Author: roovari

ಎಸ್. ವಿ. ಪರಮೇಶ್ವರ ಭಟ್ಟ ಇವರ ಪೂರ್ಣ ಹೆಸರು ಸದಾಶಿವ ರಾವ್ ವಿದ್ಯಾರಣ್ಯಪುರ ಪರಮೇಶ್ವರ ಭಟ್ಟ. ಶಿವಮೊಗ್ಗ ಜಿಲ್ಲೆಯ ಮಾಳೂರಿನಲ್ಲಿ 8 ಫೆಬ್ರವರಿ 1914ರಂದು ಜನಿಸಿದ ಇವರ ತಂದೆ ಸದಾಶಿವ ರಾವ್ ಹಾಗೂ ತಾಯಿ ಲಕ್ಷ್ಮಮ್ಮ. ಎಳವೆಯಲ್ಲಿಯೇ ನಾಟಕ, ಯಕ್ಷಗಾನ ಮತ್ತು ಓದುವುದರತ್ತ ಪರಮೇಶ್ವರರ ಮನಸ್ಸು ವಾಲಿತ್ತು. ಈ ಆಸಕ್ತಿಗೆ ನೀರುಣಿಸಿ ಬೆಳೆಸಿದವರು ತಂದೆ ತಾಯಿ. ಉಪಾಧ್ಯಾಯರಾಗಿದ್ದ ಸದಾಶಿವರಾಯರು ಪರಮೇಶ್ವರರಿಗೆ ಓದಲು ಹಲವಾರು ಪುಸ್ತಕಗಳನ್ನು ತಂದು ಕೊಡುತ್ತಿದ್ದರು ಮತ್ತು ಯಕ್ಷಗಾನ, ನಾಟಕಗಳಲ್ಲಿ ಸ್ವತಃ ಆಸಕ್ತಿ ಮತ್ತು ಹವ್ಯಾಸವಿದ್ದ ಸದಾಶಿವ ಭಟ್ಟರು ಮಗ ಪರಮೇಶ್ವರ ಭಟ್ಟರನ್ನೂ ಇಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಹೋಗುತ್ತಿದ್ದರು. ಮುಂದೆ ಪರಮೇಶ್ವರ ಭಟ್ಟರಿಗೆ ವಿವಿಧ ವೇಷಗಳ ಬಣ್ಣವನ್ನು ಮುಖಕ್ಕೆ ಹಚ್ಚಿ, ಗೆಜ್ಜೆ ಕಟ್ಟಿ, ರಂಗಕ್ಕೇರಿಸಿ, ಕುಣಿಸಿ ಸಂತೋಷಪಡುತ್ತಿದ್ದರು ತಂದೆ ಸದಾಶಿವ ಭಟ್ಟರು. ಸದಾಶಿವ ಭಟ್ಟರದು ಕಲಾ ಶ್ರೀಮಂತ ಕುಟುಂಬ. ಈ ಕುಟುಂಬದ ಪ್ರತಿಯೊಬ್ಬ ಸದಸ್ಯನೂ ಓಂದಿಲ್ಲೊಂದು ಕಲೆಗೆ ತಮ್ಮನ್ನು ಒಡ್ಡಿಕೊಂಡವರು. ಎಸ್. ವಿ. ಪಿ. ಅವರ ಸರ್ವತೋಮುಖ ಅಭಿವೃದ್ಧಿಗೆ ತಂದೆ…

