆದ ಪ್ರೊ. ಜಿ.ಎನ್. ಉಪಾಧ್ಯ ಇವರು ಅಧ್ಯಕ್ಷತೆ ವಹಿಸುವರು. ಕೃತಿಯ ಪರಿಚಯವನ್ನು ವಿಭಾಗದ ಸಂಶೋಧನ ವಿದ್ಯಾರ್ಥಿ ಲೇಖಕಿ ಕಲಾ ಭಾಗ್ವತ್ ಅವರು ಮಾಡುವರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪೂರ್ಣಿಮಾ ಸುಧಾಕರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಲಿದ್ದಾರೆ. ಡಾ. ಮರಿಯಪ್ಪ ನಾಟೇಕರ್ : ಇವರು ಮೂಲತಃ ಯಾದಗಿರಿ ಜಿಲ್ಲೆಯ ವಡಗೇರಾದವರು.ಇವರು ಮುಂಬಯಿ…

Read More

ಉಡುಪಿ : ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶ ಸಂಯುಕ್ತಾಶ್ರಯದಲ್ಲಿ ನೀಡಲಾಗುವ ರಾಜ್ಯ ಮಟ್ಟದ ‘ಫಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ’ಕ್ಕೆ ಕೆಥೋಲಿಕ್ ಕೊಂಕಣಿ ಕ್ರೈಸ್ತರಿಂದ 2025ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಿತ ಕನ್ನಡ ಭಾಷಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಧಾರ್ಮಿಕ, ವೈಚಾರಿಕ, ವೈಜ್ಞಾನಿಕ, ಐತಿಹಾಸಿಕ, ಸಮಾಜಶಾಸ್ತ್ರ, ಜಾನಪದ ಅಧ್ಯಯನ, ಜೀವನ ಚರಿತ್ರೆ, ವ್ಯಕ್ತಿಚಿತ್ರ, ಸಂಪಾದಿತ ಕೃತಿಗಳ ಸಂಗ್ರಹ, ಕೊಂಕಣಿಯಿಂದ ಭಾಷಾಂತರಿತ ಕೃತಿಗಳು, ಕಥಾ ಸಂಗ್ರಹ, ಕಾದಂಬರಿ, ಕಾವ್ಯ ಸಂಗ್ರಹ, ನಾಟಕ, ಕಿರುನಾಟಕ ಸಂಗ್ರಹ ಇತ್ಯಾದಿಗಳನ್ನು ಪ್ರಶಸ್ತಿಗಾಗಿ ಕಳಿಸಬಹುದು. ಮುದ್ರಿತ ಕೃತಿಗಳ 4 ಪ್ರತಿಗಳನ್ನು ದಿನಾಂಕ 31 ಮಾರ್ಚ್ 2026ರೊಳಗೆ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 90359 96144ನ್ನು ಸಂಪರ್ಕಿಸಲು ತಿಳಿಸಿದೆ.

Read More

ಶಿರೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ದಿನಾಂಕ 08 ಫೆಬ್ರವರಿ 2026ರಂದು ಶಿರೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಕೊಂಕಣಿ ಸಂಭ್ರಮ್’ ಕಾರ್ಯಕ್ರಮದ ಉದ್ಘಾಟನೆಯನ್ನು ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಆಚಾರ್ ಇವರು ಉದ್ಘಾಟಿಸಿ “ಕೊಂಕಣಿ ಭಾಷಾಭಿಮಾನದೊಂದಿಗೆ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬೆಳಗಿಸುವುದರಲ್ಲಿ ಕೊಂಕಣಿಗರು ಒಂದಾಗಿ ಸಾಮರಸ್ಯದಿಂದ ಬಾಳಿರಿ” ಎಂದು ಶುಭ ಹಾರೈಸಿದರು. ಸಭಾ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ, ಸ್ವಾಗತಿಸಿ ಕೊಂಕಣಿ ಭಾಷೆಯನ್ನು ಮನೆಮನೆಗಳಲ್ಲಿ ಮಾತಾಡುವ ಮುಖಾಂತರ ಎಲ್ಲರೂ ಸಮಾನತೆಯ ಭಾವನೆಯನ್ನು ಹೊಂದಿ ಅಕಾಡೆಮಿ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮುಖ್ಯ ಅತಿಥಿಗಳಾಗಿ ಶಿರೂರು ಗ್ರಾಮ ಪಂಚಾಯತ್ ಸದಸ್ಯರಾದ ಶಂಕರ ಡಿ. ಮೇಸ್ತ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕಾಪ್ಸಿ ನೂರು ಮಹಮದ್, ಪೇಚೆ ಶ್ರೀ ವೆಂಕಟರಮಣ ದೇವಸ್ಥಾನ ಶಿರೂರು ಪದಾಧಿಕಾರಿಗಳು ಶ್ರೀ…

