Author: roovari

ಬಳ್ಳಾರಿ : ಬಳ್ಳಾರಿಯ ಶ್ರೀ ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್ ಆಯೋಜಿಸಿದ್ದ ನಾಡೋಜ ಬೆಳಗಲ್ಲು ವೀರಣ್ಣ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 27 ಏಪ್ರಿಲ್ 2025ರ ಭಾನುವಾರ ಸಂಜೆ ಧಾರವಾಡದ ಡಾ. ‌ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಹಾಗೂ ಸಾಹಿತಿಯಾದ ಡಾ.‌ ವಸುಂಧರಾ ಭೂಪತಿ ಮಾತನಾಡಿ “ತೊಗಲು ಗೊಂಬೆ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಬೆಳಗಲ್ಲು ವೀರಣ್ಣ ಅವರ ಹೆಸರಿನಲ್ಲಿ ಕರ್ನಾಟಕ ಸರಕಾರ ಪ್ರಶಸ್ತಿ ಆರಂಭಿಸಬೇಕು. ಅಳಿವಿನಂಚಿನಲ್ಲಿರುವ ತೊಗಲುಗೊಂಬೆಯಾಟಕ್ಕೆ ಆಧುನಿಕ ಸ್ಪರ್ಶ ನೀಡಿ ದೇಶ ವಿದೇಶಗಳಲ್ಲಿ ತಮ್ಮ‌ ಮೇಳದ ಮೂಲಕ ಪ್ರದರ್ಶನ ನೀಡಿರುವ ಇವರ ಜೀವನ, ಜಾನಪದ ಮತ್ತು ರಂಗಭೂಮಿಯ ಕೊಡುಗೆಯನ್ನು‌ ಪಠ್ಯದಲ್ಲಿ ಅಳವಡಿಸಿ‌ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಐದು ದಶಕಗಳ‌ಕಾಲ ವಾಸವಿದ್ದ ನಿವಾಸದ ಸಮೀಪದ ರೇಡಿಯೋ ಪಾರ್ಕ್ ರಸ್ತೆಗೆ ನಾಡೋಜ ಬೆಳಗಲ್ಲು ವೀರಣ್ಣ ಹೆಸರಿಡಬೇಕು ಎಂದು ಮಹಾನಗರ ಪಾಲಿಕೆಗೆ ಮನವಿ ಮಾಡಿದರು. ನಾಡೋಜ ಬೆಳಗಲ್ಲು ವೀರಣ್ಣ…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಆಯೋಜಿಸುವ ಉಡುಪಿ ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಕೃತಿ – 2025’ ದಿನಾಂಕ 30 ಏಪ್ರಿಲ್ ಹಾಗೂ 01 ಮೇ 2025ರಂದು ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಹಿರಿಯ ಸಾಹಿತಿಗಳು, ಸಂಶೋಧಕರು, ವಿದ್ವಾಂಸರಾದ ಪಾದೆಕಲ್ಲು ವಿಷ್ಣುಭಟ್ಟ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದಂಗಳವರು ಹಾಗೂ ಕಿರಿಯ ಸ್ವಾಮಿಗಳಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀ ಪಾದಂಗಳವರು ದೀಪ ಪ್ರಜ್ವಲನಗೈದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕ. ಸಾ. ಪ. ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಾಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ…