Read More

ಇವರ ಹೆಸರು ಗಣೇಶ್ ನಿಲವಾಗಿಲು. ಪ್ರಸ್ತುತ ಕೊಡಗು ಜಿಲ್ಲೆ ವಿರಾಜಪೇಟೆಯ ಉಪ ಖಜಾನೆಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಮೂಲತಃ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಿಲವಾಗಿಲು ಗ್ರಾಮದ ಪಟೇಲ ಮನೆತನದ ಕೃಷ್ಣಗೌಡ ಹಾಗೂ ಯಶೋದಮ್ಮ ದಂಪತಿಯ ಪುತ್ರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹುಟ್ಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಲವಾಗಿಲು ಗ್ರಾಮದಲ್ಲಿ ಪಡೆದುಕೊಂಡಿದ್ದಾರೆ. ಬಳಿಕ ಹುಣಸೂರಿನ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವ್ಯಾಸಂಗವನ್ನು ಮಾಡಿದ್ದಾರೆ. ಹುಣಸೂರಿನ ಡಿ. ದೇವರಾಜ ಅರಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ. ಪದವಿ ವ್ಯಾಸಂಗದ 2004ನೇ ಸಾಲಿನ ಅಂತಿಮ ಬಿ.ಎ. ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ್ದಾರೆ. ತದಾ ನಂತರ ಚಾಮರಾಜನಗರದ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದಲ್ಲಿ 2005ನೇ ಸಾಲಿನ ಬಿ.ಇಡಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಹುಣಸೂರಿನ ಶಾಸ್ತ್ರಿ ಮತ್ತು ಟ್ಯಾಲೆಂಟ್ ಶಾಲೆಗಳಲ್ಲಿ ಶಿಕ್ಷಕನಾಗಿ ವೃತ್ತಿ ಜೀವನ ಆರಂಭಿಸಿದ್ದಾರೆ. ಎರಡು ವರ್ಷಗಳ ಬಳಿಕ 2007ರಲ್ಲಿ ಪೊಲೀಸ್ ಇಲಾಖೆಗೆ ಸೇರಿ ಹತ್ತು ವರ್ಷಗಳ…

