Author: roovari

ಮಂಗಳೂರು : ಮಾಂಡ್ ಸೊಭಾಣ್ ಮತ್ತು ಕಲಾಂಗಣ್ ವತಿಯಿಂದ ಡಾ. ಸವಿತಾ ರಾಣಿ ಇವರ ನಿರ್ದೇಶನದಲ್ಲಿ ‘ಹೊ ತೊ ತೊ ಹೊ’ ಕೊಂಕಣಿ ನಾಟಕ ಪ್ರದರ್ಶನವನ್ನು ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ ಘಂಟೆ 6-30ಕ್ಕೆ ಶಕ್ತಿನಗರದ ಕಲಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಅರುಣ್ ರಾಜ್ ಲುದ್ರಿಗ್ ಮತ್ತು ವಿಕಾಸ್ ಕಲಾಕುಲ್ ಇವರು ಅನುವಾದಿಸಿದ್ದು, ರೆನೊಲ್ಡ್ ಲೋಬೊ ಮತ್ತು ಕ್ರೀತನ್ ಡಿ’ಸೋಜಾ ಸಂಗೀತ ನೀಡಿರುತ್ತಾರೆ.

Read More

ಬೆಂಗಳೂರು : ಶ್ರವಣಬೆಳಗೊಳದಲ್ಲಿ ನಡೆದ 81ನಯೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇನದ ಸವಿನೆನಪಿಗಾಗಿ ಸಮ್ಮೇಳನಾಧ್ಯಕ್ಷರಾದ ಡಾ. ಸಿದ್ಧಲಿಂಗಯ್ಯವರ ಹೆಸರಿನಲ್ಲಿ ಸ್ಥಾಪಿತವಾಗಿರುವ ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ’ ಪುರಸ್ಕಾರಕ್ಕೆ 2024ನೆಯ ಸಾಲಿಗೆ ಜನಪದ ಗಾಯಕ ಎಚ್. ಜನಾರ್ದನ್ (ಜನ್ನಿ) ಮತ್ತು 2025ನೆಯ ಸಾಲಿಗೆ ಶೂದ್ರ ಶ್ರೀನಿವಾಸ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ. ಡಾ. ಸಿದ್ಧಲಿಂಗಯ್ಯನವರ ತಾತ್ವಿಕತೆಯನ್ನು ಸಮರ್ಥವಾಗಿ ವಿವಿಧ ಮಾಧ್ಯಮಗಳ ಮೂಲಕ ಸಮರ್ಥವಾಗಿ ಬಿಂಬಿಸುತ್ತಿರುವ ಸಾಧಕರಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ. 2024ನೆಯ ಸಾಲಿನ ‘ಡಾ. ಸಿದ್ಧಲಿಂಗಯ್ಯ ಸಾಹಿತ್ಯ ದತ್ತಿ’ ಪುರಸ್ಕಾರಕ್ಕೆ ಪಾತ್ರರಾಗಿರುವ ಎಚ್. ಜನಾರ್ದನ (ಜನ್ನಿ)ಯವರು ಸುಮಾರು ನಾಲ್ಕೂವರೆ ದಶಕಗಳಿಂದ ರಂಗಭೂಮಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು. ಹಲವು ಪ್ರಮುಖ ನಾಟಕಗಳನ್ನು ನಿರ್ದೇಶಿಸಿರುವ ಅವರು ಬೀದಿ ನಾಟಕ ಚಳುವಳಿಯಲ್ಲಿ, ಕಾವ್ಯರಂಗ ಪ್ರಯೋಗದಲ್ಲಿ ತಮ್ಮ ವಿಶಿಷ್ಟತೆಯನ್ನು ಮರೆದಿದ್ದಾರೆ. ‘ಬರ’ ಚಿತ್ರದ ಮೂಲಕ ಚಲನಚಿತ್ರ ಕ್ಷೇತ್ರವನ್ನು ಪ್ರವೇಶ ಮಾಡಿ ಅಲ್ಲಿಯೂ ತಮ್ಮ ಛಾಪನ್ನು…