Read More

ಬೆಂಗಳೂರು : ಬಸವ ವೇದಿಕೆಯು ಕಳೆದ 29 ವರ್ಷಗಳಿಂದ ನಾಡಿನ ವಿವಿಧ ಕ್ಷೇತ್ರಗಳ ಮಹಾನ್ ಸಾಧಕರುಗಳಿಗೆ “ಬಸವ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾ ಬಂದಿದೆ.ಈ ದಿಸೆಯಲ್ಲಿ ಹಲವಾರು ಹಿರಿಯ ಸಾಹಿತಿಗಳಿಗೆ ನಾಡಿನ ಪ್ರತಿಷ್ಠಿತ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ಈಗಾಗಲೇ ನೀಡಿ ಗೌರವಿಸಿದೆ ಈ ವರ್ಷ ಶರಣ ಚಿಂತಕರು 87ನೇ ಅಖಿಲ ಭಾರತ ಕನ್ನಡ ಸಮ್ಮೇಳನ ಅಧ್ಯಕ್ಷರಾಗಿದ್ದ ನಾಡೋಜ ಗೊ. ರು. ಚನ್ನಬಸಪ್ಪನವರಿಗೆ 2025ನೇ ಸಾಲಿನ ‘ಬಸವ ಶ್ರೀ’ ಪ್ರಶಸ್ತಿಯನ್ನು 03 ಮೇ 2025ರ ಶನಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೀಡಿ ಗೌರವಿಸುತ್ತಿದೆ. ಇದೇ ಸಂದರ್ಭದಲ್ಲಿ ‘ವಚನ ಸಾಹಿತ್ಯ ಶ್ರೀ’ ಪ್ರಶಸ್ತಿಯನ್ನು ಬಿಜಾಪುರದ ಬಿ. ಎಲ್. ಡಿ. ಸಂಸ್ಥೆಯ ವಚನ ಪಿತಾಮಹ ಹಾಗೂ ಡಾ ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರಕ್ಕೆ ಹಾಗೂ ಪ್ರಖ್ಯಾತ ವಚನ ಸಂಗೀತ ಗಾಯಕಿ ಎಂ. ಡಿ. ಪಲ್ಲವಿ ಇವರಿಗೆ ನೀಡಲಾಗುತ್ತಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಬಸವ ವೇದಿಕೆಯ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್…

Read More

ಬಂಟ್ವಾಳ : ಮಂಗಳೂರು ಹಾಗೂ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವವು ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಿನಾಂಕ 26 ಏಪ್ರಿಲ್ 2025ರಂದು ನಡೆಯಿತು. ಇದೇ ಸಮಾರಂಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಇವರುಗಳಿಗೆ ಗೌರವ ಸಮ್ಮಾನ ನೀಡಲಾಯಿತು. ರಂಗಕರ್ಮಿ-ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಮಾತನಾಡಿ “ಮಕ್ಕಳನ್ನು ಬಾಲ್ಯದಲ್ಲಿಯೇ ಸಾಂಸ್ಕೃತಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮುಂದೆ ಅವರ ಆ ಕ್ಷೇತ್ರದಲ್ಲಿ ಸಾಧನೆ ಮಾಡುವ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುತ್ತಾರೆ” ಎಂದರು. ಪುತ್ತೂರಿನ ಬಿಲ್ಡರ್ ಅಬ್ದುಲ್ ರೆಹಮಾನ್ ಮಾತನಾಡಿ “ವಿದ್ಯಾರ್ಥಿಗಳು ಒಂದೇ ತಾಯಿಯ ಮಕ್ಕಳ ರೀತಿ ಕಲಿತು ತಮ್ಮ ಸಾಧನೆಯ ಮೂಲಕ ವಿದ್ಯಾ ಸಂಸ್ಥೆ, ಹೆತ್ತವರಿಗೆ ಕೀರ್ತಿ ತರುವ ಜತೆಗೆ ದೇಶದ ಆಸ್ತಿಯಾಗಬೇಕಿದೆ” ಎಂದರು. ಕಾಲೇಜಿನ ಪ್ರಾಂಶುಪಾಲ ರಾಕೇಶ್‌ ಕುಮಾರ್ ಮಾತನಾಡಿ “ಮೈಟ್ ಕಾಲೇಜು 2001ರಲ್ಲಿ ಮಂಗಳೂರಿನ…

Read More

ಮಡಿಕೇರಿ : ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇದರ ವತಿಯಿಂದ ಕಾಲೇಜು ಸಭಾಂಗಣದಲ್ಲಿ ‘ಕಲೋತ್ಸವ -2025’ ಜಿಲ್ಲಾ ಮಟ್ಟದ ಅಂತ‌ರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎನ್. ಪೊನ್ನಣ್ಣ “ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದೊಂದಿಗೆ ಕಲೆ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಶನಕ್ಕೆ ಎಲ್ಲರೂ ಶ್ರಮಪಡಬೇಕು. ಪ್ರತಿಯೊಬ್ಬರಲ್ಲಿಯೂ ಸಹ ಒಂದಲ್ಲ ಒಂದು ರೀತಿ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಭವಿಷ್ಯದಲ್ಲಿ ಸ್ಮರಿಸುವಂತಹ ಬದುಕನ್ನು ಕಟ್ಟಿಕೊಳ್ಳಬೇಕು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಇಂತಹ ಕಲೋತ್ಸವ ಕಾರ್ಯಕ್ರಮಗಳು ಪ್ರತಿಯೊಬ್ಬ…