Read More

ಬೆಂಗಳೂರು : ಸಂಚಾರಿ ಥಿಯೇಟರ್ 20ನೇ ವರ್ಷದ ರಂಗಸಂಭ್ರಮದ ಸಂಚಾರಿ ಸಡಗರದಲ್ಲಿ ‘ಶ್ರೀದೇವಿ ಮಹಾತ್ಮೆ’ ನಾಟಕ ಪ್ರದರ್ಶನವು ದಿನಾಂಕ 09 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಕಲಾಗ್ರಾಮದಲ್ಲಿ ಪ್ರಸ್ತುತಗೊಳ್ಳಲಿದೆ. ವಸುಧೇಂದ್ರ ರಚಿಸಿರುವ ಈ ನಾಟಕಕ್ಕೆ ಶಶಿಧರ ಅಡಪ ರಂಗಸಜ್ಜಿಕೆ, ವಿನಯ್ ಚಂದ್ರ : ಬೆಳಕು, ಗಜಾನನ ಟಿ. ನಾಯ್ಕ ಸಂಗೀತ ನೀಡಿದ್ದು, ಮಂಗಳಾ ಎನ್. ಇವರ ರಂಗರೂಪ ಮತ್ತು ನಿರ್ದೇಶನದಲ್ಲಿ ಕಲಾವಿದರಾದ ಪ್ರಸನ್ನ ಶೆಟ್ಟಿ, ಸತ್ಯಶ್ರೀ ಮತ್ತು ನಾಗರಾಜ್ ವಿ. ಇವರುಗಳು ಅಭಿನಯಿಸಲಿದ್ದಾರೆ. ಶ್ರೀದೇವಿ ಮಹಾತ್ಮೆ ವಸುಧೇಂದ್ರ ಇವರ ಸಣ್ಣ ಕತೆಯೊಂದನ್ನು ಆಧರಿಸಿ ಮಾಡಿದ ರಂಗರೂಪ. ಅಪಾರ್ಟ್ಮೆಂಟ್ ಒಂದರಲ್ಲಿ ನಡೆಯುವ ಈ ನಾಟಕ ಬೆಂಗಳೂರಿನ ಓಟದ ಬದುಕಿನ, ನಗರೀಕರಣಗೊಂಡ ಬದುಕಿನಲ್ಲಿನ ಅಚ್ಚರಿಗಳು, ಕಳೆದುಹೋಗಿರುವ ಸೂಕ್ಷ್ಮಗಳು, ಬದಲಾದ ಗ್ರಹಿಕೆಗಳು, ಸಹಜವೆನಿಸಿಬಿಡುವ ಅಸಹಜ ನಂಬಿಕೆಗಳು, ಕನಸುಗಳು, ಬದಲಾದ ಬದುಕಿನ ಗತಿಯ ಬಗ್ಗೆ ಮಾತಾಡುತ್ತದೆ. ಬದುಕನ್ನು ನೋಡುವ ಭಿನ್ನ ಬಗೆಗಳು, ವ್ಯಕ್ತವಾಗುತ್ತವೆ. ಸ್ವಸ್ಥ ಬದುಕಿನ ಮೂಲದ್ರವ್ಯಕ್ಕಾಗಿ ನಡೆಸುವ ಹೋರಾಟವೂ ಕಾಣಿಸುತ್ತದೆ. ಇದೊಂದು ನಗರ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಬೆಂಗಳೂರು ಕ.ಸಾ.ಪ. ವತಿಯಿಂದ ಜಿ.ಎಸ್. ಶಿವರುದ್ರಪ್ಪರವರ 99ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 07 ಫೆಬ್ರವರಿ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಡೋಜ ಡಾ. ಮಹೇಶ ಜೋಶಿಯವರು ಮಾತನಾಡಿ “ಜಿ.ಎಸ್.ಎಸ್. ತಮ್ಮ ಕವಿತೆಗಳಲ್ಲಿ ಎರಡು ಜಗತ್ತುಗಳಿಗೆ ಸ್ಪಂದಿಸಿದ್ದನ್ನು ಕಾಣಬಹುದು. ಒಂದು ಜೀವಸಂಮೃದ್ಧ ಪ್ರಕೃತಿ; ಇನ್ನೊಂದು ಮಾನವ ಕೇಂದ್ರಿತ ಸಮಾಜ. ಬೆರಗು ಮತ್ತು ಹುಡಕಾಟ ಅವರ ಕವಿತೆಗಳ ಪ್ರಧಾನ ಭಾವಗಳಾಗಿದ್ದವು. ಪ್ರಕೃತಿಯ ನಿಯತ ಲಯಗಳು ಕವಿಗೆ ಸದಾ ಆಕರ್ಷಣೆಯನ್ನು ಉಂಟುಮಾಡಿದ್ದವು. ಕವಿಗಳ ಕುರಿತ ‘ಮಧುರ ಮಧುರವೀ ಮಂಜುಳಗಾನ’ ಕಾರ್ಯಕ್ರಮವನ್ನು ಏರ್ಪಡಿಸಿದಾಗ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಷ್ಟೇ ಎತ್ತರಕ್ಕೆ ಏರಿದರೂ ತಮ್ಮ ಬಡತನದ ದಿನಗಳನ್ನು ಅವರು ಮರೆತಿರಲಿಲ್ಲ. ಹೀಗಾಗಿ ಅವರಿಗೆ ಬದುಕಿನಲ್ಲಿ ಯಾವುದಕ್ಕೆ ಮಹತ್ವ ನೀಡಬೇಕು ಎನ್ನುವುದು ಖಚಿತವಾಗಿ ಗೊತ್ತಿತ್ತು. ಅವರ ‘ಸ್ತ್ರೀ’ ಕವಿತೆ ನನ್ನ ಮೇಲೆ ಅಪಾರ ಪ್ರಭಾವವನ್ನು ಬೀರಿದಂತಹದು. ಈ ಪ್ರೇರಣೆಯಿಂದಲೇ ನಾನು ಎಲ್ಲಾ ಸ್ತ್ರೀಯರನ್ನು ಗೌರವಿಸುತ್ತೇನೆ. ‘ಕಾಣದ…

