Subscribe to Updates
Get the latest creative news from FooBar about art, design and business.
Author: roovari
ಹುಬ್ಬಳ್ಳಿ : 2025ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಸಂತೆಬೆನ್ನೂರು ಫೈಜ್ನಟ್ರಾಜ್ ಇವರ ‘ಮಡಿಲ ಕೂಸಿಗೆ ಮಣ್ಣಿನ ಸೆರಗು’ ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ರೂ.10,000/- ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ವಿಮರ್ಶಕರಾದ ಸಿರಾಜ್ ಅಹಮದ್ ಮತ್ತು ವಿಜಯಾ ಗುತ್ತಲ ಇವರು ತೀರ್ಪುಗಾರರಾಗಿದ್ದರು. ದಾವಣಗೆರೆ ಜಿಲ್ಲೆ ಸಂತೆಬೆನ್ನೂರಿನ ಫೈಜ್ನಟ್ರಾಜ್ ಇವರು ಡಯಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ ಎಂದು ವಿಭಾ ಸಾಹಿತ್ಯ ಪ್ರಶಸ್ತಿಯ ಸಂಚಾಲಕಿ ಸುನಂದಾ ಪ್ರಕಾಶ ಕಡಮೆ ತಿಳಿಸಿದ್ದಾರೆ.
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ- 2025ರ ಅಂಗವಾಗಿ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ದಿನಾಂಕ 23 ಸೆಪ್ಟೆಂಬರ್ 2025ರಂದು 2ನೇ ವರ್ಷದ ಬಹುಭಾಷಾ ಮತ್ತು ತುಳು ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಕವಿಗೋಷ್ಠಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಇವರು ಉದ್ಘಾಟಿಸಿ “ಭಾರತ ಹಲವು ಭಾಷೆಗಳ ರಂಗೋಲಿ. ಎಲ್ಲಾ ಭಾಷೆಗಳ ಉದ್ದೇಶ ಮನುಕುಲದ ಉದ್ದಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು. ಕೆಲವು ಭಾಷೆಗಳು ಪತನಮುಖಿಯಾಗಿವೆ. ಇಂತಹ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಬಹುಭಾಷಾ ಕವಿಗೋಷ್ಠಿ ಪೂರಕ. ಕವಿಗಳು ಹೊಸಲೋಕವನ್ನು ಭಾಷೆಯಲ್ಲಿ ಸೃಷ್ಟಿಸುತ್ತಾರೆ. ಆದರೆ ಭಾಷೆಯನ್ನು ಮುರಿದು ಕಟ್ಟುವ ಚೈತನ್ಯ ಕವಿಗಳಿಗೆ ಬೇಕು” ಎಂದರು. ಪದ್ಮರಾಜ್ ಆರ್. ಪೂಜಾರಿ ಮಾತನಾಡಿ “ದಸರಾ ಎನ್ನುವುದು ಕೇವಲ ಧಾರ್ಮಿಕತೆಗೆ ಸೀಮಿತವಾಗಿರದೆ ಕಲೆ, ಸಾಹಿತ್ಯದ ಹಬ್ಬವೂ ಇರಬೇಕು ಎಂಬ ದೃಷ್ಟಿಯಿಂದ ಬಹುಭಾಷಾ ಕವಿಗೋಷ್ಠಿಯನ್ನು ಕಳೆದೆರಡು ವರ್ಷದಿಂದ ಹಮ್ಮಿಕೊಳ್ಳಲಾಗುತ್ತಿದೆ” ಎಂದರು. ಆಯ್ದ ಕವನಗಳ ಕವನ ಸಂಕಲನವನ್ನು ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ…
ಪುತ್ತೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು ಮತ್ತು ಬಹುವಚನಂ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 05 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಉದ್ಘಾಟನೆಯನ್ನು ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ ಇವರು ಮಾಡಲಿದ್ದು, ಜಿ.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಬಲರಾಮ ಆಚಾರ್ಯ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಂಜಿಗುಡ್ಡೆ ಈಶ್ವರ್ ಭಟ್ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ವಿಚಾರಗೋಷ್ಠಿ 1ರಲ್ಲಿ ‘ಬನ್ನಂಜೆ ಸ್ಮರಣೆ’ ಎಂಬ ವಿಷಯದ ಬಗ್ಗೆ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಮತ್ತು ವಿಚಾರಗೋಷ್ಠಿ 2ರಲ್ಲಿ ‘ಗುರು ಬನ್ನಂಜೆ’ ಎಂಬ ವಿಷಯದ ಬಗ್ಗೆ ಪ್ರಾಧ್ಯಾಪಕರಾದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಇವರು ವಿಷಯ ಮಂಡನೆ ಮಾಡಲಿದ್ದಾರೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿಯರಿಂದ…