Read More

ಮಂಗಳೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಮೈಸೂರಿನ ಚಾಮರಾಜೇಂದ್ರ ಸರಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಬ್ಯಾಚುಲ‌ರ್ ಆಫ್ ವಿಷುವಲ್ ಆರ್ಟ್ಸ್ (ಬಿ. ವಿ. ಎ.)-ನಾಲ್ಕು ವರ್ಷ, ಎಂಟು ಸೆಮಿಸ್ಟರ್‌ಗಳ ಎನ್‌. ಇ. ಪಿ. ಪದ್ಧತಿಯ ದೃಶ್ಯಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ. ವಿ. ಎ. ಪದವಿ ಪ್ರವೇಶಕ್ಕಾಗಿ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ. ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು htts://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ.

Read More

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದರ ವತಿಯಿಂದ ಯಕ್ಷಗಾನದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಆಯೋಜಿಸುತ್ತಿದೆ. ಯಕ್ಷಗಾನ ತೆಂಕು ಮತ್ತು ಬಡಗುತಿಟ್ಟು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಸೌಲಭ್ಯಕ್ಕಾಗಿ, ಪ್ರೌಢ ಶಾಲೆ – 6ರಿಂದ 9 ತರಗತಿ, ಪದವಿಪೂರ್ವ ಕಾಲೇಜು (ಕಲಾ-ವಾಣಿಜ್ಯ ಮಾತ್ರ) ಹಾಗೂ ಪದವಿ ತರಗತಿಗಳಿಗೆ ದಾಖಲಾಗ ಬಯಸುವ ಆಸಕ್ತ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡುವುದು. ವಿಳಾಸ : ಡಾ. ಎಂ. ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ – 574227. ಹೆಚ್ಚಿನ ಮಾಹಿತಿಗಾಗಿ 9480529236 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಇವರು ಮಣಿಪಾಲ ಅಕಾಡೆಮಿ ಇದರ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ. ಎಚ್. ಶಾಂತಾರಾಮ್ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ವರ್ಷ ಕಾದಂಬರಿಯನ್ನು ಪರಿಗಣಿಸಿದ್ದು, 2023 ಮತ್ತು 2024ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ರೂಪಾಯಿ 15,000 ನಗದು ಮತ್ತು ಬೆಳ್ಳಿಯ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ ತಿಂಗಳಿನಲ್ಲಿ ನಡೆಯಲಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಕಾದಂಬರಿಗಳು ನಾಲ್ಕು ಪ್ರತಿಗಳನ್ನು ದಿನಾಂಕ 15 ಮೇ 2025ರ ಒಳಗಾಗಿ ಡಾ. ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ – 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶ ವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ. 8792107369 ಸಂಪರ್ಕಿಸಬಹುದು.