Read More

ಒಡಿಯೂರು : ಶ್ರೀಕ್ಷೇತ್ರ ಒಡಿಯೂರಿನಲ್ಲಿ ದಿನಾಂಕ 06 ಫೆಬ್ರವರಿ 2025ರಂದು ಜರಗಿದ 25ನೇ ವರ್ಷದ ಬೆಳ್ಳಿಹಬ್ಬದ ತುಳು ಸಾಹಿತ್ಯ ಸಮ್ಮೇಳನದಲ್ಲಿ ಪ್ರಸಿದ್ಧ ಕವಿ-ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರ ‘ಮಾಯಿಪ್ಪಾಡಿದ ವೀರಪುರುಷೆ ಪುಳ್ಕೂರುದ ಬಾಚೆ’ ಎಂಬ ಐತಿಹಾಸಿಕ ತುಳು ಕೃತಿಯನ್ನು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು. “ಹೆಚ್ಚು ಹೆಚ್ಚು ತುಳು ಕೃತಿಗಳು ಪ್ರಕಟವಾದಷ್ಟೂ ತುಳು ಭಾಷೆ – ಸಾಹಿತ್ಯ ಶ್ರೀಮಂತವಾಗುತ್ತದೆ” ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ನುಡಿದರು. ಸುಮಾರು ಮುನ್ನೂರು ವರ್ಷಗಳ ಹಿಂದೆ ಕುಂಬಳೆ ರಾಜ್ಯದ ಮಾಯಿಪ್ಪಾಡಿ ಸಂಸ್ಥಾನದಲ್ಲಿ ಜಟ್ಟಿಯಾಗಿದ್ದ, ಸೇನಾ ದಂಡನಾಯಕನೂ ಆಗಿದ್ದ ವೀರಪುರುಷ ಪುಳ್ಕೂರು ಬಾಚೆ ತುಳುನಾಡಿನ ಓರ್ವ ಕಟ್ಟಾಳು ಆಗಿದ್ದ. ಕಲ್ಲಾಟದ ಬಾಚೆ ಎಂದೇ ಪ್ರಸಿದ್ಧನಾಗಿದ್ದ ಈ ಐತಿಹಾಸಿಕ ವ್ಯಕ್ತಿ ದೊಡ್ಡ ದೊಡ್ಡ ಕಲ್ಲುಬಂಡೆಗಳನ್ನು ಹೊತ್ತು ಸಾಗಿಸುವ ಹೊಂತಗಾರಿಯೂ ಆಗಿದ್ದ. ಆತನ ಬದುಕಿನ ಬಗೆಗಿನ ಸ್ವಾರಸ್ಯಕರ ಘಟನೆಗಳನ್ನು ಐತಿಹ್ಯಗಳ ಆಧಾರದಿಂದ ಕಲೆಹಾಕಿ ಡಾ. ಪೆರ್ಲರು ಈ ಕೃತಿ ರಚನೆ ಮಾಡಿದ್ದಾರೆ. ಜೊತೆಗೆ ಸುಮಾರು ಸಾವಿರದ ಐನೂರು…

