ಮಂಡ್ಯ : ‘ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 06 ಜೂನ್ 2025ರಂದು ಮಂಡ್ಯದ ಕರ್ನಾಟಕ ಸಂಘದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ದಿನಾಂಕ 08 ಜೂನ್ 2025ರ ಭಾನುವಾರ ಸಂಜೆ ಘಂಟೆ 5.00 ರಿಂದ ನಡೆಯಲಿದೆ.
‘ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ಗೆ ಮೈಸೂರಿನ ವಿಶ್ರಾಂತ ಕುಲಪತಿಗಳಾದ ಡಾ. ಪದ್ಮಾಶೇಖರ್ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ಗೆ ವಿಜಯನಗರ ಜಿಲ್ಲೆಯ ಖ್ಯಾತ ವಿದ್ವಾಂಸರಾದ ಡಾ. ಕೆ. ರವೀಂದ್ರನಾಥ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ರೂಪಾಯಿ 15,000 ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಕರ್ನಾಟಕ ಸಂಘ (ರಿ) ಮಂಡ್ಯ ಇದರ ಅಧ್ಯಕ್ಷರಾದ ಪ್ರೊ. ಜಯಪ್ರಕಾಶಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರಿನ ಖ್ಯಾತ ಸಾಹಿತಿಗಳಾದ ಡಾ.ರಾಗೌ ಹಾಗೂ ನಾಗಮಂಗಲ ತಾಲ್ಲೂಕು ಕರಡಹಳ್ಳಿಯ ಶ್ರೀ ಕೆ. ಎಸ್. ಆನಂದ್ ಉಪಸ್ಥಿತರಿರುವರು.