Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಜಂಗಮ ಕಲೆಕ್ಟಿವ್ ಬೆಂಗಳೂರು ಪ್ರಸ್ತುತ ಪಡಿಸುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟಿದ ದಿನದ ಆಚರಣೆಯನ್ನು ದಿನಾಂಕ 13 ಏಪ್ರಿಲ್ 2025ರಂದು ಬೆಂಗಳೂರಿನ ಸ್ಪೂರ್ತಿಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10-00 ಗಂಟೆಗೆ ‘ಬ್ಲೂಮಿಂಗ್ ಬಾಬಾ ಸಾಹೇಬ್’ ಕಲೆಯ ಮೂಲಕ ಮಕ್ಕಳಿಗೆ ಅಂಬೇಡ್ಕರ್ ಜಗತ್ತಿನ ಪರಿಚಯ, 11-00 ಗಂಟೆಗೆ ‘ವೈಟಿಂಗ್ ಫಾರ್ ಅ ವೀಸಾ’ ಅಂಬೇಡ್ಕರ್ ಅವರ ಕೃತಿಯ ಓದು ಮತ್ತು ಚರ್ಚೆ, 2-30 ಗಂಟೆಗೆ ‘ನಾಟಕ ಮತ್ತು ಹಾಡಿನ ಕಮ್ಮಟ’, ಅಂಬೇಡ್ಕರ್ ಫೋಟೋ ಪ್ರದರ್ಶನ ಮತ್ತು 7-00 ಗಂಟೆಗೆ ಜಂಗಮ ಕಲೆಕ್ಟಿವ್ ತಂಡದವರಿಂದ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ನಾಟಕ ಪ್ರದರ್ಶನ ನಡೆಯಲಿದೆ.
ಉಡುಪಿ : ಹಿರಿಯ ಸಾಹಿತಿ, ರಂಗಕರ್ಮಿ ಹಾಗೂ ವಿಮರ್ಶಕಿ ಶ್ರೀಮತಿ ವೈ.ಕೆ. ಸಂಧ್ಯಾ ಶರ್ಮ ಇವರು 2025ನೇ ಸಾಲಿನ ಶ್ರೀಯುತ ಈಶ್ವರಯ್ಯ ಅನಂತಪುರ ಇವರ ಹೆಸರಿನಲ್ಲಿ ಕೊಡಲ್ಪಡುವ ‘ಕಲಾ ಪ್ರವೀಣ’ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ‘ಕಲಾವಿಹಾರಿ’ ಶ್ರೀಯುತ ಎ. ಈಶ್ವರಯ್ಯ ಅವರ ಹೆಸರನಲ್ಲಿ ಅವರ ಕುಟುಂಬವು ರಾಗ ಧನ ಉಡುಪಿ ಸಂಸ್ಥೆಯ ಮೂಲಕ ವರ್ಷಪ್ರತಿ ಕೊಡಮಾಡುವ ‘ಕಲಾ ಪ್ರವೀಣ’ ಪ್ರಶಸ್ತಿಗೆ ಈ ಬಾರಿ ಶ್ರೀಮತಿ ವೈ.ಕೆ. ಸಂಧ್ಯಾ ಶರ್ಮ ಇವರು ಆಯ್ಕೆಯಾಗಿರುತ್ತಾರೆ ಎಂದು ಶ್ರೀ ಈಶ್ವರಯ್ಯ ಅನಂತಪುರ ಅವರ ಸಹೋದರ ಶ್ರೀಕೃಷ್ಣಯ್ಯ ಅನಂತಪುರ, ಮಗ ಶೈಲೇಂದ್ರ ಅನಂತಪುರ ಮತ್ತು ಕುಟುಂಬದವರು ತಿಳಿಸಿರುತ್ತಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿರುತ್ತಾರೆ. ಶ್ರೀಮತಿ ವೈ.ಕೆ. ಸಂಧ್ಯಾ ಶರ್ಮ : ಕನ್ನಡ ಸಾಹಿತ್ಯ ಲೋಕದ ಪ್ರಖ್ಯಾತ ಲೇಖಕಿ, ಕಾದಂಬರಿಕಾರ್ತಿ, ಅಂಕಣ ಬರಹಗಾರ್ತಿ, ನೃತ್ಯ ನಾಟಕಗಳ ಖ್ಯಾತ ವಿಮರ್ಶಕಿಯೂ ಕೂಡ. ಮಾತ್ರವಲ್ಲ ಕೂಚಿಪುಡಿ ನೃತ್ಯ ಕಲಾವಿದೆ ಮತ್ತು ಸಂಗೀತ ವಿಮರ್ಶೆಯಲ್ಲೂ ಪಳಗಿದವರು. ಕನ್ನಡ ಎಂ.ಎ.ಯಲ್ಲಿ ಡಿಸ್ಟಿಂಕ್ಷನ್…