Read More

ಕಟೀಲು : ಇಲ್ಲಿನ ಗಂಪ ಚಂದ್ರಶೇಖರ ಬೆಳ್ಚಡ ಕುಟುಂಬಸ್ಥರು ನಡೆಸಿಕೊಂಡು ಬರುತ್ತಿರುವ ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಐವತ್ತನೇ ವರುಷದ ಯಕ್ಷಗಾನ ಸೇವೆಯಾಟದ ಐವತ್ತನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ ಕಾರ್ಯಕ್ರಮವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಇದೇ ಸಂದರ್ಭದಲ್ಲಿ ಕಟೀಲು ಮೇಳದ ಕಲಾವಿದರಾದ ಕುಮಾರ ಪಡ್ರೆ, ಪದ್ಯಾಣ ಗೋವಿಂದ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್ಟ, ಮೊನ್ನಪ್ಪ ಗೌಡ ಕಿನ್ನಿಕೊಡಂಗೆ ಇವರನ್ನು ಸನ್ಮಾನಿಸಲಾಯಿತು. ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ “ಗರ್ಭಗುಡಿಯೊಳಗಿನಿಂದ ದೇವರು ಉತ್ಸವ ಸಂದರ್ಭ ಹೊರಬಂದು ಪೂಜೆ ಸ್ವೀಕರಿಸಿ ಭಕ್ತರನ್ನು ಆಶೀರ್ವದಿಸಿ ಹೋಗುವುದು ಸಾಮಾನ್ಯ, ಆದರೆ ಕಟೀಲು ಅಮ್ಮ ಯಕ್ಷಗಾನದ ಮೂಲಕ ಭಕ್ತರ ಮನೆಗೇ ಬಂದು ಸೇವೆ ಸ್ವೀಕರಿಸಿ ಹೋಗುತ್ತಾಳೆ ಎಂಬ ನಂಬಿಕೆಯಂತೆ ಕಳೆದ ಐವತ್ತು ವರುಷಗಳಿಂದ ತಪಸ್ಸಿನಂತೆ ಗಂಪ ಮನೆಯಲ್ಲಿ ಯಕ್ಷಗಾನಾರಾಧನೆ, ಕಲಾರಾಧನೆ, ಆ ಮೂಲಕ ಕಟೀಲಮ್ಮನ ಆರಾಧನೆ ನಡೆಸುತ್ತ ಬಂದಿರುವುದು ಅಭಿನಂದನೀಯ” ಎಂದರು. ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…

Read More

ಬೆಂಗಳೂರು : ಶ್ರೀ ಅಖಿಲ ಹವ್ಯಕ ಮಹಾಸಭಾದ ವತಿಯಿಂದ ಮಲ್ಲೇಶ್ವರಂನ ಹವ್ಯಕ ಭವನದಲ್ಲಿ ಹಮ್ಮಿಕೊಂಡಿದ್ದ 82ನೇ ವರ್ಷದ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ವಾರ್ಷಿಕ ‘ಹವ್ಯಕ ವಿಶೇಷ ಪ್ರಶಸ್ತಿ’ ಮತ್ತು ಪಲ್ಲವ ಪುರಸ್ಕಾರ ಪ್ರದಾನ ಸಮಾರಂಭವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು. ಉದ್ಯಮಿ ಮತ್ತು ಸಮಾಜ ಸೇವಕ ಜಿ.ವಿ. ಭಟ್ ಗೋರೆ ಇವರಿಗೆ ‘ಹವ್ಯಕ ವಿಭೂಷಣ’ ಪ್ರಶಸ್ತಿ, ವಿದ್ವಾಂಸ ಮತ್ತು ಭಾಷಾ ತಜ್ಞರಾದ ಪಾದೇಕಲ್ಲು ವಿಷ್ಣು ಭಟ್ಟ, ಶಿಕ್ಷಣ ಮತ್ತು ಸಂಶೋಧಕ ಎಸ್.ಎನ್. ಹೆಗಡೆ, ಅಡಿಷನಲ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪರಮೇಶ್ವರ ಹೆಗಡೆ ಶಿರಸಿ ಇವರಿಗೆ ‘ಹವ್ಯಕ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾವಿದ ಸಂಜಯ ಬೆಳೆಯೂರು, ನೃತ್ಯ ಕಲಾವಿದೆ ಕಾವ್ಯಾ ಜಿ. ರಾವ್, ಸಂಗೀತ ಕಲಾವಿದ ಕೆ.ಜೆ. ದಿಲೀಪ್ ಇವರಿಗೆ ‘ಹವ್ಯಕ ಶ್ರೀ’ ಪ್ರಶಸ್ತಿ, ಹವ್ಯಕ ಮಾಸ ಪತ್ರಿಕೆಯ ನಿರ್ದೇಶಕ ಹಾಗೂ ಸಂಚಾಲಕ ನಾರಾಯಣ ಭಟ್ ಹುಳೇಗಾರು ‘ಹವ್ಯಕ ಸೇವಾ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಸಮ್ಮಾನಿಸಲಾಯಿತು. ವಿಶೇಷ ಸಾಧನೆ…

Read More