Author: roovari

ಪುತ್ತೂರು : ಮಂಗಳೂರಿನ ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್( ರಿ ) ಇದರ ನಿರ್ದೇಶಕರಾದ ‘ಗುರುಕುಲಭೂಷಣ’, ‘ನಾಟ್ಯವಿಶಾರದ’, ದ. ಕ. ಜಿಲ್ಲಾ ಪ್ರಶಸ್ತಿ ವಿಜೇತ ವಿದ್ವಾನ್ ಯು. ಕೆ. ಪ್ರವೀಣ್ ಇವರು ಆಯೋಜಿಸಿದ ‘ಗಣೇಶ ಜನನ’ ನೃತ್ಯ ರೂಪಕದ ಪ್ರದರ್ಶನವು ದಿನಾಂಕ 25-06-2024 ರಂದು ಪುತ್ತೂರಿನಲ್ಲಿರುವ ಹಿರಿಯ ನಾಗರಿಕರ ಮತ್ತು ವಿಶೇಷ ಚೇತನರ ವಸತಿ ನಿಲಯವಾದ ‘ಶಿವ ಸದನ’ದಲ್ಲಿ ನಡೆಯಿತು. ವಿದ್ವಾನ್ ಯು. ಕೆ. ಪ್ರವೀಣ್ ಇವರ ತಂದೆ ಹಾಗೂ ಸಂಸ್ಥೆಯ ಸಂಸ್ಥಾಪಕರಾದ “ಶಾಂತಲಾ” ಪ್ರಶಸ್ತಿ ವಿಜೇತ ನಾಟ್ಯಾಚಾರ್ಯ ಕೀರ್ತಿ ಶೇಷ ಶ್ರೀ ಯು.ಎಸ್. ಕೃಷ್ಣರಾವ್ ಅವರ 110 ನೇ ಜನ್ಮದಿನಾಚರಣೆಯ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸುಮಾರು 20 ಕಲಾವಿದರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ನೀಡಿದ ವಿದ್ವಾನ್ ಯು. ಕೆ. ಪ್ರವೀಣ್ ಹಾಗೂ ವಿದುಷಿ ಉಷಾ ಪ್ರವೀಣ್ ದಂಪತಿಗಳನ್ನು ಅಧ್ಯಕ್ಷರಾದ ಶ್ರೀ…