Read More

ಮಳವಳ್ಳಿ : ರಂಗಬಂಡಿ ಮಳವಳ್ಳಿ (ರಿ.) ಇದರ ವತಿಯಿಂದ ಹಾಗೂ ಯುನಿವರ್ಸಲ್ ಸೇವಾ ಟ್ರಸ್ಟ್ (ರಿ.) ಮಳವಳ್ಳಿ ಇದರ ಸಹಯೋಗದೊಂದಿಗೆ ಆಯೋಜಿಸುವ ‘ಮಳವಳ್ಳಿ ಸುಂದರಮ್ಮ ನಾಟಕೋತ್ಸವ 2025-26’ ಕಾರ್ಯಕ್ರಮಗಳನ್ನು ದಿನಾಂಕ 09 ಸೆಪ್ಟೆಂಬರ್ 2025ರಿಂದ 15 ಸೆಪ್ಟೆಂಬರ್ 2025ರವೆರೆಗೆ ಪ್ರತಿದಿನ ಸಂಜೆ 6-30 ಗಂಟೆಗೆ ಮಳವಳ್ಳಿಯ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ ಹಿಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 09 ಸೆಪ್ಟೆಂಬರ್ 2025ರಂದು ಮಂಡ್ಯ ರಮೇಶ್ ಇವರ ನಿರ್ದೇಶನದಲ್ಲಿ ನಟನ (ರಿ.) ಮೈಸೂರು ಪ್ರಸ್ತುತ ಪಡಿಸುವ ‘ಸ್ಥಾವರವೂ ಜಂಗಮ’, ದಿನಾಂಕ 10 ಸೆಪ್ಟೆಂಬರ್ 2025ರಂದು ಡಾ. ಕೆ. ರಾಮಕೃಷ್ಣಯ್ಯ ಇವರ ನಿರ್ದೇಶನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪ್ರದರ್ಶನ ಕಲಾವಿಭಾಗ ಪ್ರಸ್ತುತ ಪಡಿಸುವ ‘ಮಂಟೇಸ್ವಾಮಿ ಕಥಾ ಪ್ರಸಂಗ’, ದಿನಾಂಕ 11 ಸೆಪ್ಟೆಂಬರ್ 2025ರಂದು ರಮೇಶ್ ಬೆಣಕಲ್ ಇವರ ನಿರ್ದೇಶನದಲ್ಲಿ ಶ್ರೀರಂಗ ಪಟ್ಟಣದ ಗಮ್ಯ (ರಿ.) ಪ್ರಸ್ತುತ ಪಡಿಸುವ ‘ಪರಿಣಯ ಪ್ರಸಂಗ’, ದಿನಾಂಕ 12 ಸೆಪ್ಟೆಂಬರ್ 2025ರಂದು ವಿದ್ವಾನ್ ವೈ.ಎಂ. ಪುಟ್ಟಣ್ಣಯ್ಯ ಇವರ ನಿರ್ದೇಶನದಲ್ಲಿ…

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 135’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 06 ಸೆಪ್ಟೆಂಬರ್ 2025ರಂದು ಸಂಜೆ 5-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.   ವಿದ್ವಾನ್ ದೀಪಕ್ ಕುಮಾರ್ ಇವರ ಶಿಷ್ಯೆ ಸನ್ನಿಧಿ ಎಸ್. ಇವರು ನೃತ್ಯ ಪ್ರದರ್ಶನ ನೀಡಲಿದ್ದು, ಶ್ರೀಮತಿ ವಿದ್ಯಾ ಗೌರಿ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು. ವಿದ್ವಾನ್ ದೀಪಕ್ ಕುಮಾರ್ ನಟುವಾಂಗದಲ್ಲಿ, ವಿದುಷಿ ಪ್ರೀತಿಕಲಾ ಹಾಡುಗಾರಿಕೆಯಲ್ಲಿ ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಮೃದಂಗ ಮತ್ತು ವಿದ್ವಾನ್ ಕೃಷ್ಣಗೋಪಾಲ ಪೂಂಜಾಲಕಟ್ಟೆ ಇವರು ಕೊಳಲಿನಲ್ಲಿ ಸಹಕರಿಸಲಿದ್ದಾರೆ.  

