Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯ ಗೌಡ ಸಮಾಜದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮತ್ತು ಕೃತಿಗಳ ಲೋಕಾರ್ಪಣೆ
    Awards

    ಮಡಿಕೇರಿಯ ಗೌಡ ಸಮಾಜದಲ್ಲಿ ಗೌರವ ಪ್ರಶಸ್ತಿ ಪ್ರದಾನ ಮತ್ತು ಕೃತಿಗಳ ಲೋಕಾರ್ಪಣೆ

    March 1, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಲೋಕಾರ್ಪಣಾ ಸಮಾರಂಭವು ದಿನಾಂಕ 28 ಫೆಬ್ರವರಿ 2025ರಂದು ಮಡಿಕೇರಿಯ ಗೌಡ ಕೊಡಗು ಗೌಡ ಸಮಾಜದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಬರಹಗಾರರಿಗೆ ಪ್ರೋತ್ಸಾಹ ಬಹುಮಾನ ಪ್ರಶಸ್ತಿಯನ್ನು ವಿತರಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ “ಇಂತಹ ಕಾರ್ಯಕ್ರಮಗಳು ಸಮುದಾಯದ ಬರಹಗಾರರನ್ನು ಪ್ರೋತ್ಸಾಹಿಸುವುದರೊಂದಿಗೆ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗಲಿದೆ. ಅಕಾಡೆಮಿಯ ಎಲ್ಲಾ ಕಾರ್ಯಕ್ರಮಗಳು ಸಮುದಾಯದ ಏಳಿಗೆಗೆ ಹಾಗೂ ಅಭಿವೃದ್ಧಿಗೆ ಪೂರಕ ಆಗಿರುವುದರೊಂದಿಗೆ ಅರೆಭಾಷೆ ಜನಾಂಗದ ಇತಿಹಾಸ ಹಾಗೂ ಸಮಗ್ರ ಚಟುವಟಿಕೆಗಳನ್ನು ಜಗತ್ತಿಗೆ ತಿಳಿಸುವಂತೆ ಕಾರ್ಯಪ್ರವೃತ್ತರಾಗಲಿ. ಅರೆಭಾಷೆ ಸಮುದಾಯಕ್ಕೆ ತನ್ನಿಂದ ಆಗುವ ಎಲ್ಲಾ ರೀತಿಯ ಸಹಾಯವನ್ನು ಒದಗಿಸಲು ನಾನು ಸದಾ ಸಿದ್ದ. ಐನ್ ಮನೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಾಗೂ ಮನೆಯ ಇತಿಹಾಸವನ್ನು ಜಗತ್ತಿಗೆ ಹೇಳುವ ದಿಶೆಯಲ್ಲಿ ಅರೆಭಾಷೆ ಅಕಾಡೆಮಿಯು ಕೆಲಸ ಮಾಡಬೇಕು” ಎಂದು ಕಿವಿಮಾತು ಹೇಳಿದರು.

    ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಮಾಜಿ ಸಭಾಧ್ಯಕ್ಷರಾದ ಕೆ. ಜಿ. ಬೋಪಯ್ಯ, ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸದಸ್ಯರಾದ ಚಂದ್ರಶೇಖರ್ ಪೇರಾಲು, ಲತಾಪ್ರಸಾದ್ ಕುದ್ಪಾಜೆ, ಸೂದನ ಎಸ್. ಈರಪ್ಪ, ವಿನೋದ್ ಮೂಡಗದ್ದೆ, ತೇಜಕುಮಾರ್ ಕುಡೆಕಲ್ಲು, ಪಿ. ಎಸ್. ಕಾರ್ಯಪ್ಪ, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಮೋಹನ ಪೊನ್ನಚನ, ಚಂದ್ರಾವತಿ ಬಡ್ಡಡ್ಕ, ಡಾ. ಎನ್. ಎ. ಜ್ಞಾನೇಶ್, ಸಂದೀಪ್ ಪೂಳಕಂಡ, ಕುದುಪಜೆ ಕೆ.ಪ್ರಕಾಶ್ ಇತರರು ಉಪಸ್ಥಿತರಿದ್ದರು.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷವಾಹಿನಿ ಪ್ರತಿಷ್ಠಾನದಿಂದ ‘ಯಕ್ಷ ಸಾಹಿತ್ಯ ಸಾಂಗತ್ಯ -25’ | ಮಾರ್ಚ್ 02
    Next Article ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ 2025 | ಕೊನೆಯ ದಿನಾಂಕ ಮಾರ್ಚ್ 30
    roovari

    Add Comment Cancel Reply


    Related Posts

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಕವನ | ಮುಂಗಾರು ಮಳೆ

    June 12, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.