Read More

ಮೈಸೂರು : ಅದಮ್ಯ ರಂಗಶಾಲೆ ವತಿಯಿಂದ ದಿನಾಂಕ 07-06-2024ರಿಂದ ಒಂದು ವರ್ಷ ಅವಧಿಯ ವಾರಾಂತ್ಯ ಅಭಿನಯ ಕಾರ್ಯಾಗಾರ ಹಾಗೂ ರಂಗ ತರಬೇತಿ ಕೋರ್ಸ್ ಆರಂಭವಾಗಲಿದ್ದು, ರಂಗಾಸಕ್ತ ಮಕ್ಕಳಿಂದ ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷ ಅವಧಿಯ ವಾರಾಂತ್ಯ ಮಕ್ಕಳ ಅಭಿನಯ ಮತ್ತು ರಂಗ ತರಬೇತಿ ಕಾರ್ಯಾಗಾರವನ್ನು ಜಯಲಕ್ಷ್ಮೀಪುರಂ ವಿವೇಕಾನಂದ ಪಿ.ಯು. ಕಾಲೇಜಿನ ಕುವೆಂಪು ರಂಗ ಮಂದಿರದಲ್ಲಿ ಸಂಘಟಿಸಲಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ದಿನಾಂಕ 07-06-2024ರೊಳಗೆ ದಾಖಲಿಸಿ ಪ್ರವೇಶಾತಿಯನ್ನು ಪಡೆದಿರಬೇಕು. ಅಭಿನಯ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ ಮತ್ತು ಪರಿಷ್ಕರಣೆ, ಪ್ರಸಾದನ, ಬೆಳಕು, ರಂಗವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ನಾಟಕ ಪ್ರದರ್ಶನ ಸೇರಿದಂತೆ ರಂಗಭೂಮಿಯ ಮತ್ತು ಸಿನಿಮಾ ಮಾಧ್ಯಮದ ಬೇರೆ ಬೇರೆ ಆಯಾಮಗಳ ಕುರಿತು ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದ್ದು, ನುರಿತ ರಂಗಭೂಮಿಯ ಸಂಪನ್ಮೂಲ ಶಿಕ್ಷಕರು ತರಬೇತಿ ನೀಡಲಿದ್ದಾರೆ. ಈ ಕಾರ್ಯಾಗಾರಕ್ಕೆ ಗರಿಷ್ಠ 25 ಮಂದಿ ಮಕ್ಕಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೊದಲು ಬಂದವರಿಗೆ…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಜೂನ್ ತಿಂಗಳ ಸಾಪ್ತಾಹಿಕ ಸರಣಿ ಕಾರ್ಯಕ್ರಮವು ದಿನಾಂಕ 10-06-2024, 17-06-2024 ಮತ್ತು 24-06-2024ರಂದು ಪ್ರತೀ ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ದಿನಾಂಕ 03-06-2024ರಂದು ನಡೆದ ಸರಣಿ 48ರಲ್ಲಿ ಕುಮಾರಿ ಪ್ರಿಯಂವದ ಇವರು ಕಾರ್ಯಕ್ರಮ ನೀಡಿದ್ದು, ದಿನಾಂಕ 10-06-2024ರಂದು ನಡೆಯಲಿರುವ ಸರಣಿ 49ರಲ್ಲಿ ಕುಮಾರಿ ಅನನ್ಯ ಸುವರ್ಣ, ದಿನಾಂಕ 17-06-2024ರಂದು ನಡೆಯಲಿರುವ ಸರಣಿ 50ರಲ್ಲಿ ತಂತ್ರಿ ಸಹೋದರಿಯರಾದ ಅನ್ವಿತ ಮತ್ತು ಅರ್ಪಿತ ಮತ್ತು ದಿನಾಂಕ 24-06-2024ರಂದು ನಡೆಯಲಿರುವ ಸರಣಿ 51ರಲ್ಲಿ ಕುಮಾರಿ ಎಸ್. ಅನಘಶ್ರೀ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣ ಮಠ ಉಡುಪಿಯಲ್ಲಿ, ರಾಗ ಧನ ಸಂಸ್ಥೆ (ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪ್ರಸ್ತುತ ಪಡಿಸುವ ‘ರಾಗರತ್ನಮಾಲಿಕೆ -25’ ಸಂಗೀತ ಕಾರ್ಯಕ್ರಮವು ದಿನಾಂಕ 02-06-2024ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ವಿದ್ವಾನ್ ಪ್ರಣವಶ್ರೀ ಯಶಸ್ವಿ ಸುಬ್ಬರಾವ್ ಮತ್ತು ಅವರ ಶಿಷ್ಯ ಚಿರಂಜೀವಿ ಮೋಕ್ಷಿತ್ ಯಸ್. ಬೆಂಗಳೂರು ಇವರ ದ್ವಂದ್ವ ವಯೊಲಿನ್ ವಾದನ ಕಚೇರಿ ನಡೆಯಿತು. ಮೃದಂಗದಲ್ಲಿ ಡಾ. ಅಕ್ಷಯ ನಾರಾಯಣ ಕಾಂಚನ ಮತ್ತು ಘಟಂನಲ್ಲಿ ವಿದ್ವಾನ್ ಯಸ್. ಮಂಜುನಾಥ್ ಮೈಸೂರು ಸಹಕರಿಸಿದರು.

Read More

ಮಡಿಕೇರಿ : ಲೇಖಕಿ ಪ್ರತಿಮಾ ಹರೀಶ್ ರೈ ಬರೆದಿರುವ ‘ಅಂತರಗಂಗೆ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 09-06-2024ರಂದು ಬೆಳಗ್ಗೆ 10-30 ಗಂಟೆಗೆ ನಗರದ ರೆಡ್ ಬ್ರಿಕ್ಸ್ ಇನ್‌ನ ಸತ್ಕಾರ್ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕ.ಸಾ.ಪ.ದ ಮಾಜಿ ಅಧ್ಯಕ್ಷರಾದ ಶ್ರೀ ಟಿ.ಪಿ. ರಮೇಶ್ ಉದ್ಘಾಟಿಸಲಿದ್ದು, ಸಾಹಿತಿ ಶ.ಗ. ನಯನ ತಾರಾ ‘ಅಂತರಗಂಗೆ’ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಶ್ರೀ ಸುಬ್ರಾಯ ಸಂಪಾಜೆ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಕೊಡಗು ವಿ.ವಿ.ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹಮದ್ ಕೃತಿಯ ಕುರಿತಂತೆ ಮಾತನಾಡಲಿದ್ದು, ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕ ಶ್ರೀ ಜಿ. ರಾಜೇಂದ್ರ, ಮಡಿಕೇರಿ ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ ಶ್ರೀ ಅನಿಲ್ ಹೆಚ್.ಟಿ., ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಡಿ. ಜಗದೀಶ್ ರೈ ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Read More