Read More

ಕೋಟ : ಕರ್ಣಾಟಕ ಯಕ್ಷಧಾಮ ಮಂಗಳೂರು ಮತ್ತು ಕಲ್ಕೂರ ಪ್ರತಿಷ್ಠಾನ ಇದರ ವತಿಯಿಂದ ‘ಯಕ್ಷಕೂಟ’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ 4-00 ಗಂಟೆಗೆ ಕೋಟ ಮೂರುಕೈ ಶ್ರೀ ಹಂದೆ ವಿನಾಯಕ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ಹಮ್ಮಿಕೊಳ್ಳಲಾಗಿದೆ. ಶರಸೇತು ಬಂಧನ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

Read More

ಬೆಂಗಳೂರು : ನಮ್ ಕತೆಗಳು, ಹಾಡ್ಗುಳು, ಯಾವಾಗಲೂ ಕಾಡ್ತಾವ, ಯಾವುದೋ ಕಥೆಯಲ್ಲಿ ಇನ್ಯವುದೋ ನೆನ್ಪಾಗ್ತಾದ, ಹಾಗೆ ಹಾಡ್ಗಳಲ್ಲಿ ಕೂಡ… ಹಾಗೆ ಕಾಡಿ ಈ ‘ತೌಸೆಂಡ್ ರಿವರ್ ಬ್ಲೂಸ್’ ಹುಟ್ಟಿಕೊಂಡಿದೆ. ಇಲ್ಲಿ ನಮ್ ಧ್ವನಿಗಳಿಗೆ ಹಾಡ್ಗಳು ಅಂಟಿಕೊಂಡಿವೆ, ವಾದ್ಯಗಳಿಗೆ ನಮ್ ಕೈ ಬೆರಳುಗಳು ಉಸಿರಾಗಿದೆ. ಹಾಡೋಣ, ಓದೋಣ, ಕುಣಿಯೋಣ, ಕೇಳಿಸಿಕೊಳ್ಳೊಣ. ಜಂಗಮ ಕಲೆಕ್ಟಿವ್ ಬೆಂಗಳೂರು ಇದರ ಸಹಯೋಗದಲ್ಲಿ ಹಲ್ಗಿ ಕಲ್ಚರ್ ಪ್ರಸ್ತುತ ಪಡಿಸುವ ಎರಡನೇ ಪ್ರದರ್ಶನ ದಿನಾಂಕ 07 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರ, ಐಡಿಯಲ್ ಹೊಮ್ಸ್ ದೀಪ ಮನೆ 70ರಲ್ಲಿ ಆಯೋಜಿಸಲಾಗಿದೆ. https://forms.gle/TfJ7ffAoJV4SmxJQA