Read More

ಬೆಂಗಳೂರು : ಆಶಾ ರಘು ಇವರು ಆರಂಭಿಸಿರುವ ಪುಸ್ತಕ ಮಳಿಗೆ ಉಪಾಸನ ಬುಕ್ಸ್ ಇದರ ಆರಂಭೋತ್ಸವವು ದಿನಾಂಕ 07 ಫೆಬ್ರವರಿ 2025ರಂದು ಬೆಂಗಳೂರಿನ ರಾಜಾಜಿ ನಗರದಲ್ಲಿ ಉದ್ಘಾಟನೆಗೊಂಡಿದ್ದು, ಸಾಹಿತ್ಯದ, ಧಾರ್ಮಿಕ, ಮಕ್ಕಳ ಮತ್ತು ಶೈಕ್ಷಣಿಕ ಪುಸ್ತಕಗಳು ಲಭ್ಯವಿರುತ್ತದೆ. ಇದೇ ಸಂದರ್ಭದಲ್ಲಿ ಆಶಾ ರಘು ಇವರ ‘ವಕ್ಷ ಸ್ಥಲ’ ಕಾದಂಬರಿ ಮತ್ತು ‘ಕೆಂಪು ದಾಸವಾಳ’ ಕಥಾ ಸಂಕಲನ ಎರಡು ಕೃತಿಗಳು ಲೋಕಾರ್ಪಣೆಗೊಂಡವು. ಉಪಾಸನ ಬುಕ್ಸ್ ನ ಆರಂಭೋತ್ಸವದಲ್ಲಿ ಪಾಲ್ಗೊಂಡ ನಟ, ರಂಗ ನಿರ್ದೇಶಕ ಶ್ರೀನಿವಾಸ ಪ್ರಭುರವರು ಮಾತನಾಡಿ “ಪುಸ್ತಕ ಸಂಸ್ಕೃತಿ ಎಷ್ಟು ವ್ಯಾಪಕವಾಗಿ ಬೆಳೆಯುವುದೋ ಅಷ್ಟು ಮಾನವ ಸಂಸ್ಕೃತಿ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಆಶಾ ರಘುರವರು ಒಂದು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ” ಎಂದು ಅಭಿಪ್ರಾಯಪಟ್ಟರು. ಆಶಾ ರಘುರವರ ಕೃತಿ ಲೋಕಾರ್ಪಣೆಗೊಳಿಸಿದ ಶ್ರೀಮತಿ ರಂಜಿನಿ ಪ್ರಭು ಮಾತನಾಡಿ “ವಾಸ್ತವ-ಕಲ್ಪನೆ-ಅತಿಂದ್ರೀಯ-ದೈವೀಕ ಎಲ್ಲ ನೆಲೆಗಳ ಚಿತ್ರಣವನ್ನೂ ಏಕತ್ರಗೊಳಿಸಿ ಪ್ರತಿಮಾತ್ಮಕವಾಗಿ ಕಟ್ಟಿಕೊಡುವಲ್ಲಿ ಆಶಾ ರಘು ಇವರು ಯಶಸ್ವಿಯಾಗಿದ್ದಾರೆ. ಸ್ವಾರಸ್ಯಕರವಾಗಿ ಕಥಾನಕವನ್ನು ಕಟ್ಟಿಕೊಡುವುದರಲ್ಲಿ, ಭಾಷೆಯನ್ನು ಸಮರ್ಥವಾದ ವಾಹಕವಾಗಿಸುವಲ್ಲಿ ಆಶಾರವರು ಸಿದ್ಧಹಸ್ತರು”…

Read More

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಯಕ್ಷ ರಂಗಾಯಣ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಮೈಸೂರು ರಂಗಾಯಣ ಪ್ರಸ್ತುತ ಪಡಿಸುವ ‘ಮೈ ಫ್ಯಾಮಿಲಿ’ ತಿಂಗಳ ನಾಟಕ ಪ್ರದರ್ಶನವನ್ನು ದಿನಾಂಕ 11 ಫೆಬ್ರವರಿ 2025ರಂದು ಸಂಜೆ 7-00 ಗಂಟೆಗೆ ಕಾರ್ಕಳ ಕೋಟಿ ಚೆನ್ನಯ ಥೀಂ ಪಾರ್ಕ್, ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಸತೀಶ್ ತಿಪಟೂರು ರಚಿಸಿರುವ ಈ ಕನ್ನಡ ನಾಟಕವನ್ನು ಗಣೇಶ್ ಮಂದಾರ್ತಿ ಸಂಗೀತ, ವಿನ್ಯಾಸ ಮತ್ತು ನಿರ್ದೇಶನ ನೀಡಿರುತ್ತಾರೆ.