ಶ್ರೀಮತಿ ಶಶಿಕಲಾ ಬಾಯಾರು ಅವರ ‘ಪತ್ರಾರ್ಜಿತ’ವು ಭಾವನಾತ್ಮಕ ಸಂವಾದಗಳ ಸುಂದರ ಗುಚ್ಛ. ಸಂಬಂಧ ಸಂವಹನಗಳು ಯಾಂತ್ರಿಕವಾಗುತ್ತಿರುವ ಹೊತ್ತಿನಲ್ಲಿ ಓಲೆಗಳ ಮೇಲೆ ಭಾವನೆಗಳು ಅರಳಿರುವುದು ವಿಶೇಷ. ಚಿತ್ತಭಿತ್ತಿಯಲ್ಲಿ ಮೂಡುವ ಭಾವಚಿತ್ರಗಳನ್ನು ಜೀವಂತಿಕೆಯಿಂದ ನೇಯಬಲ್ಲ ಇವರ ಕಸೂತಿಕಲೆಯಂತೆ ಇಲ್ಲಿನ ಪತ್ರಸಂಗ್ರಹವೂ ತನ್ನದೇ ಆದ ಕುಸುರಿತನದಿಂದ ಕಂಗೊಳಿಸುತ್ತದೆ. ಲೇಖಕಿಯು ತಮ್ಮ ಜೊತೆ ಒಡನಾಡಿದ ವ್ಯಕ್ತಿಗಳಿಗೆ ಬರೆದ ಪತ್ರಗಳು ಮತ್ತು ಅವರ ಪ್ರತ್ಯುತ್ತರಗಳು ಓದುಗನ ಪಾಲಿಗೆ ಎಂದಿಗೂ ಮರೆಯಲಾಗದ ನೆನಪಿನ ಚಿತ್ರಗಳಾಗಿವೆ. ಒಡನಾಟದ ಹಲವು ಸಂಗತಿಗಳನ್ನೂ ಸಂದರ್ಭಗಳನ್ನೂ ಲಕ್ಷ್ಯವಾಗಿಟ್ಟುಕೊಂಡು ಮೂಡಿದ ಬರಹಗಳು ಕತೆ ಕವಿತೆಗಳಂತೆ ಆಪ್ತವಾಗಿ ಓದಿಸುತ್ತಾ ಚಿಂತನೆಗೆ ತೊಡಗಿಸುತ್ತವೆ. ಪತ್ರದಲ್ಲಿ ಅವರು ಯಾರೊಂದಿಗೆ ಸಂವಾದವನ್ನು ನಡೆಸುತ್ತಾರೋ ಅವರೆಲ್ಲರೂ ಒಂದೇ ಮನೆಯ ಮಂದಿಗಳಂತೆ ಜೊತೆಯಲ್ಲಿ ಕುಳಿತು ಮಾತನಾಡುವಂತೆ ಭಾಸವಾಗುತ್ತದೆ. ಇಲ್ಲಿನ ಓಲೆಗಳು ಕೇವಲ ಕುಶಲೋಪರಿ, ಹರಟೆಗಳಿಗೆ ಎಡೆ ಕೊಡದೆ ಜನಜೀವನ, ಜಗತ್ತಿನೊಂದಿಗೆ ಭಾವನಾತ್ಮಕ ಸಂಬಂಧಗಳನ್ನು ಬೆಸೆಯುತ್ತವೆ. ಲೇಖಕಿ ಬರೆದ ಪತ್ರಗಳಲ್ಲಿ ಅವರ ಆತ್ಮಕತೆಯ ಕೆಲವು ಪುಟಗಳು ಅನಾವರಣಗೊಳ್ಳುತ್ತವೆ. ಸುತ್ತಲಿನ ಜಗತ್ತನ್ನು ತೀವ್ರವಾಗಿ ನೋಡಿದ್ದರ ಫಲವಾಗಿ ಇಲ್ಲಿನ ಪತ್ರಗಳು…