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ‘ಲೋಕಗೆಂದಿನ ಗಾಂಧಿಯೆರ್’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 04 ಅಕ್ಟೋಬರ್ 2025ರಂದು ಬೆಳಿಗ್ಗೆ 11-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ಣಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕುಡ್ಲದ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಡಾ. ಎನ್. ಇಸ್ಮಾಯಿಲ್ ಇವರು ಪುಸ್ತಕ ಪರಿಚಯ ಮಾಡಲಿದ್ದು, ಮಾಜಿ ಸಚಿವ ಅಭಯಚಂದ್ರ ಜೈನ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು : ಕಥಾವನ ಬೆರಗಿನ ಲೋಕದಲೊಂದು ಪಯಣ ಇದರ ವತಿಯಿಂದ ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಬರೆದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದ ಕಥೆ, ಕವಿತೆ, ನಾಟಕ, ವ್ಯಕ್ತಿ ಚಿತ್ರಣ, ಪ್ರವಾಸ ಕಥನ ಅಥವಾ ಕಾದಂಬರಿಯ ಮೂಲ ಬರಹವನ್ನು ಸಲ್ಲಿಸಬಹುದು. 30 ನವೆಂಬರ್ 2025 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ ಇ-ಮೇಲ್ [email protected] ಮೊಬೈಲ್ 98440 49489 ಸಂಖ್ಯೆಯನ್ನು ಸಂಪರ್ಕಿಸಿರಿ.
ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ವೈಯುಕ್ತ “ನಿರಂಜನ ಬದುಕು – ಬರಹ ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ದಿನಾಂಕ 25 ಸೆಪ್ಟೆಂಬರ್ 2025 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಪ್ರಭು ಅವರು ಉದ್ಘಾಟಿಸಿ ನಾಹಿತ್ಯ ಕ್ಷೇತ್ರದ ಮೂಲಕ ಸುಳ್ಯವನ್ನು ಜಗತ್ತಿಗೆ ಪರಿಚಯಿಸಿದನ್ನು ಅವರ ಮನೆಯವರಿಗೂ ನಿರಂಜನರಿಗೂ ಇದ್ದ ನಂಟನ್ನು ನೆನಪಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ. ಮಾತನಾಡಿ “ಸಾಹಿತ್ಯ ದಿಗ್ಗಜ ನಿರಂಜನರು ಸುಳ್ಯದವರು ಎನ್ನುವುದು ಸುಳ್ಯದ ಹೆಮ್ಮೆ” ಎಂದು ಕೊಂಡಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರಾದ ಅಶೋಕ ಕುಮಾರ್ ಮೂಲೆಮಜಲು ಅವರು ನಿರಂಜನರ ಬದುಕು-ಬರಹ : ನೆನವು ವಿಷಯದ ಕುರಿತು ಮಾತನಾಡಿ “ಸಮಾಜದ ಕಟು…
ಬೆಂಗಳೂರು : ವಿಜಯನಗರ ಬಿಂಬದ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ 13ನೇ ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಂದ ಅಭ್ಯಾಸ ಮಾಲಿಕೆ -2ರಲ್ಲಿ ಖ್ಯಾತ ಬರಹಗಾರ್ತಿ ಶ್ರೀಮತಿ ವೈದೇಹಿ ಬರೆದ ‘ಶಕುಂತಲೆ’ ನಾಟಕ ಪ್ರದರ್ಶನವನ್ನು ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 4-00 ಹಾಗೂ 7-00 ಗಂಟೆಗೆ ಬೆಂಗಳೂರಿನ ವಿಜಯನಗರ ಬಿಂಬದ ಸರಳಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ಸುಷ್ಮಾ ಎಸ್.ವಿ. ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9845734967, 9844017881, 9845265967 ಮತ್ತು 9844152967 ಸಂಖ್ಯೆಯನ್ನು ಸಂಪರ್ಕಿಸಿರಿ.
ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ನಾಲ್ಕನೆಯ ವರ್ಷದ ‘ಯಕ್ಷಗಾನ ಸಪ್ತೋತ್ಸವ -2025’ವನ್ನು ದಿನಾಂಕ 04ರಿಂದ 10 ಅಕ್ಟೋಬರ್ 2025ರಂದು ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ ಗಂಟೆ 5-15ಕ್ಕೆ ವಿದ್ವಾನ್ ಅಶೋಕ ಆಚಾರ್ ಮತ್ತು ತಂಡದವರಿಂದ ಭಕ್ತಿಗೀತೆ ಮತ್ತು ಸುಗಮ ಸಂಗೀತ ಪ್ರಸ್ತುತಗೊಳ್ಳಲಿದೆ. ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷರಾದ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ಎಡನೀರು ಮಠಾದೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಇವರು ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಅಜ್ಞಾತ ಕವಿ ವಿರಚಿತ ‘ಚಿತ್ರಾಕ್ಷಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 5-00 ಗಂಟೆಗೆ ಶ್ರೀಮತಿ ಸುಕನ್ಯ ಸೋಮಯಾಜಿ ಮತ್ತು ಬಳಗದವರಿಂದ ‘ಭಾವ ಗೀತೆ’ ಮತ್ತು ಕವಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವಿದ್ಯುನ್ಮತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ದಿನಾಂಕ 06 ಅಕ್ಟೋಬರ್ 2025ರಂದು ಪ್ರಾಚಾರ್ಯ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿಯನ್ನು 2025ರ ಸೆಪ್ಟೆಂಬರ್ 30ರವರೆಗೆ ದಂಡದ ಶುಲ್ಕ ರೂ.50-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು. ಸಾರ್ವಜನಿಕರ ಹಿತಾಸಕ್ತಿ ಮೇರೆಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕ 15 ಅಕ್ಟೋಬರ್ 2025ರ ಅವಧಿಯನ್ನು ವಿಸ್ತರಿಸಲಾಗಿದ್ದು, ಪರೀಕ್ಷಾರ್ಥಿಗಳು ಇದರ ಸದುಪಯೋಗವನ್ನು ಪಡೆಯಬಹುದು. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ರೂ.25-೦೦ಗಳ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು – 560018 ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣಗಳಾದ ಫೇಸ್ ಬುಕ್ : https://www.facebook.com/kasapaofficial, https://www.facebook.com/KannadaSahityaParishattu ಟ್ವಿಟರ್ :…
ಕೋಣಾಜೆ : ಮಂಗಳೂರು ವಿಶ್ವವಿದ್ಯಾಲಯ ಮಂಗಳಗಂಗೋತ್ರಿಯ ಎನ್.ಜಿ. ಪಾವಂಜೆ ಲಲಿತಕಲಾ ಪೀಠ ಇದರ ವತಿಯಿಂದ ಕರಾವಳಿ ಚಿತ್ರಕಲಾ ಚಾವಡಿ (ರಿ.) ಮಂಗಳೂರು ಇವರ ಸಹಕಾರದೊಂದಿಗೆ ‘ಕಲಾ ದರ್ಪಣ’ ಭಾವಚಿತ್ರ ರಚನೆ ಮತ್ತು ಸೃಜನಾತ್ಮಕ ಚಿತ್ರಕಲಾ ಶಿಬಿರವು ದಿನಾಂಕ 03 ಮತ್ತು 04 ಅಕ್ಟೋಬರ್ 2025ರಂದು ಮಂಗಳೂರು ವಿವಿಯ ವಿಜ್ಞಾನ ಸಂಕೀರ್ಣದ ಮುಂಭಾಗದ ಪರಿಸರದಲ್ಲಿ ನಡೆಯಲಿದೆ. ದಿನಾಂಕ 03 ಅಕ್ಟೋಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಇವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಉದ್ಯಮಿ ಪ್ರಶಾಂತ್ ಶೇಟ್, ಮಂಗಳೂರು ವಿ.ವಿ. ಕುಲಸಚಿವ ಕೆ. ರಾಜು ಮೊಗವೀರ ಇವರು ಭಾಗವಹಿಸಲಿದ್ದು, ಕರಾವಳಿ ಚಿತ್ರಕಲಾ ಚಾವಡಿಯ ಅಧ್ಯಕ್ಷರಾದ ಕೋಟಿ ಪ್ರಸಾದ್ ಆಳ್ವ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ದಿನಾಂಕ 04 ಅಕ್ಟೋಬರ್ 2025ರಂದು ಬೆಳಿಗ್ಗೆ 10-00 ಗಂಟೆಗೆ ‘ಕಲಾಸ್ವಾದನೆಯ ವಿಭಿನ್ನ ನೆಲೆಗಳು’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕನ್ನಡ ವಿಭಾಗದ ಸೆಮಿನಾರ್ ಹಾಲ್ನಲ್ಲಿ ನಡೆಯಲಿದ್ದು, ಹಿರಿಯ ಕಲಾವಿದ ಸಕು…