Read More

ಮುಂಬೈ : ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಯನವು ಸ್ಥಾಪಿತವಾಗಿ 125 ವರ್ಷಗಳು ಸಂದಿರುವ ಸಂಭ್ರಮದಲ್ಲಿ ಕನ್ನಡ ವಿಭಾಗವು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 06 ಫೆಬ್ರವರಿ 2026ರಂದು ಕವಿ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ನಡೆಯಿತು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಪಾಲ್ಗೊಂಡು ‘ಅಭಿಜಾತ ಸಾಹಿತ್ಯದ ಆವಶ್ಯಕತೆ’ ಎಂಬ ವಿಷಯದ ಕುರಿತು ಮಾತನಾಡಿದ ಖ್ಯಾತ ಬಹುಶ್ರುತ ವಿದ್ವಾಂಸರೂ, 2026ರ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರೂ ಆದ ಶತಾವಧಾನಿ ಡಾ. ಆರ್. ಗಣೇಶ್ “ಒಂದು ದೇಶದ ಸಂಸ್ಕೃತಿಯ ದಾರ್ಢ್ಯವನ್ನು ಅರಿಯಬೇಕಾದರೆ ಅಲ್ಲಿಯ ಅಭಿಜಾತ ಸಾಹಿತ್ಯ ಎಷ್ಟರ ಮಟ್ಟಿಗೆ ನೆಲೆಯೂರಿದೆ ಎಂದು ನೋಡಬೇಕಾಗುತ್ತದೆ. ಅಭಿಜಾತ ಸಾಹಿತ್ಯವನ್ನು ಆಧುನಿಕ ದೇಶಗಳು ಕೂಡ ಕಾಪಾಡಿಕೊಂಡು ಬಂದಿವೆ. ಅದು ಜನಜೀವನದಲ್ಲಿ ಒಂದು ಮಟ್ಟದಲ್ಲಿ ಹಾಸುಹೊಕ್ಕಾಗಿದೆ. ಅಭಿಜಾತ ಕೃತಿಯ ಲಕ್ಷಣ ಏನೆಂದರೆ ಅದು ಹೇಳಬೇಕಾದುದನ್ನು ಎಂದೂ ಹೇಳಿ ಮುಗಿಸಿರುವುದಿಲ್ಲ. ಅನುಭವದಲ್ಲಿ ಹೊಸತನ್ನು ತಂದುಕೊಡುವುದು ಅಭಿಜಾತ ಸಾಹಿತ್ಯದ ಮುಖ್ಯ ಲಕ್ಷಣ. ಒಂದು ಕೃತಿಗೆ ಕಾಲಪ್ರತಿಷ್ಠೆ ಬೇಕು;…

Read More

ಬೀದ‌ರ್ : ನಾಟ್ಯಶ್ರೀ ನೃತ್ಯಾಲಯದಿಂದ ಕೊಡಲಾಗುವ 2026ನೇ ಸಾಲಿನ ‘ನಾಟ್ಯಶ್ರೀ ಪ್ರಶಸ್ತಿ’ಗೆ ನೃತ್ಯ ಕಲಾವಿದೆ ಮಂಗಳೂರಿನ ಸನಾತನ ನೃತ್ಯಾಲಯದ ಮುಖ್ಯಸ್ಥೆ ಶಾರದಾಮಣಿ ಶೇಖರ್ ಇವರನ್ನು ಆಯ್ಕೆ ಮಾಡಲಾಗಿದೆ. ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ನೇತೃತ್ವದಲ್ಲಿ ಸಭೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು ರೂ.20,000/- ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ದಿನಾಂಕ 22 ಫೆಬ್ರವರಿ 2026ರಂದು ಬೀದ‌ರ್ ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಸತ್ಯಮೂರ್ತಿ ತಿಳಿಸಿದ್ದಾರೆ.

Read More