Read More

ಸಾಲಿಗ್ರಾಮ : ಪ್ರಾಚಾರ್ಯ ನಾರ್ಣಪ್ಪ ಉಪ್ಪೂರರ ನಲವತ್ತನೆಯ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಹಾಗೂ ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ ಕೊಂಡದಕುಳಿ ಕುಂಭಾಶಿ ಇವರ ವತಿಯಿಂದ ‘ಯಕ್ಷ ಮುದ್ರಾ’ ಯಕ್ಷಗಾನದ ಅಭಿನಯದಲ್ಲಿ ಹಸ್ತ ಮುದ್ರೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ದಿನಾಂಕ 06-06-2024ರಂದು ಬೆಳಗ್ಗೆ 9-30 ಗಂಟೆಯಿಂದ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಆಯೋಜಿಸಲಾಗಿದೆ. ಯಕ್ಷಗಾನದ ಅಭಿನಯದಲ್ಲಿ ಅಗುತ್ತಿರುವ ನ್ಯೂನತೆಯನ್ನು ಕಡಿಮೆ ಮಾಡುವ ಉದ್ದೇಶದಲ್ಲಿ ಅಭಿನಯದಲ್ಲಿ ಬರುತ್ತಿರುವ ಮುದ್ರೆಗಳ ಬಗ್ಗೆ ಕಲಾವಿದರಿಗೆ ಉಪಯುಕ್ತ ಕಾರ್ಯಾಗಾರ ಇದಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿಯ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ್ ಇವರು ವಹಿಸಲಿದ್ದು, ಕುಂದಾಪುರದ ಮಾನ್ಯ ಶಾಸಕರಾದ ಶ್ರೀ ಕಿರಣ್ ಕುಮಾರ ಕೊಡ್ಗಿ, ಕೆ.ಇ.ಬಿ. ನಿವೃತ್ತ ಅಧಿಕಾರಿ ಶ್ರೀ ದಿನೇಶ ಉಪ್ಪೂರ ಮತ್ತು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿಯ ಪ್ರಾಚಾರ್ಯರಾದ ಶ್ರೀ ಸದಾನಂದ ಐತಾಳ ಇವರುಗಳು ಉದ್ಘಾಟಿಸಲಿರುವರು. ಹಿರಿಯ ಯಕ್ಷಗಾನ ಕಲಾವಿದರಾದ…

Read More

ಉಡುಪಿ : ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ಇವರಿಬ್ಬರ ನೆನಪಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ 2024ನೇ ಸಾಲಿನ ಪ್ರಶಸ್ತಿಗೆ ತುಳುಭಾಷೆ ಹಾಗೂ ಸಂಸ್ಕೃತಿ ಚಿಂತಕ ಶ್ರೀ ಬೆನೆಟ್ ಜಿ. ಅಮ್ಮನ್ನ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂಪಾಯಿ 20,000 ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಬೆನೆಟ್ ಜಿ. ಅಮ್ಮನ್ನ ಉಡುಪಿ ತಾಲೂಕಿನ ಪಾಂಗಾಳದವರು. ಅವರು 30 ವರ್ಷಗಳ ಕಾಲ ಮಂಗಳೂರಿನ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ಪತ್ರಾಗಾರ ವಿಭಾಗದಲ್ಲಿ ಪತ್ರಾಗಾರ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದವರು. ತುಳುನಾಡಿನ ಸಾಹಿತ್ಯ, ಶಿಕ್ಷಣ, ಸಂಸ್ಕೃತಿಗೆ ವಿದೇಶಿಯರ ಕೊಡುಗೆಗಳು ಹಾಗೂ ತುಳುನಾಡು ಚರಿತ್ರೆ ಇವರ ಆಸಕ್ತಿಯ ಕ್ಷೇತ್ರಗಳು. ಇದಕ್ಕೆ ಸಂಬಂಧಿಸಿದ ಸಂಶೋಧನೆ, ದಾಖಲೀಕರಣ, ಹಸ್ತಪ್ರತಿ, ಸಂರಕ್ಷಣೆ, ಭಾಷಾಂತರ ಮೊದಲಾದ ಕ್ಷೇತ್ರಗಳಲ್ಲಿ ಇವರು ಕೊಡುಗೆಯನ್ನು ನೀಡಿದ್ದಾರೆ. ‘ಚಿಗುರಿದ ಬದುಕು’ (ಕಿರು ಕಾದಂಬರಿ), ‘ಕ್ರೈಸ್ತರು ಮತ್ತು ಬಾಸೆಲ್…