Read More

ಬೆಂಗಳೂರು : ಸೈಡ್ ವಿಂಗ್ (ರಿ.) ಬೆಂಗಳೂರು ಪ್ರಸ್ತುತ ಪಡಿಸುವ ಶೈಲೇಶ್ ಕುಮಾರ್ ಎಂ.ಎಂ. ಇವರ ರಚನೆ, ನಿರ್ಮಾಣ ಮತ್ತು ನಿದೇಶನದಲ್ಲಿ ‘ಸೀತೂ ಮದುವೆ’ ನಾಟಕ ಪ್ರದರ್ಶನವನ್ನು ದಿನಾಂಕ 06 ಸೆಪ್ಟೆಂಬರ್ 2025ರಂದು ಸಂಜೆ ಗಂಟೆ 7-15ಕ್ಕೆ ಬೆಂಗಳೂರು ಬಸವನಗುಡಿ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಟಿಕೆಟ್ ದರ ರೂ.150/- ಆಗಿದ್ದು, ಹೆಚ್ಚಿನ ಮಾಹಿತಿಗಾಗಿ 98450 87901 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಭಾರತದ ಅತಿ ದೊಡ್ಡ ಪುಸ್ತಕ ಭಂಡಾರ ಸಪ್ನ ಬುಕ್ ಹೌಸ್ ಹಾಗೂ ಎನ್. ನರಸಿಂಹಯ್ಯ ಶತಮಾನೋತ್ಸವ ಸಂಭ್ರಮ ಸಮಿತಿ ಇದರ ವತಿಯಿಂದ ಎನ್. ನರಸಿಂಹಯ್ಯನವರ 10 ಕಾದಂಬರಿಗಳ ಬಿಡುಗಡೆ ಸಮಾರಂಭವನ್ನು ದಿನಾಂಕ 06 ಸೆಪ್ಟೆಂಬರ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಗಾಂಧಿನಗರದಲ್ಲಿ ‘ಸಪ್ನ ಬುಕ್ ಹೌಸ್’ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡೋಜ ಪ್ರೊ. ಹಂಪ ನಾಗರಾಜಯ್ಯ ಇವರು ವಹಿಸಲಿದ್ದು, ಡಾ. ಬೈರಮಂಗಲ ರಾಮೇಗೌಡ, ರಾ.ನಂ. ಚಂದ್ರಶೇಖರ, ಡಾ. ಉದ್ದಂಡಯ್ಯ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 114ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 09 ಸೆಪ್ಟೆಂಬರ್ 2025ರಂದು ಪೂರ್ವಾಹ್ನ ಗಂಟೆ 02-45ಕ್ಕೆ ಮಂಗಳೂರು ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ರಥಬೀದಿಯಲ್ಲಿರುವ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಬಾಯಿ ಕೆ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮೈ ಅಂತರಾತ್ಮ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಇದರ ಸಂಸ್ಥಾಪಕರು ಹಾಗೂ ಅಂಕಣಕಾರರಾದ ವೇಣು ಶರ್ಮ, ಉಪನ್ಯಾಸಕಿ ಪ್ರೊ. ಅಕ್ಷಯ ಆರ್. ಶೆಟ್ಟಿ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಅಧ್ಯಕ್ಷರಾದ ಚಂಚಲ ತೇಜೋಮಯ ಇವರುಗಳು ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಭಾಗವಹಿಸಲಿರುವರು.

Read More

ಕೊಪ್ಪಳ : ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಕೊಪ್ಪಳದ ವಿಸ್ತಾರ್ ರಂಗ ಶಾಲೆ 2025-26ನೇ ಸಾಲಿನ ನಾಟಕ ವಿಭಾಗದ ಸರ್ಟಿಫಿಕೇಟ್ ಮತ್ತು ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ. ಉತ್ತರ ಕರ್ನಾಟಕದ ಭಾಗದ ಏಕೈಕ ರಂಗಶಾಲೆ ಇದಾಗಿದ್ದು, ಪರಿವರ್ತನಾತ್ಮಕ ರಂಗಭೂಮಿ ಕಲಿಕೆ ಇದರ ಮುಖ್ಯ ಉದ್ದೇಶವಾಗಿದೆ. ಕಳೆದ 10 ವರ್ಷಗಳಿಂದ ನಾಟಕ ಡಿಪ್ಲೋಮದ ಜೊತೆಗೆ ವಿವಿಧ ಅಲ್ಪಾವಧಿ ರಂಗತರಬೇತಿಗಳನ್ನು ನಡೆಸುತ್ತ ಬಂದಿದೆ. ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಸೆಪ್ಟೆಂಬರ್ 2025 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9535383161, 7026972770. viewform

Read More