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಇದರ ವತಿಯಿಂದ ಡಾ. ಸುನೀತಾ ಎಂ. ಶೆಟ್ಟಿ ದತ್ತಿನಿಧಿ ಪ್ರಾಯೋಜಿತ ‘ತೌಳವ ಸಿರಿ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 12 ಏಪ್ರಿಲ್ 2025ರಂದು ಅಪರಾಹ್ನ 2-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಅಶೋಕ ನಗರ ಕಚೇರಿ ಬಳಿಯಿರುವ ‘ಸಾಹಿತ್ಯ ಸದನ’ದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕ.ಲೇ.ವಾ. ಸಂಘ ಇವರ ಅಧ್ಯಕ್ಷರಾದ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ ಇವರು ವಹಿಸಲಿದ್ದು, ಲೇಖಕಿ ಪತ್ರಕರ್ತೆ ಶ್ರೀಮತಿ ಜಯಂತಿ ಎಸ್. ಬಂಗೇರ ಇವರಿಗೆ ‘ತೌಳವ ಸಿರಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಉಡುಪಿ : ಭಾವನಾ ಪೌಂಡೇಶನ್ (ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದಲ್ಲಿ ಸಂಯೋಜಿಸುತ್ತಿರುವ ‘ಬಾಲ ಲೀಲಾ’ ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ದಿನಾಂಕ 10 ಏಪ್ರಿಲ್ 2025ರಂದು ಉದ್ಘಾಟನೆಗೊಂಡಿತು. ಈ ಶಿಬಿರವನ್ನು ಉದ್ಘಾಟನೆ ಮಾಡಿದ ಸಂಗೀತ ಸಂಯೋಜಕರಾದ ಅರುಣ್ ಹಾವಂಜೆ ಮಾತನಾಡಿ “ನಮ್ಮೂರಿನಲ್ಲಿ ಭಾವನಾ ಫೌಂಡೇಶನ್ ಸಂಘಟಿಸುತ್ತಿರುವ ಬೇಸಿಗೆ ಶಿಬಿರವು ಬಹು ಮಹತ್ವಪೂರ್ಣವಾದುದು ಮತ್ತು ಇಂದಿನ ಆಧುನಿಕ ಜೀವನದ ನಡುವೆ ಸಾಂಪ್ರದಾಯಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಕಲೆ, ಅಭಿನಯ, ಸಂಗೀತ ಎಲ್ಲವನ್ನೂ ಸಮೀಕರಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ” ಎಂಬುದಾಗಿ ಅಭಿಪ್ರಾಯವಿತ್ತರು. ಭಾವನಾ ಫೌಂಡೇಶನ್ನ ಸ್ಥಾಪಕಾಧ್ಯಕ್ಷರಾದ ಯಕ್ಷಗುರು ಹಾವಂಜೆ ಮಂಜುನಾಥ ರಾವ್ ಹಾಗೂ ಶಿಬಿರ ಸಂಯೋಜಕರಾದ ಡಾ. ಜನಾರ್ದನ ಹಾವಂಜೆ, ವಿಶುರಾವ್ ಹಾವಂಜೆ ಹಾಗೂ ವಿದುಷಿ ಅಕ್ಷತಾ ವಿಶು ರಾವ್ ಉಪಸ್ಥಿತರಿದ್ದರು. ಈ ಬೇಸಿಗೆ ಶಿಬಿರವು ನಾಲ್ಕು ದಿನಗಳ ಕಾಲ ನಡೆಯಲಿದ್ದು, ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುವ ಹಾಗೂ ಕಸವನ್ನು ರಸವಾಗಿಸುವ ಉದ್ದೇಶದೊಂದಿಗೆ ರೂಪಿಸಲಾಗಿದೆ.…
ಬ್ರಹ್ಮಾವರ : ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ (ರಿ.) ಇದರ ‘ನಲ್ವತ್ತರ ನಲಿವು -10’ ಸರಣಿಯ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಲಲಿತ ಕಲಾಕೇಂದ್ರ ಬ್ರಹ್ಮಾವರ ಸಂಸ್ಥೆಯ ಆಶ್ರಯದಲ್ಲಿ ‘ನೃತ್ಯ ಕೌಸ್ತುಭ ಹಾಗೂ ನೃತ್ಯ ರೂಪಕ’ ಕಾರ್ಯಕ್ರಮವನ್ನು ದಿನಾಂಕ 13 ಏಪ್ರಿಲ್ 2025ರಂದು ಸಂಜೆ 7-00 ಗಂಟೆಗೆ ಬ್ರಹ್ಮಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು : ಪರಿವರ್ತನ ರಂಗ ಸಮಾಜ ಹಾಗೂ ಸಮುದಾಯ ಮೈಸೂರು ಸಂಸ್ಥೆಗಳ ಸಂಯಕ್ತಾಶ್ರಯದಲ್ಲಿ ನಮನ ಕಲಾವೇದಿಕೆ ಕೃಷ್ಣಮೂರ್ತಿಪುರಂ ಮೈಸೂರು ಇವರ ಸಹಕಾರದೊಂದಿಗೆ ಸಫ್ದರ್ ಹಶ್ಮಿ ನೆನಪಿನಲ್ಲಿ ಆಯೋಜಿಸುವ ‘ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬೀದಿ ನಾಟಕಗಳು’ ವಿಷಯದ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮವು ದಿನಾಂಕ 12 ಏಪ್ರಿಲ್ 2025ರಂದು ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾಮಂಟಪದಲ್ಲಿ ನಡೆಯಲಿದೆ. ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಡಾ. ಮಹದೇವ್, ಜನಾರ್ಧನ (ಜೆನ್ನಿ), ಶಶಿಧರ್ ಭಾರಿಘಾಟ್, ಪ್ರೊ. ಕೆ. ಪಿ. ವಾಸುದೇವನ್ ಹಾಗೂ ಪ್ರೊ. ಎಸ್. ಆರ್. ರಮೇಶ್ ಭಾಗವಹಿಸಲಿದ್ದಾರೆ.
ಉಡುಪಿ : ಭೂಮಿಕಾ (ರಿ.) ಹಾರಾಡಿ, ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಮತ್ತು ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ‘ಪಂಚದಿನ ನಾಟಕೋತ್ಸವ’ ಬಣ್ಣ -11 ದಿನಾಂಕ 13 ಏಪ್ರಿಲ್ 2025ರಂದು ಸಂಜೆ ಗಂಟೆ 6-30ಕ್ಕೆ ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ಮಕ್ಕಳ ಮಂಟಪದಲ್ಲಿ ಆಯೋಜಿಸಲಾಗಿದೆ. ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿಗಳಾದ ಪ್ರೊ. ಹಿ. ಚಿ. ಬೋರಲಿಂಗಯ್ಯ ಇವರಿಗೆ ‘ಜಾನಪದ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ವಿದ್ದು ಉಚ್ಚಿಲ್ ಇವರ ನಿರ್ದೇಶನದಲ್ಲಿ ಸುಮನಸಾ ಕೊಡವೂರು ತಂಡದವರಿಂದ ‘ಈದಿ’ ತುಳು ನಾಟಕಗಳು ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ರಂಗಚಂದಿರ (ರಿ) ಮತ್ತು ರಂಗ ನಾಯಕ ಟ್ರಸ್ಟ್ ಆಯೋಜಿಸುವ ‘ಬೆಳಕಬಳ್ಳಿ ಅ.ನ. ರಮೇಶ್ ನೆನಪು’ ಕಾರ್ಯಕ್ರಮವು ದಿನಾಂಕ 15 ಏಪ್ರಿಲ್ 2025ರಂದು ಸಂಜೆ 5-00 ಗಂಟೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ನಾಟಕ ಅಕಾಡೆಮಿ ಇದರ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜ ಮೂರ್ತಿ ಇವರು ಅಧ್ಯಕ್ಷತೆ ವಹಿಸಲಿದ್ದು, ಶ್ರೀನಿವಾಸ ಜಿ. ಕಪ್ಪಣ್ಣ, ಸೆಂಟರ್ ಸ್ಟೇಜ್ ಗಂಗಾಧರ್, ಶಶಿಧರ ಅಡಪ, ಎನ್.ಎಸ್. ಚಿತ್ರಶೇಖರ್, ಚಂದ್ರಶೇಖರ್ ಮತ್ತು ರಾಧಾಕೃಷ್ಣ ಹೆಗಡೆ ಇವರಿಂದ ಒಡನಾಟದ ಮಾತುಗಳು, ಜೆ. ಲೋಕೇಶ್, ಡಾ. ನಾಗರತ್ನಮ್ಮ ಮರಿಯಮ್ಮನಹಳ್ಳಿ. ಜಿ.ಎನ್. ಮೋಹನ್, ಡಾ. ಟಿ.ಎಸ್. ವಿವೇಕಾನಂದ ಮತ್ತು ಜಯಶ್ರೀ ಕಂಬಾರ ಇವರುಗಳಿಗೆ ರಂಗ ಗೌರವ ಹಾಗೂ ಬೆಳಕು ವಿನ್ಯಾಸಕರಾದ ಟಿ.ಎಂ. ನಾಗರಾಜು ಮತ್ತು ಮಂಜುನಾರಾಯಣ ಇವರಿಗೆ ಗೌರವ ಸನ್ಮಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸ್ವರಾಮೃತ ಸಂಗೀತ ಶಾಲೆಯ ಮಕ್ಕಳಿಂದ ಗೀತೆಗಾಯನ, ಸಂಚಯ ತಂಡದಿಂದ ರಂಗಗೀತೆಗಳ ಪ್ರಸ್ತುತಿ, ಕುವೆಂಪುರವರ ‘ಜಲಗಾರ’ ನಾಟಕದ…
ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ಯಕ್ಷ ವಸುಂದರ’ ಕಾರ್ಯಕ್ರಮವನ್ನು ದಿನಾಂಕ 12 ಏಪ್ರಿಲ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಗುರುಪುರದಲ್ಲಿರುವ ಮಾಣಿಬೆಟ್ಟು ಗುತ್ತು ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಮಾಜಿ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆಯಲ್ಲಿ ಗೋಳಿದಡಿ ಗುತ್ತು ಗಡಿಕಾರರಾದ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. 11-00 ಗಂಟೆಗೆ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ‘ತೆಂಕುತಿಟ್ಟಿ ಯಕ್ಷಗಾನದ ಸ್ಥಿತ್ಯಂತರಗಳು’ ಎಂಬ ವಿಷಯದ ಬಗ್ಗೆ ಹಿರಿಯ ಯಕ್ಷಗಾನ ಕಲಾವಿದರಾದ ಡಾ. ತಾರಾನಾಥ ವರ್ಕಾಡಿ ಇವರು ಪ್ರಸ್ತಾವನೆ ಮಾಡಲಿದ್ದು, ‘ಭಾಗವತಿಕೆ’ ಬಗ್ಗೆ ಉಪನ್ಯಾಸಕ ಸುನೀಲ್ ಪಲ್ಲಿಮಜಲು, ‘ಅರ್ಥಗಾರಿಕೆ’ ಬಗ್ಗೆ ಯಕ್ಷಗಾನ ಬಹುಶ್ರುತರಾದ ಶಾಂತರಾಮ ಕುಡ್ವ, ‘ಮುಖವರ್ಣಿಕೆ’ ಬಗ್ಗೆ ಉಪನ್ಯಾಸಕ ಕುಮಾರಿ ಮೈತ್ರಿ ಭಟ್, ‘ವೇಷಭೂಷಣ’ ಬಗ್ಗೆ ಹಿರಿಯ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ, ‘ಸ್ತ್ರೀ’ ವೇಷ’ದ ಬಗ್ಗೆ ಸಂಜಯ ಕುಮಾರ್ ಶೆಟ್ಟಿ…
ಮಂಗಳೂರು : ಜರ್ನಿ ಥೇಟರ್ ಗ್ರೂಪ್ (ರಿ.) ಮಂಗಳೂರು ಮತ್ತು ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಸಹಯೋಗದಲ್ಲಿ ರಂಗಾಯಣ ಮೈಸೂರು ಇದರ ಹಿರಿಯ ಕಲಾವಿದರು ಅಭಿನಯಿಸುವ ‘ಮಿ. ಬೋಗೀಸ್’ ನಾಟಕ ಪ್ರದರ್ಶನವನ್ನು ದಿನಾಂಕ 15 ಏಪ್ರಿಲ್ 2025ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿ.ವಿ.ಯಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಪ್ರಸ್ತುತಗೊಳ್ಳುವ ಈ ನಾಟಕಕ್ಕೆ ಉಚಿತ ಪ್ರವೇಶವಿದ್ದು, ರೋಆಲ್ಡ್ ದಾಹ್ಲ್ ಇವರು ಈ ನಾಟಕದ ಕಥೆ ರಚನೆ ಮಾಡಿದ್ದು, ಸಂತೋಷ್ ಕೌಲಗಿ ಕನ್ನಡಕ್ಕೆ ಅನುವಾದ ಮಾಡಿದ್ದು, ಪ್ರಶಾಂತ್ ಹಿರೇಮಠ ಸಂಗೀತ ಹಾಗೂ ಎಚ್.ಕೆ. ದ್ವಾರಕನಾಥ್ ಇವರು ರಂಗರೂಪ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.