Read More

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾ ವಿದ್ಯಾಲಯ, ಆಕೃತಿ ಆಶಯ ಪಬ್ಲಿಕೇಷನ್ಸ್, ಕಾಸರಗೋಡು ಕನ್ನಡ ಲೇಖಕರ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಇವುಗಳ ಸಹಯೋಗದಲ್ಲಿ ದಿನಾಂಕ 02-06-2024ರಂದು ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟಿ.ಎ.ಎನ್. ಖಂಡಿಗೆ ಅವರ ಲೇಖನಗಳ ಸಂಗ್ರಹದ ಕೃತಿ ‘ಬರಿಗಾಲ ನಡಿಗೆ’ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ “ಸಾಹಿತ್ಯ ಅಭಿರುಚಿ ಯುವ ಮನಸ್ಸುಗಳಲ್ಲಿ ಕಡಿಮೆಯಾಗುತ್ತಿರುವುದು ಬಹಳ ಅಪಾಯಕಾರಿ ಪರಿಸ್ಥಿತಿಯಾಗಿದೆ. ಯಾವುದೇ ಕೃತಿಯನ್ನು ಒಂದು ಬಾರಿ ಓದಿದರೆ ಅರ್ಥವಾಗುವುದಿಲ್ಲ. ನಾವು ಅರ್ಥ ಮಾಡಿಕೊಳ್ಳುವವರೆಗೆ ಓದಬೇಕು. ಆಗ ನಾವು ಮತ್ತೊಬ್ಬರಿಗೆ ತಿಳಿಸಲು ಸಾಧ್ಯವಾಗುತ್ತದೆ. ಬರಿಗಾಲು ಎಂಬುದೊಂದು ರೂಪಕ. ಮುಕ್ತವಾಗಿ ಓದುವುದು. ನಿರ್ಭೀತಿಯಿಂದ ಅಭಿಪ್ರಾಯ ವ್ಯಕ್ತಪಡಿಸುವುದು ಬರಿಗಾಲ ನಡಿಗೆಯ ಮೂಲ ಆಶಯ. ಕೃತಿಯಲ್ಲಿ ಅಡಕವಾಗಿರುವ ವಿಷಯಗಳನ್ನು ಪರಿಪೂರ್ಣವಾಗಿ ಅರ್ಥ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಂಯೋಜನೆಯಲ್ಲಿ ‘ಶ್ವೇತಯಾನ -32’ ಕಾರ್ಯಕ್ರಮದ ಅಂಗವಾಗಿ ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಕಾರದೊಂದಿಗೆ ದಿ. ಕಾಳಿಂಗ ನಾವುಡರ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 02-06-2024ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾಯೋಜಕ ಹಾಗೂ ಕಾಳಿಂಗ ನಾವುಡರ ಆತ್ಮೀಯ ಒಡನಾಡಿಯಾದ ಗಂಪು ಪೈ ಸಾಲಿಗ್ರಾಮ (ಗಣಪತಿ ಪೈ) ನಾವಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ “ತೆಂಕು-ಬಡಗು ವಿದ್ಯಾರ್ಥಿಗಳನೇಕರು ಯಕ್ಷರಂಗದಲ್ಲಿ ಇತ್ತೀಚೆಗೆ ಬಹಳ ಮಿಂಚುತ್ತಿದ್ದಾರೆ. ಅತೀ ಕಿರಿಯ ವಯಸ್ಸಿನಲ್ಲಿ ಯಕ್ಷಗಾನದ ಆಸಕ್ತಿಯಿಂದ ಅನೇಕರು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಾಳಿಂಗ ನಾವುಡರು ಕೂಡ ಅತೀ ಚಿಕ್ಕ ವಯಸ್ಸಿನಲ್ಲಿ ಅತ್ಯದ್ಭುತ ಸಾಧನೆಗೈದು ಅತೀ ಬೇಗನೇ ಇಹಲೋಕ ತ್ಯಜಿಸಿದವರು. ಕಾಳಿಂಗ ನಾವುಡರ ಹೆಸರು ಸಾಂಸ್ಕೃತಿಕ ಲೋಕಕ್ಕೆ ಅಜರಾಮರ. ಇಂದು ಕಿರಿಯ ಮಕ್ಕಳೇ ಕಾಳಿಂಗ ನಾವುಡರ ಸಂಸ್ಮರಣೆಯಲ್ಲಿ ಪಾಲ್ಗೊಂಡು ಯಾವ ದೊಡ್ಡ ಕಲಾವಿದರಿಗೂ ಕಡಿಮೆ ಇಲ್ಲದಂತೆ ಪ್ರದರ್ಶನ ನೀಡಿ ಕಾಳಿಂಗ ನಾವುಡರ ಆತ್ಮಕ್ಕೆ ಶಾಂತಿಯನ್ನು ನೀಡಿದ್ದಾರೆಂದು ನನ್ನ ಭಾವನೆ.” ಎಂದರು. ಮುಖ್ಯ…

Read More