Read More

ಒಡಿಯೂರು : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ರಥೋತ್ಸವ ಹಾಗೂ ತುಳುನಾಡು ಜಾತ್ರೆಯ ಪ್ರಯುಕ್ತ ‘ತುಳು ಸಾಹಿತ್ಯ ಸಮ್ಮೇಳನ’ವು ದಿನಾಂಕ 06 ಫೆಬ್ರವರಿ 2025ರಂದು ಶ್ರೀ ಕ್ಷೇತ್ರದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ “ತುಳು ಭಾಷೆ ಮತ್ತು ತುಳು ಸಂಸ್ಕೃತಿ ವಿಶ್ವ ಮಾನ್ಯವಾಗಿದೆ ತುಳುವರಿಗೆ ಎಲ್ಲೆಡೆಯೂ ಗೌರವವಿದೆ ಅದನ್ನ ನಾವು ಉಳಿಸಿಕೊಳ್ಳಬೇಕು. ತುಳುವರು ತುಳು ಭಾಷೆಯನ್ನು ಮರೆಯಬಾರದು. ಪ್ರೀತಿ ವಿಶ್ವಾಸಕ್ಕೆ ಇನ್ನೊಂದು ಹೆಸರೇ ತುಳುವರು ಇಂದು ತುಳುವರು ಬೇರೆ ಬೇರೆ ಕ್ಷೇತ್ರಗಳಲ್ಲಿ ಹಂಚಿಹೋಗಿದ್ದು, ತುಳು ಭಾಷೆಯ ಮಾನ್ಯತೆಗೆ ಒಗ್ಗಟ್ಟಿನ ಹೋರಾಟ ನಡೆಸಬೇಕು” ಎಂದರು. ಸಮ್ಮೇಳನದ ಅಧ್ಯಕ್ಷತೆ ವಹಿಸಿದ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ಯುವಕರು ಕೃಷಿ ತ್ಯಜಿಸಿ ಪೇಟೆ ಕಡೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ವಿಚಾರ. ಧಾರ್ಮಿಕ, ಸಾಹಿತ್ಯ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸಲಾಗುತ್ತದೆ. ನಾಲ್ಕು ಕಾಲ ಬದುಕುವಂತ,…

Read More

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರ ಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ರೂ.35,000/-, ರೂ.25,000/- ಹಾಗೂ ರೂ.15,000/- ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು. ಸ್ಪರ್ಧೆಯ ಷರತ್ತುಗಳು: * ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ : 01-01-2024ರಿಂದ 31-01-2025ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು. * ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. * ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರ ಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ…

Read More

ಮಂಗಳೂರು : ಹಿರಿಯ ಯಕ್ಷಗಾನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ. ಬೊಂಡಾಲ ಜನಾರ್ದನ ಶೆಟ್ಟಿ ಹಾಗೂ ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ‌. ಬೊಂಡಾಲ ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ನೀಡಲಾಗುವ ‘ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ಕಲಾವಿದ, ಯಕ್ಷಗಾನ ಹಾಸ್ಯಗಾರ ರವಿಶಂಕರ ವಳಕುಂಜ ಇವರು ಆಯ್ಕೆಯಾಗಿದ್ದಾರೆ. ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆ ಸಮಿತಿ 2024-25ನೇ ಸಾಲಿಗೆ ವಳಕುಂಜರವರ ಹೆಸರನ್ನು ಅಂತಿಮಗೊಳಿಸಿದೆ. ಪ್ರಶಸ್ತಿಯು ರೂ.10,000/- ನಗದು, ಶಾಲು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ರವಿಶಂಕರ್ ವಳಕುಂಜ : ಕಾಸರಗೋಡು ಬದಿಯಡ್ಕದ ನಿವೃತ್ತ ಶಿಕ್ಷಕ ಮತ್ತು ಅರ್ಥಧಾರಿ ದಿ. ಸುಬ್ರಹ್ಮಣ್ಯ ಭಟ್ ಮತ್ತು ಲಕ್ಷ್ಮೀ…

Read More